ಆರೋಗ್ಯಯುತ ಜೀವನಕ್ಕೆ ಆಯುರ್ವೇದ ಅಗತ್ಯ: ಡಾ. ಚಂದ್ರಶೇಖರ್

ಮೈಸೂರು: ಒತ್ತಡದ ಜೀವನದಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗ, ಧ್ಯಾನ, ಆಯುರ್ವೇದ ಆಹಾರ ಕ್ರಮಗಳು ಪ್ರಸ್ತುತ ದಿನಗಳಲ್ಲಿ ಅಗತ್ಯವಾಗಿವೆ ಎಂದು
ಆಯುರ್ವೇದ ಹಿರಿಯ ವೈದ್ಯರಾದ ಡಾ. ಚಂದ್ರಶೇಖರ್ ಹೇಳಿದರು.

ನಗರದ ಚಾಮುಂಡಿಪುರಂನಲ್ಲಿ ಅಪೂರ್ವ ಸ್ನೇಹ ಬಳಗದ ವತಿಯಿಂದ
ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಅಂಗವಾಗಿ ಸಾರ್ವಜನಿಕರಿಗೆ ಆಯುರ್ವೇದ ಗಿಡಗಳನ್ನು ವಿತರಿಸಿ, ಆಯುರ್ವೇದದಿಂದ ಆಗುವ ಉಪಯೋಗಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಆಯುರ್ವೇದ ವೈದ್ಯ ಪದ್ಧತಿ ಕಾಯಿಲೆ ಗುಣಪಡಿಸುವ ಜತೆಗೆ ಆರೋಗ್ಯಯುತ ಜೀವನ ನಡೆಸುವ ಕ್ರಮವನ್ನು ಕಲಿಸುತ್ತದೆ,ಆಯುರ್ವೇದದ ಬಗ್ಗೆ ಜನರಿಗೆ ತಿಳುವಳಿಕೆ ಬರಲು ಹೆಚ್ಚಿನ ಪ್ರಚಾರದ ಅಗತ್ಯ ಇದೆ ಎಂದು ಡಾ.ಚಂದ್ರಶೇಖರ ತಿಳಿಸಿದರು.

ಮಾಜಿ ಮಹಾಪೌರರಾದ ಸಂದೇಶ ಸ್ವಾಮಿ ಅವರು ಮಾತನಾಡಿ, ಆರೋಗ್ಯಕ್ಕಾಗಿ ಆಸ್ಪತ್ರೆಗಳನ್ನು ಅವಲಂಬಿಸಬಾರದು. ಅಡುಗೆ ಮನೆಯ ಸಾಂಬಾರ ಬಟ್ಟಲಿನಲ್ಲಿ ಆರೋಗ್ಯ ಕಾಯುವ ಪದಾರ್ಥಗಳಿರುತ್ತವೆ. ಅವುಗಳ ಸರಿಯಾದ ಸೇವನೆಯ ಮಹತ್ವ ಅರಿಯಬೇಕು ಎಂದು ಸಲಹೆ ನೀಡಿದರು.

ಆಯುರ್ವೇದ ಸಸ್ಯಗಳ ಬಳಕೆಯಿಂದ ದೀರ್ಘಾವಧಿ ಕಾಯಿಲೆಗಳಿಗೆ ತುತ್ತಾಗುವುದನ್ನು ತಡೆಯ ಬಹುದು. ಹೀಗಾಗಿ ಜನಸಾಮಾನ್ಯರಿಗೆ ದಿನ ನಿತ್ಯ ಉಪಯೋಗಕ್ಕೆ ಬರುವ ಗಿಡಮೂಲಿಕೆ ಗಳ ಬಗ್ಗೆ ಅರಿವು ಮೂಡಿಸಬೇಕಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಕಾರ್ಯಕ್ರಮಗಳು ಅಗತ್ಯವಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ
ಆಯುರ್ವೇದ ಸಸ್ಯಗಳಾದ ಅಮೃತ ಬಳ್ಳಿ, ಕೃಷ್ಣ ತುಳಸಿ, ರಾಮ ತುಳಸಿ, ಬೆಟ್ಟದ ನೆಲ್ಲಿಕಾಯಿ, ದೊಡ್ಡಿಪತ್ರೆ, ಅಗಸೆ ಗಿಡ, ನೇರಳೆ ಗಿಡ, ಬೇವಿನ ಗಿಡ, ಅರಿಶಿನ ಗಿಡ ಸೇರಿದಂತೆ ಇನ್ನಿತರ ಗಿಡ ಗಳನ್ನು ವಿತರಣೆ ಮಾಡಲಾಯಿತು

