ಪ್ರತಿಭಟನೆ ವೇಳೆ ರೈತ ತೀವ್ರ ಅಸ್ವಸ್ಥ

ಬೆಳಗಾವಿ: ಚಳಿಗಾಲದ ಅಧಿವೇಶನ ಮೂರನೇಯ ದಿನ ಕೂಡಾ ವಿವಿಧ ಸಂಘಟನೆಗಳ ಪ್ರತಿಭಟನೆ ತೀವ್ರಗೊಂಡಿದ್ದು,ಈ ವೇಳೆ ರೈತರೊಬ್ಬರು ತೀವ್ರವಾಗಿ ‌ಅಸ್ವಸ್ಥಗೊಂಡ ಪ್ರಸಂಗ ನಡೆದಿದೆ.

ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ಕಾವು ಜೋರಾಗಿದೆ,
ಈ ಸಂದರ್ಭದಲ್ಲಿ ರಾಯಬಾಗ ತಾಲೂಕಿನ ಕುಡಚಿ ಗ್ರಾಮದ ರೈತ ಯಲ್ಲಪ್ಪಾ ಹಿರೇಕುರಬರ (35) ಅವರು ಅಸ್ವಸ್ಥರಾಗಿದ್ದಾರೆ.

ಬುಧವಾರ ಸುವರ್ಣಸೌಧದ ಪಕ್ಕದಲ್ಲಿರುವ ಪ್ರತಿಭಟನಾ ಸ್ಥಳದಲ್ಲಿ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹೋರಾಟ ನಡೆಸುತ್ತಿದ್ದಾಗ ಭಾರೀ ಒತ್ತಡ, ಜನಸಮೂಹ ಹಾಗೂ ದೀರ್ಘ ಕಾಲದಿಂದ ಕೂಗಾಟ, ಘೋಷಣೆಗಳ ತೀವ್ರಗೊಂಡಿತು,ಆಗ ರೈತ ಯಲ್ಲಪ್ಪಾ ಹಿರೇಕುರಬರ ತಲೆ ಸುತ್ತಿ ನೆಲಕ್ಕೆ ಬಿದ್ದರು.

ತಕ್ಷಣ ಇತರೆ ರೈತರು, ಸಂಘಟಕರು ಹಾಗೂ ಪೊಲೀಸರು ಶಿಶ್ರೂಷೆ ಮಾಡಿದರು.
ಸ್ಥಳಕ್ಕೆ ವೈದ್ಯಕೀಯ ಸಿಬ್ಬಂದಿ ಧಾವಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ, ಅವರನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದರು.
ಇದರಿಂದ ಆತಂಕ ಹಾಗೂ ಗೊಂದಲ ವಾತಾವರಣ ನಿರ್ಮಾಣಕೊಂಡಿತ್ತು, ಬಳಿಕ ಪರಿಸ್ಥಿತಿ ನಿಯಂತ್ರಣಕ್ಕೆ ತರಲಾಯಿತು.

ಯಲ್ಲಪ್ಪಾ ಹಿರೇಕುರಬರ ಅವರ ಆರೋಗ್ಯ ಸ್ಥಿತಿ ಈಗ ಸ್ಥಿರವಾಗಿದೆ ಎಂದು ಆಸ್ಪತ್ರೆಗೆ ಮೂಲಗಳು ತಿಳಿಸಿವೆ.

ರೈತರ ಬೇಡಿಕೆಗಳನ್ನು ತ್ವರಿತವಾಗಿ ಮೌಲ್ಯಮಾಪನ ಮಾಡಿ ಈಡೇರಿಸಲು ಸರಕಾರ ಕೂಡಲೇ ಕ್ರಮ ಕೈಗೊಳಬೇಕೆಂದು ಪ್ರತಿಭಟನಾ ನಿರತರು ಆಗ್ರಹಿಸಿದ್ದಾರೆ.

ಪ್ರತಿಭಟನೆ ವೇಳೆ ರೈತ ತೀವ್ರ ಅಸ್ವಸ್ಥ Read More

ಸುವರ್ಣಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಪೊಲೀಸ್ ವಶಕ್ಕೆ

ಬೆಳಗಾವಿ: ರಾಜ್ಯ ಸರಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿಗರು ಬೃಹತ್ ಪ್ರತಿಭಟನೆ ನಡೆಸಿದರು.
ಮೊದಲಿಗೆ ಬೆಳಗಾವಿಯ ಮಾಲಿನಿ ಸಿಟಿಯಲ್ಲಿ ಬೃಹತ್ ಸಮಾವೇಶ ನಡೆಸಿದ ಬಿಜೆಪಿ ನಾಯಕರು ನಂತರ ಬೃಹತ್ ರ‌್ಯಾಲಿ ಮೂಲಕ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.

ಬಿಗಿ ಪೊಲೀಸ್ ಬಂದೊಬಸ್ತ್ ಮಾಡಿರುವುದರಿಂದ ಮುತ್ತಿಗೆ ಯತ್ನ ವಿಫಲವಾಯಿತು.

ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ,ಅಶೋಕ ಸೇರಿದಂತೆ ನೂರಾರು ಪ್ರಮುಖ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರೈತ ವಿರೋಧಿ ಸರಕಾರ ಎಂದು ದಿಕ್ಕಾರ ಕೂಗುತ್ತಿದ್ದ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವ ವೇಳೆ ಹೈಡ್ರಾಮಾನೆ ಸೃಷ್ಟಿಯಾಯಿತು.

ಈ ಸಂದರ್ಭದಲ್ಲಿ ಪೊಲೀಸರು ಮತ್ತು ಬಿಜೆಪಿ ನಾಯಕರ ನಡುವೆ ತೀವ್ರ ವಾಗ್ವಾದ ನಡೆಯಿತು.
ಶಾಸಕರಾದ ಚಲವಾದಿ ರವಿಕುಮಾರ್, ಬಾಲಚಂದ್ರ ಜಾರಕಿಹೊಳಿ, ನಿಖಿಲ್ ಕತ್ತಿ ಸೇರಿ 50ಕ್ಕೂ ಹೆಚ್ಚು ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.

ಸುವರ್ಣಸೌಧ ಮುತ್ತಿಗೆ ಹಾಕುವ ಮುನ್ನ ನಡೆದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಸರಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಅತೀವೃಷ್ಟಿ, ಬೆಳೆ ಹಾನಿಗೆ ರಾಜ್ಯ ಸರಕಾರ ಸೂಕ್ತವಾಗಿ ಸ್ಪಂದಿಸಿಲ್ಲ. ಬೆಳೆ ಪರಿಹಾರವನ್ನು ತಕ್ಷಣ ರೈತರಿಗೆ ಕೊಡಬೇಕು ಎಂದು ಆಗ್ರಹಿಸಿದರು.

