ಜನತೆಯನ್ನು ಕುಡುಕರಾಗಿಸುವ ಸರ್ಕಾರದ ನೀತಿ ಒಪ್ಪಲಾಗದು:ಮುಖ್ಯ ಮಂತ್ರಿ ಚಂದ್ರು

ಬೆಂಗಳೂರು: ಜನತೆಯನ್ನು ಕುಡುಕರನ್ನಾಗಿಸುವ ಸರ್ಕಾರದ ನೀತಿಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಆಮ್ ಆದ್ಮಿ ಪಕ್ಷದ‌ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.

ಈಗಾಗಲೇ ರಾಜ್ಯದಲ್ಲಿ ಮಧ್ಯ ಹಾಗೂ ಡ್ರಗ್ಸ್ ಹಾವಳಿಯಿಂದಾಗಿ ಯುವಜನತೆ ಮತ್ತು ಸಮಾಜ ನೈತಿಕ ಅಧಃಪತನಕ್ಕೆ ಇಳಿಯುತ್ತಿರುವ ಸಂದರ್ಭದಲ್ಲಿ ಸರ್ಕಾರವು ಮತ್ತಷ್ಟು ಮಧ್ಯದ ಅಂಗಡಿಗಳನ್ನು ತೆರೆಯಲು ಅನುಮತಿಯನ್ನು ನೀಡುತ್ತಿರುವುದು ಸಹಿಸಲು ಸಾಧ್ಯವಿಲ್ಲ ಎಂದು ಡಾ. ಮುಖ್ಯಮಂತ್ರಿ ಚಂದ್ರು ಕಿಡಿಕಾರಿದ್ದಾರೆ.

ಪಕ್ಕದ ತಮಿಳುನಾಡು, ಕೇರಳ ಇನ್ನಿತರ ರಾಜ್ಯಗಳಲ್ಲಿ ಊರಾಚೆ ಮಧ್ಯದ ಅಂಗಡಿಗಳು ಇವೆ. ಬಿಹಾರ ಮತ್ತು ಗುಜರಾತ್ ರಾಜ್ಯಗಳಲ್ಲಿ ಸಂಪೂರ್ಣ ಮದ್ಯಪಾನ ನಿಷಿದ್ಧವಾಗಿದೆ.ಈ ಹಿಂದೆ ಬಂಗಾರಪ್ಪ ಸರ್ಕಾರದ ಅವಧಿಯಲ್ಲಿ ನಾಯಿ ಕೊಡೆಗಳಂತೆ ಎಲ್ಲೆಂದರಲ್ಲಿ ಲೈಸೆನ್ಸ್ ಗಳನ್ನು ನೀಡಿದ ಪರಿಣಾಮದಿಂದ ಈಗಾಗಲೇ ಸಮಾಜವು ದುಷ್ಪರಿಣಾಮವನ್ನು ಎದುರಿಸುವಂತಾಗಿದೆ ಎಂದು ಚಂದ್ರು‌ ಅಭಿಪ್ರಾಯ ಪಟ್ಟಿದ್ದಾರೆ.

ಸರ್ಕಾರವು ಯುವಜನತೆಯನ್ನು ನಶೆ ಮುಕ್ತರನ್ನಾಗಿಸಲು ಅಲ್ಲಲ್ಲಿ ಕೇಂದ್ರಗಳನ್ನು ತೆರೆಯುವುದನ್ನು ಬಿಟ್ಟು ಸರ್ಕಾರವೇ ಎಂ ಎಸ್ ಐ ಎಲ್ ಮೂಲಕ ರಾಜ್ಯದ ಮೂಲೆ ಮೂಲೆಗಳಲ್ಲಿಯೂ ಮಧ್ಯದ ಅಂಗಡಿಗಳನ್ನು ತೆರೆದು ಜನತೆಯನ್ನು ಮತ್ತಷ್ಟು ಕುಡುಕರನ್ನಾಗಿಸುತ್ತಿದೆ. ಅಲ್ಲದೆ ಅಬಕಾರಿ ಮತ್ತು ಪೊಲೀಸ್ ಇಲಾಖೆಯ ವೈಫಲ್ಯಗಳಿಂದಾಗಿ ಈಗಾಗಲೇ ಹಳ್ಳಿ ಹಳ್ಳಿಗಳಲ್ಲಿ ಮಧ್ಯ ರಾಜಾರೋಶವಾಗಿ ಸರಬರಾಜಾಗುತ್ತಿದೆ. ಇವುಗಳನ್ನು ತಡೆಗಟ್ಟುವುದನ್ನು ಬಿಟ್ಟು ಮುಖ್ಯಮಂತ್ರಿಗಳೇ ಮುಂದೆ ನಿಂತು ತಮ್ಮ ಕಮಿಷನ್ ಧನದಾಹದಿಂದ ಮತ್ತಷ್ಟು ಲೈಸೆನ್ಸ್ ಗಳನ್ನು ವಿತರಿಸಲು ಹೊರಟಿರುವುದನ್ನು ರಾಜ್ಯದ ಮಹಿಳೆಯರು ಸೇರಿದಂತೆ ಯಾರು ಸಹ ಒಪ್ಪುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಸಮಾಜವನ್ನು ಹಾಳು ಗೆಡವಿ ಅಬಕಾರಿ ಆದಾಯದಿಂದಲೇ ಸರ್ಕಾರವನ್ನು ನಡೆಸಲು ಹೊರಟಿರುವ ಮುಖ್ಯಮಂತ್ರಿಗಳ ಆರ್ಥಿಕ ನೀತಿಯ ವಿರುದ್ಧ ಆಮ್ ಆದ್ಮಿ ಪಕ್ಷವು ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಚಂದ್ರು ಎಚ್ಚರಿಸಿದ್ದಾರೆ.

