ಕುಂತೂರು ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಕೃಷ್ಣಮೂರ್ತಿ ಚಾಲನೆ

(ವರದಿ:ಸಿದ್ದರಾಜು,ಕೊಳ್ಳೇಗಾಲ)

ಕೊಳ್ಳೇಗಾಲ: ತಾಲ್ಲೂಕಿನ ಕುಂತೂರು ಗ್ರಾ.ಪಂ.ವ್ಯಾಪ್ತಿಯ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎ.ಆರ್.ಕೃಷ್ಣಮೂರ್ತಿಯವರು ಚಾಲನೆ ನೀಡಿದರು.

ಮಲ್ಲಹಳ್ಳಿಮಾಳ ಗ್ರಾಮದಲ್ಲಿ ನಿರ್ಮಾಣವಾಗಿರುವ ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ ನೂತನ ಕಟ್ಟಡ ಉದ್ಘಾಟನೆ ಹಾಗೂ ಕುಂತೂರು ಮೋಳೆ ಗ್ರಾಮದಲ್ಲಿ ನಿರ್ಮಾಣವಾಗಿರುವ ಭಗೀರಥ ಉಪ್ಪಾರ ಸಮುದಾಯ ಭವನ ನೂತನ ಕಟ್ಟಡ ಉದ್ಘಾಟನೆ ಹಾಗೂ ಕುಂತೂರು ಗ್ರಾಮದಲ್ಲಿ 10 ಲಕ್ಷ ವೆಚ್ಚದಲ್ಲಿ ಅಂಬೇಡ್ಕರ್ ಭವನ ಮುಂದುವರೆದ ಕಾಮಗಾರಿಗಳಿಗೆ ಶಾಸಕರು ಗುದ್ದಲಿಪೂಜೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಶಾಸಕರು ಕ್ಷೇತ್ರದ ಜನತೆಯ ಆಶೀರ್ವಾದದಿಂದ ನಾನು ಶಾಸಕನಾಗಿ ಆಯ್ಕೆಯಾದ ಮೇಲೆ ಸರ್ಕಾರದಿಂದ ಮೊದಲ ಬಾರಿಗೆ 25 ಕೋಟಿ ಅನುದಾನವನ್ನು ತಂದು ಅದರಲ್ಲಿ ಕ್ಷೇತ್ರದ ಎಲ್ಲಾ ಸಮುದಾಯದ ಎಲ್ಲಾ ವರ್ಗದ ಸಮುದಾಯಗಳ ಅಪೂರ್ಣ ಹಂತದಲ್ಲಿದ್ದ ಸಮುದಾಯ ಭವನಗಳ ಮುಂದುವರಿದ ಕಾಮಗಾರಿಗೆ ನೀಡಲಾಗಿತ್ತು ಎಂದು ತಿಳಿಸಿದರು.

ಅಂಬೇಡ್ಕ‌ರ್ ಭವನ, ಬಸವ ಭವನ, ಭಗೀರಥ ಭವನ, ವಾಲ್ಮೀಕಿ ಭವನ, ಕನಕ ಭವನ,ಶಾಧಿ ಮಹಲ್, ಕ್ರಿಶ್ಚಿಯನ್ ಸಮುದಾಯ ಭವನ, ಮಡಿವಾಳ ಭವನ ಈಗೆ ಎಲ್ಲಾ ವರ್ಗದ ಭವನಗಳ ಮುಂದುವರಿದ ಕಾಮಗಾರಿಗಳಿಗೆ 20 ಲಕ್ಷ 30 ಲಕ್ಷ 50 ಲಕ್ಷ, ಒಂದು ಕೋಟಿ ವರೆಗೂ ಅನುದಾನವನ್ನು ಕೊಡಲಾಗಿದೆ, ಕ್ಷೇತ್ರದಲ್ಲಿ ಎಲ್ಲಾ ಸಮುದಾಯದ ಜನರು ನನಗೆ ಮತ ನೋಡಿ ನನ್ನ ಗೆಲುವಿಗೆ ಸಹಕರಿಸಿದ್ದಾರೆ ಎಂದು ಕೃತಜ್ಞತೆ ಸಲ್ಲಿಸಿದರು.