ಕಬ್ಬು ಬೆಳೆಗಾರರಿಗೆ ಹೆಚ್ಚು ದರ ಕೊಡಿ ಕಬ್ಬು ಬೆಳೆಗೆ ಎಫ್‌ಆರ್‌ಪಿ ನಿಗದಿ ಮಾಡಿದ್ದರೂ, ಆ ದರಕ್ಕಿಂತ ಹೆಚ್ಚಿನ ದರ ನೀಡುವ ಅವಕಾಶ ರಾಜ್ಯ ಸರ್ಕಾರಕ್ಕೆ ಇದೆ. ಕಬ್ಬು ಬೆಳೆಗಾರರಿಗೆ ಹೆಚ್ಚು ದರ ಕೊಡಲು ನಿಮಗೆ ಏನು ಕಷ್ಟ ಎಂದು ಆಕ್ರೋಶದಿಂದ ವಿಜಯೇಂದ್ರ ಪ್ರಶ್ನಿಸಿದರು.

ಈ ಹಿಂದೆ ಯಡಿಯೂರಪ್ಪ ಅವರು ರೈತರು ಸಂಕಷ್ಟದಲ್ಲಿದ್ದಾಗ ಅವರೊಂದಿಗೆ ಇರುತ್ತಿದ್ದರು. ಅದೇ ರೀತಿ ನಾನು ಹಾಗೂ ನಮ್ಮ ಪಕ್ಷವು ಯಾವಾಗಲೂ ರೈತರ ಜೊತೆ ಇರುತ್ತೇವೆ ಎಂದು ಭರವಸೆ ನೀಡಿದರು.

ಸುವರ್ಣಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಪೊಲೀಸ್ ವಶಕ್ಕೆ Read More

ಚಳಿಗಾಲದ ಅಧಿವೇಶನ:ಸರ್ಕಾರಕ್ಕೆ ಪ್ರತಿಭಟನೆ ಬಿಸಿ-ಸ್ಥಳ ವೀಕ್ಷಿಸಿದ ಪೊಲೀಸರು

ಬೆಳಗಾವಿ: ಸೋಮವಾರದಿಂದ ಪ್ರಾರಂಭವಾಗುವ ಚಳಿಗಾಲದ ಅಧಿವೇಶನದ ವೇಳೆ ಬಿಜೆಪಿ ಸೇರಿದಂತೆ ಹಲವು ಸಂಘಟನೆಗಳು ಪ್ರತಿಭಟನೆ ನಡೆಸಲಿರುವ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳು ಸ್ಥಳ ಪರಿಶೀಲಿಸಿದರು.
ಸುವರ್ಣಸೌಧದ ಬಳಿ
ಡಿಸೆಂಬರ್ 9 ರಂದು ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಲಿದ್ದು, ನಗರ ಪೊಲೀಸರು ಬಿಜೆಪಿ‌ ಮುಖಂಡರೊಂದಿಗೆ ಸ್ಥಳ ಪರಿಶೀಲಿಸಿದರು.
ರೈತರ ಜಟಿಲ ಸಮಸ್ಯೆಗಳು ಹಾಗೂ ಉತ್ತರ ಕರ್ನಾಟಕ ಭಾಗದ ಬೇಡಿಕೆಗಳನ್ನು ಸರಕಾರ ಈಡೇರಿಸಬೇಕು ಎಂದು ಬಿಜೆಪಿ ಒತ್ತಾಯಿಸಿ ಸುವರ್ಣಸೌಧ ಮುತ್ತಿಗೆ ಹಾಕಲು ಪ್ಲ್ಯಾನ್ ಮಾಡಿಕೊಂಡಿದೆ.
ಪ್ರತಿಭಟನೆ ನಡೆಯಲಿರುವ ಸ್ಥಳಕ್ಕೆ ಬೆಳಗಾವಿ ನಗರ ಡಿಸಿಪಿ ಬಾರಾಯಣ ಭರಮನಿ ಹಾಗೂ ಹಿರಿಯ ಅಧಿಕಾರಿಗಳು ಮತ್ತು
ಬಿಜೆಪಿ ನಾಯಕರು ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿ ಕುಮಾರ್ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಯಿತು.
ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಬೆಳಗಾವಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಸುಭಾಷ ಪಾಟೀಲ ಹಾಜರಿದ್ದರು.

ಚಳಿಗಾಲದ ಅಧಿವೇಶನ:ಸರ್ಕಾರಕ್ಕೆ ಪ್ರತಿಭಟನೆ ಬಿಸಿ-ಸ್ಥಳ ವೀಕ್ಷಿಸಿದ ಪೊಲೀಸರು Read More

ಪೊಲೀಸರ ಮೇಲೆ ಹಲ್ಲೆ:11 ಮಂದಿ ವಿರುದ್ಧ ‌ಎಫ್ಐಆರ್

ಬೆಳಗಾವಿ: ಕಬ್ಬು ಬೆಳೆಗಾರರು ಬೆಳಗಾವಿಯ ಹತ್ತರಗಿ, ರಾಷ್ಟ್ರೀಯ ಹೆದ್ದಾರಿ 4ರ ಟೋಲ್ ನಾಕಾ ಬಳಿ ನಡೆಸುತ್ತಿದ್ದ ಪ್ರತಿಭಟನೆ ವೇಳೆ ಕಲ್ಲು ತೂರಾಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಪಿಎಸ್ಐ ಆರ್.ವಿ.ಪಾಟೀಲ್ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತಿಭಟನೆ ವೇಳೆ ಪೊಲೀಸರ ಮೇಲೆ ದುರುದ್ದೇಶದಿಂದ ಕಲ್ಲು ತೂರಾಟ ನಡೆಸಿ, ಪೊಲೀಸರನ್ನು ಒದ್ದು ಹಲ್ಲೆ ನಡೆಸಲಾಗಿದೆ. ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿಯುಂಟು ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಯಮಕನಮರಡಿ ಠಾಣೆಯಲ್ಲಿ 11 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಪೊಲೀಸರ ಮೇಲೆ ಹಲ್ಲೆ:11 ಮಂದಿ ವಿರುದ್ಧ ‌ಎಫ್ಐಆರ್ Read More

ನಂದಿನಿ ತುಪ್ಪದ ದರ ಏರಿಕೆ ಖಂಡಿಸಿಕರ್ನಾಟಕ ಸೇನಾ ಪಡೆ ಪ್ರತಿಭಟನೆ

ಮೈಸೂರು: ಏಕಾಏಕಿ ನಂದಿನಿ ತುಪ್ಪದ ದರವನ್ನು ಏರಿಕೆ ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಹಾಗೂ ಯಾವುದೇ ಕಾರಣಕ್ಕೂ ಹಾಲಿನ ದರವನ್ನು ಮತ್ತೆ ಏರಿಕೆ ಮಾಡಬಾರದೆಂದು ಆಗ್ರಹಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ಮೈಸೂರಿನ ಹಳೇ ಜಿಲ್ಲಾಧಿಕಾರಿ‌ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.

