ವಿಜಯೇಂದ್ರ ಮುಂದಿನ ಮುಖ್ಯಮಂತ್ರಿ- ಎಲ್ ಆರ್ ಮಹದೇವಸ್ವಾಮಿ ಭವಿಷ್ಯ

ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮುಂದಿನ ದಿನಗಳಲ್ಲಿ ಮುಂದಿನ ಮುಖ್ಯಮಂತ್ರಿ‌ ಯಾಗುವುದು ಖಚಿತ ಎಂದು ಬಿಜೆಪಿ ಜಿಲ್ಲಾ ಗ್ರಾಮಾಂತರ ಮಾಜಿ ಅಧ್ಯಕ್ಷ ಎಲ್ ಆರ್ ಮಹದೇವಸ್ವಾಮಿ ತಿಳಿಸಿದರು.

ನಗರದ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಜೀವದಾರ ರಕ್ತ ನಿಧಿ ಕೇಂದ್ರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅಭಿಮಾನಿ ಬಳಗದ ವತಿಯಿಂದ ವಿಜಯೇಂದ್ರ ಹುಟ್ಟುಹಬ್ಬದ ಅಂಗವಾಗಿ ಹಮ್ಮಿಕೊಂಡಿದ್ದ ಶಿಬಿರವನ್ನು
ಸ್ವತಹ ರಕ್ತದಾನ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ವಿಜಯೇಂದ್ರ ಅವರು ಪಕ್ಷದ ಸಂಘಟನೆ ಉತ್ತಮವಾಗಿ ಮಾಡುತ್ತಿದ್ದಾರೆ, ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ತರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಮ್ಮ ಮಾತಿನಿಂದ ಜನರನ್ನು ಹಾಗೂ ಕಾರ್ಯಕರ್ತರನ್ನು ಸೆಳೆಯುವ ಛಾಪು ರೂಪಿಸಿಕೊಂಡಿದ್ದಾರೆ ಅವರ ಅನುಭವ, ಸಂಘಟನೆ, ರಾಜಕಾರಣ ಮಾಡುವ ಕಾರ್ಯತಂತ್ರದಿಂದ ಉತ್ತಮ ಪದವಿಯ ಚುಕ್ಕಾಣಿ ಹಿಡಿಯುವುದರಲ್ಲಿ ಸಂಶಯವಿಲ್ಲ ಎಂದು ಹೇಳಿದರು.

ವಿಜಯೇಂದ್ರ ಅವರ ಸಂಘಟನೆಯಿಂದಾಗಿ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸುತ್ತದೆ. ನಿಸ್ವಾರ್ಥದಿಂದ ಜನರ ಸೇವೆ ಮಾಡುತ್ತಿರುವ ವಿಜಯೇಂದ್ರ ಅವರಿಗೆ ಚಾಮುಂಡೇಶ್ವರಿ ತಾಯಿ ಆರೋಗ್ಯ ಹಾಗೂ ಜನರ ಸೇವೆ ಕೈಗೊಳ್ಳಲು ಇನ್ನೂ ಹೆಚ್ಚಿನ ಶಕ್ತಿ ನೀಡಲಿ ಎಂದು ಮಹದೇವಸ್ವಾಮಿ ಶುಭ ಕೋರಿದರು.

ಆಡಳಿತ ಪಕ್ಷ ಕಾಂಗ್ರೆಸ್ ಮಾಡುವ ಪ್ರತಿಯೊಂದು ತಪ್ಪನ್ನು ನಮ್ಮ ರಾಜ್ಯಾಧ್ಯಕ್ಷರು ಎತ್ತಿ ಹಿಡಿದು ನಾಡಿನ ಜನತೆಗೆ ತೋರಿಸುವ ಮೂಲಕ ಪ್ರಶ್ನಿಸುತ್ತಿದ್ದಾರೆ. ಜನತೆಗೆ ಯಾವುದೇ ರೀತಿ ಮೋಸ ಆಗದಂತೆ ಕಾಂಗ್ರೆಸ್ ಸರ್ಕಾರದ ಕಿವಿ ಹಿಂಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲೇ ಒಗ್ಗಟ್ಟಿಲ್ಲದೆ ಅಧಿಕಾರಕ್ಕಾಗಿ ಕಿತ್ತಾಡುತ್ತಿದ್ದು, ಸರ್ಕಾರ ಯಾವ ಸಮಯದಲ್ಲಾದರೂ ಬೀಳಬಹುದು. ಆಗ ಬಿ.ವೈ.ವಿಜಯೇಂದ್ರ ಮುಖ್ಯಮಂತ್ರಿ ಆಗುವುದು ಶತಸಿದ್ಧ ಎಂದು ಭವಿಷ್ಯ ನುಡಿದರು.

