ಹೆಣ್ಣುಮಕ್ಕಳಿಗೆ ಕಾನೂನು ಅರಿವು ಅಗತ್ಯ:ತಿಮ್ಮಯ್ಯ ಅಭಿಮತ

ಮೈಸೂರು: ಹೆಣ್ಣುಮಕ್ಕಳು ಕಾನೂನು ಅರಿವು ಪಡೆಯುವುದು ಅಗತ್ಯವಿದೆ ಎಂದು
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಹಾಗು ಒಂದನೇ ಅಪರ ಜಿಲ್ಲಾ ಸರ್ಕಾರಿ ವಕೀಲ ಎ.ಜಿ.ತಿಮ್ಮಯ್ಯ ಅಭಿಪ್ರಾಯಪಟ್ಟರು

ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ವಿದ್ಯಾರ್ಥಿನಿಲಯದಲ್ಲಿ ಹಿರಿಯ ವಿದ್ಯಾರ್ಥಿಗಳು, ಪ್ರಥಮ ಪದವಿ ತರಗತಿ ವಿದ್ಯಾರ್ಥಿಗಳಿಗೆ ಶನಿವಾರ ಆಯೋಜಿಸಿದ್ದ ಫ್ರೆಶರ್ಸ್ ದಿನ ಆಚರಣೆ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಸಾಮಾಜಿಕ ಜಾಲತಾಣ ಮತ್ತು ತಂತ್ರಜ್ಞಾನದ ಬಳಕೆ ಹೆಚ್ಚಾದಂತೆ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ, ದೌರ್ಜನ್ಯದಂತಹ ಪ್ರಕರಣಗಳು ದಿನೇದಿನೆ ಹೆಚ್ಚಾಗುತ್ತಿವೆ. ಇದಕ್ಕೆಹಲವಾರು ಕಾರಣಗಳಿವೆ, ಅವನ್ನು ತಡೆಯುವ ಅಗತ್ಯ ಇದೆ ಹಾಗಾಗಿ ಹೆಣ್ಣುಮಕ್ಕಳು ಕಾನೂನು ಅರಿವು ಪಡೆದುಕೊಂಡರೆ ಅವನ್ನು ಕಾನೂನಾತ್ಮಕವಾಗಿ ಎದುರಿಸಬಹುದು ಎಂದು ತಿಳಿಸಿದರು.

ದೈನಂದಿನ ಬದುಕಿನ ಪ್ರತೀ ಹಂತದಲ್ಲಿಯೂ ಒಂದಲ್ಲಾ ಒಂದು ರೀತಿ ಹೆಣ್ಣುಮಕ್ಕಳ ಮೇಲೆ ಅಸಹನೆ ಹೆಚ್ಚು. ಅವನ್ನು ಮೆಟ್ಟಿ ನಿಲ್ಲಲು ಕಾನೂನು ತಿಳಿದುಕೊಳ್ಳಿ ಎಂದು ಹೇಳಿದರು.

ಅಕಾಡೆಮಿಕ್ ಆಗಿ ಅಭ್ಯಾಸ ಮಾಡಿ ಪರೀಕ್ಷೆ ಪಾಸು ಮಾಡುವುದು ಕೆಲಸ ಪಡೆಯಲು. ಆದರೆ, ಕಾನೂನು ಅರಿವು ಕೆಡುಕಿನ ಮನಸ್ಥಿತಿಯ ಜನರನ್ನು ಎದುರಿಸಿ ಬದುಕನ್ನು ಹಸನು ಮಾಡಿಕೊಳ್ಳಲಲು ಸಹಕಾರಿ ಎಂದು ಹೇಳಿದರು.

ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕರಾದ ಡಾ. ಪ್ರತಿಮಾ ಡಿ. ಎಸ್ ಅವರು,ಜೀವನದಲ್ಲಿ ಸಾಧನೆ ಮುಖ್ಯ. ಸಾಧನೆಗೆ ಅಧ್ಯಯನ ಮುಖ್ಯ. ಹಾಗಾಗಿ, ಓದಿನ ಕಡೆ ಗಮನಹರಿಸಿ ಎಂದು ಸಲಹೆ ನೀಡಿದರು.

ಜೀವನದಲ್ಲಿ ಗುರಿ ಇರಬೇಕು. ಅದನ್ನು ತಲುಪಲು ಶಿಸ್ತು ಪಾಲನೆ ಅಗತ್ಯ. ಶಿಸ್ತು ಪಾಲನೆ ಒಂದು ಜವಾಬ್ದಾರಿ. ಹಾಗಾಗಿ ಎಲ್ಲರೂ ಜವಾಬ್ದಾರಿಯಿಂದ ಇರುವುದು ಅಗತ್ಯವಿದೆ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾoಶುಪಾಲ ಪ್ರೊ. ಅಬ್ದುಲ್ ರಹಿಮಾನ್ ಎಂ ಅವರು, ಸರ್ಕಾರಿ ಸೌಲಭ್ಯ ಬಳಸಿಕೊಂಡು ಜೀವನದಲ್ಲಿ ಯಶಸ್ಸು ಸಾಧಿಸಿ ಹಾಗೂ ಮರಳಿ ಸಮಾಜಕ್ಕೆ ಏನಾದರೂ ಕೊಡುಗೆ ನೀಡಿ ಎಂದು ಸಲಹೆ ನೀಡಿದರು.

ವಿದ್ಯಾರ್ಥಿನಿಲಯ ಸಮಿತಿಯ ಸದಸ್ಯರಾದ ಡಾ.ಸಿ.ದಾಕ್ಷಾಯಿಣಿ ಹಾಗು ಸಹ ಪ್ರಾಧ್ಯಾಪಕ ಗೋವಿಂದರಾಜು ಮಾತನಾಡಿದರು.
ಇದೇ ಸಂದರ್ಭದಲ್ಲಿ ಅತಿಥಿಗಳನ್ನು ಸನ್ಮಾನಿಸಲಾಯಿತು.

ತೃತೀಯ ಪದವಿಯ ಅನನ್ಯ ಎಂ. ಸ್ವಾಗತಿಸಿದರು, ಹರ್ಷಿತ
ವಂದಿಸಿದರು,ಸಹನಾ ನಿರೂಪಿಸಿದರು.

ಇದೇ ಸಂದರ್ಭದಲ್ಲಿ ತೃತೀಯ ಮತ್ತು ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿಗಳು ನೃತ್ಯ, ಹಾಡುಗಾರಿಕೆ ಸೇರಿದಂತೆ ಹಲವಾರು ಮನೋರಂಜನೆ ಕಾರ್ಯಕ್ರಮ ನಡೆಸಿಕೊಟ್ಟರು.

