ಜಮೀರ್ ವಿರುದ್ಧ ರಾಜ್ಯ,ಜಿಲ್ಲಾ ಒಕ್ಕಲಿಗರ ಸಂಘ ಆಕ್ರೋಶ

ಮೈಸೂರು: ಚನ್ನಪಟ್ಟಣದ ಉಪಚುನಾವಣ ಪ್ರಚಾರದ ಸಭೆಯಲ್ಲಿ ಸಚಿವ ಜಮೀರ್ ಅಹಮದ್ ಖಾನ್,ಕೇಂದ್ರ ಸಚಿವ ಹೆಚ್ ಡಿ ಕುಮಾರ ಸ್ವಾಮಿ ಯವರಿಗೆ ಅತ್ಯಂತ ಕೀಳಾಗಿ ನಿಂದಿಸಿರುವುದು ಖಂಡನೀಯ ಎಂದು ಮೈಸೂರು ಜಿಲ್ಲಾ ಒಕ್ಕಲಿಗರ ಸಂಘ ಮತ್ತು ರಾಜ್ಯ ಒಕ್ಕಲಿಗರ ಸಂಘ ಆಕ್ರೋಶ ವ್ಯಕ್ತಪಡಿಸಿವೆ.

ಮೈಸೂರಿನ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಸಿ ಜಿ ಗಂಗಾಧರ್ ಮಾತನಾಡಿ,ಜಮೀರ್ ಹೇಳಿಕೆ
ಕೇವಲ ವ್ಯಕ್ತಿಗತವಲ್ಲದೆ ಜಾತಿನಿಂದನೆ ಯಾಗಿದೆ ಎಂದು ಕಿಡಿಕಾರಿದರು.

ಮುಸ್ಲಿಂ ಸಮುದಾಯದಲ್ಲಿ ಕರಿಯರಿಲ್ಲವೇ ಅವರನ್ನೂ ನೀವು ನಿಂದಿಸಿದಂತೆ ಆಗುವುದಿಲ್ಲವೇ ಮತ್ತು ನಮ್ಮ ಭಾರತ ದೇಶದಲ್ಲಿ ಯಾವ ಜನಾಂಗದಲ್ಲಿ ಕಪ್ಪು ಬಣ್ಣದ ಚರ್ಮವುಳ್ಳ ಜನರಿಲ್ಲ ಹೇಳಿ ಈ ರೀತಿಯ ಹೇಳಿಕೆಗಳಿಂದ ಒಂದು ಸಮುದಾಯದಿಂದ ಮತ್ತೊಂದು ಸಮುದಾಯದ ಮೇಲೆ ಜನಾಂಗೀಯ ದ್ವೇಷವನ್ನು ಉಂಟುಮಾಡುವ ಹಾಗೆ ಆಗುವುದಿಲ್ಲವೇ ಎಂದು ಕಾರವಾಗಿ ಪ್ರಶ್ನಿಸಿದರು.

ಜಮೀರ್ ಅವರು ಸಂವಿಧಾನದ ಮೇಲೆ ಪ್ರಮಾಣ ಮಾಡಿ ಎಲ್ಲರನ್ನು ಸಮಾನ ವಾಗಿ ಕಾಣುತ್ತೇನೆಂದು ಈಗ ಜನಾಂಗೀಯ ಎಂದು ಸಂಭೋಧಿಸಿರುವುದು ಅತ್ಯಂತ ಅಪಾಯಕಾರಿ ಬೆಳವಣಿಗೆ ಇದು ಮನುಷ್ಯ ಕುಲವನ್ನೇ ಕೀಳಾಗಿ ಕಾಣುವುದು ಇದು ಸಂವಿಧಾನ ಬಾಹಿರ ಮತ್ತು ಇಲ್ಲಿ ಜಾತಿ ನಿಂದನೆ ಯಾಗಿದ್ದು ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಗಂಗಾಧರ್ ಆಗ್ರಹಿಸಿದರು.

