ಅನುದಾನ ತಾರತಮ್ಯ: ನಿಖಿಲ್ ಟೀಕೆ

ಬೆಂಗಳೂರು: ಎರಡು ವರ್ಷಗಳಿಂದ ಶಾಸಕರಿಗೆ ಅಭಿವೃದ್ಧಿ ನಿಧಿ ಇಲ್ಲ,ಈಗ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ 50 ಕೋಟಿ ಮತ್ತು ವಿರೋಧ ಪಕ್ಷದ ಶಾಸಕರ ಕ್ಷೇತ್ರಗಳಿಗೆ ಬರೀ 25 ಕೋಟಿ ನೀಡಲಾಗುತ್ತಿದೆ ಎಂದು ಯುವ ಜೆಡಿಎಸ್ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟೀಕಿಸಿದ್ದಾರೆ.

ತಾರತಮ್ಯದ ವಿರುದ್ಧ, ನಮ್ಮ ಶಾಸಕರಾದ ಶ್ರೀ ವೆಂಕಟಶಿವರೆಡ್ಡಿ ಅವರು ಎಲ್ಲಾ ಕ್ಷೇತ್ರಗಳಿಗೂ ಸಮಾನ ನಿಧಿಯನ್ನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು x ಖಾತೆಯಲ್ಲಿ ನಿಖಿಲ್ ಬರೆದಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರ ಈ ವರ್ಷ ಕೇವಲ 5 ಗ್ಯಾರಂಟಿ ಯೋಜನೆಗಳಿಗೆ 56,000 ಕೋಟಿ ಖರ್ಚು ಮಾಡುತ್ತಿದೆ ಮತ್ತು ರಾಜ್ಯದಲ್ಲಿ 5,229 ಕೋಟಿ ಮೂಲಸೌಕರ್ಯ ವೆಚ್ಚವನ್ನು ಕಡಿತಗೊಳಿಸುತ್ತಿದೆ ಎಂದು ಸಿಎಜಿ ವರದಿ ಹೇಳುತ್ತದೆ.

ಕಾಂಗ್ರೆಸ್ ನಾಯಕರು ಗಳಲ್ಲಿ ರ್‍ಯಾಲಿಗಳಲ್ಲಿ ಸಂವಿಧಾನವನ್ನು ಬೀಸುತ್ತ “ನ್ಯಾಯ ಮತ್ತು ಸಮಾನತೆ” ಎಂದು ಕೂಗುತ್ತಾರೆ, ಆದರೆ ಅವರ ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ಅದನ್ನು ಮರೆತೇ ಬಿಡುತ್ತಾರೆ ಎಂದು ನಿಖಿಲ್ ವ್ಯಂಗ್ಯವಾಡಿದ್ದಾರೆ.

ಅನುದಾನ ತಾರತಮ್ಯ: ನಿಖಿಲ್ ಟೀಕೆ Read More

ಶೀಘ್ರವೇ‌ ವಿಐಎಸ್ಎಲ್ ಕಾರ್ಖಾನೆ ಮರುಸ್ಥಾಪನೆ: ನಿಖಿಲ್ ಕುಮಾರಸ್ವಾಮಿ

ಶಿವಮೊಗ್ಗ: ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಯನ್ನು ಮರು ನಿರ್ಮಾಣ ಮಾಡಲು ಕುಮಾರಣ್ಣ ಶಪಥ ಮಾಡಿದ್ದಾರೆ,ಈ ಬಗ್ಗೆ ಯಾರಿಗೂ ಸಂಶಯ ಬೇಡ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭರವಸೆ ನೀಡಿದರು.

ಪಟ್ಟಣದ ಗುಡ್ಡದ ಮಲ್ಲೇಶ್ವರ ಸಮುದಾಯ ಭವನದಲ್ಲಿ ಜೆಡಿಎಸ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು,ಶೀಘ್ರವೇ ವಿ ಐ ಎಸ್ ಎಲ್ ಕಾರ್ಖಾನೆ ಮರುಸ್ಥಾಪನೆ ಆಗಲಿದೆ ಎಂದು ಹೇಳಿದರು.

