ಪ್ರಶಸ್ತಿಗಳಿಂದ ಸಾಧಕರ ಜವಾಬ್ದಾರಿ ಹೆಚ್ಚಳ: ಕೆ ಬಿ ಲಿಂಗರಾಜು

ಮೈಸೂರು: ಮನುಷ್ಯ ಸಾಧನೆ ಮಾಡಿದಾಗ ಪ್ರಶಸ್ತಿಗಳು ಒಲಿದು ಬರುತ್ತವೆ, ಅದರೊಂದಿಗೆ ಹೆಚ್ಚಿನ ಜವಾಬ್ದಾರಿಗಳು ಕೂಡ ಸಾಧಕನನ್ನು ಅರಸಿ ಬರುತ್ತವೆ ಎಂದು ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷರಾದ ಕೆ ಬಿ ಲಿಂಗರಾಜು ಹೇಳಿದರು.

ಮೈಸೂರು ಜಿಲ್ಲಾಡಳಿತ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವ ಆಚರಿಸಿದ ಸಂದರ್ಭದಲ್ಲಿ ಸಮಾಜ ಸೇವೆಯಿಂದ ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಕೆ ಬಿ ಲಿಂಗರಾಜು ಅವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದುದಕ್ಕಾಗಿ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಹಾಗೂ ಕರ್ನಾಟಕ ಹಿತರಕ್ಷಣಾ ವೇದಿಕೆ ವತಿಯಿಂದ ಅಭಿನಂದನೆ ಸಲ್ಲಿಸಿದ ವೇಳೆ
ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದ ರು.

ಸಾಧನೆ ಎಂಬುದು ಸುಲಭದ ಮಾತಲ್ಲ ಸಾಧನೆಯು ಒಂದು ತಪಸ್ಸಿನ ಹಾಗೆ, ಹಲವು ಅಡೆತಡೆಯನ್ನು ಲೆಕ್ಕಿಸದೆ ದೃಢಸಂಕಲ್ಪ ಹಾಗೂ ಉತ್ತಮ ವಿಚಾರಗಳಿದ್ದಲ್ಲಿ ಸಾಧನೆಯನ್ನು ಯಾರು ಬೇಕಾದರೂ ಮಾಡಬಹುದು ಎಂದು ಹೇಳಿದರು.

ಪ್ರಶಸ್ತಿಗಳು ಸಾಧಕನಿಗೆ ಸಮಾಜದಲ್ಲಿ ಗೌರವ ಕೊಡಿಸುವುದರ ಜೊತೆಗೆ ಜವಾಬ್ದಾರಿಗಳನ್ನು ಕೂಡ ಹೆಚ್ಚಿಸುತ್ತದೆ ಎಂದು ಲಿಂಗರಾಜು ತಿಳಿಸಿದರು.

ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಮಾತನಾಡಿ,ಕೆ ಬಿ ಲಿಂಗರಾಜು ಅವರು ಹಲವು ವರ್ಷಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ಕೈಗಾರಿಕಾ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಮೈಸೂರು ಜಿಲ್ಲಾಡಳಿತ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿರುವುದು ಮೈಸೂರು ನಾಗರಿಕರಿಗೆ ಹೆಮ್ಮೆಯ ಸಂಗತಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ನಗರ ಪಾಲಿಕೆ ಮಾಜಿ ಸದಸ್ಯ ಜಗದೀಶ್, ಕರ್ನಾಟಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ವಿನಯ್ ಕುಮಾರ್, ಅಖಿಲ ಕರ್ನಾಟಕ ಒಕ್ಕಲಿಗ ಮಹಾಸಭಾ ಅಧ್ಯಕ್ಷ ಎನ್ ಬೆಟ್ಟೆಗೌಡ,ಮೈಸೂರು ಜಿಲ್ಲಾ
ಚಳವಳಿ ಗಾರರ ಸಂಘದ ಅಧ್ಯಕ್ಷ ಬಿ ಎ ಶಿವಶಂಕರ್, ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ್ ಅಯ್ಯಂಗಾರ್, ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಲೋಹಿತ್, ಎಸ್ ಎನ್ ರಾಜೇಶ್, ಸಚಿನ್ ನಾಯಕ್,ಭಾರತಿ ಮತ್ತಿತರರು ಲಿಂಗರಾಜು ಅವರಿಗೆ ಶುಭ ಕೋರಿದರು.