ಸಮಾರಂಭದಲ್ಲಿ ನಿಲಯಪಾಲಕಿ ಪದ್ಮ ಸಿ, ಸಿಬ್ಬಂದಿ ದಾಕ್ಷಾಯಿಣಿ
ಬೇಬಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

ಹೆಣ್ಣುಮಕ್ಕಳಿಗೆ ಕಾನೂನು ಅರಿವು ಅಗತ್ಯ:ತಿಮ್ಮಯ್ಯ ಅಭಿಮತ Read More

ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿಸಂವಿಧಾನ ಸಮರ್ಪಣೆ ದಿನಾಚರಣೆ

ಮೈಸೂರು: ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ಬುಧವಾರ ಸಂವಿಧಾನ ಸಮರ್ಪಣೆ ದಿನಾಚರಣೆಯನ್ನು‌ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಸಂವಿಧಾನ ಕರುಡು ಸಮಿತಿಯ ಕಾರ್ಯ ಮತ್ತು ಅದರ ಅಧ್ಯಕ್ಷರಾಗಿ ಮಹತ್ವದ ಜವಾಬ್ದಾರಿಯುತ ಕರ್ತವ್ಯ ನಿರ್ವಹಿಸಿದ ಡಾ. ಬಿ. ಆರ್. ಅಂಬೇಡ್ಕರ್ ಅವರ ಅವಿರತ ಶ್ರಮದ ಕುರಿತು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿಕೊಡಲಾಯಿತು.

ಸಂವಿಧಾನದ ಅಗತ್ಯ, ಮಹತ್ವ ಮತ್ತು ಪರಿಣಾಮಕಾರಿ ಜಾರಿ ಕುರಿತು ಕಾಲೇಜು ಸಾಂಸ್ಕೃತಿಕ ಸಮಿತಿಯ ಸಂಚಾಲಕರೂ, ಸಹ ಪ್ರಾಧ್ಯಾಪಕರಾದ ಗೋವಿಂದರಾಜು ಅವರು ಪ್ರಸ್ತಾವಿಕವಾಗಿ ಮಾತನಾಡಿದರು.

ಎನ್. ಎಸ್. ಎಸ್ ಅಧಿಕಾರಿ ಡಾ. ಲಕ್ಷ್ಮಣ ಎಂ ಸಂವಿಧಾನ ಪ್ರಸ್ತಾವನೆಯನ್ನು ಬೋಧಿಸಿದರು.

ಇದೇ ಸಂದರ್ಭದಲ್ಲಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಪ್ರಥಮ ಬಹುಮಾನ ವಿಜೇತರಾದ ಸ್ನಾತಕೋತ್ತರ ವಿಭಾಗದ ಲತಾ ಎ. ಎಸ್. ದ್ವಿತೀಯ ಬಹುಮಾನ ಕವನ ಆರ್. ಎಲ್, ಹಾಗೂ ತೃತೀಯ ಬಹುಮಾನ ಪಡೆದ ಸ್ನಾತಕ ವಿಭಾಗದ ಪ್ರಕೃತಿ ವಿ ಅವರಿಗೆ ಪ್ರಾoಶುಪಾಲ ಡಾ. ಅಬ್ದುಲ್ ರಹಿಮಾನ್ ಎಂ, ಆಂತರಿಕ ಗುಣಮಟ್ಟ ಭರವಸೆ ಕೋಶದ ಡಾ. ನಂದಕುಮಾರ್. ವಿ ಹಾಗೂ ಅದೀಕ್ಷಕರಾದ ಬಸವರಾಜು ಅವರುಗಳು ಬಿ.ಆರ್ ಆವರುಗಳು ಬಹುಮಾನ ವಿತರಿಸಿದರು.

ಕಾರ್ಯಕ್ರಮದಲ್ಲಿ ಅಧ್ಯಪಕರ ಸಂಘದ ಕಾರ್ಯದರ್ಶಿ ಡಾ. ರಮೇಶ ಕೆ. ಎಲ್,
ಸ್ನಾತಕೋತ್ತರ ವಿಭಾಗದ ಅಧ್ಯಪಕರು, ಅದ್ಯಾಪಾಕೇತರರು, ವಿದ್ಯಾರ್ಥಿಗಳು ಹಾಜರಿದ್ದರು.

ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿಸಂವಿಧಾನ ಸಮರ್ಪಣೆ ದಿನಾಚರಣೆ Read More

ಮಹಿಳೆ-ಮಕ್ಕಳ ರಕ್ಷಣೆ ಬಗ್ಗೆ ಮಹಾರಾಣಿಮಹಿಳಾ ವಿಜ್ಞಾನ ಕಾಲೇಜಲ್ಲಿ ಭಿತ್ತಿಪತ್ರ ಪ್ರದರ್ಶನ

ಮೈಸೂರು: ಮಹಿಳೆ ಮತ್ತು ಮಕ್ಕಳ
ರಕ್ಷಣೆ ಕುರಿತು ಅರಿವು ಮೂಡಿಸುವ ಸಲುವಾಗಿ
ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ರಾಣಿ ಕೆಂಪನಂಜಮ್ಮಣ್ಣಿ ಅಮ್ಮನವರ ಉದ್ಯಾನದಲ್ಲಿ ಇಂಗ್ಲೀಷ್ ವಿಭಾಗದ ವತಿಯಿಂದ ಇಂದು ಭಿತ್ತಿಪತ್ರ ಪ್ರದರ್ಶನ ಏರ್ಪಡಿಸಲಾಗಿತ್ತು.

ದ್ವಿತೀಯ ಬಿಎಸ್ಸಿ ಪದವಿ ತರಗತಿಯ ಸುಮಾರು 165 ವಿದ್ಯಾರ್ಥಿಗಳು ರಚಿಸಿದ ಸಮಾಜಮುಖಿ, ಮಹಿಳಾ ಅಭ್ಯುದಯ ಕೇಂದ್ರಿತ ಭಿತ್ತಿಪತ್ರಗಳನ್ನು ಪ್ರದರ್ಶಿಸಲಾಯಿತು.

