ಮುಡಾ ಪ್ರಕರಣ ಕ್ಲೀನ್‌ಚಿಟ್:ಸತ್ಯಕ್ಕೆ ಜಯ ಸಿಕ್ಕಿದೆ-ಡಾ.ಯತೀಂದ್ರ

ಮೈಸೂರು: ಮುಡಾ ಸೈಟ್ ವಿಚಾರವಾಗಿ ನನ್ನ ತಂದೆ ಯಾವುದೇ ಪತ್ರ ಬರೆದಿಲ್ಲ, ನನ್ನ ತಾಯಿ ಪತ್ರ ಬರೆದಿದ್ದಾರೆ. ನನ್ನ ಜಮೀನು ಬದಲಿ ಸೈಟ್ ನೀಡಿ ಎಂದು ಬರೆದಿದ್ದಾರೆ. ಸೈಟ್ ಪಡೆಯುವಲ್ಲಿ ಯಾವುದೇ ಪ್ರಭಾವ ಬಳಸಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ತಿಳಿಸಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಎಲ್ಲರಿಗೂ ಸೈಟ್ ಕೊಟ್ಟಂತೆ ನಮಗೂ ಕೊಟ್ಟಿದ್ದಾರೆ. ನಮ್ಮ ಜಮೀನು ಬಳಸಿಕೊಂಡು ಸೈಟ್ ಕೊಟ್ಟಿದ್ದಾರೆ. ಇದನ್ನೇ ದೊಡ್ಡ ಹಗರಣ ಅಂತ ಬಿಂಬಿಸಿದರು ಬೇಕು ಬೇಕಂತಲೇ ನಮ್ಮ ತಂದೆ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡಿದರು,ಈಗ ಕ್ಲೀನ್ ಚಿಟ್ ಸಿಕ್ಕಿದೆ. ಈವಾಗ ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಹೇಳಿದರು.

ಮುಡಾ ಹಗರಣದಲ್ಲಿ ನನ್ನ ಹೆಸರನ್ನು ಕೂಡ ತಳುಕು ಹಾಕುವ ಯತ್ನ ನಡೆಯಿತು, ನಾನು ಮುಡಾ ಸದಸ್ಯ ಆಗಿದ್ದೆ. ಎಲ್ಲಿಯೂ ಕೂಡ ನಾನು ಏನು ಹೇಳಿಲ್ಲ. ಆರ್ ಟಿಐ ಕಾರ್ಯಕರ್ತರನ್ನ ಮುಂದಿಟ್ಟು ನಮ್ಮ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡಿದರು. ಆದರೆ ಕೊನೆಗೂ ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದರು.

ದೂರುದಾರ ಸ್ನೇಹಮಯಿ ಕೃಷ್ಣ ಸುಪ್ರೀಂಕೋರ್ಟಿಗೆ ಹೋಗಲಿ , ನಾವು ಯಾವುದೇ ತಪ್ಪು ಮಾಡಿಲ್ಲ ಕೋರ್ಟ್ ನಲ್ಲೂ ಕೂಡ ನಮ್ಮ ಪರ ನ್ಯಾಯ ಸಿಗಲಿದೆ ಎಂದು ಯತೀಂದ್ರ ವಿಶ್ವಾಸ ವ್ಯಕ್ತಪಡಿಸಿದರು.

ಉದಯಗಿರಿ ಗಲಾಟೆ ಪ್ರಕರಣ
ಯಾರೋ ಕಿಡಿಗೇಡಿ ವಿವಾದಿತ ಪೋಸ್ಟ್ ಹಾಕಿದ್ದ. ಅದಕ್ಕೆ ಕೆಲವರು ಕಾನೂನು ಕೈಗೆತ್ತಿಕೊಂಡರು,ಸರ್ಕಾರ ಇಬ್ಬರ ವಿರುದ್ಧವೂ ಕಾನೂನು ಕ್ರಮ ಕೈಗೊಂಡಿದೆ. ಇದನ್ನು ರಾಜಕೀಯ ಮಾಡಲು ಬಿಜೆಪಿ ಹೊರಟಿತ್ತು.
ನಿನ್ನೆಯ ಹೋರಾಟದಲ್ಲಿ ಜನ ಇರಲಿಲ್ಲ, ಸತ್ಯ ಏನು ಅಂತ ಜನರಿಗೆ ಗೊತ್ತು. ಅದಕ್ಕಾಗಿ ಪ್ರತಿಭಟನೆಯಲ್ಲಿ ಜನ ಇರಲಿಲ್ಲ. ನೆನ್ನೆಯ ಬಿಜೆಪಿ ಪ್ರತಿಭಟನೆ ಯಶಸ್ವಿ ಆಗಿಲ್ಲ ಎಂದು ಟಾಂಗ್ ನೀಡಿದರು ‌

