ಹನಿಟ್ರ್ಯಾಪ್ ದೂರು ದಾಖಲಿಸಲಿಲ್ಲವೇಕೆ ಸಿಎಂ ಕುರ್ಚಿ ಭದ್ರಪಡಿಸುವ ತಂತ್ರವೇ:ಶ್ರೀವತ್ಸ

ಮೈಸೂರು: ರಾಜ್ಯದಲ್ಲಿ ಹನಿಟ್ರ್ಯಾಪ್‌ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ಶ್ರೀವತ್ಸ ಅವರು, ಹನಿಟ್ರ್ಯಾಪ್ ಸಂಬಂಧ ರಾಜಣ್ಣ ಏಕೆ ದೂರು ನೀಡಿರಲಿಲ್ಲ ಹೇಳಲಿ ಎಂದು ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಹನಿಟ್ರ್ಯಾಪ್ ಸಂಬಂಧ ಈವರಗೆ ಯಾಕೆ ದೂರು ದಾಖಲಿಸಲಿಲ್ಲ ಇದು‌ ಸಿಎಂ ಕುರ್ಚಿ ಭದ್ರಪಡಿಸುವ ತಂತ್ರವೇ ಎಂದು ಪ್ರಶ್ನಿಸಿದರು.

ರಾಜಣ್ಣ ಹಾಗೂ ರಾಜಣ್ಣ ಪುತ್ರ ಸದನದಲ್ಲೇ 48 ಮಂದಿ ಕೇಂದ್ರ ನಾಯಕರು ಇದರಲ್ಲಿ ಇದ್ದಾರೆ ಎಂದಿದ್ದಾರೆ. ಅದರಲ್ಲಿ ಇರುವ ನಾಯಕರು ಯಾರು, ಇದರ‌ ಹಿಂದೆ ಯಾರಿದ್ದಾರೆ ಎಂಬುದರ ಸಮಗ್ರ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದರು.

ಸಿಡಿ ಫ್ಯಾಕ್ಟರಿಯ ಮಾಲೀಕ ಯಾರು ಪತ್ತೆ ಆಗಬೇಕು, ಹರೀಶ್ ಗೌಡ ಅವರ ವಿರುದ್ಧವೂ ಹನಿಟ್ರ್ಯಾಪ್ ಆಗಿತ್ತು, ಈ ಹಿಂದೆ ಕಬ್ಬನ್ ಪೇಟೆ ಠಾಣೆಯಲ್ಲಿ ದೂರು ನೀಡಿದ್ದರು ಎಂದು ನೆನಪಿಸಿದರು.

ವಿಧಾನಸಭೆ, ವಿಧಾನಪರಿಷತ್ ನಲ್ಲಿ ಈ‌ ಹಿಂದೆಯೂ ಹಲವು ಘಟನೆ ನಡೆದಿವೆ. ಈ ಹಿಂದೆ ಕೂಡ ಹಲವರನ್ನ ಸಸ್ಪೆಂಡ್ ಮಾಡಿದ್ದಾರೆ, ಕಾಂಗ್ರೆಸ್ ಪಕ್ಷವನ್ನ ಬೆಳೆಸುವ ಹುನ್ನಾರ ಇದು, ಬಿಜೆಪಿ ಬಗ್ಗು ಬಡಿಯುವ ಪ್ಲಾನ್ ಇದು ಎಂದು ಹೇಳಿದರು.

ಹನಿಟ್ರ್ಯಾಪ್ ನಿಜಕ್ಕೂ ಮಾಡಿದ್ದಾರಾ,ಎಲ್ಲಿದೆ ಸಿಡಿ, ತಪ್ಪು ಮಾಡಿದವರನ್ನ ಹೊರ ತನ್ನಿ ಜನಬಯಸುವ ಜನಪ್ರತಿನಿಧಿ ಯಾರೂ ಇಲ್ಲ, ಶುದ್ಧ ರಾಜಕಾರಣಿಗಳು ಯಾರು ಗೊತ್ತಾಗಲಿ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಆಗಲಿ ಎಂದು ಶಾಸಕ ಶ್ರೀವತ್ಸ ಕಡಕ್ ಆಗಿ ತಿಳಿಸಿದರು.

