ಬಿಎಂಟಿಸಿ ಬಸ್ ಡಿಕ್ಕಿ ಆಟೋ ಅಪ್ಪಚ್ಚಿ:ಚಾಲಕ,ವೈದ್ಯ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗಳು ಬಲಿ ಪಡೆಯುವುದನ್ನು ಮುಂದುವರಿಸಿವೆ.ಈ ಮೂಲಕ ಕಿಲ್ಲರ್ ಹಣೆಪಟ್ಟಿ ಯನ್ನು‌ ಉಳಿಸಿಕೊಂಡಿದೆ.

ಇಂದು ಮಧ್ಯಾಹ್ನ ಬಿಎಂಟಿಸಿ ಬಸ್ ಹಿಂದಿನಿಂದ ಬಂದು ಆಟೋಗೆ ಡಿಕ್ಕಿ ಹೊಡೆದ‌ ರಭಸಕ್ಕೆ‌ ಚಾಲಕ ಮತ್ತು ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟ ಘಟನೆ‌ ಬನಶಂಕರಿ‌ ಸಂಚಾರಿ ಪೊಲೀಸ್ ಠಾಣೆ‌ವ್ಯಾಪ್ತಿಯಲ್ಲಿ ನಡೆದಿದೆ.

ಕೆಪಿ ಅಗ್ರಹಾರದ ವಾಸಿ ಆಟೋಚಾಲಕ ಅನಿಲ್ ಕುಮಾರ್ ಹಾಗೂ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಬನಶಂಕರಿ ವಾಸಿ ಖ್ಯಾತ ಆಯುರ್ವೇದ ವೈದ್ಯ ಡಾ.ವಿಷ್ಣು ಬಾಪಟ್ ಮೃತಪಟ್ಟ ದುರ್ದೈವಿಗಳು.

ಮಧ್ಯಾಹ್ನ ಸೀತಾ‌ಸರ್ಕಲ್ ಬಳಿ ಸಿಗ್ನಲ್ ಇದ್ದುದರಿಂದ‌ ಮುಂದೆ ಒಂದು ಬಿಎಂಟಿಸಿ ಬಸ್ ನಿಧಾನವಾಗಿ ಚಲಿಸುತ್ತಿತ್ತು.ಈ‌ ಬಸ್‌ ಹಿಂದೆ ಅನಿಲ್ ಕುಮಾರ್‌ ತಮ್ಮ‌ಆಟೋ ತಂದು ನಿಲ್ಲಿಸಿಕೊಂಡಿದ್ದರು.

ಇದೇ‌ ವೇಳೆ ಹಿಂದಿನಿಂದ ಅತಿ‌ವೇಗವಾಗಿ ನುಗ್ಗಿ‌ಬಂದ ಮತ್ತೊಂದು‌ ಬಿಎಂಟಿಸಿ ಬಸ್ ಆಟೋಗೆ ಗುದ್ದಿದೆ.

ಡಿಕ್ಕಿಯಾದ ರಭಸಕ್ಕೆ‌ ಆಟೋ ನಜ್ಜುಗುಜ್ಜಾಗಿದ್ದು ಚಾಲಕ ಅನಿಲ್ ಕುಮಾರ್ ಹಾಗೂ ಆಯುರ್ವೇದ ವೈದ್ಯ ಡಾ.ವಿಷ್ಣು ಬಾಪಟ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಷಯ ತಿಳಿದ ತಕ್ಷಣ ‌ಬನಶಂಕರಿ‌ ಸಂಚಾರಿ ಪೊಲೀಸರು‌ ದಾವಿಸಿ ಅಪಘಾತದಿಂದ ಉಂಟಾಗಿದ್ದ ಟ್ರಾಫಿಕ್ ಜಾಮ್ ಸರಿಪಡಿಸಿ ಮೃತ ದೇಹಗಳನ್ನು ಆಸ್ಪತ್ರೆಗೆ ರವಾನಿಸಿದರು.