ಪ್ರಶಸ್ತಿಗಳಿಂದ ಸಾಧಕರ ಜವಾಬ್ದಾರಿ ಹೆಚ್ಚಳ: ಕೆ ಬಿ ಲಿಂಗರಾಜು Read More

ಎನ್.ಎಂ.ನವೀನ್ ಕುಮಾರ್ ಮಿತ್ರ ಬಳಗದ ವತಿಯಿಂದ ಸನ್ಮಾನ

ಮೈಸೂರು,ನವೆಂಬರ್.೧: ಮೈಸೂರಿನ ಬ್ರಾಹ್ಮಣ ಧರ್ಮ ಸಭಾದ ನೂತನವಾಗಿ ಚುನಾಯಿತರಾದ ಪದಾಧಿಕಾರಿಗಳನ್ನು ಕೃಷ್ಣರಾಜ ಕ್ಷೇತ್ರದ ಕಾಂಗ್ರೆಸ್ ಮುಖಂಡ ಎನ್.ಎಂ.ನವೀನ್ ಕುಮಾರ್ ಮಿತ್ರ ಬಳಗದ ವತಿಯಿಂದ ‌
ಸನ್ಮಾನಿಸಿ ಗೌರವ ಸಲ್ಲಿಸಲಾಯಿತು.

ಚಾಮುಂಡಿಪುರಂ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿದ ಬ್ರಾಹ್ಮಣ ಧರ್ಮ ಸಹಾಯ ಸಭಾದ ನೂತನ ಅಧ್ಯಕ್ಷರಾದ ಎಂ ಶ್ರೀನಿವಾಸ ಅವರು,ಧನ್ಯವಾದ ಸಲ್ಲಿಸಿ ಮಾತನಾಡಿದರು.

ಎನ್.ಎಂ.ನವೀನ್ ಕುಮಾರ್ ಅವರ ತಂದೆ,ಕೆ.ಆರ್.ಮೋಹನ್ ಕುಮಾರ್ ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದಾಗ,ಬ್ರಾಹ್ಮಣ ಧರ್ಮ ಸಹಾಯಸಭಾ ಗೆ ನಾಗರಿಕ ಸೌಕರ್ಯ ನಿವೇಶನ (ಸಿಎ ಸೈಟ್) ನೀಡಿದ್ದನ್ನು ಸ್ಮರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನವೀನ್ ಕುಮಾರ್ ಅವರು ನೂತನವಾಗಿ ಚುನಾಯಿತರಾದ ಎಲ್ಲಾ ಪದಾಧಿಕಾರಿಗಳಿಗೂ ಅಭಿನಂದನೆ ತಿಳಿಸಿದರು.

ವಿಪ್ರ ಸಮಾಜದ ಒಗಟ್ಟಿಗಾಗಿ ಮತ್ತು ಒಳಿತಿಗಾಗಿ ಶರ್ಮಿಸುವಂತೆ ಪದಾಧಿಕಾರಿಗಳಲ್ಲಿ ಕೋರಿದರು.

ಕಾರ್ಯಕ್ರಮದಲ್ಲಿ,ಹೊಯ್ಸಳ ಕರ್ನಾಟಕ ಸಂಘದ ಅಧ್ಯಕ್ಷರಾದ ಕೆ.ಆರ್.ಸತ್ಯನಾರಾಯಣ,ವಿಪ್ರ ಮುಖಂಡರಾದ ಗಜಾನನ ಹೆಗ್ಡೆ ಸೇರಿದಂತೆ ನೂರಾರು ಮಂದಿ ವಿಪ್ರ ಸಮಾಜದವರು ಹಾಜರಿದ್ದರು.