ಮಹಿಳೆ ಮತ್ತು ಮಕ್ಕಳ ರಕ್ಷಣೆ ಕುರಿತು ಅರಿವು ಮೂಡಿಸುವ ಭಿತ್ತಿಪತ್ರಗಳ ಜತೆಗೆ
ರಕ್ತದಾನ, ಕೃತಕ ಬುದ್ಧಿಮತ್ತೆ, ನಿಧಾನವೇ ಪ್ರಧಾನ, ಆಹಾರ ವಿಜ್ಞಾನ, ಮಕ್ಕಳ ಸುರಕ್ಷತೆ, ಪ್ಲಾಸ್ಟಿಕ್ ಬಳಕೆ ನಿಷೇಧ, ಭೂಮಂಡಲ ರಕ್ಷಣೆ, ಡ್ರಗ್ಸ್ ನಿಷೇಧ, ಹವಾಮಾನ ವೈಪರೀತ್ಯ, ಆರೋಗ್ಯ ರಕ್ಷಣೆ, ಮಾನವ ಅಂಗಾಂಗ ದಾನ, ಹೆಣ್ಣುಮಕ್ಕಳ ಶಿಕ್ಷಣ, ಮರ ಗಿಡ ಪರಿಸರ ರಕ್ಷಣೆ, ಬಾಲಕಾರ್ಮಿಕ ಪದ್ಧತಿ ವಿರೋಧ, ವಾಯು ಮಾಲಿನ್ಯ, ಕ್ಯಾನ್ಸರ್, ಕೋವಿಡ್ 19, ಅರಣ್ಯೀಕರಣ, ಇಂಡಿಯಾ ಮತ್ತು ತಾತ್ವಿಕತೆ, ತಂಬಾಕು ಸೇವನೆ ಪರಿಣಾಮ, ಮಹಿಳೆ ಮೇಲೆ ದೌರ್ಜನ್ಯ, ಜಲ ಸಂರಕ್ಷಣೆ, ಟೆರಾಕೊಟಾ ಆಭರಣ, ಸಮಾಜಮುಖಿ, ಮಹಿಳಾ ಸಂವೇದನೆ ಮತ್ತು ಮಕ್ಕಳ ಕಲ್ಯಾಣ ಇತ್ಯಾದಿ ಸಾಮಾಜಿಕ ಅರಿವಿನ ವಿಷಯಗಳ ಕುರಿತು ವಿವಿಧ ವಿಭಾಗಗಳ ವಿದ್ಯಾರ್ಥಿಗಳು ರಚಿಸಿದ ಭಿತ್ತಿಪತ್ರಗಳ ಪ್ರದರ್ಶನ ಮಾಡಲಾಯಿತು.

ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖ್ಯ ಅತಿಥಿ, ದೃಶ್ಯ ಕಲಾವಿದ ಮತ್ತು ಗ್ರಾಫಿಕ್ ವಿನ್ಯಾಸಕ ಶ್ರೀದರ್ಶನ್ ಭಾಸ್ಕರ್ ಮಲ್ವಾಂಕರ್, ವಿಜ್ಞಾನ ಓದಿನ ಜತೆಗೆ ಕಲೆ ಮತ್ತು ಸಾಹಿತ್ಯ ಅಭ್ಯಾಸ ಬದುಕನ್ನು ರೂಪಿಸಿಕೊಳ್ಳಲು ಅನುವು ಮಾಡಿಕೊಡುವುದರಿಂದ ಅದರ ಕಡೆ ಕೂಡ ಮನಸು ಮಾಡಿ ಎಂದು ಸಲಹೆ ನೀಡಿದರು.

ವಿಜ್ಞಾನ ಕಲಿಕೆ ಕೇವಲ ಪದವಿ ಗಳಿಸಲು ಸಹಾಯ ಮಾಡುತ್ತದೆ. ಆದರೆ ಕಲೆ ಮತ್ತು ಸಾಹಿತ್ಯ ಮನಸನ್ನು ಹೆಚ್ಚು ಸಂತೋಷಗೊಳಿಸುತ್ತದೆ. ಅಲ್ಲದೆ, ಬದುಕನ್ನು ಅರ್ಥಪೂರ್ಣವಾಗಿ ಸಾಗಿಸಲು ಸಹಕಾರಿ ಎಂದು ಹೇಳಿದರು.

ಕೃತಕ ಬುದ್ಧಿಮತ್ತೆ ಆಳುತ್ತಿರುವ
ಇಂದಿನ ದಿನಗಳಲ್ಲಿ ಆಧುನಿಕ ತಾಂತ್ರಿಕ ಕೌಶಲ್ಯ ಕಲಿಕೆ ಉದ್ಯೋಗ ಒದಗಿಸಿ ಕೊಡುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಂಶುಪಾಲ ಪ್ರೊ. ಅಬ್ದುಲ್ ರಹಿಮಾನ್ ಎಂ ಅವರು ಮಾತನಾಡಿ, ಪದವಿ ದಿನಗಳಲ್ಲಿ ಶೈಕ್ಷಣಿಕ ಓದಿನ ಜತೆಗೆ ಕಲೆ ಮತ್ತು ಕ್ರಿಯಾಶೀಲ ನಡೆಗಳ ಕಡೆಗೆ ಗಮನ ಹರಿಸುವಂತೆ ಸಲಹೆ ನೀಡಿದರು.

ವಿದ್ಯುನ್ಮಾನ ಮತ್ತು ತಂತ್ರಜ್ಞಾನ ಎರಡು ಕ್ಷೇತ್ರಗಳಲ್ಲಿ ಮಹತ್ತರ ಬದಲಾವಣೆ ಆಗುತ್ತಿರುವ ಈ ಕಾಲದಲ್ಲಿ ಬದುಕಿನ ಹಾದಿ ಕಂಡುಕೊಳ್ಳಲು ಕ್ರಿಯಾಶೀಲತೆ ಬಹುಮುಖ್ಯ ಪಾತ್ರ ವಹಿಸಲಿದೆ ಎಂದು ಹೇಳಿದರು.

ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಗೋವಿಂದರಾಜು ಪ್ರಾಸ್ತಾವಿಕವಾಗಿ ಮಾತನಾಡಿ, ಭಿತ್ತಿಪತ್ರ ರಚನೆ ಕೇವಲ ಶೈಕ್ಷಣಿಕ ಅಗತ್ಯ ಪ್ರಕ್ರಿಯೆ ಮಾತ್ರ ಆಗದೆ, ಉದ್ಯೋಗ ಮತ್ತು ಬದುಕಿನ ಮಾರ್ಗವಾಗಿ ಮಾಡಿಕೊಳ್ಳಲು ಸಾಧ್ಯ ಎಂದು ಹೇಳಿದರು.

ವಿದ್ಯಾರ್ಥಿಗಳಾದ ಮಿಸ್ಬಾ ಸ್ವಾಗತಿಸಿದರೆ,
ಕೀರ್ತನ ಎನ್ ವಂದಿಸಿದರು ಹಾಗೂ ಮಮತಾ ನಿರೂಪಿಸಿದರು.

ಡಾ. ಪರಶಿವಮೂರ್ತಿ ಎಚ್.ಎಸ್. ಮತ್ತು ಡಾ. ಶೋಭಲತ ಎನ್ ತೀರ್ಪುಗಾರರಾಗಿದ್ದರು.

