ಮಹದೇಶ್ವರ ಅ. ಪ್ರಾ. ರಾಜ್ಯ, ಜಿಲ್ಲಾ ಸಮಿತಿಗೆ ಸಾಲೂರು ಮಠದ ಶ್ರೀ ನೇಮಕಕ್ಕೆ ಶ್ರೀವತ್ಸ ಆಗ್ರಹ

ಬೆಳಗಾವಿ: ಸಾಲೂರು ಮಠದ ಶ್ರೀಗಳನ್ನು ಮಲೈ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ರಾಜ್ಯ, ಜಿಲ್ಲಾ ಸಮಿತಿಯ ಖಾಯಂ ಸಮಿತಿ ಸದಸ್ಯರನ್ನಾಗಿ ನೇಮಿಸಬೇಕೆಂದು ಮೈಸೂರು ಕೆ ಆರ್.ಕ್ಷೇತ್ರದ ಶಾಸಕ‌‌ ಶ್ರೀವತ್ಸ ಆಗ್ರಹಿಸಿದರು.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಈ ವಿಷಯ ಕುರಿತು ಸಭಾಧ್ಯಕ್ಷರಾದ‌ ಯು.ಟಿ.ಖಾದರ್ ಅವರ ಗಮನ ಸೆಳೆದರು.

ಬೆಳಗಾವಿ ಅಧಿವೇಶನದಲ್ಲಿ ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗರೆಡ್ಡಿ ಅವರು ಶ್ರೀ ಮಲೈ ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ರಾಜ್ಯ ಮಟ್ಟದ ಜಿಲ್ಲಾ ಮಟ್ಟದ ಸಮಿತಿ 2025ರ ವಿಧೇಯಕ ರಚನೆಯ ವಿಷಯ ಪ್ರಸ್ತಾಪಿಸಿದಾಗ ಶಾಸಕ ಟಿ.ಎಸ್ ಶ್ರೀವತ್ಸ ಅವರು ಮಾತನಾಡಿ ಮಲೈ ಮಹದೇಶ್ವರ ಬೆಟ್ಟದಲ್ಲಿರುವ ಪುರಾತನ ಸಾಲೂರು ಮಠದ ನೇತೃತ್ವದಲ್ಲಿಯೇ ಹಲವಾರು ವರ್ಷಗಳಿಂದ ಪೂಜಾವಿಧಾನ ಧಾರ್ಮಿಕ ಕಾರ್ಯಕ್ರಮಗಳು ಜರಗುತ್ತಾ ಬಂದಿವೆ. ಹಾಗಾಗಿ ಸಾಲೂರು ಮಠದ ಸ್ವಾಮೀಜಿಯವರನ್ನೇ ಶ್ರೀ ಮಲೈ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಹಾಗೂ ರಾಜ್ಯ ಜಿಲ್ಲಾ ಮಟ್ಟದ ಖಾಯಂ ಸಮಿತಿಯ ಸದಸ್ಯರನ್ನಾಗಿ ನೇಮಿಸಬೇಕು ಎಂದು ಆಗ್ರಹಿಸಿದರು.

ಇದಕ್ಕೆ ಮುಜರಾಯಿ ಸಚಿವರಾದ ರಾಮಲಿಂಗ ರೆಡ್ಡಿ ರವರು ಸದನದಲ್ಲೇ ಒಪ್ಪಿಗೆ ಸೂಚಿಸಿದ್ದಾರೆ.

ಮಹದೇಶ್ವರ ಅ. ಪ್ರಾ. ರಾಜ್ಯ, ಜಿಲ್ಲಾ ಸಮಿತಿಗೆ ಸಾಲೂರು ಮಠದ ಶ್ರೀ ನೇಮಕಕ್ಕೆ ಶ್ರೀವತ್ಸ ಆಗ್ರಹ Read More

ಸೆಶೆನ್ ಮುಗಿದ ನಂತರ ಡಿಕೆಶಿ ಮುಖ್ಯ ಮಂತ್ರಿ: ಇಕ್ಬಾಲ್‌ ಹುಸೇನ್‌ ಬಾಂಬ್

ಬೆಳಗಾವಿ: ಚಳಿಗಾಲದ ವಿಧಾನ ಮಂಡಲ ಅಧಿವೇಶನ ಮುಗಿದ ಬಳಿಕ ಡಿಸಿಎಂ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂದು ರಾಮನಗರದ ಕಾಂಗ್ರೆಸ್‌ ಶಾಸಕ ಇಕ್ಬಾಲ್‌ ಹುಸೇನ್‌ ಬಾಂಬ್ ಸಿಡಿಸಿದ್ದು,

ಸಂಚಲನವನ್ನೇ ಸೃಷ್ಟಿಸಿದೆ.
ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗ ನಾನೇ ಶುಭ ಸುದ್ದಿ ನೀಡಿದ್ದೇನೆ. ಚಳಿಗಾಲದ ಅಧಿವೇಶನ ಮುಗಿಯುತ್ತಿದ್ದಂತೆಯೇ ರಾಜ್ಯ ರಾಜ್ಯಕೀಯದಲ್ಲಿ ದೊಡ್ಡ ಬದಲಾವಣೆ ಯಾಗಲಿದೆ ಎಂದು ತಿಳಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರಾಜ್ಯದ ನೂತನ ಮುಖ್ಯಮಂತ್ರಿಯಾಗುದು ಖಚಿತ!,ಈ ಬಗ್ಗೆ ಹೈಕಮಾಂಡ್ ದೊಡ್ಡ ಮಟ್ಟದಲ್ಲಿ ನಿರ್ಧಾರ ಕೈಗೊಳ್ಳಲಿದೆ ಎಂದು ಭವಿಷ್ಯ ನುಡಿದರು.

