ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಸಿಎಂ ಗೆ ಮನವಿ

ಮೈಸೂರು: ಈ ಬಾರಿಯ ಜನಗಣತಿಯಲ್ಲಿ ಮಡಿವಾಳ ಸಮುದಾಯದ ಬೇರೆ,ಬೇರೆ ಉಪ ಹೆಸರಿರುವವರೆಲ್ಲರೂ ಮಡಿವಾಳ ಎಂದೇ ನಮೂದಿಸಬೇಕೆಂದು ಮೈಸೂರು ತಾಲೂಕು ಶ್ರೀ ವೀರ ಮಡಿವಾಳ ಸಂಘದ ಅಧ್ಯಕ್ಷ ಸಂತೋಷ್ ಕಿರಾಳು ಅವರು ಮನವಿ ಮಾಡಿದ್ದಾರೆ.

ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ ಎರಡು ಎ ಯಲ್ಲಿ ಗುರುತಿಸಿಕೊಂಡಿರುವ ಮಡಿವಾಳ ಸಮುದಾಯವು ವಿವಿಧ ಜಿಲ್ಲೆಗಳಲ್ಲಿ ವಿವಿಧ ಹೆಸರುಗಳಿಂದ ಗುರುತಿಸಲ್ಪಡುತ್ತಿದೆ,ಹಾಗಾಗಿ ಈ ಬಾರಿಯ ಜನಗಣತಿಯಲ್ಲಿ ಸಮುದಾಯದ ಎಲ್ಲರೂ ಮಡಿವಾಳ ಎಂದೇ ನಮೂದಿಸಬೇಕು ಎಂದು ಅವರು ಕೋರಿದ್ದಾರೆ.

ಈ ರೀತಿಯ ಲೆಕ್ಕಾಚಾರವು ಒಟ್ಟಾರೆ ಜನಸಂಖ್ಯೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಆದ್ದರಿಂದ ನಾವುಗಳೆಲ್ಲರೂ ಒಗ್ಗಟ್ಟಾಗಿ ಒಂದೇ ರೀತಿಯ ಗುರುತಿಸುವಿಕೆಯಿಂದ ಈ ಬಾರಿಯ ಜನಗಣತಿಯಲ್ಲಿ ಮಡಿವಾಳ ಎಂದೇ ನಮೂದಿಸಬೇಕು ಎಂದು ಹೇಳಿದ್ದಾರೆ.

ಮಡಿವಾಳ ಜನಾಂಗವು ದೇಶದ 18 ರಾಜ್ಯ ಹಾಗೂ ಐದು ಕೇಂದ್ರಾಡಳಿತ ಪ್ರದೇಶಗಳಲ್ಲಿ ಈಗಾಗಲೇ ಪರಿಶಿಷ್ಟ ಜಾತಿಯಲ್ಲಿದ್ದು, ಸಿದ್ದರಾಮಯ್ಯ ಅವರ ನೇತೃತ್ವವನ್ನು – ಹಿಂಬಾಲಿಸಿಕೊಂಡು ಬಂದಿರುವ ಮಡಿವಾಳರನ್ನು ಮೊದಲು ಪರಿಶಿಷ್ಟ ಜಾತಿಗೆ ಸೇರಿಸಬೇಕು ಎಂದು ಸಿಎಂ‌ ಅವರಲ್ಲಿ ಸಂತೋಷ್ ಕಿರಾಳು ಕೋರಿದ್ದಾರೆ.

ಈ ಹಿಂದೆ ರಚನೆಯಾಗಿದ್ದ ಆಯೋಗದಲ್ಲಿ ಮೈಸೂರಿನ ಡಾಕ್ಟರ್ ಅನ್ನಪೂರ್ಣಮ್ಮ ಅವರು ಮಡಿವಾಳರ ಸ್ಥಿತಿಗತಿಯನ್ನು ಕುಲಶಾಸ್ತ್ರಅಧ್ಯಯನ ಮಾಡಿ ಇವರನ್ನು ಪರಿಶಿಷ್ಟ ಜಾತಿಗೆ ಸೇರಿಸಬಹುದು ಎಂದು ವರದಿ ನೀಡಿದ್ದಾರೆ.