ಎನ್.ಎಂ.ನವೀನ್ ಕುಮಾರ್ ಮಿತ್ರ ಬಳಗದ ವತಿಯಿಂದ ಸನ್ಮಾನ Read More

ರಕ್ತದಾನಿಗಳಿಗೆ ಜೀವಧಾರ ರಕ್ತ ನಿಧಿ ಕೇಂದ್ರದಿಂದ ಸತ್ಕಾರ

ಮೈಸೂರು: ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಜೀವಧಾರ ರಕ್ತ ನಿಧಿ ಕೇಂದ್ರದ ಆವರಣದಲ್ಲಿ 15 ಬಾರಿ ಮೇಲ್ಪಟ್ಟು ಸ್ವಯಂ ಪ್ರೇರಿತ ರಕ್ತದಾನ ಮಾಡಿದ ರಕ್ತದಾನಿಗಳನ್ನು ಸತ್ಕರಿಸಿ ಗೌರವಿಸಲಾಯಿತು.

ಬ್ಲಡ್ ಆನ್ ಕಾಲ್ ಕ್ಲಬ್ ಸಹಯೋಗದೊಂದಿಗೆ 15 ಬಾರಿ ಮೇಲ್ಪಟ್ಟು ಸ್ವಯಂ ಪ್ರೇರಿತ ರಕ್ತದಾನ ಮಾಡಿದ
ನವೀನ್, ಕಾಂತಿಲಾಲ್ ಸಂದೇಶ, ಮಂಜುನಾಥ್ ವೈ ಎಸ್, ಯಶ್ವಂತ್, ರಶ್ಮಿ ಶರ್ಮಾ,ಪರಾಶ್ರಮ ಬೋರನ, ರಾಹುಲ್ ಕೊಠಾರಿ,ಮೀನಾಕ್ಷಿ ಕೊಠಾರಿ,ಮನೀಶ್ ಜೈನ್, ವನಿತಾ ಡಕ್, ಮುಕೇಶ್ ಅವರುಗಳನ್ನು ಸನ್ಮಾನಿಸಲಾಯಿತು.

ಇದೇ ಸಂದರ್ಭದಲ್ಲಿ 100ಕ್ಕೂ ಹೆಚ್ಚು ಬಾರಿ ಸ್ವಯಂ ಪ್ರೇರಿತ ರಕ್ತದಾನ ಮಾಡಿದ ದೇವೇಂದ್ರ ಪರಿಹಾರಿಯ ಅವರನ್ನು ವಿಶೇಷವಾಗಿ ಗೌರವಿಸಲಾಯಿತು.

ಈ ವೇಳೆ ಮಾತನಾಡಿದ ಜೀವಧಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್,
ರಕ್ತದಾನದಿಂದ ಶರೀರದಲ್ಲಿ ಚೈತನ್ಯ ಶಕ್ತಿಯು ಹೆಚ್ಚಾಗಿ ದೇಹದಲ್ಲಿ ಆರೋಗ್ಯಕರ ಬದಲಾವಣೆಗಳನ್ನು ಕಾಣಬಹುದು ಎಂದು ಹೇಳಿದರು.

ರಕ್ತದಾನದ ಬಗ್ಗೆ ಪರಿಚಯದರಿಗೂ ತಿಳಿಸಿ ಅವರನ್ನೂ ಇಂತಹ ಉತ್ತಮ ಕಾರ್ಯಗಳಲ್ಲಿ ಭಾಗಿಯಾಗುವ ನಿಟ್ಟಿನಲ್ಲಿ ಕೆಲಸ ಮಾಡಬೇಕೆಂದು ಮನವಿ ಮಾಡಿದರು.

