ಜನಮನ ಸೂರೆಗೊಂಡ ಪಂಜಿನ ಕವಾಯತು

ಮೈಸೂರು, ಅ.3- ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಂದು ರಾತ್ರಿ ನಡೆದ ಪಂಜಿನ ಕವಾಯತು ಜನಮನ ಸೂರೆಗೊಂಡಿತು.

ಮೈಸೂರಿನ ಬನ್ನಿಮಂಟಪದ ಮೈದಾನದಲ್ಲಿ ಕಿಕ್ಕಿರಿದು ತುಂಬಿದ್ದ ಜನ ಸಮೂಹದ ನಡುವೆ ವರ್ಣರಂಚಿತ ಪಂಜಿನ ಕವಾಯತು ನಡೆಯಿತು.

ಪಂಜಿನ ಕವಾಯತು ಕಾರ್ಯಕ್ರಮದಲ್ಲಿ 400 ಮಂದಿಯಿಂದ ನಡೆದ ವಿಶಿಷ್ಟ ವಾದ್ಯ ಸಂಗೀತ, ದ್ರೋಣ್ ಶೋ, ಅಶ್ವಪಡೆಯ ಸಾಹಸ ಜನರನ್ನು ಆಕರ್ಷಿಸಿತು.

ಡಮರುಗ ಶೀರ್ಷಿಕೆ ಅಡಿ ನಡೆದ ವಿಶಿಷ್ಟವಾದ ರಾಜ್ಯ ಸಂಗೀತ ರೋಮಾಂಚನ ನೀಡಿತು.

ಡೊಳ್ಳು, ಡ್ರಮ್, ಚಂಡೇ, ಪಿಟೀಲು, ನಗಾರಿ, ವಯೋಮಿ ಮೂಲಕ ಬನ್ನಿಮಂಟಪದಲ್ಲಿ ಸಂಗೀತ ಲೋಕವೇ ಸೃಷ್ಟಿಯಾಗಿತ್ತು, ಇದರೊಂದಿಗೆ ನೃತ್ಯ ಕಲಾವಿದರು ಸಹ ಹೆಜ್ಜೆ ಹಾಕುವ ಮೂಲಕ ಮತ್ತಷ್ಟು ಮನೋರಂಜನೆ ನೀಡಿದರು.

ಮೈಸೂರಿನ ಅಶ್ವಾರೋಹಿ ಪಡೆಯ ಟೆಂಟ್ ಪಿಗ್ಗಿಂಗ್ ಜನರು ತುದಿಗಾಲಲ್ಲಿ ನಿಲ್ಲುವಂತೆ ಮಾಡಿತು.ಅಷ್ಟು ಅದ್ಭುತ ವಾಗಿತ್ತು.

ಆಗಸದಲ್ಲಿ 3000ಕ್ಕೂ ಹೆಚ್ಚು ದ್ರೋಣಗಳನ್ನು ಹಾರಿಸುವ ಮೂಲಕ ಕೌತುಕವನ್ನೇ ಸೃಷ್ಟಿಸಲಾಗಿತ್ತು‌. ರಣಾಂಗದಲ್ಲಿರುವ ಯೋಧ, ರಾಷ್ಟ್ರೀಯ ಪಕ್ಷಿ ನವಿಲು, ಹುಲಿ, ಗರುಡ, ಕಾಳಿಂಗ ಮರ್ದನ ಶ್ರೀ ಕೃಷ್ಣ, ಕಾವೇರಿ ಮಾತೆ, ಅಂಬಾರಿ ಹೊತ್ತು ಸಾಗುವ ಆನೆ ಚಾಮುಂಡೇಶ್ವರಿ ದೇವಿಯ ಆಕೃತಿಗಳು ಆಗಸದಲ್ಲಿ ಮೂಡಿಬಂದಿತು.ಇದೆಲ್ಲ ವನ್ನು ಅಚ್ಚರಿ ಕಂಗಳಿಂದ ಜನತೆ ನೋಡಿದರು.