ಭದ್ರಾವತಿಯ ಸರ್ ಎಂ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಕುಮಾರಣ್ಣ ಕೇಂದ್ರ ಸಚಿವರಾಗುತ್ತಿದ್ದಂತೆ ವಿಶೇಷ ಕಾಳಜಿ ವಹಿಸಿದ್ದಾರೆ. ನೂರಕ್ಕೆ ನೂರರಷ್ಟು ಇದಕ್ಕೆ ಮರು ಜೀವ ಕೊಡುತ್ತಾರೆ ಎಂದು ತಿಳಿಸಿದರು.

ಆಂಧ್ರ ಪ್ರದೇಶದ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ ಸಂಪೂರ್ಣವಾಗಿ ಮುಚ್ಚೋಗಿತ್ತು. ಅದನ್ನ ಕುಮಾರಣ್ಣ ಅವರ ದೃಢ ನಿರ್ಧಾರದಿಂದ 11,440 ಕೋಟಿ ವೆಚ್ಚದಲ್ಲಿ ಮರು ಜೀವ ನೀಡಿರುವುದು ನಮ್ಮ ಕಣ್ಮುಂದೆ ಇದೆ ಎಂದು ಹೇಳಿದರು.

ಈಗಾಗಲೇ ಇದಕ್ಕೆ ವಿಸ್ತೃತ ಯೋಜನಾ ವರದಿ ಸಿದ್ಧವಾಗುತ್ತಿದೆ. ಇಡೀ ಕಾರ್ಖಾನೆಯನ್ನು ಹೊಸದಾಗಿ ಅತ್ಯಾಧುನಿಕವಾಗಿ ಮರು ನಿರ್ಮಾಣ ಮಾಡಬೇಕೆಂದು ಕುಮಾರಣ್ಣ ಅವರು ಶಪಥ ಮಾಡಿದ್ದಾರೆ. ನಿಮ್ಮೆಲ್ಲರ ಸಹಕಾರದಿಂದ ಅತಿ ಶೀಘ್ರದಲ್ಲೇ ಪುನಶ್ಚೇತನ ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದು ನಿಖಿಲ್ ಹೇಳಿದರು.

ಜೆಡಿಎಸ್ ಸದಸ್ಯತ್ವ ಅಭಿಯಾನದ ಕಾರ್ಯಕ್ರಮಕ್ಕೆ ಜನರು ಅಭೂತಪೂರ್ವ ಬೆಂಬಲ ನೀಡುತ್ತಿರುವುದು ಗಮನಿಸಿದರೆ, ಇದು ಮುಂದಿನ ಚುನಾವಣೆಯ ದಿಕ್ಸೂಚಿ ತೊರಿಸುತ್ತದೆ.ಬದಲಾವಣೆಯ ಗಾಳಿ ತೊರುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಸಂಪರ್ಕ ನಿರಂತರವಾಗಿ ಇಟ್ಟುಕೊಳ್ಳುವ ನಿಮ್ಮ ಬಳಿಗೆ ನಾನು ಬಂದಿದ್ದೇನೆ. ಜನರ ಧ್ವನಿಯಾಗಿರುವ, ಪಕ್ಷ ಕಟ್ಟಲು ಶ್ರಮಿಸುವ ನಿಷ್ಟಾವಂತರನ್ನು ಗುರುತಿಸಿ ಕಾರ್ಯಕರ್ತರ ಸಮಕ್ಷಮ ತಾಪಂ, ಜಿಪಂ ಕ್ಷೇತ್ರಗಳಿಗೆ ಆಯ್ಕೆ ಮಾಡಲಾಗುತ್ತದೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.

ಶೀಘ್ರವೇ‌ ವಿಐಎಸ್ಎಲ್ ಕಾರ್ಖಾನೆ ಮರುಸ್ಥಾಪನೆ: ನಿಖಿಲ್ ಕುಮಾರಸ್ವಾಮಿ Read More

ಕಾಂಗ್ರೆಸ್ ನವರು ತಮ್ಮ ಶಾಸಕರನ್ನು ಉಳಿಸಿಕೊಳ್ಳಲಿ-ನಿಖಿಲ್ ಕುಮಾರಸ್ವಾಮಿ

ಯಾದಗಿರಿ: ನಮ್ಮ ಪಕ್ಷದ‌ ಯಾವ ಶಾಸಕರೂ ಕಾಂಗ್ರೆಸ್ ಪಕ್ಷಕ್ಕೆ ಹೋಗುವದಿಲ್ಲ,
ಕಾಂಗ್ರೆಸ್ ನವರು ಮೊದಲು ತಮ್ಮ ಶಾಸಕರನ್ನು ಉಳಿಸಿಕೊಳ್ಳಲಿ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಯಾದಗಿರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್,
ಕಾಂಗ್ರೆಸ್ ಶಾಸಕ ಉದಯ್ ಅವರು ಜೆಡಿಎಸ್ ಶಾಸಕರು ಕಾಂಗ್ರೆಸ್ ಗೆ ಬರುತ್ತಾರೆಂದು ಹೇಳಿದಕ್ಕೆ ಈ ರೀತಿ ತಿರುಗೇಟು ನೀಡಿದರು.

