ಡಾ. ವಿಷ್ಣುವರ್ಧನ್ ಚಿತ್ರರಂಗ ಕಂಡ ಶ್ರೇಷ್ಠ ಕಲಾವಿದ: ಎಚ್ ವಿ ರಾಜೀವ್

ಮೈಸೂರು:‌ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರು ಚಿತ್ರರಂಗ ಕಂಡ ಶ್ರೇಷ್ಠ ಕಲಾವಿದ ಎಂದು ಮೂಡ ಮಾಜಿ ಅಧ್ಯಕ್ಷ ಎಚ್ ವಿ ರಾಜೀವ್ ಬಣ್ಣಿಸಿದರು.

ಮೈಸೂರಿನ ಉದ್ಬೂರ್ ಗೇಟ್ ನಲ್ಲಿರುವ ಕರ್ನಾಟಕ ರತ್ನ ಸಾಹಸಸಿಂಹ ಡಾಕ್ಟರ್ ವಿಷ್ಣುವರ್ಧನ್ ಅವರ ಸ್ಮಾರಕದಲ್ಲಿ ನೂತನವಾಗಿ ಡಾಕ್ಟರ್ ವಿಷ್ಣು ಸ್ಮಾರಕ ಸೇನಾ ಸಮಿತಿ ಸಂಘಟನೆಯನ್ನು
ದೀಪ ಬೆಳಗಿಸಿ ಡಾಕ್ಟರ್ ವಿಷ್ಣು ವರ್ಧನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಡಾ.ವಿಷ್ಣುವರ್ಧನ್ ಅವರು
ಕನ್ನಡ ನಾಡು,ನುಡಿ ಬಗೆಗೆ ಅಪಾರ ಕಳಕಳಿ ಹೊಂದಿದ್ದರು,ಯುವಜನರಲ್ಲಿ ಭಾಷಾಭಿಮಾನ ಮತ್ತು ದೇಶಾಭಿಮಾನ ಮೂಡಿಸುವಂತಹ ಸದಭಿರುಚಿ ಚಿತ್ರಗಳಲ್ಲಿ ನಟಿಸಿ ಜನಮನ್ನಣೆ ಗಳಿಸಿದ್ದ ಅವರ ಜೀವನ ಕಿರಿಯ ನಟರಿಗೆ ಮಾದರಿ ಎಂದು ಎಚ್ ವಿ ರಾಜೀವ್ ಹೇಳಿದರು.

ಇದೇ ಸಂದರ್ಭದಲ್ಲಿ ಎಚ್ ವಿ ರಾಜೀವ್ ಮತ್ತು ಕೆ ಆರ್ ಬ್ಯಾಂಕ್ ಅಧ್ಯಕ್ಷರಾದ ಬಸವರಾಜ್ ಬಸಪ್ಪ, ಮುತ್ತಣ್ಣ,ಆಲ್ವಿನ್
ಅವರು ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಸಂಘಟನೆಯ ನೇಮಕ ಪತ್ರವನ್ನು ವಿತರಿಸಿದರು.

ಸಂಘಟನೆಯ ಗೌರವಾಧ್ಯಕ್ಷರಾಗಿ ಸುರೇಶ್ (ಈರುಳ್ಳಿ), ಶಾಂತಕುಮಾರಿ, ಎಂ ಜಿ ಆರ್ ಮಣಿ, ಎಂ ಡಿ ಪಾರ್ಥಸಾರಥಿ, ಅಧ್ಯಕ್ಷರಾಗಿ ಬೆಂಕಿ ಮಹಾದೇವ್, ಉಪಾಧ್ಯಕ್ಷರಾಗಿ ಸಂತೋಷ್ ಕುಮಾರ್, ಪ್ರಧಾನ ಕಾರ್ಯದರ್ಶಿ ರಾಜು, ಖಜಾಂಚಿ ಮಹದೇವಸ್ವಾಮಿ ಹಾಗೂ ಮಾರ್ಗದರ್ಶಕರಾಗಿ ಬಸವರಾಜ್, ಜೀವಧಾರ ಗಿರೀಶ್, ಆನಂದ್ ಶೆಟ್ಟಿ,ವಿಕ್ರಂ ಅಯ್ಯಂಗಾರ್, ಸತೀಶ್ ಕುಮಾರ್, ಸಂಘಟನೆ ನಿರ್ದೇಶಕರಾಗಿ ಸ್ವಾಮಿ, ಬಸವರಾಜ್, ಯೋಗೇಶ್, ಶಿವು,ವಿಶ್ವನಾಥ್ ಅವರುಗಳಿಗೆ ನೇಮಕ ಪತ್ರ ನೀಡಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಚಂದನ ಶ್ರೀನಿವಾಸ್ ಅವರು ವಿಷ್ಣುವರ್ಧನ್ ಅವರು ನಟಿಸಿರುವ ಚಿತ್ರಗೀತೆಗಳನ್ನು ಹಾಡುವ ಮೂಲಕ ಎಲ್ಲರನ್ನು ರಂಜಿಸಿದರು.

