ರಾಜ್ಯ ಸರ್ಕಾರದ ವಿರುದ್ಧ ಸಿ.ಟಿ.ರವಿ ಕಿಡಿ

ಬೆಳಗಾವಿ: ಆಡಳಿತ ವ್ಯವಸ್ಥೆ ಭ್ರಷ್ಟತೆಯಿಂದ
ಕೂಡಿದರೆ ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ನಿರೀಕ್ಷಿಸುವುದು ಅಸಾಧ್ಯ ಎಂದು ವಿಧಾನ ಪರಿಷತ್ತಿನ ಬಿಜೆಪಿ ಸದಸ್ಯ ಸಿ.ಟಿ.ರವಿ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಶುಕ್ರವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ, ವಿಜಯಪುರ, ರಾಯಚೂರು, ಬೀದರ್, ಕಲಬುರಗಿಯಲ್ಲಿ ಸಾಕಷ್ಟು ಬೆಳೆ ಹಾನಿಯಾಗಿದೆ. ಅತಿವೃಷ್ಟಿಯಿಂದ ತೀವ್ರ ಸಂಕಷ್ಟಕ್ಕೆ‌ ರೈತರು ಸಿಲುಕಿದ್ದಾರೆ ಅವರ ನೆರವಿಗೆ ಬಾರದೆ‌ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ ತಾಳಿದೆ ಎಂದು ಕಿಡಿಕಾರಿದರು.

ಬೆಳಗಾವಿ ಜಿಲ್ಲೆಯ ಜನಪ್ರತಿನಿಧಿಗಳಿಗೆ ಚುನಾವಣೆ ಪ್ರತಿಷ್ಠೆಯ ಮುಖ್ಯ ವಿಷಯವಾಗಿದೆ. ಜನರ ಸಂಕಷ್ಟ ಕೇಳಿ ಪರಿಹರಿಸುವ ಸಂವೇದನೆ ಆಡಳಿತ ಪಕ್ಷದ ಶಾಸಕ ಸಚಿವರಿಗೆ ಇಲ್ಲ. ಈಗಲಾದರೂ ಜಿಲ್ಲೆಯ ಸಚಿವರು ಸಂವೇದನೆ ತೋರಿಸಿ ರೈತರ ಸಹಾಯಕ್ಕೆ ಬರಬೇಕು ಎಂದು ಸಿ.ಟಿ.ರವಿ ಒತ್ತಾಯಿಸಿದರು.

ರಾಜ್ಯದಲ್ಲಿ ನಾನು ಮುಖ್ಯಮಂತ್ರಿ, ತಾನು ಮುಖ್ಯಮಂತ್ರಿ ಎಂಬ ಯುದ್ಧ ಶುರುವಾಗಿದೆ. ಯಾರು ಮುಖ್ಯಮಂತ್ರಿಯಾಗಿರುತ್ತಾರೊ ಅದು ಮುಖ್ಯವಲ್ಲ. ಜನ ಅಧಿಕಾರ ಕೊಟ್ಟಿದ್ದಾರೆ ಅವರ ಸಂಕಷ್ಟಕ್ಕೆ ಸ್ಪಂದಿಸಿ ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರದ ವಿರುದ್ಧ ಸಿ.ಟಿ.ರವಿ ಕಿಡಿ Read More

ಸಿ.ಟಿ ರವಿ ಪ್ರಕರಣ ಸಿಐಡಿಗೆ: ಪರಮೇಶ್ವರ್ಸ್ಪಷ್ಟ ನುಡಿ

ಹುಬ್ಬಳ್ಳಿ: ಸಿಟಿ ರವಿ ಕೆಟ್ಟ‌ ಪದ ಬಳಸಿಲ್ಲ ಎನ್ನುತ್ತಾರೆ. ಹೆಬ್ಬಾಳ್ಕರ್ ಪಕ್ಕದಲ್ಲಿದ್ದವರು ಆ ಮಾತು ಆಡಿದ್ದಾರೆ ಎಂದು ಹೇಳುತ್ತಾರೆ ಸತ್ಯ ತಿಳಿಯಲು ತನಿಖೆ ಆಗಲೆಂದೇ ಪ್ರಕರಣವನ್ನು ಸಿಐಡಿಗೆ ಹಸ್ತಾಂತರ ಮಾಡಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿ.ಟಿ ರವಿ ಪ್ರಕರಣದ ತನಿಖೆ ನಡೆಯುವಾಗ ನಾವು ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದು ಹೇಳಿದರು.