ರಾಜ್ಯ ಸರ್ಕಾರ ಇದನ್ನು ಪರಿಗಣಿಸಿ ಕೇಂದ್ರಕ್ಕೆ ರವಾನಿಸಿ ನಮ್ಮ – ಸಮಾಜಕ್ಕೆ ನ್ಯಾಯ ಒದಗಿಸಬೇಕೆಂದು ರಾಜ್ಯ ಸರ್ಕಾರವನ್ನು ಅವರು ಒತ್ತಾಯಿಸಿದ್ದಾರೆ.

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಸಿಎಂ ಗೆ ಮನವಿ Read More

ಜಾತಿಗಣತಿಯಲ್ಲಿ ಬ್ರಾಹ್ಮಣ ಸಮಾಜವನ್ನು ವಿಂಗಡಿಸಬೇಡಿ: ಬ್ರಾಹ್ಮಣರ‌ ಮನವಿ

ಮೈಸೂರು: ರಾಜ್ಯದ್ಯಂತ ನಡೆಯುವ ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಬ್ರಾಹ್ಮಣ ಸಮಾಜವನ್ನು ಅನೇಕ ಪಂಗಡಗಳಾಗಿ ವಿಭಜಿಸಿರುವ ಕುರಿತು ಮೈಸೂರು ಜಿಲ್ಲಾ ಬ್ರಾಹ್ಮಣ ಸಂಘ ಹಾಗೂ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಪರಿಷತ್ ಡಿಸಿ ಕಚೇರಿಯಲ್ಲಿ ಆಕ್ಷೇಪಣೆ ಸಲ್ಲಿಸಿವೆ.

ಮೈಸೂರು ನಗರ ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ.ಟಿ ಪ್ರಕಾಶ್ ನೇತೃತ್ವದಲ್ಲಿ ಸಿದ್ದಾರ್ಥ ಲೇಔಟ್ ನಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ ಅಪರ ಜಿಲ್ಲಾಧಿಕಾರಿ
ಶಿವರಾಜು ಅವರಿಗೆ ಈ ಕುರಿತು ಮನವಿ ಸಲ್ಲಿಸಲಾಯಿತು.

ಈ‌ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ
ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ ಟಿ ಪ್ರಕಾಶ್‌ ಅವರು,
ಈ‌ ರೀತಿ ವಿಂಗಡಣೆಯಿಂದ ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದ ಅರ್ಹ ಬ್ರಾಹ್ಮಣರಿಗೆ ಸರ್ಕಾರದ ಸೌಲತ್ತು ತಲುಪುವಲ್ಲಿ ತೊಂದರೆ ಉಂಟಾಗುತ್ತದೆ, ಜೊತೆಗೆ ಸಮಾಜದಲ್ಲಿ ಅಗತ್ಯ ಗೊಂದಲ ಸೃಷ್ಟಿಯಾಗುವ ಸಾಧ್ಯತೆಯಿದೆ ಎಂದು ಹೇಳಿದರು.

ಸಮೀಕ್ಷೆಯಲ್ಲಿ ಬ್ರಾಹ್ಮಣ ಸಮುದಾಯವನ್ನು ವಿವಿಧ ಕ್ರಮಾಂಕಗಳಲ್ಲಿ ಬೇರ್ಪಡಿಸುವ ಬದಲು ಬ್ರಾಹ್ಮಣ ಎಂಬ ಒಂದೇ ಗುರುತನ್ನು( ಕ್ರಮ ಸಂಖ್ಯೆ 210) ಮಾತ್ರ ನೀಡುವಂತೆ ಒತ್ತಾಯಿಸಿದರು.

