ಕಾವೇರಿ ಕ್ರಿಯಾ ಸಮಿತಿಯಿಂದ ಧರ್ಮಸ್ಥಳ ಚಲೋ ಪ್ರಾರಂಭ

ಮೈಸೂರು: ಕಾವೇರಿ ಕ್ರಿಯಾ ಸಮಿತಿ ವತಿಯಿಂದ ಸಮಿತಿಯ ಅಧ್ಯಕ್ಷರಾದ ಎಸ್ ಜಯಪ್ರಕಾಶ್ ನೇತೃತ್ವದಲ್ಲಿ ಅಪಾರ ಸಂಖ್ಯೆಯಲ್ಲಿ ಧರ್ಮಸ್ಥಳ ಚಲೋ ಪ್ರಾರಂಭವಾಯಿತು.

ಮೈಸೂರಿನ ಕನ್ನಡ ಹೋರಾಟಗಾರರು ಹಾಗೂ ಕಾವೇರಿ ಕ್ರಿಯಾ ಸಮಿತಿ ಪದಾಧಿಕಾರಿಗಳು ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಮುಂಭಾಗದಿಂದ ಹೊರಟ ಧರ್ಮಸ್ಥಳ ಚಲೋ ಗೆ ವಿಧಾನ ಪರಿಷತ್ ಸದಸ್ಯರಾದ ಸಿ. ಎನ್ ಮಂಜೇಗೌಡರು ಹಾಗೂ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಅವರು ಚಾಲನೆ ನೀಡಿದರು.

ಈ ವೇಳೆ ಎಸ್ ಜಯಪ್ರಕಾಶ್ ಅವರು ಮಾತನಾಡಿ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಮಾಡಿ, ಪಿತೂರಿ ನಡೆಸುತ್ತಿರುವ ಹಾಗೂ ಕುಮ್ಮಕ್ಕು ನೀಡುತ್ತಿರುವವರನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.

ಹಿಂದೂ ಧರ್ಮ ಮತ್ತು ದೇವಾಲಯಗಳ ಮೇಲೆ ಅಪಪ್ರಚಾರ ಮಾಡುತ್ತಿರುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ನಾವು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನ ಭೇಟಿ ಮಾಡಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ಅಲ್ಲಿಂದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆರಳಿ ದರ್ಶನ ಮಾಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಜಯಪ್ರಕಾಶ್ ತಿಳಿಸಿದರು.

ಈ ಧರ್ಮಸ್ಥಳ ಚಲೋ ಯಾತ್ರೆ ಯಲ್ಲಿ ಕಾವೇರಿ ಕ್ರಿಯಾ ಸಮಿತಿಯ ತೇಜೇಶ್ ಲೋಕೇಶ್ ಗೌಡ, ಗೋಲ್ಡನ್ ಸುರೇಶ್, ಸಿಂದುವಳ್ಳಿ ಶಿವಕುಮಾರ್, ಬೋಗಾದಿ ಸಿದ್ದೇಗೌಡ , ಪ್ರಭುಶಂಕರ, ಅಶೋಕ್, ಭಾಗ್ಯಮ್ಮ, ನೇಹಾ, ಶಿವಲಿಂಗಯ್ಯ , ಕೃಷ್ಣಪ್ಪ, ಹನುಮಂತಯ್ಯ, ರಘು ಅರಸ್, ಕುಮಾರ್ ಗೌಡ, ಮಂಜುಳ, ಪುಷ್ಪಾವತಿ, ಶ್ರೀನಿವಾಸ, ಪರಿಸರ ಚಂದ್ರು, ಜ್ಯೋತಿ, ಆನಂದ್ ಗೌಡ, ರಘು ಆಚಾರ್, ರವೀಶ್, ಸಂಜಯ್, ನಂದಕುಮಾರ್, ನಾರಾಯಣ ಗೌಡ ಸೇರಿದಂತೆ ಬಹಳಷ್ಟು ಮಂದಿ ಪಾಲ್ಗೊಂಡಿದ್ದಾರೆ.

