ಶಂಕರ ನಾಗ್ ಹುಟ್ಟುಹಬ್ಬದ ದಿನ: ಆಟೋ ಚಾಲಕರ ದಿನಾಚರಣೆ ಘೋಷಣೆಗೆ ಆಗ್ರಹ

ಮೈಸೂರು: ಶಂಕರ ನಾಗ್ ಅವರ ಹುಟ್ಟುಹಬ್ಬದ ದಿನವನ್ನು ಆಟೋ ಚಾಲಕರ ದಿನಾಚರಣೆ ಎಂದು ಘೋಷಿಸುವಂತೆ ಕೆಪಿಸಿಸಿ ಸದಸ್ಯ ನಜರ್ಬಾದ್ ನಟರಾಜ್ ಮನವಿ ಮಾಡಿದರು.

ಕರ್ನಾಟಕ ಹಿತರಕ್ಷಣಾ ವೇದಿಕೆ ವತಿಯಿಂದ ದೇವರಾಜ ಅರಸು ರಸ್ತೆಯಲ್ಲಿರುವ ಆಟೋ ನಿಲ್ದಾಣದಲ್ಲಿ ಕನ್ನಡ ಚಿತ್ರರಂಗದ ಕರಾಟೆ ಕಿಂಗ್, ನಟ, ನಿರ್ದೇಶಕ ಶಂಕರನಾಗ್ ಅವರ ಹುಟ್ಟುಹಬ್ಬವನ್ನು ಸಿಹಿ ವಿತರಿಸಿ ಆಚರಿಸಿದ ವೇಳೆ ಸದಸ್ಯರಾದ ನಜರ್ಬಾದ್ ನಟರಾಜ್ ಮಾತನಾಡಿದರು.

ಆಟೋ ಚಾಲಕರು ಸ್ವಾಭಿಮಾನಿಗಳು. ಸಂಪಾದನೆಯ ಜೊತೆಯಲ್ಲೆ ಸಮಾಜದ ಒಳತಿಗಾಗಿ ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಹೃದಯವಂತರು ಎಂದು ಬಣ್ಣಿಸಿದರು.

ಕನ್ನಡಚಿತ್ರರಂಗದ ಬಹುಮುಖ ಪ್ರತಿಭಾವಂತ ಕರಾಟೆಕಿಂಗ್ ಶಂಕರ್ ನಾಗ್ ಅವರು ನಿರ್ದೇಶನ ಮತ್ತು ನಟನೆಗೆ ಹಲವಾರು ಪ್ರಶಸ್ತಿಗಳನ್ನು ಪಡೆದ ದೂರದೃಷ್ಟಿಯುಳ್ಳ ಕಲಾವಿದ. ಇವರ ನಿರ್ದೇಶನದ ಮಾಲ್ಗುಡಿ ಡೇಸ್ ವಿಶ್ವವಿಖ್ಯಾತಿ ಪಡೆದ ದಂತಕಥೆಯಾಗಿದೆ ಎಂದು ಹೇಳಿದರು.

ಸಾಧನೆಯೇ ಬದುಕಿನ ಗುರಿ ಎಂಬ ಶಂಕರನಾಗ್ ಅವರ ತತ್ವ ನಮ್ಮೆಲ್ಲರಿಗೂ ಪ್ರೇರಣೆ. ಮುಂದಿನ ದಿನದಲ್ಲಿ ರಾಜ್ಯ ಸರ್ಕಾರ ಕಾರ್ಮಿಕ ಇಲಾಖೆ ವತಿಯಿಂದ ಶಂಕರ ನಾಗ್ ಅವರ ಹುಟ್ಟುಹಬ್ಬದ ದಿನವನ್ನು ಆಟೋ ಚಾಲಕರ ದಿನಾಚರಣೆ ಎಂದು ಘೋಷಿಸಲು ಮುಂದಾಗಬೇಕು ಎಂದು ಕೋರಿದರು.

ಕರ್ನಾಟಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ವಿನಯ್ ಕುಮಾರ್ ಮಾತನಾಡಿ,ಮೆಟ್ರೋ ರೈಲ್ವೆ ನಿಲ್ದಾಣಕ್ಕೆ ಶಂಕರ್ ನಾಗ್ ಹೆಸರು ಇಡಬೇಕು ಹಾಗೂ ಮೈಸೂರಿನಲ್ಲಿ ಶಂಕರ್ ನಾಗ್ ಸ್ಮಾರಕ ನಿರ್ಮಾಣ ಮಾಡಬೇಕೆಂದು ಒತ್ತಾಯಿಸಿದರು.

