ಕಾಂಗ್ರೆಸ್‌ನ ಮತಬ್ಯಾಂಕ್‌ ರಾಜಕಾರಣದಿಂದ ಮಿನಿ ಪಾಕಿಸ್ತಾನ ಸೃಷ್ಟಿ-ಅಶೋಕ್

ಮದ್ದೂರು: ಕಾಂಗ್ರೆಸ್‌ನ ಮತಬ್ಯಾಂಕ್‌ ರಾಜಕಾರಣದಿಂದಾಗಿ ರಾಜ್ಯದಲ್ಲಿ ಮಿನಿ ಪಾಕಿಸ್ತಾನಗಳು ಸೃಷ್ಟಿಯಾಗುತ್ತಿವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿ ಕಾರಿದರು.

ಮದ್ದೂರಿಗೆ ಬಿಜೆಪಿ ನಿಯೋಗ ಭೇಟಿ ನೀಡಿದ ವೇಳೆ ಸ್ಥಳೀಯರೊಂದಿಗೆ ಮಾತುಕತೆ ನಡೆಸಿದ ಬಳಿಕ ಅಶೋಕ್ ಸುದ್ದಿಗಾರರೊಂದಿಗೆ ಮಾತನಾಡಿದರು.

ಇಲ್ಲಿ ಯಾರು ಸತ್ತರೂ ತಮಟೆ ಹೊಡೆದುಕೊಂಡು ಹೋಗುವಂತಿಲ್ಲ. ಮಸೀದಿ ಮುಂದೆ ಮಾತ್ರ ಮೌನವಾಗಿ ಸಾಗಬೇಕಾಗುತ್ತದೆ. ಸಿಎಂ ಸಿದ್ದರಾಮಯ್ಯನವರಿಂದಾಗಿ ನಮ್ಮನ್ನು ಏನೂ ಮಾಡಲ್ಲ ಎಂಬ ಭಾವನೆ ಮುಸ್ಲಿಮರಿಗೆ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಂಜಾನ್‌ ಸಮಯದಲ್ಲಿ ದೇವಾಲಯದ ಮುಂಭಾಗ ಮುಸ್ಲಿಮರು ಮೆರವಣಿಗೆ ಹೋಗಬಹುದು. ಆದರೆ ಹಿಂದೂಗಳು ಮಸೀದಿ ಮುಂಭಾಗ ಮೌನವಾಗಿ ಇರಬೇಕು ಇದು ಯಾವ ನ್ಯಾಯ ಎಂದು ಪ್ರಶ್ನಿಸಿದರು.

ಮದ್ದೂರಿನಲ್ಲಿ ಮಸೀದಿಯನ್ನು ಅಕ್ರಮವಾಗಿ ನಿರ್ಮಿಸಲಾಗಿದೆ. ಬೇರೆ ರಾಜ್ಯಗಳಿಂದಲೂ ಇಲ್ಲಿಗೆ ಜನರು ಬಂದಿದ್ದಾರೆ. ಈಗ ಕಲ್ಲು ಹೊಡೆದಿರುವವರು ಮುಂದೆ ಬಾಂಬ್‌ ಹಾಕುತ್ತಾರೆ. ಕಾಂಗ್ರೆಸ್‌ ನಾಯಕರು ಇವರು ನಮ್ಮ ಬ್ರದರ್‌ಗಳು ಎಂದು ಹೇಳುತ್ತಾರೆ. ಇಲ್ಲಿನ ಕಾಂಗ್ರೆಸ್‌ ಶಾಸಕರು ಕೂಡ ಅದನ್ನೇ ಹೇಳುತ್ತಾರೆ. ಆ ಬೆಂಬಲದಿಂದಲೇ ಮಿನಿ ಪಾಕಿಸ್ತಾನಗಳು ಸೃಷ್ಟಿಯಾಗಿವೆ. ಈ ತಾಲಿಬಾನ್‌ ಸರ್ಕಾರ ಮುಸ್ಲಿಮರಿಗೆ ಬೆಂಬಲ ನೀಡುತ್ತಿದೆ ಎಂದು ಟೀಕಾಪ್ರಹಾರ ನಡೆಸಿದರು.

ಮೆರವಣಿಗೆ ಸಮಯದಲ್ಲೇ ಹೆಚ್ಚು ಪೊಲೀಸರನ್ನು ನಿಯೋಜಿಸಬೇಕಿತ್ತು. ಅದನ್ನು ಸರ್ಕಾರ ಮಾಡಲೇ ಇಲ್ಲ. ಮಾಡಿದ್ದರೆ ಇಂತಹ ಅನಾಹುತ ಆಗುತ್ತಿರಲಿಲ್ಲ. ಕಾನೂನು ಸುವ್ಯವಸ್ಥೆ ಹಾಳಾಗಿರುವುದರಿಂದ ಇಡೀ ದೇಶ ಇತ್ತ ಕಡೆ ನೋಡುತ್ತಿದೆ ಇದು‌ ನಾಚಿಕೆ ವಿಚಾರ ಎಂದು ವ್ಯಂಗ್ಯವಾಡಿದರು.