ಮೈಸೂರು ಜಿಲ್ಲಾ ಅಧ್ಯಕ್ಷ ಮರಿಸ್ವಾಮಿ ಮಾತನಾಡಿ ಸಚಿವ ಜಮೀರ್ ಅಹಮದ್ ಖಾನ್ ಅತ್ಯಂತ ಲಘವಾಗಿ ಮತ್ತು ಪ್ರಚೋದನಕಾರಿಯಾಗಿ ಮಾತನಾಡುವುದು, ಸಭೆಗಳಲ್ಲಿ ಇದು ಮೊದಲೇನಲ್ಲ ಇದು ಪುನಾರವರ್ತನೆ ಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಒಬ್ಬ ಪುಡಿ ರೌಡಿಯ ರೀತಿ ವರ್ತಿಸುತ್ತಿರುವ ಜಮೀರ್ ಖಾನ್ ವಿರುದ್ದ ಜನಾಂಗೀಯ ನಿಂದನೆ ಜಾತಿ ನಿಂದನೆ ಮತ್ತು ಪ್ರಚೋದನಕಾರಿ ಭಾಷಣ ಮಾಡಿ ಸಮಾಜದ ಸ್ವಾಸ್ಥ್ಯ ಹಾಳು ಗೇಡುವುತ್ತಿರುವುದನ್ನು ಪರಿಗಣಿಸಿ ಸಂಭಂದಿಸಿದ ಸೆಕ್ಷನ್ ನ ಅಡಿ ದೂರು ದಾಖಲಿಸ ಬೇಕೆಂದು ಒತ್ತಾಯಿಸಿದರು.

ತೇಜೇಶ್ ಲೋಕೇಶ್ ಗೌಡ ಮಾತನಾಡಿ ಒಕ್ಕಲಿಗರು ಜಗತ್ತಿಗೆ ಅನ್ನ ನೀಡುವವರು. ಎಚ್ ಡಿ ದೇವೇಗೌಡರು ನಮ್ಮ ಸಮುದಾಯದ ಅಸ್ಮಿತೆ, ಹಿರಿಯ ಮುತ್ಸದಿಗಳು, ಅವರ ಗರಡಿಯಲ್ಲೇ ಪಳಗಿ, ಅವರ ಮನೆ ಬಾಗಿಲನ್ನು ಕಾದು ಈಗ ಶಾಸಕನಾಗಿ, ಸಚಿವನಾಗಿ ದೇವೇಗೌಡರ ಬಗ್ಗೆ ಹಗುರವಾಗಿ ಮಾತನಾಡಿರುವುದು ಅತ್ಯಂತ ಖಂಡನೀಯ ಎಂದು ಹೇಳಿದರು.

ಈ ರೀತಿ ರಾಜಕೀಯ ಲಾಭಕ್ಕಾಗಿ ಪ್ರತಿ ಬಾರಿ ನಮ್ಮ ಒಕ್ಕಲಿಗ ಸಮುದಾಯದ ಬಗ್ಗೆ ಅವಹೇಳನಕಾರಿ ಮಾತುಗಳ ನಾಡುತ್ತಿರುವ ಜಮೀರ್ ಅಹ್ಮದ್ ನ ಮೇಲೆ ವರ್ಣಭೇದದ ಆಧಾರದ ಮೇಲೆ ಸರ್ಕಾರ ಜುಮೋಟೋ ಕೇಸನ್ನು ದಾಖಲಿಸಬೇಕು ಹಾಗೂ ಸಚಿವ ಸ್ಥಾನದಿಂದ ವಜಾ ಮಾಡಬೇಕು ಒಳ್ಳೆಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಒಕ್ಕಲಿಗರ ಸಂಘದ ಉಪಾಧ್ಯಕ್ಷ ರವಿ, ನಗರ ಪಾಲಿಕೆ ಸದಸ್ಯೆ ಪ್ರೇಮ ಶಂಕರೇಗೌಡ ಹಾಗೂ ಪ್ರತಾಪ್ ಉಪಸ್ಥಿತರಿದ್ದರು.

ಜಮೀರ್ ವಿರುದ್ಧ ರಾಜ್ಯ,ಜಿಲ್ಲಾ ಒಕ್ಕಲಿಗರ ಸಂಘ ಆಕ್ರೋಶ Read More

ಸಚಿವ ಜಮೀರ್‌ ವಿರುದ್ಧ ಆರ್‌.ಅಶೋಕ ತೀವ್ರ ವಾಗ್ದಾಳಿ

ಚನ್ನಪಟ್ಟಣ: ಸಚಿವ ಜಮೀರ್‌ ಅಹ್ಮದ್‌ ಅವರು ಒಕ್ಕಲಿಗರನ್ನು ಅಥವಾ ಹಿಂದೂಗಳನ್ನು ಖರೀದಿಸುತ್ತೇನೆ ಎಂದು ಹೇಳುತ್ತಿದ್ದಾರೆಯೇ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನಿಸಿದರು.