ಜಿಎಸ್‌ಟಿ ಇಳಿಕೆ ಖುಷಿಯಲ್ಲಿದ್ದ ರಾಜ್ಯದ ಜನತೆಗೆ, ಸರ್ಕಾರ ನಂದಿನಿ ತುಪ್ಪದ ದರವನ್ನು ಏಕಾಏಕಿ 90 ರೂ. ಏರಿಸಿ ಶಾಕ್ ನೀಡಿದೆ ಎಂದು ಪ್ರತಿಭಟನಾ ನಿರತರು ಕಿಡಿಕಾರಿದರು.

ಇತ್ತೀಚಿಗಷ್ಟೇ ಕೇಂದ್ರ ಸರ್ಕಾರ ಜಿ ಎಸ್ ಟಿ ದರ ಇಳಿಸಿದ್ದರಿಂದ ನಂದಿನಿ ತುಪ್ಪದ ಬೆಲೆ 650 ರೂ ನಿಂದ 610 ರೂ ಗೆ ಇಳಿದಿತ್ತು. ಈಗ ರಾಜ್ಯ ಸರ್ಕಾರ 90 ರೂ ಏಕಾಏಕಿ ಹೆಚ್ಚಿಸಿ ರೂ.700 ಆಗುದೆ.ಇದು ಜನರಿಗೆ ಬಹು ದೊಡ್ಡ ಹೊರೆಯಾಗಿದೆ.

ಇದರಿಂದ ಸರ್ಕಾರದ ನಂದಿನಿ ತುಪ್ಪಕ್ಕೆ ಗ್ರಾಹಕರ ಸಂಖ್ಯೆಯಲ್ಲಿ ಭಾರಿ ಇಳಿಮುಖವಾಗುವ ಸಾಧ್ಯತೆಯಿದೆ. ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಈಗ ಕೆಎಂಎಫ್ ನಂದಿನಿ ತುಪ್ಪದ ಬೆಲೆ ಬಹಳ ದುಬಾರಿಯಾಗಿದೆ ಎಂದು ಕರ್ನಾಟಕ ಸೇನಾ ಪಡೆ ಜಿಲ್ಲಾಧ್ಯಕ್ಷ‌ ತೇಜೇಶ್ ಲೋಕೇಶ್ ಗೌಡ ಹೇಳಿದರು.

ಪಂಚ ಗ್ಯಾರಂಟಿಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್, ಅವುಗಳನ್ನು ನೀಡಲಾಗದೆ ರಾಜ್ಯವನ್ನು ದಿವಾಳಿ ಮಾಡಿದೆ. ಸರ್ಕಾರ 5 ಬಿಟ್ಟಿ ಭಾಗ್ಯಗಳಿಗಾಗಿ ನಮ್ಮ ರಾಜ್ಯದ ಜನತೆಯಿಂದಲೇ ಹಣ ವಸೂಲು ಮಾಡಿ ನಮ್ಮ ತೆರಿಗೆ ಹಣವನ್ನು ಬಿಟ್ಟಿ ಭಾಗ್ಯಗಳಾಗಿ ನೀಡುತ್ತಿದೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಪ್ರತಿನಿತ್ಯ ಒಂದಲ್ಲ ಒಂದು ದರಗಳನ್ನು ಏರಿಸುತ್ತಿದೆ. ಬಸ್ ದರ, ಡೀಸೆಲ್ ದರ, ಆಸ್ತಿ ದರ, ವಿದ್ಯುತ್ ದರ, ಹಾಲು ಮೊಸರಿನ ದರ, ಸ್ಟ್ಯಾಂಪ್ ಪೇಪರ್ ದರ, ಮಧ್ಯದ ದರ, ಜೊತೆಗೆ ಈಗ ಕೆಎಂಎಫ್ ನಂದಿನಿ ತುಪ್ಪದ ದರವನ್ನು ಏರಿಸಿ, ರಾಜ್ಯದ ಜನತೆಗೆ ಬರೆ ಎಳೆದಿದೆ‌ ಎಂದು ಆಕ್ರೋಶ‌ ವ್ಯಕ್ತಪಡಿಸಿದರು.

ರಾಜ್ಯದಲ್ಲಿರುವ ಎಲ್ಲಾ ರಸ್ತೆಗಳು ಹಾಳಾಗಿ ಗುಂಡಿಗಳಂತಾಗಿದೆ. ಗುಂಡಿ ಮುಚ್ಚಲು ಸರ್ಕಾರದ ಬೊಕ್ಕಸದಲ್ಲಿ ಹಣವಿಲ್ಲ. ರೈತರಿಗೆ ಅವರು ಬೆಳೆದ ಬೆಳೆಗೆ ನ್ಯಾಯಯುತ ಬೆಲೆ ಸಿಗುತ್ತಿಲ್ಲ ಎಂದು ಅಸಮಾಧಾನ ‌ವ್ಯಕ್ತಪಡಿಸಿದರು.

ಇಷ್ಟೆಲ್ಲ ಬೆಲೆ ಏರಿಕೆಗಳ ಮಧ್ಯೆ ರಾಜ್ಯ ಸರ್ಕಾರ ಮತ್ತೆ ಹಾಲಿನ ದರವನ್ನು ಏರಿಸಲು ಚಿಂತನೆ ನಡೆಸುತ್ತಿರುವುದು ಹೇಯ ಕೆಲಸ ಎಂದು ಹೇಳಿದರು.