ಹನಿಟ್ರ್ಯಾಪ್ ದೂರು ದಾಖಲಿಸಲಿಲ್ಲವೇಕೆ ಸಿಎಂ ಕುರ್ಚಿ ಭದ್ರಪಡಿಸುವ ತಂತ್ರವೇ:ಶ್ರೀವತ್ಸ Read More

ಹನಿಟ್ರ‍್ಯಾಪ್‌ ಡೈರೆಕ್ಟರ್, ಪ್ರೊಡ್ಯುಸರ್ ಯಾರಂತ ಗೊತ್ತಾಗಲು ಸಿಬಿಐ ತನಿಖೆ ಅಗತ್ಯ: ಶ್ರೀರಾಮುಲು

ಯಾದಗಿರಿ: ಹನಿಟ್ರ‍್ಯಾಪ್‌ನ ಡೈರೆಕ್ಟರ್ ಮತ್ತು ಪ್ರೊಡ್ಯುಸರ್ ಯಾರು ಅಂತ ಗೊತ್ತಾಗಬೇಕಾದರೆ ಸಿಬಿಐ ತನಿಖೆ ಆಗಬೇಕು ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಒತ್ತಾಯಿಸಿದ್ದಾರೆ.

ಜಿಲ್ಲೆಯ ಮಹಲ್ ರೋಜಾದಲ್ಲಿ ಹನಿಟ್ರ‍್ಯಾಪ್ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹನಿಟ್ರ‍್ಯಾಪ್ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಬೇಕು. ರಾಜ್ಯದಲ್ಲಿ ಇದೊಂದು ಫ್ಯಾಷನ್, ಒಂದು ಟ್ರೆಂಡ್ ಆಗಿದೆ. ಹನಿಟ್ರ‍್ಯಾಪ್ ಪ್ರಕರಣದಿಂದ ಇಡೀ ರಾಜ್ಯದ ಜನ ಅಸಹ್ಯಪಡುವ ಪರಿಸ್ಥಿತಿ ಬಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಯಾವುದೇ ಪಕ್ಷದವರಿದ್ದರೂ ಈ ರೀತಿ ಹನಿಟ್ರ‍್ಯಾಪ್‌ನಿಂದ ಮುಜುಗರ ಆಗುತ್ತದೆ. ರಾಜಕೀಯದಲ್ಲಿ ಹಲವು ವರ್ಷಗಳಿಂದ ಜನರ ಪ್ರೀತಿಗಳಿಸಿ, ದೊಡ್ಡ ಮಟ್ಟಕ್ಕೆ ಬೆಳೆದಿದ್ದೀವಿ.ಹಾಗಿರುವಾಗ ಹನಿಟ್ರ‍್ಯಾಪ್‌ ವಿಷಯಗಳನ್ನು ತಂದು ಮನಸ್ಸಿಗೆ ನೋವು ಮಾಡುವ ಕೆಲಸವನ್ನು ಕೆಲವು ವ್ಯಕ್ತಿಗಳು ಮಾಡುತ್ತಿದ್ದಾರೆ ಎಂದು ಬೇಸರ ಪಟ್ಟರು.

ಯಾವುದೇ ಪಕ್ಷದವರು ಇರಲಿ ಸಿಬಿಐ ತನಿಖೆ ಮಾಡಬೇಕು. ಜನಪ್ರತಿನಿಧಿಗಳಿಗೆ ರಕ್ಷಣೆ ಕೊಡಬೇಕು, ಅವರ ಮೇಲಿನ ವಿಶ್ವಾಸ ಉಳಿಸಬೇಕು. ಅದಕ್ಕಾಗಿ ಈ ಹನಿಟ್ರ‍್ಯಾಪ್‌ಗೆ ಕಡಿವಾಣ ಹಾಕಬೇಕು. ಸಿಬಿಐ ತನಿಖೆಯಾದರೆ ಇದರ ಹಿಂದೆ ಯಾರಿದ್ದಾರೆಂದು ಹೊರಗಡೆ ಬರುತ್ತದೆ ಎಂದು ಶ್ರೀರಾಮುಲು ಹೇಳಿದರು.