ಬಿಎಂಟಿಸಿ ಬಸ್ ಡಿಕ್ಕಿ ಆಟೋ ಅಪ್ಪಚ್ಚಿ:ಚಾಲಕ,ವೈದ್ಯ ಸಾವು Read More

ಬೆಂಗಳೂರಿನ ಇಬ್ಬರು ಮಕ್ಕಳಲ್ಲಿ ಹೆಚ್ ಎಂ ಪಿ ವಿ ವೈರಸ್ ಪತ್ತೆ

ಬೆಂಗಳೂರು: ಚೀನಾದಲ್ಲಿ ಕಾಡುತ್ತಿರುವ ಹ್ಯೂಮನ್ ಮೆಟಾನ್ಯೂಮೋ ವೈರಸ್ (HMPV) ಭಾರತಕ್ಕೆ ಅದರಲ್ಲೂ ಬೆಂಗಳೂರಿಗೆ ಕಾಲಿಟ್ಟಿದ್ದು ಆತಂಕ ಕಾಡುತ್ತಿದೆ.

ಬೆಂಗಳೂರಿನಲ್ಲಿ ಟ್ರಾವೆಲ್‌ ಹಿಸ್ಟರಿ ಇಲ್ಲದ ಎರಡು ಪ್ರಕರಣಗಳು ಪತ್ತೆಯಾಗಿದೆ
ಇಬ್ಬರು ಮಕ್ಕಳಲ್ಲಿ ಪತ್ತೆಯಾಗಿದ್ದು ಇದನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ದೃಢಪಡಿಸಿದೆ.

ಈ ವೈರಸ್ ಇದ್ದ 3 ತಿಂಗಳ ಮಗು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದರೆ 8 ತಿಂಗಳ ಮಗು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದೆ.

ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿರುವ ಐಸಿಎಂಆರ್‌, ದೇಶದಾದ್ಯಂತ ಉಸಿರಾಟದ ಕಾಯಿಲೆಗಳನ್ನು ಮೇಲ್ವಿಚಾರಣೆ ಮಾಡಲು ನಡೆಸುತ್ತಿರುವ ಪ್ರಯತ್ನಗಳ ಭಾಗವಾಗಿ ಎರಡು ಪ್ರಕರಣಗಳನ್ನು ಗುರುತಿಸಲಾಗಿದೆ. HMPV ಭಾರತ ಸೇರಿದಂತೆ ವಿಶ್ವಾದ್ಯಂತ ಹರಡಿದ್ದು,ಹಲವು ದೇಶಗಳಲ್ಲಿ ಸೋಂಕು ಪತ್ತೆಯಾಗಿದೆ ಎಂದು ತಿಳಿಸಿದೆ.

ಇದು ಒಂದು ಉಸಿರಾಟದ ವೈರಸ್ ಆಗಿದ್ದು ಅದು ಸಾಮಾನ್ಯವಾಗಿ ಶೀತವನ್ನು ಹೋಲುವ ಸೌಮ್ಯ ರೋಗಲಕ್ಷಣಗಳನ್ನು ಉಂಟುಮಾಡುತ್ತದೆ. ವಿಶೇಷವಾಗಿ ಮಕ್ಕಳು, ಹಿರಿಯರು, ರೋಗ ನಿರೋಧಕ ಶಕ್ತಿ ಕಡಿಮೆ ಇರುವ ಮಂದಿಗೆ ಬೇಗ ಹರಡುವ ಸಧ್ಯತೆ ಇದರ ಎಂದು ಹೇಳಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಮಾತನಾಡಿ, ಮಗುವಿಗೆ ಯಾವುದೇ ಸಮಸ್ಯೆ ಇಲ್ಲ. ಹೆಚ್ಚಿನ ಪರೀಕ್ಷೆಗೆ ಮಕ್ಕಳ ಸ್ವಾಬ್‌ ಅನ್ನು ಪುಣೆ ಲ್ಯಾಬ್‌ಗೆ ಕಳುಹಿಸುವ ಬಗ್ಗೆ ಚರ್ಚಿಸುತ್ತೇವೆ‌ ಎಂದು ಹೇಳಿದರು.