ಜನತೆಯನ್ನು ಕುಡುಕರಾಗಿಸುವ ಸರ್ಕಾರದ ನೀತಿ ಒಪ್ಪಲಾಗದು:ಮುಖ್ಯ ಮಂತ್ರಿ ಚಂದ್ರು Read More

ರೈತರ ಬೇಡಿಕೆ ಈಡೇರಿಸಿದ ಸರಕಾರ:ಪ್ರತಿ ಟನ್ ಕಬ್ಬಿಗೆ 3300 ರೂ ದರ ನಿಗದಿ

ಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3500 ರೂ ದರ ನಿಗದಿ ಮಾಡುವಂತೆ ಅಹೋರಾತ್ರಿ ಹೋರಾಟ ನಡೆಸುತ್ತಿದ್ದ ಕಬ್ಬುಬೆಳೆಗಾರರಿಗೆ ಸರ್ಕಾರ ಸ್ವಲ್ಪಮಟ್ಟಿಗೆ‌ ಸಿಹಿ ಕೊಟ್ಟಿದೆ.

ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ನಡೆಸುತ್ತಿರುವ ರೈತರ ಹೋರಾಟಕ್ಕೆ ರಾಜ್ಯ ಸರ್ಕಾರ ಸ್ಪಂದಿಸಿದ್ದು, 3300 ರೂ ದರ ನಿಗದಿ ಮಾಡಿದೆ.

ಶುಕ್ರವಾರ ಬೆಂಗಳೂರಿನಲ್ಲಿ ರಾಜ್ಯದ ಎಲ್ಲಾ ಸಕ್ಕರೆ ಕಾರ್ಖಾನೆಗಳ ಮಾಲೀಕರ ಜೊತೆಗೆ ಸಿಎಂ ನಡೆಸಿದ ಸಭೆಯಲ್ಲಿ ರೈತರ ಪ್ರತಿಭಟನೆ ಬಗ್ಗೆ, ಎಫ್‌ಆರ್ ಸಿ ಬಗ್ಗೆ ಚರ್ಚಿಸಿದರು.

ನಂತರ ರೈತರ ಬೇಡಿಕೆಯಲ್ಲಿ 3500 ರೂ ಬದಲಿಗೆ‌ 3300 ರೂ ದರ ನಿಗದಿ ಮಾಡಿ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ.ಬಹಳಷ್ಟು ರೈತರು ಖುಷಿಯಿಂದ ಇದನ್ನು ಸ್ವಾಗತಿಸಿದ್ದಾರೆ.ಕೆಲವರು ನಾಳೆ ಸಭೆ ನಡೆಸಿ ತೀರ್ಮಾನಿಸುವುದಾಗಿ ತಿಳಿಸಿದ್ದಾರೆ.

ಕಬ್ಬು ಬೆಳೆಗಾರರು ಪ್ರತಿ ಟನ್ ಕಬ್ಬಿಗೆ 3500 ರೂಪಾಯಿ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಸುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಬೆಳಗಾವಿಯಲ್ಲಿ ನಡೆಯುತ್ತಿದ್ದ ರೈತರ ಹೋರಾಟ ಹಿಂಸಾಚಾರಕ್ಕೆ ತಿರುಗಿತ್ತು. ಈ ಬೆಳವಣಿಗೆ ಬೆನ್ನಲ್ಲೇಯಲ್ಲಿ ಎಚ್ಚೆತ್ತ ಸರಕಾರ ಕಬ್ಬು ಬೆಳೆಗಾರರ ಹೋರಾಟಕ್ಕೆ ಮಣಿದಿದೆ.

ಸದ್ಯಕ್ಕೆ ಕಬ್ಬು ಬೆಳೆಗಾರರ ಹೋರಾಟ ಅಂತ್ಯವಾಗಿದೆ, ಬೆಳಗಾವಿ ಅಷ್ಟೇ ಅಲ್ಲದೇ ವಿಜಯಪುರ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ರಾಯಚೂರು, ಕಲಬುರಗಿ, ಯಾದಗಿರಿ, ಶಿವಮೊಗ್ಗ, ದಾವಣಗೆರೆ, ಮಂಡ್ಯ ಜಿಲ್ಲೆಯ ರೈತರು ಸಹಿ ಹಂಚಿ ಸಂಭ್ರಮಿಸಿದ್ದಾರೆ.