ಧಾರವಾಡ ಪೊಲೀಸ್ ತರಬೇತಿ ಶಾಲೆಯ 300 ಮಂದಿ ಪಂಜುಗಳಿಂದ ವಿವಿಧ ಅಕ್ಷರ ಕೃತಿಗಳನ್ನು ಬಾನಂಗಳದಲ್ಲಿ ಚಿತ್ತಾರ ಬಿಡಿಸಿದರು.

ಸುಸ್ವಾಗತ, ಜೈ ಚಾಮುಂಡಿ, ಗಾಂಧೀ ಜಯಂತಿ ಶುಭಾಶಯ, ಕರ್ನಾಟಕ ಪೊಲೀಸ್, ಜೈ ಹಿಂದ್ ಅಕ್ಷರಾ ಕೃತಿಗಳನ್ನು ಬಾನಿನಲ್ಲಿ ಮೂಡಿಸಿದ್ದರು.

ಇದಕ್ಕೂ ಮುನ್ನ ಅತ್ಯಾಕರ್ಷಕ ಪತ ಸಂಚಲನ ನಡೆಯಿತು. ರಾಜ್ಯಪಾಲರು ಪೆರೇಡ್ ಪರೀ ವೀಕ್ಷಣೆ ಮಾಡಿ ವಂದನೆ ಸ್ವೀಕರಿಸಿದರು. ಮೂರು ಸುತ್ತು ಗಾಳಿಯಲ್ಲಿ ಪೊಲೀಸರು ಗುಂಡು ಹಾರಿಸಿದರು.ನಂತರ 21 ಕುಶಾಲ ತೋಪುಗಳನ್ನು ಸಿಡಿಸಲಾಯಿತು. ಚೈತ್ರ ಹಾಗೂ ಡಾಕ್ಟರ್ ಸುಮಂತ್ ಸಿಸ್ಟರ್ ತಂಡದವರು ನಾಡಗೀತೆಯನ್ನು ಹಾಡಿದರು.

ರಾಜ್ಯಪಾಲ ತಾವರ್ ಚೆಂದ್ ಗೆಹ್ಲೋಟ್ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ. ಮಹದೇವಪ್ಪ ಸೇರಿದಂತೆ ಸಚಿವರುಗಳು, ಶಾಸಕರುಗಳು, ಅಧಿಕಾರಿಗಳು ಮತ್ತು ಗಣ್ಯರು ಭಾಗವಹಿಸಿದ್ದರು.

ಕೋಟ್ಯಂತರ ಮಂದಿ ಮನೆಯಲ್ಲಿಯೇ ಚಂದನ ವಾಹಿನಿಯಲ್ಲಿ ಮೂಡಿ ಬಂದ ಈ ಎಲ್ಲಾ ಕಾರ್ಯಗಳನ್ನು ವೀಕ್ಷಿಸಿ ಖುಷಿ ಪಟ್ಟರು.

ಜನಮನ ಸೂರೆಗೊಂಡ ಪಂಜಿನ ಕವಾಯತು Read More

ಕಳೆದ 19 ತಿಂಗಳಲ್ಲಿ ಕಾನೂನು ಸುವ್ಯವಸ್ಥೆಯಲ್ಲಿ ಸಮಸ್ಯೆ ಉದ್ಭವಿಸಿಲ್ಲ:ಗೆಹ್ಲೋಟ್

ಬೆಂಗಳೂರು: ಕಳೆದ 19 ತಿಂಗಳಲ್ಲಿ ಗಂಭೀರವಾದ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳೇನು ಉದ್ಭವಿಸಿಲ್ಲ, ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿ ಕೆಲಸ ಮಾಡುತ್ತಿವೆ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಶ್ಲಾಘಿಸಿದರು.

ಇಂದಿನಿಂದ ಆರಂಭವಾದ ವಿಧಾನಮಂಡಲ ಬಜೆಟ್ ಅಧಿವೇಶನದಲ್ಲಿ ರಾಜ್ಯಪಾಲರು ವಿಧಾನಸಭೆ ಮತ್ತು ಪರಿಷತ್ ಸದಸ್ಯರನ್ನು ಒಳಗೊಂಡ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾಡಿದರು.

ಇದಕ್ಕೂ ಮುನ್ನ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸ್ಪೀಕರ್ ಯು.ಟಿ ಖಾದರ್, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ರಾಜ್ಯಪಾಲರನ್ನು ಸ್ವಾಗತಿಸಿದರು.