ಸಿ.ಟಿ ರವಿ ಪ್ರಕರಣ ಮುಗಿದ ಅಧ್ಯಾಯ ಎಂಬ ಸ್ಪೀಕರ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಸ್ಪೀಕರ್ ತಮ್ಮ ಕೆಲಸ ತಾವು ಮಾಡುತ್ತಾರೆ. ಪೊಲೀಸರು ಅವರ ಕರ್ತವ್ಯ ನಿರ್ವಹಿಸುತ್ತಾರೆ. ಅಲ್ಲಿಯ ಸಾಧಕ ಬಾಧಕಗಳನ್ನು ನೋಡಿಕೊಂಡು ಹೇಳಿಕೆ ಕೊಟ್ಟಿರಬಹುದು. ಕಾನೂನು ಪ್ರಕ್ರಿಯೆ ನಡೆಯುವಾಗ ಕೆಲವು ವಿಳಂಬವಾಗಬಹುದು, ಪ್ರಕರಣದ ಸತ್ಯಾಸತ್ಯತೆ ನೋಡಬೇಕಿದೆ ಎಂದು ತಿಳಿಸಿದರು.

ಸಿಟಿ ರವಿ ಹಲ್ಲೆ ಮಾಡಿದವರ ಮೇಲೆ ಪ್ರಕರಣ ವಿಳಂಬ ವಿಚಾರವಾಗಿ ಮಾತನಾಡಿದ ಅವರು, ಕೆಲವೊಂದು ಕಾರಣಕ್ಕೆ ವಿಳಂಬವಾಗಿರಬಹುದು. ಪೊಲೀಸ್ ಇಲಾಖೆ ಜವಾಬ್ದಾರಿಯುತ ಇಲಾಖೆ. ಸಿಎಂ ಅಥವಾ ಗೃಹ ಸಚಿವರ ಆದೇಶವನ್ನು ಮಾತ್ರ ಪೊಲೀಸರು ಪಾಲನೆ ಮಾಡುತ್ತಾರೆ. ಬೇರೆ ಯಾರೇ ಆದೇಶ ಮಾಡಿದರೂ ಅದನ್ನು ಪಾಲನೆ ಮಾಡಲ್ಲ, ಕಾನೂನು ಚೌಕಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಜಿ.ಪರಮೇಶ್ವರ್ ಅಸಮರ್ಥ ಗೃಹ ಸಚಿವ ಎಂಬ ಜೋಶಿ ಹೇಳಿಕೆಗೆ ಪ್ರತಿಕ್ರಿಯಿಸಿದ ಪರಂ, ಪ್ರಹ್ಲಾದ್ ಜೋಶಿ ಅಸಮರ್ಥ ಕೇಂದ್ರ ಸಚಿವ ಎಂದರೆ ಒಪ್ಪುತ್ತಾರಾ, ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ, ಅದಕ್ಕೆ ಅವರು ಹಾಗೆ ಹೇಳಿದ್ದಾರೆ ಎಂದು ಪರಮೇಶ್ವರ್ ತಿರುಗೇಟು ನೀಡಿದರು.

ಸಿ.ಟಿ ರವಿ ಪ್ರಕರಣ ಸಿಐಡಿಗೆ: ಪರಮೇಶ್ವರ್ಸ್ಪಷ್ಟ ನುಡಿ Read More

ಸಭಾಪತಿ ಹೊರಟ್ಟಿ ಅವರ ನಡೆ ಅನುಮಾನಾಸ್ಪದ – ಜಗದೀಶ್ ಚಂದ್ರ

ಬೆಂಗಳೂರು:‌‌ ವಿಧಾನ ಪರಿಷತ್ ನಲ್ಲಿ ಸಿ.ಟಿ. ರವಿ ರವರ ಸ್ತ್ರೀನಿಂದನೆ, ನಂತರದಲ್ಲಿ ನಡೆದ ಎಲ್ಲಾ ಘಟನೆಗಳು ಶಾಂತಿಪ್ರಿಯ ಕರ್ನಾಟಕಕ್ಕೆ ಕಪ್ಪುಮಸಿ ಬಳಿದಂತಾಗಿದೆ ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರ ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ ಬೇಸರ ವ್ಯಕ್ತಪಡಿಸಿದರು.