ಇದೇ ವೇಳೆ ಅಭಿಮಾನಿಗಳಿಗೆ ಅನ್ನದಾನ ಮಾಡಲಾಯಿತು.

ಡಾ. ವಿಷ್ಣುವರ್ಧನ್ ಚಿತ್ರರಂಗ ಕಂಡ ಶ್ರೇಷ್ಠ ಕಲಾವಿದ: ಎಚ್ ವಿ ರಾಜೀವ್ Read More

ಸೆ18 ರಂದು‌ ವಿಷ್ಣು ಜನುಮದಿನ:ಹೋಳಿಗೆ ಊಟ,ರಸಮಂಜರಿ

ಮೈಸೂರು: ಸೆ18 ರಂದು ಕರ್ನಾಟಕ ರತ್ನ ಸಾಹಸಸಿಂಹ ಡಾ ವಿಷ್ಣುವರ್ಧನ್ ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿಗಳಿಂದ ರಸಮಂಜರಿ ಕಾರ್ಯಕ್ರಮ ಹಾಗೂ ಹೋಳಿಗೆ ಊಟ ಹಮ್ಮಿಕೊಳ್ಳಲಾಗಿದೆ.

ಪತ್ರಕರ್ತರ ಭವನದಲ್ಲಿ ಮೈಸೂರು ರತ್ನ ಡಾಕ್ಟರ ವಿಷ್ಣುವರ್ಧನ್ ಸ್ಮಾರಕ ಅಭಿಮಾನಿಗಳ ಒಕ್ಕೂಟ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ‌ ಸಂಘದ ಗೌರವಾಧ್ಯಕ್ಷ ಹಾಗೂ ನಗರ ಪಾಲಿಕೆ ಮಾಜಿ ಸದಸ್ಯ ಎಂ ಡಿ ಪಾರ್ಥಸಾರಥಿ ಈ ವಿಷಯ ತಿಳಿಸಿದರು.

ಸೆ. 18ರಂದು ಬೆಳಗ್ಗೆ 10 ಗಂಟೆಗೆ ಊದ್ಬೂರು ಗೇಟ್ ಬಳಿ ಇರುವ ಡಾಕ್ಟರ್ ವಿಷ್ಣುವರ್ಧನ್ ಸ್ಮಾರಕದಲ್ಲಿ
ಭಾರತಿ ವಿಷ್ಣುವರ್ಧನ್ ಹಾಗೂ ಅನಿರುದ್ ಮತ್ತು ಕೀರ್ತಿ ಅನಿರುದ್ಧ ಮತ್ತು ಕುಟುಂಬ ವರ್ಗ ವಿಷ್ಣು ಪ್ರತಿಮೆಗೆ ವಿಶೇಷ ಪೂಜೆ ನೆರವೇರಿಸಲಿದ್ದಾರೆ ಎಂದು ತಿಳಿಸಿದರು.

ನಂತರ 11 ಗಂಟೆಗೆ ಅಭಿಮಾನಿಗಳು ವಿಷ್ಣು ಗ್ರೂಪ್ ತಂಡದಿಂದ ವಿಷ್ಣುವರ್ಧನ್ ನಟಿಸಿರುವ ಚಿತ್ರಗೀತೆಗಳ ರಸಮಂಜರಿ ಕಾರ್ಯಕ್ರಮ ನಡೆಯಲಿದೆ.ಮಧ್ಯಾಹ್ನ12 ಗಂಟೆಗೆ 5000 ಅಭಿಮಾನಿಗಳಿಗೆ ಬಾಳೆ ಎಲೆ ಹೋಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಅಂದಿನ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸಂಸದರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಜಿ ಟಿ ದೇವೇಗೌಡ,ಟಿ ಎಸ್ ಶ್ರೀವತ್ಸ, ಹರೀಶ್ ಗೌಡ, ಮಾಜಿ ಶಾಸಕ ಎಂ ಕೆ ಸೋಮಶೇಖರ್, ಮೂಡ ಮಾಜಿ ಅಧ್ಯಕ್ಷರಾದ ಎಚ್ ವಿ ರಾಜೀವ್ ಮತ್ತಿತರ ಮುಖಂಡರುಗಳು ಭಾಗವಹಿಸಲಿದ್ದಾರೆ.