ಕಾರ್ಯಕ್ರಮದಲ್ಲಿ, ಅತಿಥಿಗಳಾಗಿ ಡಾ.ರಾಮಚಂದ್ರ, ಎನ್.ಎಸ್.ಎಸ್. ಅಧಿಕಾರಿ ಡಾ. ಲಕ್ಷ್ಮಣ ಬಿ, ಡಾ.ನಂಜುಂಡಸ್ವಾಮಿ, ಅಧ್ಯಾಪಕರಾದ ರಂಗನಾಥ ಎಚ್.ಎಸ್, ದಿನೇಶ ಎಚ್.ಆರ್, ಮಂಜುನಾಥ ಕೆ.ಎಂ, ಲೋಕೇಶ್ ಟಿ.ವಿ, ವಿದ್ಯಾರ್ಥಿಗಳು, ಅಧ್ಯಾಪಕರು, ಅಧ್ಯಾಪಕೇತರರು, ಕಾಲೇಜು ಅಭಿವೃದ್ಧಿ ಸಮಿತಿ ನೌಕರರು, ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮಹಿಳೆ-ಮಕ್ಕಳ ರಕ್ಷಣೆ ಬಗ್ಗೆ ಮಹಾರಾಣಿಮಹಿಳಾ ವಿಜ್ಞಾನ ಕಾಲೇಜಲ್ಲಿ ಭಿತ್ತಿಪತ್ರ ಪ್ರದರ್ಶನ Read More

ಟೇಬಲ್ ಟೆನಿಸ್ :ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ವಿದ್ಯಾರ್ಥಿಗಳು ಪ್ರಥಮ

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯ ಮೈಸೂರು ನಗರ ಅಂತರ ಕಾಲೇಜು ಟೇಬಲ್ ಟೆನಿಸ್ ಸ್ಪರ್ಧೆಯಲ್ಲಿ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಕ್ರೀಡಾಪಟುಗಳು ಪ್ರಥಮ ಸ್ಥಾನ ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ವರ್ಷ ಎಂ.ಎ, ರೀತು ಎ, ಪ್ರಿಯದರ್ಶಿನಿ ಎಚ್. ಪಿ ಕಾವೇರಿ ಬಿ ಎನ್, ಧನ್ಯಶ್ರೀ ಆರ್, ಪ್ರಥಮ ಸ್ಥಾನ ಗಳಿಸಿ ಪಾರಿತೋಷಕವನ್ನು ಪಡೆದಿದ್ದಾರೆ.

ಚೆಸ್ ಸ್ಪರ್ಧೆಯಲ್ಲಿ ಭವಾನಿ ಸಿ.ಎಸ್, ಹೇಮಲತಾ, ದೇವಿಕ, ಗೀತಪ್ರಿಯ, ಪೂರ್ವಿ ತೃತೀಯ ಸ್ಥಾನ ಪಡೆದಿದ್ದಾರೆ.

ಈ ಪಂದ್ಯಾವಳಿಯನ್ನು ಮೈಸೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗ, ಟೆರೇಷಿಯನ್ ಕಾಲೇಜು, ಎಂ ಐ ಟಿ ಕಾಲೇಜು ಇವರ ಸಹಯೋಗದೊಂದಿಗೆ ಕಾವೇರಿ ಯೂತ್ ಸ್ಪೋರ್ಟ್ಸ್ ಅಕಾಡೆಮಿ ಕಾವೇರಿ ಸ್ಕೂಲ್ ಕುವೆಂಪು ನಗರದಲ್ಲಿ ಆಯೋಜಿಸಲಾಗಿತ್ತು.

ಪಂದ್ಯಾವಳಿಯಲ್ಲಿ ಮೈಸೂರು ನಗರದ ಮೆಡಿಕಲ್ ಕಾಲೇಜು, ಇಂಜಿನಿಯರಿಂಗ್ ಕಾಲೇಜು, ಒಳಗೊಂಡಂತೆ ಸುಮಾರು 25 ತಂಡಗಳು ಭಾಗವಹಿಸಿದ್ದವು.

ವಿಜೇತ ಕ್ರೀಡಾಪಟುಗಳನ್ನು ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ ಡಾ. ಅಬ್ದುಲ್ ರಹಿಮಾನ್ ಎಂ, ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರತಿಮ ಕೆ ಆರ್ ಹಾಗೂ ಅಧ್ಯಾಪಕರು, ಅಧ್ಯಾಪಕೇತಕರು, ಸಿಡಿಸಿ ನೌಕರರು ಅಭಿನಂದಿಸಿದರು.

ಟೇಬಲ್ ಟೆನಿಸ್ :ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ವಿದ್ಯಾರ್ಥಿಗಳು ಪ್ರಥಮ Read More

ವಿಷಯ ಪರಿಣಿತರಿಗೆ ವಿದೇಶದಲ್ಲಿ ವಿಪುಲ ಅವಕಾಶ- ಗೀತಾಲಕ್ಷ್ಮೀ ರಾಮಚಂದ್ರನ್

ಮೈಸೂರು: ಯಾವುದೇ ವಿಷಯದಲ್ಲಿ ಪರಿಣಿತಿ ಹೊಂದಿದವರಿಗೆ ವಿದೇಶದಲ್ಲಿ ವಿಪುಲ ಅವಕಾಶ ಲಭ್ಯವಿದೆ ಎಂದು
ದುಬೈನ ಖಾಸಗಿ ಕಾನೂನು ಸಲಹೆಗಾರ್ತಿ ಗೀತಾಲಕ್ಷ್ಮೀ ರಾಮಚಂದ್ರನ್ ತಿಳಿಸಿದರು.

ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ಇಂಗ್ಲಿಷ್ ವಿಭಾಗದಿಂದ ಆಯೋಜಿಸಿದ್ದ ಭಾಷೆ ಬಳಕೆ ಹಾಗೂ ಸಮಕಾಲೀನ ಸಮಾಜದಲ್ಲಿ ಸಾಮಾಜಿಕ ಮಾಧ್ಯಮಗಳ ಬಳಕೆಯ ಒಳಿತು ಕೆಡುಕು ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇಂದಿನ ದಿನಮಾನದಲ್ಲಿ ಹೆಣ್ಣುಮಕ್ಕಳಿಗೆ ಖಾಸಗಿ ಕಾರ್ಪೊರೇಟ್ ಸಂಸ್ಥೆಗಳಲ್ಲಿ ಅವಕಾಶಗಳ ಮಹಾಪೂರವೇ ಇದೆ. ಆದರೆ ಅದಕ್ಕೆ ಅಗತ್ಯವಾದ ಪರಿಣಿತಿ ಅಗತ್ಯವಿದೆ. ಇದ್ದವರಿಗೆ ಅವಕಾಶ ಸಿಗಲಿದೆ. ಹಾಗಾಗಿ ಆ ಪರಿಣಿತಿ ಪಡೆದುಕೊಳ್ಳಿ ಎಂದು ವಿದ್ಯಾರ್ಥಿನಿಯರಿಗೆ ಕಿವಿಮಾತು ಹೇಳಿದರು.