ಬೆಳಗಾವಿ ಅಧಿವೇಶನದಲ್ಲಿ ನಡೆದ ಸಿ.ಟಿ .ರವಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಪ್ರಕರಣದ ಬಗ್ಗೆ ಸದನದ ಗೌರವ ಕಾಪಾಡಿ ಎಂಬ ಘೋಷವಾಕ್ಯದೊಂದಿಗೆ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಪಕ್ಷದ ಕಚೇರಿ ಮುಂಭಾಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಪ್ಪು ಪಟ್ಟಿ ಧರಿಸಿ ಖಂಡನೆ ಸಭೆಯಲ್ಲಿ ಅವರು ಮಾತನಾಡಿದರು.

ಸದನದಲ್ಲಿಯೇ ಮಹಿಳೆ ಅದರಲ್ಲಿಯೂ ಪ್ರಮುಖ ಮಂತ್ರಿಯೊಬ್ಬರಿಗೆ ಈ ರೀತಿಯ ನಿಂದನೆ ಆಗುವುದಿದ್ದರೆ ಮಹಿಳೆಯರಿಗೆ ಕರ್ನಾಟಕವು ಎಷ್ಟು ಸುರಕ್ಷಿತ ಎಂಬ ಅನುಮಾನ ಕಾಡುತ್ತದೆ. ಸಿ.ಟಿ. ರವಿ ವರ್ತನೆ ಯಾವುದೇ ನಾಗರೀಕ ಸಮಾಜ ಕ್ಷಮಿಸುವುದಿಲ್ಲ ಎಂದು ಹೇಳಿದರು.

ಸಭಾಪತಿಗಳು ತೆಗೆದುಕೊಂಡಿರುವ ರೂಲಿಂಗ್ ಸಹ ಪಕ್ಷಪಾತ ಮಾಡಿರುವ ಅನುಮಾನ ರಾಜ್ಯದ ಜನತೆಗೆ ಕಾಡಲು ಆರಂಭಿಸಿದೆ ಎಂದು ತಿಳಿಸಿದರು.

ಘಟನೆ ನಡೆದ ದಿನವೇ ಸಿ.ಟಿ.ರವಿಗೆ ಕ್ಲೀನ್ ಚಿಟ್ ನೀಡುವಂತಹ ಪ್ರಕ್ರಿಯೆಗಳು ಬಸವರಾಜ ಹೊರಟ್ಟಿ ಅವರಿಂದ ಆಗಿದೆ. ನಂತರದ ದಿನಗಳಲ್ಲಿ ಸಭಾಪತಿಗಳ ನೇತೃತ್ವದಲ್ಲಿ ಅಲ್ಲಿದ್ದ ಎಲ್ಲಾ ಶಾಸಕರುಗಳನ್ನು ಕರೆಸಿ ವಿಚಾರಣೆ ನಡೆಸದೆ ಪಕ್ಷಪಾತ ರೀತಿಯಲ್ಲಿ ರೂಲಿಂಗ್ ನೀಡಿರುವುದು ಅನುಮಾನ ಮೂಡುವಂತಿದೆ ಎಂದು ಜಗದೀಶ್ ಚಂದ್ರ ಆರೋಪಿಸಿದರು.

ಕೋಟ್ಯಾಂತರ ರೂಪಾಯಿಗಳ ಜನತೆಯ ತೆರಿಗೆ ಹಣವನ್ನು ಅನವಶ್ಯಕವಾಗಿ ಈ ರೀತಿ ಸದನದ ಗೌರವ ಹಾಳು ಮಾಡುವ ರೀತಿಯಲ್ಲಿ ದುರ್ವಿನಿಯೋಗವಾದರೆ ಆಮ್ ಆದ್ಮಿ ಪಕ್ಷ ಎಂದಿಗೂ ಸಹಿಸುವುದಿಲ್ಲ ಎಂದು ಎಚ್ಚರಿಸಿದರು.

