ಡಾ ಜಾನಪದ ಎಸ್ ಬಾಲಾಜಿ ಅವರಿಗೆ ಅಂತರಾಜ್ಯ ಜಾನಪದ ಸಿರಿ ಪ್ರಶಸ್ತಿ ಪ್ರದಾನ

ಮಂತ್ರಾಲಯ: ಮಂತ್ರಾಲಯದ ಶ್ರೀ ರಾಘವೇಂದ್ರ ಮಠದ ಸಭಾಂಗಣದಲ್ಲಿ ನಡೆದ
ಸಮಾರಂಭದಲ್ಲಿ ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ ಜಾನಪದ ಎಸ್ ಬಾಲಾಜಿ ಅವರಿಗೆ ಅಂತರಾಜ್ಯ ಜಾನಪದ ಸಿರಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕನ್ನಡ ಸಾಹಿತ್ಯ ಪರಿಷತ್ ತೆಲಂಗಾಣ, ಆಂಧ್ರ ಪ್ರದೇಶ್, ಗೋವಾ, ಚಿಕ್ಕಮಗಳೂರು ವತಿಯಿಂದ ಅಂತಾ ರಾಜ್ಯ‌ ಕನ್ನಡ ಸಾಹಿತ್ಯ ಸಮ್ಮೇಳನ ಮಂತ್ರಾಲಯದ ಶ್ರೀ ರಾಘವೇಂದ್ರ ಮಠದ ಸಭಾಂಗಣದಲ್ಲಿ ಜರುಗಿತು.

ಪೂಜ್ಯ ಶ್ರೀ ಸುಭುದೇಂದ್ರ ತೀರ್ಥ ಮಹಾ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಡಾ ಜಾನಪದ ಎಸ್ ಬಾಲಾಜಿ ಯವರ 30 ವರ್ಷಗಳ ಜಾನಪದ ಕ್ಷೇತ್ರದ ಸೇವೆಯನ್ನು ಪರಿಗಣಿಸಿ ಅಂತ ರಾಜ್ಯ ಜಾನಪದ ಸಿರಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಡಾ ಮಹೇಶ್ ಜೋಶಿ, ಅಯೋಧ್ಯ ರಾಮ ಲಲ್ಲಾ ಶಿಲ್ಪಿ ಡಾ ಅರುಣ್ ಯೋಗಿರಾಜ್, ಸಾಹಿತಿ ಡಾ. ಪ್ರದೀಪ್ ಕುಮಾರ್ ಹೆಬ್ರಿ,
ಕನ್ನಡ ಸಾಹಿತ್ಯ ಪರಿಷತ್ ರಾಜ್ಯ ಕಾರ್ಯದರ್ಶಿ ಡಾ ಬಿ ಎಂ ಪಟೇಲ್ ಪಾಂಡು,
ಆಂಧ್ರ ಪ್ರದೇಶ ಘಟಕದ ಅಧ್ಯಕ್ಷ ಅಂಜನ್ ಕುಮಾರ್, ತೆಲಂಗಾಣ ರಾಜ್ಯ ಅಧ್ಯಕ್ಷ ಡಾ ಗುಡಗುಂಟಿ ವಿಟ್ಟಲ್ ಜೋಶಿ, ಮಹಾರಾಷ್ಟ್ರ ಅಧ್ಯಕ್ಷ ಸೋಮಶೇಖರ್ ಜಮಶೆಟ್ಟಿ, ಗೋವಾ ಅಧ್ಯಕ್ಷ ಡಾ ಸಿದ್ದಣ್ಣ ಸಂಗಣ್ಣ ಮೇಟಿ, ಚಿಕ್ಕಮಗಳೂರು ಅಧ್ಯಕ್ಷ ಸೂರಿ ಶ್ರೀನಿವಾಸ್, ರಾಯಚೂರು ಜಿಲ್ಲಾ ಕಾರ್ಯದರ್ಶಿ ದಂಡಪ್ಪ ಬಿರಾದರ್ ಅವರ ಸಮ್ಮುಖದಲ್ಲಿ ಡಾ.ಬಾಲಾಜಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಡಾ ಜಾನಪದ ಎಸ್ ಬಾಲಾಜಿ ಅವರಿಗೆ ಅಂತರಾಜ್ಯ ಜಾನಪದ ಸಿರಿ ಪ್ರಶಸ್ತಿ ಪ್ರದಾನ Read More

ರಾಜಮಾತೆ ಆಭರಣ ಮಾರಾಟ ಮಾಡಿ ಕೆಆರ್‌ಎಸ್ ಕಟ್ಟಿಸಿದ್ದು:ಸುಬುಧೇಂದ್ರ ತೀರ್ಥ ಶ್ರೀ

ರಾಯಚೂರು: ಕಾವೇರಿ ಪ್ರಾಂತ್ಯದ ಜನರಿಗೆ ನೀರಿನ ವ್ಯವಸ್ಥೆ ಮಾಡಬೇಕು ಎಂಬ ಉದ್ದೇಶದಿಂದ ಮೈಸೂರು ಸಂಸ್ಥಾನದ ಆಗಿನ ರಾಜಮಾತೆ ತಮ್ಮ ಆಭರಣಗಳನ್ನ ಮಾರಾಟ ಮಾಡಿ ಕೆಆರ್‌ಎಸ್ ಜಲಾಶ ಕಟ್ಟಿಸಿದ್ದಾರೆ ಎಂದು ಗುರುರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