ಇದು ಬದುಕಿನ ಹೋರಾಟ ಎಂದ ರೈತರು: ನಿರಂತರ ಒಂಬತ್ತು ದಿನಗಳಿಂದ ರೈತರು ಕೊರೆಯುವ ಚಳಿಯಲ್ಲಿ, ಬಿಸಿಲೂ, ಗಾಳಿ ಯಾವುದೇ ಲೆಕ್ಕಿಸದೆ ನಿರಂತರವಾಗಿ ಸರಕಾರದ ವಿರುದ್ದ ಹೋರಾಟ ನಡೆಸಿದ್ದರು.
ಇದು ಕೇವಲ ಕಬ್ಬಿನ ಹೋರಾಟ ಅಷ್ಟೇ ಅಲ್ಲ, ಬದುಕಿನ ಹೋರಾಟ, ಎಂದು ಗುರ್ಲಾಪುರದ ರೈತರು ತಮ್ಮ ಮನದಾಳದ ಮಾತುಗಳನ್ನು ವ್ಯಕ್ತಪಡಿಸಿದರು.
ನಿರಂತರ ನಮ್ಮ ಹೋರಾಟಕ್ಕೆ ಜಯ ಸಿಕ್ಕಿದೆ ಎಂದು ರೈತರ ಸಂತೋಷ ವ್ಯಕ್ತಪಡಿಸಿದರು. ‌

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಬ್ಬು ಬೆಳೆಗಾರರ ಮುಖಂಡರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆಯಲ್ಲಿ ಸರಕಾರ ಪ್ರತಿ ಟನ್ ಕಬ್ಬಿಗೆ 3300 ರೂ ದರ ನಿಗದಿ ಮಾಡಲು ನಿರ್ಧರಿಸಿದೆ.

ಸರಕಾರದಿಂದ 50 ರೂಪಾಯಿ ಹಾಗೂ ಕಾರ್ಖಾನೆಯಿಂದ 50 ರೂಪಾಯಿ ನೀಡಲಾಗುವುದು. ಈ ಮೂಲಕ ಒಟ್ಟು 3300 ರೂಪಾಯಿ ನೀಡಲು ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ರೈತರ ಬೇಡಿಕೆ ಈಡೇರಿಸಿದ ಸರಕಾರ:ಪ್ರತಿ ಟನ್ ಕಬ್ಬಿಗೆ 3300 ರೂ ದರ ನಿಗದಿ Read More

ಜೀವದಾರ ರಕ್ತ ನಿಧಿ ಕೇಂದ್ರಕ್ಕೆಅತ್ಯುತ್ತಮ ರಕ್ತ ನಿಧಿ ಕೇಂದ್ರ ಪ್ರಶಸ್ತಿ

ಮೈಸೂರು: ಬೆಂಗಳೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮೈಸೂರಿನ ಜೀವದಾರ ರಕ್ತ ನಿಧಿ ಕೇಂದ್ರಕ್ಕೆ
ಅತ್ಯುತ್ತಮ ರಕ್ತ ನಿಧಿ ಕೇಂದ್ರ ಪ್ರಶಸ್ತಿ ನೀಡಿ ಗೌರವಿಸಿದೆ.

ಬೆಂಗಳೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಬೆಂಗಳೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಬೆಂಗಳೂರು ನಗರ ಜಿಲ್ಲಾ ಕರ್ನಾಟಕ ರಾಜ್ಯ ರಕ್ತ ಸಂಚಲನಾ ಪರಿಷತ್ ಬೆಂಗಳೂರು, ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ,ಬೆಂಗಳೂರು ನಗರ ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವತಿಯಿಂದ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಅಂಗವಾಗಿ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಸ್ಪರ್ಶ ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅತ್ಯುತ್ತಮ
ರಕ್ತ ನಿಧಿ ಕೇಂದ್ರ ಎಂದು
ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕರಾದ ಗಿರೀಶ್ ಅವರಿಗೆ ಅಭಿನಂದನಾ ಪತ್ರ ನೀಡಿ ಅತ್ಯುತ್ತಮ ರಕ್ತ ನಿಧಿ ಕೇಂದ್ರ ಎಂದು ಬಿರುದು ನೀಡಿ ಗೌರವಿಸಲಾಯಿತು.

