ಕಾಶಿ ಬಳಿ ಅಪಘಾತ:ಬೀದರ್ ನ ಐದು ಮಂದಿ ದುರ್ಮರಣ

ಲಕ್ನೋ: ರಸ್ತೆ ಅಪಘಾತ ಸಂಭವಿಸಿ ಮಹಾ ಕುಂಭಮೇಳಕ್ಕೆ ತೆರಳಿದ್ದ ಬೀದರ್ ಮೂಲದ ಒಂದೇ ಕುಟುಂಬದ 5 ಜನ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಕಾಶಿ ಬಳಿ ನಡೆದಿದೆ.

ಲಾರಿ ಮತ್ತು ಕ್ರೂಸರ್‌ ನಡುವೆ ಇಂದು ಬೆಳಗ್ಗೆ ಮಿರಜಾಪೂರ್ ಜಿಲ್ಲೆಯ ರೂಪಾಪೂರ ಬಳಿ ಅಪಘಾತ ಸಂಭವಿಸಿ 5 ಮಂದಿ ಸ್ಥಳದಲ್ಲೇ ಮೃತಪಟ್ಟರೆ 7 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.

ಬೀದರ್ ನಗರದ ಲಾಡಗೇರಿ ಬಡಾವಣೆಯ ನಿವಾಸಿಗಳಾದ ಸುನೀತಾ(35) ಸಂತೋಷ್‌ (43) ನೀಲಮ್ಮ (60) ಅನಿತಾ ಮೃತಪಟ್ಟ ನತದೃಷ್ಟರು.

ಒಂದೇ ಗಾಡಿಯಲ್ಲಿ ಒಟ್ಟು 14 ಜನ ಕುಂಭ ಮೇಳಕ್ಕೆ ತೆರಳಿದ್ದರು. ಪುಣ್ಯ ಸ್ನಾನ ಮಾಡಿದ ಬಳಿಕ ಪ್ರಯಾಗ್‌ರಾಜ್‌ನಿಂದ ಕಾಶಿ ಕಡೆಗೆ ಕ್ರೂಸರ್‌ನಲ್ಲಿ ತೆರಳುತ್ತಿದ್ದರು.

ಇಂದು ಬೆಳಗ್ಗೆ ಕಾಶಿಯಿಂದ 20 ಕಿಲೋ‌ ಮೀಟರ್‌ ದೂರದಲ್ಲಿ ಲಾರಿಗೆ ಹಿಂದಿನಿಂದ ಕ್ರೂಸರ್‌ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಉಳಿದವರ ಸ್ಥಿತಿ ಗಂಭೀರವಾಗಿದೆ.

ಕಾಶಿ ಬಳಿ ಅಪಘಾತ:ಬೀದರ್ ನ ಐದು ಮಂದಿ ದುರ್ಮರಣ Read More

ಕುಂಭಮೇಳದ ವ್ಯವಸ್ಥೆಗಳ ಬಗ್ಗೆ ಯೋಗಿ ಸರ್ಕಾರದ ವಿರುದ್ಧ ಅಖಿಲೇಶ್ ವಾಗ್ದಾಳಿ

ಪ್ರಯೋಗ್ ರಾಜ್: ಮಹಾ ಕುಂಭದಲ್ಲಿ ಜನಸಂದಣಿ ಕಡಿಮೆಯಾಗುತ್ತಿಲ್ಲ,ಈ ಬಗ್ಗೆ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಮತ್ತೊಮ್ಮೆ ಮಹಾ ಕುಂಭಮೇಳದ ವ್ಯವಸ್ಥೆಗಳ ಬಗ್ಗೆ ಯೋಗಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಹಾ ಕುಂಭವು ಕೇವಲ ಒಂದು ಪದವಲ್ಲ,
ಮಹಾ ಕುಂಭ ಮತ್ತು ಮಹಾ ಆಯೋಗ ಹೆಸರಿನಲ್ಲಿ ಹಣವನ್ನು ಸಂಗ್ರಹಿಸ ಬೇಕಾಗಿರುವುದರಿಂದ ಹೊಸ ಪದವನ್ನು ರಚಿಸಲಾಯಿತು. ಹಣವನ್ನು ವ್ಯರ್ಥ ಮಾಡಲು ಅದರ ಹೆಸರನ್ನು ಮಹಾ ಕುಂಭ ಮತ್ತು ಮಹಾ ಆಯೋಗ ಎಂಬುದಾಗಿ ನೀಡಲಾಗಿದೆ ಎಂದು ಅಖಿಲೇಶ್ ಟೀಕಿಸಿದರು ‌
ಮಾಧ್ಯಮಗಳೊಂದಿಗೆ ಮಾತನಾಡಿದ ಅಖಿಲೇಶ್ ಯಾದವ್, 144 ವರ್ಷಗಳಿಗೊಮ್ಮೆ ಎಂದು ಜನರನ್ನು ದಾರಿ ತಪ್ಪಿಸಲಾಗಿದೆ ಎಂದು ಗಂಭೀರ ಆರೋಪ ಮಾಡಿದರು.