50ಕ್ಕೂ ಹೆಚ್ಚು ಕಾರ್ಯಕರ್ತರು
ಸ್ವಯಂ ಪ್ರೇರಿತ ರಕ್ತದಾನ ಮಾಡಿದರು.

ಈ ಸಂದರ್ಭದಲ್ಲಿ ನಗರ ಪಾಲಿಕೆ ಮಾಜಿ ಸದಸ್ಯ ಜಗದೀಶ್, ಮೂಡ ಮಾಜಿ ಸದಸ್ಯರಾದ ಲಕ್ಷ್ಮೀದೇವಿ,ಜೀವದಾರ‌ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್,ಬಿಜೆಪಿ ಮುಖಂಡರಾದ ವಕೀಲ ಶಿವರಾಜ್, ಶಿವರಾಜ್, ಕುಮಾರಸ್ವಾಮಿ, ಹರೀಶ್ ಮತ್ತಿತರರು ಹಾಜರಿದ್ದರು.

ವಿಜಯೇಂದ್ರ ಮುಂದಿನ ಮುಖ್ಯಮಂತ್ರಿ- ಎಲ್ ಆರ್ ಮಹದೇವಸ್ವಾಮಿ ಭವಿಷ್ಯ Read More

ರಕ್ತದಾನದ ಮೂಲಕ ವಿಷ್ಣು ಅವರ ಜನ್ಮದಿನ ಅರ್ಥಪೂರ್ಣ ಆಚರಣೆ

ಮೈಸೂರು: ಉದ್ಬೂರ್ ಗೆಟ್ ಬಳಿ ಇರುವ ಡಾ.ವಿಷ್ಣುವರ್ಧನ್ ಸ್ಮಾರಕದಲ್ಲಿ
ವಿಷ್ಣುವರ್ಧನ್ ಅಭಿಮಾನಿಗಳು ಸ್ವಯಂ ಪ್ರೇರಿತ ರಕ್ತದಾನ ಮಾಡುವ ಮೂಲಕ ನೆಚ್ಚಿನ ನಟ ವಿಷ್ಣುವರ್ಧನ್ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.

ರಕ್ತದಾನ ಶಿಬಿರವು ಜೀವದಾರ ರಕ್ತ ನಿಧಿ ಕೇಂದ್ರದ ಸಹಯೋಗದೊಂದಿಗೆ ನಡೆಯಿತು.

ಶಿಬಿರಕ್ಕೂ ಮೊದಲು ಬೆಳಿಗ್ಗೆ ಭಾರತಿ ವಿಷ್ಣುವರ್ಧನ್‌ ಹಾಗೂ ಅನಿರುಧ್ ಮತ್ತು ‌ವಿಷ್ಣು ಪುತ್ರಿ ವಿಷ್ಣುವರ್ಧನ್ ಅವರ ಪ್ರತಿಮೆಗೆ ಪೂಜೆ ಸಲ್ಲಿಸಿದರು.

ಸಾಹಸಸಿಂಹ, ಕರ್ನಾಟಕ ರತ್ನ ಡಾಕ್ಟರ್ ವಿಷ್ಣುವರ್ಧನ್ ಅವರ 75ನೇ ವರ್ಷದ ಜನ್ಮದಿನದ ಅಂಗವಾಗಿ 75ಕ್ಕೂ ಹೆಚ್ಚು ಅಭಿಮಾನಿಗಳು ಸ್ವಯಂ ಪ್ರೇರಿತ ರಕ್ತದಾನ ಮಾಡುವ ಮೂಲಕ ತಮ್ಮ ನೆಚ್ಚಿನ ನಟ ವಿಷ್ಣುವರ್ಧನ್ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದರು.

ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿದ ಡಾಕ್ಟರ್ ವಿಷ್ಣುವರ್ಧನ್ ಅವರ ಅಳಿಯ ಅನಿರುದ್ಧ ಅವರು ಮಾತನಾಡಿ, ಅಪ್ಪಾಜಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಬಂದಿರುವುದು ಅಭಿಮಾನಿಗಳ ಆಶೀರ್ವಾದದಿಂದ, ಪ್ರತಿ ವರ್ಷ ಅವರ ಜನ್ಮದಿನವನ್ನು ಸಾಹಸಸಿಂಹ ವಿಷ್ಣುವರ್ಧನ್ ರವರ ಅಭಿಮಾನಿಗಳು ಅರ್ಥಪೂರ್ಣವಾಗಿ ವಿಶೇಷವಾಗಿ ಆಚರಿಸ್ತಾ ಬಂದಿದ್ದಾರೆ,ಅದಕ್ಕಾಗಿ ನಮ್ಮ ಕುಟುಂಬದ ವತಿಯಿಂದ ವಿಶೇಷ ಧನ್ಯವಾದಗಳನ್ನು ಸಲ್ಲಿಸುತ್ತೇವೆ ಎಂದು ಹೇಳಿದರು.

ಇಂದು 5,000 ಜನರಿಗೆ ಹೋಳಿಗೆ ಊಟ, ಹಾಗೂ ಅಭಿಮಾನಿಗಳಿಂದ ಸ್ವಯಂ ಪ್ರೇರಿತ ರಕ್ತದಾನ ಮತ್ತು ರಸಮಂಜರಿ ಕಾರ್ಯಕ್ರಮ ಆಯೋಜಿಸಿರುವುದು ಸಂತಸ ಉಂಟುಮಾಡುತ್ತಿದೆ ಎಂದು ಖುಷಿಯಿಂದ ತಿಳಿಸಿದರು.

ರಕ್ತಕ್ಕೆ ಜಾತಿ, ಧರ್ಮದ ಭೇದವಿಲ್ಲ, ಅಪಘಾತ ಸಹಿತ ತುರ್ತು ಅವಘಡದಲ್ಲಿ ಸಿಲುಕಿದವರಿಗೆ ರಕ್ತಕ್ಕೆ ಪರ್ಯಾಯ ವ್ಯವಸ್ಥೆ ಇಲ್ಲ, ದಾನಿಗಳ ಮೂಲಕವೇ ಅವಶ್ಯ ವಿದ್ದವರಿಗೆ ಪೂರೈಸಬೇಕಾಗಿದೆ. ಈ ನಿಟ್ಟಿನಲ್ಲಿ ಎಲ್ಲ ಅರ್ಹ ದಾನಿಗಳು ರಕ್ತದಾನ ಮಾಡು ವುದರ ಮೂಲಕ ಇತರರ ಜೀವ ಉಳಿಸಲು ಸಹಕರಿಸಬೇಕೆಂದು ಕೋರಿದರು.

ಜೀವ ರಕ್ಷಣೆ ಕಾರಣವಾಗುವ ಮಹತ್ವದ ಕಾರ್ಯದಲ್ಲಿ ಭಾಗಿಯಾಗುವ ಕೆಲಸವನ್ನು ಯುವಜನತೆ ಮಾಡಬೇಕು, ಪ್ರಸ್ತುತ ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಒಳ್ಳೆಯತನವನ್ನು ಮೈಗೂಡಿಸಿಕೊಳ್ಳಬೇಕು ಎಂದು ಅನಿರುಧ್ ಸಲಹೆ ನೀಡಿದರು

ಇದೇ ವೇಳೆ ಬೆಂಗಳೂರಿನ ಕಲಾವಿದ ವಿಜಯ್ ಅವರು ಅಭಿಮಾನಿಗಳ
ಕೆನ್ನೆಗೆ ಹಾಗೂ ಕೈಗೆ ಕರ್ನಾಟಕ ರತ್ನ ವಿಷ್ಣು, ಹಾಗೂ ಅವರು ನಟಿಸಿದ ಚಿತ್ರಗಳ ಹೆಸರಿನ ಟ್ಯಾಟೋಗಳನ್ನು ಉಚಿತವಾಗಿ ಹಾಕುವ ಮೂಲಕ ಅಭಿಮಾನ ಮೆರೆದರು.