ಜೀವದಾರ ರಕ್ತ ನಿಧಿ ಕೇಂದ್ರಕ್ಕೆಅತ್ಯುತ್ತಮ ರಕ್ತ ನಿಧಿ ಕೇಂದ್ರ ಪ್ರಶಸ್ತಿ Read More

ಹಿರಿಯ ಖ್ಯಾತ ನಟ‌ ಹರೀಶ್ ರಾಯ್ ವಿಧಿವಶ

ಬೆಂಗಳೂರು: ಕ್ಯಾನ್ಸರ್ ನಿಂದ ಬಳಲುತ್ತಿದ್ದ‌
ಹಿರಿಯ ನಟ ಹರೀಶ್ ರಾಯ್‌ ಚಿಕಿತ್ಸೆ ಫಲಿಸದೆ ಇಹಲೋಕ ತ್ಯಜಿಸಿದ್ದಾರೆ.

ಹಲವು ವರ್ಷಗಳಿಂದ ಹರೀಶ್ ರಾಯ್ ಅವರು ಥೈರಾಯ್ಡ್ ಕ್ಯಾನ್ಸರ್‌ನಿಂದ‌ ಬಳಲುತ್ತಿದ್ದರು.ಬೆಂಗಳೂರಿನ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

90ರ ದಶಕದಿಂದಲೂ ಸಕ್ರಿಯರಾಗಿದ್ದ ಅವರು, ಓಂ, ಕೆಜಿಎಫ್ ಸೇರಿದಂತೆ ಹಲವು ಹಿಟ್ ಚಿತ್ರಗಳಲ್ಲಿ ಖಳನಟನಾಗಿ ಪ್ರಸಿದ್ಧ ರಾಗಿದ್ದರು.ಅವರು ತಮಿಳಿನ ಕೆಲ ಚಿತ್ರಗಳಲ್ಲೂ ನಟಿಸಿದ್ದಾರೆ.

ಹರೀಶ್ ರಾಯ್ ಚಿಕಿತ್ಸೆಗೆ ನಟ ಯಶ್ ಸೇರಿದಂತೆ ಅನೇಕರು ಧನ ಸಹಾಯ ಮಾಡಿದ್ದರು.

ರಾಜ್ ಬಹದ್ದೂರ್, ನನ್ನ ಕನಸಿನ ಹೂವೆ ಜೋಡಿ ಹಕ್ಕಿ, ತಾಯವ್ವ, ಅಂಡರ್​ ವರ್ಲ್ಡ್, ನಲ್ಲ, ಸಂಜು ವೆಡ್ಸ್ ಗೀತಾ, ಸ್ವಯಂವರ, ಭೂಗತ,ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿದ್ದರು.

ಹರೀಶ್ ರಾಯ್ ಅವರ ನಿಧನಕ್ಕೆ ಚಿತ್ರರಂಗ ಕಂಬನಿ ಮಿಡಿದಿದೆ.

ಹಿರಿಯ ಖ್ಯಾತ ನಟ‌ ಹರೀಶ್ ರಾಯ್ ವಿಧಿವಶ Read More

ಬಿವೈವಿ ಜನುಮದಿನ:ಜಗದೀಶ್ ಶುಭಹಾರೈಕೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರಿಗೆ ಹುಟ್ಟುಹಬ್ಬದ ಸಂಭ್ರಮ.

ಹಾಗಾಗಿ ಗುರುವಾರ ಬೆಂಗಳೂರಿನ ದವಳಗಿರಿ ನಿವಾಸದಲ್ಲಿ ಬಿ.ವೈ.ವಿಜಯೇಂದ್ರ ಅವರ ಹುಟ್ಟುಹಬ್ಬಕ್ಕಾಗಿ ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯರಾದ ಜಗದೀಶ್ ಮತ್ತಿತರರು ಶಾಲು ಹೊದಿಸಿ, ಹಾರ ಹಾಕಿ ಶುಭ ಹಾರಿಸಿದರು.

ಬಿವೈವಿ ಜನುಮದಿನ:ಜಗದೀಶ್ ಶುಭಹಾರೈಕೆ Read More

ಕಬ್ಬು ಬೆಳೆಗಾರರ ಹೋರಾಟಕ್ಕೆ ಆಮ್ ಆದ್ಮಿ ಪಕ್ಷ ಪೂರ್ಣ ಬೆಂಬಲ-ಮುಖ್ಯಮಂತ್ರಿ ಚಂದ್ರು

ಬೆಂಗಳೂರು: ಕಬ್ಬು ಬೆಳೆಗಾರರ ಹೋರಾಟಕ್ಕೆ
ಆಮ್ ಆದ್ಮಿ ಪಕ್ಷ ಸಂಪೂರ್ಣ ಬೆಂಬಲ ಸೂಚಿಸುತ್ತದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಪ್ರಕಟಿಸಿದ್ದಾರೆ.