ಸರ್ಕಾರ ಬಂದಾಗಿನಿಂದ ಗ್ಯಾರಂಟಿ ಯೋಜನೆಗಳಿಗೆ 70,000 ಕೋಟಿ ಹಣ ಬಿಡುಗಡೆ ಮಾಡಲಾಗಿದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ವರ್ಷಕ್ಕೆ 90,000 ಕೋಟಿಗೂ ಹೆಚ್ಚು ಹಣ ಖರ್ಚು ಮಾಡಲಾಗುತ್ತಿದೆ. ಸರ್ಕಾರ ಅಭಿವೃದ್ಧಿ ವೇಗ ಸದೃಢಗೊಳಿಸಿದೆ. ಆಡಳಿತ ಸಮಾಜದ ಕಟ್ಟಕಡೆಯ ವ್ಯಕ್ತಿಯ ಕಣ್ಣೀರು ಒರೆಸುವ ಅವಕಾಶವಾಗಿ ಬಳಕೆಗೆ ಬದ್ಧವಾಗಿದೆ ಎಂದು ತಿಳಿಸಿದರು.

ಕಳೆದ ಬಜೆಟ್ ನಲ್ಲಿ ಮಾಡಿದ್ದ 334 ಘೋಷಣೆಗಳ ಪೈಕಿ 331 ಘೋಷಣೆಗಳಿಗೆ ಸರ್ಕಾರಿ ಆದೇಶ ಆಗಿದೆ. ಸಾಮಾಜಿಕ ಪಿಂಚಣಿ ಯೋಜನೆ ಸೇರಿ ನೇರ ನಗದು – ಸಬ್ಸಿಡಿ ಪ್ರೋತ್ಸಾಹದಿಂದ 1.25 ಕೋಟಿಗೂ ಹೆಚ್ಚು ಕುಟುಂಬಗಳಿಗೆ ಅನುಕೂಲ ಆಗಿದೆ. 13 ಸಾವಿರ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗಿದೆ. ಉನ್ನತ ಶಿಕ್ಷಣದಲ್ಲಿ 1,088 ಸಹಾಯಕ ಪ್ರಾಧ್ಯಾಪಕರ ನೇಮಕ ಮಾಡಲಾಗಿದೆ. 8,311 ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಸರ್ಕಾರದ ಸಾಧನೆಗಳನ್ನು ಗೆಹ್ಲೋಟ್ ವಿವರಿಸಿದರು.

ವಿವೇಕ ಯೋಜನೆ ಅಡಿ ಮತ್ತು ವಿಶೇಷ ಯೋಜನೆ ಅಡಿ 5,349 ಶಾಲಾ ಕೊಠಡಿಗಳು ಪೂರ್ಣಗೊಂಡಿವೆ. 784 ಕೊಠಡಿಗಳ ಕಾಮಗಾರಿ ಪ್ರಗತಿಯಲ್ಲಿವೆ. 522 ಕೆಪಿಎಸ್ ಶಾಲೆಗಳ ಪ್ರಾರಂಭಕ್ಕೆ ಕ್ರಮ ಕೈಗೊಳ್ಳಲಾಗಿದೆ. 1,953 ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆ ಪ್ರಾರಂಭ ಮಾಡಲಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಸಮಸ್ಯೆ ಇಲ್ಲ ಎಂದು ಭಾಷಣದಲ್ಲಿ ಪ್ರಸ್ತಾಪಿಸಿದರು.

ಇದೇ ವೇಳೆ ಪ್ರತಿಪಕ್ಷಗಳ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆರೋಪಕ್ಕೆ ರಾಜ್ಯಪಾಲರ ಭಾಷಣದ ಮೂಲಕ ಸರ್ಕಾರ ತಿರುಗೇಟು ನೀಡಿದ್ದು ಕಳೆದ 19 ತಿಂಗಳಲ್ಲಿ ಗಂಭೀರವಾದ ಕಾನೂನು ಸುವ್ಯವಸ್ಥೆ ಸಮಸ್ಯೆಗಳೇನು ಉದ್ಭವಿಸಿಲ್ಲ ಎಂದು ಸ್ಪಷ್ಟಪಡಿಸಲಾಯಿತು.

