ಪ್ರತಿಭೆಗಳನ್ನು ಹೊರ ತರಲು ಪ್ರತಿಭಾ ಕಾರಂಜಿ ಸಹಕಾರಿ:ಎ.ಆರ್. ಕೃಷ್ಣಮೂರ್ತಿ

(ವರದಿ:ಸಿದ್ದರಾಜು,ಕೊಳ್ಳೇಗಾಲ)

ಕೊಳ್ಳೇಗಾಲ: ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮದೇ ಆದ ಪ್ರತಿಭೆಗಳನ್ನು ಹೊಂದಿರುತ್ತಾರೆ. ಪ್ರತಿಭೆಗಳನ್ನು ಹೊರ ತರುವ ನಿಟ್ಟಿನಲ್ಲಿ ಪ್ರತಿಭಾ ಕಾರಂಜಿ ಯಂತಹ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು
ಶಾಸಕ ಎ.ಆರ್. ಕೃಷ್ಣಮೂರ್ತಿ ತಿಳಿಸಿದರು.

ವಿದ್ಯಾರ್ಥಿಗಳು ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡುವಂತೆ ಶಾಸಕರು ಕರೆ ನೀಡಿದರು.

ಪಟ್ಟಣದ ಆರ್.ಮಿಷನ್ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಕರ ಇಲಾಖೆ ವತಿಯಿಂದ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ-ಕಲೋತ್ಸವ ಕಾರ್ಯಕ್ರಮವನ್ನು ಅವರು ಉದ್ಘಾಟಸಿ ಮಾತನಾಡಿದರು.

ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪತ್ಯೇತರ ಚಟುವಟಿಕೆಗೂ ಒತ್ತು ನೀಡಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ತಮ್ಮದೇ ಆದ ಪ್ರತಿಭೆಗಳನ್ನು ಹೊಂದಿರುತ್ತಾರೆ,ಅದನ್ನು ಗುರುತಿಸಿ ಪ್ರೊತ್ಸಾಹಿಸಬೇಕು ಎಂದು ದಲಹೆ ನೀಡಿದರು.
ಚಾಮರಾಜನಗರ ಜಿಲ್ಲೆಯು ಜಾನಪದ ಕಲೆಗಳ ತವರೂರಾಗಿದೆ. ವಿದ್ಯಾರ್ಥಿಗಳು ತಮ್ಮ ಸ್ಥಳೀಯ ಜಾನಪದ ಕಲೆಗಳಿಗೆ ಒತ್ತು ನೀಡಬೇಕು. ಆ ಮೂಲಕ ಜಿಲ್ಲೆಯ ಸಂಸ್ಕೃತಿಯನ್ನು ದೇಶಾದ್ಯಂತ ಪಸರಿಸುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಇತ್ತೀಚಿಗೆ ಯಳಂದೂರಿನಲ್ಲಿ ಆದರ್ಶ ಶಾಲೆಯ ವಿದ್ಯಾರ್ಥಿನಿಯರು ಕಂಸಾಳೆ ನೃತ್ಯದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವುದು ಹೆಮ್ಮೆಯ ವಿಚಾರ. ಅವರಂತೆ ಜಿಲ್ಲೆಯ ವಿದ್ಯಾರ್ಥಿಗಳು ಉನ್ನತ ಸಾಧನೆ ಮಾಡಬೇಕು ಎಂದು ಕೃಷ್ಣಮೂರ್ತಿ ಯವರು ಕರೆ ನೀಡಿದರು.

ರಾಜ್ಯದಲ್ಲಿ 200 ಕೆಪಿಎಸ್ ಶಾಲೆಗಳ ಪ್ರಾರಂಭಕ್ಕೆ ಸರ್ಕಾರ ಮುಂದಾಗಿದ್ದು 3 ಶಾಲೆಗಳನ್ನು ಕೊಳ್ಳೇಗಾಲ ಕ್ಷೇತ್ರಕ್ಕೆ ಮಂಜೂರು ಮಾಡಿದ್ದು ಮತ್ತೆ ಮೂರು ಶಾಲೆಗಳ ಮಂಜೂರಿಗೆ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ 6 ಶಾಲೆಗಳನ್ನು ಮಂಜೂರು ಮಾಡಿದ್ದಾರೆ.