ಕಲ್ಲು ಹೊಡೆದಿರುವವರು ಇಲ್ಲಿಯವರು ಅಲ್ಲ ಎಂದಾದರೆ ಅವರೇನು ಪಾಕಿಸ್ತಾನದಿಂದ ಬಂದಿದ್ದಾರಾ, ಇದು ಪೂರ್ವ ನಿಯೋಜಿತ ಕೃತ್ಯ,ಗುಪ್ತಚರ ಇಲಾಖೆ ಇದನ್ನು ಪತ್ತೆ ಮಾಡಬೇಕಿತ್ತು ಎಂದು ತರಾಟೆಗೆ ತೆಗೆದುಕೊಂಡರು.

ಡಿಸಿಎಂ ಡಿ.ಕೆ.ಶಿವಕುಮಾರ್‌ ಹಿಂದೂ ಎಂದು ಹೇಳಿಕೊಳ್ಳುತ್ತಾರೆಯೇ ಹೊರತು, ಅವರಿಗೆ ಯಾವ ಅಭಿಮಾನವೂ ಇಲ್ಲ ಅವರು ನಿರಾಶರಾಗಿದ್ದಾರೆ ಎಂದು ಅಶೋಕ್ ಟಾಂಗ್ ನೀಡಿದರು.

ಕಾಂಗ್ರೆಸ್‌ನ ಮತಬ್ಯಾಂಕ್‌ ರಾಜಕಾರಣದಿಂದ ಮಿನಿ ಪಾಕಿಸ್ತಾನ ಸೃಷ್ಟಿ-ಅಶೋಕ್ Read More

ಮದ್ದೂರು ಘಟನೆಗೆ ಕಾಂಗ್ರೆಸ್ ಸರ್ಕಾರವೇ ನೇರ ಕಾರಣ-ಅಶೋಕ್

ಬೆಂಗಳೂರು: ಧರ್ಮಸ್ಥಳ ಆಯ್ತು, ಚಾಮುಂಡೇಶ್ವರಿ ಆಯ್ತು, ಈಗ ಮದ್ದೂರು. ಈ ಘಟನೆಗೆ ಕಾಂಗ್ರೆಸ್ ಸರ್ಕಾರವೇ ನೇರ ಕಾರಣ ಎಂದು ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ.

ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ ಕುರಿತು‌ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ಮದ್ದೂರು ಕಲ್ಲೆಸೆತ ಮತ್ತು ಲಾಠಿಚಾರ್ಜ್ ಹೇಯಕೃತ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಲ್ಲೆಸೆತಕ್ಕೆ ಸರ್ಕಾರದ ಕುಮ್ಮಕ್ಕಿದೆ. ಈ ಘಟನೆಗೆ ನೇರ ಕಾರಣ ಪೊಲೀಸ್ ಅಲ್ಲ, ಸರ್ಕಾರದ ಕುಮ್ಮಕ್ಕಿಲ್ಲದೇ ಈ ಘಟನೆಗಳು ನಡೆಯುತ್ತಿರಲಿಲ್ಲ ಎಂದು ದೂರಿದರು.

ನಾವು ಪಾಕಿಸ್ತಾನದಲ್ಲಿದ್ದೇವೋ ಕರ್ನಾಟಕದಲ್ಲಿದ್ದೀವೋ ಅನಿಸುತ್ತಿದೆ, ತಿಮರೋಡಿ ಗ್ಯಾಂಗ್ ಸಿದ್ದರಾಮಯ್ಯ ಸುತ್ತ ಸುತ್ತಿಕೊಂಡಿದ್ದಾರೆ. ಗಣಪತಿ ವಿಸರ್ಜನೆಗೆ ಮೆರವಣಿಗೆ ಮಾಡುವುದು ಸಾರ್ವಜನಿಕ ರಸ್ತೆಯಲ್ಲಿ,ಅದೇನು ಇವರ ಅಪ್ಪನ ಆಸ್ತಿನಾ? ನಾವು ಟ್ಯಾಕ್ಸ್ ಕೊಟ್ಟಿರುವುದು ಎಂದು ತರಾಟೆಗೆ ತೆಗೆದುಕೊಂಡರು.

