ಕೆ.ಆರ್.ನಗರದಲ್ಲಿ ಹಸುವಿಗೂ ಸೀಮಂತ ಮಾಡಿ ಸಂಭ್ರಮಿಸಿದ ಕುಟುಂಬ!

ಕೆ.ಆರ್.ನಗರ: ಮನೆಯ ಮಗಳು ಚೊಚ್ಚಲ ಗರ್ಭಿಣಿಯಾದರೆ ಇಡೀ ಕುಟುಂಬ ಸಂಭ್ರಮ ಪಡುವುದು ಸಾಮಾನ್ಯ,ಆದರೆ ಕೆ.ಆರ್.ನಗರದಲ್ಲಿ ಹಸುವಿಗೂ ಸೀಮಂತ ಮಾಡುವ ಮೂಲಕ ಮನೆಯವರು ಸಂಭ್ರಮಿಸಿದ್ದಾರೆ.!

ಕೆ.ಆರ್.ನಗರ ಹೊರವಲಯದ ಕೆಂಪನಕೊಪ್ಪಲು ಗ್ರಾಮದ ರೈತ ಮಹಿಳೆ ರೇಣುಕಾ ಕೃಷ್ಣೇಗೌಡ ಅವರ ಮನೆಯಲ್ಲಿ ಹೀಗೆ‌ ಖುಷಿ,ಸಂಭ್ರಮ ಎದ್ದು ಕಾಣುತ್ತಿತ್ತು.
ರೇಣುಕಾ ಅವರು ತಮ್ಮ ಚೊಚ್ಚಲು ತುಂಬಿದ ಗರ್ಭಿಣಿ ಹಸುವಿನ ಸೀಮಂತವನ್ನು ಶಾಸ್ತ್ರೋಕ್ತವಾಗಿ ಮಾಡುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ರೇಣುಕಾ ಕೃಷ್ಣೇಗೌಡ ಅವರು ತಮ್ಮ ಮನೆಯಲ್ಲಿಯೇ ಹುಟ್ಟಿದ ಕರುವನ್ನು ಬಹಳ ಪ್ರೀತಿಯಿಂದ ಸಾಕಿದ್ದಾರೆ, ಅದು ದೊಡ್ಡದಾಗಿ ಬೆಳೆದು ಚೊಚ್ಚಲ ಗರ್ಭಿಣಿ.
ಹಾಗಾಗಿ ಅವರು ಗ್ರಾಮದ ಮುತ್ತೈದೆಯರನ್ನು ಕರೆಸಿ ಪ್ರೀತಿಯ ಹಸುವಿನ ಸೀಮಂತ ಶಾಸ್ತ್ರ ಮಾಡಿ ಸಂಭ್ರಮಾಚರಣೆ ಮಾಡಿದ್ದು ಎಲ್ಲರ ಮನೆಯಲ್ಲೂ ಇದೇ ಮಾತಾಗಿದೆ.

ರೇಣುಕಾ ಕೃಷ್ಣೇಗೌಡ ಅವರು ತಮ್ಮ ಪ್ರೀತಿಯ ಹಸುವಿಗೆ ಒಂಬತ್ತು ತಿಂಗಳು ತುಂಬಿದ ಕೂಡಲೇ ಸೀಮಂತ ಮಾಡಲು ನಿರ್ಧರಿಸಿ, ಅಕ್ಕಪಕ್ಕದ ಮನೆಯವರಿಗೆ ಹಾಗೂ ಗ್ರಾಮಸ್ಥರಿಗೆ ವುಷಯ ತಿಳಿಸಿ ಸೀಮಂತ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರು.

