ರೈತರ ಸಂಕಷ್ಟಕ್ಕೆ ಸ್ಪಂದಿಸಿದ ಸರ್ಕಾರ:1033.60 ಕೋಟಿ ಇನ್ಪುಟ್ ಸಬ್ಸಿಡಿ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ಮಾನ್ಸೂನ್ ಅವಧಿಯಲ್ಲಿ ಅತಿವೃಷ್ಟಿಯಿಂದ ಆದ ಬೆಳೆ ಹಾನಿಯಿಂದ ಕಂಗೆಟ್ಟಿದ್ದ ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಿದೆ.

ಒಂದೇ ದಿನ ರೈತರಿಗೆ ಹೆಚ್ಚುವರಿಯಾಗಿ 1033.60 ಕೋಟಿ ಇನ್ಪುಟ್ ಸಬ್ಸಿಡಿಯನ್ನು ವಿತರಿಸಲು ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಚಾಲನೆ ನೀಡಿದರು.

ನಂತರ ಮಾತನಾಡಿದ ಸಿಎಂ,ಪ್ರಸ್ತುತ ವರ್ಷದ ಮಾನ್ಸೂನ್ ಅವಧಿಯಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಸಬ್ಸಿಡಿಗಾಗಿ 1033.60 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಾಗಿದ್ದು,ಈಗ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರ ರೈತರ ಪರವಾಗಿದ್ದು, ಬೆಳೆ ಹಾನಿಗೊಳಗಾದ ರೈತರಿಗೆ ಹೆಚ್ಚಿನ ನೆರವು ಒದಗಿಸುವ ಉದ್ದೇಶದಿಂದ ಇನ್ಪುಟ್ ಸಬ್ಸಿಡಿಗಳ ದರಗಳನ್ನು ಹೆಚ್ಚಿಸಿದೆ. ಗರಿಷ್ಟ 2 ಹೆಕ್ಟೇರಿಗೆ ಸೀಮಿತವಾಗಿ, ಮಳೆಯಾಶ್ರಿತ ಬೆಳೆಗಳಿಗೆ ಹೆಕ್ಟೇರ್ ಒಂದಕ್ಕೆ 8500 ರೂ ರಿಂದ 17 ಸಾವಿರ ರೂ, ನೀರಾವರಿ ಬೆಳೆಗಳಿಗೆ ಹೆಕ್ಟೇರ್ ಒಂದಕ್ಕೆ 17ಸಾವಿರದಿಂದ 25,500 ರೂ ಹಾಗೂ ಬಹು ವಾರ್ಷಿಕ ಬೆಳೆಗಳಿಗೆ ಹೆಕ್ಟೇರ್ ಒಂದಕ್ಕೆ 22,500ರಿಂದ 31 ಸಾವಿರ ರೂ ಹೆಚ್ಚಿಸಲಾಗಿದೆ ಎಂದು ಸಿಎಂ ತಿಳಿಸಿದರು.

ಮುಂಗಾರು ಅವಧಿಯಲ್ಲಿ ದಾಖಲೆಯ 82.56 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು. ಆದರೆ ಜೂನ್ ನಿಂದ ಸೆಪ್ಟಂಬರ್ ಅವಧಿಯಲ್ಲಿ ಉಂಟಾದ ಅತಿವೃಷ್ಟಿಯಿಂದಾಗಿ 14.58 ಲಕ್ಷ ಹೆಕ್ಟೇರ್ ಗಿಂತ ಹೆಚ್ಚಿನ ಪ್ರದೇಶದ ಬೆಳೆ ಹಾನಿ ಉಂಟಾಗಿದ್ದು, ಇದರಿಂದ ಅಂದಾಜು 10,748 ಕೋಟಿ ಬೆಳೆ ಹಾನಿ ಅಂದಾಜಿಸಲಾಗಿದೆ ಎಂದು ತಿಳಿಸಿದರು.

ಕೃಷ್ಣಾ ಮತ್ತು ಭೀಮಾ ಜಲಾನಯನ ಪ್ರದೇಶಗಳಲ್ಲಿ ನಿರಂತರ ಒಳ ಹರಿವು ಹೆಚ್ಚಳದಿಂದ ಕಲಬುರಗಿ, ಯಾದಗಿರಿ ಮತ್ತು ಬೀದರ ಜಿಲ್ಲೆಗಳಲ್ಲಿ ತೊಗರಿ ಮತ್ತು ಹತ್ತಿ ಬೆಳೆಗಳಿಗೆ ವ್ಯಾಪಕ ಹಾನಿ ಉಂಟಾಗಿದೆ.
ಬೆಳೆ ಹಾನಿಯನ್ನು ನಿಖರವಾಗಿ ಖಚಿತಪಡಿಸಲು ಜಂಟಿ ಸಮೀಕ್ಷೆ ನಡೆಸಿ ಹಾನಿಯನ್ನು ಅಂದಾಜಿಸಲಾಗಿದೆ.

ಎಲ್ಲಾ ದತ್ತಾಂಶಗಳನ್ನು ಪರಿಹಾರ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು, ಭೂಮಿ ಮತ್ತು ಫ್ರೂಟ್ಸ್ ತಂತ್ರಾಂಶದಲ್ಲಿ ಸಂಯೋಜಿಸಲಾಗಿದೆ.

ಬೆಳೆ ನಷ್ಟದ ಗ್ರಾಮವಾರು ಪಟ್ಟಿಯನ್ನು ಗ್ರಾಮ ಚಾವಡಿಗಳಲ್ಲಿ ಹಾಗೂ ಆನ್ಲೈನ್ನಲ್ಲಿ ಪ್ರಕಟಿಸಿ, ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿ, ಬಳಿಕ ನಷ್ಟ ಅನುಭವಿಸಿದ ರೈತರ ಪಟ್ಟಿಯನ್ನು ಅಂತಿಮಗೊಳಿಸಿ ಬಳಿಕ ಇನ್ಪುಟ್ ಸಬ್ಸಿಡಿಯನ್ನು ನೇರವಾಗಿ ರೈತರಿಗೆ ವರ್ಗಾಯಿಸುವ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಪ್ರಧಾನಮಂತ್ರಿ ಮೋದಿಯವರನ್ನು ನವೆಂಬರ್ 17ರಂದು ಭೇಟಿ ಮಾಡಿ, ಬೆಳೆ ಹಾನಿ ಇನ್ಪುಟ್ ಸಬ್ಸಿಡಿಗೆ ಪ್ರತಿಕ್ರಿಯೆ ಹಾಗೂ ಪರಿಹಾರ ಅಡಿಯಲ್ಲಿ ರೂ. 614.90 ಕೋಟಿ ಹಾಗೂ ಹಾನಿಗೊಳಗಾದ ಮೂಲಸೌಕರ್ಯಗಳನ್ನು ಸರಿಪಡಿಸಲು 1,521.67 ಕೋಟಿ ಪರಿಹಾರ ಒದಗಿಸಲು ಮನವಿ ಸಲ್ಲಿಸಲಾಗಿದೆ ಎಂದು ಸಿಎಂ ಹೇಳಿದರು.

