ಬೆಳೆಗೆ ಔಷಧಿ ಸಿಂಪಡಿಸುವ ವೇಳೆ ವಿದ್ಯುತ್ ಸ್ಪರ್ಷಿಸಿ ತಾಯಿ ಮಗ ಸಾವು

ಹುಣಸೂರು: ಬೆಳೆಗೆ ಔಷಧಿ ಸಿಂಪಡಿಸುವ ವೇಳೆ ವಿದ್ಯುತ್ ಸ್ಪರ್ಷಿಸಿ ತಾಯಿ ಮಗ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಹುಣಸೂರು ತಾಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ತಾಯಿ ನೀಲಮ್ಮ ಮಗ ಹರೀಶ್ ಮೃತಪಟ್ಟ ದುರ್ದೈವಿಗಳು.

ತಾಯಿ ಮಗ ತಮ್ಮದೇ ಜಮೀನಿನಲ್ಲಿ ಬೆಳೆಗೆ ಔಷಧಿ ಸಿಂಪಡಿಸುತ್ತಿದ್ದರು.ಜಮೀನಿಗೆ ಹೊಂದಿಕೊಂಡಿರುವ ಸ್ಮಶಾನದಲ್ಲಿ ಹೈಟೆನ್ಷನ್ ವಿದ್ಯುತ್ ಸಂಪರ್ಕಕ್ಕೆ ಗ್ರೌಂಡಿಂಗ್ ಮಾಡಲಾಗಿದೆ.ಸ್ಮಶಾನಕ್ಕೆ ಅಳವಡಿಸಿರುವ ಬೇಲಿಗೆ ಗ್ರೌಂಡಿಂಗ್ ವೈರ್ ಸಂಪರ್ಕಿಸಿದೆ.

ಔಷಧಿ ಸಿಂಪಡಿಸುವ ವೇಳೆ ಬೇಲಿ ಬಳಿ ಬಂದಾಗ ನೀಲಮ್ಮಗೆ ವಿದ್ಯುತ್ ಸ್ಪರ್ಷಿಸಿದೆ.ತಾಯಿಯ ನೆರವಿಗೆ ಧಾವಿಸಿದ ಹರೀಶ್ ಗೂ ವಿದ್ಯುತ್ ಸ್ಪರ್ಷಿಸಿದೆ.ತಾಯಿ ಮಗ ಇಬ್ಬರೂ ಸಾವನ್ನಪ್ಪಿದ್ದಾರೆ.

ರಾತ್ರಿ 8 ಗಂಟೆ ಆದರೂ ತಾಯಿ ಮಗ ಮನೆಗೆ ಹಿಂದಿರುಗದ ಕಾರಣ ಮನೆಯವರು ಜಮೀನಿಗೆ ತೆರಳಿ ಪರಿಶೀಲಿಸಿದಾಗ ತಾಯಿ ಮಗನ ಮೃತದೇಹ ಕಂಡುಬಂದಿದೆ.

ಸ್ಥಳಕ್ಕೆ ವಿದ್ಯುತ್ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಬೆಳೆಗೆ ಔಷಧಿ ಸಿಂಪಡಿಸುವ ವೇಳೆ ವಿದ್ಯುತ್ ಸ್ಪರ್ಷಿಸಿ ತಾಯಿ ಮಗ ಸಾವು Read More

ಕುಡಿಯಲು ಹಣ ನೀಡದ ತಾಯಿಯ ಕೊಂದ ಮಗ

ಬೆಂಗಳೂರು: ಕುಡಿಯಲು ಹಣ ನೀಡದ್ದಕ್ಕೆ ಪಾಪಿ ಮಗ ಹೆತ್ತು,ಹೊತ್ತು ಸಾಕಿದ ತಾಯಿಯನ್ನೇ ಹತ್ಯೆ ಮಾಡಿದ ಅತ್ಯಂತ ಹೇಯ ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿದೆ.

ಕಬ್ಬಿಣದ ರಾಡ್​ನಿಂದ ತಲೆಗೆ ಹೊಡೆದು ಸಾಯಿಸಿದ ಮಗನನ್ನು ಬೆಂಗಳೂರಿನ ಬಾಗಲಗುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮುನೇಶ್ವರ ನಗರದ ಶಾಂತಾಬಾಯಿ (82)ತನ್ನದೇ ಮಗನಿಂದ ಕೊಲೆಯಾದ ದುರ್ದೈವಿ.

ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಆರೋಪಿ ಮಹೇಂದ್ರ ಸಿಂಗ್ (56)ಎಂಬಾತನನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗಿದೆ.

ಚನ್ನಪಟ್ಟಣದ ಮಹೇಂದ್ರ ಸಿಂಗ್, ಬಾಗಲಗುಂಟೆಯ ಮುನೇಶ್ವರ ನಗರದ ಮನೆಯೊಂದರಲ್ಲಿ ತಾಯಿ ಜೊತೆ ಐದು ವರ್ಷಗಳಿಂದ ವಾಸವಾಗಿದ್ದ.

ಮದ್ಯ ವ್ಯಸನಿಯಾಗಿದ್ದ ಈತ ಕೆಲಸಕ್ಕೂ ಹೋಗುತ್ತಿರಲಿಲ್ಲ, ಪತ್ನಿ ಸಹ ಈತನಿಂದ ದೂರವಾಗಿದ್ದರು.ಕುಡಿಯಲು ತಾಯಿ ಬಳಿ ಹಣ ಪಡೆಯುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಶಾಂತಾಬಾಯಿ ಅವರಿಗೆ ಪ್ರತಿ ತಿಂಗಳು ಪಿಂಚಣಿ ಹಣ ಬರುತಿತ್ತು. ಒಂದು ಮನೆಯ ಬಾಡಿಗೆ ಹಣವೂ ಬರುತಿತ್ತು.ಇದರಿಂದಲೇ ಶಾಂತಾಬಾಯಿ ಜೀವನ ಸಾಗಿಸುತ್ತಿದ್ದರು.

ಮಗ ಹಣಕ್ಕಾಗಿ ತಾಯಿಗೆ ಪೀಡಿಸುತ್ತಿದ್ದ. ಇದೇ ವಿಚಾರದಲ್ಲಿ ರಾತ್ರಿ ಇಬ್ಬರ ನಡುವೆ ಜಗಳವಾಗಿದೆ. ತಾಯಿ ಹಣ ನೀಡದ ಕಾರಣ ಮನೆಯಲ್ಲಿದ್ದ ಕಬ್ಬಿಣದ ರಾಡ್​​ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಕುಡಿಯಲು ಹಣ ನೀಡದ ತಾಯಿಯ ಕೊಂದ ಮಗ Read More

ಪ್ರಿಯತಮನಿಗಾಗಿ ಮಕ್ಕಳನ್ನೇ ಕೊಂದ ಪಾಪಿ ತಾಯಿ

ತೆಲಂಗಾಣ,ಏ.5: ಬಾಲ್ಯದ ಸ್ನೇಹಿತ ಪ್ರಿಯತಮ ನನ್ನು ಮದುವೆಯಾಗಲು ಇಚ್ಚಿಸಿದ ಪಾಪಿ ಮಹಿಳೆ ಅದಕ್ಕಾಗಿ ತನ್ನ ಮೂರು ಮಕ್ಕಳನ್ನು ಕೊಂದಿರುವ ಹೇಯ ಘಟನೆ ತೆಲಂಗಾಣದಲ್ಲಿ ನಡೆದಿದೆ.

ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಅಮೀನ್‌ಪುರ ಮಂಡಲದಲ್ಲಿ ಈ ಘಟನೆ ನಡೆದಿದೆ.

ಮಹಿಳೆಯೊಬ್ಬಳು ತನ್ನ ಹಳೆಯ ಸಂಬಂಧಕ್ಕೆ ಮಕ್ಕಳು ಅಡ್ಡಿಯಾಗಿದ್ದಾರೆ ಎಂದು ತಾನೇ ಹೆತ್ತ ಏನೂ ಅರಿಯದ ಮೂರು ಅಮಾಯಕ ಮಕ್ಕಳನ್ನು ಕೊಲೆ ಮಾಡಿದ್ದಾಳೆ.

ಮೃತರನ್ನು ಸಾಯಿಕೃಷ್ಣ (12), ಮಧುಪ್ರಿಯಾ (10), ಗೌತಮ್ (8) ಎಂದು ಗುರುತಿಸಲಾಗಿದೆ.

ಮಾರ್ಚ್ 27 ರಂದು ಈ ಘನಘೋರ ಹತ್ಯೆ ನಡೆದಿದ್ದು,ತಡವಾಗಿ ಬೆಳಕಿಗೆ ಬಂದಿದೆ.