ಕಾವೇರಿ ಕ್ರಿಯಾ ಸಮಿತಿಯಿಂದ ಧರ್ಮಸ್ಥಳ ಚಲೋ ಪ್ರಾರಂಭ Read More

ಸರಳತನದಿಂದಲೇ ಬಹಳ ಮೇಲೆ ಬಂದವರು ಡಾ.ರಾಜ್:ಎಸ್ ಜೈ ಪ್ರಕಾಶ್

ಮೈಸೂರು:‌ ರಾಜಕುಮಾರ್ ಅವರು ತಮ್ಮ ಸರಳತನದಿಂದಲೇ ಬಹಳ ಮೇಲೆ ಬಂದಂತವರು ಎಂದು ಕಾವೇರಿ ಕ್ರಿಯಾ ಸಮಿತಿ ಅಧ್ಯಕ್ಷರಾದ ಎಸ್ ಜೈ ಪ್ರಕಾಶ್ ಬಣ್ಣಿಸಿದರು.

ಅತ್ಯದ್ಭುತ ನಟ, ದಾದಾ ಸಾಹೇಬ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಡಾ. ರಾಜಕುಮಾರ್ ಅವರ 97ನೇ ಹುಟ್ಟುಹಬ್ಬದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು‌

ಕನ್ನಡ ಭಾಷೆಯಲ್ಲದೆ ಬೇರೆ ಭಾಷೆಗಳ ಚಿತ್ರಗಳಲ್ಲಿ ನಟಿಸದೆ ಕನ್ನಡಕ್ಕಾಗಿ ಬಹಳ ಸೇವೆಯನ್ನು ಮಾಡಿದವರು, ಗೋಕಾಕ್ ಚಳವಳಿಯಲ್ಲಿ ಮಹತ್ತರ ಪಾತ್ರ ವಹಿಸಿದವರು, ಅವರ ತತ್ವ ಆದರ್ಶ ಸರಳತೆಯನ್ನು ಈಗಿನ ನಟರೆಲ್ಲ ಅಳವಡಿಸಿಕೊಳ್ಳಬೇಕು ಎಂದು ಎಸ್ ಜೈ ಪ್ರಕಾಶ್ ಸಲಹೆ ನೀಡಿದರು.

ಕರ್ನಾಟಕ ಸೇನಾ ಪಡೆ ಅಧ್ಯಕ್ಷ ತೇಜೇಶ್ ಲೋಕೇಶ್ ಗೌಡ ಮಾತನಾಡಿ ಡಾ. ರಾಜಕುಮಾರ್ ಅವರು ಒಂದು ವ್ಯಕ್ತಿಯಲ್ಲ ಅವರೊಂದು ಶಕ್ತಿ ಎಂದು ಹೇಳಿದರು.

ತಮ್ಮ ಚಲನಚಿತ್ರಗಳಿಂದಲೇ ಸಮಾಜಕ್ಕೆ ಸಂದೇಶವನ್ನು ಕೊಡುತ್ತಿದ್ದವರು. ಇಡೀ ಭಾರತ ಚಿತ್ರರಂಗದಲ್ಲಿಯೇ ಅವರಂತಹ ಅತ್ಯದ್ಭುತ ನಟ ಇನ್ನೊಬ್ಬರಿಲ್ಲ. ಕನ್ನಡ ಚಲನಚಿತ್ರರಂಗ ಇಂದು ಉನ್ನತ ಸ್ಥಾನದಲ್ಲಿದ್ದರೆ ಅದಕ್ಕೆ ಭದ್ರ ಬುನಾದಿಯನ್ನು ಹಾಕಿಕೊಟ್ಟವರು ಡಾ.ರಾಜ್ ಎಂದು ಹೆಮ್ಮೆಯಿಂದ ಹೇಳಿದರು.

ಅವರು ರಾಜಕೀಯಕ್ಕೆ ಬಂದಿದ್ದರೆ ಮುಖ್ಯಮಂತ್ರಿ ಆಗಬಹುದಿತ್ತು ಆದರೆ ಅವರು ಕಲೆಯನ್ನು ಬಿಟ್ಟು ಅಧಿಕಾರದ ಆಸೆಗೆ ಹೋಗಲಿಲ್ಲ. ಭಾರತೀಯ ಚಿತ್ರರಂಗಕ್ಕೆ ಮಹಾನ್ ಕೊಡುಗೆಯನ್ನು ನೀಡಿರುವ ಡಾ. ರಾಜಕುಮಾರ್ ಅವರಿಗೆ ಕೇಂದ್ರ ಸರ್ಕಾರ ಮರಣೋತ್ತರ ಭಾರತ ರತ್ನ ಪ್ರಶಸ್ತಿಯನ್ನು ನೀಡಬೇಕೆಂದು ತೇಜೇಶ್ ಲೋಕೇಶ್ ಗೌಡ
ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಚೇತನ್ ರಮೇಶ್, ಸುರೇಶ್ ಗೌಡ, ಪುನೀತ್ ರಾಜಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ರಾಜು, ಹನುಮಂತಯ್ಯ, ಪ್ರಭಾಕರ್, ಅಭಿ, ಪ್ರದೀಪ್, ಕೃಷ್ಣಪ್ಪ, ರವೀಶ್ ಮತ್ತಿತರರು ಉಪಸ್ಥಿತರಿದ್ದರು.

