ಪಾರಂಪರಿಕ ‌ಕಟ್ಟಡ ಉಳಿವಿಗಾಗಿ ಪಾರಿವಾಳಗಳಿಗೆ ಧಾನ್ಯ ಹಾಕದಂತೆ ಮನವಿ

ಮೈಸೂರು: ಮೈಸೂರು ಅರಮನೆ ಮತ್ತು ಇತರೆ ಐತಿಹಾಸಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಧಾನ್ಯ ಚೆಲ್ಲುವುದನ್ನು ನಿಷೇಧಿಸುವ ಬಗ್ಗೆ ಸಂಘ ಸಂಸ್ಥೆಗಳು ಸಂಸದ ಯದುವೀರ್ ಒಡೆಯರ್ ಮಾತುಕತೆ ನಡೆಸಿ ಮನವಿ ಸಲ್ಲಿಸಿದರು

ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಯದುವೀರ್ ಅವರಿಗೆ ಸಂಘ ಸಂಸ್ಥೆಗಳಾದ ಕ್ಲೀನ್ ಮೈಸೂರು ಫೌಂಡೇಶನ್, ಮೈಸೂರು ಗ್ರಾಹಕರ ಪರಿಷತ್ತು,ಸುರಕ್ಷಾ ಫೌಂಡೇಶನ್, ಮೈಸೂರು ಟ್ರಾವೆಲ್ ಅಸೋಸಿಯೇಷನ್, ಮೈಸೂರು ಸಂಘ ಸಂಸ್ಥೆಗಳ ಒಕ್ಕೂಟ, ಗಂಧದಗುಡಿ ಫೌಂಡೇಶನ್, ಅರಣ್ಯ ಔಟ್ರೇಚ್, ವಿಶ್ವ ಹಿಂದೂ ಪರಿಷತ್ ಸಂಘ ಸಂಸ್ಥೆಗಳ ವತಿಯಿಂದ ಮನವಿ ಸಲ್ಲಿಸಲಾಯಿತು.

ಮೈಸೂರು ಅರಮನೆ ಮತ್ತು ಮೈಸೂರಿನ ಇತರೆ ಐತಿಹಾಸಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಧಾನ್ಯ ಚೆಲ್ಲುವುದನ್ನು ನಿಷೇಧಿಸುವ ಕುರಿತು ಮಾನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಯದುವೀರ್ ಸಭೆ ನಡೆಸಿದರು.

ಪಾರಿವಾಳಗಳಿಗೆ ಅರಮನೆಯ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಪ್ರತಿ ದಿನ ಹೆಲ್ಪಿಂಗ್ ಹ್ಯಾಂಡ್ ಸಂಸ್ಥೆಯವರು ಧಾನ್ಯಗಳನ್ನು ಹಾಕುತಿದ್ದರು.

ಧಾನ್ಯ ಹಾಕುವುದು ಸಹನಭೂತಿಯ ಕ್ರಿಯೆ, ಆದರೆ ಇದರಿಂದ ಪಾರಂಪರಿಕ ಕಟ್ಟಡಗಳಿಗೆ ಹಾನಿ ಉಂಟಾಗುತ್ತಿದೆ,ಆದ್ದರಿಂದ ಇದನ್ನು ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಸಂಘ ಸಂಸ್ಥೆಗಳು ಸಲ್ಲಿಸಿದ ಮನವಿ ಪರಿಶೀಲಿಸಿ, ಕಾನೂನಾತ್ಮಕವಾಗಿ ಪಾರಿವಾಳಗಳಿಗೆ ಆಹಾರ ಪದಾರ್ಥಗಳನ್ನು ಹಾಕುವುದನ್ನು ನಿಷೇಧಿಸಲು ಕ್ರಮ ಕೈಗೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸಂಸದರು ಸೂಚನೆ ನೀಡಿದರು.

ಪಾರಂಪರಿಕ ‌ಕಟ್ಟಡ ಉಳಿವಿಗಾಗಿ ಪಾರಿವಾಳಗಳಿಗೆ ಧಾನ್ಯ ಹಾಕದಂತೆ ಮನವಿ Read More

ಕಿಚ್ಚ ಸುದೀಪ್ ಹುಟ್ಟುಹಬ್ಬ:ಹಣ್ಣು,ದಿನಸಿ ಸಾಮಗ್ರಿ ವಿತರಣೆ

ಮೈಸೂರು: ಖ್ಯಾತ ನಟ ಕಿಚ್ಚ ಸುದೀಪ್ ಹುಟ್ಟು ಹಬ್ಬದ ಅಂಗವಾಗಿ ಮೈಸೂರಿನ ರಾಮಾನುಜ ರಸ್ತೆಯಲ್ಲಿರುವ ಜೆ.ಎಸ್.ಎಸ್. ಸಂಸ್ಥೆಯ ವಿಕಲಚೇತನ ಉದ್ಯೋಗಸ್ಥ ಮಹಿಳೆಯರು ಹಾಗೂ ವಿದ್ಯಾರ್ಥಿನಿಯರ ನಿಲಯದವರಿಗೆ ಹಣ್ಣು, ದಿನಸಿ ಸಾಮಗ್ರಿ ವಿತರಿಸಲಾಯಿತು.

ಎಸ್ ಪ್ರಕಾಶ್ ಪ್ರಿಯಾದರ್ಶನ್ ಸ್ನೇಹ ಬಳಗದ ವತಿಯಿಂದ ಹಣ್ಣು, ದಿನಸಿ ಸಾಮಗ್ರಿ ವಿತರಿಸಲಾಯಿತು.

ಈ ವೇಳೆ ಮಾತನಾಡಿದ ಜೆಡಿಎಸ್ ಕಾರ್ಯಾದಕ್ಷ ಪ್ರಕಾಶ್ ಪ್ರಿಯದರ್ಶನ್
ಸ್ಯಾಂಡಲ್‌ ವುಡ್ ಅಷ್ಟೇ ಅಲ್ಲದೇ ಬಾಲಿವುಡ್‌ ಸಿನಿಮಾಗಳಲ್ಲೂ ತಮ್ಮ ಅಮೋಘ ಅಭಿನಯದ ಮೂಲಕ ರಾಷ್ಟ್ರೀಯ, ಅಂತರರಾಷ್ಟ್ರೀಯ ಮಟ್ಟದಲ್ಲಿ ಕನ್ನಡದ ಕೀರ್ತಿ ಪತಾಕೆ ಹಾರಿಸುತ್ತಿರುವ ಕಿಚ್ಚ ಸುದೀಪ್ ಅವರು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಹಾರೈಸಿದರು.

ಈ ವೇಳೆ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಹೋಮದೇವ,ಸುಬ್ರಮಣ್ಯ, ಛಾಯಾ, ಯಶವಂತ್ ಕುಮಾರ್, ವೀರಭದ್ರ ಸ್ವಾಮಿ, ಚಂದ್ರಶೇಖರ್ , ಮಹೇಶ್, ಮಹದೇವ್,ಎಸ್‌.ಪಿ. ಅಕ್ಷಯ್ ಪ್ರಿಯಾದರ್ಶನ್, ಹರ್ಷಿತ್ ಎಸ್ ನಾಗೇಶ್ ಮತ್ತಿತರರು ಉಪಸ್ಥಿತರಿದ್ದರು.

ಕಿಚ್ಚ ಸುದೀಪ್ ಹುಟ್ಟುಹಬ್ಬ:ಹಣ್ಣು,ದಿನಸಿ ಸಾಮಗ್ರಿ ವಿತರಣೆ Read More