144 ವರ್ಷಗಳ ನಂತರ ಇದು ನಡೆಯುತ್ತಿದೆ ಎಂದು ಅವರು ಯಾವ ದಿನಾಂಕದಿಂದ ನಿರ್ಧರಿಸುತ್ತಿದ್ದಾರೆ ಎಂದು ಯೋಗಿ ಸರ್ಕಾರವನ್ನು ಪ್ರಶ್ನಿಸಿದರು.

ನಮ್ಮ ಹಿಂದೂ ಧರ್ಮದಲ್ಲಿ, ನಕ್ಷತ್ರಪುಂಜ ಮತ್ತು ಸಮಯ ಎರಡು ಪ್ರಮುಖ ವಿಷಯಗಳಾಗಿವೆ, ಇದು ಶತಮಾನಗಳಿಂದ ನಡೆಯುತ್ತಿದೆ. ಭೂಮಿ ಯಾವಾಗ ರೂಪುಗೊಂಡಿತು ಮತ್ತು ಗ್ರಹಗಳು ಯಾವಾಗ ಅಸ್ತಿತ್ವದಲ್ಲಿದ್ದವು ಎಂಬುದು ಬಿಜೆಪಿಗೆ ತಿಳಿದಿದೆ. ಆದರೆ ಕುಂಭಮೇಳದ ಹೆಸರಿನಲ್ಲಿ ವೈಭವೀಕರಿಸಲಾಗಿದೆ ಎಂದು ಟೀಕಾಪ್ರಹಾರ ನಡೆಸಿದರು.

ಧಾರ್ಮಿಕ ಕಾರ್ಯಕ್ರಮಗಳನ್ನು ಲಾಭಕ್ಕಾಗಿ ಆಯೋಜಿಸಲಾಗುವುದಿಲ್ಲ,ಆದರೆ, ನಮ್ಮ ಮುಖ್ಯಮಂತ್ರಿ 2 ಲಕ್ಷ ಕೋಟಿ ರೂಪಾಯಿಗಳ ವ್ಯಾಪಾರ ನಡೆಯುತ್ತದೆ ಎಂದು ಹೇಳುತ್ತಿದ್ದಾರೆ. ವಾಸ್ತವವೆಂದರೆ ನಮ್ಮ ಉದ್ಯಮಿಗಳು ಹಾಳಾಗುತ್ತಿದ್ದಾರೆ. ಅಲ್ಲಿ ಅಂಗಡಿಗಳನ್ನು ಸ್ಥಾಪಿಸುವ ಉದ್ಯಮಿಗಳು ನಷ್ಟವನ್ನು ಅನುಭವಿಸುತ್ತಿದ್ದಾರೆ. ಅಂಗಡಿಗಳನ್ನು ತೆಗೆದುಕೊಂಡವರು ತಮ್ಮ ಸರಕುಗಳನ್ನು ಮಾರಾಟ ಮಾಡಲು ಸಾಧ್ಯವಾಗಲಿಲ್ಲ, ಅವರು ಭಾರಿ ನಷ್ಟವನ್ನು ಅನುಭವಿಸಿದ್ದಾರೆ ಎಂದು ಅಖಿಲೇಶ್ ಯಾದವ್ ದೂರಿದರು.