ಕಾಂಗ್ರೆಸ್ ಶಾಸಕರೇ ಈಗ ಸಾರ್ವಜನಿಕ ವಲಯದಲ್ಲಿ ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ,ಜನತಾದಳದ ಶಾಸಕರು ಕಾಂಗ್ರೆಸ್ ಗೆ ಬರುತ್ತಾರೆಂದು ಹೇಳುತ್ತಿದ್ದಾರೆ,
ಜೆಡಿಎಸ್ ಪಕ್ಷದ ಶಾಸಕರೆಲ್ಲ ನಮ್ಮ ಕುಟುಂಬದ ಸದಸ್ಯರಿದ್ದ ಹಾಗೇ,
ಎಲ್ಲಾ ಜೆಡಿಎಸ್ ಶಾಸಕರು ನಿರಂತರವಾಗಿ ನಮ್ಮ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ತಿಳಿಸಿದರು.

ಜೆಡಿಎಸ್ ಶಾಸಕರಿಗೆ ಬರುವ ಆಫರ್ ಗಳನ್ನು ಶಾಸಕರು ನಮ್ಮ ಗಮನಕ್ಕೆ ತರುತ್ತಾರೆ,
ಕಾಂಗ್ರೆಸ್ ಮೊದಲು ತಮ್ಮವರನ್ನು ಉಳಿಸಿಕೊಳ್ಳಲಿ,ತಮ್ಮ ಸರಕಾರದ ಕುರ್ಚಿ ಭದ್ರಪಡಿಸಿಕೊಳ್ಳಬೇಕಿದೆ,
ಕಾಂಗ್ರೆಸ್ ಶಾಸಕರೇ ಕಾಂಗ್ರೆಸ್ ಬಿಟ್ಟು ಹೋಗುವ ವಾತಾವರಣ ಸೃಷ್ಟಿಯಾಗಿದೆ,
ಇನ್ನು ಜೆಡಿಎಸ್ ನವರು ಕಾಂಗ್ರೆಸ್ ಯಾಕೆ ಹೋಗುತ್ತಾರೆ ಎಂದು ನಿಖಿಲ್ ಕುಮಾರಸ್ವಾಮಿ ಪ್ರಶ್ನಿಸಿದರು.

ಕಾಂಗ್ರೆಸ್ ನವರು ತಮ್ಮ ಶಾಸಕರನ್ನು ಉಳಿಸಿಕೊಳ್ಳಲಿ-ನಿಖಿಲ್ ಕುಮಾರಸ್ವಾಮಿ Read More

ಜೆಡಿಎಸ್ ಒಂದು ಭಾಗಕ್ಕೆ ಸೀಮಿತವಲ್ಲ:ನಿಖಿಲ್

ಕಲಬುರಗಿ: ನಮ್ಮ ಜೆಡಿಎಸ್‌ ಪಕ್ಷ ಕೇವಲ ಒಂದು ಭಾಗಕ್ಕೆ ಸೀಮಿತವಲ್ಲ ಎಲ್ಲೆಡೆ ಇರುತ್ತದೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ಜಿಲ್ಲೆಯ ಅವಳಿ ತಾಲೂಕುಗಳಾದ ಸೇಡಂ ಮತ್ತು ಚಿತ್ತಾಪುರದಲ್ಲಿ ಅಕ್ರಮ ಮರಳುಗಾರಿಕೆ ಮಿತಿಮೀರಿದ್ದು 165 ಕೋಟಿಗೊ ಹೆಚ್ಚು ಅವ್ಯವಹಾರ ಭ್ರಷ್ಟಾಚಾರ ಆಗಿದೆ. ಆದರೆ ಜಿಲ್ಲಾಡಳಿತ ಮತ್ತು ಜಿಲ್ಲೆಯ ನಾಯಕರ ಅಕ್ಕ ಪಕ್ಕದಲ್ಲಿರುವ ಹಿಂಬಾಲಕರಿಗೆ ಬೆನ್ನೆಲುಬಾಗಿ ನಿಂತಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಆರೋಪಿಸಿದರು.

ಕಲಬುರಗಿ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಜನರೊಂದಿಗೆ ಜನತಾದಳ ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಅಕ್ರಮ ಮರಳುಗಾರಿಕೆ ಕಂಡರೂ ಸರ್ಕಾರ ಜಾಣ ಮೌನಕ್ಕೆ ಜಾರಿದೆ. ಕಾಗಿನ ನದಿಯನ್ನು ಸಂಪೂರ್ಣವಾಗಿ ಒಕ್ಕಲೆಬ್ಬಿಸಲಾಗಿದೆ. ಈ ಅಕ್ರಮದಲ್ಲಿ ಸರ್ಕಾರ ನೇರವಾಗಿ ಭಾಗಿಯಾಗಿದೆ. ಈ ಜಿಲ್ಲೆಯ ಶಾಸಕರು ಸಚಿವರ ಮೌನ ಇದನ್ನು ದೃಢಪಡಿಸುತ್ತದೆ ಎಂದು ಅವರು ಆರೋಪಿಸಿದರು.

ಸೇಡಂ ಮತ್ತು ಚಿತ್ತಾಪುರದಲ್ಲಿ ಅಕ್ರಮ ಮರಳುಗಾರಿಕೆಗೆ ಕೂಡಲೇ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ತನಿಖೆ ಮಾಡಿ ಆಕ್ರಮ ಬಯಲು ಮಾಡಬೇಕು. ಅಕ್ರಮಕ್ಕೆ ಸಾತ್ ನೀಡಿದ ಜನಪ್ರತಿನಿಧಿಗಳು ಸೇರಿದಂತೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನಿಖಿಲ್ ಕುಮಾರಸ್ವಾಮಿ ಅವರು ಒತ್ತಾಯಿಸಿದರು.

ಈ ವೇಳೆಯಲ್ಲಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಒಟ್ಟಾರೆಯಾಗಿ ಬಿಡುಗಡೆ ಮಾಡಿರುವ 13 ಕೋಟಿ ರೂಪಾಯಿಗಳ ವೆಚ್ಚದ ಕುರಿತು ಕೂಡಲೇ ಶ್ವೇತ ಪತ್ರ ಹೊರಡಿಸಬೇಕೆಂದು ಅವರು ಒತ್ತಾಯಿಸಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಗತ್ಯ ಅಭಿರುದ್ದಿ ಕೆಲಸಗಳನ್ನ ಕೈ ಬಿಟ್ಟು ಅನಗತ್ಯ ಮತ್ತು ಅವಶ್ಯಕತೆ ಇಲ್ಲದ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಹಣವನ್ನು ಪೋಲು ಮಾಡಲಾಗಿದೆ ಎನ್ನುವ ಗಂಭೀರ ಆರೋಪ ಇದೆ ಎಂದು ಅವರು ಹೇಳಿದರು.

ಜೆಡಿಎಸ್ ಬಿಜೆಪಿ ಮೈತ್ರಿ ಕೈ ಬಿಡುವ ಪ್ರಶ್ನೆಯೇ ಇಲ್ಲ

ಜೆಡಿಎಸ್ ಬಿಜೆಪಿ ಮೈತ್ರಿ ವಿಚಾರಕ್ಕೆ ಮಾತನಾಡಿದ ಅವರು, ಮೈತ್ರಿ ಯನ್ನು ಕೈ ಬಿಡುವ ಪ್ರಶ್ನೆಯೇ ಇಲ್ಲ. ಮುಂಬರುವ ಪಂಚಾಯತಿ ಚುನಾವಣೆಗಳಲ್ಲೂ ಕೂಡ ಈ ಒಪ್ಪಂದ ಶಾಸನ ರೂಪದಲ್ಲಿ ಕೆಲಸ ಮಾಡಲಿದೆ. ಈಗಾಗಲೇ ನಾವು ಈ ನಿಟ್ಟಿನಲ್ಲಿ ರಾಜ್ಯ ಪ್ರವಾಸ ಮಾಡುತ್ತಿದ್ದಾನೆ ಎಂದು ತಿಳಿಸಿದರು

