ಇಮ್ರಾನ್ ಖಾನ್ ಭೇಟಿಯಾದ‌ ಸಹೋದರಿ:ಸಾವಿನ ವದಂತಿಗಳಿಗೆ ತೆರೆ

ಪಾಕಿಸ್ತಾನ: ಪಾಕ್ ನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಸಾವಿನ ಊಹಾಪೋಹದ ಸುದ್ದಿ ಹರಡಿದ್ದರ ಬೆನ್ನಲ್ಲೆ ಜೈಲಿನಲ್ಲಿ ಇಮ್ರಾನ್ ರನ್ನು ಸಹೋದರಿ ಡಾ.ಉಜ್ಮಾ ಖಾನಮ್ ಭೇಟಿಯಾಗಿ‌ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಇಮ್ರಾನ್ ಖಾನ್ ಅವರ ಆರೋಗ್ಯದ ಬಗ್ಗೆ ಹೆಚ್ಚುತ್ತಿರುವ ವದಂತಿಗಳ ನಡುವೆ ಪಾಕಿಸ್ತಾನ ಸರ್ಕಾರ ಜೈಲಿನಲ್ಲಿ ಇಮ್ರಾನ್ ಖಾನ್ ಭೇಟಿಯಾಗಲು ಅವರ ಸಹೋದರಿಗೆ ಅವಕಾಶ ನೀಡಿತ್ತು.

ಮಂಗಳವಾರ ರಾವಲ್ಪಿಂಡಿಯ ಅಡಿಯಾಲ ಜೈಲಿನ ಅಧಿಕಾರಿಗಳು ಸಹೋದರನನ್ನು ಭೇಟಿ ಮಾಡಲು ಉಜ್ಮಾ ಖಾನಮ್ ಅವರಿಗೆ ಅನುಮತಿ ನೀಡಿತ್ತು.

ಇಮ್ರಾನ್ ಖಾನ್ ಅವರ ಭೇಟಿಯನ್ನು ನಿರ್ಬಂಧಿಸಲಾಗಿದೆ ಎಂದು ಆರೋಪಿಸಿ ಪಿಟಿಐ ಸದಸ್ಯರು ಇಸ್ಲಾಮಾಬಾದ್ ಹೈಕೋರ್ಟ್ ಮತ್ತು ಅಡಿಯಾಲ ಜೈಲಿನ ಹೊರಗೆ ಪ್ರತಿಭಟನೆ ಕೂಡಾ ನಡೆಸಿದ್ದರು.

ಕಳೆದ ವಾರ, ಇಮ್ರಾನ್ ಖಾನ್ ಅವರ ಮಗ ಮತ್ತು ಸಹೋದರಿ ಇಬ್ಬರೂ ಜೈಲಿನಲ್ಲಿರುವ ಇಮ್ರಾನ್‌ ಜೀವಂತವಾಗಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು.

ಕುಟುಂಬಕ್ಕೆ ಇಮ್ರಾನ್ ಖಾನ್ ಅವರನ್ನು ಭೇಟಿ ಮಾಡಲು ನ್ಯಾಯಾಲಯದ ಅನುಮತಿ ನೀಡಿದ್ದರೂ, ಅವರ ಸಹೋದರಿಯರಿಗೆ ಮತ್ತು ‌ಮಕ್ಕಳಿಗೆ ಅವರನ್ನು ಭೇಟಿ ಮಾಡಲು ಅವಕಾಶ ನಿರಾಕರಿಸಲಾಗಿದೆ ಎಂದು ವರದಿಯಾದ ನಂತರ ಅವರ ಸಾವಿನ ವದಂತಿಗಳು ಹರಡಿದವು.

ಯಾವುದೇ ಫೋನ್ ಕರೆಗಳು ಬಂದಿಲ್ಲ. ಯಾವುದೇ ಸಭೆಗಳು ನಡೆದಿಲ್ಲ. ಜೀವನದ ಬಗ್ಗೆ ಯಾವುದೇ ಪುರಾವೆಗಳಿಲ್ಲ. ನನ್ನ ಸಹೋದರ ಮತ್ತು ನಾನು ನಮ್ಮ ತಂದೆಯೊಂದಿಗೆ ಯಾವುದೇ ಸಂಪರ್ಕ ಹೊಂದಿಲ್ಲ ಎಂದು ಇಮ್ರಾನ್ ಪುತ್ರ ಖಾಸಿಮ್ ಖಾನ್ ಹೇಳಿದ್ದಾರೆ.

ನನ್ನ ಸಹೋದರ ಇಮ್ರಾನ್ ಜೀವಂತವಾಗಿದ್ದರೂ ಏಕಾಂತ ಬಂಧನದಲ್ಲಿ ಮಾನಸಿಕ ಹಿಂಸೆಗೆ ಒಳಗಾಗಿದ್ದಾರೆ ಎಂದು ಅವರ ಸಹೋದರಿ ಡಾ. ಉಜ್ಮಾ ಖಾನ್ ಹೇಳಿದ್ದಾರೆ.