ಇತ್ತೀಚಿನ ವರ್ಷಗಳಲ್ಲಿ ಸರ್ಕಾರಿ ಸಂಸ್ಥೆಗಳಿಗಿಂತ ಖಾಸಗಿ ಕಾರ್ಪೊರೇಟ್ ಸಂಸ್ಥೆಗಳಲ್ಲಿ ಅವಕಾಶ ಹೆಚ್ಚಾಗಿವೆ. ಅದರಲ್ಲೂ ಕಾನೂನು ವಿಭಾಗದಲ್ಲಿ ಹೇರಳವಾಗಿವೆ. ಆದ್ದರಿಂದ ಕಾನೂನು ಅಧ್ಯಯನ ಮಾಡುವ ಮೂಲಕ ಅದರ ಅರಿವು ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.

ಬದಲಾದ ಕಾಲಮಾನಕ್ಕೆ ತಕ್ಕಂತೆ ಅಂತರ್ಜಾಲ ತಾಣಗಳು ಕುರಿತು ಕಾನೂನು, ಕ್ಲೌಡ್ ಕಾನೂನು, ಡಾಟಾ ಸಂರಕ್ಷಣೆ ಕಾನೂನು ಮತ್ತು ಕೃತಕ ಬುದ್ಧಿಮತ್ತೆ ಕಾನೂನು ಬಗ್ಗೆ ತಿಳಿದುಕೊಳ್ಳಿ ಎಂದು ಹೇಳಿದ ಗೀತಾಲಕ್ಷ್ಮಿ, ಇದನ್ನು ಮಾತೃ ಭಾಷೆ ಜತೆಗೆ ಇತರೆ ಅಂದರೆ ಇಂಗ್ಲಿಷ್ ಮತ್ತು ಬೇರೆ ಬೇರೆ ಭಾಷೆಗಳಲ್ಲಿ ಜ್ಞಾನ ಪ್ರಾಪ್ತಿ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ತಂತ್ರಜ್ಞಾನದ ಹೊಸ ಆವಿಷ್ಕಾರಗಳ ಜತೆಜತೆಗೆ ಭಾಷೆ ಬದಲಾಗುತ್ತದೆ. ಅಲ್ಲದೇ ಅವುಗಳ ಜತೆಗೇ ತೊಂದರೆಗಳು ಕೂಡ ಅಧಿಕ. ಹಾಗಾಗಿ, ತಂತ್ರಜ್ಞಾನ ಬಳಸಿ ಉನ್ನತೀಕರಿಸಿಕೊಳ್ಳುವ ಜತೆಗೆ ಅಪಾಯದ ಬಗ್ಗೆ ಅರಿತು ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದರು.

ಕಾಲೇಜು ಪ್ರಾಂಶುಪಾಲ ಪ್ರೊ. ಅಬ್ದುಲ್ ರಹಿಮಾನ್ ಎಂ ಅವರು ಮಾತನಾಡಿ, ದುರ್ದಿನಗಳು ಅಪಾಯಕಾರಿ ಮಟ್ಟಕ್ಕೆ ಏರಿಕೆಯಾಗಿರುವ ಇಂದಿನ ದಿನಗಳಲ್ಲಿ
ಹೆಣ್ಣುಮಕ್ಕಳಿಗೆ ಕಾನೂನು ಬಗ್ಗೆ ಅರಿವು ಮೂಡಿಸುವ ಕೆಲಸ ಆಗಬೇಕು. ಇಲ್ಲದಿದ್ದರೆ ಸಮಾಜವನ್ನು ಎದುರಿಸುವುದು ಕಷ್ಟವಾ ಗಲಿದೆ ಎಂದು ಎಚ್ಚರಿಸಿದರು.

ಇದೇ ವೇಳೆ ವಿಭಾಗದ ಪ್ರಾಧ್ಯಾಪಕ ಡಾ.ಪರಶಿವಮೂರ್ತಿ ಎಚ್.ಎಸ್ ಅವರನ್ನು ಸನ್ಮಾನಿಸಲಾಯಿತು.

ಸಹಪ್ರಾಧ್ಯಾಪಕಿ ಡಾ.ಶೋಭಲತ ಎನ್, ಅಧ್ಯಾಪಕ ರಂಗನಾಥ ಎಚ್.ಎಸ್, ಅಧ್ಯಾಪಕ ದಿನೇಶ್ ಎಚ್.ಆರ್,
ವಿಭಾಗದ ಮುಖ್ಯಸ್ಥ ಗೋವಿಂದರಾಜು, ಡಾ. ಆನಂದ್ ಎಚ್. ಸಿ ಮತ್ತು ಅಧ್ಯಾಪಕರು, ಅಧ್ಯಾಪಕೇತರರು,
ಬಿಸಿಎ ಮತ್ತು ಬಿಎಸ್ಸಿ ತರಗತಿಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿಷಯ ಪರಿಣಿತರಿಗೆ ವಿದೇಶದಲ್ಲಿ ವಿಪುಲ ಅವಕಾಶ- ಗೀತಾಲಕ್ಷ್ಮೀ ರಾಮಚಂದ್ರನ್ Read More

ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆ

ಮೈಸೂರು: ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ಬುಧವಾರ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದ ವೇಳೆ ವಿವಿಧ ಪ್ರಭೇದದ ಸುಮಾರು 200 ಸಸಿಗಳನ್ನು ಕಾಲೇಜು ಉದ್ಯಾನವನದಲ್ಲಿ ನೆಡಲಾಯಿತು.

ಕಾಲೇಜಿನ ಅಧ್ಯಾಪಕರು ಮತ್ತು ಅಧ್ಯಾಪಕೇತರ ಸಿಬ್ಬಂದಿ ಸುಮಾರು 7 ಸಾವಿರ ರೂಪಾಯಿ ಮೌಲ್ಯದ ಸಸಿಗಳನ್ನು ಕೊಡುಗೆಯಾಗಿ ನೀಡಿದ್ದು ಕಾಲೇಜಿನಲ್ಲಿರುವ ಎರಡು ಘಟಕಗಳ ಸುಮಾರು 200 ವಿದ್ಯಾರ್ಥಿಗಳು ಅವುಗಳನ್ನು ನೆಟ್ಟು ನೀರೆರೆದರು.

ಈ ವೇಳೆ ಮಾತನಾಡಿದ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ನಟರಾಜ್ ಕೆ ಗಿಡಗಳನ್ನು ಉಳಿಸಿ ಬೆಳೆಸಲು ಸಲಹೆ ನೀಡಿದರು.