ಕಾರ್ಯಕ್ರಮದಲ್ಲಿ ಮೈಸೂರು ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೇಬಲ್ ಮಹೇಶ್, ನಗರ ಪಾಲಿಕೆ ಮಾಜಿ ಸದಸ್ಯರಾದ ಜಗದೀಶ್, ಅಪೂರ್ವ ಸ್ನೇಹ ಬಳಗದ ಅಧ್ಯಕ್ಷರಾದ ಅಪೂರ್ವ ಸುರೇಶ್, ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಖಜಾಂಚಿ ನಾಗರಾಜ್, ಉದ್ಯಮಿ ಜಯರಾಮ್,ಕೆ ಎಸ್ ವಿಶ್ವನಾಥ್,ದೂರ ರಾಜಣ್ಣ, ಸುಚಿಂದ್ರ ಆನಂದ, ಪುರುಷೋತ್ತಮ್, ಜತ್ತಿ ಪ್ರಸಾದ್, ಆದರ್ಶ್, ಮತ್ತಿತರರು ಹಾಜರಿದ್ದರು.

ಆರೋಗ್ಯಯುತ ಜೀವನಕ್ಕೆ ಆಯುರ್ವೇದ ಅಗತ್ಯ: ಡಾ. ಚಂದ್ರಶೇಖರ್ Read More

ಬೇಡಿಕೆ ಈಡೇರಿಕೆಗೆ ಚಳವಳಿ ಪ್ರಾರಂಭಿಸಿದ ವಾಟಾಳ್

ಮೈಸೂರು: ಕನ್ನಡ ಚಳವಳಿ ಪಕ್ಷದ ಅಧ್ಯಕ್ಷ ವಾಟಳ್ ನಾಗರಾಜ್ ಅವರು ಬೆಂಗಳೂರಿನಿಂದ ಮೈಸೂರಿನವರೆಗೂ ತೆಂಗಿನ ಕಾಯಿ ಈಡುಗಾಯಿ ಹೊಡೆಯುವ ಮೂಲಕ ವಿನೂತನ ಚಳುವಳಿಯನ್ನು ಹಮ್ಮಿಕೊಂಡಿದ್ದಾರೆ.

ಅದರ ಅಂಗವಾಗಿ ಶನಿವಾರ ಸಂಜೆ ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ತೆಂಗಿನಕಾಯಿಗಳನ್ನು ಈಡುಗಾಯಿ ಹೊಡೆಯುವ ಮುಖಾಂತರ ರಾಜ್ಯ ಸರ್ಕಾರ ಕರ್ನಾಟಕದ ಕನ್ನಡಿಗರ ಸಮಗ್ರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿನೂತನ ಚಳುವಳಿಯನ್ನು ಆರಂಭಿಸಿದರು.

ಈ ಚಳವಳಿಯಲ್ಲಿ ಕನ್ನಡ ಹೋರಾಟಗಾರರಾದ ಶಿವಶಂಕರ್, ಕರ್ನಾಟಕ ಸೇನಾ ಪಡೆ ಅಧ್ಯಕ್ಷ ತೇಜೇಶ್ ಲೋಕೇಶ್ ಗೌಡ, ಮೂಗೂರು ನಂಜುಂಡಸ್ವಾಮಿ, ಪಾರ್ಥಸಾರಥಿ, ರಾಘವೇಂದ್ರ, ಜಿಯಾ, ಮಧುವನ ಚಂದ್ರು, ನೇಹಾ, ವರಕೂಡು ಕೃಷ್ಣೆಗೌಡ, ಪ್ರಭುಶಂಕರ, ಬಸವರಾಜು, ಹನುಮಂತಯ್ಯ ರಘು ಅರಸ್, ರವೀಶ್ ಪ್ರಭಾಕರ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಈ ವೇಳೆ ವಾಟಾಳ್ ಸೇರಿದಂತೆ ಎಲ್ಲರೂ ಸಮಸ್ತ ಕನ್ನಡಿಗರ‌ ಬೇಡಿಕೆ ಈಡೇರಬೇಕು,ಮಹದಾಯಿ,ಯೋಜನೆ,ಮೇಕೆದಾಟು‌ ಯೋಜನೆ,ಕಳಸಾಬಂಡೂರಿ ಯೋಜನೆ ಆಗಲೇಬೇಕು,ವಾಟಾಳ್ ನಾಗರಾಜ್ ಅವರ ಚಳವಳಿ ಯಶಸ್ವಿಯಾಗಲಿ ಎಂಬ ಘೋಷಣೆಗಳನ್ನು ಕೂಗಿದರು.

ಬೇಡಿಕೆ ಈಡೇರಿಕೆಗೆ ಚಳವಳಿ ಪ್ರಾರಂಭಿಸಿದ ವಾಟಾಳ್ Read More