ಕರುಣಾಮಯಿ ವಿಷ್ಣು ಅಭಿಮಾನಿ ಬಳಗದ ಅಧ್ಯಕ್ಷ ಎಸ್ ಎನ್ ರಾಜೇಶ್, ನೀತು, ದಿನೇಶ್,ಕಡಕೋಳ ಶಿವು, ಭರತ್, ಅಭಿ, ರಾಕೇಶ್ ಹಾಗೂ ಆಟೋ ಚಾಲಕರು
ಹಾಜರಿದ್ದರು.

ಶಂಕರ ನಾಗ್ ಹುಟ್ಟುಹಬ್ಬದ ದಿನ: ಆಟೋ ಚಾಲಕರ ದಿನಾಚರಣೆ ಘೋಷಣೆಗೆ ಆಗ್ರಹ Read More

ಪ್ರಶಸ್ತಿಗಳಿಂದ ಸಾಧಕರ ಜವಾಬ್ದಾರಿ ಹೆಚ್ಚಳ: ಕೆ ಬಿ ಲಿಂಗರಾಜು

ಮೈಸೂರು: ಮನುಷ್ಯ ಸಾಧನೆ ಮಾಡಿದಾಗ ಪ್ರಶಸ್ತಿಗಳು ಒಲಿದು ಬರುತ್ತವೆ, ಅದರೊಂದಿಗೆ ಹೆಚ್ಚಿನ ಜವಾಬ್ದಾರಿಗಳು ಕೂಡ ಸಾಧಕನನ್ನು ಅರಸಿ ಬರುತ್ತವೆ ಎಂದು ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷರಾದ ಕೆ ಬಿ ಲಿಂಗರಾಜು ಹೇಳಿದರು.

ಮೈಸೂರು ಜಿಲ್ಲಾಡಳಿತ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವ ಆಚರಿಸಿದ ಸಂದರ್ಭದಲ್ಲಿ ಸಮಾಜ ಸೇವೆಯಿಂದ ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಕೆ ಬಿ ಲಿಂಗರಾಜು ಅವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದುದಕ್ಕಾಗಿ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಹಾಗೂ ಕರ್ನಾಟಕ ಹಿತರಕ್ಷಣಾ ವೇದಿಕೆ ವತಿಯಿಂದ ಅಭಿನಂದನೆ ಸಲ್ಲಿಸಿದ ವೇಳೆ
ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದ ರು.

ಸಾಧನೆ ಎಂಬುದು ಸುಲಭದ ಮಾತಲ್ಲ ಸಾಧನೆಯು ಒಂದು ತಪಸ್ಸಿನ ಹಾಗೆ, ಹಲವು ಅಡೆತಡೆಯನ್ನು ಲೆಕ್ಕಿಸದೆ ದೃಢಸಂಕಲ್ಪ ಹಾಗೂ ಉತ್ತಮ ವಿಚಾರಗಳಿದ್ದಲ್ಲಿ ಸಾಧನೆಯನ್ನು ಯಾರು ಬೇಕಾದರೂ ಮಾಡಬಹುದು ಎಂದು ಹೇಳಿದರು.

ಪ್ರಶಸ್ತಿಗಳು ಸಾಧಕನಿಗೆ ಸಮಾಜದಲ್ಲಿ ಗೌರವ ಕೊಡಿಸುವುದರ ಜೊತೆಗೆ ಜವಾಬ್ದಾರಿಗಳನ್ನು ಕೂಡ ಹೆಚ್ಚಿಸುತ್ತದೆ ಎಂದು ಲಿಂಗರಾಜು ತಿಳಿಸಿದರು.

ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಮಾತನಾಡಿ,ಕೆ ಬಿ ಲಿಂಗರಾಜು ಅವರು ಹಲವು ವರ್ಷಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ಕೈಗಾರಿಕಾ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಮೈಸೂರು ಜಿಲ್ಲಾಡಳಿತ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿರುವುದು ಮೈಸೂರು ನಾಗರಿಕರಿಗೆ ಹೆಮ್ಮೆಯ ಸಂಗತಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ನಗರ ಪಾಲಿಕೆ ಮಾಜಿ ಸದಸ್ಯ ಜಗದೀಶ್, ಕರ್ನಾಟಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ವಿನಯ್ ಕುಮಾರ್, ಅಖಿಲ ಕರ್ನಾಟಕ ಒಕ್ಕಲಿಗ ಮಹಾಸಭಾ ಅಧ್ಯಕ್ಷ ಎನ್ ಬೆಟ್ಟೆಗೌಡ,ಮೈಸೂರು ಜಿಲ್ಲಾ
ಚಳವಳಿ ಗಾರರ ಸಂಘದ ಅಧ್ಯಕ್ಷ ಬಿ ಎ ಶಿವಶಂಕರ್, ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ್ ಅಯ್ಯಂಗಾರ್, ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಲೋಹಿತ್, ಎಸ್ ಎನ್ ರಾಜೇಶ್, ಸಚಿನ್ ನಾಯಕ್,ಭಾರತಿ ಮತ್ತಿತರರು ಲಿಂಗರಾಜು ಅವರಿಗೆ ಶುಭ ಕೋರಿದರು.

