ಚಂದ್ರವನ ಆಶ್ರಮಕ್ಕೆ ಜೀವದಾರ ರಕ್ತ ನಿಧಿ ಕೇಂದ್ರದಿಂದ‌1 ಲಕ್ಷ ರೂ ದೇಣಿಗೆ

ಮೈಸೂರು: ಶ್ರೀರಂಗಪಟ್ಟಣದಲ್ಲಿರುವ
ಚಂದ್ರವನ ಆಶ್ರಮ ದಾಸೋಹಕ್ಕೆ ಗುರುಪೂರ್ಣಿಮೆ ಪ್ರಯುಕ್ತ ಜೀವದಾರ ರಕ್ತ ನಿಧಿ ಕೇಂದ್ರದ ವತಿಯಿಂದ ಒಂದು ಲಕ್ಷ ದೇಣಿಗೆ ನೀಡಲಾಯಿತು.

ಚೆಕ್ ಮುಖಾಂತರ ಆಶ್ರಮದ ಪೀಠಾಧ್ಯಕ್ಷರಾದ ಶ್ರೀ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮಿಗಳವರಿಗೆ ಒಂದು ಲಕ್ಷ ರೂ ದೇಣಿಗೆ ಹಸ್ತಾಂತರಿಸಲಾಯಿತು.

ಈ‌ ವೇಳೆ ಮಾತನಾಡಿದ ಶ್ರೀ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮಿಗಳು,
ಜೀವದಾರ ರಕ್ತ ನಿಧಿ ಕೇಂದ್ರ ಯಶಸ್ವಿಯಾಗಿ ಸಮಾಜಮುಖಿ ಕೆಲಸ ಮಾಡುತ್ತಾ ಬಂದಿದೆ, ಸಾಮಾಜಿಕ ಹಾಗೂ ಧಾರ್ಮಿಕತೆ ಹಾಗೂ ಸನಾತನ ಧರ್ಮದ ಕೆಲಸವನ್ನು ಮಾಡುತ್ತಿರುವುದು ಬಹಳ ಸಂತೋಷ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಜೀವದಾರ ರಕ್ತ ನಿಧಿ ಕೇಂದ್ರ
ರಾಷ್ಟ್ರಮಟ್ಟದಲ್ಲಿ ಯಶಸ್ವಿ ಕಾಣಲಿ ಎಂದು ಹಾರೈಸಿದರು.

ಭಾರತೀಯ ಪರಂಪರೆಯಲ್ಲಿ ಮಠಗಳ ಪಾತ್ರ ಅಮೋಘವಾಗಿದ್ದು, ಪ್ರತಿಯೊಂದು ಮಠಗಳಿಗೆ ಭಕ್ತರೇ ಆಧಾರ ಸ್ಥಂಬ, ಧರ್ಮ ಪರಂಪರೆ ಉಳಿಸಿಕೊಂಡು ಬರುವಲ್ಲಿ ಮಠಮಾನ್ಯಗಳ ಸೇವೆ ಅಮೋಘ, ಹೆತ್ತ ತಂದೆ ತಾಯಿ ಮತ್ತು ಋಣ ತೀರಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಭಾರತೀಯ ಸಂಸ್ಕೃತಿಯಲ್ಲಿ ಅನಾದಿ ಕಾಲದಿಂದ ಗುರುಪೂರ್ಣಿಮೆ ಆಚರಿಸಲಾಗುತ್ತಿದೆ, ಪ್ರತಿಯೊಂದರ ಹಿಂದೆ ಗುರುವಿನ ಅವಶ್ಯಕತೆ ಇದ್ದು, ಗುರುವಿನ ಆಶೀರ್ವಾದವಿದ್ದರೆ ಎಲ್ಲವನ್ನು ಸಾಧಿಸಬಹುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಮುತ್ತಣ್ಣ, ಕೆಎಂಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಜಯಪ್ರಕಾಶ್, ಪರೀಕ್ಷಿತ್ ರಾಜ ಅರಸ್, ಮಂಜುನಾಥ್ ಮತ್ತಕತರರು ಹಾಜರಿದ್ದರು.

ಚಂದ್ರವನ ಆಶ್ರಮಕ್ಕೆ ಜೀವದಾರ ರಕ್ತ ನಿಧಿ ಕೇಂದ್ರದಿಂದ‌1 ಲಕ್ಷ ರೂ ದೇಣಿಗೆ Read More

ನಿಸ್ವಾರ್ಥ ಸೇವೆ ನೀಡುವ ಶುಶ್ರೂಷಕರನ್ನ ಗೌರವಿಸಿ-ನಜರ್ಬಾದ್ ನಟರಾಜ್

ಮೈಸೂರು: ಮಾರಕ ಕೊರೊನಾ ಆತಂಕದ ನಡುವೆಯೂ ನಿಷ್ಠೆ ಮತ್ತು ನಿಸ್ವಾರ್ಥದಿಂದ ಸೇವೆ ಸಲ್ಲಿಸುತ್ತಿರುವ ಶುಶ್ರೂಷಕರನ್ನು ಎಲ್ಲರೂ ಗೌರವಿಸಬೇಕು ಎಂದು ಕೆಪಿಸಿಸಿ ಸದಸ್ಯ ನಜರ್ಬಾದ್ ನಟರಾಜ್ ಹೇಳಿದರು.

