ಡೆವಿಲ್ ಚಿತ್ರದ ಯಶಸ್ಸಿಗಾಗಿ ಕುಂಬಳಕಾಯಿ ದೃಷ್ಟಿ ತೆಗೆದು ಪ್ರಾರ್ಥಿಸಿದ ಅಭಿಮಾನಿಗಳು

ಮೈಸೂರು: ಮೈಸೂರಿನ ಲಲಿತಾ ಮಹಲ್ ರಸ್ತೆ, ಶ್ರೀ ತೂಗುದೀಪ್ ಶ್ರೀನಿವಾಸ್ ವೃತ್ತದಲ್ಲಿ ವಿಶಿಷ್ಟ ವಾತಾವರಣ ನಿರ್ಮಾಣವಾಗಿತ್ತು.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹೊಸ ಚಿತ್ರ ‘ಡೆವಿಲ್’ ಯಶಸ್ವಿಯಾಗಲಿ ಎಂಬ ಹಾರೈಕೆಯೊಂದಿಗೆ ಅಭಿಮಾನಿಗಳು ಬೃಹತ್ ಗಾತ್ರದ ಫ್ಲೆಕ್ಸ್ ಅಳವಡಿಸಿ, ಅದರ ಮುಂದೆ ತಾಯಿ ಚಾಮುಂಡೇಶ್ವರಿ ಭಾವಚಿತ್ರ ಇಟ್ಟು ವಿಶೇಷ ಪೂಜೆ ನೆರವೇರಿಸಿದರು.

ಅಭಿಮಾನಿಗಳು ಕಟೌಟ್ ಮುಂದೆ ಕುಂಬಳಕಾಯಿಯಲ್ಲಿ ದೃಷ್ಟಿ ತೆಗೆದು, ಹಾಲು-ಅಕ್ಷತೆ ನೀಡಿ, ಚಿತ್ರಕ್ಕೆ ಅಡಚಣೆಗಳಿಲ್ಲದೆ ಯಶಸ್ವಿಯಾಗಲಿ, ತಂಡ ಸುಗಮ ಪಯಣ ಕಂಡು ಜನ ಮೆಚ್ಚುಗೆಯನ್ನು ಗಳಿಸಲಿ ಎಂಬ ಸಂಕಲ್ಪ ಮಾಡಲಾಯಿತು.

ಹೂವಿನ ಹಾರಹಾಕಿ ಅಭಿಮಾನಿಗಳ ಘೋಷಣೆಯ ನಡುವೆ
ಡೆವಿಲ್ ಗೆಲ್ಲುವುದು ಪಕ್ಕ,
ದರ್ಶನ್ ಮತ್ತೊಮ್ಮೆ ಸಿನಿಮಾ ರಂಗದಲ್ಲಿ ಗರ್ಜಿಸಲಿ,ಎಂಬ ಘೋಷಣೆಗಳು ಮೊಳಗಿದವು.

ರಾಜ್ಯದಾದ್ಯಂತ ಬಿಡುಗಡೆಯಾಗುತ್ತಿರುವ ಈ ಚಿತ್ರದ ಯಶಸ್ಸಿಗಾಗಿ ಮಾಡಿದ ಈ ಭಕ್ತಿಪರ ಕಾರ್ಯಕ್ರಮ ಅಭಿಮಾನಿಗಳ ನಿಷ್ಠೆ, ಭಾವ ಮತ್ತು ಸಿನಿಮಾ ಪ್ರೇಮಕ್ಕೆ ಸಾಕ್ಷಿಯಾಯಿತು.

ಕಾರ್ಯಕ್ರಮದಲ್ಲಿ ಬನ್ನೂರು ಮಹೇಂದ್ರ ಸಿಂಗ್ ಕಾಳಪ್ಪ, ಜಿ. ರಾಘವೇಂದ್ರ, ರವಿಕುಮಾರ್, ಬನ್ನೂರು ಚಂದನ್, ಹರೀಶ್ ನಾಯ್ಡು, ಎಸ್.ಎನ್. ರಾಜೇಶ್, ರಾಕೇಶ್, ಮಣಿ ದಚ್ಚು, ನವೀನ್ ಹಾಗೂ ಹಲವಾರು ಅಭಿಮಾನಿಗಳು ಪಾಲ್ಗೊಂಡಿದ್ದರು.