ಮನೆಯ ಮುಂದೆ ಶಾಮಿಯಾನ ಹಾಕಿಸಿ ಎಲ್ಲರೂ ಮನೆಯ ಮಗಳು ಗರ್ಭಿಣಿಯಾದಾಗ ನಡೆಸುವ ಸೀಮಂತ ಕಾರ್ಯದಂತೆಯೇ ಹಸುವಿಗೆ ರೇಷ್ಮೆ ಸೀರೆ, ಹಸಿರುಬಳೆ ತೊಡಿಸಿ,ಕೊರಳಿಗೆ ಹೂ ಮಾಲೆ ಹಾಕಿ, ಕಾಲಿಗೆ ಗೆಜ್ಜೆ ಕಟ್ಟಿ ಶೃಂಗಾರ ಮಾಡಿ, ಐದು ಬಗೆಯ ಸಿಹಿ ತಿಂಡಿಗಳು, ಐದು ಬಗೆಯ ಹಣ್ಣುಗಳನ್ನು ನೀಡಿ, ಆರತಿ ಬೆಳಗಿದರು.

ಊರಿನ ಮುತ್ತೈದೆಯರಾದ ಪವಿತ್ರ, ಮಂಜುಳ, ಮಮತ, ಶಾಲಿನಿ, ರಶ್ಮಿ ಮಹೇಶ್ ಅವರುಗಳನ್ನು ಕರೆಸಿ ಶಾಸ್ತ್ರೋಕ್ತ ವಾಗಿ ಸೀಮಂತ ಮಾಡಿದ್ದಾರೆ.

ಜತೆಗೆ ಗ್ರಾಮಸ್ಥರಿಗೆ ಸಿಹಿ ಊಟ ಹಾಕಿಸುವ ಮೂಲಕ ರೇಣುಕಾ ಕೃಷ್ಣೇಗೌಡ ಮಾದರಿಯಾಗಿದ್ದಾರೆ.

ಗ್ರಾಮದ ಅನೇಕ ಮಹಿಳೆಯರು ಮತ್ತಿತರರು ಭಾಗವಹಿಸಿ ಗರ್ಭಿಣಿ ಹಸುವಿಗೆ ಶುಭ ಹಾರೈಸಿದರು.

ಕೆ.ಆರ್.ನಗರದಲ್ಲಿ ಹಸುವಿಗೂ ಸೀಮಂತ ಮಾಡಿ ಸಂಭ್ರಮಿಸಿದ ಕುಟುಂಬ! Read More

ಕೆ.ಆರ್.ನಗರ ಅಭಿವೃದ್ಧಿ ಬಗ್ಗೆ ಸಾರ್ವಜನಿಕ ವಾಗಿ ಚರ್ಚೆಗೆ ಸಿದ್ದ:ಸಾ.ರಾ ಮಹೇಶ್

ಮೈಸೂರು: ಕೆ.ಆರ್.ನಗರದ ಅಭಿವೃದ್ಧಿ ಬಗ್ಗೆ ಸಾರ್ವಜನಿಕವಾಗಿಯೇ ಚರ್ಚೆಗೆ ಸಿದ್ದ,ನೀವೂ ಬನ್ನಿ ಎಂದು ಮಾಜಿ ಶಾಸಕ ಸಾ.ರಾ ಮಹೇಶ್ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸವಾಲು ಹಾಕಿದ್ದಾರೆ.

ಮೈಸೂರಿನಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು,ಎರಡು ವರ್ಷದ ಹಿಂದೆ ಆಗಿದ್ದ ಸೇತುವೆಯನ್ನು ಈಗ ಸಿಎ‌ಂ‌ ಕೆ.ಆರ್.‌ ನಗರದಲ್ಲಿ ಉದ್ಘಾಟಿಸಿದ್ದಾರೆ ಎಂದು ಟೀಕಿಸಿದರು.

ಹಳೆಯ ಕಾಮಗಾರಿಗಳನ್ನು ಉದ್ಘಾಟನೆ ಮಾಡಿ ಸಿಎಂ ಭಾಷಣ ಮಾಡಿ ಹೋಗಿದ್ದಾರೆಂದು ಸಾರಾ ಮಹೇಶ್ ವ್ಯಂಗ್ಯ ವಾಡಿದರು.

ನಾನು ಕೆ.ಆರ್. ನಗರ ಕ್ಷೇತ್ರ ಹಾಳು ಮಾಡಿದ್ದೇನೆ ಎಂದು ಸಿಎಂ ಹೇಳಿದ್ದಾರೆ. ನಾನು ಮಾಡಿರುವ ಕಾಮಗಾರಿಗಳನ್ನು ಯಾಕೆ ಮುಖ್ಯಮಂತ್ರಿಗಳು ಉದ್ಘಾಟನೆ ಮಾಡಿದರು ಎಂದು ಪ್ರಶ್ನಿಸಿದರು.

