ಸಚಿವ ಸ್ಥಾನದಿಂದ‌ ಅಮಿತ್ ಶಾ ವಜಾಗೊಳಿಸಿ-ನಜರ್ಬಾದ್ ನಟರಾಜ್

ಮೈಸೂರು: ದೇಶದಲ್ಲಿ ಉಗ್ರರ ದಾಳಿ ತಡೆಯುವಲ್ಲಿ ವಿಫಲವಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್ ಆಗ್ರಹಿಸಿದ್ದಾರೆ.

ಗುರುವಾರ ಸಿದ್ದಾರ್ಥ ನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ ಅಪರ ಜಿಲ್ಲಾಧಿಕಾರಿ ಶಿವರಾಜ್ ಮೂಲಕ ಅಮಿತ್ ಶಾ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ರಾಷ್ಟ್ರಪತಿಗೆ ಮನವಿ ಸಲ್ಲಿಸಿ ನಜರ್ಬಾದ್ ನಟರಾಜ್ ಮಾತನಾಡಿದರು.

ಕಾಶ್ಮೀರದ ಕಹಿ ಘಟನೆ ಮರೆಯುವ ಮುನ್ನವೇ ನವದೆಹಲಿಯ ಕೆಂಪು ಕೋಟೆಯ ಕೂಗಳತೆ ದೂರದಲ್ಲಿ ಉಗ್ರರು ಬಾಂಬ್ ಸ್ಫೋಟಿಸಿ, ಅಮಾಯಕ ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ, ಈ ಘಟನೆಯನ್ನು ಕಾಂಗ್ರೆಸ್ ಖಂಡಿಸುತ್ತೇದೆ ಎಂದು ಹೇಳಿದರು.

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ದೇಶದ ಮೇಲೆ ಉಗ್ರರ ದಾಳಿಯಾಗುತ್ತಿದೆ. ಇದೀಗ ದೇಶದ ರಾಜಧಾನಿಯಲ್ಲೇ ಉಗ್ರರ ದಾಳಿಯಾಗಿದ್ದು, ಅಮಿತ್ ಶಾ ಅವರು ಸಚಿವರಾಗಿ ತಮ್ಮ ಜವಾಬ್ದಾರಿ ನಿಭಾಯಿಸುವಲ್ಲಿ ವಿಫಲರಾಗಿ ದ್ದಾರೆ ಎನ್ನುವುದನ್ನು ಸಾಬೀತು ಪಡಿಸಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಲೋಕೇಶ್, ಎಸ್ ಎನ್ ರಾಜೇಶ್, ನಿತೀಶ್ ಕುಮಾರ್, ಮಂಜು ಮತ್ತಿತರರು ಹಾಜರಿದ್ದರು.

ಸಚಿವ ಸ್ಥಾನದಿಂದ‌ ಅಮಿತ್ ಶಾ ವಜಾಗೊಳಿಸಿ-ನಜರ್ಬಾದ್ ನಟರಾಜ್ Read More

ತಂದೆಯನ್ನು ಗೌರವಿಸುವುದು ಮಕ್ಕಳ ಕರ್ತವ್ಯ: ನಜರ್ಬಾದ್ ನಟರಾಜ್

ಮೈಸೂರು: ಕುಟುಂಬದಲ್ಲಿ ಮಕ್ಕಳಿಗೆ
ತಂದೆಯೇ ನಾಯಕ, ಶಕ್ತಿ, ಆಸರೆ, ಆಧಾರ ಸ್ತಂಭ ಹಾಗೂ ಕಷ್ಟಗಳನ್ನು ನಿವಾರಿಸುವ ಪರಿಪಾಲಕ ಅವರನ್ನು ಗೌರವಿಸುವುದು ಮಕ್ಕಳ ಕರ್ತವ್ಯ ಎಂದು ಕೆಪಿಸಿಸಿ ಸದಸ್ಯ ನಜರ್ಬಾದ್ ನಟರಾಜ್ ಹೇಳಿದರು.