ಕುಂಭಮೇಳದ ವ್ಯವಸ್ಥೆಗಳ ಬಗ್ಗೆ ಯೋಗಿ ಸರ್ಕಾರದ ವಿರುದ್ಧ ಅಖಿಲೇಶ್ ವಾಗ್ದಾಳಿ Read More

ಕುಂಭ ಮೇಳಕ್ಕೆ ಹೋಗಿ ಬರುವಾಗ ಅಪಘಾತ:6 ಮಂದಿ ಸಾವು

ಪ್ರಯಾಗರಾಜ್: ಕುಂಭ ಮೇಳಕ್ಕೆ ಹೋಗಿ ಹಿಂದಿರುಗುವಾಗ ಅಪಘಾತ ಸಂಭವಿಸಿ ಬೆಳಗಾವಿಯ ನಾಲ್ವರು ಸೇರಿ ಒಟ್ಟು 6 ಮಂದಿ ಮೃತಪಟ್ಟಿದ್ದಾರೆ‌

ಮಧ್ಯಪ್ರದೇಶದ ಇಂದೋರ್​ ಮಾನ್ಪುರ ಭೈರವ ಘಾಟ್‌ನಲ್ಲಿ ಬೆಳಗಿನ ಜಾವ 2.30 ರ ಸುಮಾರಿಗೆ ಮುಂದೆ ಚಲಿಸುತ್ತಿದ್ದ ಟ್ಯಾಂಕರ್‌ಗೆ ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ಮನ್ಪುರ ಠಾಣೆಯ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಸಾಗಿಸಿದರು.

ಅಪಘಾತಕ್ಕೀಡಾದ ಟೆಂಪೋ ಟ್ರಾವೆಲರ್‌ನಲ್ಲಿದ್ದ ಪ್ರಯಾಣಿಕರು ಬೆಳಗಾವಿಯವರು.ಟಿಟಿ ವಾಹನದಲ್ಲಿ 19 ಮಂದಿ ವಾಪಸಾಗುತ್ತಿದ್ದರು ಆಗ ಲಾರಿಗೆ ವಾಹನ ಡಿಕ್ಕಿ ಹೊಡೆದಿದೆ.

ಬೆಳಗಾವಿಯ ನಾಲ್ವರು ಇಂದೋರ್​ನ ಇಬ್ಬರು ಸಾವನ್ನಪ್ಪಿದ್ದು,16 ಮಂದಿ ಗಾಯಗೊಂಡಿದ್ದಾರೆ.

ಕುಂಭ ಮೇಳಕ್ಕೆ ಹೋಗಿ ಬರುವಾಗ ಅಪಘಾತ:6 ಮಂದಿ ಸಾವು Read More

ನಟಿ ಹೇಮಾಮಾಲಿನಿ ಹೇಳಿಕೆಗೆ ವಿರೋಧ

ನವದೆಹಲಿ: ಮಹಾ ಕುಂಭ ಮೇಳದಲ್ಲಿ ನಡೆದ ಕಾಲ್ತುಳಿತ ದೊಡ್ಡ ಘಟನೆ ಏನಲ್ಲ ಎಂದು ಹೇಳಿರುವ ಸಂಸದೆ ಹಾಗೂ ಬಾಲಿವುಡ್ ಹಿರಿಯ ನಟಿ ಹೇಮಾಮಾಲಿನಿ ನೀಡಿರುವ ಹೇಳಿಕೆ ಚರ್ಚೆಗೆ ಗ್ರಾಸ ಒದಗಿಸಿದೆ.

ಕುಂಭ ಮೇಳ ಕಾಲ್ತುಳಿತ ದೊಡ್ಡದೇನಲ್ಲಾ,ಆದರೆ ಅದನ್ನು ದೊಡ್ಡದಾಗಿ ಬಿಂಬಿಸಲಾಗುತ್ತಿದೆ ಎಂದು ಮಂಗಳವಾರ ಮಾಧ್ಯಮಗಳಿಗೆ ಅವರು ಹೇಳಿದ್ದರು.

ಜನವರಿ 29 ರ ಮೌನಿ ಅಮವಾಸ್ಯೆಯಂದು ಸಂಭವಿಸಿದ ಕಾಲ್ತುಳಿತದಲ್ಲಿ ನೂರಾರು ಮಂದಿ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಆದರೆ ಉತ್ತರ ಪ್ರದೇಶ ಸರ್ಕಾರ ಬಿಡುಗಡೆ ಮಾಡಿದ ಅಧಿಕೃತ ಅಂಕಿ ಅಂಶಗಳ ಪ್ರಕಾರ, ಪ್ರಯಾಗ್‌ರಾಜ್‌ನ ಸಂಗಮ್ ಪ್ರದೇಶದಲ್ಲಿ ಬೆಳಗಿನ ಜಾವ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 30 ಜನ ಪ್ರಾಣ ಕಳೆದುಕೊಂಡಿದ್ದು, 60 ಮಂದಿ ಗಾಯಗೊಂಡಿದ್ದಾರೆ.