ರಕ್ತದಾನದ ಬಗ್ಗೆ ಎಲ್ಲರೂ ತಿಳಿದುಕೊಳ್ಳಬೇಕು.ಅವಶ್ಯಕವಾದಾಗ ಹುಡುಕುವುದಕ್ಕಿಂತ ಮುಂಚೆಯೇ ಸಾಕಷ್ಟು ರಕ್ತವನ್ನು ಸಂಗ್ರಹಿಸಿಟ್ಟುಕೊಳ್ಳಲು ಕ್ರಮ ವಹಿಸಿಕೊಳ್ಳಬೇಕು. ಜಿಲ್ಲೆಯಲ್ಲಿ ರಕ್ತದ ಕೊರತೆಯು ಹೆಚ್ಚಾಗಿರುವುದರಿಂದ ರಕ್ತದಾನದ ಅವಶ್ಯಕತೆಯಿದೆ. ದಾನಿಗಳು ಪ್ರತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡುವುದರಿಂದ ರಕ್ತದ ಕೊರತೆಯನ್ನು ಸಾಧ್ಯವಾದ ಮಟ್ಟಿಗೆ ನಿಭಾಯಿಸಬಹುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಬ್ಲಡ್ ಆನ್ ಕಾಲ್ ಕ್ಲಬ್ ಮೈಸೂರಿನ ದೇವೇಂದ್ರ ಪರಿಹಾರಿಯ, ಆನಂದ್ ಮಾಂದೋಟ್, ಮಹಾವೀರ ಜೈನ, ಸಪ್ನ, ಮಮತಾ, ಸದಾಶಿವ್ ಮತ್ತಿತರರು ಹಾಜರಿದ್ದರು.

ರಕ್ತದಾನಿಗಳಿಗೆ ಜೀವಧಾರ ರಕ್ತ ನಿಧಿ ಕೇಂದ್ರದಿಂದ ಸತ್ಕಾರ Read More

ನಾರಾಯಣಗೌಡರಿಗೆ ಅತಿಥ್ಯ ರತ್ನ ಪ್ರಶಸ್ತಿ;ಮೈಸೂರಿಗರಿಗೆ ಹೆಮ್ಮೆಯ ವಿಚಾರ: ಶ್ರೀವತ್ಸ

ಮೈಸೂರು: ಮೈಸೂರು ಪಾರಂಪರಿಕ ನಗರದಲ್ಲಿ ನಿರಂತರವಾಗಿ ಪ್ರವಾಸೋದ್ಯಮ ಹಾಗೂ ಹೋಟೆಲ್ ಮಾಲೀಕರು ಹಾಗೂ ಉದ್ಯಮಿಗಳ ಹಿತವನ್ನು ಕಾಯುತ್ತಾ ಬಂದಿರುವ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡರಿಗೆ ರಾಜ್ಯಮಟ್ಟದ
ಅತಿಥ್ಯ ರತ್ನ ಪ್ರಶಸ್ತಿ ಬಂದಿರುವುದು ಮೈಸೂರಿಗರಿಗೆ ಹೆಮ್ಮೆಯ ವಿಚಾರ ಎಂದು ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದರು.

ನಗರದ ವಿಶ್ವೇಶ್ವರ ನಗರದಲ್ಲಿರುವ ಖಾಸಗಿ ಹೋಟೆಲ್ ನಲ್ಲಿ ಹೋಟೆಲ್ ಮಾಲೀಕರ ಸಂಘದ ವತಿಯಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಉದ್ಯಮ ಕ್ಷೇತ್ರದಲ್ಲಿ ರಾಜ್ಯಮಟ್ಟದ ಪ್ರತಿಷ್ಠಿತ ಅತಿಥ್ಯ ರತ್ನ 2025 ಪ್ರಶಸ್ತಿ ಪುರಸ್ಕೃತರಾದ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ ರವರಿಗೆ ಅಭಿನಂದನೆ ಸಲ್ಲಿಸಿ ಅವರು ಮಾತನಾಡಿದರು.