ಪ್ರಶಸ್ತಿಗಳಿಂದ ಸಾಧಕರ ಜವಾಬ್ದಾರಿ ಹೆಚ್ಚಳ: ಕೆ ಬಿ ಲಿಂಗರಾಜು Read More

ದೇವರಾಜ ಅರಸ್ ರಸ್ತೆಯಲ್ಲಿ ಸಿಹಿ ಹಂಚಿ ಅರಸು ಜಯಂತಿ ಆಚರಣೆ

ಮೈಸೂರು: ಮಾಜಿ ಮುಖ್ಯಮಂತ್ರಿ ಹಿಂದುಳಿದ ವರ್ಗಗಳ ಹರಿಕಾರ,ಭೂ ಸುಧಾರಣೆ ಹಾಗೂ ಉಳುವವರೇ ಭೂಮಿಯ ಒಡೆಯ ಕಾಯ್ದೆ ಜಾರಿಗೆ ತಂದ ಧೀಮಂತ ನಾಯಕ ಡಿ ದೇವರಾಜ ಅರಸು ರವರ 110 ನೇ ಜಯಂತಿ ಆಚರಿಸಲಾಯಿತು.

ಮೈಸೂರಿನ ಡಿ ದೇವರಾಜ ಅರಸು ರಸ್ತೆಯಲ್ಲಿ ಕರ್ನಾಟಕ ಹಿತ ರಕ್ಷಣಾ ವೇದಿಕೆ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್
ದೇವರಾಜ ಅರಸು ಅವರು ಎಲ್ಲಾ ವರ್ಗಗಳ ಅಭಿವೃದ್ಧಿಗೂ ಶ್ರಮಿಸಿದವರು, ದನಿ ಇಲ್ಲದವರಿಗೆ ದನಿಯಾಗಿದ್ದರು, 12ನೇ ಶತಮಾನದ ಬಸವಣ್ಣನವರ ಕಲ್ಪನೆಯನ್ನು ಅನುಷ್ಠಾನಕ್ಕೆ ತಂದವರು ಎಂದು ಬಣ್ಣಿಸಿದರು.

ಇಂದಿರಾ ಗಾಂಧಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಾದ ರವಿ ಮಂಜೇಗೌಡನ ಕೊಪ್ಪಲು ಮಾತನಾಡಿ,ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ನಾಡು ಕಂಡ ಶ್ರೇಷ್ಠ ಮುಖ್ಯಮಂತ್ರಿಗಳಾಗಿದ್ದಾರೆ. ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಭೂಸುಧಾರಣಾ ಕಾಯ್ದೆ ಜಾರಿಗೆ ತರುವ ಮೂಲಕ ಉಳುವವನೇ ಭೂ ಒಡೆಯನನ್ನಾಗಿ ಮಾಡಿದರು
ಎಂದು ಹೇಳಿದರು

ಕರ್ನಾಟಕ ಹಿತರಕ್ಷಣಾ ವೇದಿಕೆ ಅಧ್ಯಕ್ಷರಾದ ವಿನಯ್ ಕುಮಾರ್, ಜಿ ರಾಘವೇಂದ್ರ, ರವಿಚಂದ್ರ, ಎಸ್ ಎನ್ ರಾಜೇಶ,ನಜರ್ಬಾದ್ ಲೋಕೇಶ್, ದಿನೇಶ್, ಹರೀಶ್ ಗೌಡ, ನಿತಿನ,ಮೋಹನ್,ಕೃಷ್ಣಪ್ಪ ಗಂಟಯ್ಯ, ಈಶ್ವರ್, ಕಣ್ಣಣ್ಣ, ಮಹಾನ್ ಶ್ರೇಯಸ್,
ಮತ್ತಿತರರು ಹಾಜರಿದ್ದರು.

