ವಿಜೃಂಭಣೆಯಿಂದ ನೆರವೇರಿದಶ್ರೀ ಪಂಚ ಶನೇಶ್ಚರ ಸ್ವಾಮಿ ಆರಾಧನಾ ಮಹೋತ್ಸವ,ಹುತ್ತೂರಮ್ಮ ಜಾತ್ರೆ

ಮೈಸೂರು: ಶ್ರೀ ಪಂಚ ಶನೇಶ್ವರ ಸ್ವಾಮಿ ಆರಾಧನಾ ಮಹೋತ್ಸವ ಮತ್ತು ಮಲಯಾಳದ ಹುತ್ತೂರಮ್ಮ ಜಾತ್ರಾ ಮಹೋತ್ಸವ ಭಾನುವಾರ ವಿಜೃಂಭಣೆಯಿಂದ
ನೆರವೇರಿತು.

ಮೈಸೂರಿನ ಸಿದ್ದಾರ್ಥ ಲೇಔಟ್ ಕಮಾನ್ ಗೇಟ್ ಬಳಿ ಇರುವ ಲಲಿತ ಮಹಲ್ ಪ್ಯಾಲೇಸ್ ಹೋಟೆಲ್ ಮುಂಬಾಗದ ಆವರಣದಲ್ಲಿ 33ನೆ‌ ವರ್ಷದ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.

ಬೆಳಿಗ್ಗೆ ಮೈಸೂರಿನ ಸುತ್ತಮುತ್ತಲ ಹಳ್ಳಿಗಳಿಂದ 64 ಕೂಟಗಳು ಅಲಂಕೃತವಾಗಿ ಹಸಿರು ಹೊಂಬಾಳೆ ಮತ್ತು ಶ್ರೀ ಚಾಮುಂಡೇಶ್ವರಿ ಅಮ್ಮನವರ ಕರಗವನ್ನು ಹೊತ್ತು ಹಸಿರು ಹೂವಿನ ಮಂಟಪಕ್ಕೆ ದೇವರ ಉತ್ಸವ ತೆರಳಿತು.ಜಾನಪದ ಕಲಾತಂಡಗಳು ಉತ್ಸವದಲ್ಲಿ ಸಾಗಿ ಮೆರಗು ತಂದವು.

ಈ‌ ವೇಳೆ‌ ಮಕ್ಕಳ ಮುಡಿಗಳು, ನಾಮಕರಣಗಳು, ಸ್ತ್ರೀಯರ ಪಂಚಮುಡಿಗಳು ನಡೆದವು.

ಇದೇ ವೇಳೆ ಮಕ್ಕಳು ಆಲರವಿಯನ್ನು ಹೊತ್ತು ಹಸಿರು ಹೂವಿನ ಮಂಟಪಕ್ಕೆ ತೆರಳಿದರು. 10 ವರ್ಷದ ಒಳಗಿನ ಮಕ್ಕಳು ಕೂಡ ಕಳಸವನ್ನು ಹೊತ್ತು‌ ಸಾಗಿದ್ದು ವಿಶೇಷವಾಗಿತ್ತು.

ಮೆರವಣಿಗೆ ಸಿದ್ದಾರ್ಥ ಲೇಔಟ್ ಪಾಳ್ಯ ಸ್ಟಾಪ್ ಮಾರ್ಗವಾಗಿ‌ ಸಾಗಿ ಲಲಿತಮಹಲ್‌ ಗೇಟ್ ಮೂಲಕ ಬಂದು ಮುಖ್ಯ ರಸ್ತೆಯಲ್ಲಿ ಸಾಗಿತು, ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ವಿವಿಧ ಪಕ್ಷಗಳ ಮುಖಂಡರು ಪಾಲ್ಗೊಂಡಿದ್ದರು.

ಮಧ್ಯಾಹ್ನ 1ಗಂಟೆಗೆ ಭಕ್ತರಿಗೆ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು. ಶ್ರೀ ಪಂಚಶನೇಶ್ಚರಸ್ವಾಮಿ ಮಹಾ ಮಂಗಳಾರತಿಯನ್ನು ರಾತ್ರಿ ನೆರವೇರಿಸಲಾಯಿತು.

ವಿಜೃಂಭಣೆಯಿಂದ ನೆರವೇರಿದಶ್ರೀ ಪಂಚ ಶನೇಶ್ಚರ ಸ್ವಾಮಿ ಆರಾಧನಾ ಮಹೋತ್ಸವ,ಹುತ್ತೂರಮ್ಮ ಜಾತ್ರೆ Read More

ಬಸವಣ್ಣನವರ ಆಶಯದಂತೆ ನಡೆಯಿರಿ,ಮೌಡ್ಯ ತೊರೆಯಿರಿ:ಸಿಎಂ ಕರೆ

ಮೈಸೂರು: ಬಸವಣ್ಣನವರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿ ಅಡಕವಾಗಿವೆ. ಇದನ್ನು ಇಡೀ ಸಮಾಜ ಅರಿತುಕೊಳ್ಳಬೇಕು
ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು.

ಸಿಎಂ,ಮೈಸೂರು ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಹದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಗದ್ದುಗೆ ದರ್ಶನ ಪಡೆದರು.

ನಂತರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಬಸವಣ್ಣನವರ ಆಶಯದಂತೆ ಜಾತಿ, ಧರ್ಮದ ಹೆಸರಿನ ಮನುಷ್ಯ ತಾರತಮ್ಯ ಹಾಗೂ ಮೌಡ್ಯಗಳನ್ನು ತೊರೆಯಬೇಕು ಎಂದು ತಿಳಿಸಿದರು.

