250ನೇ ಸೇವಾ ಸಂಭ್ರಮದ ಪೋಸ್ಟರ್ ಬಿಡುಗಡೆಗೊಳಿಸಿದ ಸಾ.ರಾ. ಮಹೇಶ್

ಮೈಸೂರು: ಎಸ್ ಪ್ರಕಾಶ್ ಪ್ರಿಯ ದರ್ಶನ್ ಸ್ನೇಹ ಬಳಗದ 250ನೇ ಸೇವಾ ಸಂಭ್ರಮದ ಪೋಸ್ಟರ್ ಅನ್ನು ಮಾಜಿ ಸಚಿವ ಸಾ.ರಾ. ಮಹೇಶ್ ಬಿಡುಗಡೆಗೊಳಿಸಿದರು.

ಈ ವೇಳೆ ಮಾತನಾಡಿದ ಸಾ.ರಾ. ಮಹೇಶ್ ಅವರು 250ನೇ ಸಂಭ್ರಮಾಚರಣೆ ಯಲ್ಲಿರುವ ಎಸ್ ಪ್ರಕಾಶ್ ಪ್ರಿಯಾ ದರ್ಶನ್ ಸ್ನೇಹ ಬಳಗವು ಪ್ರತಿ ಭಾನುವಾರ ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಆಶ್ರಮ ವಿದ್ಯಾರ್ಥಿ ನಿಲಯಗಳಲ್ಲಿ ಹಣ್ಣು ಹಂಪಲು,ನೋಟ್ ಬುಕ್,ವೃದ್ಧರಿಗೆ ಸೀರೆ ಹೀಗೆ ಅನೇಕ ಸೇವಾ ಕಾರ್ಯ ನಡೆಸಿಕೊಂಡು ಬಂದಿದ್ದಾರೆ ಎಂದು ಮೆಚ್ಚುಗೆ ‌ವ್ಯಕ್ತಪಡಿಸಿದರು.

ಈ ಭಾನುವಾರ 250 ನೆಯದಾಗಿದ್ದು ನಿಜಕ್ಕೂ ಈ ಸ್ನೇಹ ಬಳಗದ ಸೇವೆಯು ಶ್ಲಾಘನೀಯ ಕಾರ್ಯ, ಈ ಸ್ನೇಹ ಬಳಗದಿಂದ ಕೆಆರ್ ಕ್ಷೇತ್ರದ ಜನತೆಗೆ ಇನ್ನೂ ಹೆಚ್ಚಿನ ಸೇವೆ ಸಿಗಲಿ ಎಂದು ಸಾ.ರಾ.ಮಹೇಶ್ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಜಿ.ಡಿ. ಹರೀಶ ಗೌಡ, ವಿಧಾನಪರಿಷತ್ ಸದಸ್ಯ ಸಿ.ಎನ್ ಮಂಜೇಗೌಡ, ಮಾಜಿ ಶಾಸಕರಾದ ಅಶ್ವಿನ್ ಕುಮಾರ್, ಮಹದೇವ್, ಮಾಜಿ ಮಹಾಪೌರರಾದ ಆರ್ ಲಿಂಗಪ್ಪ, ಎಂ ಜೆ ರವಿಕುಮಾರ್, ರಾಜ್ಯ ವಕ್ತಾರರಾದ ರವಿಚಂದ್ರ ಗೌಡ, ಮೈಸೂರು ನಗರ ಜೆಡಿಎಸ್ ಕಾರ್ಯಾಧ್ಯಕ್ಷ ಎಸ್ ಪ್ರಕಾಶ್ ಪ್ರಿಯಾದರ್ಶನ್, ಲೇಕ್ ಅಂಡ್ ಪೈಂಟ್ ಮಾಜಿ ಅಧ್ಯಕ್ಷ ಕೃಷ್ಣ, ನಗರ ಪಾಲಿಕೆ ಮಾಜಿ ಸದಸ್ಯರುಗಳಾದ ಎಸ್ ಬಿ ಎಂ ಮಂಜು, ಅಶ್ವಿನಿ ಅನಂತು,ಶೋಭಾ, ಕೆ ಆರ್ ಕ್ಷೇತ್ರದ ಅಧ್ಯಕ್ಷ ಬಿ.ಜಿ. ಸಂತೋಷ್, ನರಸಿಂಹರಾಜ ಬ್ಲಾಕ್ ಅಧ್ಯಕ್ಷರುಗಳಾದ ಎಂ ಎನ್ ರಾಮು, ರಿಜ್ವಾನ್ ಮತ್ತಿತರರು ಹಾಜರಿದ್ದರು.