ದೇವರಾಜ ಅರಸ್ ರಸ್ತೆಯಲ್ಲಿ ಸಿಹಿ ಹಂಚಿ ಅರಸು ಜಯಂತಿ ಆಚರಣೆ Read More

ದೇವರಾಜ ಮಾರುಕಟ್ಟೆಯಲ್ಲಿ ಬಟ್ಟೆ ಬ್ಯಾಗ್ ವಿತರಿಸಿ ಜಾಗೃತಿ

ಮೈಸೂರು: ಹಬ್ಬಗಳ ಹಿನ್ನೆಲೆಯಲ್ಲಿ ಕರ್ನಾಟಕ ಹಿತರಕ್ಷಣಾ ವೇದಿಕೆ ಹಾಗೂ ಚಾಮುಂಡೇಶ್ವರಿ ಬಳಗದ ವತಿಯಿಂದ ನಗರದ ದೇವರಾಜ ಮಾರುಕಟ್ಟೆ ಮುಂಭಾಗ
ಬಟ್ಟೆ‌ಬ್ಯಾಗ್ ವಿತರಿಸಿ ಜಾಗೃತಿ ಮೂಡಿಸಲಾಯಿತು.

ಹಬ್ಬಗಳನ್ನು ಆಚರಿಸಲು ಮಾರ್ಕೆಟ್ ನಲ್ಲಿ ಹಬ್ಬಕ್ಕೆ ಬೇಕಾದ ವಸ್ತುಗಳನ್ನು ಖರೀದಿಸಲು
ಬರುವಾಗ ಪ್ಲಾಸ್ಟಿಕ್ ಕವರ್ ತೊರೆದು ಬಟ್ಟೆ ಬ್ಯಾಗನ್ನು ಬಳಸುವಂತೆ ಬಟ್ಟೆ ಬ್ಯಾಗ್ ವಿತರಿಸುವ ಮೂಲಕ ಅರಿವು ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಚಾಮುಂಡೇಶ್ವರಿ ಯುವ ಬಳಗದ ಅಧ್ಯಕ್ಷ ನಜರ್ಬಾದ್ ನಟರಾಜ್,
ಹಿಂದಿನ ಕಾಲದಂತೆ ಈ ಕಾಲದಲ್ಲೂ ನಾವು ಬಟ್ಟೆಯಲ್ಲಿ ಹೆಣೆದ ಅಥವಾ ಬಟ್ಟೆಯ ಕೈ ಚೀಲಗಳನ್ನು ಹಿಡಿದು ಮಾರುಕಟ್ಟೆಗೆ ಹೋಗುವುದನ್ನು ರೂಢಿ ಮಾಡಿಕೊಳ್ಳುವ ಮೂಲಕ ಪ್ಲಾಸ್ಟಿಕ್ ಬಳಕೆ ನಿಲ್ಲಿಸಬೇಕು ಎಂದು ಸಲಹೆ ನೀಡಿದರು.

ಇಂದು ಅತಿಯಾದ ಪ್ಲಾಸ್ಟಿಕ್ ಬಳಕೆಯಿಂದಾಗಿ ಪರಿಸರ ಸಮತೋಲನಕ್ಕೆ ಧಕ್ಕೆಯಾಗುತ್ತಿದೆ ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದು ವಿಷಾದಿಸಿದರು.

ಪ್ಲಾಸ್ಟಿಕ್ ಬ್ಯಾಗ್ ಬಳಕೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ನಿಷೇಧಿಸಿ ಆದೇಶ ಹೊರಡಿಸಿವೆ,ಆದ್ದರಿಂದ ಬಟ್ಟೆ ಕೈ ಚೀಲಗಳನ್ನು ಬಳಕೆ ಮಾಡಿ ಪರಿಸರದ ಜತೆ ಜೀವ ವೈವಿದ್ಯತೆ ಸಂರಕ್ಷಿಸಲು ಜನರು ಮುಂದಾಗಬೇಕು ಎಂದು ನಜರ್ಬಾದ್ ನಟರಾಜ್ ಮನವಿ ಮಾಡಿದರು.

ಕರ್ನಾಟಕ ಹಿತರಕ್ಷಣ ವೇದಿಕೆ ಅಧ್ಯಕ್ಷರಾದ ವಿನಯ್ ಕುಮಾರ್, ಎಸ್ ಎನ್ ರಾಜೇಶ್, ಗುರುರಾಜ್ ಶೆಟ್ಟಿ, ರವಿಚಂದ್ರ ಮತ್ತಿತರರು ಹಾಜರಿದ್ದರು.

ದೇವರಾಜ ಮಾರುಕಟ್ಟೆಯಲ್ಲಿ ಬಟ್ಟೆ ಬ್ಯಾಗ್ ವಿತರಿಸಿ ಜಾಗೃತಿ Read More

ಹುಲಿ ಸಾವು ಗಂಭೀರವಾಗಿ ಪರಿಗಣಿಸಿ: ವಿನಯ್ ಕುಮಾರ್ ಆಗ್ರಹ

ಮೈಸೂರು: ಮಲೆ ಮಾದೇಶ್ವರ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳ ಸಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಕರ್ನಾಟಕ ಹಿತರಕ್ಷಣಾ ವೇದಿಕೆಯವರು ಪ್ರತಿಭಟನೆ ನಡೆಸಿದರು.

ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿ
ಕರ್ನಾಟಕ ಹಿತರಕ್ಷಣಾ ವೇದಿಕೆಯವರು ಪ್ರತಿಭಟನೆ ನಡೆಸಿ,ತಪ್ಪಿತಸ್ಥರ ವಿರುದ್ಧ ಕಠಿಣ ಕೈಗೊಳ್ಳಬೇಕು ಮತ್ತು
ಕರ್ತವ್ಯಲೋಪ ಎಸಗಿರುವ ಹಿರಿಯ ಅಧಿಕಾರಿಗಳ ವಿರುದ್ಧವೂ ಶಿಸ್ತು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಈ‌ ವೇಳೆ ಕರ್ನಾಟಕ ಹಿತರಕ್ಷಣ ವೇದಿಕೆ ಅಧ್ಯಕ್ಷ ವಿನಯ್ ಕುಮಾರ್ ಮಾತನಾಡಿ,
ಹುಲಿಗಳ ಬಗ್ಗೆ ಸಮಾಜ ಮತ್ತು ಸರ್ಕಾರ ಎರಡೂ ಬಹಳ ಪ್ರಾಮುಖ್ಯತೆ ಕೊಡುತ್ತವೆ, ಅಂತಹುದರಲ್ಲಿ ತಾಯಿ ಹುಲಿ ಹಾಗೂ 4 ಮರಿಗಳು ಸಾವಿಗಿಡಾಗಿರುವುದು ಆಘಾತಕಾರಿ ವಿಷಯ ಎಂದು ಆತಂಕ ವ್ಯಕ್ತಪಡಿಸಿದರು.

ಹುಲಿಗಳ ಸಾವಿಗೆ ಅರಣ್ಯ ಇಲಾಖೆ ನಿರ್ಲಕ್ಷವೇ ಕಾರಣ, ಈ ಬಗ್ಗೆ ಸಂಪೂರ್ಣ ತನಿಖೆ ನಡೆಸಿ,ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.

ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಬಹಳಷ್ಟು ಜನದಟ್ಟಣೆಗೆ
ಅವಕಾಶ ಮಾಡಿಕೊಟ್ಟಿರುವುದು ಇಂತಹ ಅನಾಹುತಗಳಿಗೆ ಕಾರಣವಾಗಿದೆ ಹಾಗೂ ಅರಣ್ಯ ಪ್ರದೇಶಗಳಲ್ಲಿ ಹೋಂ ಸ್ಟೇ, ರೆಸಾರ್ಟ್ ಗಳು ಹೆಚ್ಚಾಗುತ್ತಿರುವುದರಿಂದ ಇಂತಹ ಅವಘಡಗಳು ಹೆಚ್ಚಾಗುತ್ತಿದೆ
ಅದರ ಬಗ್ಗೆ ಸರ್ಕಾರ ಗಮನ ಹರಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯು ಕರ್ನಾಟಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ವಿನಯ್ ಕುಮಾರ್ ನೇತೃತ್ವದಲ್ಲಿ ನಡೆಯಿತು.

ವನ್ಯಜೀವಿ ಛಾಯಾಗ್ರಹಕ ಉಮೇಶ್, ಜಿ ರಾಘವೇಂದ್ರ, ಎಸ್ ಎನ್ ರಾಜೇಶ್, ನಂಜುಂಡಿ, ರವಿಚಂದ್ರ,ನೀತು, ಮಂಜುನಾಥ್, ರವಿ, ಯತೀಶ್ ಬಾಬು, ಈಶ್ವರ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಹುಲಿ ಸಾವು ಗಂಭೀರವಾಗಿ ಪರಿಗಣಿಸಿ: ವಿನಯ್ ಕುಮಾರ್ ಆಗ್ರಹ Read More

ವಿಮಾನ ಪತನದಲ್ಲಿ ಮೃತಪಟ್ಟ ಪ್ರಯಾಣಿಕರಿಗೆ ಮೈಸೂರಲ್ಲಿ ಸಂತಾಪ

ಮೈಸೂರು: ಏರ್ ಇಂಡಿಯಾ ವಿಮಾನ ಪತನದಲ್ಲಿ ಸಾವಗಿಡಾದ ಪ್ರಯಾಣಿಕರಿಗೆ ಮೈಸೂರಿನಲ್ಲಿ ಮೇಣದಬತ್ತಿ ಬೆಳಗಿಸಿ ಸಂತಾಪ ಸಲ್ಲಿಸಲಾಯಿತು.