ಬೆಳೆ ಹಾನಿ ಪರಿಶೀಲಿಸಲು ಕೇಂದ್ರ ಸರ್ಕಾರ ಅಂತರ ಸಚಿವಾಲಯದ ಕೇಂದ್ರ ತಂಡವನ್ನು ರಚಿಸಿದ್ದು,ತಂಡ ಶೀಘ್ರದಲ್ಲೇ ಕರ್ನಾಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ ಎಂದು ತಿಳಿಸಿದರು.

ರೈತರ ಸಂಕಷ್ಟಕ್ಕೆ ಸ್ಪಂದಿಸಿದ ಸರ್ಕಾರ:1033.60 ಕೋಟಿ ಇನ್ಪುಟ್ ಸಬ್ಸಿಡಿ ಬಿಡುಗಡೆ Read More

ಆಡಳಿತದಲ್ಲಿನ ಭ್ರಷ್ಟ ವ್ಯವಸ್ಥೆಯ ಗ್ರಹಣ ತೊಲಗಿಸಲು ಕನ್ನಡಿಗರು ಕೈಜೋಡಿಸಿ:ಆಪ್

ಬೆಂಗಳೂರು: ಬೆಂಗಳೂರಿನಲ್ಲಿರುವ ಆಮ್ ಆದ್ಮಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಸಂವಿಧಾನ ದಿನಾಚರಣೆ ಹಾಗೂ 14ನೇ ವರ್ಷದ ಪಕ್ಷದ ಸಂಸ್ಥಾಪನ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಈ ವೇಳೆ ಪಕ್ಷದ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ ಮಾತನಾಡಿ, ಆದ್ಮಿ ಪಕ್ಷವು ಕೇವಲ ರಾಜಕೀಯ ಸಂಘಟನೆಯಾಗಿರದೇ ಒಂದು ರಾಜಕೀಯ ಆಂದೋಲನ ವಾಗಿದೆ, ಆಡಳಿತದಲ್ಲಿರುವ ಭ್ರಷ್ಟ ವ್ಯವಸ್ಥೆಗೆ ಹಿಡಿದಿರುವ ಗ್ರಹಣವನ್ನು ಹೋಗಲಾಡಿಸಲು ಕನ್ನಡಿಗರೆಲ್ಲರೂ ಒಂದಾಗಿ ಪಕ್ಷದೊಂದಿಗೆ ಕೈಜೋಡಿಸಬೇಕೆಂದು ಮನವಿ ಮಾಡಿದರು.

ರಾಜ್ಯ ಉಪಾಧ್ಯಕ್ಷ ವಿಜಯ ಶರ್ಮ ಮಾತನಾಡಿ ಪರಂಪರಾನುಗತ ಪಕ್ಷಗಳ ಕುಟುಂಬ ರಾಜಕಾರಣ, ಸೃಜನ ಪಕ್ಷಪಾತ, ರಾಜಕೀಯದ ವ್ಯಾಪಾರಿಕರಣ ಇವೆಲ್ಲವನ್ನೂ ಮುಲೋಚ್ಚಾಟನೆ ಮಾಡಲು ಪಕ್ಷದೊಂದಿಗೆ ಎಲ್ಲರೂ ಕೈಜೋಡಿಸಬೇಕು. ನಮ್ಮೊಂದಿಗೆ ಅರವಿಂದ್ ಕೇಜ್ರಿವಾಲ್ ಅವರ ಸಾಧನೆ ಕನಸು ಇದೆ. ಇವೆಲ್ಲವನ್ನೂ ಕನ್ನಡಿಗರ ಮನೆ ಬಾಗಿಲಿಗೆ ತಲುಪಿಸುವ ಮೂಲಕ ಅಧಿಕಾರಯುತ ರಾಜಕಾರಣದಲ್ಲಿ ಜನಸಾಮಾನ್ಯನು ಭಾಗವಹಿಸಿದಾಗ ಮಾತ್ರ ಪರಿವರ್ತನೆ ಸಾಧ್ಯವಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಅನೇಕ ನಾಯಕರುಗಳು ಪಕ್ಷಕ್ಕೆ ಸೇರ್ಪಡೆಗೊಂಡರು.
ಅವರುಗಳಲ್ಲಿ ಪ್ರಮುಖವಾಗಿ ಖಾಸಗಿ ವಾಹಿನಿಯ ಮಾಜಿ ನಿರ್ದೇಶಕಿ , ಪ್ರಾಣಿ ರಕ್ಷಣಾ ಸಂಘದ ಮಧುಮಿತ ನಟರಾಜನ್, ದಲಿತ ಸಂಘರ್ಷ ಸಮಿತಿಯ ಮುಖಂಡರುಗಳಾದ ನಂಜಪ್ಪ, ಚಂದ್ರಪ್ಪ, ರಾಘವೇಂದ್ರ, ಶಿವಸೇನೆ ಪಕ್ಷದ ನಾಯಕ ಮೋಹನ್ ಹಾಗೂ ರವಿ ಅಪಾರ ಬೆಂಬಲಿಗರೊಂದಿಗೆ ಪಕ್ಷಕ್ಕೆ ಸೇರ್ಪಡೆಗೊಂಡರು.

ಸಂಭ್ರಮಾಚರಣೆಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಸಂಚಿತ್ ಸೆಹ್ವಾನಿ, ಲಕ್ಷ್ಮಿಕಾಂತ್ ರಾವ್, ಡಾ. ಸತೀಶ್ ಕುಮಾರ್, ಉಷಾ ಮೋಹನ್, ಸುಷ್ಮಾ ವೀರ್, ಅಶ್ವಿನ್ ಶೆಟ್ಟಿ, ಜಗದೀಶ್ ವಿ ಸದಂ, ರುದ್ರಯ್ಯ ನವಲಿ ಮಠ ಸೇರಿದಂತೆ ಅನೇಕ ಪಕ್ಷದ ಮುಖಂಡರುಗಳು ಪಾಲ್ಗೊಂಡಿದ್ದರು.