ಪಟ್ಟಿಯಲ್ಲಿ ಬ್ರಾಹ್ಮಣ ಕ್ರಿಶ್ಚಿಯನ್, ಬ್ರಾಹ್ಮಣ ಮುಸ್ಲಿಂ ಎಂಬೆಲ್ಲಾ ಹೆಸರುಗಳಿರುವುದು ಹೊಸ ಗೊಂದಲಕ್ಕೆ ಕಾರಣವಾಗಿವೆ. ಹೀಗಿರಲು ಸಾಧ್ಯವೇ ಇಲ್ಲ, ತಕ್ಷಣವೇ ಈ ಹೆಸರುಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಪರಿಷತ್ ಮೈಸೂರು ಜಿಲ್ಲಾಧ್ಯಕ್ಷ ಕಡಕೋಳ ಜಗದೀಶ್ ಮಾತನಾಡಿ, ಸಮೀಕ್ಷೆಗೆ ಬಂದಾಗ ಬ್ರಾಹ್ಮಣ ಸಮುದಾಯದವರು ‘ಹಿಂದೂ ಬ್ರಾಹ್ಮಣ’ ಎಂದಷ್ಟೇ ನಮೂದಿಸಬೇಕು ಎಂದು ಹೇಳಿದರು.

ಎಷ್ಟೇ ಕಾಲಂಗಳು ಇರಲಿ, ಅಲ್ಲಿ ಬ್ರಾಹ್ಮಣ ಉಪಪಂಗಡಗಳನ್ನು ನಮೂದಿಸುವ ಅಗತ್ಯ ಇಲ್ಲ. ಉಳಿದಂತೆ ಸಾಮಾಜಿಕ, ಶೈಕ್ಷಣಿಕ ವಿವರ ನೀಡಬೇಕು, ಇದರಿಂದಷ್ಟೇ ಬ್ರಾಹ್ಮಣರ ನಿಜವಾದ ಜನಸಂಖ್ಯೆಯ ವಿವರ, ಅವರ ನೈಜ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ತಿಳಿಯಲು ಸಾಧ್ಯ ಎಂದು ಹೇಳಿದರು

ಈ ಸಂದರ್ಭದಲ್ಲಿ ಹೊಯ್ಸಳ ಕರ್ನಾಟಕ ಸಂಘದ ಅಧ್ಯಕ್ಷರಾದ ಕೆ ಆರ್ ಸತ್ಯನಾರಾಯಣ್, ವಿಪ್ರ ಮುಖಂಡರಾದ ಹರೀಶ್, ನಿರೂಪಕ ಅಜಯ್ ಶಾಸ್ತ್ರಿ ಸೇರಿದಂತೆ ಇನ್ನಿತರ ವಿಪ್ರ ಮುಖಂಡರು ಹಾಜರಿದ್ದರು.

ಜಾತಿಗಣತಿಯಲ್ಲಿ ಬ್ರಾಹ್ಮಣ ಸಮಾಜವನ್ನು ವಿಂಗಡಿಸಬೇಡಿ: ಬ್ರಾಹ್ಮಣರ‌ ಮನವಿ Read More

ಜಾತಿಗಣತಿ ವರದಿ ಊಹಾಪೋಹ ಆಧರಿಸಿ ವಿರೋಧಿಸುವುದು ಸರಿಯಲ್ಲ:ಸಿಎಂ

ನವದೆಹಲಿ: ಜಾತಿಗಣತಿ ವರದಿಯಲ್ಲಿರುವ ಅಂಕಿ ಅಂಶ ಇನ್ನೂ ಸಾರ್ವಜನಿಕವಾಗದೇ, ಊಹಾಪೋಹಗಳು,ಈಗಲೇ ಇದರ ಬಗ್ಗೆ ವಿರೋಧ ಸರಿಯಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಾಳೆ ನಡೆಯಲಿರುವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯ ವಿಷಯವನ್ನು ಮಂಡಿಸುವುದಿಲ್ಲ. ಮುಂದಿನ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ನವದೆಹಲಿಯಲ್ಲಿ ಉದ್ಘಾಟನೆಗೆ ಸಿದ್ದವಾಗಿರುವ ಕನ್ನಡ ಭವನದ ನೂತನ ಕಟ್ಟಡವನ್ನು ವೀಕ್ಷಿಸಿದ ವೇಳೆ ಸಿಎಂ ಮಾಧ್ಯಮದವರೊಂದಿಗೆ ಮಾತನಾಡಿದರು.