ಕೇಂದ್ರ ಸರ್ಕಾರವು ಕಬ್ಬು ಬೆಳೆಗಾರರಿಗೆ ನಿಗದಿ ಮಾಡಿರುವ 3,550 ರೂ.ಗಳ ಎಫ್. ಆರ್. ಪಿ ದರವನ್ನು ನೀಡಲು ಹಿಂಜರಿಯುತ್ತಿರುವ ಕರ್ನಾಟಕದ ಸಕ್ಕರೆ ಕಾರ್ಖಾನೆಗಳ ಮಾಲೀಕರ ಕ್ರಮವನ್ನು ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆ ಮಾಲೀಕರುಗಳ ಪರವಾದ ಧೋರಣೆಯನ್ನು ನಮ್ಮ ಪಕ್ಷ ಸಂಪೂರ್ಣ ಖಂಡಿಸುತ್ತದೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರವು ಈಗಾಗಲೇ ಘೋಷಿಸಿರುವ ಎಫ್‌ಆರ್‌ಪಿ ದರವು ಅವೈಜ್ಞಾನಿಕವಾಗಿದೆ,ಇದು ಕಬ್ಬು ಬೆಳೆದಿರುವ ರೈತರಿಗೆ ಸಾಕಷ್ಟು ನಷ್ಟವಾಗುತ್ತದೆ. ಇದನ್ನು ಪರಿಷ್ಕರಿಸುವ ಸಂಪೂರ್ಣ ಅಧಿಕಾರ ರಾಜ್ಯ ಸರ್ಕಾರಕ್ಕೆ ಇದೆ. ಆದರೆ ರಾಜ್ಯದ ಕಾರ್ಖಾನೆ ಮಾಲೀಕರುಗಳೆಲ್ಲರೂ ಮೂರು ಪಕ್ಷಗಳ ಪ್ರಮುಖರು ಮಂತ್ರಿಗಳು, ಶಾಸಕರು, ಸಂಸದರುಗಳೇ ಆಗಿದ್ದಾರೆ. ಇವರ ಒತ್ತಡಕ್ಕೆ ಸಂಪೂರ್ಣ ಶರಣಾಗಿರುವ ರಾಜ್ಯ ಸರ್ಕಾರವು ಕೇಂದ್ರ ನಿಗದಿಪಡಿಸಿರುವ ದರವನ್ನು ಪರಿಷ್ಕರಿಸಿಲ್ಲ ಎಂದು ಕಿಡಿಕಾರಿದ್ದಾರೆ.

ರಾಜ್ಯ ಸರ್ಕಾರ ಕೇಂದ್ರವು ನಿಗದಿಪಡಿಸಿರುವ ದರ ಸಹ ನೀಡಲು ಒಪ್ಪಿಕೊಳ್ಳದ ಮಾಲೀಕರುಗಳ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ದುರುಳ ನೀತಿಯನ್ನು ಆಮ್ ಆದ್ಮಿ ಪಕ್ಷವು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಮುಖ್ಯ ಮಂತ್ರಿ ಚಂದ್ರು ಎಚ್ಚರಿಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿಗಳಾದಿಯಾಗಿ ಸಕ್ಕರೆ ಸಚಿವರು ಹಾಗೂ ಕಬ್ಬು ನಿಯಂತ್ರಣ ಪ್ರಾಧಿಕಾರ ಸಂಪೂರ್ಣ ಕಾರ್ಖಾನೆಗಳ ಮಾಲೀಕರುಗಳ ಪರವಾದ ಧೋರಣೆಯನ್ನು ತಳೆದಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ನಾಚಿಕೆ ಇಲ್ಲದ ರಾಜ್ಯದ ಬಿಜೆಪಿ ನಾಯಕರುಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮೇಲೆ ಒತ್ತಡವನ್ನು ತರದೆ ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿರುವುದು ಕೇವಲ ಪ್ರಚಾರಕ್ಕಾಗಿ ಎಂದು ಮುಖ್ಯಮಂತ್ರಿ ಚಂದ್ರು ಟೀಕಿಸಿದರು.

ಮಹಾರಾಷ್ಟ್ರ, ತಮಿಳುನಾಡು ರಾಜ್ಯದ ಕಾರ್ಖಾನೆಗಳು ಕೇಂದ್ರದ ಎಫ್ ಆರ್ ಪಿ ದರದಲ್ಲಿ ಲಕ್ಷಾಂತರ ಟನ್ ಬೆಳೆದಿರುವ ಕಬ್ಬನ್ನು ತೆಗೆದುಕೊಳ್ಳುತ್ತಿದ್ದಾರೆ. ಇದರಿಂದಾಗಿ ರಾಜ್ಯದ ಬೊಕ್ಕಸಕ್ಕೂ ಸಹ ನಷ್ಟವಾಗುತ್ತಿದೆ. ಆಮ್ ಆದ್ಮಿ ಪಕ್ಷವು ಜಯ ಸಿಕ್ಕುವವರೆಗೂ ರೈತರ ಜೊತೆಗಿದ್ದು ಅವರ ಹೋರಾಟದಲ್ಲಿ ಸಂಪೂರ್ಣ ಭಾಗವಹಿಸುತ್ತೇವೆ ಮುಖ್ಯಮಂತ್ರಿ ಚಂದ್ರು ತಿಳಿಸಿದರು.