ಆಡಳಿತದಲ್ಲಿನ ಭ್ರಷ್ಟ ವ್ಯವಸ್ಥೆಯ ಗ್ರಹಣ ತೊಲಗಿಸಲು ಕನ್ನಡಿಗರು ಕೈಜೋಡಿಸಿ:ಆಪ್ Read More

ಸಿಎಂ ಸ್ಥಾನದ ಕಚ್ಚಾಟದಿಂದ ಆಡಳಿತ ಯಂತ್ರ ನಿಷ್ಕ್ರಿಯ:ಅಶೋಕ್ ಟೀಕೆ

ಬೆಂಗಳೂರು: ಸಿಎಂ ಸ್ಥಾನಕ್ಕಾಗಿ ನಡೆಯುತ್ತಿರುವ ಕಚ್ಚಾಟದಿಂದಾಗಿ ಆಡಳಿತ ಯಂತ್ರ ನಿಷ್ಕ್ರಿಯವಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಆರೋಪಿಸಿದ್ದಾರೆ.

ಶಾಸಕರ ಕಚೇರಿ ಮುಂಭಾಗ ಆಯೋಜಿಸಿದ್ದ ವಂದೇ ಮಾತರಂ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಕೂಡಲೇ ಕಾಂಗ್ರೆಸ್‌ ಹೈಕಮಾಂಡ್‌ ಯಾರು ಮುಖ್ಯಮಂತ್ರಿ ಯಾರು ಎಂಬುದನ್ನು ಸ್ಪಷ್ಟವಾಗಿ ತಿಳಿಸಬೇಕು ಎಂದು ಒತ್ತಾಯಿಸಿದರು.

ಡಿ.ಕೆ.ಶಿವಕುಮಾರ್‌ ಅವರನ್ನು ಸಿಎಂ ಪದವಿಯಲ್ಲಿ ಕೂರಿಸಬೇಕು ಎಂದು ಅವರ ಪರ ಶಾಸಕರು ಹೋರಾಟ ಮಾಡುತ್ತಿದ್ದಾರೆ. ಈ ಹೋರಾಟ ಅಂತಿಮ ಹಂತಕ್ಕೆ ಬಂದಿದೆ. ರಾಹುಲ್‌ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ತೀರ್ಮಾನ ನೀಡಿಲ್ಲದಿದ್ದರೆ ಸರ್ಕಾರ ನಡೆಯುವುದಿಲ್ಲ,ಅಧಿಕಾರಿಗಳು ಕೆಲಸ ಮಾಡುವುದಿಲ್ಲ, ಆಡಳಿತಯಂತ್ರ ಕೋಮಾದಲ್ಲಿದೆ ಎಂದು ಲೇವಡಿ ಮಾಡಿದರು.

ಸಾರ್ವಜನಿಕರು, ರೈತ ಸಮುದಾಯ, ವಿದ್ಯಾರ್ಥಿಗಳು ಎದುರಿಸುತ್ತಿರುವ ಹತ್ತಾರು ಸಮಸ್ಯೆಗಳನ್ನು ಬಗೆಹರಿಸಬೇಕೆಂಬ ಕಾಳಜಿ ಕಾಂಗ್ರೆಸ್‌ ಹೈಕಮಾಂಡ್‌ಗೆ ಇಲ್ಲ,ಇತ್ತ
ಸಿದ್ದರಾಮಯ್ಯ‌ ಅವರನ್ನು ಉಳಿಸಲು ಒಂದು ಗ್ಯಾಂಗ್‌, ಇಳಿಸಲು ಮತ್ತೊಂದು ಗ್ಯಾಂಗ್‌ ಕೆಲಸ ಮಾಡುತ್ತಿದೆ. ಡಿ.ಕೆ.ಶಿವಕುಮಾರ್‌ ಸಿಎಂ ಆಗಬೇಕೆಂದು ಒಂದು ತಂಡ, ಆಗಬಾರದೆಂದು ಮತ್ತೊಂದು ತಂಡ ತಂತ್ರ- ಕುತಂತ್ರ ಮಾಡುತ್ತಿವೆ ಎಂದು ಅಶೋಕ್ ಟೇಕಾಪ್ರಹಾರ ನಡೆಸಿದರು.

ರಾಜ್ಯದಲ್ಲಿ ಅಪರಾಧ ಕೃತ್ಯಗಳು ಹೆಚ್ಚಿವೆ. ರೈತರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ರಾಜಕೀಯ ಪರಿಸ್ಥಿತಿ ಅಧೋಗತಿಗೆ ಹೋಗಿದೆ. ಯಾರು ಮುಖ್ಯಮಂತ್ರಿ ಅಂತಾ ಗೊತ್ತಾಗಿಲ್ಲ, ರಾಹುಲ್‌ ಗಾಂಧಿ ವೀಕ್‌ ಲೀಡರ್‌, ಇಡೀ ರಾಜ್ಯದಲ್ಲಿ ವೀಕ್‌ ನಾಯಕತ್ವ ಎದ್ದು ಕಾಣುತ್ತಿದೆ. ಈ ಗೇಮ್‌ಗಳ ನಡುವೆ ರಾಜ್ಯದ ಜನರು ಪರಿತಪಿಸುತ್ತಿದ್ದಾರೆ, ಕೂಡಲೇ ಕಾಂಗ್ರೆಸ್‌ ಹೈಕಮಾಂಡ್‌ ಸಿಎಂ ಬಗ್ಗೆ ತನ್ನ ತೀರ್ಮಾನ ನೀಡಬೇಕು ಎಂದು ಒತ್ತಾಯಿಸಿ ದರು.

ಕಾಂಗ್ರೆಸ್‌ನ ಇಬ್ಬರು ಶಾಸಕರು ಜೈಲಲ್ಲಿದ್ದಾರೆ. ಅವರ ಮತಗಳನ್ನು ಕೇಳಲು ಡಿಕೆಶಿ ಜೈಲಿಗೆ ಹೋಗಿದ್ದಾರೆ. ಕಾಂಗ್ರೆಸ್‌ ಪಕ್ಷಕ್ಕೆ ಇಂತಹ ಪಾಡು ಬಂದಿರುವುದು ಶೋಚನೀಯ,
136 ಶಾಸಕರನ್ನು ನಿಯಂತ್ರಣದಲ್ಲಿಟ್ಟು
ಕೊಳ್ಳಲು ಸಾಧ್ಯವಾಗುತ್ತಿಲ್ಲ, ವಿರೋಧ ಪಕ್ಷದ ಕಾಟ ತಡೆದುಕೊಳ್ಳಲು ಆಗುತ್ತಿಲ್ಲ ಎಂದು ಹೇಳುವುದಾದರೆ, ನಮ್ಮ ವಿರೋಧ ಪಕ್ಷ ಬಲವಾಗಿದೆ ಎಂದರ್ಥ ಎಂದು ಅಶೋಕ ಟಾಂಗ್ ನೀಡಿದರು.

