ಭಾರತದ ಇತಿಹಾಸ ಪುಟದಲ್ಲಿ ಕೆಂಪೇಗೌಡರ ಹೆಸರು ಚಿರಸ್ಥಾಯಿ- ಜಿ.ಟಿ ದೇವೇಗೌಡ

ಮೈಸೂರು: ಕೆಂಪೇಗೌಡರು ವಿಜಯನಗರ ಸಾಮ್ರಾಜ್ಯದ ಸಾಮಾಂತರಾಗಿ ಯಲಹಂಕ ನಾಡಿನ ಚುಕ್ಕಾಣಿ ಹಿಡಿದು ಮಾಡಿದ ಸಾಧನೆ, ಅವರು ನೀಡಿದ ಕೊಡುಗೆ ಅಪಾರ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹಾಗೂ ಶ್ರೀ ಕೆಂಪೇಗೌಡ ಜಯಂತೋತ್ಸವ ಸಮಿತಿ ಕರ್ನಾಟಕ ಕಲಾಮಂದಿರದಲ್ಲಿ ಹಮ್ಮಿಕೊಂಡಿದ್ದ ಶ್ರೀ ಕೆಂಪೇಗೌಡರ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು

ಕೆಂಪೇಗೌಡರು ಬೆಂಗಳೂರನ್ನು ನಿರ್ಮಾಣ ಮಾಡಿರುವುದರಿಂದ ಇಂದು ವಿಶ್ವ ವಿಖ್ಯಾತಿಯಾಗಿ ಬೆಳೆಯುವುದರ ಮೂಲಕ ಭಾರತದ ಇತಿಹಾಸ ಪುಟದಲ್ಲಿ ಕೆಂಪೇಗೌಡರ ಹೆಸರು ಚಿರಸ್ಥಾಯಿಯಾಗಿ ಉಳಿದಿದೆ ಎಂದು ಹೇಳಿದರು.

ಬೆಂಗಳೂರು ಕೋಟೆಯ ದಕ್ಷಿಣ ಭಾಗದ ದಿಡ್ಡಿಬಾಗಿಲ ನಿಲುವಿಗಾಗಿ ಕೆಂಪೇಗೌಡರ ಸೊಸೆ ಲಕ್ಷ್ಮೀದೇವಿಯು ಸ್ವತಃ ಆತ್ಮರ್ಪಾಣೆ ಮಾಡುವ ಮೂಲಕ ಬೆಂಗಳೂರು ನಗರ ನಿಮಾರ್ಣದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು ಎಂದು ತಿಳಿಸಿದರು.

ನಗರದ ಬೆಳವಣಿಗೆ ದೂರದೃಷ್ಟಿಯಿಂದ ಬೆಳ್ಳಿ ಮಂಟಪ (ವಾಣಿಜ್ಯ ಮಂಟಪ), ಇಲ್ಲಂತೆ ಮಂಟಪ (ಆರೋಗ್ಯ ಮಂಟಪ), ನೆಡುಂಕಲ್ ಮಂಟಪ (ದೈವ ಮಂಟಪ), ಚೌಕಿಸ್ಥಾನ ಮಂಟಪ (ಶಿಕ್ಷಾ ಮಂಟಪ) ಹಾಗೂ ಪಾವ ಮಂಟಪ (ನ್ಯಾಯ ಮಂಟಪ)ಗಳನ್ನು ಆಯಾ ಕ್ಷೇತ್ರಕ್ಕನುಗುಣವಾಗಿ ಪಂಚ ಗೋಪುರಗಳನ್ನು ನಿರ್ಮಿಸಿದವರು ಕೆಂಪೇಗೌಡರು ಎಂದು ಹೇಳಿದರು.

ಕೇಂಪೇಗೌಡರು ಬೆಂಗಳೂರು ನಗರ ನಿರ್ಮಾಣ ನಂತರ ವಾಸಿಸಲು ಬರುವ ಜನರಿಗೆ ಕುಡಿಯಲು ನೀರಿಗಾಗಿ ಕೆಂಪಾಬುದಿಕೆರೆ, ಗಿಡ್ಡೆ ಗೌಡರ ಕೆರೆ, ಕಾರಂಜಿ ಕೆರೆ, ಜಕ್ಕರಾಯನಕೆರೆ, ಕೆಂಪಾಪುರ ಅಗ್ರಹಾರದ ಕೆರೆ, ಮಾವಳ್ಳಿ ಸಿದ್ದಾಪುರ ಕೆರೆ ಹೀಗೆ ಇನ್ನು ಅನೇಕ ಕೆರೆಗಳನ್ನು ಸ್ಥಾಪಿಸಿ ಜನರಿಗೆ ಅನುಕೂಲ ಮಾಡಿಕೊಟ್ಟರು ಎಂದು ತಿಳಿಸಿದರು.