ಕಬ್ಬು ಬೆಳೆಗಾರರ ಹೋರಾಟಕ್ಕೆ ಆಮ್ ಆದ್ಮಿ ಪಕ್ಷ ಪೂರ್ಣ ಬೆಂಬಲ-ಮುಖ್ಯಮಂತ್ರಿ ಚಂದ್ರು Read More

ಸಿಎಂ-ಡಿಸಿಎಂ ಮುಸುಕಿನ ಗುದ್ದಾಟ:ಬೆಂಗಳೂರಿಗೆ ಅನ್ಯಾಯ-ಅಶೋಕ್

ಬೆಂಗಳೂರು: ಮುಖ್ಯಮಂತ್ರಿ ಉಪ ಮುಖ್ಯಮಂತ್ರಿ ಮುಸುಕಿನ ಗುದ್ದಾಟದಲ್ಲಿ ಬೆಂಗಳೂರಿಗೆ ಮತ್ತೊಮ್ಮೆ ಅನ್ಯಾಯವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ದೂರಿದ್ದಾರೆ.

ಜಿಬಿಎ ಸಭೆಯಲ್ಲಿ ಅನುಮೋದನೆಗೊಂಡಿದ್ದ ಬಜೆಟ್ ನಲ್ಲಿ ಅರ್ಧದಷ್ಟು ಹಣವನ್ನ ನಗರಾಭಿವೃದ್ಧಿ ಇಲಾಖೆ ಕಡಿತಗೊಳಿಸಿದೆ.

ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ಜಿಬಿಎ ಸಭೆಯಲ್ಲಿ ಅನುಮೋದನೆಗೊಂಡಿದ್ದ ಬಜೆಟ್ ಅನ್ನೇ ಕೊಡಿಸಲು ಆಗದ ನಿಮಗೆ ಕೇಂದ್ರ ಸರ್ಕಾರವನ್ನ ಪ್ರಶ್ನಿಸುವ ಯಾವ ನೈತಿಕತೆ ಇದೆ ಎಂದು ಟ್ವೀಟ್ ಮಾಡಿ ಅಶೋಕ್ ಪ್ರಶ್ನಿಸಿದ್ದಾರೆ.

ನಿಮಗೆ ನಿಜವಾಗಿಯೂ ಬೆಂಗಳೂರಿನ ಬಗ್ಗೆ ಬದ್ಧತೆ ಇದ್ದರೆ, ಪೂರ್ತಿ ಅನುದಾನವನ್ನು ಬಿಡುಗಡೆ ಮಾಡಿಸಿ ಎಂದು ಸವಾಲು ಹಾಕಿದ್ದಾರೆ.

ಸಿಎಂ-ಡಿಸಿಎಂ ಮುಸುಕಿನ ಗುದ್ದಾಟ:ಬೆಂಗಳೂರಿಗೆ ಅನ್ಯಾಯ-ಅಶೋಕ್ Read More

ಮಾಜಿ ಸಚಿವ ಎಚ್.ವೈ. ಮೇಟಿ‌ ವಿಧಿವಶ

ಬೆಂಗಳೂರು: ಕಾಂಗ್ರಸ್ ಮುಖಂಡ, ಬಾಗಲಕೋಟೆ ಶಾಸಕ ಹಾಗೂ ಮಾಜಿ ಸಚಿವ ಎಚ್.ವೈ. ಮೇಟಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾಗಿದ್ದಾರೆ.

ಅವರಿಗೆ 79 ವರ್ಷ ವಯಸ್ಸಾಗಿತ್ತು, ಅವರು ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಉಸಿರಾಟದ ಸಮಸ್ಯೆ ಹಾಗೂ ಇತರ ವಯೋಸಹಜ ಕಾಯಿಲೆಯಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಎಂ.ವೈ.ಮೇಟಿ ಅವರು ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರದ ಮೂಲಕ ರಾಜಕೀಯ ಜೀವನ ಆರಂಭಿಸಿದ್ದರು. 1989ರಲ್ಲಿ ಗುಳೇದಗುಡ್ಡ ವಿಧಾನಸಭಾ ಕ್ಷೇತ್ರದಿಂದ ಗೆದ್ದು ಶಾಸಕರಾಗಿದ್ದರು.

1994ರಲ್ಲಿಯೂ ಆಯ್ಕೆಯಾಗಿದ್ದ ಅವರು, ಅರಣ್ಯ ಇಲಾಖೆ ಸಚಿವರಾಗಿದ್ದರು. 1996 ರಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು.

ಕ್ಷೇತ್ರ ವಿಂಗಡಣೆ ಸಂದರ್ಭದಲ್ಲಿ ಗುಳೇದಗುಡ್ಡ ವಿಧಾನಸಭಾ ಕ್ಷೇತ್ರ ರದ್ದಾಗಿದ್ದರಿಂದ 2008ರಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿ ಬಾಗಲಕೋಟೆ ವಿಧಸನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋತರು.

