ಅನಧಿಕೃತ ಕಟೌಟ್: ಕಾಂಗ್ರೆಸ್, ಬಿಜೆಪಿ ನಾಯಕರ ವಿರುದ್ಧ ಕ್ರಮಕ್ಕೆ ಎಎಪಿ ಆಗ್ರಹ

ಬೆಂಗಳೂರು: ಬೆಂಗಳೂರಿನ ಗೋವಿಂದರಾಜನಗರ, ವಿಜಯನಗರ ವ್ಯಾಪ್ತಿಯಲ್ಲಿ ಕಾಂಗ್ರೆಸ್, ಬಿಜೆಪಿ ನಾಯಕರು ಎಲ್ಲೆಂದರಲ್ಲಿ ಫ್ಲೆಕ್ಸ್, ಕಟೌಟ್ ಹಾಕಿದ್ದು ದಂಡ ವಿಧಿಸುವಂತೆ ಆಪ್ ಆಗ್ರಹಿಸಿದೆ.

ಸ್ಥಳೀಯ ಕಾಂಗ್ರೆಸ್ ಶಾಸಕರಾದ ಎಂ. ಕೃಷ್ಣಪ್ಪ ಹಾಗೂ ಅವರ ಪುತ್ರ ಪ್ರಿಯಕೃಷ್ಣ , ಪ್ರದೀಪ್ ಕೃಷ್ಣ, ಬಿಜೆಪಿಯ ಉಮೇಶ್ ಶೆಟ್ಟಿ ಕ್ಷೇತ್ರದಾದ್ಯಂತ ಎಲ್ಲೆಂದರಲ್ಲಿ ಫ್ಲೆಕ್ಸ್ ಗಳನ್ನು ಹಾಕಿರುವುದರಿಂದ ಎಲ್ಲ ಕಡೆ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ ಆಮ್ ಆದ್ಮಿ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಆರೋಪಿಸಿದ್ದಾರೆ.

ಸಾವಿರಾರು ಕೆಜಿ ತೂಕದ ಸರ್ವೆ ಮರಗಳನ್ನು ಬಳಸಿ ವೃತ್ತಾಕಾರದ ಕಟ್ ಔಟ್ ಗಳನ್ನು ಪ್ರಮುಖ ವೃತ್ತಗಳಲ್ಲಿ ಅಳವಡಿಸಿರುವುದು ಅತ್ಯಂತ ಅಪಾಯಕಾರಿ, ನಿನ್ನೆ ನಾಗರಬಾವಿ ವೃತ್ತದಲ್ಲಿ ಈ ಸರ್ವೆ ಮರಗಳು ಬಿದ್ದು ಅನೇಕರಿಗೆ ಹಾನಿ ಸಹ ಆಗಿದೆ.

ಮುಖ್ಯ ರಸ್ತೆಗಳಲ್ಲಿ ಹಾಕಿರುವ ಬ್ಯಾನರ್ ಗಳು ವಾಹನ ಸಂಚಾರಕ್ಕೆ ಅಡ್ಡಿ ಉಂಟು ಮಾಡುತ್ತಿವೆ, ಕೂಡಲೇ ಇವರುಗಳ ವಿರುದ್ಧ ಹೆಚ್ಚಿನ ಮೊತ್ತದ ದಂಡವನ್ನು ಹಾಕಿ ಕಠಿಣ ಕ್ರಮವನ್ನು ತೆಗೆದುಕೊಳ್ಳಬೇಕೆಂದು ಜಗದೀಶ್ ವಿ. ಸದಂ ಒತ್ತಾಯಿಸಿದ್ದಾರೆ.

ಬ್ರಾಂಡ್ ಬೆಂಗಳೂರು ಎಂಬ ಪರಿಕಲ್ಪನೆಯ ಕನಸನ್ನು ಹೊತ್ತಿರುವ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ರವರಿಗೆ ಈ ಬಗ್ಗೆ ಮಾಹಿತಿ ಇಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.