ಪೊಲೀಸರು ಈ ನಿಗೂಢ ಕೊಲೆ ಪ್ರಕರಣವನ್ನು ಭೇದಿಸಿ ಆರೋಪಿ ರಜಿತಾ ಅಲಿಯಾಸ್ ಲಾವಣ್ಯ ಮತ್ತು ಆಕೆಯ ಪ್ರಿಯಕರ ಶಿವಕುಮಾರ್ ನನ್ನು ಹೆಡೆಮುರಿ ಕಟ್ಟಿದ್ದಾರೆ.

ರಜಿತಾ ಅಲಿಯಾಸ್ ಲಾವಣ್ಯ 2013 ರಲ್ಲಿ ಬೀರಂಗುಡದ ರಾಘವೇಂದ್ರನಗರ ಕಾಲೋನಿಯ ನಿವಾಸಿ ಅವುರಿಚಿಂತಲ ಚೆನ್ನಯ್ಯ ಅವರನ್ನು ವಿವಾಹವಾಗಿದ್ದಳು.

ಚೆನ್ನಯ್ಯ ಲಾವಣ್ಯಗಿಂತ 20 ವರ್ಷ ದೊಡ್ಡವನಾಗಿದ್ದ. ರಜಿತಾ ಖಾಸಗಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಳು. ಚೆನ್ನಯ್ಯ ನೀರಿನ ಟ್ಯಾಂಕರ್ ಚಾಲಕ.

ರಜಿತಾ ಜೊತೆಯವರೆಲ್ಲ ಸೇರಿ ಸಹಪಾಠಿಗಳು ಪರಸ್ಪರ ಸಂಪರ್ಕಕ್ಕೆ ಬಂದು ಪರಸ್ಪರ ಭೇಟಿಯಾಗಲು ನಿರ್ಧರಿಸಿ ಅದಕ್ಕಾಗಿ ಒಂದು ಗೆಟ್-ಟುಗೆದರ್ ಆಯೋಜಿಸಿದರು.

ಈ ಕಾರ್ಯಕ್ರಮಕ್ಕೆ ರಜಿತಾ ಕೂಡ ಹೋಗಿದ್ದಳು. ಅದೇ ಕಾರ್ಯಕ್ರಮದಲ್ಲಿ ಆಕೆಯ ಬಾಲ್ಯದ ಸ್ನೇಹಿತ ಹಾಗೂ ಸಹಪಾಠಿ ಶಿವಕುಮಾರ್ ನನ್ನು ಭೇಟಿಯಾಗಿದ್ದಾಳೆ. ಈ ಶಿವಕುಮಾರ್ ನಲ್ಗೊಂಡ ಜಿಲ್ಲೆಯ ಗೋಡುಕೊಂಡದ ನಿವಾಸಿ.

ಅಲ್ಲಿಂದ ಇಬ್ಬರೂ ಪರಸ್ಪರ ಮೊಬೈಲ್ ಸಂಖ್ಯೆ ವಿನಿಮಯ ಮಾಡಿಕೊಂಡು, ಫೋನ್ ನಲ್ಲಿ ಮಾತನಾಡುವುದರಿಂದ ಆರಂಭವಾದ ಇವರ ಸಂಪರ್ಕ ನಂತರ ವಿಡಿಯೋ ಕಾಲ್ ವರೆಗೂ ಮುಂದುವರೆದಿತ್ತು. ಮೊದಲೇ ತನ್ನ 20 ವರ್ಷದ ಹಿರಿಯ ಗಂಡನನ್ನು ಕಂಡರೆ ಇಷ್ಟವಿಲ್ಲದ ರಜಿತಾ ಕ್ರಮೇಣ ಶಿವಕುಮಾರ್ ಗೆ ಹತ್ತಿರವಾದಳು. ಇದೇ ವಿಚಾರವಾಗಿ ಆಗಾಗ ತನ್ನ ಗಂಡ ಚೆನ್ನಯ್ಯ ಜೊತೆ ಜಗಳ ಕೂಡ ಮಾಡುತ್ತಿದ್ದಳು.