ಮೈಸೂರಿನ ನ್ಯಾಯಾಲಯದ ಮುಂಭಾಗ ಉದ್ಯಾನವನದಲ್ಲಿ ಚಾಮುಂಡೇಶ್ವರಿ ಬಳಗದ ವತಿಯಿಂದ ಆಯೋಜಿಸಿದ್ದ ತಂದೆಯಂದಿರ ದಿನಾಚರಣೆ ಕಾರ್ಯಕ್ರಮದಲ್ಲಿ ತಂದೆಯ ಹೆಸರಿನಲ್ಲಿ ಗಿಡ ನೆಟ್ಟು ನೀರು ಹಾಕಿ ಅವರು ಮಾತನಾಡಿದರು.

ತಂದೆಯಂದಿರು ಕುಟುಂಬದ ಬೆನ್ನೆಲುಬು, ಮಾರ್ಗದರ್ಶಕರು ಮತ್ತು ಪ್ರೇರಣೆ ನೀಡುವ ವ್ಯಕ್ತಿಗಳಾಗಿದ್ದಾರೆ, ಕುಟುಂಬಕ್ಕಾಗಿ ಹಗಲಿರುಳು ದುಡಿದು ಅನೇಕ ತ್ಯಾಗಗಳನ್ನು ಮಾಡುವುದರೊಂದಿಗೆ ಕುಟುಂಬವನ್ನು ಆರ್ಥಿಕವಾಗಿ ಸದೃಢಗೊಳಿಸಲು ಶ್ರಮಿಸುತ್ತಾರೆ, ಅವರಿಗಾಗಿ ಕುಟುಂಬದ ಸದಸ್ಯರು ದೇವರಲ್ಲಿ ಪ್ರತಿದಿನ ಪ್ರಾರ್ಥಿಸುವುದರೊಂದಿಗೆ ಹೆಚ್ಚು ಪ್ರೀತಿಸುವುದನ್ನು ಕಲಿಯಬೇಕು ಎಂದು ನಜರ್ಬಾದ ನಟರಾಜ್ ಸಲಹೆ ನೀಡಿದರು.

ಸಂದರ್ಭದಲ್ಲಿ ಸಿದ್ದರಾಮಯ್ಯ ಬ್ರಿಗೇಡ್ ರಾಜ್ಯ ಅಧ್ಯಕ್ಷ ಹಿನಕಲ್ ಉದಯ್, ಕಾಂಗ್ರೆಸ್ ಮುಖಂಡರಾದ ಆರಿಫ್ ಪಾಷಾ, ಜಿ. ರಾಘವೇಂದ್ರ, ಚಂದ್ರು,ರಾಜೇಶ್ ಪಳನಿ, ಲೋಕೇಶ್, ರಮೇಶ್ ರಾಮಪ್ಪ, ಎಸ್ ಎನ್ ರಾಜೇಶ್,ಸೇವಾದಳ ಕಾರ್ಯದರ್ಶಿ ಮೋಹನ್, ಗುಂಡಪ್ಪ, ಕೃಷ್ಣಪ್ಪ (ಗಂಡಯ್ಯ) ರವಿಚಂದ್ರ ಮತ್ತಿತರರು ಹಾಜರಿದ್ದರು.