ಇದಕ್ಕಿಂತ ಮುಂಚೆ ಅನೇಕರಿಗೆ ಹನಿಟ್ರ‍್ಯಾಪ್ ಆಗಿದೆ. ಹಿಂದುಳಿದ ಜಾತಿಯ ವ್ಯಕ್ತಿಗಳಾದ ಅರವಿಂದ ಲಿಂಬಾವಳಿ, ರಮೇಶ್ ಜಾರಕಿಹೊಳಿ, ಇದೀಗ ಸಚಿವ ರಾಜಣ್ಣ ಅವರ ಮೇಲೆ ಹನಿಟ್ರ‍್ಯಾಪ್‌ ಯತ್ನ ನಡೆದಿದೆ. ಪಕ್ಷಾತೀತಿವಾಗಿ ರಾಜಕಾರಣಿಗಳಿಗೆ ಈ ರೀತಿ ಆದರೆ ನೋವು ಉಂಟಾಗುತ್ತದೆ. ಇದಕ್ಕೆ ಯಾರು ಡೈರೆಕ್ಟರ್, ಯಾರು ಪ್ರೊಡ್ಯುಸರ್, ಈ ಹನಿಟ್ರ‍್ಯಾಪ್ ಫ್ಯಾಕ್ಟರಿಯನ್ನು ಯಾರು ಇಟ್ಟುಕೊಂಡಿದ್ದಾರೆ ಎನ್ನೋದು ಹೊರಬರಬೇಕಾದರೆ ಸಿಬಿಐ ತನಿಖೆ ಆಗಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ವಿಚಾರ ಕುರಿತು ಮಾತನಾಡಿ, ಸಭಾಪತಿಗಳಿಗೂ ಹನಿಟ್ರ‍್ಯಾಪ್‌ನಿಂದ ಮುಜುಗರ ಆಗಿದೆ. ಇದರಿಂದ ಅವರಿಗೂ ತೊಂದರೆ ಆಗುತ್ತದೆ. 30-40 ವರ್ಷ ರಾಜಕಾರಣದಲ್ಲಿದ್ದು, ಸಭಾಪತಿಗಳಾಗಿರುತ್ತಾರೆ. ಹನಿಟ್ರ‍್ಯಾಪ್ ಬೇರೆ ಬೇರೆ ವಿಚಾರ ಬಂದಾಗ ಮುಜುಗರ ಆಗುತ್ತದೆ. ಹೊರಟ್ಟಿಯವರು ರಾಜೀನಾಮೆ ಕೊಡುತ್ತೇನೆ ಎಂದಿದ್ದಾರೆ. ಮುಂದಿನ ದಿನಗಳಲ್ಲಿ ಯಾರಿಗೂ ನೋವು ಆಗಬಾರದು ಅಂದರೆ ಸಿಬಿಐ ತನಿಖೆಗೆ ಕೊಡಬೇಕು ಎಂದು ಹೇಳಿದರು.

ಹನಿಟ್ರ‍್ಯಾಪ್‌ ಡೈರೆಕ್ಟರ್, ಪ್ರೊಡ್ಯುಸರ್ ಯಾರಂತ ಗೊತ್ತಾಗಲು ಸಿಬಿಐ ತನಿಖೆ ಅಗತ್ಯ: ಶ್ರೀರಾಮುಲು Read More

ಸಚಿವರ ಹನಿಟ್ರ್ಯಾಪ್‌, ನ್ಯಾಯಾಂಗ ತನಿಖೆ – ಸಿಬಿಐಗೆ ವಹಿಸಿ: ಆರ್‌.ಅಶೋಕ ಒತ್ತಾಯ

ಬೆಂಗಳೂರು: ಸಚಿವ ಕೆ.ಎನ್‌.ರಾಜಣ್ಣ ಅವರನ್ನು ಹನಿಟ್ರ್ಯಾಪ್‌ ಮಾಡಿದ ಪ್ರಕರಣವನ್ನು ನ್ಯಾಯಾಂಗ ತನಿಖೆ ಅಥವಾ ಸಿಬಿಐ ತನಿಖೆಗೆ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಒತ್ತಾಯಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಕೆ.ಎನ್‌.ರಾಜಣ್ಣ ಅವರು ವಿಧಾನಸಭೆಯಲ್ಲಿ ಎಲ್ಲರ ಮುಂದೆ ಹನಿಟ್ರ್ಯಾಪ್‌ ಬಗ್ಗೆ ಹೇಳಿದ್ದಾರೆ. ಇದರಲ್ಲಿ ನ್ಯಾಯಾಧೀಶರು, ಕೇಂದ್ರದ ನಾಯಕರ ಕೈವಾಡ ಇದೆ ಎಂದು ಆರೋಪ ಮಾಡಲಾಗಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಹೀಗೆ ಹೇಳಿ ಎಂದು ರಾಜಣ್ಣ ಅವರಿಗೆ ಸೂಚನೆ ನೀಡಿ ಕಳಿಸಿದ್ದಾರೆ ಎಂದು ಗೊತ್ತಾಗಿದೆ. ಇಷ್ಟೆಲ್ಲ ಆದ ಮೇಲೂ ಇದನ್ನು ತನಿಖೆ ಮಾಡದೆ ಸುಮ್ಮನೆ ಬಿಡಬಾರದು ಎಂದು ಹೇಳಿದರು.