ಡಿ.ಕೆ.ಶಿವಕುಮಾರ್ ಅವರು ಕಳೆದ ಹಲವು ದಶಕಗಳಿಂದ ಪಕ್ಷವನ್ನು ಸಂಘಟಿಸಿದ್ದಾರೆ. ಈಗ ಅವರಿಗೊಂದು ಅವಕಾಶ ಬಂದಿದೆ, ಹಾಗಾಗಿ ಅವರು ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಇಕ್ಬಾಲ್‌ ಹುಸೇನ್‌ ಸ್ಪಷ್ಟವಾಗಿ ನುಡಿದರು.

ಇಕ್ಬಾಲ್‌ ಹುಸೇನ್‌ ಅವರ ಈ ಹೇಳಿಕೆ ನಿಜಕ್ಕೂ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.ಜತೆಗೆ ಚರ್ಚೆಗೆ‌ ಗ್ರಾಸ ಒದಗಿಸಿದೆ.

ಸೆಶೆನ್ ಮುಗಿದ ನಂತರ ಡಿಕೆಶಿ ಮುಖ್ಯ ಮಂತ್ರಿ: ಇಕ್ಬಾಲ್‌ ಹುಸೇನ್‌ ಬಾಂಬ್ Read More

ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ಅನ್ಯಾಯಗಳ ವಿರುದ್ಧ ಹೋರಾಟ:ಅಶೋಕ್

ಬೆಂಗಳೂರು: ಈ ಬಾರಿಯ ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ಅನ್ಯಾಯಗಳ ವಿರುದ್ಧ ತೀವ್ರ ಹೋರಾಟ ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದರು.

ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,ಎಲ್ಲ ಸಮಸ್ಯೆಗಳ ಬಗ್ಗೆ ಸದನದಲ್ಲಿ ಪ್ರಶ್ನಿಸಲಾಗುವುದು ಎಂದು ಹೇಳಿದರು.

ರಾಜ್ಯ ಸರ್ಕಾರ ಈ ಬಾರಿ ಎರಡು ವಾರ ಮಾತ್ರ ಅಧಿವೇಶನ ನಡೆಸಲಾಗುತ್ತಿದೆ. ಇನ್ನೂ ಹೆಚ್ಚು ದಿನ ಅಧಿವೇಶನ ನಡೆಸಲು ಒತ್ತಾಯಿಸುತ್ತೇವೆ. ವಕ್ಫ್‌ ಮಂಡಳಿಯಿಂದಾಗುತ್ತಿರುವ ಭೂ ಕಬಳಿಕೆ ಜ್ವಲಂತ ಸಮಸ್ಯೆಯಾಗಿದೆ. ಬಡವರ ರೇಷನ್‌ ಕಾರ್ಡ್‌ ರದ್ದು ಮಾಡಿ ಗ್ಯಾರಂಟಿಗಾಗಿ ಹಣ ಉಳಿಸಲಾಗುತ್ತಿದೆ. ಈ ಸಮಸ್ಯೆ ವಿರುದ್ಧ ಅಧಿವೇಶನದಲ್ಲಿ ಹೋರಾಟ ಮಾಡುತಗತೇವೆ, ಅಬಕಾರಿ ಇಲಾಖೆಯ ಹಗರಣ, ಬೆಳೆನಾಶಕ್ಕೆ ಪರಿಹಾರ ಮೊದಲಾದ ಸಮಸ್ಯೆಯ ವಿರುದ್ಧವೂ ಹೋರಾಟ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಉತ್ತರ ಕರ್ನಾಟಕದ ಜಿಲ್ಲೆಗಳ ಸಮಸ್ಯೆ ಬಗ್ಗೆ ಚರ್ಚಿಸಲು ನಾನು ಸಭೆ ನಡೆಸಲಿದ್ದೇನೆ. ಈ ಹಿಂದೆ ಕಲ್ಯಾಣ ಕರ್ನಾಟಕ ಕುರಿತು ಸರ್ಕಾರದಿಂದ ಸಭೆ ನಡೆದಿದೆ. ಆ ಬಳಿಕ ಯಾವುದೇ ಸುದ್ದಿ ಇಲ್ಲ. ಬ್ರ್ಯಾಂಡ್‌ ಬೆಂಗಳೂರು ಎಂದು ಹೇಳಿ, ಮಳೆ ಬಂದು ಮುಳುಗುವ ಬೆಂಗಳೂರು ಸೃಷ್ಟಿಯಾಗಿದೆ. ಮಳೆಯಿಂದಾಗಿ ರಸ್ತೆ ಗುಂಡಿ ಉಂಟಾಗಿ ವಾಹನ ಚಾಲಕರಿಗೆ ಬೆನ್ನು ನೋವು ಉಂಟಾಗಿದೆ. ಜಯನಗರ ಶಾಸಕರು ಸೇರಿದಂತೆ ಅನೇಕ ಶಾಸಕರಿಗೆ ಅನುದಾನ ಕಡಿತವಾಗಿದೆ. ಹೀಗೆ ಮೊದಲಾದ ವಿಷಯಗಳ ಬಗ್ಗೆ ಪ್ರಶ್ನಿಸಲಾಗುವುದು ಎಂದು ಅಶೋಕ ತಿಳಿಸಿದರು.

ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ಅನ್ಯಾಯಗಳ ವಿರುದ್ಧ ಹೋರಾಟ:ಅಶೋಕ್ Read More