ಈಗ 50 ಕೋಟಿ ಅನುದಾನವನ್ನು ಕೊಟ್ಟು ಸರ್ಕಾರ ರಸ್ತೆ ಅಭಿವೃದ್ಧಿಗೆ ಬಳಸಿಕೊಳ್ಳಬೇಕು ಎಂದು ಆದೇಶವನ್ನು ನೀಡಿತ್ತು ಆದ್ದರಿಂದ ಲೋಕೋಪಯೋಗಿ ಇಲಾಖೆ, ಕೆ. ಆ‌ರ್. ಐ. ಡಿ. ಎಲ್, ಜಿಲ್ಲಾ ಪಂಚಾಯತ್ ಇಲಾಖೆಗಳಿಗೆ ಸಂಬಂಧ ಪಟ್ಟ ರಸ್ತೆಗಳು ಕ್ಷೇತ್ರದಲ್ಲಿ ಎಲ್ಲಾ ಗ್ರಾಮಗಳ ಎಲ್ಲಾ ಸಮುದಾಯದ ಬೀದಿಗಳಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ನೀಡಿ ಭೂಮಿ ಪೂಜೆಯನ್ನು ನೆರವೇರಿಸಲಾಗಿದೆ ಹಾಗೂ ಮುಡಿಗುಂಡ ಸೇತುವೆ ಹಳೆಯದಾಗಿದ್ದು ಪಕ್ಕದಲ್ಲಿ ಮತ್ತೊಂದು ಸೇತುವೆ ನಿರ್ಮಾಣ ಮಾಡಲು 15 ಕೋಟಿ ಅನುಮೋದನೆ ದೊರೆತಿದೆ ಎಂದು ಹೇಳಿದರು.

ಕೊಳ್ಳೇಗಾಲದಲ್ಲಿ 250 ಹಾಸಿಗೆಯ ಆಸ್ಪತ್ರೆ ನಿರ್ಮಾಣ ಮಾಡಲು ಮುಡಿಗುಂಡ ರೇಷ್ಮೆ ಇಲಾಖೆ ಜಾಗದಲ್ಲಿ ಸ್ಥಳ ನಿಗದಿ ಮಾಡಲಾಗಿದ್ದು ಸದ್ಯದಲ್ಲಿಯೇ ಮುಖ್ಯಮಂತ್ರಿಗಳಿಂದ ಕೊಳ್ಳೇಗಾಲದ ಅಂಬೇಡ್ಕರ್ ಸಮುದಾಯ ಉದ್ಘಾಟನೆ ಹಾಗೂ ಆಸ್ಪತ್ರೆ ನಿರ್ಮಾಣ ಮತ್ತು ಸೇತುವೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಲಾಗುವುದು ಎಂದು ಎ.ಆರ್.ಕೃಷ್ಣಮೂರ್ತಿ ಮಾಹಿತಿ ನೀಡಿದರು.

ಈ ಸಂಧರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಚಂದ್ರು, ತಾಲ್ಲೂಕು ಅಧ್ಯಕ್ಷ ರಾಜೇಂದ್ರ, ಯಳಂದೂರು ತಾಲ್ಲೂಕು ಅಧ್ಯಕ್ಷ ಪ್ರಭುಪ್ರಸಾದ್, ಉಪ್ಪಾರ ನಿಗಮ ಮಾಜಿ ರಾಜ್ಯಾಧ್ಯಕ್ಷ ಶಿವಕುಮಾರ್, ಕುಂತೂರು ಗ್ರಾ.ಪಂ ಅಧ್ಯಕ್ಷೆ ಗಂಗಮ್ಮಣಿ, ಉಪಾಧ್ಯಕ್ಷೆ ನಾಗರತ್ನಮ್ಮ, ಉಪ್ಪಾರ ಸಂಘದ ಅಧ್ಯಕ್ಷ ರಮೇಶ್, ತಾ.ಪಂ ಮಾಜಿ ಉಪಾಧ್ಯಕ್ಷ ಮಲ್ಲಣ್ಣ, ಮುಖಂಡರಾದ ತೋಟೇಶ್, ಚೇತನ್ ದೊರೆ, ತಾ.ಪಂ ಇಒ ಗುರುಶಾಂತಪ್ಪ ಬೆಳ್ಳುಂಡಗಿ, ನಿರ್ಮಿತಿ ಕೇಂದ್ರ ಉಪಯೋಜನಾ ವ್ಯವಸ್ಥಾಪಕ ಪ್ರತಾಪ್, ಗುತ್ತಿಗೆದಾರ ರಾಚಯ್ಯ ಮತ್ತಿತರರು ಹಾಜರಿದ್ದರು.