ವಿಷ್ಣುವರ್ಧನ್ ಮೊಮ್ಮಗ ಶ್ರೇಷ್ಠವರ್ಧನ, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ವಿಷ್ಣುವರ್ಧನ್ ಅಭಿಮಾನಿಗಳ ಒಕ್ಕೂಟದ ಅಧ್ಯಕ್ಷ ಎಂ.ಡಿ ಪಾರ್ಥಸಾರಥಿ, ಜಿ ರಾಘವೇಂದ್ರ, ಕರುಣಾಮಯಿ ವಿಷ್ಣು ಅಭಿಮಾನಿ ಬಳಗದ ಅಧ್ಯಕ್ಷ ಎಸ್ ಎನ್ ರಾಜೇಶ್,
ರೇಖಾ ಶ್ರೀನಿವಾಸ್, ಇನ್ನರ್ ವ್ಹೀಲ್ ಕ್ಲಬ್ ನ ಸಂಧ್ಯಾ, ಟಿ ಎಸ್ ಅರುಣ್, ಜ್ಯೋತಿ, ಮತ್ತಿತರರು ಹಾಜರಿದ್ದರು.

ರಕ್ತದಾನದ ಮೂಲಕ ವಿಷ್ಣು ಅವರ ಜನ್ಮದಿನ ಅರ್ಥಪೂರ್ಣ ಆಚರಣೆ Read More

ನಾಡಪ್ರಭು ಕೆಂಪೇಗೌಡರ ಜಯಂತಿ; ರಕ್ತದಾನ ಶಿಬಿರ ಪೋಸ್ಟರ್ ಬಿಡುಗಡೆ

ಮೈಸೂರು: ಮೈಸೂರಿನ ಚಾಮುಂಡೇಶ್ವರಿ ಬಳಗ ಹಾಗೂ ಜೀವದಾರ ರಕ್ತ ನಿಧಿ ಕೇಂದ್ರದ ವತಿಯಿಂದ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ.

ಈ ಕುರಿತಾದ ಪೋಸ್ಟರ್ ಅನ್ನು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಬಿಡುಗಡೆಗೊಳಿಸಿದರು.

ಜೂನ್ 26 ರಂದು ಬೆಳಗ್ಗೆ ಹತ್ತರಿಂದ ಮಧ್ಯಾಹ್ನ ಎರಡು ಗಂಟೆವರೆಗೆ ನ್ಯೂ ಸಯಾಜಿರಾವ್ ರಸ್ತೆ, ಜೀವದರ ರಕ್ತನಿಧಿ ಕೇಂದ್ರದ ಆವರಣದಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ.

ಪೋಸ್ಟರ್ ಬಿಡುಗಡೆ ವೇಳೆ ಚಾಮುಂಡೇಶ್ವರಿ ಬಳಗದ ಮುಖ್ಯಸ್ಥರು ಹಾಗೂ ಕೆಪಿಸಿಸಿ ಸದಸ್ಯರಾದ ನಜರ್ ಬಾದ್ ನಟರಾಜ್, ಡಿ.ಕೆ ಶಿವಕುಮಾರ್ ಅಭಿಮಾನಿಗಳ ಬಳಗದ ಪಾಂಡವಪುರ ದಿನೇಶ್, ರವಿಚಂದ್ರ, ಡಿಸಿಸಿ ಚಂದ್ರು, ಬೋಗಾದಿ ರವಿಚಂದ್ರ, ಉತ್ತನಹಳ್ಳಿ ಶಿವಣ್ಣ ಹಾಗೂ ಕಾರ್ಯಕರ್ತರು ಮುಖಂಡರು ಉಪಸ್ಥಿತರಿದ್ದರು.

ನಾಡಪ್ರಭು ಕೆಂಪೇಗೌಡರ ಜಯಂತಿ; ರಕ್ತದಾನ ಶಿಬಿರ ಪೋಸ್ಟರ್ ಬಿಡುಗಡೆ Read More