ವಿಶ್ವ ಪ್ರವಾಸೋದ್ಯಮ ದಿನಾಚರಣೆ, ಅಂತರಾಷ್ಟ್ರೀಯ ಯೋಗ ದಿನಾಚರಣೆ ಸಾಕಷ್ಟು ಸಮಾಜಮುಖಿ ಸಂದೇಶ ಸಾರುವ ದಿನಗಳು ಮೈಸೂರಿನಲ್ಲಿ ಯಶಸ್ವಿಯಾಗಿ ನೆರವೇರಲು ಸ್ಥಳೀಯ ಸಂಘ ಸಂಸ್ಥೆಗಳು ಉದ್ಯಮಿಗಳು ಹಾಗೂ ಜಿಲ್ಲಾಡಳಿತದೊಂದಿಗೆ ಸೇತುವೆಯಾಗಿ ಕೆಲಸ ಮಾಡಿ ಮೈಸೂರಿನ ಹಿರಿಮೆಯನ್ನ ಹೆಚ್ಚಿಸುವಲ್ಲಿ ನಾರಾಯಣ ಗೌಡ ಅವರು ಅತ್ಯುತ್ತಮ ಸೇವೆ ಸಲ್ಲಿಸಿದ್ದಾರೆ ಎಂದು ಶ್ಲಾಘಿಸಿದರು.

ಕೋವಿಡ್ ಸಂಧರ್ಭದಲ್ಲಿ ನಾರಸಯಣಗೌಡರು ಹೊಟೇಲುಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ದಿನಸಿ ಸಾಮಾಗ್ರಿಗಳು ಮತ್ತು ವೈದ್ಯಕೀಯ ನೆರವು, ಕಾರ್ಮಿಕ ಇಲಾಖೆಯಿಂದ ಸಾಹಯಧನ ಕಲ್ಪಿಸಿದರು, ಆರ್ಥಿಕವಾಗಿ ತೊಂದರೆಯಲ್ಲಿದ್ದ ಸಣ್ಣಪುಟ್ಟ ಹೊಟೇಲು ಮಾಲೀಕರಿಗೆ ಯಾವುದೇ ತೊಂದರೆ ಬಾರದಂತೆ ಬೆನ್ನುಲುಬಾಗಿ ನಿಂತು ಮಾರ್ಗದರ್ಶನ ಮಾಡಿ ನೂರಾರು ಮಂದಿಯನ್ನ ಮೈಸೂರಿನ ಗಣ್ಯ ವ್ಯಕ್ತಿಯಾಗಿ ಮುಖ್ಯವಾಹಿನಿಗೆ ತರುವಲ್ಲಿ ಶ್ರಮಿಸಿದ್ದಾರೆ ಅವರಿಗೆ ಅತಿಥ್ಯ ರತ್ನ ಪ್ರಶಸ್ತಿ ಬಂದಿರುವುದು ಸಂತಸ ತಂದಿದೆ ಎಂದು ಶ್ರೀವತ್ಸ ತಿಳಿಸಿದರು.

ಶಾಸಕ ಕೆ. ಹರೀಶ್ ಗೌಡ ಮಾತನಾಡಿ ಮೈಸೂರಿನ‌ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವಲ್ಲಿ ಹೋಟೆಲು ಮಾಲೀಕರ ಸಂಘದ ಅಧ್ಯಕ್ಷರಾದ ನಾರಾಯಣ ಗೌಡರ ಪಾತ್ರ ಮಹತ್ವವಾದುದು ಎಂದು ಹೇಳಿದರು.