2013ರಲ್ಲಿ ಗೆಲುವು ಸಾಧಿಸಿ, ಅಬಕಾರಿ ಸಚಿವರಾಗಿದ್ದರು. 2018ರಲ್ಲಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು.

2023ರ ಚುನಾವಣೆಯಲ್ಲಿ ಬಾಗಲಕೋಟೆ ಕ್ಷೇತ್ರದಿಂದ ಗೆದ್ದು ಶಾಸಕರಾದರು. ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆಗಿದ್ದರು. ಮೇಟಿ ಅವರು ಇಬ್ಬರು ಪುತ್ರತು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಬಳಗ ಮತ್ತು ‌ಅಭಿಮಾನಿಗಳನ್ನು ಅಗಲಿದ್ದಾರೆ.

ಅನಾರೋಗ್ಯದ ವಿಷಯ ತಿಳಿಯುತ್ತಿದ್ದಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಮತ್ತಿತರರು‌ ಆಸ್ಪತ್ರೆಗೆ ‌ಭೇಟಿ ನೀಡಿ ಆರೋಗ್ಯ‌‌‌ ವಿಚಾರಿಸಿದ್ದರು.

ಚಿಕಿತ್ಸೆ ‌ಫಲಕಾರಿಯಾಗದೆ ಇಂದು ಮೇಟಿ ಇಹಲೋಕ ತೆಜಿಸಿದ್ದಾರೆ.

ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ನಾಯಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮಾಜಿ ಸಚಿವ ಎಚ್.ವೈ. ಮೇಟಿ‌ ವಿಧಿವಶ Read More

ಕಾರಿಗೆ ಕ್ಯಾಂಟರ್ ಡಿಕ್ಕಿ: ಡ್ಯಾನ್ಸರ್ ಸುಧೀಂದ್ರಸ್ಥಳದಲ್ಲೇ ಸಾವು

ಬೆಂಗಳೂರು: ಬೆಂಗಳೂರಿನ‌ ನೆಲಮಂಗಲ ತಾಲೂಕಿನ ಪೆಮ್ಮನಹಳ್ಳಿ ಬಳಿ ರಸ್ತೆ ಬದಿ ನಿಂತಿದ್ದ ಕಾರಿಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಡ್ಯಾನ್ಸರ್ ಸುಧೀಂದ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಸ್ತೆಯಲ್ಲಿ ಕೆಟ್ಟು ನಿಂತ ಕಾರನ್ನು ಸುಧೀಂದ್ರ ಪರಿಶೀಲನೆ ಮಾಡುತ್ತಿದ್ದಾಗ ವೇಗವಾಗಿ ಬಂದ ಕ್ಯಾಂಟರ್ ಡಿಕ್ಕಿ ಹೊಡೆದಿದೆ.

ಸುದ್ದಿ ತಿಳಿದ ಕೂಡಲೇ ದಾಬಸ್ ಪೇಟೆ ಪೊಲೀಸರು ಸ್ಥಳಕ್ಕೆ‌ ಧಾವಿಸಿ ಪರಿಶೀಲಿಸಿ ಸುಧೀಂದ್ರ ಅವರ ಮೃತ ದೇಹವನ್ನು ಆಸ್ಪತ್ರೆಗೆ ಸಾಗಿಸಿ ಮುಂದಿನ ಕ್ರಮ ಕೈಗೊಂಡರು.

ಸುಧೀಂದ್ರ ಸೋಮವಾರವಷ್ಟೇ ಹೊಸ ಮಾರುತಿ ಸುಜುಕಿ ಎಕೋ ಕಾರು ಡೆಲಿವರಿ ಪಡೆದಿದ್ದರು. ರಸ್ತೆ ಮಧ್ಯೆ ಕಾರು ಕೆಟ್ಟು ನಿಂತಿದ್ದರಿಂದ ಪರೀಕ್ಷಿಸಲು ಕಾರಿನಿಂದ ಕೆಳಗಿಳಿದು ನೋಡುತ್ತಿದ್ದಾಗ ಕ್ಯಾಂಟರ್ ಲಾರಿ ಡಿಕ್ಕಿ ಹೊಡೆದಿದೆ.

ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ನಿವಾಸಿ ಸುಧೀಂದ್ರ ವಿವಿಧ ರಿಯಾಲಿಟಿ ಶೋಗಳಲ್ಲಿ ಭಾಗಿಯಾಗಿದ್ದರು. ಅಲ್ಲದೇ ಡಾಬಸ್ ಪೇಟೆಯಲ್ಲಿ ಡ್ಯಾನ್ಸ್ ಕ್ಲಾಸ್ ನಡೆಸುತ್ತಾ ನೂರಾರು ಯುವಕ, ಯುವತಿಯರಿಗೆ, ಮಕ್ಕಳಿಗೆ ನೃತ್ಯ ತರಬೇತಿ ನೀಡುತ್ತಿದ್ದರು.