ಕುಂತೂರು ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಕೃಷ್ಣಮೂರ್ತಿ ಚಾಲನೆ Read More

1.20 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಎ.ಆರ್.ಕೃಷ್ಣಮೂರ್ತಿ ಗುದ್ದಲಿ ಪೂಜೆ

(ವರದಿ:ಸಿದ್ದರಾಜು,ಕೊಳ್ಳೇಗಾಲ)

ಕೊಳ್ಳೇಗಾಲ: ತಾಲ್ಲೂಕಿನ ಸಿದ್ದಯ್ಯನಪುರ ಹಾಗೂ ತಿಮ್ಮರಾಜೀಪುರ ಗ್ರಾ.ಪಂ ವ್ಯಾಪ್ತಿಯಲ್ಲಿ ಸುಮಾರು 1.20 ಕೋಟಿ ರೂ. ವೆಚ್ಚದ ವಿವಿದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಗುದ್ದಲಿಪೂಜೆ ನೆರವೇರಿಸಿದರು.

ತಾಲ್ಲೂಕಿನ ಸಿದ್ದಯ್ಯನಪುರ ಗ್ರಾಮದಲ್ಲಿ ಅಲ್ಪಸಂಖ್ಯಾತರ ಇಲಾಖೆಯ ಅನುದಾನ
50 ಲಕ್ಷ ರೂ ವೆಚ್ಚದಲ್ಲಿ ಅರುಣೋದಯ ಚರ್ಚ್ ನ ಮುಂದುವರೆದ ಅಭಿವೃದ್ಧಿ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು 2008 ರಲ್ಲಿ ನಾನು ಭೇಟಿ ಕೊಟ್ಟಿದ್ದಾಗ ಅರುಣೋದಯ ಚರ್ಚ್ ಮಟ್ಟಾಳೆ ಶೆಡ್ ನಲ್ಲಿ ಸೇವಾಕಾರ್ಯಗಳು ನಡೆಯುತ್ತಿದ್ದವು, ಈ ಚರ್ಚ್ ಗೆ ಅನುದಾನ ನೀಡಿ ಅಭಿವೃದ್ಧಿಪಡಿಸಬೇಕೆಂದು ಆಗಲೇ ಅಂದುಕೊಂಡಿದ್ದೆ ಎಂದು ತಿಳಿಸಿದರು.

ಈಗ 2025 ಸುಮಾರು 17 ವರ್ಷಗಳ ನಂತರ ಇಲ್ಲಿಗೆ ಬಂದಿದ್ದೇನೆ ನಾನು ಶಾಸಕನಾಗಿ ಎರಡು ವರ್ಷ ತುಂಬಿದೆ, ಕ್ಷೇತ್ರಕ್ಕೆ 25 ಕೋಟಿ ಅನುದಾನ ನೀಡಿದ್ದು ಎಲ್ಲಾ ಜನಾಂಗ, ಎಲ್ಲಾ ಸಮುದಾಯದ ಅಭಿವೃದ್ಧಿಗೆ ವಿನಿಯೋಗಿಸಲಾಗುತ್ತದೆ.