ಸಿಎಂ ಸ್ಥಾನದ ಕಚ್ಚಾಟದಿಂದ ಆಡಳಿತ ಯಂತ್ರ ನಿಷ್ಕ್ರಿಯ:ಅಶೋಕ್ ಟೀಕೆ Read More

ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ-ಸಿಎಂ‌

ಬೆಂಗಳೂರು: ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆ – 2025 ಅನ್ನು ಉದ್ಘಾಟಿಸಿ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್‌ ಅಂಬೇಡ್ಕರ್ ಪ್ರತಿಮೆಗೆ ನಮಿಸಿ ನಂತರ ಅವರು ಮಾತನಾಡಿದರು.

ಅಂಬೇಡ್ಕರ್ ಅವರ ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು, ಮನುಸ್ಮೃತಿಯಲ್ಲಿದ್ದ ಮನುಷ್ಯ ವಿರೋಧಿ, ಸಮಾನತೆ ವಿರೋಧಿ ನಿಯಮಗಳಿಗೆ ಅಂಬೇಡ್ಕರ್ ಅವರ ಸಂವಿಧಾನದಲ್ಲಿ ಅವಕಾಶ ಇಲ್ಲದಂತಾಯಿತು. ಅದಕ್ಕೇ ಮನುವಾದಿಗಳು ನಮ್ಮ ಸಂವಿಧಾನವನ್ನು ವಿರೋಧಿಸುತ್ತಾರೆ ಎಂದು ಟೀಕಿಸಿದರು.

ಸಮ ಸಮಾಜ ನಿರ್ಮಾಣ, ಅಸಮಾನತೆ ನಿವಾರಣೆ ನಮ್ಮ ಸಂವಿಧಾನ ಮತ್ತು ಅಂಬೇಡ್ಕರ್ ಅವರ ಆಶಯವಾಗಿತ್ತು.
ವಿ ದ ಪೀಪಲ್‌ ಆಫ್ ಇಂಡಿಯಾ
ಎನ್ನುವುದೇ ನಮ್ಮ ಸಂವಿಧಾನದ ಮೂಲ ಮಂತ್ರ ಎಂದು ಸಿಎಂ ಬಣ್ಣಿಸಿದರು.

ಈ ದೇಶದ ಜನತೆಗೆ ಎಂಥಾ ಸಂವಿಧಾನ ಬೇಕು ಎನ್ನುವ ಬಗ್ಗೆ ಒಂದು ವರ್ಷ ಕಾಲ ಸಂವಿಧಾನ ಸಭೆಯಲ್ಲಿ ಸಮಗ್ರ ಚರ್ಚೆ ಬಳಿಕ ಅಂಗೀಕರಿಸಲಾಗಿದೆ.

ಫೆಡರಲ್, ಯೂನಿಟರಿ, ರಿಟರ್ನ್, ಅನ್ ರಿಟರ್ನ್ ಸಂವಿಧಾನಗಳು ವಿಶ್ವದಲ್ಲಿವೆ. ನಮ್ಮದು ಲಿಖಿತ ಸಂವಿಧಾನ. ನಮ್ಮ ದೇಶದಲ್ಲಿರುವಷ್ಟು ಜಾತಿ, ಧರ್ಮಗಳು ಬೇರೆ ಯಾವ ದೇಶದಲ್ಲೂ ಇಲ್ಲ. ಹೀಗಾಗಿ ಈ ನೆಲಕ್ಕೆ ಒಪ್ಪಿಗೆಯಾಗುವ ಸಂವಿಧಾನವನ್ನು ಅಂಬೇಡ್ಕರ್ ಕೊಟ್ಟರು ಎಂದು ಮುಖ್ಯ ಮಂತ್ರಿಗಳು ವಿವರಿಸಿದರು.

ಮನುವಾದಿಗಳು ಸಂವಿಧಾನ ಅಂಬೇಡ್ಕರ್ ಅವರಿಂದ ಆಗಿಲ್ಲ ಎಂದು ವಾದಿಸುತ್ತಾರೆ. ಆದರೆ ಅಂಬೇಡ್ಕರ್ ಅವರೇ ಸಂವಿಧಾನ ಶಿಲ್ಪಿ ಎನ್ನುವುದನ್ನು ಮರೆಯಬಾರದು. ಅಂಬೇಡ್ಕರ್ ಅವರಿಗೆ ಈ ದೇಶದ ಜಾತಿ ವ್ಯವಸ್ಥೆ ಮತ್ತು ಅಪಾಯಗಳು ಅಂಬೇಡ್ಕರ್ ಅವರಿಗೆ ಅರ್ಥ ಆಗಿತ್ತು. ಅದಕ್ಕೇ ನಮ್ಮ ಸಂವಿಧಾನದಲ್ಲಿ ಮೀಸಲಾತಿಯನ್ನು ಸೇರಿಸಿದರು

ಸ್ವಾತಂತ್ರ್ಯ, ಸಮಾನತೆ, ಬ್ರಾತೃತ್ವ ಸಂವಿಧಾನದ ಆಶಯ. ಆದರೆ ಸ್ವಾತಂತ್ರ್ಯ ಬಂದು ಇಷ್ಟು ವರ್ಷ ಆದರೂ ಸಂವಿಧಾನದ ಆಶಯ ಈಡೇರಿಲ್ಲ ಎಂದು ಸಿಎಂ ಬೇಸರ ವ್ಯಕ್ತಪಡಿಸಿದರು.

ದಲಿತರನ್ನು, ಶೂದ್ರರನ್ನು ಹಿಂದುಳಿದವರನ್ನು, ಮುಸ್ಲೀಮರನ್ನು, ಅಲ್ಪಸಂಖ್ಯಾತರನ್ನು ದ್ವೇಷಿಸಿ ಎಂದು ನಮ್ಮ ಧರ್ಮವೂ ಹೇಳುವುದಿಲ್ಲ,ಇತರೆ ಯಾವ ಧರ್ಮವೂ ಹೇಳುವುದಿಲ್ಲ ಎಂದರು.

ಸಂವಿಧಾನ ಅಂಗೀಕಾರಕ್ಕೆ 285 ಮಂದಿ ಸದಸ್ಯರಲ್ಲಿ 284 ಮಂದಿ ಪೂರ್ತಿ ಸಹಿ ಹಾಕಿದರು. ಒಬ್ಬರು ಮಾತ್ರ ಹಾಕಲಿಲ್ಲ. ಹೀಗಾಗಿ ಬಹುತೇಕ ಎಲ್ಲರಿಗೂ ಒಪ್ಪಿಗೆ ಆಗುವಂತಹ ಸಂವಿಧಾನವನ್ನೇ ಅಂಬೇಡ್ಕರ್ ರಚಿಸಿದರು ಎಂದು ತಿಳಿಸಿದರು.

ಸಂವಿಧಾನದ ಸಮಾನತೆಯ ಆಶಯವನ್ನು ಈಡೇರಿಸುವ ಸಲುವಾಗಿಯೇ ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿ ಹಲವು ಭಾಗ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿದೆ ಎಂದು ತಿಳಿಸಿದರು.