ನಗರದ ಡಿ ದೇವರಾಜ ಅರಸು ರಸ್ತೆಯಲ್ಲಿ ಕರ್ನಾಟಕ ಹಿತರಕ್ಷಣ ವೇದಿಕೆ ವತಿಯಿಂದ‌
ಅಹಮದಾಬಾದ್‌ನಿಂದ ಲಂಡನ್‌ಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನ
ದುರಂತದಲ್ಲಿ ಸಾವಿಗಿಡಾದ ಪ್ರಯಾಣಿಕರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಕರ್ನಾಟಕ ಹಿತ ರಕ್ಷಣಾ ವೇದಿಕೆ ಅಧ್ಯಕ್ಷ ವಿನಯ್ ಕುಮಾರ್,
ಈ ದುರಂತ ತೀವ್ರ ಆಘಾತ ಹಾಗೂ ದಿಗ್ಭ್ರಮೆಯನ್ನು ಉಂಟು ಮಾಡಿದೆ ಎಂದು ಹೇಳಿದರು.

ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡವರ ಆತ್ಮಕ್ಕೆ ದೇವರು ಚಿರಶಾಂತಿ ನೀಡಲಿ, ಮೃತರ ಕುಟುಂಬಸ್ಥರಿಗೆ ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದರು.

ಈ ವಿಮಾನ ಪತನದ ಬಗ್ಗೆ ಶೀಘ್ರ ತನಿಖೆಯಾಗಲಿ ಎಂದು ಅವರು ಹೇಳಿದರು.

ವಿನಯ್ ಅವರೊಂದಿಗೆ ಕೆಪಿಸಿಸಿ ಸದಸ್ಯ ನಜರ್ಬಾದ್ ನಟರಾಜ್, ಜಿ ರಾಘವೇಂದ್ರ,ಮಂಜುನಾಥ್,ಎಸ್ ಎನ್ ರಾಜೇಶ್, ರವಿಚಂದ್ರ, ನೀತು, ನಂಜುಂಡಿ, ಸಂತೋಷ್, ರಾಕೇಶ್, ಕಣ್ಣನ್, ರವಿ, ಉಮೇಶ್, ಸತೀಶ್, ಗುರುರಾಜ್ ಶೆಟ್ಟಿ, ಪ್ರಮೋದ್ ಗೌಡ ಮತ್ತಿತರರು ಮೇಣದ ಬತ್ತಿ ಬೆಳಗಿಸಿ ಸಂತಾಪ ಸಲ್ಲಿಸಿದರು.

ವಿಮಾನ ಪತನದಲ್ಲಿ ಮೃತಪಟ್ಟ ಪ್ರಯಾಣಿಕರಿಗೆ ಮೈಸೂರಲ್ಲಿ ಸಂತಾಪ Read More

ಕಮಲ ಹಸನ ಚಿತ್ರಕ್ಕೆ ಮಸಿ ಬಳಿದುಕರ್ನಾಟಕ ಹಿತರಕ್ಷಣಾ ವೇದಿಕೆ ಪ್ರತಿಭಟನೆ

ಮೈಸೂರು: ಕನ್ನಡ ತಮಿಳಿ ನಿಂದ ಹುಟ್ಟಿರುವ ಭಾಷೆ ಎಂದು ಹೇಳಿಕೆ ನೀಡಿರುವ
ನಟ ಕಮಲಹಸನ್ ವಿರುದ್ಧ ಕರ್ನಾಟಕ ಹಿತರಕ್ಷಣ ವೇದಿಕೆ ಸದಸ್ಯರು ಪ್ರತಿಭಟನೆ ನಡೆಸಿದರು.

ಕರ್ನಾಟಕ ಹಿತರಕ್ಷಣ ವೇದಿಕೆ ಸದಸ್ಯರು ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿ ಕಮಲ ಹಸನ್ ಭಾವಚಿತ್ರಕ್ಕೆ ಮಸಿ ಬಳಿದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕಮಲಹಾಸನ್ ಅವರು ಈ ಕೂಡಲೇ ಕನ್ನಡ ಭಾಷೆಗೆ ಅವಮಾನ ಮಾಡಿದ್ದಕ್ಕಾಗಿ ಕ್ಷಮೆಯೋಚಿಸಬೇಕು ಎಂದು ಪ್ರತಿಭಟನೆಕಾರರು ಆಗ್ರಹಿಸಿದರು

