ಸೈಬರ್ ಅಪರಾಧ ತಡೆಗೆ ಜಾಗೃತಿ ಅಗತ್ಯ-ಮಹೇಶ್ ಸಿ ಎನ್
ಮೈಸೂರು: ಸಾಮಾಜಿಕ ಜಾಲತಾಣ ಬಳಸುವ ವಿದ್ಯಾರ್ಥಿಗಳು ಹಾಗೂ ಯುವ ಸಮೂಹ ಸೈಬರ್ ಅಪರಾಧಗಳ ಬಗ್ಗೆ ಜಾಗೃತರಾಗಿರಬೇಕು ಎಂದು
ಮೈಸೂರು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸ್ ಠಾಣೆ ಮುಖ್ಯಪೇದೆ ಮಹೇಶ್ ಸಿ ಎನ್ ತಿಳಿಹೇಳಿದರು.
ವಿದ್ಯಾರಣ್ಯಪುರಂ ನಲ್ಲಿರುವ ವಿದ್ಯಾರಣ್ಯ ಕೋಚಿಂಗ್ ಸೆಂಟರ್ ನಲ್ಲಿ ಅಖಿಲ ಭಾರತೀಯ ಗ್ರಾಹಕ ಪಂಚಾಯತ್, ಮೈಸೂರು ಘಟಕದ ವತಿಯಿಂದ
ಶುಕ್ರವಾರ ಆಯೋಜಿಸಿದ್ದ ಸೈಬರ್ ಸುರಕ್ಷತೆ ಮತ್ತು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದಿನದಿಂದ ದಿನಕ್ಕೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚುತ್ತಿವೆ. ಸೈಬರ್ ಅಪರಾಧಿಗಳು ಅಮಾಯಕ ಜನರ ಬ್ಯಾಂಕ್ ಖಾತೆಗಳಿಗೆ ಕನ್ನ ಹಾಕಲು ಹೊಂಚುಹಾಕಿ ಕುಳಿತಿರುತ್ತಾರೆ. ಅಪರಾಧಗಳ ಕುರಿತು ಆತಂಕಗೊಳ್ಳುವ ಬದಲು ಪಾಸ್ವರ್ಡ್ ಭದ್ರತೆ ಕುರಿತು ಸದಾ ಜಾಗೃತರಾಗಿರಬೇಕು ಎಂದು ಸಲಹೆ ನೀಡಿದರು.
ಬ್ಯಾಂಕ್ಗಳ ಹೆಸರಿನಲ್ಲಿ ಒಟಿಪಿ ಮಾಹಿತಿ ಪಡೆದುಕೊಳ್ಳುವ ಮೂಲಕ ಬ್ಯಾಂಕ್ ಖಾತೆಗಳಲ್ಲಿನ ಸೈಬರ್ ಅಪರಾಧಿಗಳು ಹಣ ದೋಚುತ್ತಾರೆ. ಅಪರಿಚಿತ ವ್ಯಕ್ತಿಗಳು ಕರೆಮಾಡಿದರೆ ಮಾಹಿತಿ ಹಂಚಿಕೊಳ್ಳಬೇಡಿ. ಬ್ಯಾಂಕ್ ಸಿಬ್ಬಂದಿ ಯಾವುದೇ ಕಾರಣಕ್ಕೂ ಮೊಬೈಲ್ ಕರೆಮಾಡಿ ಮಾಹಿತಿ ಕೇಳುವುದಿಲ್ಲ, ಇದು ಅಪರಾಧಿಗಳ ಕೃತ್ಯವಾಗಿರುತ್ತದೆ ಎಂದು ಮಹೇಶ್ ಸಿ ಎನ್ ಎಚ್ಚರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕದ ಅಧ್ಯಕ್ಷರಾದ ಸಿ ಎಸ್ ಚಂದ್ರಶೇಖರ್ ಮಾತನಾಡಿ, ತಂತ್ರಜ್ಞಾನ, ಸಾಮಾಜಿಕ ಜಾಲತಾಣಗಳ ಬಳಕೆಯಲ್ಲಿ ವಿದ್ಯಾರ್ಥಿ, ಯುವ ಸಮೂಕ ಮುಂಚೂಣಿಯಲ್ಲಿದೆ. ಬಳಕೆಯ ಸುರಕ್ಷತೆಯ ಬಗ್ಗೆ ಜಾಗೃತರಾಗಿರಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ವಿಕ್ರಮ್ ಅಯ್ಯಂಗಾರ್,ರಾಜ್ಯ ವಿದ್ಯಾ ವರ್ಗದ ಸಂಚಲಕರದ ಡಾ. ಜಿ ವಿ ರವಿಶಂಕರ್,
ಶಿಕ್ಷಕರಾದ ಧನುಷ್, ಶ್ವೇತ ಮತ್ತಿತರರು ಹಾಜರಿದ್ದರು.