50 ಲಕ್ಷ ರೂಗಳನ್ನು ಈ ಕೃಷ್ಣ ಮುಂದುವರಿದ ಕಾಮಗಾರಿಗೆ ನೀಡಿದ್ದೇನೆ. ನಿಮ್ಮ ಚರ್ಚ್ ಅಲ್ಲದೆ ಲೂಥರನ್ ಚರ್ಚ್ ಗೂ ಅನುದಾನ ನೀಡಿದ್ದೇವೆ. ನಾನು ಸಹ ಕ್ರೈಸ್ತ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ ಪಡೆದವನು. ನಾನು ಬೆಂಗಳೂರಿನಲ್ಲಿ ಓದುವಾಗ ಕ್ರೈಸ್ತ ಮಿಷಿನರಿಯಲ್ಲಿ ಶಿಕ್ಷಣ ಪಡೆದಿದ್ದೇನೆ. ಕ್ರೈಸ್ತ ಸಮುದಾಯದ ಅಭಿವೃದ್ಧಿಗೆ ಸಹಕರಿಸುತ್ತೇನೆ ಎಂದು ತಿಳಿಸಿದರು.

ನಂತರ ಪ ಜಾತಿ ಬೀದಿಯಲ್ಲಿ 6 ಲಕ್ಷ ರೂ ಹಾಗೂ ಕುರುಬ ಸಮುದಾಯ ಬೀದಿಯಲ್ಲಿ 10 ಲಕ್ಷ ರೂ ವೆಚ್ಚದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ, ಲಕ್ಕರಸನಪಾಳ್ಯ ಗ್ರಾಮದಲ್ಲಿ 20 ಲಕ್ಷ ರೂ ವೆಚ್ಚದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿ, ತಿಮ್ಮರಾಜೀಪುರ ಗ್ರಾಮದಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಯ ಅನುದಾನ 20 ಲಕ್ಷ ರೂಗಳ ವೆಚ್ಚದಲ್ಲಿ ಬಸವ ಭವನ ನಿರ್ಮಾಣ ಕಾಮಗಾರಿ ಹಾಗೂ 10 ಲಕ್ಷ ರೂಗಳ ವೆಚ್ಚದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿ, ಹಿತ್ತಲದೊಡ್ಡಿ ಗ್ರಾಮದಲ್ಲಿ 5 ಲಕ್ಷ ರೂ ವೆಚ್ಚದಲ್ಲಿ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.

ಈ ಅರುಣೋದಯ ಚರ್ಚ್ ಫಾದರ್ ಅಮಲ್ ದಾಸ್, ಧರ್ಮ ಪ್ರಚಾರಕ ಜೆರುಬಾಬಲ್, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕುಂತೂರು ರಾಜೇಂದ್ರ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್, ನಗರ ಸಭೆ ಮಾಜಿ ಅಧ್ಯಕ್ಷರುಗಳಾದ ಉಮೇಶ್ ಬಸ್ತಿಪುರ ಶಾಂತರಾಜು, ಸದಸ್ಯರುಗಳಾದ ಜಿ.ಎಂ.ಸುರೇಶ್, ಸ್ವಾಮಿನಂಜಪ್ಪ,
ದೇವಾನಂದ್, ಇ.ಒ.ಗುರುಶಾಂತಪ್ಪ ಬೆಳ್ಳುಂಡಗಿ, ಕೆ.ಆರ್.ಐ.ಡಿ.ಎಲ್ ಸಹಾಯಕ ಕಾರ್ಯ ಪಾಲಕ ಅಭಿಯಂತರ ಚಿಕ್ಕಲಿಂಗಯ್ಯ, ಜೆಇ ಕಾರ್ತಿಕ್, ನಿರ್ಮಿತಿ ಕೇಂದ್ರದ ಜೆ.ಇ.ಪ್ರತಾಪ್, ಗುತ್ತಿಗೆದಾರ ಪುಟ್ಟಸ್ವಾಮಿ, ಸಿದ್ದಯ್ಯನಪುರ ಗ್ರಾ.ಪಂ.ಅಧ್ಯಕ್ಷೆ ಶಾಂತಮ್ಮ, ಸದಸ್ಯೆ ಲಕ್ಮೀ, ಪಿಡಿಒ ಶಿವಮೂರ್ತಿ, ತಿಮ್ಮರಾಜೀಪುರ ಗ್ರಾ.ಪಂ.ಅಧ್ಯಕ್ಷೆ ರಶ್ಮಿರಾಜು, ಉಪಾಧ್ಯಕ್ಷೆ ಸಹನಪ್ರಿಯ, ಸದಸ್ಯರಾದ ಕೆಂಪರಾಜು, ಕುಮಾರ್, ಫಿಲಿಪ್ ಮೋಹನ್ ಕುಮಾರ್, ತಾ.ಪಂ.ಮಾಜಿ ಸದಸ್ಯ ಮರಿಸ್ವಾಮಿ ಮತ್ತಿತರರು ಭಾಗವಹಿಸಿದ್ದರು.