ಜೆಡಿಎಸ್ ಪಕ್ಷ ಯಾವುದೇ ಒಂದು ಭಾಗಕ್ಕೆ ಸೀಮಿತವಾದ ಪಕ್ಷವಲ್ಲ . ಇದು ರಾಜ್ಯದ ಏಳೂವರೆ ಕೋಟಿ ಕನ್ನಡಿಗರು ಕಟ್ಟಿದಂತ ಪಕ್ಷ. ಕಲ್ಯಾಣ ಕರ್ನಾಟಕದಲ್ಲಿ ಜೆಡಿಎಸ್ ಪಕ್ಷ ಬಲಿಷ್ಠವಾಗಿದೆ. ಜೆಡಿಎಸ್ ಪಕ್ಷ ಹೋರಾಟದಿಂದ ಬಂದಿದೆ ಅದನ್ನು ನಾನು ಮುಂದುವರಿಸುತ್ತೇನೆ ನಿಮ್ಮ ಸಹಕಾರ ಇರಲಿ ಎಂದು ಮನವಿ ಮಾಡಿದರು.

ಕಲ್ಯಾಣ ಕರ್ನಾಟಕದ ಜೆಡಿಎಸ್ ಪಕ್ಷಕ್ಕೆ ಇತಿಹಾಸವಿದೆ

ಕಲ್ಯಾಣ ಕರ್ನಾಟಕದ ಕಲಬುರಗಿ ಜೆಡಿಎಸ್ ಪಕ್ಷದಿಂದ 6-7 ಶಾಸಕರನ್ನು ರಾಜ್ಯಕ್ಕೆ ನೀಡಿದ ಇತಿಹಾಸವಿದೆ ಮತ್ತೊಮ್ಮೆ ಈ ಇತಿಹಾಸ ಮರುಕಳಿಸಸೋಣ. ಈ ಹಿನ್ನೆಲೆಯಲ್ಲಿ ನಿರಂತರವಾಗಿ ಪಕ್ಷ ಸಂಘಟನೆ ಮಾಡಿ ಮತ್ತೊಮ್ಮೆ ಮುಖ್ಯಮಂತ್ರಿಗಳನ್ನಾಗಿ ಆಯ್ಕೆ ಮಾಡೋಣ.

ರಾಜ್ಯದ 19 ಕ್ಷೇತ್ರಗಳಲ್ಲಿ ನಾನು ಈಗ ಓಡಾಡಲು ಪ್ಲಾನ್ ಮಾಡಿದ್ದು ಈಗಾಗಲೇ ಬೀದರ್ ನಿಂದ ಓಡಾಟವನ್ನು ಆರಂಭಿಸಿದ್ದು, ನಾಳೆ ಯಾದಗಿರಿ ಸೇರಿದಂತೆ ಹಲವಡೆಗಳಲ್ಲಿ ಪಕ್ಷವನ್ನು ಇನ್ನಷ್ಟು ಬಲಪಡಿಸುತೇನೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಪಕ್ಷದ ವೆಂಟರಾವ್ ನಾಡಗೌಡ ಅವರು, ಹನಮಂತಪ್ಪ ಆಲ್ಕೋಡ್ , ಶಾಸಕರಾದ ಶರಣಗೌಡ ಕಂದಕೂರ ಅವರು,ದೊಡ್ಡಪ್ಪಗೌಡ ಪಾಟೀಲ್ ನರಬೋಳ್, ಮಹಿಳಾ ಘಟಕದ ರಾಜ್ಯಾಧ್ಯಕ್ಷರಾದ ಶ್ರೀಮತಿ ರಶ್ಮಿ ರಾಮೇಗೌಡ, ಬಾಲರಾಜ್ ಗುತ್ತೇದಾರ್, ಮುಖಂಡರಾದ ಕೃಷ್ಣಾರೆಡ್ಡಿ, ಶ್ರೀಮತಿ ಮಹೇಶ್ವರಿ ವಾಲಿ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಮುಖಂಡರು , ಕಾರ್ಯಕರ್ತರು ಉಪಸ್ಥಿತರಿದ್ದರು.