ಗಿಡ ಮರಗಳು ನಮಗೆ ಜೀವ ಜೀವನ ಎರಡನ್ನು ನೀಡುತ್ತವೆ. ಹಾಗಾಗಿ ಜೀವ ನೀಡುವ ಜೀವಗಳನ್ನು ಸ್ವಾಭಾವಿಕವಾಗಿ ಕಾಪಾಡುವುದು ನಮ್ಮ ಆದ್ಯ ಕರ್ತವ್ಯ‌ ಎಂದು ತಿಳಿಸಿದರು.

ಅದನ್ನು ಮರೆತ ಕಾರಣ ಒಂದು ಕಾರ್ಯಕ್ರಮ ಮಾಡಿ
ಗಿಡಗಳನ್ನು ನಾವು ನೆಡುವ ಸ್ಥಿತಿಗೆ ತಲುಪಿದ್ದೇವೆ,ಇದು ಅನಿವಾರ್ಯ,ಆದರೂ ಗಿಡ ನೆಟ್ಟು, ಉಳಿಸಿ ಬೆಳೆಸುವುದು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಂಶುಪಾಲ ಪ್ರೊ.ಎಂ. ಅಬ್ದುಲ್ ರಹಿಮಾನ್ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆ ಮೂಲಕ ನಾವು ಕಾಡು ಉಳಿಸಿ ಬೆಳೆಸುವುದರ ಜತೆಗೆ ಗ್ರಾಮೀಣ ಭಾಗದಲ್ಲಿ ಜನರ ಸೇವೆ ಮತ್ತು ಸವಲತ್ತು ಕುರಿತು ಅರಿವು ಮೂಡಿಸಿ ಗ್ರಾಮೀಣ ಪ್ರದೇಶಗಳು ಅಭಿವೃದ್ಧಿ ಪಥದತ್ತ ಹೋಗಲು ಸಹಕರಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಅಧಿಕಾರಿಗಳಾದ ಡಾ.ಲಕ್ಷ್ಮಣ ಬಿ, ಪ್ರೊ.ಶುಭಾ ಬಿ.ಎಸ್, ಅಧ್ಯಾಪಕ ಸಂಘದ ಕಾರ್ಯದರ್ಶಿ ರಮೇಶ ಕೆ.ಎಲ್, ಸಾಂಸ್ಕೃತಿಕ ಸಮಿತಿ ಸಂಚಾಲಕ ಗೋವಿಂದರಾಜು, ಅಧ್ಯಾಪಕರಾದ ಸುಧಾ, ಲೀಲಾವತಿ, ಪ್ರಮೀಳಾ ಎಚ್. ಸಿ., ಬೃಂದಾ ಎನ್. ಮಧುಮತಿ, ಸುರೇಶ್, ಅಧ್ಯಾಪಕೇತರರು, ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿ ಪ್ರತಿನಿಧಿಗಳಾದ ರಮ್ಯಾ ಡಿ, ಶಿವಾಲಿ, ಸುಚಿತ್ರಾ, ಸ್ನೇಹ, ಸೌಂದರ್ಯ, ರಂಜಿತ ಆರ್ ಹಾಗೂ ಸುಮಾರು 200 ಸ್ವಯಂ ಸೇವಕರು ಹಾಜರಿದ್ದರು.

ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆ Read More

ಮಹರ್ಷಿ ವಾಲ್ಮೀಕಿ ಮೌಲ್ಯಗಳು ಸಾರ್ವಕಾಲಿಕ-ಪ್ರೊ.ರಾಜೇಶ್ವರಿ

ಮೈಸೂರು: ಮಹರ್ಷಿ ವಾಲ್ಮೀಕಿ ಅವರು ಪ್ರತಿಪಾದಿಸುವ ಮೌಲ್ಯಗಳು ಸಾರ್ವಕಾಲಿಕ ಎಂದು ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಆಹಾರ ವಿಜ್ಞಾನ ಮತ್ತು ಪೋಷಣೆ ವಿಭಾಗದ ಪ್ರಾಧ್ಯಾಪಕಿ ಪ್ರೊ. ರಾಜೇಶ್ವರಿ ಜೆ ಅವರು ಅಭಿಪ್ರಾಯ ಪಟ್ಟರು.

ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಆವರಣದಲ್ಲಿ ಏರ್ಪಡಿಸಿದ್ದ ವಾಲ್ಮೀಕಿ ಜಯಂತಿ ಆಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನಿಮ್ನ ವರ್ಗದ ಸಾಮಾನ್ಯ
ಕುಟುಂಬದಲ್ಲಿ ಜನಿಸಿದ ವಾಲ್ಮೀಕಿ ಅವರು ಸನ್ಮಾರ್ಗ, ಸನ್ನಡತೆ ಮತ್ತು ಸದ್ಗುಣಗಳನ್ನು ಜನರಿಗೆ ತಿಳಿಸಿ ಸತ್ ಸಮಾಜ ನಿರ್ಮಾಣ ಮಾಡಲು ಬುನಾದಿ ಹಾಕಿದರು ಎಂದು ತಿಳಿಸಿದರು.

ಗುರಿ ಸಾಧನೆಗೆ ಆಯ್ಕೆ ಮಾಡಿಕೊಂಡದ್ದು ಕ್ರಿಯಾಶೀಲ ರಚನೆಯಾದ ಮಹಾಕಾವ್ಯ ಮಾರ್ಗ. ಇದರಲ್ಲಿ ಹಲವಾರು ಪಾತ್ರಗಳನ್ನು ಸೃಷ್ಟಿಸಿ ಅವುಗಳ ಮೂಲಕ ಗುಣ ಮತ್ತು ಅವಗುಣಗಳು ಅಡಕವಾದ ಪಾತ್ರಗಳನ್ನು ಸೃಜಿಸಿದರು, ಆ ಮೂಲಕ ಜನತೆಗೆ ಮೌಲ್ಯಗಳನ್ನು ಬಿತ್ತಿದರು ಎಂದು ತಿಳಿಸಿದರು.