ಅಲ್ಲಿ ಒಂದು ಮೀಸಲು ಪಡೆ ಇಟ್ಟಿದ್ದರೆ ಲಾಠಿ ಚಾರ್ಜ್ ಅವಶ್ಯಕತೆ ಇತ್ತಾ ಹಿಂದೂಗಳ ಮೇಲೆ ಲಾಠಿ ಚಾರ್ಜ್, ದುಷ್ಕರ್ಮಿಗಳಿಗೆ ಯಾಕೆ ಬಡಿದಿಲ್ಲ? ಕಲ್ಲು ಎಸೆದವರಿಗೆ ಯಾಕೆ ಬಡಿದಿಲ್ಲ? ಮದ್ದೂರು ಘಟನೆಗೆ ಸಿಎಂ, ಡಿಸಿಎಂ ಕ್ಷಮೆ ಕೇಳಬೇಕು ಎಂದು ಅಶೋಕ್ ಆಗ್ರಹಿಸಿದರು.

ವಿಧಾನಸೌಧದಲ್ಲೆ ಪಾಕಿಸ್ತಾನ ಪರ ಕೂಗಿದ ಮೇಲೆ ನಮ್ಮನ್ನು ಏನೂ ಮಾಡಲ್ಲ ಅಂತಾ ಟಿಪ್ಪು ಗ್ಯಾಂಗ್‌ಗೆ ಅನ್ನಿಸಲು ಶುರುವಾಯಿತು. ಈಗ ಎಲ್ಲಾ ಕಡೆ ಗಲಭೆಗಳನ್ನು ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಹಿಂದೂಗಳು ಒಗ್ಗಟ್ಟಾಗಿಲ್ಲ ಅಂದರೆ ಇನ್ನುಮುಂದೆ ಇದೇ ಗತಿ. ವೋಟಿಗೋಸ್ಕರ ಸಿದ್ದರಾಮಯ್ಯ ಏನು ಬೇಕಾದರೂ ಮಾಡುತ್ತಾರೆ. ಅಧಿಕಾರ ಉಳಿಸಿಕೊಳ್ಳಲು ಏನು ಬೇಕಾದರೂ ಮಾಡುತ್ತಾರೆ.ಮುಂದೆ ನಿಮ್ಮ ಮನೆಯಲ್ಲೇ ಬಂದು ಹೊಡೆಯುತ್ತಾರೆ, ಎಚ್ಚರಿಕೆಯಿಂದಿರಿ ಎಂದು ವಿಪಕ್ಷ ನಾಯಕ ಸಲಹೆ ನೀಡಿದರು.

ಬೆಂಕಿ ಇಡುವುದೇ ಕಾಂಗ್ರೆಸ್ ಕೆಲಸ. ಹಿಂದೂಗಳು ಸಹಿಷ್ಣುಗಳು. ಕಾಂಗ್ರೆಸ್ ಸರ್ಕಾರ ಇರುವುದರಿಂದ ಹಿಂದೂ ಮೆರವಣಿಗೆ ವೇಳೆ ಗಲಾಟೆ ಆಗುತ್ತದೆ. ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಸರ್ಕಾರ ಎಂದು ಅಶೀಕ್ ಕಿಡಿಕಾರಿದರು.

ಮದ್ದೂರು ಘಟನೆಗೆ ಕಾಂಗ್ರೆಸ್ ಸರ್ಕಾರವೇ ನೇರ ಕಾರಣ-ಅಶೋಕ್ Read More

ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಟೀಕೆ

ಮದ್ದೂರು: ಪೆನ್ನು ಪೇಪರ್ ನಾಯಕರೇ ನಿಮ್ಮದು ಏನೇ ರಾಜಕಾರಣ ಇದ್ದರೂ ಅದು ನಿಮ್ಮ ಚೌಕಟ್ಟಿಗೆ ಮಾತ್ರ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಯುವ ಜೆಡಿಎಸ್ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಮದ್ದೂರು ವಿಧಾನಸಭಾ ಕ್ಷೇತ್ರದ ಶಾಂತಿ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಜನರೊಂದಿಗೆ ಜನತಾದಳ ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆವರೆಗೂ ಗೃಹಲಕ್ಷ್ಮಿ ಹಣ ಹಾಕಲ್ಲ, ಯಾವುದಾದರು ಉಪಚುನಾವಣೆ, ಸಂಸತ್ ಚುನಾವಣೆ ಹಾಗೂ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಬರೋವರೆಗೂ ಹಣ ಹಾಕಲ್ಲ ಎಂದು ನಿಖಿಲ್ ವ್ಯಂಗ್ಯ ವಾಡಿ ದರು.