ಕಳೆದ ನಾಲ್ಕು ದಶಕಗಳಿಂದ ಮೈಸೂರು ದಸರಾ ಮತ್ತು ಹೊಸ ವರ್ಷದ ಆಚರಣೆ, ಆಷಾಢ, ದೀಪಾವಳಿ, ಬೇಸಿಗೆ ಮಾಸದ ಸಂಧರ್ಭದಲ್ಲಿ ಲಕ್ಷಾಂತರ ಪ್ರವಾಸಿಗರು ಮೈಸೂರಿಗೆ ಬರುತ್ತಾರೆ. ಸ್ಥಳೀಯರಿಗೆ ಉದ್ಯೋಗ ಸೃಷ್ಠಿ ಮತ್ತು ಮೈಸೂರಿನ ಪರಂಪರೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಹಕಾರ ನೀಡಿ ಸಾಕಷ್ಟು ಸಂಘ ಸಂಸ್ಥೆಗಳಿಂದ ಸರ್ಕಾರಕ್ಕೆ ಸಿಎಸ್ಆರ್ ನೆರವು ತಂದುಕೊಡಲು ಹಲವಾರು ಯೋಜನೆಗಳನ್ನ ಮಾರ್ಗದರ್ಶನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಬಣ್ಣಿಸಿದರು.

ಮೈಸೂರು ದಸರಾ ಸಂಧರ್ಭದಲ್ಲಿ ಪ್ರವಾಸಿಗರಿಗಾಗಿ ಆಹಾರ ಮೇಳ ಪರಿಕಲ್ಪನೆ ಆಯೋಜನೆ ಜಾರಿಗೆ ತರಲು ನಾರಾಯಣಗೌಡ ಅವರೇ ಮುಖ್ಯ ಕಾರಣ ಎಂದು ಹರೀಶ್ ಗೌಡ ಹೇಳಿದರು.

ಈ ಸಂದರ್ಭದಲ್ಲಿ ನೂರಾರು ಹೋಟೆಲ್ ಉದ್ಯಮಿಗಳು ವೈಯಕ್ತಿಕವಾಗಿ ಸನ್ಮಾನಿಸುವ ಮೂಲಕ ನಾರಾಯಣ ಗೌಡರನ್ನು ಅಭಿನಂದಿಸಿದರು.

ಸಮಾರಂಭದಲ್ಲಿ ಹೋಟೆಲ್ ಮಾಲೀಕರ ಸಂಘದ ರಾಜ್ಯಾಧ್ಯಕ್ಷ ಜಿ.ಕೆ ಶೆಟ್ಟಿ, ನಿಕಟಪೂರ್ವ ರಾಜ್ಯಾಧ್ಯಕ್ಷ ಎಂ ರಾಜೇಂದ್ರ, ರಾಜ್ಯ ಉಪಾಧ್ಯಕ್ಷರಾದ ರವಿ ಶಾಸ್ತ್ರಿ, ಕಾರ್ಯದರ್ಶಿ ಎ ಆರ್ ರವೀಂದ್ರ ಭಟ್, ಸುರೇಶ್ ಉಗ್ರಯ್ಯ, ಅಶೋಕ್ ಜಿ, ಸುಬ್ರಹ್ಮಣ್ಯ ತಂತ್ರಿ, ಅರುಣ್ ಕೆ ಎಸ್, ಭಾಸ್ಕರ್ ಶೆಟ್ಟಿ ಕೆ, ಪಿ ಎಸ್ ಶೇಖರ್ ಹಾಗೂ ನೂರಾರು ಹೋಟೆಲ್ ಉದ್ಯಮಿಗಳು ಉಪಸ್ಥಿತರಿದ್ದರು.

ನಾರಾಯಣಗೌಡರಿಗೆ ಅತಿಥ್ಯ ರತ್ನ ಪ್ರಶಸ್ತಿ;ಮೈಸೂರಿಗರಿಗೆ ಹೆಮ್ಮೆಯ ವಿಚಾರ: ಶ್ರೀವತ್ಸ Read More