ಏಐಸಿಸಿ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಲೋಕಸಭಾ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಏಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರ ಭಾಷಣ ಉತ್ತಮವಾಗಿತ್ತು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಶಂಕುಸ್ಥಾಪನೆಗೊಂಡಿದ್ದ ಕಟ್ಟಡ ಇಂದು ಸುಸಜ್ಜಿತ ಕಟ್ಟಡವಾಗಿ ಉದ್ಘಾಟನೆಗೊಂಡಿದೆ ಎಂದು ತಿಳಿಸಿದರು.

ಆರ್ ಎಸ್ ಎಸ್ ಪ್ರಮುಖ ಮೋಹನ್ ಭಾಗವತ್ ಅವರು ಆಯೋಧ್ಯೆಯ ರಾಮಮಂದಿರ ಪ್ರಾರಂಭವಾದ ದಿನ ದೇಶಕ್ಕೆ ನಿಜ ಅರ್ಥದಲ್ಲಿ ಸ್ವಾತಂತ್ರ್ಯ ಲಭಿಸಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಈ ಬಗ್ಗೆ ರಾಹುಲ್ ಗಾಂಧಿಯವರು ತಮ್ಮ ಭಾಷಣದಲ್ಲಿಯೂ ಪ್ರಸ್ತಾಪಿಸಿದ್ದರು. ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸದೇ ಆರ್ ಎಸ್ ಎಸ್ ಹಾಗೂ ಬಿಜೆಪಿಯವರು ಬ್ರಿಟೀಷರೊಂದಿಗೆ ಶಾಮೀಲಾಗಿದ್ದರು. ಮೋಹನ್ ಭಾಗವತರ ಹೇಳಿಕೆ ಸರಿಯಾದುದಲ್ಲ ಎಂದು ಹೇಳಿದರು.

ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಬದಲಾಗಬೇಕು ಎಂದು ಅಭಿಪ್ರಾಯಪಟ್ಟಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಅವರ ತೀರ್ಮಾನವೇ ಅಂತಿಮ ಎಂದು ತಿಳಿಸಿದರು.

ಕಿಯೋನಿಕ್ಸ್ ಅಸೋಸಿಯೇಷನ್ ‍ಅವರು ಬಾಕಿ ಇರುವ ಬಿಲ್ಲುಗಳು ಪಾವತಿಯಾಗದಿರುವ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಿದ್ದಾರಲ್ಲಾ ಎಂಬ ಮಾಧ್ಯಮದವರ ಪ್ರಶ್ನೆಗೆ, ಹಿಂದಿನ ಬಿಜೆಪಿ ಸರ್ಕಾರದವರು ದೊಡ್ಡ ಮೊತ್ತದ ಬಿಲ್ಲುಗಳನ್ನು ಪಾವತಿ ಮಾಡದೇ ಬಾಕಿ ಉಳಿಸಿದ್ದಾರೆ. ಈ ಬಿಲ್ಲುಗಳನ್ನು ಹಂತ ಹಂತವಾಗಿ ಪಾವತಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿದ್ದರಾಮಯ್ಯ ಉತ್ತರಿಸಿದರು.