ಜೆಡಿಎಸ್ ಒಂದು ಭಾಗಕ್ಕೆ ಸೀಮಿತವಲ್ಲ:ನಿಖಿಲ್ Read More

ಕಾಂಗ್ರೆಸ್ ನಲ್ಲಿ ಕೆಲ ಗುಂಪುಗಳು ಸೈಲೆಂಟಾಗಿ ಕೆಲಸ ಮಾಡುತ್ತಿವೆ:ನಿಖಿಲ್ ಟಾಂಗ್

ಬೀದರ್: ಕಾಂಗ್ರೆಸ್ ನಲ್ಲಿ ಕೆಲವು ಗುಂಪು ನೇರ, ಇನ್ನು ಕೆಲವು ಗುಂಪುಗಳು ಸೈಲೆಂಟಾಗಿ ಕೆಲಸ ಮಾಡುತ್ತಿವೆ ಎಂದು ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಟಾಂಗ್ ನೀಡಿದರು.

ಬೇರೆಯವರಂತೆ ಸರ್ಕಾರ ಪತನ ಆಗುತ್ತದೆ ಅಂತ ನಾನು ಹೇಳುವುದಿಲ್ಲ,ಆದರೆ ಕಾಂಗ್ರೆಸ್‌ ಪಕ್ಷದಲ್ಲಿ ಹಲವು ಗುಂಪುಗಳಿವೆ ಎಂದು ಹೇಳಿದರು.

ಬೀದರ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 5 ವರ್ಷ ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ,ಸಿಎಂ ಖುರ್ಚಿಗಾಗಿ ಕಾಂಗ್ರೆಸ್‌ ನಲ್ಲಿ ಹಲವು ಪ್ರಕ್ರಿಯೆಗಳು ನಡೆಯುತ್ತಿವೆ. ಅದೇನೋ ಕ್ರಾಂತಿ ಆಗುತ್ತೆ ಅಂತ ಹೇಳ್ತಿದ್ದಾರೆ ನೋಡೋಣ ಎಂದು ಮಾರ್ಮಿಕವಾಗಿ ನುಡಿದರು.

ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಮಾಡದೆ ಎರಡೂವರೆ ವರ್ಷ ಕಾಲಹರಣ ಮಾಡಿದ್ದಾರೆ. ಅಭಿವೃದ್ಧಿಗೆ ಅನುದಾನ ನೀಡುತ್ತಿಲ್ಲ ಎಂದು ಖುದ್ದು ಅವರ ಪಕ್ಷದ ಹಿರಿಯ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

ರಾಜ್ಯಕ್ಕೆ ದೊಡ್ಡ ಗಾತ್ರದ ಬಜೆಟ್ ಕೊಟ್ಟಿದ್ದೀನಿ ಎಂದು ಸಿಎಂ ಬೆನ್ನು ತಟ್ಟುಕೊಳ್ಳುತ್ತಾರೆ ಅದರಲ್ಲಿ ಸಾಲ ಎಷ್ಟಾಗಿದೆ ಎಂಬುದನ್ನ ಜನರಿಗೆ ಹೇಳಲಿ ಎಂದು ನಿಖಿಲ್ ಸವಾಲು ಹಾಕಿದರು.

2028ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಸೀಟು ಹಂಚಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ನಿಖಿಲ್ ಕುಮಾರಸ್ವಾಮಿ,ಇದರಲ್ಲಿ ಯಾವುದೇ ಗೊಂದಲ ಇಲ್ಲ, ಸಂಸತ್ ಚುನಾವಣೆಯಲ್ಲಿ ಕೈ ಜೋಡಿಸಿದ್ದೇವೆ. ಅದನ್ನ ರಾಜ್ಯದ ಜನ ನೋಡಿದ್ದಾರೆ, ಅದರಲ್ಲಿ ಮುಚ್ಚು ಮರೆ ಇಲ್ಲ ಎಂದು ಹೇಳಿದರು.

ಪ್ರಧಾನಿ ಮೋದಿ ಜೀ ಅವರ ನಾಯಕತ್ವದಲ್ಲಿ ನಮ್ಮ ದೇಶ ಆರ್ಥಿಕವಾಗಿ ಮೂರನೇ ದೊಡ್ಡ ದೇಶವಾಗಿದೆ. ರಾಜ್ಯದ ಅಭಿವೃದ್ಧಿಯೇ ನಮ್ಮ ಗುರಿಯಾಗಿದ್ದು, ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಪುನರುಚ್ಛರಿಸಿದರು.

ಕಾಂಗ್ರೆಸ್ ನಲ್ಲಿ ಕೆಲ ಗುಂಪುಗಳು ಸೈಲೆಂಟಾಗಿ ಕೆಲಸ ಮಾಡುತ್ತಿವೆ:ನಿಖಿಲ್ ಟಾಂಗ್ Read More