ಕೆಆರ್‌ಎಸ್ ಡ್ಯಾಂಗೆ ಟಿಪ್ಪು ಸುಲ್ತಾನ್ ಅಡಿಗಲ್ಲು ಹಾಕಿದ್ದು ಎಂಬ ಸಚಿವ ಮಹಾದೇವಪ್ಪ ಹೇಳಿಕೆ ವಿಚಾರಕ್ಕೆ ಮೇಲಿನಂತೆ ಶ್ರೀಗಳು ಪ್ರತಿಕ್ರಿಯಿಸಿದರು.

ರಾಜಮನೆತನದ ತ್ಯಾಗದ ಫಲವಾಗಿ ಕೆಆರ್‌ಎಸ್ ಡ್ಯಾಂ ನಿರ್ಮಾಣವಾಗಿದೆ. ಇನ್ನೂ ಬೇರೆ ಬೇರೆ ವಿಚಾರ ಬಂದರೆ, ಬೇರೆಯವರ ಹೆಸರುಗಳು ಬಂದರೆ ಅದರ ಬಗ್ಗೆ ಇತಿಹಾಸ ತಜ್ಞರೇ ಹೇಳಬೇಕು ಹೊರತು ನಾವು ಅದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಹೇಳಲು ಸಾಧ್ಯವಿಲ್ಲ ಎಂದು ಹೇಳಿದರು.

ಇದೇ ವೇಳೆ ಧರ್ಮಸ್ಥಳದ ಪ್ರಸ್ತುತ ವಿಚಾರಗಳ ಕುರಿತು ಪ್ರತಿಕ್ರಿಯಿಸಿದ ಅವರು, ಯಾವುದೇ ಧಾರ್ಮಿಕ ಸ್ಥಳ, ಕ್ಷೇತ್ರಗಳಲ್ಲಿ ಸಣ್ಣಪುಟ್ಟ ಲೋಪದೋಷಗಳಾದರೆ ಕ್ಷೇತ್ರದ ಪಾವಿತ್ರ್ಯತೆ ಹಾಗೂ ಕ್ಷೇತ್ರದ ಮಹತ್ವಕ್ಕೆ ಜೋಡಣೆ ಮಾಡಬಾರದು. ಅಲ್ಲಿನ ವ್ಯವಸ್ಥೆ, ಕಾನೂನು ವ್ಯವಸ್ಥೆ ಬಗ್ಗೆ ಮಾತನಾಡಬೇಕು. ಕ್ಷೇತ್ರ ಅತ್ಯಂತ ಪವಿತ್ರವಾದದ್ದು, ನಮ್ಮೆಲ್ಲರಿಗೂ ಅತ್ಯಂತ ಭಕ್ತಿ, ಶ್ರದ್ಧೆಯ ಕೇಂದ್ರವಾಗಿದೆ. ಅಲ್ಲಿ ಯಾವುದೇ ಪ್ರಕರಣ,ವಿಚಾರಗಳು ಇದ್ದರೂ ಕೂಡ ಕಾನೂನು ವಿಚಾರಣೆ ನಡೆಸುತ್ತದೆ ಎಂದು ಹೇಳಿದರು.

ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ಮಂತ್ರಾಲಯ ಭಕ್ತರಿಗೆ ತೊಂದರೆಯಾಗುವ ಕುರಿತು ಪ್ರತಿಕ್ರಿಯಿಸಿದ ಶ್ರೀಗಳು, ಸಾರಿಗೆ ಇಲಾಖೆಯವರು ತಮ್ಮ ಬೇಡಿಕೆ ಈಡೇರಿಕೆಗಾಗಿ ಹಲವಾರು ಬಾರಿ ಅಹವಾಲು ಕೊಟ್ಟಿದ್ದಾರೆ. ರಾಜ್ಯ ಸರ್ಕಾರ ಅವರ ಅಹವಾಲನ್ನ ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಸಾರಿಗೆ ನೌಕರರಿಗೆ ಸರ್ಕಾರ ಸೂಕ್ತ ಪರಿಹಾರ ಒದಗಿಸುತ್ತದೆ ಎಂಬ ಧೃಡ ವಿಶ್ವಾಸವಿದೆ ಎಂದು ಸುಬುದೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದರು.

ರಾಜಮಾತೆ ಆಭರಣ ಮಾರಾಟ ಮಾಡಿ ಕೆಆರ್‌ಎಸ್ ಕಟ್ಟಿಸಿದ್ದು:ಸುಬುಧೇಂದ್ರ ತೀರ್ಥ ಶ್ರೀ Read More