ಶಾಸಕರು ತಮ್ಮ ವೈಯಕ್ತಿಕ ದ್ವೇಷಗಳನ್ನು ಸಾಧಿಸಲು ಚಿಂತಕರ ಚಾವಡಿಯಂತಹ ಮೇಲ್ಮನೆಯನ್ನು ಬಳಸಿಕೊಳ್ಳುತ್ತಿರುವುದು ನಿಜಕ್ಕೂ ದುರದೃಷ್ಟಕರ ಇಂತಹ ಚಾರಿತ್ರ್ಯ ಹೀನ, ಭ್ರಷ್ಟ ವ್ಯಕ್ತಿಗಳು ಮೇಲ್ಮನೆಗೆ ಬರುತ್ತಿರುವುದನ್ನು ಎಲ್ಲ ಪಕ್ಷಗಳು ತಡೆಗಟ್ಟಬೇಕು ಎಂದು ಜಗದೀಶ್ ಚಂದ್ರ ಒತ್ತಾಯಿಸಿದರು.

ಪಕ್ಷದ ಅನೇಕ ಮುಖಂಡರುಗಳು ಹಾಗೂ ಕಾರ್ಯಕರ್ತರು ಬಾಯಿಗೆ ಬಟ್ಟೆ ಕಟ್ಟಿಕೊಂಡು ಖಂಡನಾ‌ ಸಭೆಯಲ್ಲಿ
ಭಾಗವಹಿಸಿದ್ದರು.

ಸಿ.ಟಿ.ರವಿ ಶಾಸಕತ್ವ ರದ್ದು ಗೊಳಿಸಿ,ಮಹಿಳಾ ವಿರೋಧಿ ಸಿ.ಟಿ.ರವಿ ಉಚ್ಛಾಟನೆ ಅಸಗಬೇಕು,ಸದನದ ಸದಸ್ಯರೇ ರಾಜ್ಯದ ಜನ ನಿಮ್ಮನ್ನು ಕ್ಷಮಿಸುವುದಿಲ್ಲ,ಸದನದ ಗೌರವ ಕಾಪಾಡಿ ಮುಂತಾದ ಭಿತ್ತಿಪತ್ರ‌ ಪ್ರದರ್ಶಿಸಿ ಆಕ್ರೋಶ‌ ವ್ಯಕ್ತಪಡಿಸಿದರು.

ಸಭಾಪತಿ ಹೊರಟ್ಟಿ ಅವರ ನಡೆ ಅನುಮಾನಾಸ್ಪದ – ಜಗದೀಶ್ ಚಂದ್ರ Read More

ಧರ್ಮಸ್ಥಳಕ್ಕೆ ಬಂದು ಆಣೆ ಮಾಡಲಿ: ಸಿ.ಟಿ ರವಿಗೆ ಲಕ್ಷ್ಮಿ ಸವಾಲ್‌

ಬೆಂಗಳೂರು: ರಾಮಾಯಣ, ಮಹಾಭಾರತ ಆಗಿದ್ದು, ಮಹಿಳೆಯನ್ನ ಅಪಮಾನ ಮಾಡಿದ್ದಕ್ಕೆ. ಅಲ್ಲಿ ಅಪಮಾನ ಮಾಡಿದ ಎಲ್ಲರಿಗೂ ಶಿಕ್ಷೆ ಆಗಿದೆ ಇಲ್ಲೂ ಆಗೇ ಆಗುತ್ತೆ ಎಂದು ಸಚಿವೆ ಲಕ್ಷ್ಮೀ‌ ಹೆಬ್ಬಾಳ್ಕರ್ ಕಡಕ್ಕಾಗಿ ಹೇಳಿದ್ದಾರೆ.

ಸಿ.ಟಿ ರವಿ ಅವರು ನನ್ನ ಕುರಿತು ಆ ರೀತಿ ಹೇಳಿಲ್ಲ ಅನ್ನೋದಾದ್ರೆ, ಧರ್ಮಸ್ಥಳಕ್ಕೆ ಬಂದು ಆಣೆ, ಪ್ರಮಾಣ ಮಾಡಲಿ. ಆಣೆ ಮಾಡಲಿಕ್ಕೆ ನಾನೂ ನನ್ನ ಕುಟುಂಬ ಸಮೇತವಾಗಿ ಬರುವೆನು ಎಂದು ಸವಾಲು ಹಾಕಿದರು.

