ಗೃಹ ಸಚಿವರ ರಾಜೀನಾಮೆಗೆ ಆಪ್ ಆಗ್ರಹ
ಬೆಂಗಳೂರು: ರಾಜ್ಯದಲ್ಲಿ ಎಲ್ಲೆಂದರಲ್ಲಿ ಅವ್ಯಾಹತವಾಗಿ ಅಪರಾಧ ಚಟುವಟಿಕೆಗಳು ನಡೆಯುತ್ತಿದ್ದು ಜನತೆ ಶಾಂತಿಯಿಂದ ಜೀವಿಸಲು ಸಾಧ್ಯವಾಗುತ್ತಿಲ್ಲ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಪ್ರಚಾರ ಸಮಿತಿಯ ಉಪಾಧ್ಯಕ್ಷ ಲಕ್ಷ್ಮಿಕಾಂತ ರಾವ್ ಆತಂಕ ವ್ಯಕ್ತಪಡಿಸಿದರು.
ಆಮ್ ಆದ್ಮಿ ಪಕ್ಷದ ಮಾಧ್ಯಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,
ಹಾಡಹಗಲೇ ಸಿನಿಮಿಯ ರೀತಿಯಲ್ಲಿ ಕೋಟ್ಯಾಂತರ ಹಣವನ್ನು ಲೂಟಿ ಮಾಡುವಂತ ಪ್ರಕರಣಗಳು ನಡೆಯುತ್ತಿವೆ. ಮಹಿಳೆ ಮತ್ತು ಮಕ್ಕಳ ಮೇಲೆ ಮೇಲೆ ನಿರಂತರ ಅತ್ಯಾಚಾರ, ದೌರ್ಜನ್ಯ ನಡೆಯುತ್ತಲೇ ಇವೆ.ಇದರ ಹೊಣೆ ಹೊತ್ತು ಗೃಹ ಸಚಿವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
ರಾಜ್ಯದಲ್ಲಿ ಕೋಟ್ಯಾಂತರ ರೂಪಾಯಿಗಳ ಸೈಬರ್ ಅಪರಾಧಗಳು, ಕಳ್ಳತನ ಕೊಲೆ , ದೊಂಬಿ, ಕೋಮು ದುಳ್ಳುರಿ ನಡೆಯುತ್ತಿದ್ದರೂ ಗೃಹ ಸಚಿವ ಜಿ ಪರಮೇಶ್ವರ್ ಉಡಾಫೆ ಉತ್ತರಗಳನ್ನು ನೀಡುತ್ತಾ ನಿರಂತರ ವೈಫಲ್ಯವನ್ನು ಹೊಂದುತ್ತಿದ್ದಾರೆ ಎಂದು ಲಕ್ಷ್ಮಿಕಾಂತ ರಾವ್
ಟೀಕಿಸಿದರು.
ಗೃಹ ಸಚಿವರಿಗೆ ಪೊಲೀಸ್ ಇಲಾಖೆಯ ಮೇಲೆ ಎಳ್ಳಷ್ಟೂ ಹತೋಟಿ ಇಲ್ಲದಂತಾಗಿದೆ. ಕೂಡಲೇ ಇಂತಹ ನಿರ್ಲಕ್ಷ್ಯ,ಬೇಜವಾಬ್ದಾರಿ ಮಂತ್ರಿಗಳನ್ನು ಸಂಪುಟದಿಂದ ಕೈ ಬಿಡಬೇಕು ಎಂದು ಮುಖ್ಯ ಮಂತ್ರಿಗಳನ್ನು ಆಗ್ರಹಿಸಿದರು.
ಗೃಹ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ಹಮ್ಮಿಕೊಳ್ಳಲು ನಿರ್ಧರಿಸಿದ್ದೆವು,ಆದರೆ ಪೊಲೀಸರು ಅವಕಾಶ ನೀಡುತ್ತಿಲ್ಲ. ಇದು ಹೀಗೇ ಮುಂದುವರೆದರೆ ಮುಖ್ಯಮಂತ್ರಿಗಳ ಮನೆ ಮುಂದೆ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಿದ್ದಾರೆ ಎಂದು ಲಕ್ಷ್ಮಿಕಾಂತ ರಾವ್ ಎಚ್ಚರಿಸಿದರು.
ಗೃಹ ಸಚಿವರ ರಾಜೀನಾಮೆಗೆ ಆಪ್ ಆಗ್ರಹ Read More