1.20 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಎ.ಆರ್.ಕೃಷ್ಣಮೂರ್ತಿ ಗುದ್ದಲಿ ಪೂಜೆ Read More

ಶ್ರೀ ಉತ್ತರಾದಿ ಮಠ:ವಿವಿಧ ಕಾಮಾಗಾರಿಗಳಿಗೆ ಭೂಮಿ ಪೂಜೆ

ಮೈಸೂರು, ಏ.7: ಮೈಸೂರಿನ ಯಾದವ ಗಿರಿಯಲ್ಲಿರುವ ಶ್ರೀ ಉತ್ತರಾದಿ ಮಠ
ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಹಾಗೂ ಶ್ರೀಸತ್ಯಪ್ರಮೋದ ಕಲ್ಯಾಣಮಂಟಪದಲ್ಲಿ
ವಿವಿಧ ಕಾಮಾಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲಾಯಿತು.

ಭಕ್ತಾದಿಗಳಿಗೆ ಅನುಕೂಲವಾಗುವಂತೆ ಅಂದಾಜು 70 ಲಕ್ಷದ ವೆಚ್ಚದ ಪೂಜಾ ಹಾಲ್, ಒಂದು ಹೋಮ ಶಾಲೆ, ಸಾರ್ವಜನಿಕರ ಅನುಕೂಲಕ್ಕಾಗಿ ಆರು ಸುಸಜ್ಜಿತ ಕೊಠಡಿಗಳ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಯಿತು.

ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶ್ರೀಜಯತೀರ್ಥ ವಿದ್ಯಾಪೀಠ ಪ್ರಾಂಶುಪಾಲರಾದ ಪಂ. ಡಾ|| ಸತ್ಯಧ್ಯಾನಾಚಾರ್ಯ ಕಟ್ಟಿ ಅವರು,
ದೇವರ ಸನ್ನಿಧಾನಕ್ಕೆ ಬರುವಾಗ ಶುದ್ಧ ಮನಸ್ಸು, ಸೇವಾ ಮನೋಭಾವದಿಂದ ಬಂದರೆ ಖಂಡಿತ ಉತ್ತಮ ಫಲ ಸಿಕ್ಕೇ ಸಿಗುತ್ತದೆ ಎಂದು ಹೇಳಿದರು.

ದೇವಸ್ಥಾನದ ಅಭಿವೃದ್ಧಿಗೆ ಕೈಜೋಡಿಸಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿಗೆ ಸಹಾಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಶ್ರೀಮಠದ ಆಡಳಿತಾಧಿಕಾರಿಗಳು ಪಂ. ಶ್ರೀ ವಿದ್ಯಾಧೀಶಾಚಾರ್ಯ ಗುತ್ತಲ್,
ಶ್ರೀಮದುತ್ತರಾದಿ ಮಠ ವ್ಯವಸ್ಥಾಪಕರಾದ ಪಂ. ಶ್ರೀ ಅನಿರುದ್ದಾಚಾರ್ಯ ಪಾಂಡುರಂಗಿ, ಅನಿಲ್ ಕೆಂಭಾವಿ, ಎ ಎಸ್ ಮೂರ್ತಿ,ಎಸ್‌. ಬಿ ವಾಸುದೇವಮೂರ್ತಿ,ಶರತ್ ಚಂದ್ರ, ಮಠದ ವ್ಯವಸ್ಥಾಪಕರಾದ ಪ್ರಮೋದ್ ಆಚಾರ್, ಭುಜಂಗ ಮತ್ತಿತರರು ಹಾಜರಿದ್ದರು.

ಶ್ರೀ ಉತ್ತರಾದಿ ಮಠ:ವಿವಿಧ ಕಾಮಾಗಾರಿಗಳಿಗೆ ಭೂಮಿ ಪೂಜೆ Read More