ಕಲಾ ರಸಿಕರು, ಕಲಾ ಪ್ರೇಮಿಗಳು, ಕರ್ನಾಟಕ ರತ್ನ ಡಾಕ್ಟರ್ ವಿಷ್ಣುವರ್ಧನ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಎಂ ಡಿ ಪಾರ್ಥಸಾರಥಿ ಮನವಿ ಮಾಡಿದರು

ಸುದ್ದಿಗೋಷ್ಠಿಯಲ್ಲಿ ಸಂಘದ ಗೌರವಾಧ್ಯಕ್ಷ ಟಿ ವಿ ಸುರೇಶ್, ಅಧ್ಯಕ್ಷರು ಸಿದ್ದಪ್ಪ, ಉಪಾಧ್ಯಕ್ಷರಾದ ಸಂತೋಷ್ ಪಾನಿಪುರಿ, ಖಜಾಂಜಿ ರಾಜು ಎಸ್ ಆರ್, ಕರುಣಾಮಯಿ ವಿಷ್ಣು ಅಭಿಮಾನಿ ಬಳಗದ ಅಧ್ಯಕ್ಷ ಎಸ್.ಎನ್ ರಾಜೇಶ್
ಮತ್ತಿತರರು ಉಪಸ್ಥಿತರಿದ್ದರು.

ಸೆ18 ರಂದು‌ ವಿಷ್ಣು ಜನುಮದಿನ:ಹೋಳಿಗೆ ಊಟ,ರಸಮಂಜರಿ Read More

ವಿಷ್ಣು ಪುಣ್ಯಸ್ಮರಣೆ ಪ್ರಯುಕ್ತ ನಾಳೆಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಬೆಂಗಳೂರು: ವಿ ಎಸ್ ಎಸ್ ಅಭಿಮಾನ್ ಡಾಕ್ಟರ್ ವಿಷ್ಣುವರ್ಧನ್ ಪುಣ್ಯಭೂಮಿ ಟ್ರಸ್ಟ್ ವತಿಯಿಂದ ಬಿ ಎಸ್ ಕೆ ಜೀವಾಶ್ರಯ ರಕ್ತ ಕೇಂದ್ರ, ಲಯನ್ಸ್ ಕ್ಲಬ್ ಆಫ್ ಬೆಂಗಳೂರು ಆದರ್ಶ 317 ಎ ಸಹಯೋಗದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಡಾಕ್ಟರ್ ವಿಷ್ಣುವರ್ಧನ್ ಅವರ 15ನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಅಭಿಮಾನ್ ಸ್ಟುಡಿಯೋದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷ ರಾಜುಗೌಡ, ಅಧ್ಯಕ್ಷ ಶ್ರೀಧರ ಮೂರ್ತಿ, ಗೌರವಾದ್ಯಕ್ಷ ಬಿ ವೈ ರಮೇಶ್ ತಿಳಿಸಿದ್ದಾರೆ.

ಡಿ.30 ರಂದು ನಟ ವಿಷ್ಣುವರ್ಧನ್ ಅವರ 15ನೇ ಪುಣ್ಯಸ್ಮರಣೆಯ ಅಂಗವಾಗಿ ಅಭಿಮಾನ್ ಸ್ಟುಡಿಯೋದಲ್ಲಿ ರಕ್ತದಾನ ಶಿಬಿರ ಏರ್ಪಡಿಸಲಾಗಿದೆ.

ಅಭಿಮಾನ್ ಸ್ಟುಡಿಯೋದಲ್ಲಿರುವ ವಿಷ್ಣುವರ್ಧನ್ ಸಮಾಧಿಯ 10 ಗುಂಟೆ ಪವಿತ್ರ ಸ್ಥಳದಲ್ಲಿ ಪೂಜಾ ಕಾರ್ಯಕ್ರಮ ಮತ್ತು ಅಭಿಮಾನಿಗಳಿಗೆ ಅನ್ನ ಸಂತರ್ಪಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇದರ ಜೊತೆ ಜೀವ ಉಳಿಸುವ ಮಹಾನ್ ಪುಣ್ಯದ ಕೆಲಸವಾದ ರಕ್ತದಾನ ಶಿಬಿರ ಸಹ ಹಮ್ಮಿಕೊಳ್ಳಲಾಗಿದ್ದು, ವಿಷ್ಣು ಅಪ್ಪಾಜಿ ಅಭಿಮಾನಿಗಳು ಸಹಸ್ರ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡಲಿದ್ದಾರೆ ಎಂದು ರಾಜುಗೌಡ ತಿಳಿಸಿದರು.