ರಾಜಣ್ಣ ಅವರು ಪರಿಶಿಷ್ಟ ವರ್ಗಕ್ಕೆ ಸೇರಿದವರು, ಒಂದು ಕಡೆ ಕಾಂಗ್ರೆಸ್‌ ಸರ್ಕಾರ ದಲಿತರ ಹಣವನ್ನು ಗ್ಯಾರಂಟಿಗೆ ದುರ್ಬಳಕೆ ಮಾಡುತ್ತಿದೆ. ಮತ್ತೊಂದು ಕಡೆ ಪರಿಶಿಷ್ಟ ವರ್ಗದವರ ಅಹವಾಲುಗಳನ್ನು ಆಲಿಸುತ್ತಿಲ್ಲ, ಕೂಡಲೇ ಸರ್ಕಾರ ಇದನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಅಥವಾ ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.

ಸಚಿವ ಕೆ.ಎನ್‌.ರಾಜಣ್ಣ ಸದನದಲ್ಲೇ ಮಾತಾಡಿರುವುದರಿಂದ ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಅವರ ಹೇಳಿಕೆ ಈಗ ಸದನದ ಆಸ್ತಿಯಾಗಿದೆ. ಮುಖ್ಯಮಂತ್ರಿ ಕುರ್ಚಿಗಾಗಿ ಹನಿಟ್ರ್ಯಾಪ್‌ ನಡೆಯುತ್ತಿದೆ ಎಂದು ಛೇಡಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಸ್ಲಿಮರ ಹಲಾಲ್‌ ಬಜೆಟ್‌ ಮಂಡಿಸಿದ್ದಾರೆ. ಹಿಂದುಳಿದ ಜನರ ಮೀಸಲಾತಿಯನ್ನು ಕಸಿದು ಮುಸ್ಲಿಮರಿಗೆ ನೀಡಲಾಗಿದೆ. ಇದರ ವಿರುದ್ಧ ಬಿಜೆಪಿ ಹೋರಾಟ ಮುಂದುವರಿಸಲಿದೆ ಎಂದು ಅಶೋಕ್ ತಿಳಿಸಿದರು.

ಸಚಿವರ ಹನಿಟ್ರ್ಯಾಪ್‌, ನ್ಯಾಯಾಂಗ ತನಿಖೆ – ಸಿಬಿಐಗೆ ವಹಿಸಿ: ಆರ್‌.ಅಶೋಕ ಒತ್ತಾಯ Read More

ಹನಿಟ್ರ್ಯಾಪ್; ಉನ್ನತ ಮಟ್ಟದ ತನಿಖೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಸದ್ದು ಮಾಡುತ್ತಿದ್ದು ಈ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ ನೀಡಿದರು.

ಹನಿಟ್ರ್ಯಾಪ್ ಆರೋಪ ಪ್ರತ್ಯಾರೋಪದ ಬಗ್ಗೆ ಸತ್ಯಾಸತ್ಯತೆ ತಿಳಿಯಲು ತನಿಖೆಗೆ ಶೀಘ್ರವೇ ಆದೇಶಿಸಲಾಗುವುದು. ರಾಜಣ್ಣ ಅವರು ದೂರು ನೀಡಿದ ಕೂಡಲೇ ತನಿಖೆ ಮಾಡಿಸಲಾಗುವುದು ಎಂದು ಸದನದಲ್ಲಿ ತಿಳಿಸಿದರು.

ಈ ವೇಳೆ‌ ಸಭಾಧ್ಯಕ್ಷ ಯು.ಟಿ.ಖಾದರ್ ಪರಮೇಶ್ವರ್ ಅವರ ಮಾತುಗಳನ್ನು ತದೇಕಚಿತ್ತದಿಂದ ಆಲಿಸಿ ಆಗಲಿ ಎಂದು ಹೇಳಿದರು.