250ನೇ ಸೇವಾ ಸಂಭ್ರಮದ ಪೋಸ್ಟರ್ ಬಿಡುಗಡೆಗೊಳಿಸಿದ ಸಾ.ರಾ. ಮಹೇಶ್ Read More

ಪ್ರತಿ ಹೆಣ್ಣು ಶಿಕ್ಷಣ ಪಡೆದು ಎಲ್ಲ ರಂಗದಲ್ಲೂ ಕಾರ್ಯ ನಿರ್ವಹಿಸಲಿ:ರವಿ ಸ್ವಾಮೀಜಿ

ಮೈಸೂರು: ವಿಶ್ವ ಹೆಣ್ಣು ಮಕ್ಕಳ ದಿನಾಚರಣೆ ಪ್ರಯುಕ್ತ ಎಸ್ ಪ್ರಕಾಶ್ ಪ್ರಿಯಾದರ್ಶನ್ ಸ್ನೇಹ ಬಳಗದ ಸದಸ್ಯರು ವಿದ್ಯಾರ್ಥಿನಿಯರಿಗೆ ನೋಟ್ ಬುಕ್, ಹಣ್ಣು ಹಂಪಲು ವಿತರಿಸಿದರು.

ವಿದ್ಯಾರಣ್ಯಪುರಂನಲ್ಲಿರುವ ಪಟ್ಟದ ಬಸವಲಿಂಗ ಸ್ವಾಮಿಗಳ (ಟ್ರಸ್ಟ್) ಹೆಣ್ಣು ಮಕ್ಕಳ ವಿದ್ಯಾರ್ಥಿ ನಿಲಯದ ಬಂಧುಗಳಿಗೆ ಎಸ್ ಪ್ರಕಾಶ್ ಪ್ರಿಯಾದರ್ಶನ್ ಸ್ನೇಹ ಬಳಗದ ಸದಸ್ಯರು ನೋಟ್ ಬುಕ್, ಹಣ್ಣು ಹಂಪಲು ವಿತರಿಸುವ ಮೂಲಕ ವಿಶ್ವ ಹೆಣ್ಣು ಮಕ್ಕಳ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲಾಯಿತು.

ಈ ವೇಳೆ ರವಿ ಸ್ವಾಮೀಜಿ ಯವರು ಮಾತನಾಡಿ ಹೆಣ್ಣೆಂದರೆ ಶಕ್ತಿ, ತಾಳ್ಮೆ ಮತ್ತು ಮಾತೃತ್ವದ ಘನತೆಯನ್ನು ಎತ್ತಿ ತೋರಿಸುತ್ತದೆ
ಎಂದು ಹೇಳಿದರು.

ತೊಟ್ಟಿಲು ತೂಗುವ ಕೈ ಜಗತ್ತನ್ನೇ ಆಳಬಲ್ಲದು,ಹೆಣ್ಣು ಒಲಿದರೆ ನಾರಿ ಮುನಿದರೆ ಮಾರಿ ಎನ್ನುವ ಗಾದೆಗಳು ಹೆಣ್ಣಿನ ವಿಭಿನ್ನ ವ್ಯಕ್ತಿತ್ವವನ್ನು ತಿಳಿಸುತ್ತವೆ. ಅಲ್ಲದೆ, ಯತ್ರ ನಾರ್ಯಸ್ತು ಪೂಜ್ಯಂತೇ ರಮಂತೇ ತತ್ರ ದೇವತಾ‌ ಎನ್ನುವ ಸಂಸ್ಕೃತ ಶ್ಲೋಕವು ಹೆಣ್ಣನ್ನು ಸೃಷ್ಟಿಯ ಮೂಲ. ಸ್ತ್ರೀಯಲ್ಲವೇ ದೃಷ್ಟಿಯ ಮೂಲ. ಹೆಣ್ಣಲ್ಲವೇ ನಮ್ಮ ಹಡೆದ ತಾಯಿ. ಹುಟ್ಟಿನಿಂದ ಸಾಯುವ ತನಕ ಹೆಣ್ಣಿನ ಮಹತ್ವ ಮರೆಯುವುದುಂಟೆ. ಪ್ರತಿ ಹೆಣ್ಣು ಮಗು ಶಿಕ್ಷಣವನ್ನು ಪಡೆದು ಎಲ್ಲ ರಂಗದಲ್ಲೂ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮೈಸೂರು ನಗರ ಜೆ.ಡಿ.ಎಸ್. ಕಾರ್ಯಾಧ್ಯಕ್ಷ ಎಸ್ ಪ್ರಕಾಶ್ ಪ್ರಿಯಾದರ್ಶನ್, ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ ಹೋಮದೇವ್, ಹಿರಿಯ ಕ್ರೀಡಾಪಟು ಮಹದೇವ್, ಛಾಯಾ, ಗಾಯಕ ಯಶವಂತ್ ಕುಮಾರ್, ರಾಜೇಶ್ ಕುಮಾರ್,ಮಹೇಶ, ಸುಬ್ರಮಣಿ,ಎಸ್ ಪಿ ಅಕ್ಷಯ್ ಪ್ರಿಯಾದರ್ಶನ್, ಹರ್ಷಿತ್ ಎಸ್ ನಾಗೇಶ್, ದತ್ತ ಮತ್ತಿತರರು ಹಾಜರಿದ್ದರು.