ಡೆವಿಲ್ ಚಿತ್ರದ ಯಶಸ್ಸಿಗಾಗಿ ಕುಂಬಳಕಾಯಿ ದೃಷ್ಟಿ ತೆಗೆದು ಪ್ರಾರ್ಥಿಸಿದ ಅಭಿಮಾನಿಗಳು Read More

ರಕ್ತದಾನದ ಮೂಲಕ ವಿಷ್ಣು ಅವರ ಜನ್ಮದಿನ ಅರ್ಥಪೂರ್ಣ ಆಚರಣೆ

ಮೈಸೂರು: ಉದ್ಬೂರ್ ಗೆಟ್ ಬಳಿ ಇರುವ ಡಾ.ವಿಷ್ಣುವರ್ಧನ್ ಸ್ಮಾರಕದಲ್ಲಿ
ವಿಷ್ಣುವರ್ಧನ್ ಅಭಿಮಾನಿಗಳು ಸ್ವಯಂ ಪ್ರೇರಿತ ರಕ್ತದಾನ ಮಾಡುವ ಮೂಲಕ ನೆಚ್ಚಿನ ನಟ ವಿಷ್ಣುವರ್ಧನ್ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.

ರಕ್ತದಾನ ಶಿಬಿರವು ಜೀವದಾರ ರಕ್ತ ನಿಧಿ ಕೇಂದ್ರದ ಸಹಯೋಗದೊಂದಿಗೆ ನಡೆಯಿತು.

ಶಿಬಿರಕ್ಕೂ ಮೊದಲು ಬೆಳಿಗ್ಗೆ ಭಾರತಿ ವಿಷ್ಣುವರ್ಧನ್‌ ಹಾಗೂ ಅನಿರುಧ್ ಮತ್ತು ‌ವಿಷ್ಣು ಪುತ್ರಿ ವಿಷ್ಣುವರ್ಧನ್ ಅವರ ಪ್ರತಿಮೆಗೆ ಪೂಜೆ ಸಲ್ಲಿಸಿದರು.

ಸಾಹಸಸಿಂಹ, ಕರ್ನಾಟಕ ರತ್ನ ಡಾಕ್ಟರ್ ವಿಷ್ಣುವರ್ಧನ್ ಅವರ 75ನೇ ವರ್ಷದ ಜನ್ಮದಿನದ ಅಂಗವಾಗಿ 75ಕ್ಕೂ ಹೆಚ್ಚು ಅಭಿಮಾನಿಗಳು ಸ್ವಯಂ ಪ್ರೇರಿತ ರಕ್ತದಾನ ಮಾಡುವ ಮೂಲಕ ತಮ್ಮ ನೆಚ್ಚಿನ ನಟ ವಿಷ್ಣುವರ್ಧನ್ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದರು.

ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿದ ಡಾಕ್ಟರ್ ವಿಷ್ಣುವರ್ಧನ್ ಅವರ ಅಳಿಯ ಅನಿರುದ್ಧ ಅವರು ಮಾತನಾಡಿ, ಅಪ್ಪಾಜಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಬಂದಿರುವುದು ಅಭಿಮಾನಿಗಳ ಆಶೀರ್ವಾದದಿಂದ, ಪ್ರತಿ ವರ್ಷ ಅವರ ಜನ್ಮದಿನವನ್ನು ಸಾಹಸಸಿಂಹ ವಿಷ್ಣುವರ್ಧನ್ ರವರ ಅಭಿಮಾನಿಗಳು ಅರ್ಥಪೂರ್ಣವಾಗಿ ವಿಶೇಷವಾಗಿ ಆಚರಿಸ್ತಾ ಬಂದಿದ್ದಾರೆ,ಅದಕ್ಕಾಗಿ ನಮ್ಮ ಕುಟುಂಬದ ವತಿಯಿಂದ ವಿಶೇಷ ಧನ್ಯವಾದಗಳನ್ನು ಸಲ್ಲಿಸುತ್ತೇವೆ ಎಂದು ಹೇಳಿದರು.

ಇಂದು 5,000 ಜನರಿಗೆ ಹೋಳಿಗೆ ಊಟ, ಹಾಗೂ ಅಭಿಮಾನಿಗಳಿಂದ ಸ್ವಯಂ ಪ್ರೇರಿತ ರಕ್ತದಾನ ಮತ್ತು ರಸಮಂಜರಿ ಕಾರ್ಯಕ್ರಮ ಆಯೋಜಿಸಿರುವುದು ಸಂತಸ ಉಂಟುಮಾಡುತ್ತಿದೆ ಎಂದು ಖುಷಿಯಿಂದ ತಿಳಿಸಿದರು.

ರಕ್ತಕ್ಕೆ ಜಾತಿ, ಧರ್ಮದ ಭೇದವಿಲ್ಲ, ಅಪಘಾತ ಸಹಿತ ತುರ್ತು ಅವಘಡದಲ್ಲಿ ಸಿಲುಕಿದವರಿಗೆ ರಕ್ತಕ್ಕೆ ಪರ್ಯಾಯ ವ್ಯವಸ್ಥೆ ಇಲ್ಲ, ದಾನಿಗಳ ಮೂಲಕವೇ ಅವಶ್ಯ ವಿದ್ದವರಿಗೆ ಪೂರೈಸಬೇಕಾಗಿದೆ. ಈ ನಿಟ್ಟಿನಲ್ಲಿ ಎಲ್ಲ ಅರ್ಹ ದಾನಿಗಳು ರಕ್ತದಾನ ಮಾಡು ವುದರ ಮೂಲಕ ಇತರರ ಜೀವ ಉಳಿಸಲು ಸಹಕರಿಸಬೇಕೆಂದು ಕೋರಿದರು.