ಹನಿಟ್ರ್ಯಾಪ್‌ಗೆ ಫುಲ್‌ ಸ್ಟಾಪ್ ಹಾಕಬೇಕು, ಹನಿಟ್ರ್ಯಾಪ್ ಎನ್ನುವುದು ಸದನದ ಎಲ್ಲ ಸದಸ್ಯರ ಮರ್ಯಾದೆ ಪ್ರಶ್ನೆ, ಗೌರವ ಗಳಿಸಿಕೊಂಡಿರುವ ನಾಯಕರ ಘನತೆಯನ್ನು ಉಳಿಸಿಕೊಳ್ಳುವುದು ಅಗತ್ಯವಾಗಿದೆ. ಒಬ್ಬರು, ಇಬ್ಬರು ಸಚಿವರಿಗೆ ಹನಿಟ್ರಾಪ್ ಅಂತಲ್ಲಾ ಇದು ಎಲ್ಲರ ಮರ್ಯಾದೆಯ ಪ್ರಶ್ನೆ. ಸದನದ ಮರ್ಯಾದೆಯೂ ಹೌದು. ಹೀಗಾಗಿ ನಾನು ಈ ಕೂಡಲೇ ಉನ್ನತ ಮಟ್ಟದ ತನಿಖೆಗೆ ಆದೇಶಿಸುವೆ ಎಂದು ಪರಮೇಶ್ವರ್ ಹೇಳಿದರು.

ಹನಿಟ್ರ್ಯಾಪ್; ಉನ್ನತ ಮಟ್ಟದ ತನಿಖೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ Read More

ಕಾಂಗ್ರೆಸ್ ಸರ್ಕಾರದಲ್ಲಿ ಹನಿ ಟ್ರ್ಯಾಪ್ ಸದ್ದು ಜೋರು:ಅಶೋಕ್ ಟೀಕೆ

ಬೆಂಗಳೂರು: ಅಭಿವೃದ್ಧಿಗೆ ದುಡ್ಡಿಲ್ಲದೆ ಈಗಾಗಲೇ ಮನಿಟ್ರ್ಯಾಪ್ ನಲ್ಲಿ ಸಿಲುಕಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಈಗ ಹನಿ ಟ್ರ್ಯಾಪ್ ಸದ್ದು ಜೋರಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು,
ತಮ್ಮ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ ಸದನದಲ್ಲಿ ಆರೋಪಿಸಿರುವ ಸಹಕಾರ ಸಚಿವ ರಾಜಣ್ಣ ಅವರು ತನಿಖೆಗೆ ಆಗ್ರಹಿಸಿದ್ದಾರೆ. ರಾಜಣ್ಣನವರ ಆರೋಪಕ್ಕೆ ದನಿಗೂಡಿಸಿರುವ ಮತ್ತಿಬ್ಬರು ಹಿರಿಯ ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಮಹದೇವಪ್ಪ ಅವರು ಸಹ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ. ಇದಕ್ಕೆ ಸ್ಪಂದಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಉನ್ನತ ಮಟ್ಟದ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಆದರೆ ಕನ್ನಡಿಗರಿಗೆ ಕಾಡುತ್ತಿರುವ ಯಕ್ಷ ಪ್ರಶ್ನೆ ಏನಪ್ಪಾ ಅಂದರೆ, ಹನಿಟ್ರ್ಯಾಪ್ ಜಾಲದ ಬಗ್ಗೆ ಬಹಿರಂಗವಾಗಿ ದನಿ ಎತ್ತಿರುವ ಸಚಿವರೆಲ್ಲರೂ ಸಿಎಂ ಸಿದ್ದರಾಮಯ್ಯ ಅವರ ಬಣದಲ್ಲಿ ಗುರಿತಿಸಿಕೊಂಡಿರುವವರು ಎನ್ನುವುದು ಕಾಕತಾಳೀಯವೋ ಅಥವಾ ಇದರ ಹಿಂದೆ ರಾಜಕೀಯ ಷಡ್ಯಂತ್ರವೇನಾದರೂ ಇದೆಯೋ ಎಂದು ಅಶೋಕ್ ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.

ಕಾಲವೇ ಎಲ್ಲದಕ್ಕೂ ಉತ್ತರಿಸಲಿದೆ ಎಂದೂ ಪೋಸ್ಟ್ ಮಾಡಿದ್ದಾರೆ.

ಕಾಂಗ್ರೆಸ್ ಸರ್ಕಾರದಲ್ಲಿ ಹನಿ ಟ್ರ್ಯಾಪ್ ಸದ್ದು ಜೋರು:ಅಶೋಕ್ ಟೀಕೆ Read More