ಇತ್ತೀಚಿನ ದಿನಗಳಲ್ಲಿ ಇಡೀ ದೇಶದಲ್ಲಿ ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಿವೆ. ರಾಜ್ಯ ಪೊಲೀಸ್ ಇಲಾಖೆಯು ನಿರಂತರವಾಗಿ ಜಾಗೃತಿ ಮೂಡಿಸಿ ಅಪರಾಧಿಗಳನ್ನು ಶೀಘ್ರವಾಗಿ ಪತ್ತೆ ಹಚ್ಚುವ ಕೆಲಸ ಮಾಡುತ್ತಿದೆ ಹಾಗಾಗಿ ಈ ಪ್ರಕರಣಗಳಲ್ಲೂ ಇಳಿಕೆ ಕಾಣುತ್ತಿದೆ ಎಂದು ರಾಜ್ಯಪಾಲರು ಹೇಳಿದರು.

ಹಾಲಿನ ಉತ್ಪಾದನೆಯಲ್ಲಿ ರಾಜ್ಯ ದಾಖಲೆ ಬರೆದಿದೆ. ದಿನಕ್ಕೆ ಕೆಎಂಎಫ್ 1 ಕೋಟಿ ಲೀಟರ್ ಹಾಲು ಸಂಗ್ರಹ ಮಾಡುತ್ತಿದ್ದು, ಇದುವರೆಗೆ ಪಶು ಪಾಲಕರಿಗೆ 1,500 ಕೋಟಿ ಪ್ರೋತ್ಸಾಹ ಧನ ನೀಡಿದೆ. ಪ್ರಸಕ್ತ ಸಾಲಿನಲ್ಲಿ 24,934 ರಾಸುಗಳಿಗೆ, 33,373 ಕುರಿ, ಮೇಕೆಗಳಿಗೆ 26.60 ಕೋಟಿ ಪ್ರೋತ್ಸಾಹ ಧನ ನೀಡಿದೆ ಎಂದರಲ್ಲದೇ ಸರ್ಕಾರ ಆರ್ಥಿಕ ಶಿಸ್ತು ಕಾಯ್ದುಕೊಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಜನವರಿ 17ರ ವರೆಗೆ ಶಕ್ತಿ ಯೋಜನೆ ಅಡಿಯಲ್ಲಿ 376.70 ಕೋಟಿ ಮಹಿಳೆಯರು ಸಂಚಾರ ಮಾಡಿದ್ದಾರೆ. ಶಕ್ತಿ ಯೋಜನೆಗೆ ಸರ್ಕಾರದಿಂದ ಇದುವರೆಗೆ 8,215 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. 2024-25ರ ಬಜೆಟ್ನಲ್ಲಿ ನಮ್ಮ ಸರ್ಕಾರ ಶೇ.15.01 ರಷ್ಟು ಸಂಪತ್ತನ್ನು ಬಂಡವಾಳ ವೆಚ್ಚಗಳಿಗಾಗಿ ವಿನಿಯೋಗ ಮಾಡಲಾಗಿದೆ. ಡಿಸೆಂಬರ್ ಅಂತ್ಯದ ವರೆಗೆ 1,81,908 ಕೋಟಿ ರೂ. ರಾಜಸ್ವ ಸಂಗ್ರಹಮಾಡಿದೆ ಎಂದು ರಾಜ್ಯಪಾಲರು ತಿಳಿಸಿದರು.

ರಾಜ್ಯದ ರೈತ ಮತ್ತು ರೈತ ಉತ್ಪಾದಕರ ಸಂಸ್ಥೆಯಿಂದ ಉತ್ಪಾದನೆಯಾಗುವ ಜೇನುತುಪ್ಪಕ್ಕೆ ʻಝೇಂಕಾರ್ʼ ಹೆಸರಿನ ವಿಶೇಷ ಬ್ರ್ಯಾಂಡ್ ರೂಪಿಸಿ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗಿದೆ. ಜನವರಿ ಅಂತ್ಯಕ್ಕೆ 20.22 ಲಕ್ಷ ರೈತರಿಗೆ 16,942 ಕೋಟಿ ರೂ. ಬೆಳೆ ಸಾಲ ಮತ್ತು 46,000 ರೈತರಿಗೆ 1,442 ಕೋಟಿ ರೂ. ಮಧ್ಯಮ, ದೀರ್ಘಾವಧಿಯ ಕೃಷಿ ಸಾಲ ವಿತರಣೆ ಮಾಡಲಾಗಿದೆ ಎಂದು ಹೇಳಿದರು.