ಮಹಾಕಾವ್ಯವನ್ನು ಬಳಸಿಕೊಂಡು, ಭಕ್ತಿ ಮಾರ್ಗದ ಮೂಲಕ ಸಮಾಜದ ಪರಿವರ್ತನೆಗೆ ನಾಂದಿ ಹಾಡಿದ ವಾಲ್ಮೀಕಿ ಅಂದಿನಿಂದ ಇಂದಿನವರೆಗೂ ಸಮಾಜ ಪರಿವರ್ತನೆಯ ಹರಿಕಾರರು ಎಂದು ಬಣ್ಣಿಸಿದ ಪ್ರೊ. ರಾಜೇಶ್ವರಿ ಅವರು,
ವಾಲ್ಮೀಕಿ ಅವರ ಜಯಂತಿ ಆಚರಣೆಯನ್ನು ಮಾಡುವುದರ ಜತೆಗೆ ಅವರು ಸಮಾಜಕ್ಕೆ ನೀಡಿದ ಮಹಾಕಾವ್ಯ ರಾಮಾಯಣ ಓದಿ ಒಳ್ಳೆಯತನವನ್ನು ರೂಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಇತ್ತೀಚೆಗೆ ಸಮಾಜದಲ್ಲಿ ಮೌಲ್ಯಗಳು ಸವೆಯುತ್ತಿವೆ, ಇಂತಹ ಸಂದಿಗ್ಧ ಸಮಯದಲ್ಲಿ ವಾಲ್ಮೀಕಿ ಅವರ ಮೌಲ್ಯಗಳು ಯುವ ಸಮೂಹ ಮತ್ತು ಸಮಾಜವನ್ನು ಸರಿ ದಾರಿಗೆ ತರುವ ಮಾರ್ಗವಾಗುತ್ತವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಂಶುಪಾಲ ಡಾ. ಎಂ. ಅಬ್ದುಲ್ ರಹಿಮಾನ್ ಅವರು ವಾಲ್ಮೀಕಿ ಮಹರ್ಷಿ ಅವರ ಕುರಿತು ಹೆಚ್ಚಿನ ಅಧ್ಯಯನ ಅಗತ್ಯವಿದೆ ಎಂದು ಹೇಳಿದರು.

ವಾಲ್ಮೀಕಿ ಅವರ ರಾಮಾಯಣ ಮಹಾ ಕಾವ್ಯ ಜಗತ್ತಿನ ಶ್ರೇಷ್ಠ ಕೃತಿಗಳಲ್ಲಿ ಮೊದಲನೆ ಸಾಲಿನಲ್ಲಿ ಬರುವ ಕೃತಿ. ಅದರ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಿದ್ದಾರೆ. ಅಂತಹ ಸಂದೇಶ ನೀಡಿರುವ ಕೃತಿಯನ್ನು ಹೆಚ್ಚು ಅಧ್ಯಯನ ಮಾಡುವ ಮೂಲಕ ಸಮಾಜದ ಕಟ್ಟಕಡೆಯ ಮನುಷ್ಯನಿಗೆ ಅವರ ಕರ್ತೃತ್ವವನ್ನು ಪ್ರಚುರಪಡಿಸುವ ಇನ್ನೂ ಹೆಚ್ಚು ರೀತಿಯ ಕೆಲಸಗಳನ್ನು ಮಾಡಬೇಕು ಎಂದು ಹೇಳಿದರು.

ಸಾಮಾನ್ಯ ವ್ಯಕ್ತಿ ಒಬ್ಬರು, ಮಹರ್ಷಿ ಆಗುವುದು ಕೇವಲ ಅವರ ಧೀಶಕ್ತಿಯಿಂದ ಮಾತ್ರ ಸಾಧ್ಯ. ಅಂತಹ ಮಹಾನ್ ಚೇತನ ವಾಲ್ಮೀಕಿ. ಅವರ ಮಹಾಕಾವ್ಯ ಮತ್ತು ಅವರ ಜೀವನ ಸಾಧನೆ ಸದಾ ಅನುಕರಣೀಯ ಎಂದು ಹೇಳಿದರು.

ಪತ್ರಾಂಕಿತ ವ್ಯವಸ್ಥಾಪಕಿ ಮೀನಾಕ್ಷಿ ಆರ್, ಎನ್.ಎಸ್.ಎಸ್ ಅಧಿಕಾರಿ ಡಾ. ಲಕ್ಷ್ಮಣ ಬಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಡಾ.ಚೇತನ ಮಲಗಾವಿ,
ಚೇತನ ಹಂಜಿ, ಅಲೋಕ ತಿಮ್ಮಪ್ಪ ಹೆಗಡೆ,
ಅಧ್ಯಾಪಕ ಸಂಘದ ಕಾರ್ಯದರ್ಶಿ ಡಾ.ರಮೇಶ್ ಕೆ. ಎಲ್, ಸಾಂಸ್ಕೃತಿಕ ಸಮಿತಿ ಸಂಚಾಲಕ ಗೋವಿಂದರಾಜು, ಖಜಾಂಚಿ ಬೃಂದಾ ಎನ್, ಸಾಂಸ್ಕೃತಿಕ ಸಮಿತಿ ಸದಸ್ಯರು, ಅಧ್ಯಾಪಕರು, ಅಧ್ಯಾಪಕೇತರರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮಹರ್ಷಿ ವಾಲ್ಮೀಕಿ ಮೌಲ್ಯಗಳು ಸಾರ್ವಕಾಲಿಕ-ಪ್ರೊ.ರಾಜೇಶ್ವರಿ Read More

ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ಗಾಂಧಿ, ಶಾಸ್ತ್ರಿ ಜಯಂತಿ ಆಚರಣೆ

ಮೈಸೂರು: ನಗರದ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ಮಹಾತ್ಮ ಗಾಂಧಿಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ, ರಸಾಯನ ಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಡಾ. ಬಿ.ಲಕ್ಷ್ಮಣ ಅವರು ಗಾಂಧೀಜಿ ಅವರ ತತ್ವಗಳ ಇಂದಿನ ಅಗತ್ಯಗಳ ಬಗ್ಗೆ ಬೆಳಕು ಚೆಲ್ಲಿದರು.

ಆಧುನಿಕತೆಯ ಸೆಳೆತಕ್ಕೆ ಸಿಲುಕಿ ತಾತ್ವಿಕ ದ್ವಂದ್ವ ನೀತಿ ಅನುಸರಿಸುತ್ತಿರುವ ಹೊಸ ತಲೆಮಾರು ಸರಿಯಾದ ಮಾರ್ಗ ಕಾಣದೆ ಇರುವ ಸಂದರ್ಭ ಬಂದಿದೆ. ಹಾಗಾಗಿ, ಈ ಸಮುದಾಯಕ್ಕೆ ಮಹಾತ್ಮ ಗಾಂಧಿಯನ್ನು ಸರಿಯಾಗಿ ಪರಿಚಯಿಸುವ ಅಗತ್ಯ ಇದೆ. ಇಲ್ಲದೇ ಹೋದರೆ ಸಮಾಜಕ್ಕೆ ಇಂಥ ಸಮುದಾಯ ಹೊರೆಯಾಗುವ ಸಂಭವ ಹೆಚ್ಚಿದೆ ಎಂದು ಆತಂಕ ವ್ಯಕ್ತಪಡಿಸಿದರು.