ನಾವು ಕುಂಭ ಮೇಳಕ್ಕೆ ಹೋಗಿದ್ದೆವು, ಚೆನ್ನಾಗಿಯೇ ಸ್ನಾನ ಮಾಡಿದೆವು, ಎಲ್ಲವನ್ನೂ ಚೆನ್ನಾಗಿ ನಿರ್ವಹಿಸಲಾಗಿತ್ತು,ಆದರೂ ಕಾಲ್ತುಳಿತದ ಘಟನೆ ನಡೆದಿದೆ. ಅದು ದೊಡ್ಡ ಘಟನೆಯೇನಲ್ಲ, ಆದರೆ ಅದನ್ನು ದೊಡ್ಡದಾಗಿ ಬಿಂಬಿಸಲಾಗುತ್ತಿದೆ, ಕುಂಭ ಮೇಳವನ್ನು ತುಂಬಾ ಚೆನ್ನಾಗಿ ನಿರ್ವಹಿಸಲಾಗಿದೆ ಎಂದು ಸಂಸದೆ ಹೇಳಿದ್ದರು.

ಇದಕ್ಕೆ ಬಹಳಷ್ಟು ಮಂದಿ ಟೀಕಿಸಿದ್ದಾರೆ. ನಿಮ್ಮ ಕುಟುಂಬದವರು ಏನಾದರೂ ಅಂತಹ ಸಂಕಷ್ಟದಲ್ಲಿ ಸಿಲುಕಿದ್ದರೆ ನಿಮಗೆ ದೊಡ್ಡ ಘಟನೆಯೊ,ಸಣ್ಣ ಘಟನೆಯೊ ತಿಳಿಯುತಿತ್ತು.ನಿಮ್ಮಂತವರಿಗೆ ಎಲ್ಲಾ ಸಣ್ಣ ಘಟನೆಯೇ ಎಂದು ಕಿಡಿಕಾರಿದ್ದಾರೆ.

ನಟಿ ಹೇಮಾಮಾಲಿನಿ ಹೇಳಿಕೆಗೆ ವಿರೋಧ Read More

ಕುಂಭಮೇಳ ಕಾಲ್ತುಳಿತ ಪ್ರಕರಣ:ಅರ್ಜಿ ವಜಾ

ನವದೆಹಲಿ: ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಡಿಸ್ಮಿಸ್ ಮಾಡಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಪಿ.ವಿ ಸಂಜಯ್ ಕುಮಾರ್ ಅವರ ಪೀಠವು ಅರ್ಜಿ ವಿಚಾರಣೆ ನಡೆಸಿತು. ಕಾಲ್ತುಳಿತವು ದುರದೃಷ್ಟಕರ ಮತ್ತು ಕಳವಳಕಾರಿ ವಿಷಯವಾಗಿದೆ ಎಂದು ಹೇಳಿದೆ.

ಅರ್ಜಿದಾರರು ಅಲಹಾಬಾದ್ ಹೈಕೋರ್ಟ್‌ಗೆ ಮನವಿ ಸಲ್ಲಿಸಬಹುದು ಎಂದು ಪೀಠ ತಿಳಿಸಿದೆ.

ದೇಶಾದ್ಯಂತ ಯಾತ್ರಾರ್ಥಿಗಳಿಗೆ ಸುರಕ್ಷತಾ ಕ್ರಮಗಳು ಮತ್ತು ಮಾರ್ಗಸೂಚಿಗಳನ್ನು ಜಾರಿಗೆ ತರಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಪಿಐಎಲ್ ಅನ್ನು ಪರಿಗಣಿಸಲು ಕೋರ್ಟ್‌ ನಿರಾಕರಿಸಿದೆ.

ಜ.29 ರಂದು ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿದ್ದರು. 60 ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದರು.ಈ ಹಿನ್ನೆಲೆಯಲ್ಲಿ ವಕೀಲ ವಿಶಾಲ್ ತಿವಾರಿ ಅವರು ಕ್ರಮ ಕೈಗೊಳ್ಳುವಂತೆ ಅರ್ಜಿ ಸಲ್ಲಿಸಿದ್ದರು.