ಕಳೆದ 19 ತಿಂಗಳಲ್ಲಿ ಕಾನೂನು ಸುವ್ಯವಸ್ಥೆಯಲ್ಲಿ ಸಮಸ್ಯೆ ಉದ್ಭವಿಸಿಲ್ಲ:ಗೆಹ್ಲೋಟ್ Read More

ಸೈಬರ್ ಅಪರಾಧ ಒಂದು ಭಯಗ್ರಸ್ತ ವಿಷಯವಾಗಿದೆ:ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧ ಒಂದು ಭಯಗ್ರಸ್ತ ವಿಷಯವಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆತಂಕ ವ್ಯಕ್ತಪಡಿಸಿದರು.

ಬೆಂಗಳೂರಿನ ಮಾಣಿಕ್‌ ಶಾ‌ ಪೆರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವ ಭಾಷಣ
ಮಾಡಿದ ರಾಜ್ಯಪಾಲರು,ರಾಜ್ಯದಲ್ಲಿ ಈಗ ವರದಿಯಾಗುತ್ತಿರುವ ಎಲ್ಲಾ ಅಪರಾಧ ಪ್ರಕರಣಗಳ ಒಟ್ಟು ಶೇಕಡಾವಾರು ಪ್ರಮಾಣದಲ್ಲಿ ಸೈಬರ್ ಅಪರಾಧಗಳು ಶೇ.10ರಷ್ಟಿದೆ ಎಂದು ಹೇಳಿದರು.

ಅಪರಾಧಿಗಳನ್ನು ಪತ್ತೆ ಹಚ್ಚಲು ಮತ್ತು ಶಿಕ್ಷಿಸಲು ತಂತ್ರಜ್ಞಾನದ ಪರಿಣಾಮಕಾರಿ ಬಳಕೆಯು ಸಾರ್ವಜನಿಕ ಜಾಗೃತಿ ಮೂಡಿಸುವ ಪ್ರಮುಖ ಹಂತಗಳಾಗಿವೆ ಮತ್ತು ಈ ನಿಟ್ಟಿನಲ್ಲಿ ಸರ್ಕಾರ ಎಲ್ಲಾ ಹಂತಗಳಲ್ಲಿ ತರಬೇತಿ ಮತ್ತು ಅಗತ್ಯ ತಂತ್ರಜ್ಞಾನವನ್ನು ಒದಗಿಸುತ್ತಿದೆ ಎಂದು ತಿಳಿಸಿದರು.

ಸರ್ಕಾರವು ನಾಡಿನ ಸಮಗ್ರ ಅಭಿವೃದ್ಧಿ ಮತ್ತು ಸಂಪತ್ತಿನ ವಿನಿಯೋಗದಲ್ಲಿ ಸಾಮಾಜಿಕ ನ್ಯಾಯವನ್ನು ಅನುಷ್ಠಾನ ಮಾಡುವಲ್ಲಿ ಮಹತ್ತರ ಪಾತ್ರವಹಿಸಿದೆ ಎಂದು ಥಾವರ್ ಚಂದ್ ಗೆಹ್ಲೋಟ್ ಹೇಳಿದರು.