ಡಿ.19ರಂದು ಸುವರ್ಣಸೌಧದ ಪರಿಷತ್‌ ಕಲಾಪದಲ್ಲಿ ಸದಸ್ಯ ಸಿ.ಟಿ ರವಿ ಅವರು ಅಸಂವಿಧಾನಿಕ ಪದ ಬಳಸಿ ನಿಂಧಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮನ್ನು ಭೇಟಿ ಮಾಡಿದ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವೆ, ಸಿ.ಟಿ ರವಿ ಆ ರೀತಿ ಹೇಳಿಲ್ಲ ಅನ್ನೋದಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ, ಪ್ರಮಾಣ ಮಾಡಲಿ ಎಂದು ಹೇಳಿದರು.

ಸಿ.ಟಿ ರವಿ ಈ ರೀತಿ ಅಂದಿದ್ದಾರೆ ಅಂತಾ ನಾನು ನಾಟಕ ಮಾಡೋಕ್ಕಾಗುತ್ತ, ಸದನದಲ್ಲಿ ನಿಂತು ಸುಳ್ಳು ಆರೋಪ ಮಾಡೋದಕ್ಕೆ ಆಗುತ್ತಾ, ಸುಳ್ಳು ಹೇಳಕ್ಕೆ ನನಗೇನು ಹುಚ್ಚಾ, ನಾಟಕವಾಡಿ ರಾಜಕಾರಣದಲ್ಲಿ ನಾನು ಏನಾದ್ರೂ ಗಳಿಸೋದಿದ್ಯ ಎಂದು ಕಾರವಾಗಿ ಪ್ರಶ್ನಿಸಿದರು.

ಫ್ರೆಟ್ಟ್ರೇಟ್‌ ಎಂಬ ಪದ ಬಳಕೆ ಮಾಡಿರುವುದಾಗಿ ಸಿ.ಟಿ ರವಿ ಹೇಳಿದ್ದಾರಲ್ಲಾ ಎಂಬ ಸುದ್ದಿಗಾರರ ಪ್ರಶ್ನೆಗೆ, ಫ್ರೆಸ್ಟ್ರೇಟ್‌ ಅನ್ನೋದಕ್ಕೂ ಆಪದಕ್ಕೂ ವ್ಯತ್ಯಾಸ ಇರಲ್ವಾ, ಅವರು ಹೇಳಿರೋದಕ್ಕೆ ಆಡಿಯೋ, ವಿಡಿಯೋ ಎಲ್ಲವೂ ನನ್ನ‌ ಬಳಿ ಸಾಕ್ಷಿ ಇದೆ ಎಂದು ತಿಳಿಸಿದರು.

ಸಾವಿರಾರು ಜನ ರಾಜಕಾರಣಕ್ಕೆ ಬರಲು ಮುಂದಾಗಿದ್ದಾರೆ, ಈಗ ಹೋರಾಟ ಮಾಡಲಿಲ್ಲ ಅಂದ್ರೆ, ನನ್ನ ಆತ್ಮಸಾಕ್ಷಿಗೆ ವಂಚನೆ ಮಾಡಿದಂತೆ ಆಗುತ್ತದೆ. ನಾನು ಸಂಘರ್ಷ, ಅಪಮಾನ ಮೆಟ್ಟಿನಿಂತು ಬೆಳೆದಿದ್ದೇನೆ. ಆದ್ರೆ ಈ ಘಟನೆಯಿಂದ ನನ್ನ ಮನಸ್ಸಿಗೆ ಆಘಾತ ಉಂಟಾಗಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ನೊಂದು ನುಡಿದರು