ರಾಜ್ಯ ಸರ್ಕಾರ ಈ ಕೂಡಲೇ ನಂದಿನಿ ತುಪ್ಪದ ಹೆಚ್ಚಿಸಿರುವ ದರವನ್ನು ಇಳಿಸಬೇಕು ಹಾಗೂ ಯಾವುದೇ ಕಾರಣಕ್ಕೂ ಸರ್ಕಾರ ಅತೀ ಅಗತ್ಯ ವಸ್ತುವಾಗಿರುವ ಹಾಲಿನ ದರ ಏರಿಕೆ ಪ್ರಸ್ತಾವನೆಯನ್ನು ಕೈಬಿಡಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯ ನೇತೃತ್ವವನ್ನು ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ ವಹಿಸಿದ್ದರು.

ಗೋಲ್ಡನ್ ಸುರೇಶ್, ಪ್ರಭುಶಂಕರ್, ಕೃಷ್ಣಪ್ಪ, ಸಿಂದುವಳ್ಳಿ ಶಿವಕುಮಾರ್, ಬೋಗಾದಿ ಸಿದ್ದೇಗೌಡ, ಮಧುವನ ಚಂದ್ರು, ಪ್ರಜೀಶ್, ಶಿವಲಿಂಗಯ್ಯ, ನೇಹಾ, ಭಾಗ್ಯಮ್ಮ, ಗಿರೀಶ್ ಹೆಚ್, ಶ್ರೀನಿವಾಸ್, ಮಂಜುಳ, ಪದ್ಮ, ಡಾ. ಶಾಂತರಾಜೇಅರಸ್, ಕುಮಾರ್, ಎಳನೀರು ರಾಮಣ್ಣ, ಪ್ರದೀಪ್, ರಾಧಾಕೃಷ್ಣ , ಶಿವರಾಂ, ಸುಶೀಲ, ಹನುಮಂತೇಗೌಡ, ಸುಜಾತಾ, ರಘು ಅರಸ್, ಬಸವರಾಜು, ನಾರಾಯಣ ಗೌಡ, ತ್ಯಾಗರಾಜ್, ರಘು ಆಚಾರ್, ಆನಂದ್ ಗೌಡ,ದರ್ಶನ್ ಗೌಡ, ಗಣೇಶ್ ಪ್ರಸಾದ್, ರವಿ ನಾಯಕ್, ರವೀಶ್, ವಿಷ್ಣು ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನಂದಿನಿ ತುಪ್ಪದ ದರ ಏರಿಕೆ ಖಂಡಿಸಿಕರ್ನಾಟಕ ಸೇನಾ ಪಡೆ ಪ್ರತಿಭಟನೆ Read More

ಕಬ್ಬು ಬೆಳೆಗಾರರ ಹೋರಾಟಕ್ಕೆ ಆಮ್ ಆದ್ಮಿ ಪಕ್ಷ ಪೂರ್ಣ ಬೆಂಬಲ-ಮುಖ್ಯಮಂತ್ರಿ ಚಂದ್ರು

ಬೆಂಗಳೂರು: ಕಬ್ಬು ಬೆಳೆಗಾರರ ಹೋರಾಟಕ್ಕೆ
ಆಮ್ ಆದ್ಮಿ ಪಕ್ಷ ಸಂಪೂರ್ಣ ಬೆಂಬಲ ಸೂಚಿಸುತ್ತದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಪ್ರಕಟಿಸಿದ್ದಾರೆ.

ಕೇಂದ್ರ ಸರ್ಕಾರವು ಕಬ್ಬು ಬೆಳೆಗಾರರಿಗೆ ನಿಗದಿ ಮಾಡಿರುವ 3,550 ರೂ.ಗಳ ಎಫ್. ಆರ್. ಪಿ ದರವನ್ನು ನೀಡಲು ಹಿಂಜರಿಯುತ್ತಿರುವ ಕರ್ನಾಟಕದ ಸಕ್ಕರೆ ಕಾರ್ಖಾನೆಗಳ ಮಾಲೀಕರ ಕ್ರಮವನ್ನು ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆ ಮಾಲೀಕರುಗಳ ಪರವಾದ ಧೋರಣೆಯನ್ನು ನಮ್ಮ ಪಕ್ಷ ಸಂಪೂರ್ಣ ಖಂಡಿಸುತ್ತದೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರವು ಈಗಾಗಲೇ ಘೋಷಿಸಿರುವ ಎಫ್‌ಆರ್‌ಪಿ ದರವು ಅವೈಜ್ಞಾನಿಕವಾಗಿದೆ,ಇದು ಕಬ್ಬು ಬೆಳೆದಿರುವ ರೈತರಿಗೆ ಸಾಕಷ್ಟು ನಷ್ಟವಾಗುತ್ತದೆ. ಇದನ್ನು ಪರಿಷ್ಕರಿಸುವ ಸಂಪೂರ್ಣ ಅಧಿಕಾರ ರಾಜ್ಯ ಸರ್ಕಾರಕ್ಕೆ ಇದೆ. ಆದರೆ ರಾಜ್ಯದ ಕಾರ್ಖಾನೆ ಮಾಲೀಕರುಗಳೆಲ್ಲರೂ ಮೂರು ಪಕ್ಷಗಳ ಪ್ರಮುಖರು ಮಂತ್ರಿಗಳು, ಶಾಸಕರು, ಸಂಸದರುಗಳೇ ಆಗಿದ್ದಾರೆ. ಇವರ ಒತ್ತಡಕ್ಕೆ ಸಂಪೂರ್ಣ ಶರಣಾಗಿರುವ ರಾಜ್ಯ ಸರ್ಕಾರವು ಕೇಂದ್ರ ನಿಗದಿಪಡಿಸಿರುವ ದರವನ್ನು ಪರಿಷ್ಕರಿಸಿಲ್ಲ ಎಂದು ಕಿಡಿಕಾರಿದ್ದಾರೆ.

