ಇನ್ಸ್ಪೆಕ್ಟರ್‌ ವಿರುದ್ಧ ಅತ್ಯಾಚಾರ ಆರೋಪ!

ಬೆಂಗಳೂರು: ಜನರಿಗೆ ರಕ್ಷಣೆ ಕೊಡಬೇಕಾದ ಪೊಲೀಸರೆ ಅತ್ಯಾಚಾರದಂತಹ ಹೀನ ಕೃತ್ಯ ಎಸಗಿದರೆ ಜನ‌ ಠಾಣೆಗಳಿಗೆ ಹೋಗುವುದಾದರು ಯಾವ ದೈರ್ಯದ ಮೇಲೆ?

ಇಂತಹ ಕೆಟ್ಟ ಆರೋಪ‌ ಬೆಂಗಳೂರಿನ ಡಿ.ಜೆ ಹಳ್ಳಿ ಪೊಲೀಸ್‌ ಠಾಣೆಯ ಇನ್ಸ್ಪೆಕ್ಟರ್ ವಿರುದ್ಧ ಕೇಳಿ ಬಂದಿದೆ.

ಬೆಂಗಳೂರಿನ ಡಿ.ಜೆ ಹಳ್ಳಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವಿರುದ್ಧ
ಅತ್ಯಾಚಾರ ಮತ್ತು ವಂಚನೆ ಆರೋಪ ಮಾಡಲಾಗಿದೆ.

ಮಹಿಳೆಯೊಬ್ಬರು ಈ‌ ಕುರಿತು ದೂರು ನೀಡಿದ್ದು, ಮದುವೆಯಾಗುವುದಾಗಿ ನಂಬಿಸಿ ತನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿ,ಡಿ.ಜೆ ಹಳ್ಳಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವಿರುದ್ಧ ಡಿಜಿ ಮತ್ತು ಐಜಿಪಿ ಕಚೇರಿಗೆ ದೂರು ನೀಡಿದ್ದಾರೆ.

ತನಗೆ ಹಣದ ಮೋಸವಾಗಿದೆ ಎಂದು ದೂರು ಕೊಡಲು ಠಾಣೆಗೆ ಬಂದಿದ್ದ 36 ವರ್ಷದ ಮಹಿಳೆಯನ್ನು ಇನ್ಸ್ಪೆಕ್ಟರ್‌ ವಿಶ್ವಾಸದಿಂದ ಮಾತನಾಡಿಸಿ ಸ್ನೇಹ ಬೆಳೆಸಿದ್ದಾರೆ. ನಂತರ ಮದುವೆಯಾಗುವುದಾಗಿ ನಂಬಿಸಿದ್ದಲ್ಲದೆ ರಿಜಿಸ್ಟರ್ ಮದುವೆಯಾಗುವುದಾಗಿ ಭರವಸೆ ನೀಡಿದ್ದರೆಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಅಲ್ಲದೆ ಮನೆ ಕೊಡಿಸುತ್ತೇನೆ,ಬ್ಯೂಟಿ ಪಾರ್ಲರ್ ಮಾಡಿಸಿಕೊಡುತ್ತೇನೆ ಎಂದು ಭರವಸೆ ನೀಡಿದ್ದರು. ಕೆಲವು ಬಾರಿ ನಂಬಿಸಿ ತಮ್ಮ ಮನೆ ಹಾಗೂ ಹೋಟೆಲ್ ಗೆ ಕರೆಸಿಕೊಂಡು ಹೋಗಿದ್ದರು.ಆಗ ಕೆಲ ಬಾರಿ ಅತ್ಯಾಚಾರ ಮಾಡಿದ್ದಾರೆ ಎಂದು ಸಂತ್ರಸ್ತೆ ಇನ್ಸ್ಪೆಕ್ಟರ್‌ ವಿರುದ್ಧ ದೂರು ನೀಡಿದ್ದಾರೆ.

ಹಿರಿಯ ಅಧಿಕಾರಿಗಳು ಏನು ಕ್ರಮ ತೆಗೆದುಕೊಳ್ಳುತ್ತಾರೆ,ದೂರು ನೀಡಿರುವ ಮಹಿಳೆಗೆ‌ ನ್ಯಾಯ ಕೊಡಿಸುತ್ತಾರಾ ಕಾದು ನೋಡಬೇಕಿದೆ.

