ಕುಂತೂರು ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಕೃಷ್ಣಮೂರ್ತಿ ಚಾಲನೆ
(ವರದಿ:ಸಿದ್ದರಾಜು,ಕೊಳ್ಳೇಗಾಲ)
ಕೊಳ್ಳೇಗಾಲ: ತಾಲ್ಲೂಕಿನ ಕುಂತೂರು ಗ್ರಾ.ಪಂ.ವ್ಯಾಪ್ತಿಯ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎ.ಆರ್.ಕೃಷ್ಣಮೂರ್ತಿಯವರು ಚಾಲನೆ ನೀಡಿದರು.
ಮಲ್ಲಹಳ್ಳಿಮಾಳ ಗ್ರಾಮದಲ್ಲಿ ನಿರ್ಮಾಣವಾಗಿರುವ ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ ನೂತನ ಕಟ್ಟಡ ಉದ್ಘಾಟನೆ ಹಾಗೂ ಕುಂತೂರು ಮೋಳೆ ಗ್ರಾಮದಲ್ಲಿ ನಿರ್ಮಾಣವಾಗಿರುವ ಭಗೀರಥ ಉಪ್ಪಾರ ಸಮುದಾಯ ಭವನ ನೂತನ ಕಟ್ಟಡ ಉದ್ಘಾಟನೆ ಹಾಗೂ ಕುಂತೂರು ಗ್ರಾಮದಲ್ಲಿ 10 ಲಕ್ಷ ವೆಚ್ಚದಲ್ಲಿ ಅಂಬೇಡ್ಕರ್ ಭವನ ಮುಂದುವರೆದ ಕಾಮಗಾರಿಗಳಿಗೆ ಶಾಸಕರು ಗುದ್ದಲಿಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಶಾಸಕರು ಕ್ಷೇತ್ರದ ಜನತೆಯ ಆಶೀರ್ವಾದದಿಂದ ನಾನು ಶಾಸಕನಾಗಿ ಆಯ್ಕೆಯಾದ ಮೇಲೆ ಸರ್ಕಾರದಿಂದ ಮೊದಲ ಬಾರಿಗೆ 25 ಕೋಟಿ ಅನುದಾನವನ್ನು ತಂದು ಅದರಲ್ಲಿ ಕ್ಷೇತ್ರದ ಎಲ್ಲಾ ಸಮುದಾಯದ ಎಲ್ಲಾ ವರ್ಗದ ಸಮುದಾಯಗಳ ಅಪೂರ್ಣ ಹಂತದಲ್ಲಿದ್ದ ಸಮುದಾಯ ಭವನಗಳ ಮುಂದುವರಿದ ಕಾಮಗಾರಿಗೆ ನೀಡಲಾಗಿತ್ತು ಎಂದು ತಿಳಿಸಿದರು.
ಅಂಬೇಡ್ಕರ್ ಭವನ, ಬಸವ ಭವನ, ಭಗೀರಥ ಭವನ, ವಾಲ್ಮೀಕಿ ಭವನ, ಕನಕ ಭವನ,ಶಾಧಿ ಮಹಲ್, ಕ್ರಿಶ್ಚಿಯನ್ ಸಮುದಾಯ ಭವನ, ಮಡಿವಾಳ ಭವನ ಈಗೆ ಎಲ್ಲಾ ವರ್ಗದ ಭವನಗಳ ಮುಂದುವರಿದ ಕಾಮಗಾರಿಗಳಿಗೆ 20 ಲಕ್ಷ 30 ಲಕ್ಷ 50 ಲಕ್ಷ, ಒಂದು ಕೋಟಿ ವರೆಗೂ ಅನುದಾನವನ್ನು ಕೊಡಲಾಗಿದೆ, ಕ್ಷೇತ್ರದಲ್ಲಿ ಎಲ್ಲಾ ಸಮುದಾಯದ ಜನರು ನನಗೆ ಮತ ನೋಡಿ ನನ್ನ ಗೆಲುವಿಗೆ ಸಹಕರಿಸಿದ್ದಾರೆ ಎಂದು ಕೃತಜ್ಞತೆ ಸಲ್ಲಿಸಿದರು.