ಇದೇ ವೇಳೆ ನಟ ರಮೇಶ್ ಭಟ್, ಸಂಘದ ಗೌರವ ಅಧ್ಯಕ್ಷ ಬಿ.ವೈ ರಮೇಶ್, ಅಧ್ಯಕ್ಷರಾದ ಶ್ರೀಧರ ಮೂರ್ತಿ, ಕಾರ್ಯದರ್ಶಿ ನಾರಾಯಣ ಕೆ, ಉಪಾಧ್ಯಕ್ಷರಾದ ಹರೀಶ್ ಗೌಡ, ಪದಾಧಿಕಾರಿಗಳಾದ ಸ್ನೇಹಾ ರಶ್ಮಿ ಸಾರಂಗ್, ಚಂದಹಾಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಹೆಚ್ಚಿನ ವಿವರಗಳಿಗೆ ಫೋನ್ ನಂಬರ್ 080 2227337 ಹಾಗೂ 8792541222 ಮತ್ತು 9148653535 ಸಂಪರ್ಕಿಸಬಹುದು.

ವಿಷ್ಣು ಪುಣ್ಯಸ್ಮರಣೆ ಪ್ರಯುಕ್ತ ನಾಳೆಸ್ವಯಂ ಪ್ರೇರಿತ ರಕ್ತದಾನ ಶಿಬಿರ Read More

ಮಾನಸಿಕ ಸಮಸ್ಯೆ ಮುಕ್ತಿಗೆ ಸಂಗೀತ ಒಳಿತು: ಡಾ .ರೇಖಾ ಅರುಣ್

ಮೈಸೂರು: ಮಾನಸಿಕ ಸಮಸ್ಯೆಗಳಿಂದ
ಮುಕ್ತವಾಗಬೇಕಿದ್ದರೆ ಸಾಹಿತ್ಯ ಸಂಗೀತದ ಅಭಿರುಚಿ ಬೆಳೆಸಿಕೊಳ್ಳಬೇಕು ಎಂದು ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞರು ಡಾ. ರೇಖಾ ಅರುಣ್ ಸಲಹೆ ನೀಡಿದರು.

ಮೈಸೂರು ಪುರಭವನ ದಲ್ಲಿ ಸಾಹಸಸಿಂಹ ಡಾಕ್ಟರ್ ವಿಷ್ಣುವರ್ಧನ್ ರವರ 74 ನೇ ವರ್ಷದ ಜನ್ಮದಿನದ ಅಂಗವಾಗಿ ಶ್ರೀ ಗಣೇಶ ಮ್ಯೂಸಿಕಲ್ ಗ್ರೂಪ್ಸ್ ಎ ಕಾಂತರಾಜು ಅವರ ಸಾರಥ್ಯದಲ್ಲಿ ಹಮ್ಮಿಕೊಂಡಿದ್ದ ಡಾಕ್ಟರ್ ವಿಷ್ಣುವರ್ಧನ್ ಅಭಿನಯದ ಗೀತೆಗಳ ಕರೋಕೆ ಗಾಯನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅಭಿಮಾನಿಗಳ ಅಚ್ಚುಮೆಚ್ಚಿನ ನಟ ಡಾ.ವಿಷ್ಣುವರ್ಧನ್,ಸದಾಕಾಲ ಸ್ಥಿತ ಪ್ರಜ್ಞೆ ಹೊಂದಿದ್ದ ಅವರು, ಸಮಾಜವನ್ನು ಆರೋಗ್ಯಕರ ಚಿಂತನೆಗೆ ಹಚ್ಚುವಂತಹ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡದ ಬಗೆಗೆ ವಿಶೇಷ ಪ್ರೀತಿ ಹೊಂದಿದ್ದರು. ಕಳಂಕರಹಿತರಾಗಿ ಬಾಳಿದ ವಿಷ್ಣು ಅವರು ಯುವ ಸಮುದಾಯದ ಬಗ್ಗೆ ಹೆಚ್ಚು ಒಲವು ಬೆಳೆಸಿಕೊಂಡಿದ್ದರು ಎಂದು ತಿಳಿಸಿದರು.

ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಮೇಲುಕೋಟೆ ವಂಗಿಪುರ ಮಠದ ಇಳೈ ಆಳ್ವಾರ್ ಸ್ವಾಮೀಜಿ ಅವರು,
ಕನ್ನಡ ನಾಡು–ನುಡಿ ಬಗೆಗೆ ಅಪಾರ ಕಳಕಳಿ ಹೊಂದಿದ್ದ ಡಾ. ವಿಷ್ಣುವರ್ಧನ್ ಅವರು ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ಕಲಾವಿದ ಎಂದು ಶ್ಲಾಘಿಸಿದರು.