ರಾಜ್ಯ ಸರ್ಕಾರ ಕೇಂದ್ರವು ನಿಗದಿಪಡಿಸಿರುವ ದರ ಸಹ ನೀಡಲು ಒಪ್ಪಿಕೊಳ್ಳದ ಮಾಲೀಕರುಗಳ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ದುರುಳ ನೀತಿಯನ್ನು ಆಮ್ ಆದ್ಮಿ ಪಕ್ಷವು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಮುಖ್ಯ ಮಂತ್ರಿ ಚಂದ್ರು ಎಚ್ಚರಿಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿಗಳಾದಿಯಾಗಿ ಸಕ್ಕರೆ ಸಚಿವರು ಹಾಗೂ ಕಬ್ಬು ನಿಯಂತ್ರಣ ಪ್ರಾಧಿಕಾರ ಸಂಪೂರ್ಣ ಕಾರ್ಖಾನೆಗಳ ಮಾಲೀಕರುಗಳ ಪರವಾದ ಧೋರಣೆಯನ್ನು ತಳೆದಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ನಾಚಿಕೆ ಇಲ್ಲದ ರಾಜ್ಯದ ಬಿಜೆಪಿ ನಾಯಕರುಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮೇಲೆ ಒತ್ತಡವನ್ನು ತರದೆ ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿರುವುದು ಕೇವಲ ಪ್ರಚಾರಕ್ಕಾಗಿ ಎಂದು ಮುಖ್ಯಮಂತ್ರಿ ಚಂದ್ರು ಟೀಕಿಸಿದರು.

ಮಹಾರಾಷ್ಟ್ರ, ತಮಿಳುನಾಡು ರಾಜ್ಯದ ಕಾರ್ಖಾನೆಗಳು ಕೇಂದ್ರದ ಎಫ್ ಆರ್ ಪಿ ದರದಲ್ಲಿ ಲಕ್ಷಾಂತರ ಟನ್ ಬೆಳೆದಿರುವ ಕಬ್ಬನ್ನು ತೆಗೆದುಕೊಳ್ಳುತ್ತಿದ್ದಾರೆ. ಇದರಿಂದಾಗಿ ರಾಜ್ಯದ ಬೊಕ್ಕಸಕ್ಕೂ ಸಹ ನಷ್ಟವಾಗುತ್ತಿದೆ. ಆಮ್ ಆದ್ಮಿ ಪಕ್ಷವು ಜಯ ಸಿಕ್ಕುವವರೆಗೂ ರೈತರ ಜೊತೆಗಿದ್ದು ಅವರ ಹೋರಾಟದಲ್ಲಿ ಸಂಪೂರ್ಣ ಭಾಗವಹಿಸುತ್ತೇವೆ ಮುಖ್ಯಮಂತ್ರಿ ಚಂದ್ರು ತಿಳಿಸಿದರು.

ಕಬ್ಬು ಬೆಳೆಗಾರರ ಹೋರಾಟಕ್ಕೆ ಆಮ್ ಆದ್ಮಿ ಪಕ್ಷ ಪೂರ್ಣ ಬೆಂಬಲ-ಮುಖ್ಯಮಂತ್ರಿ ಚಂದ್ರು Read More

ಜಾತಿ ಗಣತಿ: ಶಿಕ್ಷಕರಿಗೆ ಸರಿಯಾದ ಮಾಹಿತಿ ನೀಡದ ಸರ್ಕಾರದ ಕ್ರಮ ಖಂಡಿಸಿ ಪ್ರತಿಭಟನೆ

ಮೈಸೂರು: ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಜಾತಿ ಗಣತಿಗೆ ಅನಾರೋಗ್ಯ ಪೀಡಿತ ಅಮಾಯಕ ಶಿಕ್ಷಕರನ್ನು ನಿಯೋಜಿಸಿ, ಜಾತಿ ಗಣತಿಗೆ ಸರಿಯಾದ ಮಾಹಿತಿ ನೀಡದೆ, ಶಿಕ್ಷೆ ನೀಡುತ್ತಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಕರ್ನಾಟಕ‌ ಸೇನಾಪಡೆ ಸದಸ್ಯರು
ಪ್ರತಿಭಟನೆ ನಡಿಸಿದರು.

ಸರ್ಕಾರ ಮನೆಗಳ ಜನಗಣತಿಯ ಪಟ್ಟಿಗಳನ್ನು ಶಿಕ್ಷಕರಿಗೆ ಸರಿಯಾಗಿ ನೀಡದೆ, ಆ ಮನೆಗಳ ಲೋಕೇಶನ್ ತಲುಪುವುದು ಶಿಕ್ಷಕರಿಗೆ ಕಷ್ಟಕರವಾಗಿದೆ. ಮನೆ ಮುಂದೆ ಹಿಂದುಳಿದ ವರ್ಗಗಳ ಆಯೋಗದಿಂದ ಅಂಟಿಸಿರುವ ಯು ಎಚ್ ಐ ಡಿ ಸ್ಟಿಕ್ಕರ್ ಐಡಿ ನಂಬರ್, ಹಳ್ಳಿಗಳಲ್ಲಿ ಬೇರೆ ಬೇರೆ ಜಾಗಗಳಲ್ಲಿ ತೋರಿಸುತ್ತಿರುವುದು ಶಿಕ್ಷಕರಿಗೆ ತೀವ್ರ ತೊಂದರೆಯಾಗಿದೆ ಎಂದು ಪ್ರತಿಭಟನೆ ವೇಳೆ‌ ಕರ್ನಾಟಕ‌ ಸೇನಾಪಡೆ ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ ಬೇಸರ ವ್ಯಕ್ತಪಡಿಸಿದರು.

ಈ ಜನಗಣತಿಯನ್ನು ಸರ್ಕಾರದ ಆನ್ ಲೈನ್ ಆಪ್ ನಲ್ಲಿ ಮಾಡುತ್ತಿರುವುದರಿಂದ ನೆಟ್ವರ್ಕ್ ಹಾಗೂ ಸರ್ವರ್ ಸಮಸ್ಯೆ ಕಾಡುತ್ತಿದೆ. ಜೊತೆಗೆ ಗಣತಿದಾರರ ಹಾಗೂ ಮನೆ ಮಾಲೀಕರ ಒಟಿಪಿ ಗಳು ಸರಿಯಾಗಿ ಬರುತ್ತಿಲ್ಲ, ಅಪ್ಲೋಡ್ ಆಗುತ್ತಿಲ್ಲ. ಜೊತೆಗೆ ಪ್ರತಿಯೊಂದು ಮನೆಯ ಸಮೀಕ್ಷೆಗೆ 60 ಪ್ರಶ್ನೆಗಳನ್ನು ಸರ್ಕಾರ ಕೇಳುತ್ತಿರುವುದು ಅತ್ಯಂತ ಖಂಡನೀಯ ಎಂದು ಹೇಳಿದರು.