ನಗರದ ಮುಂದಿನ ಬೆಳವಣಿಗೆಯ ದೃಷ್ಟಿ ಇಟ್ಟುಕೊಂಡು ಆಯಾ ಕುಲಕಸಬು ಕಲಿತ್ತಿದ್ದ ಜನರಿಗೆ ವ್ಯಾಪರ ಮಾಡಲು ಅನುಕೂಲವಾಗುವಂತೆ ಬಿನ್ನಿಪೇಟೆ, ಚಿಕ್ಕಪೇಟೆ, ಬಳೆ ಪೇಟೆ, ಅಕ್ಕಿಪೇಟೆ, ಮಾಮೂಲ್ ಪೇಟೆ, ಗಾಣಿಗರ ಪೇಟೆ, ನಗರ್ತಪೇಟೆ, ಕಾಟನ್ ಪೇಟೆ, ಸುಲ್ತಾನ್ ಪೇಟೆ, ತಿಗಳರಪೇಟೆ, ಕುಂಬಾರ ಪೇಟೆ, ಗೊಲ್ಲರಪೇಟೆ ಹೀಗೆ ಅನೇಕ ಪೇಟೆಗಳನ್ನು ನಿರ್ಮಿಸಿಕೊಟ್ಟು ಜೀವನ ಮಾಡಲು ದಾರಿ ಮಾಡಿಕೊಡುವುದರ ಮೂಲಕ ವ್ಯಾಪರ ಮಾಡಿಕೊಟ್ಟಿದ್ದರು ಎಂದು ಜಿ.ಟಿ.ದೇವೇಗೌಡ ಬಣ್ಣಿಸಿದರು.

ಕೆಂಪೇಗೌಡರ‌ ಅಭಿವೃದ್ಧಿ ಕಾರ್ಯಗಳನ್ನು ಬಣ್ಣಿಸಿ ಎಲ್ಲಾ ರಾಜಕಾರಣಿಗಳು ಅವರ ಆದರ್ಶಗಳನ್ಯ ಪಾಲಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಚಾಮರಾಜ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಕೆ. ಹರೀಶ್ ಗೌಡ ಮಾತನಾಡಿ 15-16 ನೇ ಶತಮಾನದಲ್ಲಿ ಸುಸಜ್ಜಿತ ಬೆಂಗಳೂರು ನಗರವನ್ನು ನಿರ್ಮಾಣ ಮಾಡುವುದರ ಮೂಲಕ ಎಷ್ಟೋ ಜನರ ಜೀವನವನ್ನು ಕಟ್ಟಿಕೊಟ್ಟವರು ಕೆಂಪೇಗೌಡರು ಎಂದು ಹೇಳಿದರು.

ಕೆಂಪೇಗೌಡರು ನಿರ್ಮಾಣ ಮಾಡಿದಂತಹ ಎಲ್ಲಾ ಪೇಟೆಗಳು ಇಂದಿಗೂ ಸಹ ಜೀವಂತವಾಗಿದ್ದು ಇವರು ಮಾಡಿರುವಂತಹ ಸಾಧನೆ ಕರ್ನಾಟಕ ರಾಜ್ಯಕ್ಕೆ ಕೊಟ್ಟಿರುವಂತಹ ಕೊಡುಗೆ ಅಪಾರವಾದುದು ಎಂದು ಹೇಳಿದರು.

ಶ್ರೀ ಆದಿಚುಂಚನಗಿರಿ ಶಾಖಾ ಮಠದ ಕಾರ್ಯದರ್ಶಿ ಪೂಜ್ಯ ಶ್ರೀ ಸೋಮೇಶ್ವರನಾಥ ಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸಿದ್ದರು.

ವೈದ್ಯ ಸಾಹಿತಿ ಅಧ್ಯಕ್ಷರಾದ ಡಾ.ಎಸ್. ಪಿ. ಯೋಗಣ್ಣ ಮಾತನಾಡಿದರು.