ನಾನು ಯಾವುದದರೂ ಗುತ್ತಿಗೆದಾರನ ಬಳಿ ಒಂದು ರೂಪಾಯಿ ಪಡೆದಿದ್ದರೆ ತೋರಿಸಿ ಎಂದು ಸಾರಾ ಮಹೇಶ್ ಸವಾಲು ಹಾಕಿದರು.

ಇಡೀ ರಾಜ್ಯದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ ಎಂದು ದೂರಿದ ಅವರು,
ಕೆ.ಆರ್. ನಗರದಲ್ಲಿ ಈಗ ಕೆಲವರು ಬೇರೆ ಬೇರೆ ಕಡೆಯಿಂದ ಬಂದು ಇಸ್ಪೀಟ್ ಆಡುತ್ತಿದ್ದಾರೆ ಇದು ಪೊಲೀಸರ ಗಮನಕ್ಕೆ ಬಂದಿಲ್ಲವೆ ಎಂದು ಸಾ.ರಾ.ಮಹೇಶ್ ಕಾರವಾಗಿ ಪ್ರಶ್ನಿಸಿದರು.

ಕೆ.ಆರ್.ನಗರ ಅಭಿವೃದ್ಧಿ ಬಗ್ಗೆ ಸಾರ್ವಜನಿಕ ವಾಗಿ ಚರ್ಚೆಗೆ ಸಿದ್ದ:ಸಾ.ರಾ ಮಹೇಶ್ Read More

ಮೈಕ್ರೋ ಫೈನಾನ್ಸ್ ಗಳಿಗೆ ಧಾರಾಳವಾಗಿ ಅವಕಾಶ ಕೊಟ್ಟ ಸರ್ಕಾರ: ಕುಮಾರಸ್ವಾಮಿ

ಮೈಸೂರು: ಮಹಿಳೆಯರಿಗೆ 2000 ಗೃಹಲಕ್ಷ್ಮಿ ಹಣ ಕೊಟ್ಟು ಸಬಲೀಕರಣ ಮಾಡುತ್ತೇವೆ ಎನ್ನುವ ರಾಜ್ಯ ಸರಕಾರ; ಅದೇ ಮಹಿಳೆಯರ ಜೀವ ಹರಣ ಮಾಡಲು ಮೈಕ್ರೋ ಫೈನಾನ್ಸ್ ಗಳಿಗೆ ಧಾರಾಳವಾಗಿ ಅವಕಾಶ ಕೊಟ್ಟಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು.

ಕೆ ಆರ್ ನಗರದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉತ್ತಮ ಆಡಳಿತಕ್ಕೆ ಕರ್ನಾಟಕ ಮಾದರಿ ಆಗಿತ್ತು,ಅದನ್ನು ಸರ್ವನಾಶ ಮಾಡಲು ಇವರು ಹೊರಟಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ದ ಕಿಡಿಕಾರಿದರು.

ಅಧಿಕಾರಕ್ಕಾಗಿ ಕಚ್ಚಾಡುತ್ತಿರುವ ಇವರು ಜನರಿಗೆ ಏನು ಮಾಡಿದ್ದಾರೆ. ಒಂದು ತಿಂಗಳ ಹಿಂದೆಯೇ ಚಾಮರಾಜನಗರದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಶುರುವಾಯಿತು. ಜನರು ಊರು ಬಿಟ್ಟು ಹೋದರು. ಸಮಸ್ಯೆ ಶುರುವಾಗಿ ಇಷ್ಟು ದಿನವಾದರೂ ಈಗ ಇವರು ನಾಳೆ ಸಭೆ ಕರೆದಿದ್ದಾರೆ ಎಂದು ಟೀಕಿಸಿದರು.