ಬಿಬಿಎಂಪಿ ಅಧಿಕಾರಿಗಳು ಇದೆಲ್ಲ ನೋಡಿಯೂ ಮೂಕ ಪ್ರೇಕ್ಷಕರಾಗಿ ಕುಳಿತಿರುವುದು ವ್ಯವಸ್ಥೆಗೆ ಹಿಡಿದ ಕನ್ನಡಿಯಾಗಿದೆ ಎಂದು ಟೀಕಿಸಿದ್ದಾರೆ.

ಈಗಾಗಲೇ ನೂತನ ಜಾಹೀರಾತು ನೀತಿ ಜಾರಿಗೆ ಬಂದಿರುವುದು ಸ್ಥಳೀಯ ಕಾಂಗ್ರೆಸ್ ಶಾಸಕರಿಗೆ ಅರಿವಿಲ್ಲವೇ, ಸಾರ್ವಜನಿಕರ ಜೀವಕ್ಕೆ ಸಂಚಕಾರ ತರುತ್ತಿರುವ ಈ ನಾಯಕರುಗಳ ಚೆಲ್ಲಾಟಗಳನ್ನು ಕೂಡಲೇ ತಪ್ಪಿಸಬೇಕು ಹಾಗೂ ಮುಂಬರುವ ಹಾನಿಗಳನ್ನು ತಪ್ಪಿಸಲು ಕೂಡಲೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಜಗದೀಶ್ ವಿ ಸದಂ ಆಗ್ರಹಿಸಿದ್ದಾರೆ.

ಅನಧಿಕೃತ ಕಟೌಟ್: ಕಾಂಗ್ರೆಸ್, ಬಿಜೆಪಿ ನಾಯಕರ ವಿರುದ್ಧ ಕ್ರಮಕ್ಕೆ ಎಎಪಿ ಆಗ್ರಹ Read More

ನೀರಿನ ದರ ಹೆಚ್ಚಳದ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಎಎಪಿ ತೀವ್ರ ವಿರೋಧ

ಬೆಂಗಳೂರು: ಬೆಂಗಳೂರಿನಲ್ಲಿ ನೀರಿನ ದರ ಹೆಚ್ಚಳದ ಬಗ್ಗೆ ಉಪ ಮುಖ್ಯಮಂತ್ರಿ ಹಾಗೂ
ಬೆಂಗಳೂರು ನಗರ ಅಭಿವೃದ್ಧಿ ಸಚಿವ
ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗೆ ಎಎಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಕೊಳಗೇರಿ ನಿವಾಸಿಗಳಿಗೆ ಉಚಿತ ನೀರು ಪೂರೈಸಲು ಆಗದೆ ಅವರುಗಳ ಸ್ವಾಭಿಮಾನಕ್ಕೆ ಅಪಮಾನ ತರುವಂತ ರೀತಿಯ ಹೇಳಿಕೆಯನ್ನು ನೀಡಿರುವುದಲ್ಲದೆ ನೀರಿನ ದರ ಹೆಚ್ಚಿಸುವುದಾಗಿ ತಿಳಿಸಿರುವ ಡಿ.ಕೆ ಶಿವಕುಮಾರ್ ಅವರ ನಿಲುವನ್ನು ಆಮ್ ಆದ್ಮಿ ಪಕ್ಷ ತೀವ್ರವಾಗಿ ಖಂಡಿಸುತ್ತದೆ ಹಾಗೂ ಯಾವುದೇ ಕಾರಣಕ್ಕೂ ನೀರಿನ ದರವನ್ನು ಹೆಚ್ಚಿಸಲು ಬಿಡುವುದಿಲ್ಲ ಎಂದು ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ.ಸದಂ ಎಚ್ಚರಿಸಿದರು.