ಕೆಂಪೇಗೌಡ ಜಯಂತಿ ಪ್ರಯುಕ್ತ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಪ್ರತಿಭಾ ಪುರಸ್ಕಾರ ನೀಡಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಜೋತೆಗೆ ದ್ವಿತೀಯ ಪಿಯುಸಿ ಹಾಗೂ ಎಸ್. ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪುರಸ್ಕಾರ ನೀಡಲಾಯಿತು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕರುಗಳಾದ ಸಿ. ಎನ್. ಮಂಜೇಗೌಡ, ಕೆ.ವಿವೇಕಾನಂದ, ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಟಿ. ಎಸ್.ಶ್ರೀವತ್ಸ, ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್.ಯುಕೇಶ್ ಕುಮಾರ್, ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ವಿ. ಎನ್.ಮಲ್ಲಿಕಾರ್ಜುನಸ್ವಾಮಿ, ಸಹಾಯಕ ನಿರ್ದೇಶಕ ಡಾ. ಎಂ. ಡಿ ಸುದರ್ಶನ್, ಕೆಂಪೇಗೌಡ ಜಯಂತೋತ್ಸವ ಸಮಿತಿಯ ಅಧ್ಯಕ್ಷ ಪ್ರಶಾಂತ್ ಗೌಡ ಸೇರಿದಂತೆ ಸಮಿತಿಯ ಮುಖಂಡರು ಉಪಸ್ಥಿತರಿದ್ದರು.

ಭಾರತದ ಇತಿಹಾಸ ಪುಟದಲ್ಲಿ ಕೆಂಪೇಗೌಡರ ಹೆಸರು ಚಿರಸ್ಥಾಯಿ- ಜಿ.ಟಿ ದೇವೇಗೌಡ Read More

ನಾವೆಲ್ಲ ಸ್ವತಂತ್ರರಾಗಿ ಜೀವಿಸುತಿರುವುದಕ್ಕೆ ನಮ್ಮ ಸಂವಿಧಾನ ಕಾರಣ:ಹರೀಶ್ ಗೌಡ

ಮೈಸೂರು: ಪ್ರತಿಯೊಬ್ಬರೂ ಸ್ವತಂತ್ರವಾಗಿ ಜೀವಿಸುತ್ತಿರುವುದಕ್ಕೆ ಕಾರಣ ನಮ್ಮ ಸಂವಿಧಾನ ಎಂದು ಚಾಮರಾಜ ವಿಧಾನ ಸಭೆಯ ಶಾಸಕರಾದ ಕೆ. ಹರೀಶ್ ಗೌಡ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮೈಸೂರು ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಕಲಾಮಂದಿರದಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ವಿಶಿಷ್ಟ ಸಂವಿಧಾನವನ್ನು ನಮಗೆ ಕೊಟ್ಟವರು ಡಾ. ಬಿ. ಆರ್ ಅಂಬೇಡ್ಕರ್ ಅವರು. ಸಂವಿಧಾನ ಒಂದೇ ಅಲ್ಲದೇ ಅರ್ಥಶಾಸ್ತ್ರದಲ್ಲೂ ಸಹ ಪ್ರಸಿದ್ಧವಾದ ಮಹಾನ್ ವ್ಯಕ್ತಿ ಯಾಗಿದ್ದರು. ಜೊತೆಗೆ ಎಲ್ಲಾ ವಿಚಾರದಲ್ಲಿಯೂ ಪರಿಣಿತಿ ಹೊಂದಿದ್ದರು. ಅಂತಹ ಮಹಾನ್ ವ್ಯಕ್ತಿ ನಮ್ಮ ದೇಶಕ್ಕೆ ಸಂವಿಧಾನವನ್ನು ರಚಿಸಿರುವುದು ನಮ್ಮೆಲ್ಲರ ಹೆಮ್ಮೆ ಎಂದು ಹೇಳಿದರು.

ಅಂಬೇಡ್ಕರ್ ಅವರು ನಮಗೆ ನೀಡಿರುವ ಸಂವಿಧಾನವನ್ನು ಅಳವಡಿಸಿಕೊಂಡ ಮೇಲೆ ನಾವು ಅದನ್ನು ಅರ್ಥ ಮಾಡಿಕೊಂಡು ಭೀಮ ಪರ್ವವಾಗಿ ಮಾಡಬೇಕು ಎಂದು ಹೇಳಿದರು.

ದಿನರು, ಹಿಂದುಳಿದವರಿಗೆ ಅಸ್ಪೃಶ್ಯರಿಗೆ ದೇಶದಲ್ಲಿ ಸಮಾನತೆ, ಸಹಬಾಳ್ವೆಯಿಂದ ಬದುಕಲು ಸಂವಿಧಾನವನ್ನು ಕೊಟ್ಟಿದ್ದಾರೆ ಅದನ್ನು ಯಾರೂ ಸರಿಯಾಗಿ ಬಳಕೆ ಮಾಡಿಕೊಳ್ಳುತ್ತಿಲ್ಲ ಎಂದು ಬೇಸರ ವ್ಯಕ್ತ ಪಡಿಸಿದರು.