ಜೀವ ರಕ್ಷಣೆ ಕಾರಣವಾಗುವ ಮಹತ್ವದ ಕಾರ್ಯದಲ್ಲಿ ಭಾಗಿಯಾಗುವ ಕೆಲಸವನ್ನು ಯುವಜನತೆ ಮಾಡಬೇಕು, ಪ್ರಸ್ತುತ ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಒಳ್ಳೆಯತನವನ್ನು ಮೈಗೂಡಿಸಿಕೊಳ್ಳಬೇಕು ಎಂದು ಅನಿರುಧ್ ಸಲಹೆ ನೀಡಿದರು

ಇದೇ ವೇಳೆ ಬೆಂಗಳೂರಿನ ಕಲಾವಿದ ವಿಜಯ್ ಅವರು ಅಭಿಮಾನಿಗಳ
ಕೆನ್ನೆಗೆ ಹಾಗೂ ಕೈಗೆ ಕರ್ನಾಟಕ ರತ್ನ ವಿಷ್ಣು, ಹಾಗೂ ಅವರು ನಟಿಸಿದ ಚಿತ್ರಗಳ ಹೆಸರಿನ ಟ್ಯಾಟೋಗಳನ್ನು ಉಚಿತವಾಗಿ ಹಾಕುವ ಮೂಲಕ ಅಭಿಮಾನ ಮೆರೆದರು.

ವಿಷ್ಣುವರ್ಧನ್ ಮೊಮ್ಮಗ ಶ್ರೇಷ್ಠವರ್ಧನ, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ವಿಷ್ಣುವರ್ಧನ್ ಅಭಿಮಾನಿಗಳ ಒಕ್ಕೂಟದ ಅಧ್ಯಕ್ಷ ಎಂ.ಡಿ ಪಾರ್ಥಸಾರಥಿ, ಜಿ ರಾಘವೇಂದ್ರ, ಕರುಣಾಮಯಿ ವಿಷ್ಣು ಅಭಿಮಾನಿ ಬಳಗದ ಅಧ್ಯಕ್ಷ ಎಸ್ ಎನ್ ರಾಜೇಶ್,
ರೇಖಾ ಶ್ರೀನಿವಾಸ್, ಇನ್ನರ್ ವ್ಹೀಲ್ ಕ್ಲಬ್ ನ ಸಂಧ್ಯಾ, ಟಿ ಎಸ್ ಅರುಣ್, ಜ್ಯೋತಿ, ಮತ್ತಿತರರು ಹಾಜರಿದ್ದರು.

ರಕ್ತದಾನದ ಮೂಲಕ ವಿಷ್ಣು ಅವರ ಜನ್ಮದಿನ ಅರ್ಥಪೂರ್ಣ ಆಚರಣೆ Read More

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬ ಅರ್ಥಪೂರ್ಣ ಆಚರಣೆ

ಶ್ರೀರಂಗಪಟ್ಟಣ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಜನುಮದಿನವನ್ನು ಅಭಿಮಾನಿಗಳು ವಿಶೇಷವಾಗಿ ಆಚರಿಸಿದರು.

ಚಾಲೆಂಜಿಂಗ್ ಸ್ಟಾರ್ ದರ್ಶನ್
ಅಭಿಮಾನಿಗಳು ಶ್ರೀರಂಗಪಟ್ಟಣದ ಸಾಯಿಬಾಬಾ ಅನಾಥಾಶ್ರಮದಲ್ಲಿನ ಮಕ್ಕಳೊಂದಿಗೆ ದರ್ಶನ್ ಹುಟ್ಟುಹಬ್ಬ ಆಚರಿಸಿ ಸಂಭ್ರಮಿಸಿದರು.

ಈ ಅನಾಥಾಶ್ರಮದಲ್ಲಿ ದರ್ಶನ್ ಅಭಿಮಾನಿಗಳು
ಕೇಕ್ ಕತ್ತರಿಸಿ ಎಲ್ಲರಿಗೂ ವಿತರಿಸಿದರು.

ನಂತರ ಅಲ್ಲಿನ ವಿದ್ಯಾರ್ಥಿಗಳಿಗೆ ಪೆನ್ನು, ಪುಸ್ತಕಗಳನ್ನು ನೀಡಿದರು.ಅಲ್ಲದೆ ಊಟದ ವ್ಯವಸ್ಥೆಯನ್ನು ಮಾಡಿ ಅಭಿಮಾನಿಗಳು ಹುಟ್ಟುಹಬ್ಬವನ್ನು ಆಚರಿಸಿದರು.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬ ಅರ್ಥಪೂರ್ಣ ಆಚರಣೆ Read More