ಚನ್ನಪಟ್ಟಣ ಉಪಚುನಾವಣೆಯ ಪ್ರಚಾರದ ವೇಳೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಚಾಮರಾಜಪೇಟೆಗೆ ಹೋಗಿ ರ‍್ಯಾಲಿ ಮಾಡಿ ಜಮೀರ್‌ ಅಹ್ಮದ್‌ರನ್ನು ಗೆಲ್ಲಿಸಿ ಅವರಿಗೆ ಜೀವನ ನೀಡಿದ್ದರು. ಅದೇ ಜಮೀರ್‌ ಅಹ್ಮದ್‌ ಈಗ ದೇವೇಗೌಡರ ಕುಟುಂಬವನ್ನು ಖರೀದಿಸುತ್ತೇವೆ ಎಂದು ಹೇಳಿದ್ದಾರೆ ಎಂದು
ಟೀಕಿಸಿದರು.

ದೇಶದ ಮಾಜಿ ಪ್ರಧಾನಿ ದೇವೇಗೌಡರು ಕಾವೇರಿ ನೀರು ಹಂಚಿಕೆಗಾಗಿ ಶ್ರಮಿಸಿದ್ದರು. ಕುಮಾರಸ್ವಾಮಿಯವರು ರೈತರ ಸಾಲ ಮನ್ನಾ ಮಾಡಿದ್ದರು. ಅಂತಹವರನ್ನು ಖರೀದಿಸುತ್ತೇನೆ ಎಂದು ಜಮೀರ್‌ ಹೇಳುತ್ತಾರೆ. ಇದು ಒಕ್ಕಲಿಗರನ್ನು ಖರೀದಿಸುತ್ತೇವೆಂದು ಅರ್ಥವೇ ಅಥವಾ ಹಿಂದೂಗಳನ್ನು ಖರೀದಿಸುತ್ತೇವೆಂದು ಅರ್ಥವೇ ಎಂದು ಕಾರವಾಗಿ ಪ್ರಶ್ನಿಸಿದರು.

ಈಗಾಗಲೇ ಸಚಿವ ಜಮೀರ್‌ ಅಹ್ಮದ್‌ ರೈತರ ಜಮೀನು ಕಬಳಿಸುತ್ತಿದ್ದಾರೆ. ಈಗ ದೇವೇಗೌಡರ ಕುಟುಂಬ ಖರೀದಿಸಲು ಇರಾಕ್‌, ಇರಾನ್‌ನಿಂದ ಹಣ ಬಂದಿದೆಯೇ? ನಾವು ಮಣ್ಣಿನ ಮಕ್ಕಳಾಗಿದ್ದು, ಇದೇ ನಾಡಿನಲ್ಲಿ ಹುಟ್ಟಿ ಬೆಳೆದಿದ್ದೇವೆ. ಚುನಾವಣೆ ನಡೆಯುವ ಸಮಯದಲ್ಲೇ ಕಾಂಗ್ರೆಸ್‌ ಸಚಿವರು ಖರೀದಿ ಬಗ್ಗೆ ಮಾತನಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಹಿಂದೆ ಇದ್ದ ರೌಡಿಗಳು ನಾಚುವಂತೆ ಅಬಕಾರಿ ಇಲಾಖೆಯ ಮೂಲಕ ಮದ್ಯ ಮಾರಾಟಗಾರರಿಂದ ಹಫ್ತಾ ವಸೂಲಿ ಮಾಡುತ್ತಿದ್ದಾರೆ. ಲೂಟಿ ಮಾಡಿದ ಹಣದಲ್ಲಿ ಕುಟುಂಬ ಖರೀದಿಸುವವರನ್ನು ಚನ್ನಪಟ್ಟಣದ ಜನರು ಕ್ಷಮಿಸುವುದಿಲ್ಲ ಎಂದು ಅಶೋಕ್ ಕಿಡಿಕಾರಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14 ಸೈಟು ಕೊಳ್ಳೆ ಹೊಡೆದು ಅದಕ್ಕಾಗಿ 62 ಕೋಟಿ ರೂ. ನೀಡಿ ಎಂದು ಕೇಳುತ್ತಾರೆ. ಅವರ ಬದುಕಿನ ತೆರೆದ ಪುಸ್ತಕದಲ್ಲಿ ದರೋಡೆಗಳೇ ತುಂಬಿದೆ ಎಂದು ಲೇವಡಿ ಮಾಡಿದರು.

ಇದನ್ನೆಲ್ಲ ಜನ ಯೋಚನೆ ಮಾಡಿ ಬದಲಾವಣೆ ತರಬೇಕು,ನಿಖಿಲ್‌ ಕುಮಾರಸ್ವಾಮಿ ಅವರನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು.

ಸಚಿವ ಜಮೀರ್‌ ವಿರುದ್ಧ ಆರ್‌.ಅಶೋಕ ತೀವ್ರ ವಾಗ್ದಾಳಿ Read More