ತುತ್ತು ಅನ್ನಕ್ಕಾಗಿ ಯಾರೂ ಯಾರ ಮನೆ ಮುಂದೆಯೂ ನಿಲ್ಲಬಾರದು ಎನ್ನುವ ಆಶಯದಿಂದ ಅನ್ನಭಾಗ್ಯ ತಂದೆ, ಯಾರ ಮನೆ ಮಕ್ಕಳೂ ಬರಿಗಾಗಲ್ಲಿ ಶಾಲೆಗೆ ಹೋಗಬಾರದು ಎನ್ನುವ ಕಾರಣದಿಂದ ಶೂ ಭಾಗ್ಯ ತಂದೆ. ಎಲ್ಲಾ ಭಾಗ್ಯಗಳ ಹಿಂದೆ ಹಾಗೂ ಈಗ ಜಾರಿ ಮಾಡಿರುವ ಐದೂ ಗ್ಯಾರಂಟಿಗಳ ಹಿಂದೆ ಅಸಮಾನತೆ ನಿವಾರಿಸುವ ಮತ್ತು ಸರ್ವರಿಗೂ ಆರ್ಥಿಕ ಶಕ್ತಿ ಬರಲಿ ಎಂಬ ಆಶಯ ಇದೆ ಎಂದು ಸಿದ್ದರಾಮಯ್ಯ ಹೇಳಿದರು.

ಸಚಿವರಾದ ಹೆಚ್.ಸಿ.ಮಹದೇವಪ್ಪ, ಕೆ.ಹೆಚ್.ಮುನಿಯಪ್ಪ, ಎಂ.ಸಿ.ಸುಧಾಕರ್, ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು.

ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ-ಸಿಎಂ‌ Read More

ಲೋಕ ಕಲ್ಯಾಣಕ್ಕಾಗಿ ಶ್ರೀವಿದ್ಯಾ ಮಹಾಯಾಗ: ಡಾ.ಶ್ರಿಪ್ರಿಯಾ ಅವರಿಂದ

ಬೆಂಗಳೂರು: ಜಗತ್ತಿನ ಕಲ್ಯಾಣ ಹಾಗೂ ಶಾಂತಿ ಸ್ಥಾಪನೆ ಗಾಗಿ 365 ದಿನಗಳ ಕಾಲ ನಿರಂತರ ಶ್ರೀವಿದ್ಯಾ ಮಹಾಯಾಗವನ್ನು ಪೂಜ್ಯ ಮಾತಾಜಿ ಡಾ.ಶ್ರಿಪ್ರಿಯಾ ಅವರು ಪ್ರಾರಂಭಿಸಿದ್ದಾರೆ.

2025ರ ಆಗಸ್ಟ್ 15 ರಂದು ಬೆಂಗಳೂರಿನ ಆನೇಕಲ್ ತಾ.ಜಿಗಣಿ ಹೋಬಳಿ,ಬೊಮ್ಮನಹಳ್ಳಿ ಗ್ರಾಮದ ಸರ್ವೇಶ್ವರ ಧಾಮದಲ್ಲಿ ಶ್ರೀವಿದ್ಯಾ ಮಹಾಯಾಗವನ್ನು ಪ್ರಾರಂಭಿಸಲಾಗಿದೆ.2026 ಆಗಸ್ಟ್ 15ಕ್ಕೆ ಯಾಗ ಸಂಪನ್ನಗೊಳ್ಳಲಿದೆ ಎಂದು ಪೂಜ್ಯ ಮಾತಾಜಿ ಡಾ.ಶ್ರಿಪ್ರಿಯಾ ಅವರು ವರ್ಷಿಣಿ ನ್ಯೂಸ್ ವೆಬ್ ಪೋರ್ಟಲ್ ಗೆ ತಿಳಿಸಿದ್ದಾರೆ.

ಪ್ರತಿದಿನ ಬೆಳಗಿನ ಅಧಿವೇಶನ:
ಬೆಳಿಗ್ಗೆ 5 ರಿಂದ 6 ರವರೆಗೆ – ಶ್ರೀಚಕ್ರ ಪೂಜೆ,
ಬೆಳಿಗ್ಗೆ 7 ರಿಂದ 8 ರವರೆಗೆ – ವಿಶ್ರಾಂತಿ, ಮರುಪರಿಶೀಲನೆ ಮತ್ತು ನಿರ್ಧಾರ ತೆಗೆದುಕೊಳ್ಳುವುದು.
ಬೆಳಿಗ್ಗೆ 9 ಗಂಟೆಗೆ – ತಿಥಿ ನಿತ್ಯ ದೇವತಾ ಹೋಮ,11 ಗಂಟೆಗೆ ಲಲಿತಾಸಹಸ್ರನಾಮ ಹೋಮ ನಡೆಯುತ್ತದೆ.

ಸಂಜೆ ಅಧಿವೇಶನ:
ಸಂಜೆ 5.30- ನವಾವರಣ ಹೋಮ,
ಸಂಜೆ 6.15ಕ್ಕೆ ತ್ರಿಶತಿ ಹೋಮ,
ಸೌಂದರ್ಯಲಹರಿ ಹೋಮ.
ನಂತರ ಮಾತಾ ಅವರಿಂದ
ಸಂದೇಶ ಇರುತ್ತದೆ.

ಈ ಲೋಕ ಕಲ್ಯಾಣ ಹೋಮದಲ್ಲಿ ನಾಗರೀಕರು ಪಾಲ್ಗೊಳ್ಳಬಹುದಾಗಿದೆ.

ಲೋಕ ಕಲ್ಯಾಣಕ್ಕಾಗಿ ಶ್ರೀವಿದ್ಯಾ ಮಹಾಯಾಗ: ಡಾ.ಶ್ರಿಪ್ರಿಯಾ ಅವರಿಂದ Read More

ಲೋಕ ಕಲ್ಯಾಣಕ್ಕಾಗಿ ಶ್ರೀವಿದ್ಯಾ ಮಹಾಯಾಗ: ಡಾ.ಶ್ರಿಪ್ರಿಯಾ ಅವರಿಂದ

ಬೆಂಗಳೂರು: ಜಗತ್ತಿನ ಕಲ್ಯಾಣ ಹಾಗೂ ಶಾಂತಿ ಸ್ಥಾಪನೆ ಗಾಗಿ 365 ದಿನಗಳ ಕಾಲ ನಿರಂತರ ಶ್ರೀವಿದ್ಯಾ ಮಹಾಯಾಗವನ್ನು ಪೂಜ್ಯ ಮಾತಾಜಿ ಡಾ.ಶ್ರಿಪ್ರಿಯಾ ಅವರು ಪ್ರಾರಂಭಿಸಿದ್ದಾರೆ.