ಜಾತಿಗಣತಿ ವರದಿ ಊಹಾಪೋಹ ಆಧರಿಸಿ ವಿರೋಧಿಸುವುದು ಸರಿಯಲ್ಲ:ಸಿಎಂ Read More

ಸಿಎಂ ಕುರ್ಚಿಗೆ ಕಂಟಕ ಬಂದಾಗೆಲ್ಲಾ ಜಾತಿ ಜನಗಣತಿ ನೆನಪಾಗುತ್ತೆ-ಅಶೋಕ್ ಟೀಕೆ

ಬೆಂಗಳೂರು: ಸಂಕಟ ಬಂದಾಗ ವೆಂಕಟರಮಣ ಎಂಬಂತೆ ಸಿಎಂ ಸಿದ್ದರಾಮಯ್ಯ ನವರಿಗೆ ತಮ್ಮ ಕುರ್ಚಿಗೆ ಕಂಟಕ ಬಂದಾಗಲೆಲ್ಲಾ ಜಾತಿ ಜನಗಣತಿ ನೆನಪಾಗುತ್ತದೆ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಜಾತಿ ಜನಗಣತಿ ಬಗ್ಗೆ ಬಿಜೆಪಿಗಾಗಲೀ ಅಥವಾ ವೈಯಕ್ತಿಕವಾಗಿ ನನಗಾಗಲಿ ಯಾವ ತಕರಾರು ಇಲ್ಲ ಅಥವಾ ವಿರೋಧವೂ ಇಲ್ಲ. ಬಿಜೆಪಿಯ ಮೂಲಸಿದ್ಧಾಂತವಾದ ‘ಅಂತ್ಯೋದಯ’ದ ಪರಿಕಲ್ಪನೆಯಲ್ಲೇ ತಳ ಸಮುದಾಯಗಳನ್ನ ರಾಜಕೀಯವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂಬ ಸಾಮಾಜಿಕ ನ್ಯಾಯದ ಬದ್ಧತೆ ಅಡಗಿದೆ. ಅದನ್ನ ಸಾಕಾರಗೊಳಿಸುವ ಯಾವ ಪ್ರಾಮಾಣಿಕ ಪ್ರಯತ್ನಕ್ಕಾದರೂ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ ಎಂದು ಅವರು ಟ್ವೀಟ್ ಮಾಡಿ ಹೇಳಿದ್ದಾರೆ.

ಆದರೆ ರಾಜಕೀಯ ಚದುರಂಗದಾಟದಲ್ಲಿ ಜಾತಿ ಜನಗಣತಿಯನ್ನು ದಾಳವಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ವಿರೋಧವಿದೆ. ರಾಜಕೀಯ ಹಾವು-ಏಣಿ ಆಟದಲ್ಲಿ ಕೆಳಗೆ ಬಿದ್ದಾಗ ಮೇಲೇಳಲು, ಕುರ್ಚಿ ಉಳಿಸಿಕೊಳ್ಳಲು ಜಾತಿಗಣತಿಯನ್ನ ಏಣಿಯಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ತಕರಾರಿದೆ ಎಂದು ತಿಳಿಸಿದ್ದಾರೆ.

ನಾಳಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿ ಚರ್ಚೆಯಾಗುತ್ತಿದೆ ಎಂಬ ಸುದ್ದಿಗಳು ಹರಿದಾಡುತ್ತಿರುವ ಹಿನ್ನಲೆಯಲ್ಲಿ ಸಿದ್ದರಾಮಯ್ಯನವರ ಆತ್ಮಸಾಕ್ಷಿಗೆ ಕೆಲವು ಪ್ರಶ್ನೆಗಳನ್ನು ಕೇಳಿದ್ದೇನೆ ಎಂದು ಹೇಳಿದ್ದಾರೆ

ತಮಗೆ ನಿಜವಾಗಿಯೂ ಜಾತಿಗಣತಿಯ ಬಗ್ಗೆ ಬದ್ಧತೆ ಇದ್ದಿದ್ದರೆ, 2018ರಲ್ಲೇ ಕಾಂತರಾಜು ವರದಿಯನ್ನ ಏಕೆ ಸ್ವೀಕರಿಸಿ ಜಾರಿ ಮಾಡಲಿಲ್ಲ.

