ಮುಡಾ ಕೇಸ್ ಸಿಬಿಐಗೆ ವಹಿಸಲು ಕೋರ್ಟ್ ನಿರಾಕರಣೆ :ಸತ್ಯಕ್ಕೆ ಸಿಕ್ಕ ಜಯ- ತೇಜಸ್ವಿ

ಮೈಸೂರು:ಧಾರವಾಡ ಹೈಕೋರ್ಟ್ ಮುಡಾ ಕೇಸನ್ನು ಸಿಬಿಐ ತನಿಖೆಗೆ ವಹಿಸಲು ನಿರಾಕರಿಸಿರುವುದು ಸತ್ಯಕ್ಕೆ ಜಯ ಸಿಕ್ಕಿದಂತಾಗಿದೆ ಎಂದು
ಕೃಷ್ಣ ರಾಜ ಕ್ಷೇತ್ರದ ಯುವ ಕಾಂಗ್ರೆಸ್ ಮುಖಂಡ ತೇಜಸ್ವಿ ನಾಗಲಿಂಗ ಸ್ವಾಮಿ ತಿಳಿಸಿದ್ದಾರೆ.

ಸುಮಾರು 40 ವರ್ಷದ ರಾಜಕಾರಣದ ಇತಿಹಾಸದಲ್ಲಿ ಸಿದ್ದರಾಮಯ್ಯನವರು ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಆಡಳಿತ ನಡೆಸಿಕೊಂಡು ಬಂದಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಗಳಾಗಿ, ಉಪಮುಖ್ಯಮಂತ್ರಿಗಳಾಗಿ, ಸಚಿವರಾಗಿ ರಾಜ್ಯಕ್ಕೆ ಮತ್ತು ವಿಶೇಷವಾಗಿ ಮೈಸೂರಿಗೆ ಗಣನೀಯ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ.

ಇಂತಹ ಧೀಮಂತ ನಾಯಕನ ವಿರುದ್ಧ ಬಿಜೆಪಿಯವರು ಮತ್ತು ಕಾಣದ ಕೈಗಳು ಎಷ್ಟೆ ಷಡ್ಯಂತ್ರ ಮಾಡಿದರೂ ಸತ್ಯಕ್ಕೆ ಜಯವಾಗಲಿದೆ ಎಂಬುದಕ್ಕೆ ಧಾರವಾಡ ಹೈಕೋರ್ಟ್ ತೀರ್ಪು ಸಾಕ್ಷಿ ಎಂದು ತೇಜಸ್ವಿ ನಾಗಲಿಂಗಸ್ವಾಮಿ ತಿಳಿಸಿದ್ದಾರೆ.

ಮುಡಾ ಕೇಸ್ ಸಿಬಿಐಗೆ ವಹಿಸಲು ಕೋರ್ಟ್ ನಿರಾಕರಣೆ :ಸತ್ಯಕ್ಕೆ ಸಿಕ್ಕ ಜಯ- ತೇಜಸ್ವಿ Read More

ಮುಡಾ ಕೇಸ್ ಸಿಬಿಐಗೆ ವಹಿಸಲು ನಿರಾಕರಣೆ:ಸತ್ಯಕ್ಕೆ ಸಂದ ಜಯ-ನಜರ್ ಬಾದ್ ನಟರಾಜ್

ಮೈಸೂರು: ಧಾರವಾಡ ಹೈಕೋರ್ಟ್ ಮುಡಾ ಕೇಸನ್ನು ಸಿಬಿಐ ತನಿಖೆಗೆ ವಹಿಸಲು ನಿರಾಕರಿಸಿರುವುದು ಸತ್ಯಕ್ಕೆ ಜಯ ಸಿಕ್ಕಿದಂತಾಗಿದೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಕೆಪಿಸಿಸಿ ಸದಸ್ಯ ನಜರಬಾದ್ ನಟರಾಜ್ ಸಂತಸ ವ್ಯಕ್ತಪಡಿಸಿದ್ದಾರೆ.

ಸುಮಾರು 40 ವರ್ಷದ ರಾಜಕಾರಣದ ಇತಿಹಾಸದಲ್ಲಿ ಸಿದ್ದರಾಮಯ್ಯನವರು ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಆಡಳಿತ ನಡೆಸಿಕೊಂಡು ಬಂದಿದ್ದಾರೆ. ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಗಳಾಗಿ, ಉಪಮುಖ್ಯಮಂತ್ರಿಗಳಾಗಿ, ಸಚಿವರಾಗಿ ರಾಜ್ಯಕ್ಕೆ ಮತ್ತು ವಿಶೇಷವಾಗಿ ಮೈಸೂರಿಗೆ ಗಣನೀಯ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ, ಇಂತಹ ಧೀಮಂತ ನಾಯಕನ ವಿರುದ್ಧ ಬಿಜೆಪಿಯವರು ಮತ್ತು ಕಾಣದ ಕೈಗಳು ಏನೇ ಪಿತೂರಿ ಮಾಡಿದರೂ ಕೊನೆಗೆ ಸತ್ಯಕ್ಕೆ ಜಯವಾಗಲಿದೆ ಇದಕ್ಕೆ ಪ್ರತ್ಯಕ್ಷ ಸಾಕ್ಷಿ ಧಾರವಾಡ ಹೈಕೋರ್ಟ್ ತೀರ್ಪು ಎಂದು ನಜರಬಾದ್ ನಟರಾಜ್ ಹೇಳಿದ್ದಾರೆ.