ಚಾಮುಂಡೇಶ್ವರಿ ಕ್ಷೇತ್ರದ ವಿಧಾನಸಭೆ ಶಾಸಕರಾದ ಜಿ. ಟಿ. ದೇವೇಗೌಡ ಅವರು ಮಾತನಾಡಿ ಸಂವಿಧಾನದ ಮೂಲಕ ಎಲ್ಲರ ಕಣ್ಣನ್ನು ತೆರೆಸಿದವರು ಡಾ. ಬಿ. ಆರ್ ಅಂಬೇಡ್ಕರ್ ಎಂದು ‌ಬಣ್ಣಿಸಿದರು.

ಎಲ್ಲರಿಗೂ ಇರುವುದು ಒಂದೇ ಸಂವಿಧಾನ ಅದು ಬಾಬ ಸಾಹೇಬ್ ಅಂಬೇಡ್ಕರ್ ಅವರು ಕೊಟ್ಟಿರುವಂತಹ ಸಂವಿಧಾನ
ಅದರಂತೆ ನಾವು ಅಡಳಿತ ನಡೆಸಬೇಕು ಎಂದು ತಿಳಿಸಿದರು.

ಡಾ. ಬಾಬ ಸಾಹೇಬ್ ಅಂಬೇಡ್ಕರ್ ಒಬ್ಬ ವ್ಯಕ್ತಿಯಲ್ಲ ಅವರು ಒಂದು ದೊಡ್ದ ಶಕ್ತಿ. ಶಿಕ್ಷಣ ಸಂಘಟನೆ ಅನ್ಯಾಯದ ವಿರುದ್ಧ ಹೋರಾಟ ಎಂಬ ಕರೆ ನೀಡಿದ್ದರು, ಶಿಕ್ಷಣಕ್ಕೆ ಮೊದಲ ಅಧ್ಯತೆಯನ್ನು ನೀಡಿ ಕ್ರಾಂತಿಯನ್ನು ಮಾಡಿದವರು ಅಂಬೇಡ್ಕರ್ ಅವರು ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಡಾ ಡಿ. ತಿಮ್ಮಯ್ಯ ಅವರು ಮಾತನಾಡಿ ಕತ್ತೆಲೆಯಲ್ಲಿ ಬದುಕುತ್ತಿದ್ದಂತಹ ಜನರಿಗೆ ಬೆಳಕು ನೀಡಿ, ಚೇತನವನ್ನು ತುಂಬಿ ಶಕ್ತಿಯನ್ನು ನೀಡಿದವರು ಡಾ. ಬಿ.ಆರ್ ಅಂಬೇಡ್ಕರ್ ಎಂದು ಹೇಳಿದರು.

ವಿಧಾನ ಪರಿಷತ್ ಮತ್ತೊಬ್ಬ ಸದಸ್ಯ ಸಿ.ಎನ್.ಮಂಜೇಗೌಡ ಅವರು ಮಾತನಾಡಿ ಶಿಕ್ಷಣ ಸಮಾನತೆ , ಬ್ರಾತೃತ್ವ ಎಂಬ ಮೂರು ಆಧಾರ ಸ್ತಂಭ ಗಳನ್ನು ನಮಗೆ ಡಾ. ಬಿ. ಆರ್ ಅಂಬೇಡ್ಕರ್ ಅವರು ನೀಡಿದ್ದಾರೆ. ಅವನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಬುದ್ಧ, ಬಸವಣ್ಣ ಅಂಬೇಡ್ಕರ್ ಅವರ ಆಲೋಚನೆಗಳನ್ನು ಹಾಗೂ ಚಿಂತನೆಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು. ನೀವು ಅವರಲ್ಲಿ ಒಬ್ಬ ಮಹಾನ್ ವ್ಯಕ್ತಿ ಯಾಗಬೇಕು ಎಂದು ಸಲಹೆ ನೀಡಿದರು.

ಕರ್ನಾಟಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ. ಪುಷ್ಪ ಅಮರನಾಥ್,
ಮಂಡ್ಯ ಜಿಲ್ಲೆ,ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಸರ್ಕಾರಿ ಪದವಿಪೂರ್ವ ಕಾಲೇಜಿನ ಜೆ. ಬಿ. ಮಂಜುನಾಥ್ ಮತ್ತಿತರರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್. ಯುಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಎನ್.ವಿಷ್ಣುವರ್ಧನ್, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತ ಶೇಖ್ ತನ್ವೀರ್ ಆಶಿಫ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಬಿ.ರಂಗೇಗೌಡ ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

ನಾವೆಲ್ಲ ಸ್ವತಂತ್ರರಾಗಿ ಜೀವಿಸುತಿರುವುದಕ್ಕೆ ನಮ್ಮ ಸಂವಿಧಾನ ಕಾರಣ:ಹರೀಶ್ ಗೌಡ Read More