ನಂದಿನಿಯ ಬೆಣ್ಣೆ,ತುಪ್ಪದ ಬೆಲೆ ಸೋಮವಾರದಿಂದ ಇಳಿಕೆ

ಬೆಂಗಳೂರು: ಜಿಎಸ್‌ಟಿ ಪರಿಷ್ಕರಣೆಯಾದ ಹಿನ್ನೆಲೆಯಲ್ಲಿ ಸೆ.22 ರಿಂದ ನಂದಿನಿಯ ಕೆಲ ಉತ್ಪನ್ನಗಳ ದರ ಇಳಿಕೆಯಾಗಲಿದೆ.

ಬೆಣ್ಣೆ, ತುಪ್ಪ, ಚೀಸ್ ಮೇಲೆ ಮೊದಲು ಶೇ‌ 12 ರಷ್ಟು ತೆರಿಗೆ ವಿಧಿಸಲಾಗುತ್ತಿತ್ತು. ಆದರೆ ಈ ತೆರಿಗೆಯನ್ನು 5 ಕ್ಕೆ ಇಳಿಸಿದ್ದರಿಂದ ಈ ಉತ್ಪನ್ನಗಳ ಬೆಲೆ ಇಳಿಕೆಯಾಗಲಿದೆ.

ಪನ್ನಿರ್ ಮತ್ತು ಯುಹೆಚ್‌ಟಿ ಹಾಲಿಗೆ(ಗುಡ್ ಲೈಫ್) ಮೊದಲು 5% ರಷ್ಟು ಜಿಎಸ್‌ಟಿ ವಿಧಿಸಲಾಗುತ್ತಿತ್ತು. ಆದರೆ ಈಗ ಈ ಉತ್ಪನ್ನಗಳ ಮೇಲೆ ಶೂನ್ಯ ತೆರಿಗೆ ಹಾಕಲಾಗುತ್ತದೆ.ಆದ್ದರಿಂದ ಈ ವಸ್ತುಗಳ ಬೆಲೆ ಇಳಿಕೆಯಾಗುತ್ತಿದೆ.

ಹಾಲು, ಮೊಸರು ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಹಾಲಿಗೆ ಜಿಎಸ್‌ಟಿ ಇಲ್ಲ, ಮೊಸರಿಗೆ 5% ರಷ್ಟು ಜಿಎಸ್‌ಟಿ ವಿಧಿಸಲಾಗುತ್ತಿದೆ. ಹೀಗಾಗಿ ಈ ಎರಡೂ ಉತ್ಪನ್ನಗಳ ಬೆಲೆ ಈಗಿನ ದರವೇ ಮುಂದುವರಿಯಲಿದೆ.

ಶೀಘ್ರದಲ್ಲೇ ಈ ಕುರಿತು ಕೆಎಂಎಫ್ ಪ್ರಕಟಣೆ ಹೊರಡಿಸಲಿದೆ.

ನಂದಿನಿಯ ಬೆಣ್ಣೆ,ತುಪ್ಪದ ಬೆಲೆ ಸೋಮವಾರದಿಂದ ಇಳಿಕೆ Read More

ನಂದಿನಿ ವೇ ಪ್ರೋಟಿನ್ ಆಧಾರಿತ ಇಡ್ಲಿ, ದೋಸೆ ಹಿಟ್ಟು ಬಿಡುಗಡೆ

ಬೆಂಗಳೂರು: ನಂದಿನಿಯಿಂದ ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲಾಗಿದೆ.

ನಂದಿನಿ ವತಿಯಿಂದ ಇದೇ ಪ್ರಥಮ ಬಾರಿಗೆ ಗ್ರಾಹಕರಿಗೆ ಒದಗಿಸಲು ತಯಾರಿಸಿರುವ ನಂದಿನಿ ವೇ ಪ್ರೋಟಿನ್ ಆಧಾರಿತ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಬಿಡುಗಡೆ ಮಾಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನಂದಿನಿಯ ಈ ಉತ್ಪನ್ನಗಳನ್ನು ಬಿಡುಗಡೆ ಮಾಡಿದರು.

ಈ ವೇಳೆ ಮಾತನಾಡಿದ ಸಿದ್ದರಾಮಯ್ಯ,ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್‌ ಕೆಎಂಎಫ್‌ನ ನಂದಿನಿ ಉತ್ಪನ್ನಗಳು ದೇಶವ್ಯಾಪಿ ಮಾರುಕಟ್ಟೆಯನ್ನು ಸೃಷ್ಟಿಸಿಕೊಂಡಿದೆ ಎಂದು ಸಂತಸಪಟ್ಟರು.

ರಾಷ್ಟ್ರ ರಾಜಧಾನಿ ದೆಹಲಿಗೂ ನಂದಿನಿ ಹಾಲು ತಲುಪುತ್ತಿದೆ. ದೂರದ ರಾಜಸ್ಥಾನ, ಮಧ್ಯಪ್ರದೇಶ ರಾಜ್ಯಗಳ ಪ್ರಮುಖ ನಗರಗಳಿಂದಲೂ ನಂದಿನಿ ಹಾಲಿಗೆ ಬೇಡಿಕೆ ಬರುತ್ತಿದೆ. ದೇಶದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ತಿರುಪತಿಯ ಸುಪ್ರಸಿದ್ಧ ಲಡ್ಡು ಪ್ರಸಾದವನ್ನು ನಂದಿನಿ ತುಪ್ಪದಿಂದ ಸಿದ್ಧಪಡಿಸಲಾಗುತ್ತಿದೆ. ಹೀಗೆ ನಂದಿನಿಯ ನಾನಾ ಉತ್ಪನ್ನಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗುತ್ತಿದ್ದು, ಕನ್ನಡಿಗರ ಬ್ರ್ಯಾಂಡ್‌ ಹೆಮ್ಮರವಾಗಿ ಬೆಳೆಯುತ್ತಿದೆ ಎಂದು ಹೇಳಿದರು.

ನಾಗರಿಕರ ಬಹುದಿನಗಳ ಅಪೇಕ್ಷೆಯಂತೆ ಇದೀಗ ನಂದಿನಿ ಉತ್ಪನ್ನಗಳಿಗೆ ಹೊಸ ಸೇರ್ಪಡೆಯಾಗಿ ದೋಸೆ ಹಾಗೂ ಇಡ್ಲಿ ಹಿಟ್ಟು ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ. ವೇ ಪ್ರೋಟೀನ್ ಆಧಾರಿತ ಉತ್ಕೃಷ್ಟ ಗುಣಮಟ್ಟದ ಹಿಟ್ಟು ಕೈಗೆಟುಕುವ ದರದಲ್ಲಿ ಗ್ರಾಹಕರಿಗೆ ಲಭ್ಯವಿದೆ ಎಂದು ಮುಖ್ಯ ಮಂತ್ರಿಗಳು ತಿಳಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ವೆಂಕಟೇಶ್, ಕೃಷ್ಣ ಭೈರೇಗೌಡ, ದಿನೇಶ್ ಗುಂಡೂರಾವ್, ಕೆ.ಎಂ.ಎಫ್. ಅಧ್ಯಕ್ಷ ಭೀಮಾನಯಕ್, ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ನಂದಿನಿ ವೇ ಪ್ರೋಟಿನ್ ಆಧಾರಿತ ಇಡ್ಲಿ, ದೋಸೆ ಹಿಟ್ಟು ಬಿಡುಗಡೆ Read More