ಹತ್ತು ವರ್ಷಗಳ ಹಿಂದೆ ಕೈಗೊಂಡ ಜಾತಿ ಜನಗಣತಿ ವೈಜ್ಞಾನಿಕವಾಗಿ ನಡೆದಿಲ್ಲ, ಅನೇಕ ಜನರ ಮನೆಗಳಿಗೆ ಭೇಟಿಯೇ ನೀಡಿಲ್ಲ ಎಂಬ ದೂರುಗಳಿವೆ. ಹೀಗಿರುವಾಗ ಈ ವರದಿಯನ್ನ ಈಗ ಮುನ್ನೆಲೆಗೆ ತರುವ ತರಾತುರಿ ಏಕೆ

ಈ ಅವೈಜ್ಞಾನಿಕ ಜಾತಿ ಜನಗಣತಿ ವರದಿ ಸ್ವೀಕರಿಸದಂತೆ ಒಕ್ಕಲಿಗರ ಸಂಘ ಮನವಿ ಸಲ್ಲಿಸಿದೆ. ಇದನ್ನ ಬೆಂಬಲಿಸಿ ಸ್ವತಃ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರೇ ಸಹಿ ಮಾಡಿದ್ದಾರೆ. ತಮ್ಮದೇ ಪಕ್ಷದ ಹಿರಿಯ ನಾಯಕರು, ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪನವರೂ ಸಹ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಅನೇಕ ಮಠಾಧೀಶರು, ಧಾರ್ಮಿಕ ಮುಖಂಡರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಿರುವಾಗ ಕಳೆದ 20 ತಿಂಗಳಿನಿಂದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಂದು ಸರ್ವ ಸಮ್ಮತವಾದ ನಿಲುವಿಗೆ ಬರುವ ಬದಲು ಈಗ ದಿಢೀರನೆ ವರದಿಯನ್ನ ಸಂಪುಟ ಸಭೆಯಲ್ಲಿ ಚರ್ಚೆಗೆ ಎತ್ತಿಕೊಳ್ಳುತ್ತಿರುವುದು ಯಾವ ಕಾರಣಕ್ಕೆ

ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಆಗಿದೆ ಎನ್ನಲಾದ ಅಧಿಕಾರ ಹಂಚಿಕೆ ಒಪ್ಪಂದವನ್ನ ಹೇಗಾದರೂ ಮಾಡಿ ಮುಂದೂಡಲು, ಅಧಿಕಾರ ಹಂಚಿಕೆ ಒಪ್ಪಂದದಿಂದ ತಪ್ಪಿಸಿಕೊಳ್ಳಲು ಜಾತಿ ಜನಗಣತಿ ವರದಿಯನ್ನು ತಂತ್ರವಾಗಿ ಬಳಸಿಕೊಳ್ಳಲಾಗುತ್ತಿದೆಯೇ ಹೀಗೆ ಹಲವು ಪ್ರಶ್ನೆಗಳನ್ನು ಅಶೋಕ್ ಮಾಡಿದ್ದಾರೆ.

ಜನವರಿ 16ರಂದು ನಡೆಯುವ ಸಂಪುಟ ಸಭೆಗೂ ಮುನ್ನ ಮುಖ್ಯಮಂತ್ರಿಗಳ ‘ಆತ್ಮಸಾಕ್ಷಿ’ ಈ ಪ್ರಶೆಗಳನ್ನ ಆತ್ಮಾವಲೋಕನ ಮಾಡಿಕೊಂಡು ಕರ್ನಾಟಕದ ಜನತೆಗೆ ಉತ್ತರ ನೀಡುತ್ತದೆ ಎಂದು ನಿರೀಕ್ಷಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಸಿಎಂ ಕುರ್ಚಿಗೆ ಕಂಟಕ ಬಂದಾಗೆಲ್ಲಾ ಜಾತಿ ಜನಗಣತಿ ನೆನಪಾಗುತ್ತೆ-ಅಶೋಕ್ ಟೀಕೆ Read More