ಕಾರಿಗೆ ಕ್ಯಾಂಟರ್ ಡಿಕ್ಕಿ: ಡ್ಯಾನ್ಸರ್ ಸುಧೀಂದ್ರಸ್ಥಳದಲ್ಲೇ ಸಾವು Read More

ಪಂಜಾಬ್ ಮಾದರಿ ಹೆಲ್ಪ್ಲೈನ್ ಬಿಡುಗಡೆ ಮಾಡಲು ಆಮ್ ಆದ್ಮಿ ಪಕ್ಷದ ಆಗ್ರಹ

ಬೆಂಗಳೂರು: ಆಡಳಿತ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ತಡೆಗಟ್ಟಲು ಕೂಡಲೇ ಪಂಜಾಬ್ ಮಾದರಿಯಲ್ಲಿ ಹೆಲ್ಪ್ಲೈನ್
ಬಿಡುಗಡೆ ಮಾಡಬೇಕೆಂದು ಆಮ್ ಆದ್ಮಿ ಪಕ್ಷ ಒತ್ತಾಯಿಸಿದೆ.

ಇತ್ತೀಚೆಗೆ ಬೆಂಗಳೂರು ನಗರದಲ್ಲಿ ಹಿರಿಯ ಸೇನಾಧಿಕಾರಿಯೊಬ್ಬರು ತಮ್ಮ ತಾಯಿಯ ಮರಣದ ಸಂದರ್ಭದಲ್ಲಿ ಆಡಳಿತ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರ ದಿಂದಾಗಿ ಆಂಬುಲೆನ್ಸ್, ಸ್ಮಶಾನ , ಮರಣ ಪತ್ರ ಮುಂತಾದ ವಿಷಯಗಳಲ್ಲಿ ಅನುಭವಿಸಿದ ನರಕ ಯಾತನೆಯು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸ ಒದಗಿಸಿದೆ,
ಸರ್ಕಾರದಲ್ಲಿನ ಕೆಳಹಂತದ ಭ್ರಷ್ಟಾಚಾರದ ಬಗ್ಗೆ ಸಾಕಷ್ಟು ಟೀಕೆಗಳು ಕೇಳಿ ಬರುತ್ತಿವೆ ಎಂದು ಪಕ್ಷದ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ ತಿಳಿಸಿದ್ದಾರೆ.

ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಪಂಜಾಬ್ ಮಾದರಿಯ ಭ್ರಷ್ಟಾಚಾರ ನಿಗ್ರಹದಳದ ಸಹಾಯವಾಣಿಯನ್ನು ಕೂಡಲೇ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.

ಈ ಸಹಾಯವಾಣಿಯ ಉಸ್ತುವಾರಿಗೆ ಪೊಲೀಸ್ ಇಲಾಖೆಯ ಎಡಿಜಿಪಿ ದರ್ಜೆಯ ಉನ್ನತ ,ಪ್ರಾಮಾಣಿಕ ಪೊಲೀಸ್ ಅಧಿಕಾರಿಯನ್ನು ನೇಮಿಸಿ ಸಕಲ ರೀತಿಯ ವ್ಯವಸ್ಥೆಗಳನ್ನು ಈ ಸಹಾಯವಾಣಿಗೆ ಒದಗಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಇದರಿಂದಾಗಿ ಭ್ರಷ್ಟಾಚಾರವನ್ನು ತಡೆಗಟ್ಟಲು ಸಾಧ್ಯವಿದೆ. ಇದನ್ನು ನಮ್ಮ ಪಕ್ಷ ದೆಹಲಿ ಹಾಗೂ ಪಂಜಾಬ್ ರಾಜ್ಯಗಳಲ್ಲಿ ಸ್ಥಾಪನೆ ಮಾಡಿದೆ,ರಾಜ್ಯ ಸರ್ಕಾರದ ಪ್ರತಿನಿಧಿಗಳು ಪಂಜಾಬ್ ರಾಜ್ಯಕ್ಕೆ ಭೇಟಿ ನೀಡಿ ಅಲ್ಲಿನ ಸಹಾಯವಾಣಿ ಯಾವ ರೀತಿ ಕಾರ್ಯನಿರ್ವಹಿಸುತ್ತಿದೆ ಎಂಬುದನ್ನು ಅಧ್ಯಯನ ಮಾಡಿ, ಸರ್ಕಾರದಲ್ಲಿನ ಕೆಳಹಂತದ ಅಧಿಕಾರಿಗಳ ಭ್ರಷ್ಟಾಚಾರದ ಕಿರುಕುಳವನ್ನು ತಪ್ಪಿಸಬೇಕು ಎಂದು ಸೀತಾರಾಮ್ ಗುಂಡಪ್ಪ ಆಗ್ರಹಿಸಿದ್ದಾರೆ.

ಪಂಜಾಬ್ ಮಾದರಿ ಹೆಲ್ಪ್ಲೈನ್ ಬಿಡುಗಡೆ ಮಾಡಲು ಆಮ್ ಆದ್ಮಿ ಪಕ್ಷದ ಆಗ್ರಹ Read More