2025ರ ಆಗಸ್ಟ್ 15 ರಂದು ಬೆಂಗಳೂರಿನ ಆನೇಕಲ್ ತಾ.ಜಿಗಣಿ ಹೋಬಳಿ,ಬೊಮ್ಮನಹಳ್ಳಿ ಗ್ರಾಮದ ಸರ್ವೇಶ್ವರ ಧಾಮದಲ್ಲಿ ಶ್ರೀವಿದ್ಯಾ ಮಹಾಯಾಗವನ್ನು ಪ್ರಾರಂಭಿಸಲಾಗಿದೆ.2026 ಆಗಸ್ಟ್ 15ಕ್ಕೆ ಯಾಗ ಸಂಪನ್ನಗೊಳ್ಳಲಿದೆ ಎಂದು ಪೂಜ್ಯ ಮಾತಾಜಿ ಡಾ.ಶ್ರಿಪ್ರಿಯಾ ಅವರು ವರ್ಷಿಣಿ ನ್ಯೂಸ್ ವೆಬ್ ಪೋರ್ಟಲ್ ಗೆ ತಿಳಿಸಿದ್ದಾರೆ.

ಪ್ರತಿದಿನ ಬೆಳಗಿನ ಅಧಿವೇಶನ:
ಬೆಳಿಗ್ಗೆ 5 ರಿಂದ 6 ರವರೆಗೆ – ಶ್ರೀಚಕ್ರ ಪೂಜೆ,
ಬೆಳಿಗ್ಗೆ 7 ರಿಂದ 8 ರವರೆಗೆ – ವಿಶ್ರಾಂತಿ, ಮರುಪರಿಶೀಲನೆ ಮತ್ತು ನಿರ್ಧಾರ ತೆಗೆದುಕೊಳ್ಳುವುದು.
ಬೆಳಿಗ್ಗೆ 9 ಗಂಟೆಗೆ – ತಿಥಿ ನಿತ್ಯ ದೇವತಾ ಹೋಮ,11 ಗಂಟೆಗೆ ಲಲಿತಾಸಹಸ್ರನಾಮ ಹೋಮ ನಡೆಯುತ್ತದೆ.

ಸಂಜೆ ಅಧಿವೇಶನ:
ಸಂಜೆ 5.30- ನವಾವರಣ ಹೋಮ,
ಸಂಜೆ 6.15ಕ್ಕೆ ತ್ರಿಶತಿ ಹೋಮ,
ಸೌಂದರ್ಯಲಹರಿ ಹೋಮ.
ನಂತರ ಮಾತಾ ಅವರಿಂದ
ಸಂದೇಶ ಇರುತ್ತದೆ.

ಈ ಲೋಕ ಕಲ್ಯಾಣ ಹೋಮದಲ್ಲಿ ನಾಗರೀಕರು ಪಾಲ್ಗೊಳ್ಳಬಹುದಾಗಿದೆ.

ಲೋಕ ಕಲ್ಯಾಣಕ್ಕಾಗಿ ಶ್ರೀವಿದ್ಯಾ ಮಹಾಯಾಗ: ಡಾ.ಶ್ರಿಪ್ರಿಯಾ ಅವರಿಂದ Read More

ಮೂರು ದೇಶಗಳಿಗೆ ನಂದಿನಿ ತುಪ್ಪ ರಫ್ತು: ಶುಭ ಹಾರೈಸಿದ ಸಿದ್ದರಾಮಯ್ಯ

ಬೆಂಗಳೂರು: ಆಸ್ಟ್ರೇಲಿಯಾ, ಅಮೆರಿಕಾ ಹಾಗೂ ಸೌದಿ ಅರೇಬಿಯಾ ದೇಶಗಳಿಗೆ ನಮ್ಮ ಹೆಮ್ಮೆಯ ನಂದಿನಿ ತುಪ್ಪವನ್ನು ರಫ್ತು ಮಾಡಲಾಗುತ್ತಿದೆ. ತುಪ್ಪದ ಬೇಡಿಕೆ ಹೆಚ್ಚಾಗುತ್ತಿದ್ದು, ವಿದೇಶಗಳಲ್ಲಿಯೂ ನಂದಿನಿ ತುಪ್ಪಕ್ಕೆ ಬೇಡಿಕೆ‌ ಇದರ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು .

ಹೊರ ದೇಶಗಳಿಗೆ ನಂದಿನಿ ತುಪ್ಪ ರವಾನೆಗೆ ಚಾಲನೆ ನೀಡಿ ಮಾತನಾಡಿದ‌ ಸಿಎಂ,ಮೂಲತ: ಮೈಸೂರು ಜಿಲ್ಲೆಯವರಾದ ಕುಮಾರ ಎಂಬುವರು ಅಮೆರಿಕಾದಲ್ಲಿ ನೆಲೆಸಿದ್ದು, ಇದರ ಏಜೆನ್ಸಿ ಪಡೆದಿದ್ದಾರೆ, ಕೆಎಂಎಫ್ ಹಾಗೂ ಕುಮಾರ ಅವರಿಗೆ ಶುಭವಾಗಲಿ ಎಂದು ಹಾರೈಸಿದರು.

ಶಾಸಕರ ಮತ್ತೊಂದು ತಂಡ ದೆಹಲಿಗೆ ಭೇಟಿ ನೀಡಿರುವ ಬಗ್ಗೆ ಮಾತನಾಡಿ ಹೈ ಕಮಾಂಡ್ ಭೇಟಿ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದು, ಶಾಸಕರಿಗೆ ಅವರ ಅಭಿಪ್ರಾಯ ತಿಳಿಸುವ ಸ್ವಾತಂತ್ರ್ಯ ಇದೆ. ವರಿಷ್ಠರು ಏನು ಹೇಳುತ್ತಾರೆ ನೋಡೋಣ ಎಂದು ಸಿದ್ದರಾಮಯ್ಯ ಹೇಳಿದರು.

ಮೂರು ದೇಶಗಳಿಗೆ ನಂದಿನಿ ತುಪ್ಪ ರಫ್ತು: ಶುಭ ಹಾರೈಸಿದ ಸಿದ್ದರಾಮಯ್ಯ Read More

ನ.26 ರಂದು ಆಮ್ ಆದ್ಮಿ ಪಕ್ಷದ 14ನೇ ಸಂಸ್ಥಾಪನ ದಿನಾಚರಣೆ

ಬೆಂಗಳೂರು: ಆಮ್ ಆದ್ಮಿ ಪಕ್ಷದ 14ನೇ ಸಂಸ್ಥಾಪನಾ ದಿನಾಚರಣೆಯನ್ನು ನ. 26 ರಂದು ಆಚರಿಸಲಾಗುತ್ತಿದೆ.

