2.2 ಕಿ.ಮೀ. ಟನಲ್ ರಸ್ತೆಗೆ 1,385 ಕೋಟಿ ಡಿಪಿಆರ್‌ ಬೇಕಿತ್ತೆ:ಅಶೋಕ್ ಚಾಟಿ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಸಾರ್ ಯಾಕಿಷ್ಟು ದುಬಾರಿ ಡಿಪಿಆರ್ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯ ಹಾಗೂ ಕಾರವಾಗಿ ಚಾಟಿ ಬೀಸಿದ್ದಾರೆ.

2.2 ಕಿ.ಮೀ. ಟನಲ್ ರಸ್ತೆಗೆ 1,385 ಕೋಟಿ ಡಿಪಿಆರ್. ಉಪ ಮುಖ್ಯ ಮಂತ್ರಿಗಳೆ
ತಾವು ಮಾಡಿಸುವ ಡಿಪಿಆರ್ ಗಳು ಚಿನ್ನದ ಕಾಗದದ ಮೇಲೆ ಬರೆಯಲಾಗುತ್ತೋ ಅಥವಾ ಚಿನ್ನದ ಶಾಹಿಯಿಂದ ಮುದ್ರಣ ಆಗುತ್ತೋ ಎಂದು ಟ್ವೀಟ್ ಮಾಡಿ ಪ್ರಶ್ನಿಸಿದ್ದಾರೆ.

ಇನ್ನೆಷ್ಟು ಲೂಟಿ ಹೊಡೆಯುತ್ತೀರಿ ಸ್ವಾಮಿ. ಕನ್ನಡಿಗರನ್ನು ಲೂಟಿ ಹೊಡೆಯಲು ಇನ್ನೆಷ್ಟು ಹಗಲು ದರೋಡೆ ಯೋಜನೆಗಳನ್ನು ರೂಪಿಸುತ್ತೀರಿ.

ಟನಲ್ ರೋಡು ಬೇಡ ಯಾವುದೂ ಬೇಡ, ಮೊದಲು ಈಗಿರುವ ರಸ್ತೆಗಳನ್ನು ರಿಪೇರಿ ಮಾಡಿಸಿ, ಸರಿಯಾಗಿ ನಿರ್ಹವಣೆ ಮಾಡಿ, ಮೆಟ್ರೋ ಕಾಮಗಾರಿ ಚುರುಕುಗೊಳಿಸಿ ಸಧ್ಯಕ್ಕೆ ಅಷ್ಟು ಸಾಕು ಎಂದು ಅಶೋಕ್ ಸಲಹೆ ನೀಡಿದ್ದಾರೆ.

2.2 ಕಿ.ಮೀ. ಟನಲ್ ರಸ್ತೆಗೆ 1,385 ಕೋಟಿ ಡಿಪಿಆರ್‌ ಬೇಕಿತ್ತೆ:ಅಶೋಕ್ ಚಾಟಿ Read More

ಸಚಿನ್ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಕಾರಣ:ಅಶೋಕ್

ಬೆಂಗಳೂರು: ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಕಾರಣ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.

ಊರಿಗೆಲ್ಲಾ ಉಪದೇಶ ಮಾಡುವ ಪ್ರಿಯಾಂಕ್ ಖರ್ಗೆ ಮೊದಲು ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶನ ಮಾಡಲಿ ಎಂದು ಮಾಧ್ಯಮ ಹೇಳಿಕೆ ಮಾಡಿ ಆಗ್ರಹಿಸಿದ್ದಾರೆ.

ಪ್ರಿಯಾಂಕ್ ಖರ್ಗೆ ಕಲಬುರ್ಗಿ ನಿಜಾಮನೂ ಅಲ್ಲ, ಅವರ ಅನುಯಾಯಿಗಳು ರಜಾಕಾರರೂ ಅಲ್ಲ, ಗುತ್ತಿಗೆದಾರ ಸಚಿನ್ ಸಾವಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆಯವರ ಆಪ್ತರ ಪಾತ್ರವಿರುವುದು ಸ್ಪಷ್ಟವಾಗಿದೆ. ಆದ್ದರಿಂದ ಅವರು ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ಈ ಹಿಂದೆ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಾಗ, ಸಚಿವ ಈಶ್ವರಪ್ಪನವರ ರಾಜೀನಾಮೆ ಕೇಳಲಾಗಿತ್ತು. ಈಗ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ. ಸಚಿನ್ ಪಾಂಚಾಳ ಅವರು ಡೆತ್ನೋಟ್ನಲ್ಲಿ ರಾಜು ಕಪನೂರು ಹೆಸರು ಬರೆದಿಟ್ಟು, ಬಳಿಕ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಂಚನೆ ಹಾಗೂ ಹಣಕ್ಕಾಗಿ ಕೊಲೆ ಬೆದರಿಕೆ ಆರೋಪ ಮಾಡಲಾಗಿದೆ ಎಂದು ಹೇಳಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು 15 ಲಕ್ಷಕ್ಕೂ ಅಧಿಕ ಹಣ ತೆಗೆದುಕೊಂಡು ಟೆಂಡರ್‌ ನೀಡದೆ ವಂಚನೆ ಮಾಡಿದ್ದು, ಮಾತ್ರವಲ್ಲದೆ 1 ಕೋಟಿ ಹಣ ನೀಡುವಂತೆ ಒತ್ತಡ, ಕೊಲೆ ಬೆದರಿಕೆ ಹಾಕಲಾಗಿದೆ ಎಂದು ಡೆತ್ನೋಟ್ನಲ್ಲಿ ಉಲ್ಲೇಖವಾಗಿದೆ, ಇಂತಹ ಗೂಂಡಾಗಳನ್ನು ಆಪ್ತರಾಗಿ ಇಟ್ಟುಕೊಂಡ ಸಚಿವರು ಕೂಡ ಹೊಣೆಗಾರರು ಎಂದು ಅಶೋಕ್ ಹೇಳಿದ್ದಾರೆ.

ಸಚಿನ್ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಕಾರಣ:ಅಶೋಕ್ Read More