ಅಲ್ಲದೇ ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ತಾಲೂಕಿನ ಕುರುಬನ ಕಟ್ಟಿ ಗುಡ್ಡಗಾಡು ಪ್ರದೇಶದಲ್ಲಿ 5 ಎಕರೆ ಜಾಗದಲ್ಲಿ ಮುರಾರ್ಜಿ ದೇಸಾಯಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವಸತಿ ಶಾಲೆ ನಿರ್ಮಾಣಕ್ಕೆ ಅನುಮೋದನೆ ದೊರೆತ್ತಿದ್ದು, ಶೀಘ್ರವೇ ವಸತಿ ಶಾಲೆಯ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದು ಶಾಸಕರು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಚಂದ್ರು, ತಾಲ್ಲೂಕು ಅಧ್ಯಕ್ಷ ರಾಜೇಂದ್ರ, ತಾ.ಪಂ ಇಒ ಗುರುಶಾಂತಪ್ಪ ಬೆಳ್ಳುಂಡಗಿ, ಬಿಇಒ ಮಂಜುಳಾ, ಬಿ.ಆರ್.ಸಿ ಮಹದೇವ ಕುಮಾರ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಂಗಸ್ವಾಮಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜೋಸೆಫ್ ಅಲೆಕ್ಸಾಂಡರ್, ಪ್ರೌಢಶಾಲಾ ಮುಖ್ಯ ಶಿಕ್ಷಕ ವಿಶ್ವನಾಥ್, ಪ್ರೌಢಶಾಲಾ ಸಹಶಿಕ್ಷಕರ ಸಂಘ ಅಧ್ಯಕ್ಷ ಅಕ್ಬರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀಧರ್, ಕಾರ್ಯಕ್ರಮ ನೂಡಲ್ ಅಧಿಕಾರಿ ವಿಜಯ್ ಕುಮಾರ್, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಉಪಾಧ್ಯಕ್ಷರಾದ ಬುಕಾನಿ, ಸಂಸ್ಥೆಯ ಆಂಗ್ಲ ಮಾಧ್ಯಮದ ಮುಖ್ಯ ಶಿಕ್ಷಕಿ ಸಿಸ್ಟರ್ ಲೆತಿಷಿಯ ಹಾಗೂ ಕನ್ನಡ ಮಾಧ್ಯಮದ ಮುಖ್ಯ ಶಿಕ್ಷಕಿ ಅನ್ನಮ್ಮ ದೈಹಿಕ ಶಿಕ್ಷಕ ಪೀಟರ್ ಮತ್ತಿರರು ಹಾಜರಿದ್ದರು.

ಪ್ರತಿಭೆಗಳನ್ನು ಹೊರ ತರಲು ಪ್ರತಿಭಾ ಕಾರಂಜಿ ಸಹಕಾರಿ:ಎ.ಆರ್. ಕೃಷ್ಣಮೂರ್ತಿ Read More

ಮಕ್ಕಳು ಕೇವಲ ಪಠ್ಯಕ್ಕೆ ಸೀಮಿತವಾಗದೆ, ಪ್ರತಿಭೆ ಅನಾವರಣಗೊಳಿಸಿ: ಗಾಯತ್ರಿ ಕೆ.ಎಂ

ಮೈಸೂರು: ಮಕ್ಕಳು ಕೇವಲ ಪಠ್ಯ ಕ್ರಮಕ್ಕೆ ಸೀಮಿತವಾಗದೆ, ತಮ್ಮಲ್ಲಿರುವಂತಹ ಪ್ರತಿಭೆಗಳನ್ನು ಅನಾವರಣಗೊಳಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಾಯತ್ರಿ ಕೆ.ಎಂ ಹೇಳಿದರು.

ಮಹಾರಾಜ ಪದವಿ ಪೂರ್ವ ಕಾಲೇಜಿ (ಪ್ರೌಢಶಾಲಾ ವಿಭಾಗ) ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಹಮ್ಮಿಕೊಂಡಿದ್ದ, 2024-25 ನೇ ಸಾಲಿನ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ಕಾರ್ಯಕ್ರಮವು ಮೂಲೆ ಮೂಲೆಯಲ್ಲಿರುವ ಪ್ರತಿಭೆಗಳನ್ನು ಅನಾವರಣಗೊಳಿಸುವ ವೇದಿಕೆಯಾಗಿದೆ, ಈ ಸದವಕಾಶವನ್ನು ಬಳಸಿಕೊಂಡು ರಾಜ್ಯ ಮಟ್ಟದಲ್ಲಿ ಸ್ಪರ್ಧಿಸಿ ನಮ್ಮ ರಾಜ್ಯಕ್ಕೆ ಕೀರ್ತಿ ತರುವಂತರಾಗಬೇಕು ಎಂದು ಸಲಹೆ ನೀಡಿದರು.