ಶಿಕ್ಷಕರಿಗೆ ಅವರು ಕೆಲಸ ಮಾಡುವ ಸ್ಥಳದಿಂದ, ಮತ್ತೊಂದು ದೂರದ ಸ್ಥಳಕ್ಕೆ ಸಮೀಕ್ಷೆಗೆ ಆಯೋಜನೆ ಮಾಡಿರುವುದು ಸರಿಯಲ್ಲ, ಜೊತೆಗೆ ಆಪ್ ನಲ್ಲಿ 60 ಪ್ರಶ್ನೆಗಳಿಗೆ ಸುಮಾರು 1 ಗಂಟೆಗಳ ಕಾಲ ಮಾಹಿತಿ ತುಂಬಿದ ನಂತರ, ದೃಢೀಕರಣ ಅಪ್ಲೋಡ್ ನಾಟ್ ಸಕ್ಸಸ್ ಆದರೆ ಮತ್ತೆ 1 ಗಂಟೆ ಪುನಃ ಸಮಯ ಬೇಕಾಗುತ್ತದೆ ಹಾಗಾಗಿ ಒಂದು ದಿನಕ್ಕೆ ಗರಿಷ್ಟ ಎರಡು ಮೂರು ಮನೆ ಸಮೀಕ್ಷೆ ಮಾಡುವುದೂ ಕಷ್ಟವಾಗುತ್ತದೆ.

ದೈಹಿಕ ನ್ಯೂನತೆಹುಳ್ಳ, ಅನಾರೋಗ್ಯ ಮತ್ತು ವಯಸ್ಸಾದ ಶಿಕ್ಷಕರಿಗೆ ದೂರದ ಊರಿಗೆ ಸಮೀಕ್ಷೆಗೆ ಹೋಗಲು ತೊಂದರೆಯಾಗುತ್ತಿದೆ. ಇಂತಹ ಅನಾರೋಗ್ಯವುಳ್ಳವರು, ವೈದ್ಯಕೀಯ ಸರ್ಟಿಫಿಕೇಟ್ ನೀಡಿದರೂ, ಸರ್ಕಾರ ವಿನಾಯತಿ ನೀಡದಿರುವುದು ಸರಿಯಲ್ಲ, ಸಮೀಕ್ಷೆಯಲ್ಲಿ ಪಾಲ್ಗೊಳ್ಳದೆ ಇರುವ ಶಿಕ್ಷಕರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿಗಳು ಹೇಳುತ್ತಿರುವುದು ಅವರಿಂದ ಬಲವಂತವಾಗಿ ಕೆಲಸ ಮಾಡಿಸುತ್ತಿರುವುದು ಅತ್ಯಂತ ಖಂಡನೀಯ ಎಂದು ಕಿಡಿಕಾರಿದರು.

ಈಗಾಗಲೇ ರಾಜ್ಯ ಸರ್ಕಾರ ಸುಮಾರು 200 ಕೋಟಿ ವ್ಯಯ ಮಾಡಿ ಕಾಂತರಾಜು ವರದಿಯನ್ನು ರೂಪಿಸಿ, ಅದನ್ನು ಕಸದ ಬುಟ್ಟಿಗೆ ಎಸೆದು, ಈಗ ಮತ್ತೆ ಸುಮಾರು 460 ಕೋಟಿ ರೂ ವೆಚ್ಚ ಮಾಡಿ, ಜನಗಣತಿ ಮಾಡಿಸಲು ಹೋಗಿ ನಮ್ಮ ತೆರಿಗೆ ಹಣವನ್ನು ಲೂಟಿ ಮಾಡಲು ಹೊರಟಿದೆ ಎಂದು ತೇಜೇಶ್ ಆರೋಪಿಸಿದರು.

ರಾಜ್ಯ ಸರ್ಕಾರ ಕೂಡಲೇ ಶಿಕ್ಷಕರ ಸಮಸ್ಯೆಗಳನ್ನು ಆಲಿಸಿ, ಆನ್ಲೈನ್ ಆಪ್ ಬದಲು, ಬುಕ್ಲೆಟ್ ಅಥವಾ ಮ್ಯಾನ್ಯುಯಲ್ ಅಪ್ಲಿಕೇಶನ್ ನಲ್ಲಿ ಗಣತಿ ಮಾಡಲಿ ಹಾಗೂ ಅನಾರೋಗ್ಯದಿಂದ ಬಳಲುತ್ತಿರುವವರು ವೈದ್ಯಕೀಯ ಸರ್ಟಿಫಿಕೇಟ್ ನೀಡಿದವರಿಗೆ ಈ ಜಾತಿಗಣತಿಯಿಂದ ರಿಯಾಯಿತಿ ನೀಡಬೇಕೆಂದು ಒತ್ತಾಯಿಸಿದರು.

ಗೋಲ್ಡನ್ ಸುರೇಶ್, ಪ್ರಜೀಶ್, ಪ್ರಭುಶಂಕರ, ಕೃಷ್ಣಪ್ಪ, ಸಿಂದುವಳ್ಳಿ ಶಿವಕುಮಾರ್, ಬೋಗಾದಿ ಸಿದ್ದೇಗೌಡ, ಶಿವಲಿಂಗಯ್ಯ ನೇಹಾ, ಭಾಗ್ಯಮ್ಮ, ಕೃಷ್ಣೆಗೌಡ, ಹೊನ್ನೇಗೌಡ, ಹನುಮಂತಯ್ಯ, ತಾಯೂರು ಗಣೇಶ್, ಎಳನೀರು ರಾಮಣ್ಣ, ಬಸವರಾಜು, ಕುಮಾರ್ ಗೌಡ, ಸುನೀಲ್ ಅಗರವಾಲ್, ಆನಂದ್ ಗೌಡ, ಡಾ. ಶಾಂತರಾಜೇ ಅರಸ್, ರಾಧಾಕೃಷ್ಣ, ರಾಜುಗೌಡ, ರಘು ಅರಸ್, ಮೂರ್ತಿ ಲಿಂಗಯ್ಯ, ಗಣೇಶ್ ಪ್ರಸಾದ್, ದರ್ಶನ್ ಗೌಡ, ರವಿ ನಾಯಕ್, ರವೀಶ್, ಮಹಾದೇವಸ್ವಾಮಿ, ಚಂದ್ರಶೇಖರ್, ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಜಾತಿ ಗಣತಿ: ಶಿಕ್ಷಕರಿಗೆ ಸರಿಯಾದ ಮಾಹಿತಿ ನೀಡದ ಸರ್ಕಾರದ ಕ್ರಮ ಖಂಡಿಸಿ ಪ್ರತಿಭಟನೆ Read More

ನೇಪಾಳದಲ್ಲಿ ಹಿಂಸಾಚಾರ:ಮಾಜಿ ಪ್ರಧಾನಿ ಪತ್ನಿ ಜೀವಂತ‌ ದಹನ

ಕಠ್ಮಂಡು: ನೇಪಾಳದಲ್ಲಿ ಸಾಮಾಜಿಕ ಜಾಲತಾಣದ ಮೇಲಿನ ನಿಷೇಧವನ್ನು ಖಂಡಿಸಿ ಆರಂಭವಾದ ಪ್ರತಿಭಟನೆ ಹಿಂಸಾರೂಪ ಪಡೆದಿದೆ.

