ಸಿಸಿಬಿ ಕಾರ್ಯಾಚರಣೆ:17 ಲಕ್ಷ ಮೌಲ್ಯದ 176 ಗ್ರಾಂ ಹೈಡ್ರೋ ಗಾಂಜಾ ವಶ

ಮೈಸೂರು: ಮೈಸೂರು ನಗರ ಸಿಸಿಬಿ ತಂಡ ನಾಯ್ಡು ನಗರ, ನರಸಿಂಹರಾಜ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎನ್ ಡಿ ಪಿ‌ ಎಸ್ ಸಂಬಂಧಿತ ಕಾರ್ಯಾಚರಣೆ ನಡೆಸಿದರು.

ಈ ವೇಳೆ ಸಿಸಿಬಿ ತಂಡವು ಸುಮಾರು 17 ಲಕ್ಷ ರೂ. ಮೌಲ್ಯದ 176 ಗ್ರಾಂ ಹೈಡ್ರೋ ಗಾಂಜಾವನ್ನು ವಶಪಡಿಸಿಕೊಂಡಿದೆ.

ಪ್ರಕರಣದಲ್ಲಿ ಅಫ್ತಾಬ್ ಅಲಿ ಬೇಗ್ ಮತ್ತು ಪ್ರತಾಪ್ ಕುಮಾರ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.

ಈ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಎನ್. ಆರ್ ಪೊಲೀಸ್ ಠಾಣೆಯಲ್ಲಿ ಎನ್‌ ಡಿ ಪಿಎಸ್ ಕಾಯ್ದೆ,1989 ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಸಿಸಿಬಿ ಕಾರ್ಯಾಚರಣೆ:17 ಲಕ್ಷ ಮೌಲ್ಯದ 176 ಗ್ರಾಂ ಹೈಡ್ರೋ ಗಾಂಜಾ ವಶ Read More

ಕಾಂಗ್ರೆಸ್‌ ಸರ್ಕಾರದಿಂದ ಜನರ ಮೇಲೆ ತೆರಿಗೆಯ ದಾಳಿ: ಅಶೋಕ್ ಕಿಡಿ

ಬೆಂಗಳೂರು: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರು ದಾಳಿ ಮಾಡಿದಂತೆಯೇ ಕಾಂಗ್ರೆಸ್‌ ಸರ್ಕಾರ ಜನರ ಮೇಲೆ ತೆರಿಗೆಯ ದಾಳಿ ಮಾಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಕಿಡಿಕಾರಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆಯ ನೀತಿ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿದ್ದು, ಅದಕ್ಕೆ ಕಾಂಗ್ರೆಸ್‌ ನಾಯಕರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಅಂದಮೇಲೆ ಈ ಹೋರಾಟ ಯಶಸ್ವಿಯಾಗಿದೆ ಎಂದೇ ಅರ್ಥ ಎಂದರು.

ಬೆಂಗಳೂರಿನಲ್ಲಿ ಕಸಕ್ಕೆ, ಪಾರ್ಕಿಂಗ್‌ಗೆ ಶುಲ್ಕ ವಿಧಿಸಿದ್ದಾರೆ. ಇದು ತುಘಲಕ್‌ ದರ್ಬಾರ್‌ ಆಗಿದ್ದು, ಯಾರೂ ಕೇಳುವವರಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ವೀಲ್‌ಚೇರ್‌ನಲ್ಲಿದ್ದರೆ, ಡಿಸಿಎಂ ಡಿ.ಕೆ.ಶಿವಕುಮಾರ್‌ ಬೊಟ್ಟು ಇಟ್ಟುಕೊಂಡು ದೇವಸ್ಥಾನಗಳಲ್ಲಿ ಹೋಮ ಮಾಡಿಸುತ್ತಿದ್ದಾರೆ. ಬೊಟ್ಟು ಇಟ್ಟುಕೊಂಡು ಎಲ್ಲವನ್ನೂ ಮುಸ್ಲಿಮರಿಗೆ ಧಾರೆ ಎರೆಯುತ್ತಿದ್ದಾರೆ ಎಂದು ಟೀಕಾಪ್ರಹಾರ ನಡೆಸಿದರು.