ಸರಳತನದಿಂದಲೇ ಬಹಳ ಮೇಲೆ ಬಂದವರು ಡಾ.ರಾಜ್:ಎಸ್ ಜೈ ಪ್ರಕಾಶ್ Read More

ಕರ್ನಾಟಕ ಬಂದ್ ಗೆ ಬೆಂಬಲ ಸೂಚಿಸಿ ಕಾವೇರಿ ಕ್ರಿಯಾ ಸಮಿತಿ ಪ್ರತಿಭಟನೆ ‌

ಮೈಸೂರು: ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಕಾವೇರಿ ಕ್ರಿಯಾ ಸಮಿತಿಯವರು ಬೆಂಬಲ ಸೂಚಿಸಿ ಮೈಸೂರಿನ ಸಬರ್ಬ್ ಬಸ್ ನಿಲ್ದಾಣದ ಮುಂಬಾಗ ಪ್ರತಿಭಟನೆ ನಡೆಸಲಾಯಿತು.

ಮೇಕೆದಾಟು, ಮಹಾದಾಯಿ, ಕಳಸ ಬಂಡೂರಿ ಯೋಜನೆ ಜಾರಿಗೊಳಿಸಲು ಆಗ್ರಹಿಸಿ ಕನ್ನಡ ಚಳವಳಿಗಾರ ವಾಟಾಳ್ ನಾಗರಾಜ್ ಅವರು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಮೈಸೂರಿನ ಎಲ್ಲಾ ಕನ್ನಡ ಪರ ಸಂಘಟನೆಗಳೊಂದಿಗೆ ಪ್ರತಿಭಟನೆ ನಡೆಸಿ ರಸ್ತೆ ತಡೆ ಮಾಡಲಾಯಿತು.

ಪ್ರತಿಭಟನೆಯಲ್ಲಿ ಕಾವೇರಿ ಕ್ರಿಯಾ ಸಮಿತಿ ಅಧ್ಯಕ್ಷ ಎಸ್ ಜಯಪ್ರಕಾಶ್,ಸಂಚಾಲಕ ಮೂಗೂರು ನಂಜುಂಡಸ್ವಾಮಿ, ಪ್ರಧಾನ ಕಾರ್ಯದರ್ಶಿ ತೇಜೇಶ್ ಲೋಕೇಶ್ ಗೌಡ, ಗೋಲ್ಡ್ ಸುರೇಶ್, ಪ್ರಭುಶಂಕರ್, ರಘು ಅರಸ್,ಪ್ರಜೀಶ್, ಕುಮಾರ್ ಗೌಡ,ಬೋಗಾದಿ ಸಿದ್ದೇಗೌಡ, ಭಾಗ್ಯಮ್ಮ, ವರಕೂಡು ಕೃಷ್ಣೇಗೌಡ, ಹನುಮಂತಯ್ಯ, ಕೃಷ್ಣಪ್ಪ, ಮಹಾದೇವ ಸ್ವಾಮಿ, ತ್ಯಾಗರಾಜ್, ಸುಬ್ಬೇಗೌಡ,ರವೀಶ್,ನಾಯಕ್ ವಿಷ್ಣು, ಹೊಂಬೇಗೌಡ ಮತ್ತಿತರರು ಪಾಲ್ಗೊಂಡಿದ್ದರು.

ಕರ್ನಾಟಕ ಬಂದ್ ಗೆ ಬೆಂಬಲ ಸೂಚಿಸಿ ಕಾವೇರಿ ಕ್ರಿಯಾ ಸಮಿತಿ ಪ್ರತಿಭಟನೆ ‌ Read More