ಪ್ರತಿಭಟನಾಕಾರರ ಕ್ರೌರ್ಯಕ್ಕೆ ಹೆದರಿ ನೇಪಾಳದ ಪ್ರಧಾನಿ ಕೆ.ಪಿ ಶರ್ಮಾ ಓಲಿ ಈಗಾಗಲೇ ರಾಜೀನಾಮೆ ನೀಡಿ ದೇಶ ಬಿಟ್ಟು ಪಲಾಯನ ಮಾಡಿದ್ದಾರೆ.

ನೇಪಾಳ ಸಂಸತ್, ಅಧ್ಯಕ್ಷರ ನಿವಾಸ, ಪ್ರಧಾನಿ ಬಂಗಲೆ, ವಿವಿಧ ರಾಜಕೀಯ ನಾಯಕರ ಮನೆಗಳ ಮೇಲೆ ಪ್ರತಿಭಟನಾಕಾರರು ದಾಳಿ ನಡೆಸಿ ಬೆಂಕಿ ಹಚ್ಚಿದ್ದಾರೆ.

ಈ ವೇಳೆ ನೇಪಾಳದ ಮಾಜಿ ಪ್ರಧಾನಿ ಜಲನಾಥ್ ಖಾನಲ್ ಅವರ ಮನೆಗೂ ಬೆಂಕಿ ಹಚ್ಚಲಾಗಿದ್ದು,ಮನೆಯ ಒಳಗಿದ್ದ ಜಲನಾಥ್ ಖಾನಲ್ ಅವರ ಪತ್ನಿ ರಾಜಲಕ್ಷ್ಮಿ ಜೀವಂತವಾಗಿ ಸುಟ್ಟುಹೋಗಿದ್ದಾರೆ.

ಈ ಹಿಂಸಾಚಾರದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ನೇಪಾಳದ ಜನರ ಸುರಕ್ಷತೆಯ ಬಗ್ಗೆ ಆತಂಕ ಹೆಚ್ಚಾಗಿದೆ.

ನೇಪಾಳದಲ್ಲಿ ಹಿಂಸಾಚಾರ:ಮಾಜಿ ಪ್ರಧಾನಿ ಪತ್ನಿ ಜೀವಂತ‌ ದಹನ Read More

ಕಠ್ಮಂಡುವಿನಲ್ಲಿ ಪ್ರತಿಭಟನೆ:19 ಮಂದಿ‌ ಸಾವು

ಕಠ್ಮಂಡು: ಸಾಮಾಜಿಕ ಮಾಧ್ಯಮ ವೇದಿಕೆಗಳ ಮೇಲೆ ಹೇರಿರುವ ನಿಷೇಧ ತೆಗೆದುಹಾಕಬೇಕು ಮತ್ತು ಭ್ರಷ್ಟಾಚಾರ ಸಂಸ್ಕೃತಿಯನ್ನು ಕೊನೆಗೊಳಿಸಬೇಕು ಎಂದು ಒತ್ತಾಯಿಸಿ ಯುವಕರು ಸೋಮವಾರ ಕಠ್ಮಂಡುವಿನಲ್ಲಿ ನಡೆಸಿದ ಬೃಹತ್ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.

ಹಿಂಸಾಚಾರದಲ್ಲಿ‌‌ ಮೃತೊಟ್ಟವರ ಸಂಖ್ಯೆ19 ಕ್ಕೆ ಏರಿದೆ ಮತ್ತು 250 ಮಂದಿ ಗಾಯಗೊಂಡಿದ್ದಾರೆ.

ಡಮಾಕ್‌ನಲ್ಲಿ, ಪ್ರತಿಭಟನಾಕಾರರು ಡಮಾಕ್ ಚೌಕ್‌ನಿಂದ ಪುರಸಭೆ ಕಚೇರಿವರೆಗೆ ಮೆರವಣಿಗೆ ನಡೆಸಿದರು.ಈ‌ ವೇಳೆ ನೇಪಾಳದ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರ ಪ್ರತಿಕೃತಿ ಸುಟ್ಟು ಕಚೇರಿಯ ಬಾಗಿಲುಗಳನ್ನು ಮುರಿಯಲು ಪ್ರಯತ್ನಿಸಿದರು.

ಆಗ ಪೊಲೀಸರು ಜಲಫಿರಂಗಿ, ಅಶ್ರುವಾಯು ಮತ್ತು ರಬ್ಬರ್ ಗುಂಡುಗಳನ್ನು ಹಾರಿಸಿದರು. ಹಲವಾರು ಬೈಕ್​ಗಳಿಗೂ ಬೆಂಕಿ ಹಚ್ಚಲಾಯಿತು.ಹಾಗಾಗಿ ಆ ಪ್ರದೇಶದಲ್ಲಿ ಉದ್ವಿಗ್ನತೆ ತೀವ್ರವಾಯಿತು.

ಸರ್ಕಾರದ ವಿರುದ್ಧದ ಭ್ರಷ್ಟಾಚಾರ ಆರೋಪಗಳು ಮತ್ತು ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ವಾಟ್ಸಾಪ್, ಯೂಟ್ಯೂಬ್ ಮತ್ತು ಸ್ನ್ಯಾಪ್‌ಚಾಟ್,ಲಿಂಕ್ಡ್ ಇನ್ ಸೇರಿದಂತೆ ಹಲವಾರು ಪ್ರಮುಖ ಸಾಮಾಜಿಕ ಮಾಧ್ಯಮ ವೇದಿಕೆಗಳ ಮೇಲಿನ ನಿಷೇಧದ ವಿರುದ್ಧ ಕಠ್ಮಂಡುವಿನಲ್ಲಿ ಜನರೇಷನ್ ಝಡ್ ಪ್ರತಿಭಟನಾಕಾರರ ನೇತೃತ್ವದಲ್ಲಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿತ್ತು.