ಈಗ 50 ಕೋಟಿ ಅನುದಾನವನ್ನು ಕೊಟ್ಟು ಸರ್ಕಾರ ರಸ್ತೆ ಅಭಿವೃದ್ಧಿಗೆ ಬಳಸಿಕೊಳ್ಳಬೇಕು ಎಂದು ಆದೇಶವನ್ನು ನೀಡಿತ್ತು ಆದ್ದರಿಂದ ಲೋಕೋಪಯೋಗಿ ಇಲಾಖೆ, ಕೆ. ಆರ್. ಐ. ಡಿ. ಎಲ್, ಜಿಲ್ಲಾ ಪಂಚಾಯತ್ ಇಲಾಖೆಗಳಿಗೆ ಸಂಬಂಧ ಪಟ್ಟ ರಸ್ತೆಗಳು ಕ್ಷೇತ್ರದಲ್ಲಿ ಎಲ್ಲಾ ಗ್ರಾಮಗಳ ಎಲ್ಲಾ ಸಮುದಾಯದ ಬೀದಿಗಳಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ನೀಡಿ ಭೂಮಿ ಪೂಜೆಯನ್ನು ನೆರವೇರಿಸಲಾಗಿದೆ ಹಾಗೂ ಮುಡಿಗುಂಡ ಸೇತುವೆ ಹಳೆಯದಾಗಿದ್ದು ಪಕ್ಕದಲ್ಲಿ ಮತ್ತೊಂದು ಸೇತುವೆ ನಿರ್ಮಾಣ ಮಾಡಲು 15 ಕೋಟಿ ಅನುಮೋದನೆ ದೊರೆತಿದೆ ಎಂದು ಹೇಳಿದರು.
ಕೊಳ್ಳೇಗಾಲದಲ್ಲಿ 250 ಹಾಸಿಗೆಯ ಆಸ್ಪತ್ರೆ ನಿರ್ಮಾಣ ಮಾಡಲು ಮುಡಿಗುಂಡ ರೇಷ್ಮೆ ಇಲಾಖೆ ಜಾಗದಲ್ಲಿ ಸ್ಥಳ ನಿಗದಿ ಮಾಡಲಾಗಿದ್ದು ಸದ್ಯದಲ್ಲಿಯೇ ಮುಖ್ಯಮಂತ್ರಿಗಳಿಂದ ಕೊಳ್ಳೇಗಾಲದ ಅಂಬೇಡ್ಕರ್ ಸಮುದಾಯ ಉದ್ಘಾಟನೆ ಹಾಗೂ ಆಸ್ಪತ್ರೆ ನಿರ್ಮಾಣ ಮತ್ತು ಸೇತುವೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಲಾಗುವುದು ಎಂದು ಎ.ಆರ್.ಕೃಷ್ಣಮೂರ್ತಿ ಮಾಹಿತಿ ನೀಡಿದರು.
ಈ ಸಂಧರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಚಂದ್ರು, ತಾಲ್ಲೂಕು ಅಧ್ಯಕ್ಷ ರಾಜೇಂದ್ರ, ಯಳಂದೂರು ತಾಲ್ಲೂಕು ಅಧ್ಯಕ್ಷ ಪ್ರಭುಪ್ರಸಾದ್, ಉಪ್ಪಾರ ನಿಗಮ ಮಾಜಿ ರಾಜ್ಯಾಧ್ಯಕ್ಷ ಶಿವಕುಮಾರ್, ಕುಂತೂರು ಗ್ರಾ.ಪಂ ಅಧ್ಯಕ್ಷೆ ಗಂಗಮ್ಮಣಿ, ಉಪಾಧ್ಯಕ್ಷೆ ನಾಗರತ್ನಮ್ಮ, ಉಪ್ಪಾರ ಸಂಘದ ಅಧ್ಯಕ್ಷ ರಮೇಶ್, ತಾ.ಪಂ ಮಾಜಿ ಉಪಾಧ್ಯಕ್ಷ ಮಲ್ಲಣ್ಣ, ಮುಖಂಡರಾದ ತೋಟೇಶ್, ಚೇತನ್ ದೊರೆ, ತಾ.ಪಂ ಇಒ ಗುರುಶಾಂತಪ್ಪ ಬೆಳ್ಳುಂಡಗಿ, ನಿರ್ಮಿತಿ ಕೇಂದ್ರ ಉಪಯೋಜನಾ ವ್ಯವಸ್ಥಾಪಕ ಪ್ರತಾಪ್, ಗುತ್ತಿಗೆದಾರ ರಾಚಯ್ಯ ಮತ್ತಿತರರು ಹಾಜರಿದ್ದರು.