ಈ ವೇಳೆ ಕರ್ನಾಟಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ವಿನಯ್ ಕುಮಾರ್ ಮಾತನಾಡಿ
ಕಮಲಹಸನ್ ಅನೇಕ ಕನ್ನಡ ಚಿತ್ರಗಳಲ್ಲೂ ನಟಿಸಿದ್ದಾರೆ. ಆದರೆ, ಅವರ ಹೇಳಿಕೆ ಕನ್ನಡಿಗರಿಗೆ ಅವಮಾನಿಸದಂತಾಗಿದೆ. ಅಲ್ಲದೇ, ಕನ್ನಡಿಗರು ಹಾಗೂ ತಮಿಳರ ನಡುವೆ ದ್ವೇಷ ಹುಟ್ಟುವಂತೆ ಮಾಡಿದ್ದಾರೆ. ಕನ್ನಡ ಭಾಷೆಯ ಬಗ್ಗೆ ಹಗುರವಾಗಿ ಮಾತನಾಡಿದ್ದು ಸರಿಯಲ್ಲ ಎಂದು ಹೇಳಿದರು.

ಕಮಲಹಸನ್ ಅವರು ಕನ್ನಡ ತಮಿಳನಿಂದ ಬಂದಿದೆ ಎಂದು ಹೇಳುವ ಮೂಲಕ ಕನ್ನಡಿಗರನ್ನು ರೊಚ್ಚಿಗೆಳುವಂತೆ ಮಾಡಿದ್ದಾರೆ. ನಾಡು ನುಡಿಗೆ ಹೆಸರಾದ ಕರ್ನಾಟಕ, ಕನ್ನಡ ಭಾಷೆಯ ಬಗ್ಗೆ ಹಗುರವಾಗಿ ಮಾತನಾಡುವ ಮೂಲಕ, ಸಾವಿರಾರು ವರ್ಷಗಳ ಭವ್ಯ ಇತಿಹಾಸ, ಸ್ವತಂತ್ರ ಲಿಪಿ, ಶಾಸ್ತ್ರೀಯ ಸ್ಥಾನಮಾನ ಹೊಂದಿರುವ ಶ್ರೀಮಂತ ಭಾಷೆ ಕನ್ನಡ ಭಾಷೆಗೆ ಅವಮಾನಿಸಿದ್ದಾರೆ ಎಂದು ತಿಳಿಸಿದರು.

ಕೋಟ್ಯಂತರ ಕರುನಾಡಿಗರ ಜೀವನಾಡಿಯಾಗಿರುವ ಹೆಮ್ಮೆಯ ಕನ್ನಡ ಭಾಷೆಗೆ ನಟ ಕಮಲ್ ಹಾಸನ್ ಅವಮಾನಿಸಿದ್ದಾರೆ. ಕನ್ನಡ
ಹುಟ್ಟಿದ್ದು ತಮಿಳಿನಿಂದ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದು, ಇದಕ್ಕೆ ಕನ್ನಡಿಗರು ಕೆರಳಿ ಕೆಂಡವಾಗಿದ್ದಾರೆ. ಶೀಘ್ರವೇ ನಟ ಕಮಲಹಾಸನ ಕನ್ನಡಿಗರ ಕ್ಷಮೆ ಕೇಳಬೇಕೆಂದು ಆಗ್ರಹಿಸಬೇಕು. ಇಲ್ಲವಾದರೆ ಅವರ ಚಿತ್ರಗಳ ಪ್ರದರ್ಶನಕ್ಕೆ ಅವಕಾಶ ಕೊಡುವುದಿಲ್ಲ ಎಂದು ವಿನಯ್ ಎಚ್ಚರಿಸಿದರು.

ಕರ್ನಾಟಕ ಹಿತ ರಕ್ಷಣಾ ವೇದಿಕೆ ಅಧ್ಯಕ್ಷರಾದ ವಿನಯ್ ಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕೆಪಿಸಿಸಿ ಸದಸ್ಯ ನಜರ್ಬಾದ್ ನಟರಾಜ್, ಮೂಡ ಮಾಜಿ ಸದಸ್ಯ ನವೀನ್ ಕುಮಾರ್, ಮಂಜುನಾಥ್, ರವಿಕುಮಾರ್, ಸಂಗಮ್, ಉಮೇಶ್, ರವಿಚಂದ್ರ, ಪ್ರಶಾಂತ್, ನಿತಿನ್, ಹರೀಶ್ ಗೌಡ, ರವಿ, ಶ್ರೀನಿವಾಸ್, ಕಣ್ಣಣ್ಣ, ಶ್ರೀನಿವಾಸ್ ಶೆಟ್ಟಿ, ಕುಮಾರ್, ಬಾಬು, ಚಂದ್ರು, ಆನಂದ,ಗುರುರಾಜ್ ಶೆಟ್ಟಿ, ಪ್ರಮೋದ್ ಗೌಡ ಮತ್ತಿತರರು ಪಾಲ್ಗೊಂಡಿದ್ದರು.