ಆರೋಗ್ಯ, ವಿದ್ಯುತ್, ಶಿಕ್ಷಣ, ರಸ್ತೆ ಮುಂತಾದ ಮೂಲಭೂತ ಸೌಲಭ್ಯಗಳ ಒದಗಿಸುವಿಕೆಯಲ್ಲಿ ರಾಜ್ಯ ಮುಂದೆ ಇದೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ಪೊಲೀಸರು ಅತ್ಯುತ್ತಮ ಕೆಲಸ ಮಾಡುತ್ತಿದ್ದಾರೆ, ಕಾನೂನು ಮತ್ತು ಸುವ್ಯವಸ್ಥೆ ನಿರ್ವಹಣೆ ಮತ್ತು ಅಪರಾಧ ಪತ್ತೆ ಮತ್ತು ನಿಯಂತ್ರಣದಲ್ಲಿ ಉತ್ತಮ ಪ್ರಗತಿ ಸಾಧಿಸಿದ್ದಾರೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಎಲ್ಲಾ ರೀತಿಯ ಅಪರಾಧಗಳನ್ನು, ವಿಶೇಷವಾಗಿ ಗಂಭೀರ ಅಪರಾಧಗಳನ್ನು ನಿಯಂತ್ರಿಸುವ ಮೂಲಕ ಅಪರಾಧಗಳ ಸಂಖ್ಯೆಯಲ್ಲಿನ ಇಳಿಕೆಯು ಅತ್ಯಂತ ಗಮನಾರ್ಹ ಸಾಧನೆಯಾಗಿದೆ ಎಂದು ರಾಜ್ಯಪಾಲರು ಮೆಚ್ಚುಗೆ‌ ವ್ಯಕ್ತಪಡಿಸಿದರು.

ದೇಶದ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ರಾಜ್ಯದಲ್ಲಿ ಕರ್ತವ್ಯ ನಿರತ ಹಾಗೂ ಕರ್ತವ್ಯದ ಮೇಲಿಲ್ಲದ ಅವಧಿಯ ಅಪಘಾತಗಳಿಗೆ ರೂ.1 ಕೋಟಿ ಮೊತ್ತದ ಅಪಘಾತ ವಿಮಾ ಯೋಜನೆ ಸೌಲಭ್ಯ ಜಾರಿಯಲ್ಲಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಾರ್ಬನ್ ಘಟಕಗಳ ಮಾರಾಟದ ಮೂಲಕ ರೈತರ ಆದಾಯವನ್ನು ಹೆಚ್ಚಿಸಲು ಕಾರ್ಬನ್ ಬೇರ್ಪಡಿಸುವ ತೋಟಗಾರಿಕೆ ಬೆಳೆಗಳನ್ನು ಗುರುತಿಸುವ ಮೂಲಕ ಕಾರ್ಬನ್ ಕ್ರೆಡಿಟ್ ಫ್ರೇಮ್ ವರ್ಕ್ ಎಂಬ ಹೊಸ ಕಾರ್ಯಕ್ರಮವನ್ನು ಪರಿಚಯಿಸಲಾಗಿದೆ.

ಪ್ರಾಥಮಿಕ ಹಾಗೂ ಉನ್ನತ ಶಿಕ್ಷಣವನ್ನು ಬಲಪಡಿಸುವ ದೃಷ್ಟಿಯಿಂದ ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿಯನ್ನು ತರಲು ಪ್ರಕ್ರಿಯೆಗಳನ್ನು ಪ್ರಾರಂಭಿಸಲಾಗಿದೆ.
ರಾಜ್ಯದ ಸರ್ವಾಂಗೀಣ ಮತ್ತು ಅಂತರ್ಗತ ಅಭಿವೃದ್ಧಿಯನ್ನು ಉತ್ತೇಜಿಸುವ ಸಲುವಾಗಿ ಸರ್ಕಾರವು ಗ್ಯಾರಂಟಿ ಯೋಜನೆಗಳು ಮತ್ತು ಇತರ ಕಲ್ಯಾಣ ಕಾರ್ಯಕ್ರಮಗಳಿಗೆ ಸಾಕಷ್ಟು ಹಣವನ್ನು ಹಂಚಿಕೆ ಮಾಡಿದೆ ಗೌರ್ನರ್ ತಿಳಿಸಿದರು.

ಒಲಿಂಪಿಕ್ಸ್, ಪ್ಯಾರಾಲಿಂಪಿಕ್ಸ್, ಏಷ್ಯನ್ ಗೇಮ್ಸ್, ಪ್ಯಾರಾ ಏಷ್ಯನ್ ಗೇಮ್ಸ್ ಮತ್ತು ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಪದಕ ಗೆದ್ದ 12 ಸಾಧನೆಗೈದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಗ್ರೂಪ್-ಎ, ಗ್ರೂಪ್-ಬಿ ಮತ್ತು ಇತರ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆದೇಶ ಪತ್ರಗಳನ್ನು ನೀಡಲಾಗಿದೆ.