ಇದೇ ಸಂದರ್ಭದಲ್ಲಿ ಶಿವಕುಮಾರ್ ನನ್ನು ರಜಿತಾ ಮದುವೆಯಾಗುವಂತೆ ಕೇಳಿದ್ದಾಳೆ ಈ ವೇಳೆ ಶಿವಕುಮಾರ್ ನೀನು ನಿನ್ನ ಗಂಡ ಮತ್ತು ಮಕ್ಕಳನ್ನು ಬಿಟ್ಟು ಬಂದರೆ ನಾನು ನಿನ್ನನು ಮದುವೆಯಾಗುತ್ತೇನೆ ಎಂದು ಹೇಳಿದ್ದಾನೆ, ಇದಕ್ಕೆ ರಜಿತಾ ನಮ್ಮ ಮದುವೆಗೆ ಮಕ್ಕಳು ಅಡ್ಡಿಯಾದರೇ ಅವರನ್ನು ಮುಗಿಸುತ್ತೇನೆ ಎಂದು ಹೇಳಿದ್ದಾಳೆ.

ಇದಕ್ಕೆ ಶಿವಕುಮಾರ್ ಕೂಡ ಒಪ್ಪಿಗೆ ಸೂಚಿಸಿ ಮಾರ್ಚ್ 27ರಂದು ಮಕ್ಕಳ ಕೊಲ್ಲಲು ಸಂಚು ರೂಪಿಸಿದ್ದ. ಅದರಂತೆ ಮಾರ್ಚ್ 27 ರ ಸಂಜೆ ಚೆನ್ನಯ್ಯ ಮನೆಯಿಂದ ಕೆಲಸಕ್ಕೆ ಹೊರಗಡೆ ಹೋದಾಗ ರಜಿತಾ ತನ್ನ ಮೂರು ಮಕ್ಕಳನ್ನು ಉಸಿರುಗಟ್ಟಿಸಿ ಕೊಂದುಬಿಟ್ಟಿದ್ದಾಳೆ.

ಕೊಲೆ ಪ್ರಕರಣವನ್ನು ಮುಚ್ಚಿಹಾಕಲು ರಜಿತಾ ದೊಡ್ಡ ನಾಟಕ ರಚಿಸಿದ್ದಳು. ಕೆಲಸಕ್ಕೆ ಹೋದ ತನ್ನ ಗಂಡ ಮನೆಗೆ ಬರುತ್ತಲೇ ತನಗೆ ಅತೀವ ಹೊಟ್ಟೆ ನೋವು,ರಾತ್ರಿ ಕಬ್ಬು ತಿಂದ ಬಳಿಕ ತೀವ್ರ ಹೊಟ್ಟೆನೋವು ಬಂದಿದೆ ಎಂದು ಹೇಳಿದ್ದಾಳೆ.

ಹೆಂಡತಿಯ ನೋವಿನ ಯಾತನೆ ನೋಡಿದ ಗಂಡ ಚೆನ್ನಯ್ಯ ಆತಂಕಗೊಂಡು ಮಕ್ಕಳು ಮಲಗಿದ್ದಾರೆ ಎಂದು ಭಾವಿಸಿ ಮೊದಲು ರಜಿತಾಳನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾನೆ. ಆಸ್ಪತ್ರೆಯಲ್ಲಿ ರಜಿತಾಳನ್ನು ದಾಖಲಿಸಿ ಬಳಿಕ ಮನೆಗೆ ಬಂದು ಮಕ್ಕಳನ್ನು ನೋಡಿದಾಗ ಅವರು ಸಾವನ್ನಪ್ಪಿರುವುದು ತಿಳಿದಿದೆ. ಕೂಡಲೇ ಚೆನ್ನಯ್ಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕೊಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಾವಿಗೀಡಾದ ಮಕ್ಕಳ ತಂದೆ ಚೆನ್ನಯ್ಯ ಮತ್ತು ತಾಯಿ ರಜಿತಾಳ ಮೊಬೈಲ್ ಸಂಖ್ಯೆಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ ರಜಿತಾಳ ಮೊಬೈಲ್ ನಿಂದ ಒಂದು ಸಂಖ್ಯೆಗೆ ಹೆಚ್ಚು ಬಾರಿ ಕರೆಗಳು ಹೋಗಿದ್ದು, ಈ ಕರೆಗಳನ್ನು ಪರಿಶಿಲೀಸಿ ಅನುಮಾನಗೊಂಡು ರಜಿತಾಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ರಜಿತಾ ಪೊಲೀಸರ ತನಿಖೆ ವೇಳೆ ನಡೆದ ವಿಚಾರ ಬಾಯಿ ಬಿಟ್ಟಿದ್ದು, ಬಳಿಕ ಆಕೆಯ ಪ್ರಿಯಕರ ಶಿವಕುಮಾರ್ ನನ್ನು ಕೂಡ ಬಂಧಿಸಿದ್ದಾರೆ ಎಂದು ಸಂಗಾರೆಡ್ಡಿ ಎಸ್ಪಿ ಪರಿತೋಷ್ ಪಂಕಜ್ ತಿಳಿಸಿದ್ದಾರೆ.