ಕುಂಭಮೇಳ ಕಾಲ್ತುಳಿತ ಪ್ರಕರಣ:ಅರ್ಜಿ ವಜಾ Read More

ಮಹಾ ಕುಂಭ ಮೇಳದಲ್ಲಿ ಕಾಲ್ತುಳಿತ:ವದಂತಿಗಳಿಗೆ ಕಿವಿಗೊಡಬೇಡಿ-ಯೋಗಿ

ಪ್ರಯಾಗ್ರಾಜ್: ಮಹಾ ಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತದ ಬಗ್ಗೆ ‌ವದಂತಿಗಳಿಗೆ ಕಿವಿಗೊಡಬೇಡಿ ಎಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಮನವಿ ಮಾಡಿದ್ದಾರೆ.

ಈ ಸಂಬಂಧ ಯೋಗಿ ಆದಿತ್ಯನಾಥ್ ಅವರು ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿ, ಮಾಹಿತಿ ಪಡೆದುಕೊಂಡು ಕೆಲ ಸೂಚನೆಗಳನ್ನು ನೀಡಿದ್ದಾರೆ.

ಸಭೆ ಬಳಿಕ ಪ್ರತಿಕ್ರಿಯೆ ನೀಡಿದ ಯೋಗಿ ಅವರು, ಸ್ಥಳದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದು ಹೇಳಿದರು.

ಇಂದು ಪ್ರಯಾಗ್‌ರಾಜ್‌ನಲ್ಲಿ ಸುಮಾರು 8 ರಿಂದ 10 ಕೋಟಿ ಭಕ್ತರು ಸೇರಿದ್ದು, ಸಂಗಮದೆಡೆಗೆ ಭಕ್ತರ ಸಂಚಾರ ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದ್ದರಿಂದ ಕಾಲ್ತುಳಿತ ಆಗಿದೆ, ಅಖಾರ ಮಾರ್ಗದಲ್ಲಿ ಬ್ಯಾರಿಕೇಡಿಂಗ್ ದಾಟಲು ಕೆಲವರು ಯತ್ನಿಸಿದಾಗ ಹಲವು ಭಕ್ತರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದರು.

ಕಳೆದ ರಾತ್ರಿಯಿಂದ ಮೌನಿ ಅಮವಾಸ್ಯೆ ಮಹೂರ್ತ ಆರಂಭವಾದಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ.

ನಾಗ್ ವಾಸುಕಿ ಮಾರ್ಗ ಮತ್ತು ಸಂಗಮ್ ಮಾರ್ಗದಲ್ಲಿ ಹೆಚ್ಚಿನ ಜನಸಂದಣಿ ಇದೆ. ಜನರು ಯಾವುದೇ ವದಂತಿಗಳಿಗೆ ಗಮನ ಕೊಡಬಾರದು,ಕುಂಭಮೇಳ ನಡೆಯುತ್ತಿರುವ ಪ್ರದೇಶದಲ್ಲಿ ಘಾಟ್‌ಗಳನ್ನು ನಿರ್ಮಿಸಲಾಗಿದೆ. ಭಕ್ತರು ಸಂಗಮದ ಬಳಿ ಸಮೀಪದ ಘಾಟ್‌ಗಳಲ್ಲಿ ಪವಿತ್ರ ಸ್ನಾನ ಮಾಡಬಹುದು ಎಂದು ಮನವಿ ಮಾಡಿದರು.

ಅಲ್ಲಿಯೂ ಸಂಗಮದ ನೀರು ಬರುತ್ತಿದೆ. ಭಕ್ತರ ಅನುಕೂಲಕ್ಕಾಗಿ ಭಾರತೀಯ ರೈಲ್ವೇ ವಿಶೇಷ ರೈಲುಗಳನ್ನು ವ್ಯವಸ್ಥೆ ಮಾಡಿದೆ. ಭಕ್ತರನ್ನು ಅವರವರ ಸ್ಥಳಗಳಿಗೆ ಹಿಂತಿರುಗಿಸಲು ಪ್ರಯಾಗರಾಜ್ ಪ್ರದೇಶದ ವಿವಿಧ ನಿಲ್ದಾಣಗಳಿಂದ ವಿಶೇಷ ರೈಲುಗಳ ವ್ಯವಸ್ಥೆಗಳಿವೆ ಎಂದು ಹೇಳಿದರು.

ಮಹಾ ಕುಂಭ ಮೇಳದಲ್ಲಿ ಕಾಲ್ತುಳಿತ:ವದಂತಿಗಳಿಗೆ ಕಿವಿಗೊಡಬೇಡಿ-ಯೋಗಿ Read More