ಸಿಎಂ ಸಿದ್ದರಾಮಯ್ಯ ಪರ ಹೈಕಮಾಂಡ್ ನಿಂತಿದೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಮಾತೇ ಇಲ್ಲ ಯತೀಂದ್ರ ಕಡಕ್ಕಾಗಿಯೇ ಹೇಳಿದರು.

ಮುಡಾ ಪ್ರಕರಣ ಕ್ಲೀನ್‌ಚಿಟ್:ಸತ್ಯಕ್ಕೆ ಜಯ ಸಿಕ್ಕಿದೆ-ಡಾ.ಯತೀಂದ್ರ Read More

ಸುಳ್ಳು ಆರೋಪ ಮಾಡಿ ಸರ್ಕಾರ ಅಸ್ಥಿರಗೊಳಿಸಲು ಯತ್ನ:ಡಾ.ಯತೀಂದ್ರ

ಮೈಸೂರು: ಬಿಜೆಪಿಯವರು ಸುಳ್ಳು ಆರೋಪ ಮಾಡಿ ಸರ್ಕಾರ ಅಸ್ಥಿರಗೊಳಿಸುವ ಯತ್ನ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ‌ ಡಾ.ಯತೀಂದ್ರ ಗಂಭೀರ ಆರೋಪ ಮಾಡಿದರು.

ಮೈಸೂರಿನಲ್ಲಿ ಸ್ವಾಭಿಮಾನಿ ಸಮಾವೇಶ ರತಕ್ಕೆ ಚಾಲನೆ ನೀಡಿ ಮಾತನಾಡಿದ ಅವರು,
ಸಿದ್ದರಾಮಯ್ಯ ಅವರ ವರ್ಚಸ್ಸಿಗೆ ಧಕ್ಕೆ ತರಲು ಬಿಜೆಪಿ ಯತ್ನಿಸುತ್ತಿದೆ, ಆದರೆ ಯಾವುದೇ ಕಾರಣಕ್ಕೂ ಸಿಎಂ ರಾಜೀನಾಮೆ ನೀಡುವುದಿಲ್ಲ ಎಂದು ತಂದೆಯ ಪರ‌ ಬ್ಯಾಟಿಂಗ್ ಬೀಸಿದರು.

ಬಿಜೆಪಿಯವರು ಪ್ರಜಾಪ್ರಭುತ್ವ ಕೊಲ್ಲುವ ಯತ್ನ ಮಾಡುತ್ತಿದ್ದಾರೆ,ಅವರ ಮೇನ್ ಟಾರ್ಗೆಟ್ ಅಧಿಕಾರಕ್ಕೆ ಬರವುದು ಎಂದು ಟೀಕಿಸಿದರು.

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜಿನಾಮೆ ಕೊಡಲು ಕಾರಣ ಇರಬೇಕು. ಸಿಎಂ ತಪ್ಪು ಮಾಡದೆ ಇದ್ದರೂ ತನಿಖಾ ಸಂಸ್ಥೆಯನ್ನ ಬಳಸಿಕೊಂಡು ರಾಜೀನಾಮೆಗೆ ಯತ್ನಿಸುತ್ತಿದ್ದಾರೆ ಎಂದು ದೂರಿದರು.