ಪ್ರಿಯತಮನಿಗಾಗಿ ಮಕ್ಕಳನ್ನೇ ಕೊಂದ ಪಾಪಿ ತಾಯಿ Read More

ತಂದೆ,ತಾಯಿಯನ್ನ ಕೊಂದ ನೀಚ ಪುತ್ರ

ಪುಣೆ: ಚೆನ್ನಾಗಿ ಓದಿ ಪರೀಕ್ಷೆ ಪಾಸು ಮಾಡಿ ಮುಂದಕ್ಕೆ ಬಾ ಎಂದು ಬುದ್ದಿ ಮಾತು ಹೇಳಿದ ತಂದೆ,ತಾಯಿಯನ್ನೇ ನೀಚ ಮಗ ಹಣದ

ಇಂಜಿನಿಯರಿಂಗ್ ಎಕ್ಸಾಂನಲ್ಲಿ ಫೇಲ್ ಆಗಿದ್ದ ಮಗನಿಗೆ ಚೆನ್ನಾಗಿ ಓದಿ ಮುಂದೆ ಬಾ ಎಂದು ಬುದ್ದಿ ಹೇಳಿದ್ದಕ್ಕೆ ಕೋಪಗೊಂಡ ಮಗ ತಂದೆ ತಾಯಿಯನ್ನೆ ಕೊಲೆ ಮಡಿರುವ ಅತ್ಯಂತ ಹೇಯ ಘಟನೆಮಹಾರಾಷ್ಟ್ರದ ನಾಗುರದಲ್ಲಿ
ನಡೆದಿದೆ.

ಲೀಲಾತ್ಕರ್ ದಾಕೋಲೆ ಹಾಗೂ ಅರುಣಾ ದಾಕೋಲೆ ಮಗನಿಂದ ಕೊಲೆಯಾದ ತಂದೆ,ತಾಯಿ.

ಡಿ.26 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮಗ ಉತ್ಕರ್ಶ್ ದಾಕೋಲೆ ಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಉತ್ಕರ್ಶ್ ಕೆಲವು ಸಭೆಕ್ಟ್ ನಲ್ಲಿ ಫೇಲ್ ಆಗಿದ್ದ. ಚೆನ್ನಾಗಿ ಓದುವಂತೆ ಪೋಷಕರು ಹೇಳುತ್ತಿದ್ದರು.ಜತೆಗೆ ಮಗ ಓದುತ್ತಿರುವ ಕಾಲೇಜು ಬದಲಾವಣೆ ಮಾಡುವಂತೆ ಸೂಚಿಸಿದ್ದರು. ಇದಕ್ಕೆ ಕೋಪಗೊಂಡಿದ್ದ ಉತ್ಕರ್ಶ್ ಚಾಕುವಿನಿಂದ ಇರಿದು ಅಪ್ಪ ಹಾಗೂ ಅಮ್ಮನನ್ನು ಕೊಲೆ ಮಾಡಿದ.

ತಂಗಿಯನ್ನ ಸಂಬಂಧಿಕರ ಮನೆಗೆ ಕಳುಹಿಸಿ,ಅಒ್ಪ,ಅಮ್ಮ ಮೆಡಿಟೇಶನ್ ತರಬೇತಿಗೆ ಬೇರೆಕಡೆ ಹೋಗಿದ್ದಾರೆ ಎಂದು ಹೇಳುದ್ದ.

ಆದರೆ ಒಂದೆರಡು ದಿನದಲ್ಲಿ ಮನೆಯಿಂದ ಕೆಟ್ಟ ವಾಸನೆ ಬರುತ್ತಿದ್ದರಿಂದ ಅನುಮಾನಗೊಂಡು ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಪೊಲೀಸರು ಸ್ಥಳಕ್ಕೆ‌ ಬಂದಾಗ ಕೊಲೆ ವಿಷಯ ಬೆಳಕಿಗೆ ಬಂದಿದೆ‌.

ತಂದೆ,ತಾಯಿಯನ್ನ ಕೊಂದ ನೀಚ ಪುತ್ರ Read More