ನಾನು ವೈಯುಕ್ತಿಕವಾಗಿ ಬಸವಣ್ಣನವರ ಅಪ್ಪಟ ಹಿಂಬಾಲಕ,ಹಾಗಾಗಿಯೇ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಫೋಟೋ ಕಡ್ಡಾಯಗೊಳಿಸಿದೆ ಎಂದು ಸಿದ್ದು ತಿಳಿಸಿದರು.

ವಿದ್ಯಾವಂತರೂ ಕರ್ಮ‌ಸಿದ್ಧಾಂತವನ್ನು ಆಚರಿಸುವ ದುರಂತವನ್ನು ನಾವು ಕಾಣುತ್ತೇವೆ. ಯಾವ ದೇವರೂ ಬಡವನಾಗಿರು, ಹಸಿದುಕೊಂಡಿರು, ಹರಿದ ಬಟ್ಟೆಯಲ್ಲಿರು ಎಂದು ಹಣೆಬರಹ ಬರೆಯುವುದಿಲ್ಲ. ಇಂತಹ ಮೌಡ್ಯವನ್ನು ವಿದ್ಯಾವಂತರೂ ಆಚರಿಸುತ್ತಿದ್ದಾರೆ. ಹೀಗೆ ಮಾಡಿದರೆ ಅವರ ವಿದ್ಯೆಗೆ ಗೌರವ ಬರುತ್ತಾ ಎಂದು ಸಿಎಂ ಪ್ರಶ್ನಿಸಿದರು.

ಜಾತಿ ಆಧಾರದಲ್ಲಿ ಮನುಷ್ಯನ ಯೋಗ್ಯತೆ ಅಳೆಯುವ ಪದ್ಧತಿಯನ್ನು ನಮ್ಮ ಸಂವಿಧಾನ ವಿರೋಧಿಸಿತು. ಪ್ರತಿಭೆ ಮತ್ತು ಸಾಮರ್ಥ್ಯ ಪ್ರತಿಯೊಬ್ಬರ ಸ್ವತ್ತು. ಅವಕಾಶಗಳು ಸಿಗಬೇಕಷ್ಟೆ. ಅವಕಾಶ ಸಿಕ್ಕಾಗ ಎಲ್ಲರ ಪ್ರತಿಭೆಯೂ ಹೊರಗೆ ಬರುತ್ತವೆ. ಇದಕ್ಕೆ ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು ಎಂದು ಸಿದ್ದರಾಮಯ್ಯ ಸಲಹೆ ನೀಡಿದರು.

ಸುತ್ತೂರು ಮಠ ಶಿಕ್ಷಣ ಮತ್ತು ಅನ್ನ ದಾಸೋಹ ನಡೆಸುತ್ತಾ ಇಡೀ ಸಮಾಜದ ಆಸ್ತಿಯಾಗಿದೆ. ಜಾತ್ಯತೀತ ಮೌಲ್ಯಗಳು ಸುತ್ತೂರು ಮಠದ ಮೌಲ್ಯಗಳೂ ಆಗಿವೆ ಎಂದು ಮುಖ್ಯ ಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾಯಕ ಮತ್ತು ದಾಸೋಹ ಎರಡೂ ಬಸವಾದಿ ಶರಣರ ಆಶಯವಾಗಿತ್ತು. ಕಾಯಕ ಅಂದ್ರೆ ಉತ್ಪತ್ತಿ, ದಾಸೋಹ ಅಂದರೆ ವಿತರಣೆ ಎಂದು ಸಿಎಂ ವಿಶ್ಲೇಷಿಸಿದರು.

ಬರಿ ಬಾಯಿ ಮಾತಿನಲ್ಲಿ ಬಸವಣ್ಣ ಮತ್ತು ಅಂಬೇಡ್ಕರ್ ಅವರ ಆಶಯಗಳು ಜಾರಿ ಆಗುವುದಿಲ್ಲ. ಆಶಯಗಳಿಗೆ ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಬೇಕು ಈ ಉದ್ದೇಶದಿಂದಲೇ ನಾವು ಗ್ಯಾರಂಟಿಗಳನ್ನು ಜಾರಿಗೊಳಿಸಿದೆವು ಸಿದ್ದರಾಮಯ್ಯ ತಿಳಿಸಿದರು.

ಬಡವರ ಆರ್ಥಿಕ ಅಸಹಾಯಕತೆಯನ್ನು ಶೋಷಿಸುವ ಮೈಕ್ರೋ ಫೈನಾನ್ಸ್ ಗಳ ಅತಿರೇಕದ ವಸೂಲಿ ನಿಯಂತ್ರಿಸಲು ಸುಗ್ರೀವಾಜ್ಞೆ ಮೂಲಕ ಕಠಿಣ ಕಾನೂನು ತರುತ್ತಿದ್ದೇವೆ ಎಂದು ಸಿದ್ದರಾಮಯ್ಯ ಕಡಕ್ಕಾಗಿ ಹೇಳಿದರು.

ಮೈಕ್ರೋ ಫೈನಾನ್ಸ್ ಗಳ ವಸೂಲಿ ಕ್ರಮಕ್ಕೆ ದಯವಿಟ್ಟು ಯಾರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ,ಸರ್ಕಾರ ನಿಮ್ಮ ಜೊತೆಗಿದೆ ತೊಂದರೆ ಕೊಟ್ಟರೆ ಕಂಪ್ಲೇಂಟ್ ಕೊಡಿ,ತಕ್ಷಣ ಕಾನೂನು ಕ್ರಮ ತೆಗೆದುಕೊಳ್ಳುತೇವೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.

ಬಸವಣ್ಣನವರ ಆಶಯದಂತೆ ನಡೆಯಿರಿ,ಮೌಡ್ಯ ತೊರೆಯಿರಿ:ಸಿಎಂ ಕರೆ Read More