ಜನರು ಉಪಚುನಾವಣೆಯಲ್ಲಿ ನಮಗೆ ಬೆಂಬಲ ಸೂಚಿಸಿದ್ದಾರೆ,ಇದರಿಂದ ನಮಗೆ ನೈತಿಕ ಸ್ಥೈರ್ಯ ಸಿಕ್ಕಿದೆ. ಹಾಗಾಗಿ ರಾಜೀನಾಮೆ ಕೊಡುವ ಪ್ರಮೇಯ ಇಲ್ಲ ಎಂದು ಹೇಳಿದರು.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ನನಗೆ ಗೊತ್ತಿಲ್ಲ.ಅದರ‌ ಬಗ್ಗೆ ಮಾತನಾಡಲು ನನಗೆ ಅರ್ಹತೆ ಇಲ್ಲ. ಆ ಬಗ್ಗೆ ಹೈ ಕಮಾಂಡ್ ತೀರ್ಮಾನ ಮಾಡುತ್ತದೆ ಯತೀಂದ್ರ ತಿಳಿಸಿದರು.

ಹಾಸನ ಸಮಾವೇಶ ಬಗ್ಗೆ ಎಐಸಿಸಿಗೆ ಪತ್ರ ಬರೆದ ವಿಚಾರ ಕುರಿತು ಪ್ರತಿಕ್ರಿಯಿಸಿದ ಯತೀಂದ್ರ ಸಿದ್ದರಾಮಯ್ಯ, ಸಮಾವೇಶಕ್ಕೆ ಹೈಕಮಾಂಡ್ ಒಪ್ಪಿಗೆ ಇದೆ. ಪತ್ರದ ಬಗ್ಗೆ ನನಗೆ ಗೊತ್ತಿಲ್ಲ,ಆ ಪತ್ರ ಫೇಕ್ ಇರಬಹುದು ಎಂದು ತಿಳಿಸಿದರು.

ಈಗಾಗಲೇ ಮೈಸೂರಿನಲ್ಲಿ ಮುಡಾ ವಿಚಾರಕ್ಕೆ ಸಮಾವೇಶ ಮಾಡಲಾಗಿದೆ.ಈಗ ಹಾಸನದಲ್ಲಿ ಭಾರಿ ಸಮಾವೇಶ ಮಾಡುತ್ತಿದ್ದೇವೆ ಅಷ್ಟೇ. ಇಡಿ ತನಿಖೆಯಲ್ಲಿ ತಂದೆಯ ಆರೋಪದ ಮೇಲಿನ ವಿಚಾರಣೆ ನಡೆಯುತ್ತಿಲ್ಲ. ಇಡಿಗೆ ವಿಚಾರಣೆ ಮಾಡುವ ಹಕ್ಕು ಇಲ್ಲ. ಇದರಲ್ಲಿ ಸತ್ಯ ಏನು ಅಂಥ ಎಲ್ಲರಿಗೂ ಗೊತ್ತಿದೆ ಎಂದು ಹೇಳಿದರು.

ಆರ್ ಟಿಐ ಕಾರ್ಯಕರ್ತ ಮಾಡಿರುವ ಆರೋಪದಲ್ಲಿ ಸತ್ಯ ಇಲ್ಲ. ಪ್ರತಿಪಕ್ಷಗಳು ನಮ್ಮ ನೈತಿಕತೆ ಕುಗ್ಗಿಸಲು ಯತ್ನಿಸುತ್ತಿವೆ ಅಧಿಕಾರದ ಹಪಹಪಿಯಿಂದ ಏನು ಬೇಕಾದರೂ ಮಾಡುತ್ತಾರೆ. ನಮಗೆ ಕೇಂದ್ರ ತನಿಖಾ ಸಂಸ್ಥೆಯ ಮೇಲೆ ನಂಬಿಕೆ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಡಾ.ಯತೀಂದ್ರ ತಿಳಿಸಿದರು.

ಸುಳ್ಳು ಆರೋಪ ಮಾಡಿ ಸರ್ಕಾರ ಅಸ್ಥಿರಗೊಳಿಸಲು ಯತ್ನ:ಡಾ.ಯತೀಂದ್ರ Read More