ಇಲ್ಲಿ ಆಡಳಿತವನ್ನು ಯಾರೂ ನಡೆಸುತ್ತಿಲ್ಲ. ಅಧಿಕಾರಕ್ಕಾಗಿ ಕಿತ್ತಾಟ ಮಾತ್ರ ನಡೆಯುತ್ತಿದೆ. ಈ ಹಿಂದೆ ಮುಡಾ ಹಗರಣದ ವಿರುದ್ಧ ಪಾದಯಾತ್ರೆ ಮಾಡಿದ್ದಕ್ಕಾಗಿ ಸಚಿವರು ರಾಜೀನಾಮೆ ನೀಡಿದರು. ಮುಖ್ಯಮಂತ್ರಿ ಸೈಟುಗಳನ್ನು ವಾಪಸ್‌ ಕೊಟ್ಟರು. ಇವೆಲ್ಲ ನಮ್ಮ ಹೋರಾಟದ ಫಲ ಈಗಲೂ ಹೋರಾಟ ಮಾಡಿ ಫಲಿತಾಂಶ ನೀಡುತ್ತೇವೆ ಎಂದು ಅಶೋಕ್ ತಿಳಿಸಿದರು.

ಭಾರತದ ಸಂಸತ್ತು ಯಾವತ್ತಿಗೂ ಶ್ರೇಷ್ಠವಾದುದು. ಇವರನ್ನು ಕೇಳಿ ಯಾರೂ ವಕ್ಫ್‌ ಕಾನೂನು ತರುವುದಿಲ್ಲ. ಹಿಂದೆ ಮನಮೋಹನ್‌ ಸಿಂಗ್‌ ಅವಧಿಯಲ್ಲಿ ತಂದ ಕಾನೂನಿನಿಂದಾಗಿ ಭೂಮಿ ಕಬಳಿಕೆಯಾಗಿದೆ. ವಕ್ಫ್‌ ತಿದ್ದುಪಡಿ ಕಾನೂನನ್ನು ಎಲ್ಲರೂ ಪಾಲಿಸಲೇಬೇಕು. ಕಾಂಗ್ರೆಸ್‌ನವರು 50 ಸಲ ಸಂವಿಧಾನ ಬದಲಿಸಿದ್ದಾರೆ. ಅವರಿಂದ ಬಿಜೆಪಿ ಬುದ್ಧಿ ಕಲಿಯಬೇಕಿಲ್ಲ ಎಂದು ತುರುಗೇಟು ನೀಡಿದರು.

ಹುಬ್ಬಳ್ಳಿಯಲ್ಲಿ ಅತ್ಯಾಚಾರ-ಕೊಲೆ ಮಾಡಿದ ವ್ಯಕ್ತಿ ಕಾನೂನು ರೀತಿಯಲ್ಲಿ ಎನ್‌ಕೌಂಟರ್‌ ಆಗಿರುವುದು ಉತ್ತಮ. ಇಂತಹ ತಪ್ಪು ಮಾಡಿದವರಿಗೆ ಕಾನೂನು ರೀತಿಯಲ್ಲೇ ಶಿಕ್ಷೆಯಾಗಬೇಕು ಎಂದು ಅಶೋಕ್ ಹೇಳಿದರು.

ಕಾಂಗ್ರೆಸ್‌ ಸರ್ಕಾರದಿಂದ ಜನರ ಮೇಲೆ ತೆರಿಗೆಯ ದಾಳಿ: ಅಶೋಕ್ ಕಿಡಿ Read More

ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಲೋಕಾ ದಾಳಿ

ಬೆಂಗಳೂರು: ಬೆಳ್ಳಂಬೆಳಿಗ್ಗೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ.