ಕೊಲೆಗಾರ ಎಂದು ನೀವು ಹೇಳಿದ್ದೀರಿ ಎಂಬ ಆರೋಪ ಇದೆಯಲ್ಲ ಎಂಬ ಪ್ರಶ್ನೆಗೆ, ಸಿ.ಟಿ ರವಿ ಆಕ್ಸಿಡೆಂಟ್‌ ಮಾಡಿರುವ ವೀಡಿಯೋ ನನ್ನ ಬಳಿಯಿದೆ. ನಾನು ಕೊಲೆಗಾರ ಅಂದಿಲ್ಲ ಅಂತ ಹೇಳ್ತಿಲ್ಲಾ ಅವರ ಹಾಗೆ ನನಗೆ ಚಪಲಾನಾ, ಪ್ರತಿಯೊಂದಕ್ಕೆ ಎದ್ದು ನಿಂತು ಮಾತಾಡೋದಕ್ಕೆ ನಾನು ಗಾಂಧಿ ಹಾಕಿಕೊಟ್ಟಂತಹ ಮಾರ್ಗದಲ್ಲಿ ನಡೆಯುತ್ತಿರುವವಳು, ಗೋಡ್ಸೆ ಮಾರ್ಗದಲ್ಲಿ ನಡೆಯುವಂತಹವರಲ್ಲ ಎಂದು ಹೇಳಿದರು.

ಆ ರೀತಿಯ ಯಾವುದೇ ವಿಡಿಯೋ ಇಲ್ಲ, ಅದು ನಕಲಿ ಎಂಬ ಸಭಾಪತಿಗಳ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವೆ,ಹಲವಾರು ಸಂದರ್ಭದಲ್ಲಿ ಸಭಾಪತಿಗಳು ನನಗೆ ಮಾರ್ಗದರ್ಶನ ಕೊಟ್ಟಿದ್ದಾರೆ, ನನಗೆ ಫೋನ್ ಮಾಡಿ ಸಾಂತ್ವನ ಹೇಳಿದ್ದಾರೆ. ಅವರು ಯಾಕೆ ಈ ರೀತಿ ಹೇಳಿದ್ದಾರೋ ನನಗೆ ಗೊತ್ತಿಲ್ಲ, ಅವರ ರೂಲಿಂಗ್ ಬಗ್ಗೆ ಮಾತಾಡುವಷ್ಟು ಹಿರಿಯಳು ನಾನಲ್ಲ ಎಂದು ತಿಳಿಸಿದರು.

ಧರ್ಮಸ್ಥಳಕ್ಕೆ ಬಂದು ಆಣೆ ಮಾಡಲಿ: ಸಿ.ಟಿ ರವಿಗೆ ಲಕ್ಷ್ಮಿ ಸವಾಲ್‌ Read More

ಸಿ.ಟಿ.ರವಿ ಹೇಳಿಕೆಗೆ ರೇಖಾ ಶ್ರೀನಿವಾಸ್ ಖಂಡನೆ

ಮೈಸೂರು: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಕೆಟ್ಟಪ ಬಳಕೆ ಮಾಡಿ ಸದನದ ಗೌರವಕೆ ಧಕ್ಕೆ ತಂದಿದ್ದಾರೆ. ಮಹಿಳಾ ಕುಲಕ್ಕೆ ಅಪಮಾನ ಮಾಡಿದ್ದಾರೆ ಎಂದು ಮಹಿಳಾ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ರೇಖಾ ಶ್ರೀನಿವಾಸ್ ಕಿಡಿಕಾರಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಅಗೌರವದ ಮಾತುಗಳನ್ನು ಆಡಿ ಮಹಿಳೆಯರನ್ನು ತುಚ್ಚವಾಗಿ ಕಂಡಿದ್ದಾರೆ. ಕೂಡಲೇ ಸಭಾಪತಿಗಳು ಸಿ.ಟಿ. ರವಿ ಅವರನ್ನು ಒಂದು ವರ್ಷಗಳ ಕಾಲ ಸದನದಿಂದ ಅಮಾನತ್ತುಗೊಳಿಸಬೇಕು ಎಂದು ಮಾಧ್ಯಮ ಪ್ರಕಟಣೆಯಲ್ಲಿ ರೇಖಾ ಆಗ್ರಹಿಸಿದ್ದಾರೆ.