ಹಲವಾರು ಮಕ್ಕಳು ಕೇವಲ ಶಿಕ್ಷಣವೆಂಬುದು ಅಂಕಕ್ಕೆ ಸೀಮಿತವಾಗಿದೆ ಎಂದು ಭಾವಿಸಿ ಅಂಕದ ಕಡೆಗೆ ಗಮನ ನೀಡಿ ಬೇರೆ ಚಟುವಟಿಕೆಗಳಲ್ಲಿ ಭಾಗವಹಿಸುವುದಿಲ್ಲ,ಅದು ಸರಿಯಲ್ಲ,ಮಕ್ಕಳ ಒಳಿತಿಗಾಗಿ ಶಿಕ್ಷಕರು ಶಾಲೆಗಳಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಅವರಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಅವರನ್ನು ಜಗತ್ತಿಗೆ ಪರಿಚಯಿಸುವ ಕೆಲಸವನ್ನು ಮಾಡುತ್ತಾರೆ ಎಂದು ಹೇಳಿದರು.

ಪ್ರತಿ ಮಕ್ಕಳು ಸೋಲು ಗೆಲುವಿನ ಬಗ್ಗೆ ಯೋಚನೆ ಮಾಡದೆ ಪ್ರಯತ್ನಗಳನ್ನು ಮುಂದುವರಿಸುವುದರ ಕಡೆ ಗಮನಹರಿಸಬೇಕು ಎಂದು ಕಿವಿ ಮಾತು ಹೇಳಿದರು.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ(ಆಡಳಿತ)ಎಸ್.ಟಿ ಜವರೇಗೌಡ ಅವರು ಮಾತನಾಡಿ, ಪ್ರತಿಭಾ ಕಾರಂಜಿ ಮಕ್ಕಳಲ್ಲಿರುವ ಪ್ರತಿಭೆ ಅನಾವರಣಗೊಳಿಸುವುದಾಗಿದೆ ಎಂದು ಹೇಳಿದರು.

ಜಿಲ್ಲಾ ಮಟ್ಟದಲ್ಲಿ ಭಾಗವಹಿಸುವ ಪ್ರತಿ ಮಕ್ಕಳಿಗೂ ಆಯಾ ಶಾಲೆಯ ಶಿಕ್ಷಕರು ನಿಯೋಜನೆಗಳನ್ನು ತಮ್ಮ ತಮ್ಮ ಶಾಲೆಗಳಲ್ಲಿ ನೀಡಬೇಕು. ಮಕ್ಕಳು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು.
ಎಲ್ಲಾ ಮಕ್ಕಳು ರಾಜ್ಯ ಮಟ್ಟಕ್ಕೆ ಹೋಗುವಂತಾಗಲಿ ಎಂದು ಹಾರೈಸಿದರು.

ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಕೆ.ಬಿ ಸೋಮೇಗೌಡ ಅವರು ಮಾತನಾಡಿ, ಮಕ್ಕಳು ಹೊರ ಜಗತ್ತಿನ ಬಗ್ಗೆ ತಿಳಿದುಕೊಳ್ಳಬೇಕೆಂಬ ದೃಷ್ಟಿಯಿಂದ ಪ್ರತಿ ವರ್ಷ ಪ್ರತಿಭಾ ಕಾರಂಜಿ ಆಯೋಜಿಸಿ ಹೊಸ ಹೊಸ ಪ್ರತಿಭೆ ಗಳನ್ನು ಜಗತ್ತಿಗೆ ನೀಡುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಎಂ.ಆರ್ ಅನಂತರಾಜು, ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್ ರಾಜು, ನಂಜನಗೂಡಿನ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಮೈಸೂರು ಜಿಲ್ಲಾ ಘಟಕದ ಕ.ರಾ ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷ ಕೃಷ್ಣ, ಪ್ರಾಥಮಿಕ ಶಾಲಾ ಮುಖ್ಯೋಪಧ್ಯಾಯರ ಸಂಘದ ಅಧ್ಯಕ್ಷ ದುಂಡಯ್ಯ, ಮಾಧ್ಯಮಿಕ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಟಿ.ಸಿ ಕೃಷ್ಣಮೂರ್ತಿ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ (ಗ್ರೇಡ್-2)ಅಧ್ಯಕ್ಷ ರಾಜೇಂದ್ರ ಮತ್ತಿತರರು ಉಪಸ್ಥಿತರಿದ್ದರು.

ಮಕ್ಕಳು ಕೇವಲ ಪಠ್ಯಕ್ಕೆ ಸೀಮಿತವಾಗದೆ, ಪ್ರತಿಭೆ ಅನಾವರಣಗೊಳಿಸಿ: ಗಾಯತ್ರಿ ಕೆ.ಎಂ Read More