ಐಸಿಎಂಆರ್, ಕೇಂದ್ರ ಮಾಹಿತಿ ಪಡೆದು ಮುಂದೆ ಚರ್ಚೆ ಮಾಡುತ್ತೇವೆ. ಎಲ್ಲಾ ಕಡೆ ಟೆಸ್ಟ್ ಮಾಡಿದರೂ ಮಕ್ಕಳು, ವಯಸ್ಸಾದವರಲ್ಲೂ ಸಿಗಬಹುದು. ಹೀಗಾಗಿ ಎಚ್ಚರಿಕೆ ಅಗತ್ಯ, ಈ ಸಂಬಂಧ ಈಗಾಗಲೇ ಮಾರ್ಗಸೂಚಿ ಪ್ರಕಟಿಸಿದ್ದೇವೆ ಎಂದು ತಿಳಿಸಿದರು.

ಬೆಂಗಳೂರಿನ ಇಬ್ಬರು ಮಕ್ಕಳಲ್ಲಿ ಹೆಚ್ ಎಂ ಪಿ ವಿ ವೈರಸ್ ಪತ್ತೆ Read More

ಮಂಡಳಿ ರದ್ದಾಗಬೇಕು, ಪಹಣಿಯಲ್ಲಿ ಹೆಸರು ತೆಗೆಸಿಹಾಕಬೇಕು: ಆರ್‌.ಅಶೋಕ್

ಬೆಂಗಳೂರು: ವಕ್ಫ್‌ ಮಂಡಳಿ ರದ್ದಾಗಬೇಕು, ರೈತರ ಜಮೀನಿನ ಪಹಣಿಯಲ್ಲಿ ಬರೆದ ವಕ್ಫ್‌ ಹೆಸರು ತೆಗೆಯಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಒತ್ತಾಯಿಸಿದರು.

ಸ್ವಾತಂತ್ರ್ಯ ಉದ್ಯಾನದಲ್ಲಿ‌ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮಾತನಾಡಿದ ಅವರು, ವಿಶ್ವವಿಖ್ಯಾತ ಎಂಜಿನಿಯರ್‌ ಸರ್‌ ಎಂ.ವಿಶ್ವೇಶ್ವರಯ್ಯನವರು ಓದಿದ ಶಾಲೆಯ ಆವರಣವನ್ನು ವಕ್ಫ್‌ ಮಂಡಳಿ ಕಬಳಿಸಿದೆ. ಕೇಂದ್ರದಲ್ಲಿದ್ದ ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ ವಕ್ಫ್‌ ಮಂಡಳಿಗೆ ನ್ಯಾಯಾಂಗದ ಅಧಿಕಾರ ನೀಡಿದೆ. ಇದನ್ನು ಬಳಸಿಕೊಂಡು ವಕ್ಫ್‌ ಮಂಡಳಿ ರೈತರ ಜಮೀನು ನುಂಗುತ್ತಿದೆ. ಕಾಂಗ್ರೆಸ್‌ ಅಧಿಕಾರ ಪಡೆಯುವ ರಾಜ್ಯಗಳಲ್ಲಿ ಮಿನಿ ಪಾಕಿಸ್ತಾನ ನಿರ್ಮಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಬೌರಿಂಗ್‌ ಆಸ್ಪತ್ರೆಯದ್ದು 2 ಎಕರೆ ಜಮೀನು ಇದ್ದು, ಅದನ್ನು ಕೂಡ ವಕ್ಫ್‌ ಮಂಡಳಿ ಕಬಳಿಕೆ ಮಾಡಿತ್ತು. ನಾನು ಸಚಿವನಾಗಿದ್ದಾಗ ಅದರ ದಾಖಲೆಗಳನ್ನು ತರಿಸಿ ನೋಡಿದರೆ ಯಾವುದೋ ಹಳೆ ದಾಖಲೆಗಳನ್ನು ತಂದರು. ಬಳಿಕ ಹೋರಾಟ ಮಾಡಿ ಆಸ್ತಿ ಉಳಿಸಿದೆ.ಈಗ ರೈತರು ಕಂಗಾಲಾಗಿ ತಮ್ಮ ಆಸ್ತಿಗಳ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ ಎಂದರು.

ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಬಳಿಕ ಮುಸ್ಲಿಮರಿಗೆ ಎರಡು ಕೊಂಬು ಬಂದಿದೆ. ಸಿದ್ದರಾಮಯ್ಯ ಎಂದರೆ ಅಹಿಂದ ನಾಯಕ ಅಲ್ಲ. ಅವರು ಮುಸ್ಲಿಮರ ಚಾಂಪಿಯನ್‌ ಆಗಲು ಮುಂದಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಲವ್‌ ಜಿಹಾದ್‌, ಲ್ಯಾಂಡ್‌ ಜಿಹಾದ್‌ ಬಳಿಕ ರೇಷನ್‌ ಕಾರ್ಡ್‌ ಜಿಹಾದ್‌ ಆರಂಭಿಸಿದ್ದಾರೆ. 45 ವರ್ಷದಿಂದ ರೇಷನ್‌ ಕಾರ್ಡ್‌ ಹೊಂದಿದ್ದ ವೃದ್ಧೆಯೊಬ್ಬರು ಈಗ ಕಾರ್ಡ್‌ ಕಳೆದುಕೊಂಡಿದ್ದಾರೆ ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ ಬಡವರ ಪರ ಎಂದು ಹೇಳಿಕೊಳ್ಳುತ್ತಾರೆ. ಹಾಲು ಹಾಗೂ ಆಲ್ಕೋಹಾಲ್‌ ದರ ಏರಿಕೆ, ಮುದ್ರಾಂಕ ಶುಲ್ಕ ಏರಿಕೆ, ಅನ್ನ ಪಡೆಯುವವರಿಗೆ ಕನ್ನ, ಔಷಧಿಗೆ ಕನ್ನ ಮೊದಲಾದ ಕ್ರಮಗಳ ಮೂಲಕ ಸಿಎಂ ಸಿದ್ದರಾಮಯ್ಯನವರು ಕನ್ನರಾಮಯ್ಯ ಎಂದು ಹೆಸರಾಗಿದ್ದಾರೆ ಎಂದು ಲೇವಡಿ ಮಾಡಿದರು.

ಮಂತ್ರಾಲಯ, ವಿಧಾನಸೌಧ, ವಿಶ್ವೇಶ್ವರಯ್ಯನವರ ಶಾಲೆ, ಬಡವರ ಭೂಮಿ ಉಳಿಯಲು ಸೂಪರ್‌ಮ್ಯಾನ್‌ ಆಗಿ ಪ್ರಧಾನಿ ನರೇಂದ್ರ ಮೋದಿ ಬರಲಿದ್ದಾರೆ. ಅವರು ತರಲಿರುವ ತಿದ್ದುಪಡಿ ಮಸೂದೆಯಿಂದ ಎಲ್ಲವೂ ನಿಯಂತ್ರಣಕ್ಕೆ ಬರಲಿದೆ. ಅಲ್ಲಿತನಕ ಸಿದ್ದರಾಮಯ್ಯನವರು ಸಿಎಂ ಆಗಿಯೇ ಇರುತ್ತಾರೋ ಇಲ್ಲವೋ ಎಂದು ಅಶೋಕ್ ಹೇಳಿದರು.

ಮಂಡಳಿ ರದ್ದಾಗಬೇಕು, ಪಹಣಿಯಲ್ಲಿ ಹೆಸರು ತೆಗೆಸಿಹಾಕಬೇಕು: ಆರ್‌.ಅಶೋಕ್ Read More