ಪೊಲೀಸರು ಸ್ವಯಂ ಪ್ರೇರಣೆಯಿಂದ ದೂರು ದಾಖಲಿಸಿಕೊಂಡು ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸಿ.ಟಿ.ರವಿ ಮಾತುಗಳು ಬಿಜೆಪಿ ನಾಯಕರ ಹೀನ ಮನಸ್ಥಿತಿ ಬಹಿರಂಗಗೊಳಿಸಿದೆ. ಯಾರೂ ಕೂಡಾ ಇಂತಹ ಅಸಂವಿಧಾನಿಕ ಪದ ಬಳಕೆ ಮಾಡಿರಲಿಲ್ಲ. ಸ್ವಲ್ಪವಾದರು ಮನುಷ್ಯತ್ವ ಇದ್ದರೇ ಸಿ.ಟಿ. ರವಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜಕೀಯ ನಿವೃತ್ತಿ ಘೋಷಿಸಬೇಕು. ಇಲ್ಲವಾದಲ್ಲಿ ಅವರಿಗೆ ನಾಡಿನ ಮಹಿಳೆಯರು ಕಪ್ಪು ಮಸಿ ಬಳಿದು ತಕ್ಕ ಶಾಸ್ತಿ ಮಾಡಲಿದ್ದಾರೆ ಎಂದು ರೇಖಾ ಶ್ರೀನಿವಾಸ್ ಎಚ್ಚರಿಸಿದ್ದಾರೆ.

ದೇಶದಲ್ಲಿ ವಿಧಾಸಭೆ,ವಿಧಾನ ಪರಿಷತ್,ಲೋಕಸಭೆ,ರಾಜ್ಯಸಭೆ ಬಗ್ಗೆ ಎಲ್ಲರಿಗೂ ಬಹಳ ಗೌರವವಿದೆ.ಆದರೆ‌ ಹಿರಿಯರ ಚಾವಡಿಯಾದ ವಿಧಾನ ಪರಿಷತ್ ನಲ್ಲೇ‌ ಸಿ.ಟಿ.ರವಿ ಕೆಟ್ಟಪದ ಬಳಕೆ ಮಾಡಿರುವುದು ಅತ್ಯಂತ ಹೇಯ.ಇದನ್ನು ಇಡೀ ನಾಡಿನ ಮಹಿಳೆಯರು ಖಂಡಿಸಬೇಕು ಎಂದು ಅವರು ಕರೆ ನೀಡಿದ್ದಾರೆ.

ಸಿ.ಟಿ.ರವಿ ಹೇಳಿಕೆಗೆ ರೇಖಾ ಶ್ರೀನಿವಾಸ್ ಖಂಡನೆ Read More

ಖರೀದಿ ಮಾಡೋಕೆ ಕಾಂಗ್ರೆಸ್ ಶಾಸಕರು ಕತ್ತೇನಾ,ಕಯದುರೇನಾ:ಸಿ.ಟಿ.ರವಿ ಗರಂ

ಬೆಂಗಳೂರು: ನಿಮ್ಮ ಶಾಸಕರನ್ನು ಖರೀದಿ ಮಾಡೋದಕ್ಕೆ ಅವ್ರೇನು ಕತ್ತೇನಾ, ಕುದುರೇನಾ, ದನನಾ,ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಹರಿ ಹಾಯ್ದಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಬಿಜೆಪಿ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದು ಕಿಡಿಕಾರಿದರು.

ನಿಮ್ಮ ಪಕ್ಷದ ಶಾಸಕರು ಅಷ್ಟು ದುರ್ಬಲರಾ, ಬದ್ಧತೆ ಇರುವ ಯಾವುದೇ ಶಾಸಕರನ್ನ ಖರೀದಿ ಮಾಡಲು ಸಾಧ್ಯವಿಲ್ಲ. ನಿಮ್ಮ ಆರೋಪ ಆಧಾರ ರಹಿತ ಎಂದು ತಿರುಗೇಟು ನೀಡಿದರು.

ಯಾರು, ಯಾವಾಗ, ಯಾರನ್ನ ಖರೀದಿ ಮಾಡಲು ಪ್ರಯತ್ನ ಪಟ್ಟಿದ್ದಾರೆ ಅದರ ಬಗ್ಗೆ ಆಧಾರ ಇದ್ದರೆ ದೂರು ನೀಡಿ. ಸಾಕ್ಷಿ ಇದ್ದರೆ ಆಧಾರ ಸಹಿತವಾಗಿ ನ್ಯಾಯಾಲಯದಲ್ಲಿ ನಿರೂಪಿಸಿ. ಸಿಎಂ ಸ್ಥಾನದಲ್ಲಿ ಇದ್ದು, ಆ ಸ್ಥಾನದ ಜವಾಬ್ದಾರಿ ಮರೆತು ಕೇವಲ ಆರೋಪ ಮಾಡೋದು ರಾಜಕೀಯ ಪ್ರೇರಿತ. ಬಿಜೆಪಿ ವಿರುದ್ಧ ತಪ್ಪು ಅಭಿಪ್ರಾಯ ಮೂಡಿಸಲು ಯತ್ನ ಎಂದು ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದರು.