ನಗರದ ಜೀವದಾರ ರಕ್ತ ನಿಧಿ ಕೇಂದ್ರದಲ್ಲಿ ಶ್ರೀ ದುರ್ಗಾ ಫೌಂಡೇಶನ್ ವತಿಯಿಂದ
ದಾದಿಯರ ಜೊತೆ ಫ್ಲಾರೆನ್ಸ್‌ ನೈಟಿಂಗೆಲ್‌ ಅವರ ಜನ್ಮದಿನದ ಪ್ರಯುಕ್ತ ವಿಶ್ವ ದಾದಿಯರ ದಿನ ಆಚರಿಸಿದ ವೇಳೆ ನಜರಬಾದ್ ನಟರಾಜ್ ಮಾತನಾಡಿದರು.

ಪ್ರತಿಯೊಬ್ಬ ರೋಗಿಗೂ ತಾವೊಬ್ಬ ತಾಯಿಯಂತೆ ಸೇವೆ ಸಲ್ಲಿಸುವ ನರ್ಸ್‌ಗಳು ಧನ್ಯರು ಎಂದು ಹೇಳಿದರು.

ಆರೋಗ್ಯ ಸೇವಾ ಕ್ಷೇತ್ರದಲ್ಲಿ ಪರಿಣಾಮಕಾರಿ ಯಾದ ಶುಶ್ರೂಷಾ ವಿಭಾಗಕ್ಕೆ ದಾದಿಯರದೇ ನೇತೃತ್ವ. ವೈದ್ಯರ ನಿರ್ದೇಶನವನ್ನು ಯಥಾವತ್ತಾಗಿ ಪಾಲಿಸಲು ದಾದಿಯರು ಸಹಕರಿಸುತ್ತಾರೆ, ವಿಶ್ವ ದಾದಿಯರ ದಿನಾಚರಣೆಯ ನಿಮಿತ್ತ ಶುಶ್ರೂಷಾ ಸೇವೆಯ ಬಗ್ಗೆ ಉಲ್ಲೇಖೀಸುವುದು ಔಚಿತ್ಯದಾಯಕ, ಅವರಿವರೆನ್ನದೆ ಎಲ್ಲರ ಆರೋಗ್ಯ ಕಾಪಾಡಲು ಹಗಲಿರುಳು ಶ್ರಮಿಸುವ ಅವರ ಔದಾರ್ಯ ದೊಡ್ಡದು ಎಂದು ಶ್ಲಾಘಿಸಿದರು.

ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷೆ ರೇಖಾ ಶ್ರೀನಿವಾಸ್ ಮಾತಮಾಡಿ,ಒಬ್ಬ ನರ್ಸ್ ತಾನು ಆರೈಕೆ ಮಾಡೋ ರೋಗಿ ಯಾವ ಜಾತಿ, ಧರ್ಮ,ಪಕ್ಷ, ಯಾವ ಊರು ಎಂಬುದನ್ನೆಲ್ಲ ನೋಡುವುದಿಲ್ಲ. ರೋಗಿ ಯಾರೇ ಇರಲಿ, ಅವರನ್ನು ಮಗುವಿನಂತೆ ಆರೈಕೆ ಮಾಡಿ ಮನೆಗೆ ಕಳುಹಿಸೋದಷ್ಟೇ ಅವರ ಏಕೈಕ ಗುರಿ ಎಂದು ಹೇಳಿದರು.

ಈ ವೇಳೆ ಮೇಣದ ಬತ್ತಿ ಹಚ್ಚಿ ಫ್ಲಾರೆನ್ಸ್‌ ನೈಟಿಂಗೆಲ್‌ ರನ್ನು ಸ್ಮರಿಸಲಾಯಿತು.

ಆನಂತರ ಹಲವು ವರ್ಷದಿಂದ ದಾದಿಯರಾಗಿ ಸೇವೆ ಸಲ್ಲಿಸಿದ
ರಶ್ಮಿ, ರಶೀದ, ಕೋಮಲಾ,ಪೂರ್ಣಿಮಾ
ಅವರುಗಳನ್ನು ಸನ್ಮಾನಿಸಿ ಶುಭಕೋರಲಾಯಿತು.

ಈ ಸಂದರ್ಭದಲ್ಲಿ ಮಹದೇವ್, ರಮೇಶ್ ರಾಮಪ್ಪ, ರವಿಚಂದ್ರ, ಸುಜಾತ ಮತ್ತಿತರರು ಹಾಜರಿದ್ದರು.

ನಿಸ್ವಾರ್ಥ ಸೇವೆ ನೀಡುವ ಶುಶ್ರೂಷಕರನ್ನ ಗೌರವಿಸಿ-ನಜರ್ಬಾದ್ ನಟರಾಜ್ Read More