ಇನ್ಸ್ಪೆಕ್ಟರ್‌ ವಿರುದ್ಧ ಅತ್ಯಾಚಾರ ಆರೋಪ! Read More

ಯುವ ಪೀಳಿಗೆಯ ಜೀವನ ನಾಶ‌ ಮಾಡುವ ಮಾದಕ ದ್ರವ್ಯ: ಸಿ.ಎಮ್ ರವೀಂದ್ರ

ನಂಜನಗೂಡು: ಇಂದಿನ ಯುವ ಪೀಳಿಗೆ ಹೆಚ್ಚಾಗಿ ಮಾದಕ ದ್ರವ್ಯಗಳ ಸೇವನೆಗೆ ದಾಸರಾಗುತ್ತಿದ್ದಾರೆ,ಇದು ಜೀವನವನ್ನೇ ನಾಶ ಮಾಡಿಬಿಡುತ್ತದೆ ಎಂದು ಪೊಲೀಸ್ ಇನ್ಸ್ಪೆಕ್ಟರ್ ಸಿ.ಎಂ ರವೀಂದ್ರ ಅವರು ವಿದ್ಯಾರ್ಥಿಗಳಿಗೆ ತಿಳಿಹೇಳಿದರು.

ಕೇವಲ ಗೆಳೆಯರಿಂದ ಅನುಭವ ಪಡೆಯಲಿಕ್ಕೆ ಮಾದಕ ದ್ರವ್ಯವನ್ನು ಸೇವಿಸಿ ನಂತರ ಅವುಗಳಿಗೆ ದಾಸರಾಗಿ ತಮ್ಮ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ರವೀಂದ್ರ ಅವರು ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮಗಳ ಬಗ್ಗೆ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು.

ನಗರ ಪ್ರದೇಶದಲ್ಲಿ ಇಂದು ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗಿದೆ,ಗ್ರಾಮೀಣ ಪ್ರದೇಶದಲ್ಲಿ ಅಷ್ಟು ಪ್ರಮಾಣದಲ್ಲಿ ಇಲ್ಲದಿದ್ದರೂ ಸಹ ಇತ್ತೀಚಿನ ದಿನಗಳಲ್ಲಿ ಗ್ರಾಮೀಣದಲ್ಲಿಯೂ ಇದರ ಹಾವಳಿ ಹೆಚ್ಚಾಗಿದೆ. ಆದಕಾರಣ ಇದರ ಬಗ್ಗೆ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕೆಂದು ಸಲಹೆ ನೀಡಿದರು.

ಕಾಲೇಜಿನ ಪ್ರಾಂಶುಪಾಲರಾದ ಸಿ ಆರ್ ದಿನೇಶ್ ಅವರು ಅಧ್ಯಕ್ಷೀಯ ಭಾಷಣ ಮಾಡಿ, ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಮಾದಕ ದ್ರವ್ಯ ಸೇವನೆಯನ್ನು ಮಾಡುವುದಿಲ್ಲ ಎಂದು ತಮ್ಮ ಹೃದಯವನ್ನು ಮುಟ್ಟಿ ಕೊಂಡು ಪ್ರತಿಜ್ಞೆ ಮಾಡಿದರೆ ಮಾತ್ರ ಇವುಗಳ ದುಶ್ಚಟಗಳಿಗೆ ಬಲಿಯಾಗುವುದಿಲ್ಲ ಎಂದು ಹೇಳಿದರು.

ಕಾರ್ಯಕ್ರಮದ ವೇಳೆ ಸಂವಾದ ಹಮ್ಮಿಕೊಂಡು ವಿದ್ಯಾರ್ಥಿಗಳು ಈ ವಿಷಯದ ಬಗ್ಗೆ ಪ್ರಶ್ನೆ ಕೇಳುವ ಮೂಲಕ ಉತ್ತರವನ್ನು ಪಡೆದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಲಿಂಗನಸ್ವಾಮಿ ಎನ್, ನಾಗರಾಜು, ಡಾ.ಕೆ. ಮಾಲತಿ ,ಭವ್ಯ ಸುಮಿತ್ರ ,ಸ್ವಾಮಿಗೌಡ, ಡಾ. ಟಿ.ಕೆ ರವಿ ,ಹೆಚ್.ಕೆ ಪ್ರಕಾಶ್ ,ಅದಿಲ್ ಹುಸೇನ್, ನಾಗರಾಜ ರೆಡ್ಡಿ, ರಾಮಾನುಜ,ಡಾ. ಸುಮಾ ,ಎನ್. ದಿನೇಶ್, ರೂಪ, ವತ್ಸಲ ,ಶೃತಿ ನಾಗರಾಜ್, ಬಿಂದು ,ಮಿಲ್ಟನ್ ,ಹರ್ಷಿತ್ ,ನಿಂಗಯ್ಯ ,ಮಾದೇವ ಸ್ವಾಮಿ ,ದಿವ್ಯ ಉಪಸ್ಥಿತರಿದ್ದರು.

