ಭುವನೇಶ್ವರಿ ದೇವಿಯನ್ನು ನಾಡ ದೇವತೆಯಾಗಿ ಘೋಷಣೆ ಮಾಡಲು ಮನವಿ

ಮೈಸೂರು: ಕರ್ನಾಟಕ ರಾಜ್ಯದ ನಾಡ ದೇವತೆಯಾಗಿ ಕನ್ನಡ ತಾಯಿ ಭುವನೇಶ್ವರಿ ದೇವಿ ಯನ್ನು ಅಧಿಕೃತವಾಗಿ ಘೋಷಣೆ ಮಾಡುವಂತೆ ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗಸ್ವಾಮಿ ಕೋರಿದ್ದಾರೆ.

ಪ್ರಸ್ತುತ ಚಾಮುಂಡೇಶ್ವರಿ ದೇವಿಯನ್ನು ನಾಡ ದೇವತೆಯಾಗಿ ಕರೆಯಲಾಗುತ್ತಿದೆ ಆದರೆ ಚಾಮುಂಡೇಶ್ವರಿ ದೇವಿಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ( ಬೀದರ್ ಇಂದ ಚಾಮರಾಜನಗರ ) ವರೆಗೂ ಹೆಚ್ಚಾಗಿ ಪೂಜಿಸುವುದು ಕಡಿಮೆ ಸುಮಾರು ನಾಲ್ಕು, ಐದು, ಜಿಲ್ಲೆಗಳಲ್ಲಿ ಹೆಚ್ಚಾಗಿ ಪೂಜಿಸುತ್ತಾರೆ.
ಅಖಂಡ ಕರ್ನಾಟಕದಾದ್ಯಂತ ಕನ್ನಡಿಗರು ಕನ್ನಡ ತಾಯಿ ಭುವನೇಶ್ವರಿ ದೇವಿ ಯನ್ನು ಪೂಜಿಸಿ ಆರಾಧಿಸುತ್ತಿದ್ದಾರೆ,ರಾಜ್ಯ ಸರ್ಕಾರ ವಿಧಾನ ಸೌಧದಲ್ಲಿ ಕನ್ನಡ ತಾಯಿ ಭುವನೇಶ್ವರಿ ದೇವಿಯ ಭವ್ಯ ಪ್ರತಿಮೆ ಯನ್ನು ಸ್ಥಾಪಿಸಿರುವುದೇ ಸಾಕ್ಷಿ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಲ್ಲದೆ ಈಗಾಗಲೇ ರಾಜ್ಯ ಸರ್ಕಾರ ಕರ್ನಾಟಕ ರಾಜ್ಯದ ಸಾಂಸ್ಕೃತಿಕ ನಾಯಕನಾಗಿ ವಿಶ್ವ ಗುರು ಬಸವಣ್ಣ ನವರನ್ನು ಅಧಿಕೃತವಾಗಿ ಘೋಷಣೆ ಮಾಡಿದೆ
ಆದ ಕಾರಣ ರಾಜ್ಯ ಸರ್ಕಾರ ಈ ಮೇಲಿನ ಎಲ್ಲಾ ಅಂಶಗಳನ್ನು ಸೂಕ್ಷ್ಮವಾಗಿ ಪರಿಗಣಿಸಿ ಕೂಡಲೇ ನಾಡ ದೇವತೆಯಾಗಿ ಭುವನೇಶ್ವರಿ ದೇವಿಯನ್ನು ಅಧಿಕೃತವಾಗಿ ಘೋಷಣೆ ಮಾಡಬೇಕು ಎಂದು ತೇಜಸ್ವಿ ನಾಗಲಿಂಗ ಸ್ವಾಮಿ ಒತ್ತಾಯಿಸಿದ್ದಾರೆ.

ಭುವನೇಶ್ವರಿ ದೇವಿಯನ್ನು ನಾಡ ದೇವತೆಯಾಗಿ ಘೋಷಣೆ ಮಾಡಲು ಮನವಿ Read More