ಕಮಲ ಹಸನ ಚಿತ್ರಕ್ಕೆ ಮಸಿ ಬಳಿದುಕರ್ನಾಟಕ ಹಿತರಕ್ಷಣಾ ವೇದಿಕೆ ಪ್ರತಿಭಟನೆ Read More

ಹಾಲು,ಮೊಸರು ತಲೆ ಮೇಲೆ ಹೊತ್ತು‌ ವಿನೂತನ ಪ್ರತಿಭಟನೆ

ಮೈಸೂರು: ಹಾಲಿನ ದರ ಏರಿಕೆ ಹಿನ್ನೆಲೆಯಲ್ಲಿ
ಸರ್ಕಾರದ ಗಮನ ಸೆಳೆಯಲು ಕರ್ನಾಟಕ ಹಿತರಕ್ಷಣಾ ವೇದಿಕೆಯ ಕಾರ್ಯಕರ್ತರು ಹಾಲು, ಮೊಸರನ್ನು ತಲೆ ಮೇಲೆ
ಹೊತ್ತು ಅಣುಕು ಪ್ರದರ್ಶನ ಮಾಡಿ ವಿನೂತನ ಪ್ರತಿಭಟನೆ ಮಾಡಿದರು.

ಮೈಸೂರಿನ ಡಿ ದೇವರಾಜ ಅರಸು ರಸ್ತೆಯಲ್ಲಿ ಕರ್ನಾಟಕ ಹಿತರಕ್ಷಣಾ ವೇದಿಕೆಯ ಕಾರ್ಯಕರ್ತರು ಹಾಲು ಮತ್ತು ಮೊಸರು ದರವನ್ನು ಮೂರು ಬಾರಿ ಹೆಚ್ಚಳ
ಮಾಡಿರುವ ಹಿನ್ನೆಲೆಯಲ್ಲಿ ಸರ್ಕಾರದ ಗಮನ ಸೆಳೆಯಲು ಅಣಕು ಪ್ರದರ್ಶನ ಮಾಡುವ ಮೂಲಕ ಪ್ರತಿಭಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ವಿನಯ್ ಕುಮಾರ್,ರಾಜ್ಯ ಸರ್ಕಾರ ರೈತರ ಹೆಸರಿನಲ್ಲಿ ವರ್ಷದಲ್ಲಿ ಮೂರು ಬಾರಿ ಹಾಲಿನ ದರ ಹೆಚ್ಚಳ ಮಾಡಿ ಗ್ರಾಹಕರ ಮೇಲೆ ಬರೆ ಎಳೆಯುತ್ತಿರುವುದು ಖಂಡನೀಯ ಎಂದು ಹೇಳಿದರು.

ರಾಜ್ಯ ಸರ್ಕಾರ ದಿವಾಳಿಯಾಗಿದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ, ಒಂದೇ ವರ್ಷದಲ್ಲಿ ಮೂರು ಬಾರಿ ಹಾಲಿನ ದರ ಹೆಚ್ಚಳ ಮಾಡಿದ್ದಾರೆ, ಒಂದು ವರ್ಷದಲ್ಲಿ ಎರಡು ಬಾರಿ ವಿದ್ಯುತ್ ಹೆಚ್ಚಳ ಮಾಡಿದ್ದಾರೆ, ದಿನನಿತ್ಯ ವಸ್ತುಗಳು ಏಕಾಏಕಿ ಏರಿಸುತ್ತಿರುವುದು ಸರಿಯಲ್ಲ,
ಬಡವರು ಹಾಗೂ ಮಧ್ಯಮ ವರ್ಗದವರಿಗೆ ಬಹಳ ತೊಂದರೆಯಾಗುತ್ತಿದ್ದು ಸರ್ಕಾರ ಈ ಕೂಡಲೇ ಇದರ ಬಗ್ಗೆ ಗಮನ ಆರಿಸಿ ಏರಿಕೆಯನ್ನು ಕೈಬಿಡಬೇಕೆಂದು ಒತ್ತಾಯಿಸಿದರು.

ಮಂಜುನಾಥ್,ಎಸ್ ಎನ್ ರಾಜೇಶ್, ರವಿ, ಪ್ರಮೋದ್, ನಿತಿನ್, ಯತೀಶ್,ಬಾಬು, ಕಣ್ಣನ್,ಚಂದ್ರು, ಸಂತೋಷ್,ರವಿ, ಉಮೇಶ್, ಈಶ್ವರ, ಬೆಳಕು ಮಂಜು ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಹಾಲು,ಮೊಸರು ತಲೆ ಮೇಲೆ ಹೊತ್ತು‌ ವಿನೂತನ ಪ್ರತಿಭಟನೆ Read More