ಖರೀದಿ ಮಾಡೋಕೆ ಕಾಂಗ್ರೆಸ್ ಶಾಸಕರು ಕತ್ತೇನಾ,ಕಯದುರೇನಾ:ಸಿ.ಟಿ.ರವಿ ಗರಂ Read More

ದೀಪಾವಳಿಯೊಳಗೆ ಕಾಂಗ್ರೆಸ್‌ ಸರ್ಕಾರ ಉರುಳೋದು‌ ಗ್ಯಾರಂಟಿ-ಸಿ.ಟಿ ರವಿ

ಹುಬ್ಬಳ್ಳಿ: ದೀಪಾವಳಿ ಒಳಗಡೆ ಕಾಂಗ್ರೆಸ್‌ ಸರ್ಕಾರ ಬುದ್ದುಹೋಗೋದು ಗ್ಯಾರಂಟಿ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ ರವಿ ಭವಿಷ್ಯ ನುಡಿದಿದ್ದಾರೆ.

ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಪಾಪದ ಕೊಡ ತುಂಬಿದೆ, ಕಾಂಗ್ರೆಸ್ ಟೈಮ್ ಬಾಂಬ್ ಫಿಕ್ಸ್ ಮಾಡಿದೆ. ಸಿದ್ದರಾಮಯ್ಯ ಜೊತೆಗೆ ಬಂಡೆಯಂತೆ ಜೊತೆಗಿರುತ್ತೇನೆ ಎನ್ನುತ್ತಿರುವವರೇ ಡೇಂಜರ್‌ ಎಂದು ಎಚ್ಚರಿಸಿದ್ದಾರೆ.

ಡಿ.ಕೆ ಶಿವಕುಮಾರ್ ಒಂದು ಬಾಂಬ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಯಾವ ಯಾವ ಬಾಂಬ್ ಇಟ್ಟಿದ್ದಾರೊ ಅವರಿಗೇ ಕೇಳಬೇಕು ಎಂದು ಹೇಳಿದರು

ಕಾಂಗ್ರೆಸ್ ಪಕ್ಷದ ಶಾಸಕರು, ಸಚಿವರು ಮತ್ತು ಮುಖಂಡರು ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧತೆ ನಡೆಸಿದ್ದಾರೆ. ರಾಜೀನಾಮೆಗೆ ಸಮಯವನ್ನೂ ನಿಗದಿಪಡಿಸಿದ್ದಾರೆ. ಅದಕ್ಕೆ ಪೂರಕವಾಗಿ ಕೆಲವು ಸಚಿವರು ತಾವು ಸಹ ಮುಖ್ಯಮಂತ್ರಿ ಆಕಾಂಕ್ಷಿ ಎಂದು ಹೇಳಿಕೆ ನೀಡುತ್ತಿದ್ದಾರೆ ಎಂದು ಸಿ.ಟಿ.ರವಿ ಹೇಳಿದರು.

ವಿವಿಧ ಹಗರಣದಗಳು ಕೇಳಿ ಬಂದಿವೆ ಹಾಗಾಗಿ ಹೆಚ್ಚು ದಿನ ಸಿದ್ದರಾಮಯ್ಯ ಮುಖ್ಯ ಮಂತ್ರಿ ಆಗಿ ಉಳಿಯುವುದಿಲ್ಲ ಎಂದು ತಿಳಿಸಿದರು.

ದೀಪಾವಳಿಯೊಳಗೆ ಕಾಂಗ್ರೆಸ್‌ ಸರ್ಕಾರ ಉರುಳೋದು‌ ಗ್ಯಾರಂಟಿ-ಸಿ.ಟಿ ರವಿ Read More