ಕರ್ನಾಟಕ ರಾಜ್ಯದಲ್ಲಿ ಜಾರಿಯಲ್ಲಿರುವ ಎಲ್ಲಾ ಕಾನೂನುಗಳ ಮಾಹಿತಿಯನ್ನು ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಾಗುವಂತೆ ಮಾಡಲು, 1957 ರಿಂದ ಇತ್ತೀಚಿನವರೆಗೆ ಕಾನೂನಿನಲ್ಲಿ ಮಾಡಲಾದ ಎಲ್ಲಾ ತಿದ್ದುಪಡಿಗಳನ್ನು www.dpal.karnataka.gov.in ವೆಬ್ಸೈಟ್ನಲ್ಲಿ ಸೇರಿಸಲಾಗಿದೆ ಮತ್ತು ಕಾರ್ಯಗತಗೊಳಿಸಲಾಗಿದೆ ಎಂದು ಸರ್ಕಾರದ ಯೋಜನೆಗಳನ್ನು ರಾಜ್ಯಪಾಲರು ತಿಳಿಸಿದರು.

ಸೈಬರ್ ಅಪರಾಧ ಒಂದು ಭಯಗ್ರಸ್ತ ವಿಷಯವಾಗಿದೆ:ಥಾವರ್ ಚಂದ್ ಗೆಹ್ಲೋಟ್ Read More

ಸಿ.ಟಿ.ರವಿಗೆ ರಕ್ಷಣೆ ನೀಡಲು ರಾಜ್ಯಪಾಲರಿಗೆ ಬಿಜೆಪಿ ಮನವಿ

ಬೆಂಗಳೂರು: ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಅವರಿಗೆ ರಕ್ಷಣೆ ನೀಡುವಂತೆ ಕೋರಿ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರಿಗೆ ಬಿಜೆಪಿ ನಿಯೋಗ ಮನವಿ ಸಲ್ಲಿಸಿದೆ.

ರಾಜ್ಯಪಾಲರ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್,ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಬೇಕೆಂಬುದು ನಮ್ಮ ಆಗ್ರಹ ಎಂದು ಹೇಳಿದರು.

ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿ ಮಾಡಿ ಶಾಸಕ ಸಿ.ಟಿ.ರವಿ ಅವರಿಗೆ ಮಾಡಿದ ಅಪಮಾನದ ಬಗ್ಗೆ ತಿಳಿಸಲಾಗಿದೆ ಎಂದು ಹೇಳಿದರು.

ಸಿ.ಟಿ.ರವಿ ಅವರಿಗೆ ಮುಸ್ಲಿಂ ಉಗ್ರವಾದಿ ಹಾಗೂ ನಕ್ಸಲರಿಂದ ಬೆದರಿಕೆ ಇದೆ. ಹೀಗಿದ್ದರೂ ಅವರನ್ನು ಕಬ್ಬಿನ ಗದ್ದೆಗೆ ಕರೆದುಕೊಂಡು ಹೋಗಿರುವುದು ಅನುಮಾನ ತಂದಿದೆ ಎಂದು ತಿಳಿಸಿದರು ‌

ಒಬ್ಬ ಪೊಲೀಸ್‌ ಅಧಿಕಾರಿ ಸುರಕ್ಷತೆ ದೃಷ್ಟಿಯಿಂದ ಅವರನ್ನು ಗದ್ದೆಗೆ ಕರೆದೊಯ್ಯಲಾಗಿದೆ ಎಂದು ಹೇಳಿದ್ದಾರೆ ಅಂದರೆ ಪೊಲೀಸ್‌ ಠಾಣೆ ಸುರಕ್ಷಿತವಲ್ಲ ಎಂದರ್ಥ. ಪೊಲೀಸ್‌ ಠಾಣೆ ಸುರಕ್ಷಿತವಲ್ಲ ಎಂಬುದನ್ನು ಈ ಸರ್ಕಾರ ಜನರಿಗೆ ತಿಳಿಸಿದೆ ಎಂದು ಟೀಕಿಸಿದರು.