ಕಾವೇರಿ ನೀರಿನ ಪೈಪ್ ಲೈನ್ ಗಳಲ್ಲಿ ಈಗಲೂ ಶೇ.35ರಷ್ಟು ಸೋರಿಕೆಯಾಗುತ್ತಿದೆ ಎಂದು ಜಲಮಂಡಳಿಯೇ ತನ್ನ ವರದಿಯಲ್ಲಿ ತಿಳಿಸಿದೆ. ಹೀಗಿರುವಾಗ ದುರಸ್ತಿ ಕಾರ್ಯಗಳಿಗೆ ಪ್ರತಿವರ್ಷ ಮಂಡಳಿಯು ಖರ್ಚು ಮಾಡುತ್ತಿರುವ ಸಾವಿರಾರು ಕೋಟಿ ಜನತೆಯ ತೆರಿಗೆ ಹಣ ಯಾರ ಜೇಬಿಗೆ ಸೇರುತ್ತಿದೆ ಎಂದು ಅವರು ಪ್ರಶ್ನಿಸಿದರು.

ಎಲ್ ಅಂಡ್ ಟಿ ಕಂಪನಿ ಜಲ ಮಂಡಳಿಯ ಕಾಮಗಾರಿಯನ್ನು ತೆಗೆದುಕೊಳ್ಳದಿರುವ ಕಾರಣ ಏನು ಎಂಬುದನ್ನು ಡಿ.ಕೆ. ಶಿವಕುಮಾರ್ ತಿಳಿಸಬೇಕು ಎಂದು ಜಗದೀಶ್ ಆಗ್ರಹಿಸಿದರು.

ಈ ಹಿಂದಿನ ಬಿಜೆಪಿ ಸರ್ಕಾರ ಕೋವಿಡ್ ಸಂದರ್ಭದಲ್ಲಿ ಬೆಂಗಳೂರಿನಾದ್ಯಂತ 10,000 ಕೋಟಿ ರೂ ಖರ್ಚು ಮಾಡಿ ಹೊಸ ಪೈಪುಗಳನ್ನು ಅಳವಡಿಸಿದ ಕಾಮಗಾರಿಗಳಲ್ಲಿ ಸಾವಿರಾರು ಕೋಟಿ ಭ್ರಷ್ಟಾಚಾರ ಆಗಿದೆ ಎಂದು ಗೊತ್ತಿದ್ದರೂ 40 % ಕಮಿಷನ್ ಹೆಸರೇಳಿಕೊಂಡು ಅಧಿಕಾರಕ್ಕೆ ಬಂದ ಡಿ.ಕೆ. ಶಿವಕುಮಾರ್ ಎಕೆ ಇನ್ನೂ ತನಿಖೆಗೆ ಆದೇಶ ನೀಡಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ.

ಬೆಂಗಳೂರು ಜಲ ಮಂಡಳಿಯಲ್ಲಿ ಯಾರಿಗೂ ಗೊತ್ತಾಗದ ರೀತಿಯಲ್ಲಿ ಪ್ರತಿ ವರ್ಷ ನಡೆಯುವ ಸಾವಿರಾರು ಕೋಟಿ ಭ್ರಷ್ಟಾಚಾರ ಮುಂದುವರಿಸಿ,ನೀರಿನ ಸೋರಿಕೆ ತಡೆಗಟ್ಟದೆ ಇರುವುದು ಹಾಗೂ ಅಕ್ರಮ ಸಂಪರ್ಕಗಳಿಗೆ ಕಡಿವಾಣ ಹಾಕದೆ ಕೇವಲ ತಮ್ಮ ಆಮದನಿಯನ್ನು ಹೆಚ್ಚಿಸಿಕೊಳ್ಳುತ್ತಿರುವುದರಿಂದ ಬೆಂಗಳೂರು ನಿವಾಸಿಗಳು ದರ ಏರಿಕೆಯಿಂದಾಗಿ ತತ್ತರಿಸುವಂತಹ ಪರಿಸ್ಥಿತಿಗೆ ತಲುಪಿದ್ದಾರೆ. ಆಮ್ ಆದ್ಮಿ ಪಕ್ಷ ಈ ಬಗ್ಗೆ ತೀವ್ರ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಜಗದೀಶ್ ವಿ.ಸದಂ ಕಠಿಣ ಎಚ್ವರಿಕೆ ನೀಡಿದರು.

ನೀರಿನ ದರ ಹೆಚ್ಚಳದ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಎಎಪಿ ತೀವ್ರ ವಿರೋಧ Read More