ಇಮ್ರಾನ್ ಖಾನ್ ಭೇಟಿಯಾದ‌ ಸಹೋದರಿ:ಸಾವಿನ ವದಂತಿಗಳಿಗೆ ತೆರೆ Read More

ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಮತ್ತೆ 5 ವರ್ಷ ಜೈಲು ಶಿಕ್ಷೆ

ಢಾಕಾ: ಮರಣದಂಡನೆ ಶಿಕ್ಷೆಗೆ ಒಳಗಾಗಿರುವ ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ಇನ್ನೊಂದು ಪ್ರಕರಣದಲ್ಲಿ 5 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಢಾಕಾ ನ್ಯಾಯಾಲಯ ಆದೇಶಿಸಿದೆ.

ಇನ್ನೊಂದು ಪ್ರಕರಣದಲ್ಲಿ ಮಾಜಿ ಶೇಖ್ ಹಸೀನಾ ಸಹೋದರಿ ಶೇಖ್ ರೆಹಾನಾಗೆ 7 ವರ್ಷಗಳ ಜೈಲು ಶಿಕ್ಷೆ, ಬ್ರಿಟಿಷ್ ಸಂಸದೆ ತುಲಿಪ್ ಸಿದ್ದಿಕ್ ಅವರಿಗೆ 2 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ಶೇಖ್ ಹಸೀನಾ ಅವರ ಪುತ್ರ ಸಜೀಬ್ ವಾಜೀದ್ ಜಾಯ್ ಅವರಿಗೆ ನ್ಯಾಯಾಲಯ ಐದು ವರ್ಷಗಳ ಜೈಲು ಶಿಕ್ಷೆ ಮತ್ತು 1,00,000 ಬಾಂಗ್ಲಾದೇಶಿ ಟಕಾ ದಂಡ ವಿಧಿಸಿದೆ.

ಶೇಖ್ ಹಸೀನಾ ಅವರ ಪುತ್ರಿ ಸೈಮಾ ವಾಜೀದ್ ಪುಟುಲ್ ಅವರಿಗೂ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ಪ್ಲಾಟ್ ವಂಚನೆ ಪ್ರಕರಣದಲ್ಲಿ ಢಾಕಾದ ವಿಶೇಷ ವ್ಯಾಯಾಲಯ ಈ ಶಿಕ್ಷೆ ವಿಧಿಸಿದೆ.

ಬಾಂಗ್ಲಾದೇಶದ ಭ್ರಷ್ಟಾಚಾರ ನಿಗ್ರಹ ಆಯೋಗ (ಎಸಿಸಿ) ಶೇಖ್ ಹಸೀನಾ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಕಳೆದ ಜನವರಿಯಲ್ಲಿ ಢಾಕಾದ ಪುರ್ಬಾಚಲ್ ಪ್ರದೇಶದಲ್ಲಿ ಸರ್ಕಾರಿ ಪ್ಲಾಟ್‌ಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿದ ಆರೋಪದ ಮೇಲೆ ಆರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಿಸಿತ್ತು.

ಈಗಾಗಲೆ ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ಶೇಖ್ ಹಸೀನಾ ಅವರಿಗೆ ಮರಣದಂಡನೆ ವಿಧಿಸಿದೆ. 2024ರ ಜುಲೈ ದೇಶದಲ್ಲಿ ನಡೆದ ಪ್ರತಿಭಟನೆ ಹತ್ತಿಕ್ಕಲು ಅವರು ಮಾಡಿದ ಪ್ರಯತ್ನಗಳಿಗಾಗಿ ಮಾನವೀಯತೆಯ ವಿರುದ್ಧದ ಅಪರಾಧಗಳಿಗೆ ಅವರು ತಪ್ಪಿತಸ್ಥರೆಂದು ತೀರ್ಪು ನೀಡಲಾಗಿದೆ.

ಭಾರತದಲ್ಲಿ ಆಶ್ರಯ ಪಡೆದಿರುವ ಶೇಖ್​​ ಹಸೀನಾ ಅವರನ್ನು ಹಸ್ತಾಂತರಿಸಲು ಮೊಹಮದ್​ ಯೂನಸ್​ ಅವರ ನೇತೃತ್ವದಲ್ಲಿ ರಚಿತವಾಗಿರುವ ಬಾಂಗ್ಲಾದೇಶ ಮಧ್ಯಂತರ ಸರ್ಕಾರ ಮನವಿ ಮಾಡಿದೆ.

ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಮತ್ತೆ 5 ವರ್ಷ ಜೈಲು ಶಿಕ್ಷೆ Read More