ಬೆಂಗಳೂರಿನ ಜಿಆರ್‌ಪಿಎ ಚೀಫ್‌ ಎಂಜಿನಿಯರ್ ನಂಜುಂಡಪ್ಪ ಮತ್ತು ಬಿಬಿಎಂಪಿ ಎಕ್ಸಿಕ್ಯೂಟಿವ್ ಎಂಜಿನಿಯರ್‌‌ ಹೆಚ್‌.ಪಿ ಕಲ್ಲೇಶಪ್ಪ ಅವರ ಮನೆಗಳ ಮೇಲೆ ದಾಳಿ ನಡೆದಿದೆ.

ಕೋಲಾರದಲ್ಲಿ ಬೆಸ್ಕಾಂ ಎಇಇ ಜಿ.ನಾಗರಾಜ್ ಮನೆ ಹಾಗೂ ಅವರಿಗೆ ಸೇರಿದ ಮೂರು ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲಿಸಿದ್ದಾರೆ.ಜತೆಗೆ ಇವರ ಸಂಬಂಧಿಕರೊಬ್ಬರ ಮನೆ ಮೇಲೂ ದಾಳಿ ನಡೆದಿದೆ.

ನಾಗರಾಜ್ ಬೆಂಗಳೂರಿನ ರಾಜಾಜಿನಗರದಲ್ಲಿ ಎಇಇ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ದಾಳಿ ವೇಳೆ ಕೋಟ್ಯಂತರ ರೂ ಮೌಲ್ಯದ ಆಸ್ತಿ ಪತ್ತೆಯಾಗಿದೆ. ನಾಗರಾಜ್ ಕೊಳ್ಳೇಗಾಲ ಬಳಿ 6 ಎಕರೆ ಜಮೀನು, ಬೆಂಗಳೂರಿನಲ್ಲಿ ಒಂದು ಮನೆ, ಎರಡು ನಿವೇಶನಗಳನ್ನು ಹೊಂದಿದ್ದಾರೆ.

ದಾವಣಗೆರೆಯಲ್ಲಿ ಫುಡ್‌ ಸೇಫ್ಟಿ & ಕ್ವಾಲಿಟಿ ಯುನಿಟ್ ಹೆಲ್ತ್ ಡಿಪಾರ್ಟ್ಮೆಂಟ್‌ನ ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾಗರಾಜ್ ಮನೆ ಮೇಲೆ ಲೋಕಾಯುಕ್ತ ಡಿವೈಎಸ್ಪಿ ಕಲಾವತಿ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು, ಡಾ.ನಾಗರಾಜ್ ನಿವಾಸದಲ್ಲಿ ಶೋಧ ನಡೆಸಲಾಗುತ್ತಿದೆ.

ತುಮಕೂರಿನ ಸರ್ಕಾರಿ ಆಸ್ಪತ್ರೆ ವೈದ್ಯ ಡಾ. ಜಗದೀಶ್ ಮನೆ ಮೇಲೂ ಅಧಿಕಾರಿಗಳು ದಾಖಲೆ ಪರಿಶೀಲಿಸುತ್ತಿದ್ದಾರೆ.

ಬಾಗಲಕೋಟೆಯ ಬೀಳಗಿ ಲೋಕೋಪಯೋಗಿ ಇಲಾಖೆ ಎಫ್‌ಡಿಸಿ ಮಲ್ಲೇಶ್‌ ಮನೆ ಹಾಗೂ ಕಚೇರಿ ಮೇಲೂ ದಾಳಿ ಮಾಡಲಾಗಿದೆ.

ಕಲಬುರಗಿಯಲ್ಲಿ ಲೋಕೋಪಯೋಗಿ ಚೀಫ್ ಇಂಜಿನಿಯರ್ ಮನೆ‌ ಮೇಲೆ ದಾಳಿ ನಡೆದಿದೆ.

ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಲೋಕಾ ದಾಳಿ Read More