ತಂದೆಯನ್ನು ಗೌರವಿಸುವುದು ಮಕ್ಕಳ ಕರ್ತವ್ಯ: ನಜರ್ಬಾದ್ ನಟರಾಜ್ Read More

ಪ್ರತ್ಯಂಗಿರಾ ದೇವಾಲಯದಲ್ಲಿ ಸಿದ್ದು, ಡಿಕೆಶಿ ಹೆಸರಲ್ಲಿ ಅಭಿಮಾನಿಗಳಿಂದ ವಿಶೇಷ ಪೂಜೆ

ಚನ್ನೈ,ಏ.5: ತಮಿಳುನಾಡಿನ ಕುಂಭಕೋಣಂ ಜಿಲ್ಲೆಯ ಶಕ್ತಿ ದೇವತೆ ಶ್ರೀ
ಪ್ರತ್ಯಂಗಿರಾದೇವಿ ದೇವಾಲಯದಲ್ಲಿ ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್ ನೇತೃತ್ವದಲ್ಲಿ ಸಿಎಂ ಮತ್ತು ಡಿಸಿಎಂ ಹೆಸರಲ್ಲಿ‌ ವಿಶೇಷ ಪೂಜೆ ಸಲ್ಲಿಸಲಾಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಭಾವಚಿತ್ರ ಹಿಡಿದು ಅವರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿ ಕಾಂಗ್ರೆಸ್ ಸರ್ಕಾರ ಐದು ವರ್ಷ ಸಂಪೂರ್ಣವಾಗಿ ಯಶಸ್ವಿಗೊಳ್ಳಲಿ ಹಾಗೂ ವಿರೋಧ ಪಕ್ಷಗಳ ಅಪಪ್ರಚಾರಕ್ಕೆ ಭಗವಂತನೇ ಬುದ್ಧಿ ಕಲಿಸಲಿ ಎಂದು ದೇವರಲ್ಲಿ ಅಭಿಮಾನಿಗಳು ಮೊರೆ ಹೋದರು.

ಈ ವೇಳೆ ಮಾತನಾಡಿದ ನಜರ್ಬಾದ್ ನಟರಾಜ್,ಸಿ ಎಂ ಸಿದ್ದರಾಮಯ್ಯ ಹಾಗೂ ಡಿ ಸಿ ಎಂ ಡಿ ಕೆ ಶಿವಕುಮಾರ್ ನೇತೃತ್ವದ ಸರ್ಕಾರ ಉತ್ತಮ ಆಡಳಿತ ಮಾಡುತ್ತಿದೆ ಎಂದು ಹೇಳಿದರು.

ಬಡವರ ಪರವಾಗಿರುವ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ವಿನಾಕಾರಣ ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.

ಸರ್ಕಾರಕ್ಕೆಎದುರಾಗಿರುವ ಎಲ್ಲ ಸಂಕಷ್ಟಗಳು ದೂರವಾಗಲಿ ಎಂದು ಪ್ರತ್ಯಂಗಿರಾ ದೇವಿಯಲ್ಲಿ ಪ್ರಾರ್ಥನೆ ಮಾಡಿಕೊಂಡಿದ್ದೇವೆ ಎಂದು ನಜರಬಾದ್ ನಟರಾಜ್ ತಿಳಿಸಿದರು.

ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರನ್ನು ಕೆಳಗಿಳಿಸುವ ದುರುದ್ದೇಶದಿಂದ ಅವರನ್ನು ತೇಜೋವಧೆ ಮಾಡಲು ಹೊರಟಿರುವ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರಿಗೆ ಯಶಸ್ಸು ಸಿಗುವುದಿಲ್ಲ
ಎಂದು ಅವರು ಹೇಳಿದರು.

ಪಂಚಾಯತ್ ರಾಜ್ ಕಾರ್ಯದರ್ಶಿ ಲೋಕೇಶ್, ಚಾಮುಂಡೇಶ್ವರಿ ಬಳಗದ ಮಂಜುನಾಥ್, ಮರಟಿ ಕ್ಯಾತನಹಳ್ಳಿ ಚೇತನ್ ಹಾಗೂ ನಿತೀಶ್ ಗೌಡ ಪೂಜೆಯಲ್ಲಿ ಭಾಗಿಯಾಗಿದ್ದರು.

ಪ್ರತ್ಯಂಗಿರಾ ದೇವಾಲಯದಲ್ಲಿ ಸಿದ್ದು, ಡಿಕೆಶಿ ಹೆಸರಲ್ಲಿ ಅಭಿಮಾನಿಗಳಿಂದ ವಿಶೇಷ ಪೂಜೆ Read More