ಯುವ ಪೀಳಿಗೆಯ ಜೀವನ ನಾಶ‌ ಮಾಡುವ ಮಾದಕ ದ್ರವ್ಯ: ಸಿ.ಎಮ್ ರವೀಂದ್ರ Read More

ಬೆಟ್ಟದಪುರ ಪೊಲೀಸ್ ಸಿಬ್ಬಂದಿ ಅಮಾನತಿಗೆ ಭ್ರಷ್ಟಾಚಾರ ನಿರ್ಮೂಲನ ಸಮಿತಿ ಆಗ್ರಹ

ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣ ತಾಲೂಕು, ಬೆಟ್ಟದಪುರ ಪೊಲೀಸ್ ಠಾಣಾ ವ್ಯಾಪ್ತಿಯ ಇನ್ಸ್ಪೆಕ್ಟರ್ ಬಿ.ಜಿ ಪ್ರಕಾಶ್ ಮತ್ತು ತನಿಖಾ ತಂಡದ ಸಿಬ್ಬಂದಿ ಮೇಲೆ ಎಫ್ಐಆರ್ ದಾಖಲಿಸಿ ಸಸ್ಪೆಂಡ್ ಮಾಡುವಂತೆ ಆಗ್ರಹಿಸಿ ಭ್ರಷ್ಟಾಚಾರ ನಿರ್ಮೂಲನ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು.

ನಿರಪರಾಧಿ ಅಮಾಯಕ ಆದಿವಾಸಿ ಜನಾಂಗದ ಸುರೇಶ್ ಎಂಬವರನ್ನು ಬೇಕೆಂದೇ ಪ್ರಕರಣ ವೊಂದರಲ್ಲಿ ಸಿಲುಕಿಸಿ ಎರಡು ವರ್ಷ ಜೈಲುವಾಸ ಅನುಭವಿಸಲು ಬೆಟ್ಟದಪುರ‌ ಇನ್ಸ್ಪೆಕ್ಟರ್ ಬಿ.ಜಿ ಪ್ರಕಾಶ್, ಎಎಸ್ಐ ಸೋಮಶೇಖರ್ ಸಿಬ್ಬಂದಿಗಳಾದ ಜಿತೇಂದ್ರ ಕುಮಾರ್, ಎಂ. ಪ್ರಕಾಶ್, ಮುಖೇಶ್ ಕುಮಾರ್ ಮತ್ತಿತರರು ಕಾರಣರಾಗಿದ್ದಾರೆ ಎಂದು ಪ್ರತಿಭಟನೆ‌ ವೇಳೆ ಭ್ರಷ್ಟಾಚಾರ ನಿರ್ಮೂಲನ ಸಮಿತಿ ಸದಸ್ಯರು ಆರೋಪಿಸಿದರು.

ಈ ಅಧಿಕಾರಿಗಳು ನ್ಯಾಯಾಲಯವನ್ನು ವಂಚಿಸಿ ಪರಿಶಿಷ್ಟ ಜಾತಿ ದೌರ್ಜನ್ಯ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಇವರೆಲ್ಲರ ಮೇಲೆ ಎಫ್ ಐ ಆರ್ ದಾಖಲಿಸಿ ಕರ್ತವ್ಯ ದಿಂದ ಅಮಾನತುಗೊಳಿಸಬೇಕೆಂದು ಒತ್ತಾಯಿಸಿದರು.

ಬೆಟ್ಟದಪುರ ಪೊಲೀಸ್ ಸಿಬ್ಬಂದಿ ಅಮಾನತಿಗೆ ಭ್ರಷ್ಟಾಚಾರ ನಿರ್ಮೂಲನ ಸಮಿತಿ ಆಗ್ರಹ Read More