ಪ್ರತಿಭಟನಾಕಾರರು ನಿರ್ಬಂಧಿತ ವಲಯವನ್ನು ಉಲ್ಲಂಘಿಸಿ ಸಂಸತ್ತಿನ ಆವರಣವನ್ನು ಪ್ರವೇಶಿಸಿದ ನಂತರ ಪರಿಸ್ಥಿತಿ ಉಲ್ಬಣಗೊಂಡಿತು. ಪೊಲೀಸರು ಜಲಫಿರಂಗಿ, ಅಶ್ರುವಾಯು ಮತ್ತು ಜೀವಂತ ಮದ್ದುಗುಂಡುಗಳೊಂದಿಗೆ ಹೋರಾಟಗಾರರಿಗೆ ಬಿಸಿ ಮುಟ್ಟಿಸಿದರು.ಆಗ ಗಲಭೆ ತೀವ್ರಗೊಂಡು ಸಾವುನೋವಿಗೆ ಕಾರಣವಾಯಿತು.

ಕಠ್ಮಂಡುವಿನಲ್ಲಿ ಪ್ರತಿಭಟನೆ:19 ಮಂದಿ‌ ಸಾವು Read More

ಸುಳ್ಳು 11-ಬಿ ಖಾತೆ ಸೃಷ್ಟಿಸಿ ಸ್ವತ್ತು ಬೇರೆಯವರಿಗೆ ಪರಭಾರೆ: ಪ್ರತಿಭಟನೆ

ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕು ಉಮ್ಮತ್ತೂರು ಗ್ರಾಮ ಪಂಚಾಯಿತಿಯಲ್ಲಿ ಅಕ್ರಮವಾಗಿ ಸುಳ್ಳು 11-ಬಿ ಖಾತೆ ಸೃಷ್ಟಿಸಿ ತಮಗೆ ಸೇರಿದ ಸ್ವತ್ತನ್ನು ಯಾರೋ ಮೂರನೆ ವ್ಯಕ್ತಿಗೆ ‘ಬಿ’ ಖಾತೆ ಮಾಡಿಕೊಡಲಾಗಿದೆ ಎಂದು ಆರೋಪಿಸಿ ಸ್ವತ್ತಿನ ಮಾಲೀಕರು ಪ್ರತಿಭಟನೆ ನಡೆಸಿದರು.

ಸ್ವತ್ತಿನ ಮಾಲೀಕ ಮಣಿಪುತ್ರ ಮತ್ತು ಅವರ‌ ಸಹೋದರ ಪ್ರಶಾಂತ್ ಮತ್ತಿತರರು ನಡೆಸಿದ ಪ್ರತಿಭಟನೆಗೆ ಕರ್ನಾಟಕ ಪ್ರಜಾ ಪಾರ್ಟಿ ರೈತ ಪರ್ವ ಹುಣಸೂರು ತಾಲೂಕು ಅಧ್ಯಕ್ಷ ಚೆಲುವರಾಜು ಮತ್ತಿತರರು ಬೆಂಬಲ ನೀಡಿದರು.

ಹುಣಸೂರು ತಾಲ್ಲೂಕು,
ಹನಗೋಡು ಹೋಬಳಿ 2ನೇ ಪಕ್ಷಿರಾಜಪುರ ಗ್ರಾಮದ ಮಣಿಪುತ್ರ ಬಿನ್ ಲೇಟ್: ಶುದ್ದರಾಜು ಅವರಿಗೆ ,ಸಂತರಾಜ್ ಮತ್ತು ಅಕ್ಕ ಮನಿಲಾ ರವರಿಗೆ ಸೇರಿದ ಸ್ವತ್ತನ್ನು 3ನೇ ವ್ಯಕ್ತಿಗೆ ಅಂದರೆ ನತಾನಿಯಲ್ ಬಿನ್ ಲೇಟ್: ಜೈಶಂಕರ್ ರವರಿಗೆ ಯಾವುದೇ ಹಕ್ಕುಬಾಧ್ಯತೆ ಇಲ್ಲದಿದ್ದರೂ ಸಹ ಉಮ್ಮತ್ತೂರು ಗ್ರಾಮ ಪಂಚಾಯಿತಿ ಪಿ.ಡಿ.ಒ. ಮಹದೇವ ರವರು ಯಾವುದೇ ಆರ್.ಡಿ. ವಂಶವೃಕ್ಷ ಪಡೆಯದೆ ಸುಳ್ಳು ದಾಖಲೆಯನ್ನು ಸೃಷ್ಟಿಸಿ ಕೊಟ್ಟಿದ್ದಾರೆ, ಸದರಿ ಸ್ವತ್ತನ್ನು ‘ಬಿ’ ಖಾತೆ ಮಾಡಿರುವುದು ಕಾನೂನು ಬಾಹಿರವಾಗಿರುತ್ತದೆ. ‘ಬಿ’ ಖಾತೆ ದಾಖಲು ಮಾಡಲು ನನ್ನ ಅಕ್ಕ ಮನಿಲಾ ಅಥವಾ ನನ್ನ ಭಾವ ಸಂತರಾಜು ರವರ ಹೆಸರಿನಲ್ಲಿ ರೆವಿನ್ಯೂ ಆರ್.ಟಿ.ಸಿ. ಇರುವುದಿಲ್ಲ. ನನ್ನ ಹೆಸರಿಗೆ ವಿಲ್ ದಾಖಲಾಗಿದ್ದರೂ ಸಹ ಪರಿಗಣಿಸದೆ ಸುಳ್ಳು ಖಾತೆ ಸೃಷ್ಟಿಸಿರುತ್ತಾರೆ. ಇದರ ಬಗ್ಗೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ದೂರು ನೀಡಲಾಗಿದೆ ಎಂದು ಪ್ರಶಾಂತ್ ಅವರು ಮಾಧ್ಯಮಗಳಿಗೆ ತಿಳಿಸಿದರು.

ಖಾತೆ ವಜಾ ಮಾಡಬೇಕು ಹಾಗೂ ಭ್ರಷ್ಟಾಚಾರ ಎಸಗಿರುವ ಪಿ.ಡಿ.ಒ ಮಹದೇವ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಪ್ರಶಾಂತ್ ಆಗ್ರಹಿಸಿದ್ದಾರೆ.

ಸುಳ್ಳು 11-ಬಿ ಖಾತೆ ಸೃಷ್ಟಿಸಿ ಸ್ವತ್ತು ಬೇರೆಯವರಿಗೆ ಪರಭಾರೆ: ಪ್ರತಿಭಟನೆ Read More