ಯುವಜನರಲ್ಲಿ ಭಾಷಾಭಿಮಾನ ಮತ್ತು ದೇಶಾಭಿಮಾನ ಮೂಡಿಸುವಂತಹ ಸದಭಿರುಚಿ ಚಿತ್ರಗಳಲ್ಲಿ ನಟಿಸಿ ಜನಮನ್ನಣೆ ಗಳಿಸಿದ್ದ ಅವರ ಜೀವನ ಕಿರಿಯ ನಟರಿಗೆ ಮಾದರಿ ಎಂದು ಹೇಳಿದರು.

ಇದೇ ವೇಳೆ ಇಳೈ ಆಳ್ವಾರ್ ಸ್ವಾಮೀಜಿ,
ಡಾ. ರೇಖಾ ಅರುಣ್, ಹೃದಯ ತಜ್ಞ ಡಾ. ಮಂಜುನಾಥ್,ಮನೋಶಾಸ್ತ್ರಜ್ಞೆ ಡಾ|| ರೇಖಾ ಮನಃಶಾಂತಿ, ಕೆಎಂಪಿ ಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ,ಶ್ರೀ ಗಣೇಶ ಮ್ಯೂಸಿಕಲ್ ಗ್ರೂಪ್ಸ್ ಸಂಸ್ಥಾಪಕರಾದ ಎ.ಕಾಂತರಾಜು,
ಗಾಯಕರಾದ ಬಿ ನವೀನ್ ಕುಮಾರ್,
ಜಯಲಕ್ಷ್ಮಿ ನಾಯ್ಡು, ಲಕ್ಷ್ಮಿ, ಗುರುರಾಜ್, ಮತ್ತಿತರರು ಹಾಜರಿದ್ದರು.

ಮಾನಸಿಕ ಸಮಸ್ಯೆ ಮುಕ್ತಿಗೆ ಸಂಗೀತ ಒಳಿತು: ಡಾ .ರೇಖಾ ಅರುಣ್ Read More

ಸೆ. 21 ರಂದು ಡಾ. ವಿಷ್ಣುವರ್ಧನ್ ಚಿತ್ರಗಳ ಕರೋಕೆ ಗಾಯನ ಕಾರ್ಯಕ್ರಮ

ಮೈಸೂರು: ಶ್ರೀ ಗಣೇಶ ಮ್ಯೂಸಿಕಲ್ ಗ್ರೂಪ್ಸ್ ವತಿಯಿಂದ ಸಾಹಸಸಿಂಹ ವಿಷ್ಣುವರ್ಧನ್ 74 ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಕರೋಕೆ ಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಡಾಕ್ಟರ್ ವಿಷ್ಣುವರ್ಧನ್ ಅಭಿನಯಿಸಿರುವ‌ ಚಿತ್ರಗಳ ಗೀತೆಗಳ ಕರೋಕೆ ಗಾಯನ ಕಾರ್ಯಕ್ರಮವನ್ನು ಎ ಕಾಂತರಾಜು ರವರ ಸಾರಥ್ಯದಲ್ಲಿ ಮೈಸೂರು ಪುರ ಭವನದಲ್ಲಿ ಸೆಪ್ಟೆಂಬರ್ 21ರ ಸಂಜೆ 4 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಗಣೇಶ ಮ್ಯೂಸಿಕಲ್ ಗ್ರೂಪ್ಸ್ ಸಂಸ್ಥಾಪಕ ಕಾಂತರಾಜು ತಿಳಿಸಿದ್ದಾರೆ.

ಕಾರ್ಯಕ್ರಮವನ್ನು ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಮೇಲುಕೋಟೆ ವೆಂಗಿ ಪುರ ಮಠದ ಇಳೈ ಆಳ್ವಾರ್ ಸ್ವಾಮೀಜಿ ವಹಿಸುವರು.

ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞೆ ಡಾ. ರೇಖಾ ಅರುಣ್, ಹೃದಯ ತಜ್ಞ ಡಾ. ಮಂಜುನಾಥ್, ಮನೋಶಾಸ್ತ್ರಜ್ಞೆ ಡಾ|| ರೇಖಾ ಮನಃಶಾಂತಿ, ಕೆಎಂಪಿ ಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ಮತ್ತಿತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸೆ. 21 ರಂದು ಡಾ. ವಿಷ್ಣುವರ್ಧನ್ ಚಿತ್ರಗಳ ಕರೋಕೆ ಗಾಯನ ಕಾರ್ಯಕ್ರಮ Read More