ಸಿ.ಟಿ.ರವಿ ಅವರಿಗೇ ಹೀಗಾದರೆ ಇನ್ನು ಸಾರ್ವಜನಿಕರ ಪಾಡೇನು ಎಂಬ ಪ್ರಶ್ನೆ ಕಾಡುತ್ತಿದೆ. ಇದು ರಾಜ್ಯ ಸರ್ಕಾರಕ್ಕೆ ಒಂದು ಕಪ್ಪು ಚುಕ್ಕೆ, ಅದಕ್ಕಾಗಿ ರಾಜ್ಯಪಾಲರು ಸಂವಿಧಾನವನ್ನು ರಕ್ಷಣೆ ಮಾಡಿ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದೇವೆ ಎಂದು ತಿಳಿಸಿದರು.

ಸಿ.ಟಿ.ರವಿ ಎಲ್ಲಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಪ್ರಶ್ನಿಸುತ್ತಾರೆ. ಸಿಎಂ ಸಿದ್ದರಾಮಯ್ಯ ಸುರಕ್ಷತೆಯ ಕಾರಣ ನೀಡುತ್ತಾರೆ. ಇದೊಂದು ಬಫೂನ್‌ ಸರ್ಕಾರ, ಇಷ್ಟು ಕೆಟ್ಟದಾಗಿ ಯಾರೂ ಸರ್ಕಾರ ನಡೆಸಿಲ್ಲ.
ಎಂದು ವಾಗ್ದಾಳಿ ನಡೆಸಿದರು.

ಪೊಲೀಸ್‌ ಆಯುಕ್ತರಿಗೆ ನಿರಂತರವಾಗಿ ಫೋನ್‌ ಕರೆ ಬರುತ್ತಿತ್ತು. ಇವರಿಗೆ ಮುಖ್ಯಮಂತ್ರಿ ಅಥವಾ ಉಪಮುಖ್ಯಮಂತ್ರಿ ಕರೆ ಮಾಡುತ್ತಿದ್ದರೇ ಎಂಬ ಅನುಮಾನ ಇದೆ ಸತ್ಯ ಗೊತ್ತಾಗಬೇಕು. ಇದರ ತನಿಖೆಯನ್ನು ನಿಷ್ಪಕ್ಷಪಾತವಾಗಿ ಮಾಡಬೇಕು ಎಂದು ಅಶೋಕ್ ಆಗ್ರಹಿಸಿದರು.

ಪೊಲೀಸ್‌ ಠಾಣೆಗಳು ಕಾಂಗ್ರೆಸ್‌ ಕಚೇರಿಯಾಗಿ ಬದಲಾಗಿದೆ. ಎಲ್ಲ ತನಿಖೆಯನ್ನು ಪೊಲೀಸರೇ ಮಾಡುತ್ತಾರೆ ಎಂದರೆ ಸಿಒಡಿಗೆ ಕೊಟ್ಟರೂ ಮತ್ತೊಬ್ಬರಿಗೆ ಕೊಟ್ಟರೂ ಒಂದೇ. ಪೊಲೀಸರು ಜವಾಬ್ದಾರಿಯಿಂದ ನಡೆದುಕೊಂಡಿಲ್ಲ. ಅದಕ್ಕಾಗಿ ನ್ಯಾಯಾಂಗ ತನಿಖೆ ಆಗಬೇಕು. ನ್ಯಾಯಾಂಗ ತನಿಖೆಯಲ್ಲಿ ಯಾವುದೇ ತೀರ್ಪು ಬಂದರೂ ನಾವು ಒಪ್ಪಿಕೊಳ್ಳುತ್ತೇವೆ ಎಂದು ಅಶೋಕ್ ತಿಳಿಸಿದರು.

ಸಿ.ಟಿ.ರವಿಗೆ ರಕ್ಷಣೆ ನೀಡಲು ರಾಜ್ಯಪಾಲರಿಗೆ ಬಿಜೆಪಿ ಮನವಿ Read More