ಸರ್ಕಾರದ ಗ್ಯಾರಂಟಿಗಳನ್ನ ಜನ ಸಾಮಾನ್ಯರಿಗೆ ಸರಿಯಾಗಿ ತಲುಪಿಸುತ್ತಿಲ್ಲ ಪ್ರತಿ ತಿಂಗಳು ಗ್ಯಾರಂಟಿ ಹಣ ಕೊಡುವುದಾಗಿ ಪ್ರಣಾಳಿಕೆಯಲ್ಲಿ ಮಾತು ಕೊಟ್ಟಿದ್ರು ಆದರೆ ಮಾತು ತಪ್ಪಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಮೂರು ಉಪ ಚುನಾವಣೆ ಸಂದರ್ಭದಲ್ಲಿ ಮೂರು ಕ್ಷೇತ್ರಗಳಿಗೆ ಮಾತ್ರ ಒಂದೇ ಸಲ ನಾಲ್ಕು ತಿಂಗಳು ಹಣ ಜಮೆ ಅಯ್ತು.ಮತ್ತೆ ಹಣಕ್ಕೆ ತಾ.ಪಂ ಹಾಗೂ ಜಿ.ಪಂ ಚುನಾವಣೆ ಬರೋವರೆಗೂ ಜನ ಕಾಯಬೇಕು ಎಂದು ಟೀಕಿಸಿದರು.

ರಾಮನಗರದಲ್ಲಿ ಪೆನ್ನು ಪೇಪರ್ ನಾಯಕರು ಜಿಲ್ಲೆಯಲ್ಲಿ ಫಲಾನುಭವಿಗಳ ಸಭೆ ಮಾಡಿ ಅಲ್ಲಿ ಕ್ಷೇತ್ರದ ಹೆಣ್ಣು ಮಕ್ಕಳಿಗೆ ನನ್ನ ತಮ್ಮನಿಗೆ ಮತ ಹಾಕಿಲ್ಲ ಅಂದ್ರೆ ನಮ್ಮ ಎಲ್ಲ ಕಾರ್ಯಕ್ರಮಗಳನ್ನ ನಿಲ್ಲುಸುತ್ತೇವೆ ಎಂದು ಧಮ್ಕಿ ಹಾಕಿದ್ದರು,ಈಗ ಸೋತು ಮನೆಯಲ್ಲಿ ಕೂತಿದ್ದಾರೆ ಎಂದು ಡಿಕೆ ಬ್ರದರ್ಸ್ ವಿರುದ್ಧ ನಿಖಿಲ್ ವಾಗ್ದಾಳಿ ನಡೆಸಿದರು.

ಮಳವಳ್ಳಿ ಮೀಸಲು ವಿಧಾನಸಭಾ ಕ್ಷೇತ್ರ. ಇಲ್ಲಿ ಎಲ್ಲಾ ಸಮುದಾಯದವರು ಇದ್ದಾರೆ. ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದವರು ಹೆಚ್ಚು ಇರುವಂತಹ ಕ್ಷೇತ್ರ. ಮುಂದಿನ ಚುನಾವಣೆಯಲ್ಲಿ ಅನ್ನದಾನಿ ಅವರನ್ನ ಶಾಸಕರಾಗಿ ಮಾಡುವುದಕ್ಕೆ ನಮ್ಮ ಸಹಕಾರ ಇರುತ್ತದೆ ಎಂದು ತಿಳಿಸಿದರು.

ಜೆಡಿಎಸ್ ಪಕ್ಷದ ನಾಯಕರು ಸೋತಿರಬಹುದು ಸತ್ತಿಲ್ಲ. ಅನ್ನದಾನಿಯವರು ಸೋತಿರಬಹುದು ಆದರೆ ಮನೆ ಸೇರಿಕೊಂಡಿಲ್ಲ. ಮುಂದಿನ ಚುನಾವಣೆಯಲ್ಲಿ ತೋರಿಸುತ್ತೇವೆ ನಮ್ಮ ಶಕ್ತಿಯನ್ನ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವೆಲ್ಲರೂ ತಲೆಬಾಗಲೇಬೇಕು. ಗೆಲುವು ಸೋಲು ಸರ್ವೇ ಸಾಮಾನ್ಯ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಡಾ.ಕೆ ಅನ್ನದಾನಿ, ಸುರೇಶ್ ಗೌಡ,ರಾಜ್ಯದ ಹಿಂದುಳಿದ ವರ್ಗಗಳ ಅಧ್ಯಕ್ಷ ಜಯರಾಮಣ್ಣ, ಬಿ. ಆರ್ ರಾಮಚಂದ್ರು, ಜಿಲ್ಲಾಧ್ಯಕ್ಷ ಡಿ. ರಮೇಶ್, ವಿಶ್ವನಾಥ್, ರವಿ ಕಂಸಾಗರ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಟೀಕೆ Read More