ಈ‌ ಕುರಿತು ಸುದ್ದಿಗೋಷ್ಠಿಯಲ್ಲಿ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಮಾತನಾಡಿ,ಸಂಸ್ಥಾಪನಾ ದಿನಾಚರಣೆಯನ್ನು
ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಬೆಂಗಳೂರಿನ ಪಕ್ಷದ ಪ್ರಧಾನ ಕಚೇರಿಯಲ್ಲಿ ಸಡಗರದಿಂದ ಆಚರಿಸಲಾಗುವುದೆಂದು ತಿಳಿಸಿದರು.

ದೇಶದಲ್ಲಿ ಅವ್ಯಾಹತವಾಗಿ ಬೇರು ಬಿಟ್ಟಿರುವ ಭ್ರಷ್ಟ ಆಡಳಿತ ವ್ಯವಸ್ಥೆ, ಪಾರಂಪರಿಕ ಪಕ್ಷಗಳ ಕುಟುಂಬ ರಾಜಕಾರಣ , ಸ್ವಜನ ಪಕ್ಷಪಾತ, ಜನಸಾಮಾನ್ಯರಿಗೆ ಮೂಲಭೂತ ಹಕ್ಕುಗಳ ನಿರಾಕರಣೆ ಇವುಗಳ ವಿರುದ್ಧ ಕಳೆದ 13 ವರ್ಷಗಳ ಹಿಂದೆ ಉದಯಿಸಿದ ಆಮ್ ಆದ್ಮಿ ಪಕ್ಷವು ಕೇವಲ ರಾಜಕೀಯ ಪಕ್ಷವಾಗಿರದೆ ಜನಪರ ರಾಜಕೀಯ ಆಂದೋಲನವಾಗಿದೆ ಎಂದು ಹೇಳಿದರು.

ಪ್ರತಿಯೊಬ್ಬ ಜನಸಾಮಾನ್ಯನು ಸಹ ರಾಜಕೀಯ ಹಕ್ಕುಗಳನ್ನು ಪಡೆಯಬೇಕೆಂಬುದೇ ಪಕ್ಷದ ಹೆಗ್ಗುರಿಯಾಗಿದೆ. ಜನಸಾಮಾನ್ಯನಿಂದಲೇ ಜನಸಾಮಾನ್ಯನ ಮೂಲಭೂತ ಸಮಸ್ಯೆಗಳೆಲ್ಲ ಪರಿಹಾರ ಆಗಬೇಕೆಂಬುದು ಪಕ್ಷದ ಆಶಯವಾಗಿದೆ ಎಂದು ತಿಳಿಸಿದರು.

ಈ ನಿಟ್ಟಿನಲ್ಲಿ ನಮ್ಮ ಜನಪ್ರಿಯ ನಾಯಕ ಅರವಿಂದ ಕೇಜ್ರಿವಾಲ್ ಅವರ ನೇತೃತ್ವದಲ್ಲಿ ಪಕ್ಷವು ದೆಹಲಿ, ಪಂಜಾಬ್ ರಾಜ್ಯಗಳಲ್ಲಿ ಅಧಿಕಾರವನ್ನು ಸ್ಥಾಪಿಸಿ ಶಿಕ್ಷಣ, ಆರೋಗ್ಯ ಹಾಗೂ ಮೂಲಭೂತ ಸೌಕರ್ಯಗಳ ವಿಷಯದಲ್ಲಿ ಕ್ರಾಂತಿಕಾರಕ ಮಾರ್ಪಾಡುಗಳನ್ನು ಮಾಡಿರುವುದು ನಮ್ಮ ಪಕ್ಷದ ಪ್ರಮುಖ ಸಾಧನೆಯಾಗಿದೆ ಎಂದು ವಿವರಿಸಿದರು.

ಮುಂಬರುವ ದಿವಸಗಳಲ್ಲಿ ಗುಜರಾತ್, ಗೋವಾ, ಕರ್ನಾಟಕ , ಜಮ್ಮು ಮತ್ತು ಕಾಶ್ಮೀರ, ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಪಕ್ಷವು ಆಡಳಿತವನ್ನು ಸ್ಥಾಪಿಸುವುದರಲ್ಲಿ ಸಂಘಟನಾತ್ಮಕವಾಗಿ ಮುನ್ನಡೆಯನ್ನು ಸಾಧಿಸುತ್ತಿದೆ.

ಮುಂಬರುವ ದಿವಸಗಳಲ್ಲಿ ಪರಂಪರಾನುಗತ ಪಕ್ಷಗಳ ಸ್ಥಾಪಿತ ಹಿತಾಸಕ್ತಿಗಳನ್ನು ಮುರಿದು ದೇಶದ ಪ್ರಜಾಪ್ರಭುತ್ವ ಹಾಗೂ ಸಾಂವಿಧಾನಿಕ ವ್ಯವಸ್ಥೆಯನ್ನು ಮರು ಸ್ಥಾಪಿಸುವುದೇ ಪಕ್ಷದ ಪ್ರಮುಖ ಉದ್ದೇಶವಾಗಿದೆ ಎಂದು ಜಗದೀಶ್ ವಿ.ಸದಂ ತಿಳಿಸಿದರು.

ನಂತರ ಮಾತನಾಡಿದ ಪಕ್ಷದ ರಾಜ್ಯ ಖಜಾಂಚಿ ಪ್ರಕಾಶ್ ನೆಡುನಂಗಡಿ ಅವರು 14ನೇ ವರ್ಷದ ಸಂಸ್ಥಾಪನಾ ದಿನಾಚರಣೆ ನಿಮಿತ್ತ ರಾಜ್ಯದಲ್ಲಿಯೂ ಎಲ್ಲಾ ಕಡೆ ವಿಜೃಂಭಣೆಯಿಂದ ಆಚರಿಸಿ ಸಾರ್ವಜನಿಕರೊಂದಿಗೆ ಸಂವಾದ ಕಾರ್ಯಕ್ರಮಗಳನ್ನು ಏರ್ಪಡಿಸುವ ಮೂಲಕ ಮಾದರಿಯಾಗಿ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಗುತ್ತದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಪ್ರಚಾರ ಸಮಿತಿ ಉಪಾಧ್ಯಕ್ಷ ಲಕ್ಷ್ಮಿಕಾಂತ ರಾವ್ ಉಪಸ್ಥಿತರಿದ್ದರು.

ನ.26 ರಂದು ಆಮ್ ಆದ್ಮಿ ಪಕ್ಷದ 14ನೇ ಸಂಸ್ಥಾಪನ ದಿನಾಚರಣೆ Read More

ಡಾ. ಜಾನಪದ ಬಾಲಾಜಿ ಅವರಿಗೆ ಮೇರಾ ಯುವ‌ ಭಾರತ್ ಗೌರವ

ಬೆಂಗಳೂರು: 17 ನೇ ಬುಡಕಟ್ಟು ವಿನಯ ಕಾರ್ಯಕ್ರಮ ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷ ಡಾ ಜಾನಪದ ಬಾಲಾಜಿ ಅವರನ್ನು
ಮೇರಾ ಯುವ‌ ಭಾರತ್ ಗೌರವ‌ ನೀಡಿ ಸನ್ಮಾನಿಸಲಾಯಿತು.

ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಡಾ ಜಾನಪದ ಬಾಲಾಜಿ ಅವರನ್ನು ಗೌರವಿಸಿದರು.

ಬೆಂಗಳೂರಿನ ಪದ್ಮನಾಭನಗರದ ರೀಜಿನಲ್ ಇನ್ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ಸಭಾಂಗಣದಲ್ಲಿ ಭಾರತ ಸರ್ಕಾರ ಗೃಹ ಮಂತ್ರಾಲಯ, ಯುವ ಕಾರ್ಯ ಹಾಗೂ ಕ್ರೀಡಾ ಮಂತ್ರಾಲಯ ಸಿ ಆರ್ ಪಿ ಎಫ್, ಬಿಎಸ್ಎಫ್, ಮೈ ಭಾರತ, ಮೇರಾ ಯುವ ಭಾರತ್ ಸಂಯುಕ್ತ ಆಶ್ರಯದಲ್ಲಿ 17 ನೇ ಬುಡಕಟ್ಟು ವಿನಿಮಯ ಕಾರ್ಯಕ್ರಮ ಸಮಾರೋಪ ಸಮಾರಂಭ
ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮದಲ್ಲಿ ಆರ್ ಅಶೋಕ್ ಅವರು ಡಾ ಜಾನಪದ ಬಾಲಾಜಿ ಅವರನ್ನು ಗೌರವಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ ನವೀನ್ ರಾಜ್ ಸಿಂಗ್, ಮೇರಾ ಯುವ ಭಾರತ್ ಪ್ರಾಂತಿಯ ನಿರ್ದೇಶಕ ಅಶೋಕ್ ದಾಸ್, ನೆಹರು ಯುವ ಕೇಂದ್ರದ ನಿವೃತ್ತ ನಿರ್ದೇಶಕ ಎಂ ಎನ್ ನಟರಾಜ್, ಮೈ ಭಾರತ ಬೆಂಗಳೂರು ನಗರ ಜಿಲ್ಲೆಯ ಯುವ ಅಧಿಕಾರಿ ನಾಗಲಕ್ಷ್ಮಿ, ರೀಜನಲ್ ಸೆಂಟರ್ ಸುರೇಶ್ ಮತ್ತಿತರರು ಉಪಸ್ಥಿತರಿದ್ದರು.

ಡಾ. ಜಾನಪದ ಬಾಲಾಜಿ ಅವರಿಗೆ ಮೇರಾ ಯುವ‌ ಭಾರತ್ ಗೌರವ Read More

ಬೆಂಗಳೂರಲ್ಲಿ ಟನಲ್ ರಸ್ತೆ ಯೋಜನೆ ಮುಂದುವರಿಸಿ:ಐಐಇ ಆಗ್ರಹ

ಬೆಂಗಳೂರು: ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ಟನಲ್ ರಸ್ತೆ ಅಗತ್ಯವಿದ್ದು, ಈ ಯೋಜನೆಯನ್ನು ಮುಂದುವರಿಸಬೇಕು ಎಂದು ಭಾರತೀಯ ಇಂಜಿನಿಯರ್ ಗಳ ಸಂಸ್ಥೆ ಸರ್ಕಾರವನ್ನು (ಐಐಇ)ಆಗ್ರಹಿಸಿದೆ.

ಅಲಿ ಆಸ್ಕರ್ ರಸ್ತೆಯಲ್ಲಿ ಬುಧವಾರ ನಡೆದ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾರ್ಯಕ್ರಮದ ವೇಳೆ ಭಾರತೀಯ ಇಂಜಿನಿಯರ್ ಗಳ ಸಂಸ್ಥೆ ಕಾರ್ಯದರ್ಶಿ ಎಂ. ಲಕ್ಷ್ಮಣ್ ಹಾಗೂ ಇತರ ಪದಾಧಿಕಾರಿಗಳು ಟನಲ್ ರಸ್ತೆಯಿಂದ ಬೆಂಗಳೂರಿಗೆ ಆಗಲಿರುವ ಅನುಕೂಲತೆಗಳ ಕುರಿತು ವರದಿಯನ್ನು ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಸಲ್ಲಿಸಿದರು.

ಬೆಂಗಳೂರಿನಲ್ಲಿ ಟನಲ್ ರಸ್ತೆ ನಿರ್ಮಾಣ ಮಾಡಬೇಕು ಎಂಬ ಉಪಮುಖ್ಯಮಂತ್ರಿಗಳ ನಿರ್ಧಾರ ಅತ್ಯುತ್ತಮವಾಗಿದೆ. ಈ ಯೋಜನೆ ಜಾರಿ ಹೊರತಾಗಿ ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಯಾಗಲು ಸಾಧ್ಯವಿಲ್ಲ. ಈ ಟನಲ್ ರಸ್ತೆಗೆ ಬಿಜೆಪಿಯವರು ಹೇಳುತ್ತಿರುವಂತೆ ಪ್ರತಿ ಕಿ.ಮೀ.ಗೆ 1500 ಕೋಟಿ ರೂ. ವೆಚ್ಚವಾಗುವುದಿಲ್ಲ. ಪ್ರತಿ ಕಿ.ಮೀ.ಗೆ ಸುಮಾರು 440 ಕೋಟಿ ವೆಚ್ಚ ತಗುಲಲಿದೆ ಎಂದು ಹೇಳಿದರು.

ಈ ಯೋಜನೆಗೆ ಕೇಂದ್ರ ಸರ್ಕಾರ ಹಾಗೂ ವಿವಿಧ ಬ್ಯಾಂಕುಗಳಿಂದ ಆರ್ಥಿಕ ನೆರವು ಸಿಗಲಿದೆ. ಈ ವಿಚಾರದಲ್ಲಿ ಭಾರತೀಯ ಇಂಜಿನಿಯರ್ ಗಳ ಸಂಸ್ಥೆ ಸರ್ಕಾರದ ಪರವಾಗಿ ನಿಲ್ಲಲಿದೆ. ಯಾವಾಗ ಕರೆದರೂ ನಾವು ಸಲಹೆ ನೀಡಲು ಸಿದ್ಧ ಎಂದು ಲಕ್ಷ್ಮಣ್ ಅವರು ತಿಳಿಸಿದರು.

ಬೆಂಗಳೂರಲ್ಲಿ ಟನಲ್ ರಸ್ತೆ ಯೋಜನೆ ಮುಂದುವರಿಸಿ:ಐಐಇ ಆಗ್ರಹ Read More