ಸಿಬಿಐ ತನಿಖೆ ಕೋರಿ ಸಲ್ಲಿಸುದ್ದ ಅರ್ಜಿ ವಜಾ ಮಾಡಿರುವುದು ಮತ್ತು ಲೋಕಾಯುಕ್ತ ತನಿಖಾ ಸಂಸ್ಥೆಯು ಸಿದ್ಧರಾಮಯ್ಯ ಅವರ ವಿರುದ್ಧ ಪಕ್ಷಾತೀತವಾಗಿ ತನಿಖೆ ನಡೆಸಿದೆ ಅದರಲ್ಲಿ ಯಾವುದೇ ಪ್ರಭಾವ ಇಲ್ಲ ಎಂದು ಹೇಳಿರುವುದು ಸತ್ಯವನ್ನು ಎತ್ತಿ ಹಿಡಿಯುವಂತಿದೆ ಎಂದು ನಜರಬಾದ್ ನಟರಾಜ್ ತಿಳಿಸಿದ್ದಾರೆ.

ಮುಡಾ ಕೇಸ್ ಸಿಬಿಐಗೆ ವಹಿಸಲು ನಿರಾಕರಣೆ:ಸತ್ಯಕ್ಕೆ ಸಂದ ಜಯ-ನಜರ್ ಬಾದ್ ನಟರಾಜ್ Read More

ಮುಡಾ ಕೇಸು ಸಿಬಿಐ ತನಿಖೆಗೆ ವಹಿಸಲು ಕೋರ್ಟ್‌ ನಿರಾಕರಣೆ: ಸಿದ್ದುಗೆ ಬಿಗ್‌ ರಿಲೀಫ್‌

ಧಾರವಾಡ: ಮುಡಾ ಕೇಸನ್ನು ಸಿಬಿಐ ತನಿಖೆಗೆ ವಹಿಸಲು ಧಾರವಾಡ ಹೈಕೋರ್ಟ್‌ ನಿರಾಕರಿಸಿದ್ದು,ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ.

ಸಧ್ಯಕ್ಕೆ ಸಿಎಂ ಸಿದ್ದರಾಮಯ್ಯ ಸಿಬಿಐ ತನಿಖೆಯಿಂದ ಪಾರಾಗಿದ್ದಾರೆ.

ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಶುಕ್ರವಾರ ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ಅರ್ಜಿ ವಜಾ ಮಾಡಿದೆ. ಸ್ನೇಹಮಯಿ ಕೃಷ್ಣ ಪರ ಮಣಿಂದರಸಿಂಗ್ ವಾದ ಮಂಡಿಸಿದ್ದರು.

ಲೋಕಾಯುಕ್ತ ಸ್ವತಂತ್ರ ತನಿಖಾ ಸಂಸ್ಥೆ ಅಲ್ಲ ಎಂದು ಹೇಳಲು ಆಗುವುದಿಲ್ಲ, ಲೋಕಾಯುಕ್ತ ಪೊಲೀಸ್ ತನಿಖೆಯಲ್ಲಿ ತಾರತಮ್ಯ ಇದೆ‌ ಎಂದು ಹೇಳಲು ಆಧಾರ ಇಲ್ಲ,ಅದೊಂದು ಸ್ವತಂತ್ರ ತನಿಖಾ ಸಂಸ್ಥೆ. ಲೋಕಾ ತನಿಖೆ ಅಸಮರ್ಪಕ ಅಲ್ಲ ಎಂದು ಹೇಳಲು ಆಗಲ್ಲ. ಹೀಗಾಗಿ, ಸಿಬಿಐಗೆ ಇದನ್ನ ಕೊಡಲು ಹೈಕೋರ್ಟ್‌ ನಿರಾಕರಿಸಿದೆ.

ಸಿದ್ದರಾಮಯ್ಯ ಅವರ ವಿರುದ್ಧ ಲೋಕಾಯುಕ್ತ ತನಿಖೆ ಪಕ್ಷಾತೀತ, ನಿಷ್ಪಕ್ಷಪಾತ ಅಥವಾ ಸಿಬಿಐ ತನಿಖೆಗೆ ನಿರ್ದೇಶಿಸಲು ಕಳಪೆಯಾಗಿದೆ ಎಂದು ದಾಖಲೆಯಲ್ಲಿರುವ ವಸ್ತು ವಿಷಯ ಸೂಚಿಸುವುದಿಲ್ಲ. ಪರಿಣಾಮವಾಗಿ ಸಿಬಿಐ ತನಿಖೆಯ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ಏಕಸದಸ್ಯ ಪೀಠದ ನ್ಯಾಯಾಧೀಶರು ಸ್ಪಷ್ಟಪಡಿಸಿದ್ದಾರೆ.

ಮುಡಾ ಕೇಸು ಸಿಬಿಐ ತನಿಖೆಗೆ ವಹಿಸಲು ಕೋರ್ಟ್‌ ನಿರಾಕರಣೆ: ಸಿದ್ದುಗೆ ಬಿಗ್‌ ರಿಲೀಫ್‌ Read More