ತಂತ್ರಜ್ಞಾನದ ಸೆಳೆತ ಮತ್ತು ಆಕರ್ಷಣೆಯ ಬದುಕು, ಲಾಲಸೆ ಯುವ ಜನಾಂಗಕ್ಕೆ ಮಾರಕವಾಗಿ ಪರಿಣಮಿಸುತ್ತಿದೆ.ಹಾಗಾಗಿ, ಮಹಾತ್ಮ ಗಾಂಧಿ ಅವರ ತತ್ವಗಳ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕಿದೆ ಎಂದು ಅವರು ಅಭಿಪ್ರಾಯ ಪಟ್ಟರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರೊ. ಎಂ. ಅಬ್ದುಲ್ ರಹಿಮಾನ್ ಅವರು ಲಾಲ್ ಬಹದ್ದೂರ್ ಶಾಸ್ತ್ರಿ ಅವರು ದೇಶದ ಅಭಿವೃದ್ಧಿಗೆ ಕೊಟ್ಟ ಕೊಡುಗೆಗಳ ಗುಣಗಾನ ಮಾಡಿದರು. ಜೈ ಜವಾನ್ ಜೈ ಕಿಸಾನ್ ಎಂಬ ಶಾಸ್ತ್ರಿ ಅವರ ಮಾತು ಕಾರ್ಯರೂಪಕ್ಕೆ ಬರಲು ಯುವ ಸಮುದಾಯ ಕಾರ್ಯಪ್ರವೃತ್ತರಾಗಬೇಕು ಎಂದು ಕರೆ ನೀಡಿದರು.

ಸಾಂಸ್ಕೃತಿಕ ಸಮಿತಿ ಸಂಚಾಲಕ ಗೋವಿಂದರಾಜು ಮಾತನಾಡಿದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ. ಭೀಮೇಶ್ ಎಚ್. ಜೆ ಅಧ್ಯಾಪಕರಾದ ಡಾ.ಶೋಭಾ ಎನ್, ಡಾ .ಲಾವಣ್ಯ, ಡಾ ವಿಂದುವಾಹಿನಿ, ಡಾ ಕವಿತಾ, ಡಾ ಪ್ರತಿಮಾ, ಡಾ.ಶೀಲಾ ಮತ್ತಿತರರಿದ್ದರು.

ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ಗಾಂಧಿ, ಶಾಸ್ತ್ರಿ ಜಯಂತಿ ಆಚರಣೆ Read More

ಮಹಾರಾಣಿ ವಿಜ್ಞಾನ ಕಾಲೇಜು: ಉತ್ತಮ ರಾಷ್ಟ್ರೀಯ ಸೇವಾ ಯೋಜನೆ ಸ್ವಯಂ ಸೇವಕ ಪ್ರಶಸ್ತಿ

ಮೈಸೂರು: ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯಡಿ ಕೊಡಮಾಡುವ ವಾರ್ಷಿಕ ಉತ್ತಮ ರಾಷ್ಟ್ರೀಯ ಸೇವಾ ಯೋಜನೆ ಸ್ವಯಂ ಸೇವಕ ಪ್ರಶಸ್ತಿ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿಗೆ ಲಭ್ಯವಾಗಿದೆ.

ಈ ಪ್ರಶಸ್ತಿಗೆ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿಯರಾದ ಲೇಖನಾ ಅರಸ್ ಎಸ್ ಮತ್ತು ಸಹನಾ ಕೆ ಅವರು ಭಾಜನರಾಗಿದ್ದಾರೆ.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಅಬ್ದುಲ್ ರಹಿಮಾನ್ ಎಂ, ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿಗಳಾದ ಪ್ರೊ. ಭೀಮೇಶ್ ಎಚ್.ಜೆ, ಲತಾರಾಣಿ ಏಚ್. ಎಂ. ಹಾಗೂ ಡಾ. ಲಕ್ಷ್ಮಣ್ ಮತ್ತು ಶುಭಾ ಅವರು
ಲೇಖನಾ ಅರಸ್ ಎಸ್ ಮತ್ತು ಸಹನಾ ಕೆ ಅವರುಗಳನ್ನು ಅಭಿನಂದಿಸಿ ಶುಭ ಹಾರಿಸಿದರು.

ಮಹಾರಾಣಿ ವಿಜ್ಞಾನ ಕಾಲೇಜು: ಉತ್ತಮ ರಾಷ್ಟ್ರೀಯ ಸೇವಾ ಯೋಜನೆ ಸ್ವಯಂ ಸೇವಕ ಪ್ರಶಸ್ತಿ Read More

ಮಹಾರಾಣಿ ವಿದ್ಯಾರ್ಥಿಗಳ ಫ್ಯಾಷನ್ ಶೋ

ಮೈಸೂರು: ಮಹಿಳಾ ಮತ್ತು ಮಕ್ಕಳ ದಸರಾ ಉಪ ಸಮಿತಿಯು ಮೈಸೂರಿನ ಜೀವರಾಯನ ಕಟ್ಟೆಯಲ್ಲಿ ಬುಧವಾರ ಫ್ಯಾಷನ್ ಶೋ ಆಯೋಜಿಸಿತ್ತು.

ಮಹಿಳಾ ದಸರಾ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಫ್ಯಾಷನ್ ಶೋ ನಲ್ಲಿ ನಗರದ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿ ಪ್ರೇಕ್ಷಕರ ಮನಸೂರೆಗೊಂಡರು.

ಮಹಾರಾಣಿ ವಿದ್ಯಾರ್ಥಿಗಳ ಫ್ಯಾಷನ್ ಶೋ

ಮೈಸೂರು: ಮಹಿಳಾ ಮತ್ತು ಮಕ್ಕಳ ದಸರಾ ಉಪ ಸಮಿತಿಯು ಮೈಸೂರಿನ ಜೀವರಾಯನ ಕಟ್ಟೆಯಲ್ಲಿ ಬುಧವಾರ ಫ್ಯಾಷನ್ ಶೋ ಆಯೋಜಿಸಿತ್ತು.

ಮಹಿಳಾ ದಸರಾ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಫ್ಯಾಷನ್ ಶೋ ನಲ್ಲಿ ನಗರದ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿ ಪ್ರೇಕ್ಷಕರ ಮನಸೂರೆಗೊಂಡರು.

ಬೀಬಿ ಅಮೀನ, ನಿಖಿತಾ ಕುಮಾರಿ ಜಿ, ಸಂಜನಾ ಬಿ, ಸ್ಪೂರ್ತಿ ಜಿ, ಚೈತನ್ಯ, ಅಫ್ರೀನ್, ಜ್ಯೋತಿ ಆರ್, ಲಿಖಿತ, ತೇಜಸ್ವಿನಿ ಅವರು ವೇದಿಕೆ ಮೇಲೆ ಕ್ಯಾಟ್ ವಾಕ್ ಮಾಡುವ ಮೂಲಕ‌ ಸಭಿಕರಿಗೆ ಮುದ ನೀಡಿದರು.

ಮಹಾರಾಣಿ ವಿದ್ಯಾರ್ಥಿಗಳ ಫ್ಯಾಷನ್ ಶೋ Read More