ಮುಡಾ ಹಗರಣ ಮುಚ್ಚಿ ಹಾಕಲು ಜಾತಿಗಣತಿ ನಾಟಕ; ಹೆಚ್.ಡಿ.ಕೆ ಆರೋಪ

ಬೆಂಗಳೂರು: ಮೂಡಾ ಹಗರಣದಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಜಾತಿಗಣತಿ ವಿಷಯವನ್ನು ಮುನ್ನಲೆಗೆ ತಂದು ನಾಟಕ ಆಡಲಾಗುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿ ದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಸರ್ಕಾರದ ವಿರುದ್ಧ ಗುರುತರ ಆರೋಪಗಳು ಕೇಳಿ ಬಂದಾಗಲೆಲ್ಲ ಜನರ ಗಮನ ಬೇರೆಡೆಗೆ ಸೆಳೆಯಲು ತಂತ್ರಗಾರಿಕೆ ಮಾಡುತ್ತಿದ್ದಾರೆ. ಈಗ ಮೂಡಾ ಹಗರಣದಲ್ಲೂ ಇದೇ ಕಥೆ ಎಂದು ಟೀಕಿಸಿದರು

ಕಾಂತರಾಜು ಆಯೋಗ ರಚನೆ ಮಾಡಿದ್ದು 10 ವರ್ಷಗಳ ಹಿಂದೆ,ಈಗ ಅ ವರದಿಗೆ 10 ವರ್ಷ ಆಗಿದೆ,ಇಷ್ಟರಲ್ಲಿ ಅನೇಕ ಬೆಳವಣಿಗೆಗಳು ಆಗಿವೆ. ಹಳೆಯ ಜಾತಿಗಣತಿ ವರದಿಯನ್ನು ಇಷ್ಟು ದಿನ ಯಾಕೆ ಬಿಡುಗಡೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.

ಕುಮಾರಸ್ವಾಮಿ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡಲು ಬಿಡಲಿಲ್ಲ ಎಂದು ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ, ಲೋಕಸಭೆ ಚುನಾವಣೆಗೆ ಮೊದಲೇ ಸಿದ್ದರಾಮಯ್ಯ ಅವರ ಕೈಗೆ ಜಾತಿಗಣತಿ ವರದಿ ಕೊಡಲಾಗಿದೆ, ಅಲ್ಲವೇ,ಆದರೂ ಇಷ್ಟು ದಿನ ಅದರ ಬಗ್ಗೆ ಸದ್ದೇ ಇರಲಿಲ್ಲ ಎಂದು ವ್ಯಂಗ್ಯವಾಡಿದರು.

ಜಾತಿಗಣತಿ ವರದಿ ಇಟ್ಟುಕೊಂಡು ರಾಜಕೀಯ ಮಾಡುತ್ತೀರಿ, ಈ ವಿಷಯ ಇಟ್ಟುಕೊಂಡು ಚುನಾವಣೆ ಹೋಗಿ ನೋಡೋಣ ಎಂದು ಕಾಂಗ್ರೆಸ್ ನಾಯಕರಿಗೆ ಕುಮಾರಸ್ವಾಮಿ ಸವಾಲು ಹಾಕಿದರು.

ಸರ್ಕಾರ ಹೋದರೆ ಹೋಗಲಿ, ಜಾತಿಗಣತಿ ಜಾರಿ ಮಾಡಿ ಎಂಬ ಬಿ.ಕೆ. ಹರಿಪ್ರಸಾದ್‌ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು; ಜಾತಿಗಣತಿ ವಿಷಯ ಇಟ್ಟುಕೊಂಡು ಸರ್ಕಾರ ವಿಸರ್ಜನೆ ಮಾಡಿ ಚುನಾವಣೆಗೆ ಹೋಗಿ ನೋಡೋಣ. ಹರಿಪ್ರಸಾದ್‌ ಅವರು ಈ ರೀತಿ ಹೇಳುವುದು ಏನಿದೆ? ಅದರ ಬದಲು ವಿಧಾನಸಭೆಯನ್ನು ವಿಸರ್ಜನೆ ಮಾಡಿ ಚುನಾವಣೆಗೆ ಹೋಗಿ ಎಂದು ಕುಮಾರಸ್ವಾಮಿ ಸವಾಲು ಹಾಕಿದರು.

ಮುಡಾ ಹಗರಣ ಮುಚ್ಚಿ ಹಾಕಲು ಜಾತಿಗಣತಿ ನಾಟಕ; ಹೆಚ್.ಡಿ.ಕೆ ಆರೋಪ Read More