ಮೈಕ್ರೋ ಫೈನಾನ್ಸ್ ಕಂಪನಿಗಳು ರಾಜ್ಯದಲ್ಲಿ ನಾಯಿಕೊಡೆಗಳಂತೆ ತಲೆ ಎತ್ತಿವೆ. ಕಾನೂನುಬಾಹಿರವಾಗಿ ಚಟುವಟಿಕೆಗಳನ್ನು ನಡೆಸುತ್ತಿವೆ ಕಾನೂನು ನಿಯಂತ್ರಣ ಇಲ್ಲ ಎಂದು ಹೇಳಿದರು.

ದೇವರಾಜ ಅರಸು ಅವರಿಗೆ ಸರಿಸಮಾನವಾದ ಅಧಿಕಾರ ಮಾಡಿದವರು ಎಂದು ಹೇಳುತ್ತಿದ್ದೀರಿ.. ಈ ಐದು ವರ್ಷ ಅಲ್ಲ, ಮುಂದಿನ ಐದು ವರ್ಷವೂ ನೀವೇ ಅದ್ಇಕಾರಕ್ಕೆ ಬನ್ನಿ. ಆದರೆ, ಜನಕ್ಕೆ ಏನು ಒಳ್ಳೆಯದು ಮಾಡಿದ್ದೀರಿ ಎಂಬುದನ್ನು ಹೇಳಿ ಎಂದು ಅವರು ಪ್ರಶ್ನಿಸಿದರು.

ಸಿಎಂ ಅವರು ನಾಳೆ ಸಭೆ ಕರೆದಿದ್ದಾರೆ. ಸಭೆ ಕರೆದು ಏನು ಮಾಡುತ್ತೀರಿ,ಎಷ್ಟು ಜನ ಜೀವ ಕಳೆದುಕೊಂಡಿದ್ದಾರೆ, ಎಷ್ಟು ಜನರು ಮನೆ ಊರು ಬಿಟ್ಟು ಹೋಗಿದ್ದಾರೆ, ನಾನು ಮಂಡ್ಯ ಜಿಲ್ಲಾಧಿಕಾರಿಗಳ ಜತೆ ಮಾತನಾಡಿದೆ. ಈ ಜಿಲ್ಲೆ ಒಂದರಲ್ಲಿಯೇ 60 ಮೈಕ್ರೋ ಫೈನಾನ್ಸ್ ಗಳಿವೆ. ಅದರಲ್ಲಿ 14-15 ಫೈನಾನ್ಸ್ ಗಳು ಪರವಾನಗಿ ಪಡೆದಿವೆ. ಉಳಿದವು ಕಾನೂನು ಬಾಹಿರವಾಗಿ ಎಂದು ಹೆಚ್‌ಡಿ ಕೆ ಹೇಳಿದರು.

ರಾಜ್ಯಕ್ಕೆ ಒಳ್ಳೆಯದು ಮಾಡಿ ಎಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಕೊಟ್ಟರು. ಆದರೆ, ಅವರು ಅಧಿಕಾರಕ್ಕೆ ಬಂದಾಗಿನಿಂದ ವಿರೋಧ ಪಕ್ಷಗಳನ್ನು ಅಸ್ಥಿರಗೊಳಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದರು.

ಬಿಜೆಪಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನಿಸುತ್ತಿದ್ದೇನೆ. ವಿರೋಧ ಪಕ್ಷಗಳನ್ನು ಅಸ್ಥಿರಗೊಳಿಸುವ ಕೆಲಸ ಮಾಡುತ್ತಿದೆ ಕಾಂಗ್ರೆಸ್. ಆದರೂ ತನ್ನೊಳಗಿನ ಬಿಕ್ಕಟ್ಟು ಬಗೆಹರಿಸಿಕೊಳ್ಳುವ ಶಕ್ತಿ ಆ ಪಕ್ಷಕ್ಕೆ ಇದೆ ಎಂದು ಸಚಿವ ಕುಮಾರಸ್ವಾಮಿ ಅವರು ಹೇಳಿದರು.

ಮೈಕ್ರೋ ಫೈನಾನ್ಸ್ ಗಳಿಗೆ ಧಾರಾಳವಾಗಿ ಅವಕಾಶ ಕೊಟ್ಟ ಸರ್ಕಾರ: ಕುಮಾರಸ್ವಾಮಿ Read More