ಪ್ರತಿ ಹೆಣ್ಣು ಶಿಕ್ಷಣ ಪಡೆದು ಎಲ್ಲ ರಂಗದಲ್ಲೂ ಕಾರ್ಯ ನಿರ್ವಹಿಸಲಿ:ರವಿ ಸ್ವಾಮೀಜಿ Read More

ಭಾರತ ರತ್ನ ಎಂ.ಎಸ್. ಸುಬ್ಬಲಕ್ಷ್ಮಿ ಅವರ‌ ಸ್ಮರಣೆ

ಮೈಸೂರು: ಭಾರತ ರತ್ನ ಪಡೆದ ಮೊದಲ ಸಂಗೀತಗಾರ್ತಿ ಹಾಗೂ ರಾಮನ್ ಮ್ಯಾಗ್ನೆಸೆ ಪ್ರಶಸ್ತಿ ಪಡೆದ ಮೊದಲ ಸಂಗೀತಗಾರ್ತಿ ಎಂ. ಎಸ್.ಸುಬ್ಬಲಕ್ಷ್ಮಿ ಅವರ ಜಯಂತಿಯನ್ನು
ಮೈಸೂರಿನಲ್ಲಿ ವಿಶೇಷವಾಗಿ ಆಚರಿಸಲಾಯಿತು.

ನಗರದ ಎಂ.ಜಿ. ರಸ್ತೆಯಲ್ಲಿರುವ ಜೆ.ಎಸ್.ಎಸ್. ಸಂಸ್ಥೆ ಸಾಹುಕಾರ್ ಸಿದ್ದಲಿಂಗಯ್ಯ ನವರ ವೇದಶಾಸ್ತ್ರ ಜ್ಯೋತಿಷ್ಯ ಸಂಸ್ಕೃತ ಪಾಠಶಾಲೆಯ ವಿದ್ಯಾರ್ಥಿ ಬಂಧುಗಳಿಗೆ ಎಸ್ ಪ್ರಕಾಶ್ ಪ್ರಿಯದರ್ಶನ್ ಸ್ನೇಹ ಬಳಗದ ವತಿಯಿಂದ ಲೇಖನಿ, ಹಣ್ಣು ಹಂಪಲು ವಿತರಿಸುವ ಮೂಲಕ ಎಂ. ಎಸ್.ಸುಬ್ಬಲಕ್ಷ್ಮಿ ಅವರ ಜಯಂತಿಯನ್ನು
ಆಚರಿಸಲಾಯಿತು.

ಈ ವೇಳೆ ಮಾತನಾಡಿದ ಜೆಡಿಎಸ್ ಕಾರ್ಯಾಧ್ಯಕ್ಷ ಎಸ್ ಪ್ರಕಾಶ್ ಪ್ರಿಯಾದರ್ಶನ್, ಭಾರತೀಯ ಶಾಸ್ತ್ರೀಯ ಸಂಗೀತವನ್ನು ಜಾಗತಿಕ ಮಟ್ಟಕ್ಕೆ ಪಸರಿಸಿ ಸಂಗೀತಕ್ಕೆ ಒಂದು ಆಧ್ಯಾತ್ಮಿಕ ರೂಪ ನೀಡಿದ ಎಂ ಎಸ್ ಸುಬ್ಬಲಕ್ಷ್ಮಿ ಅವರು ಅನೇಕ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದರು ಎಂದು ಸ್ಮರಿಸಿದರು.

ಭಾರತ ರತ್ನ, ರಾಮನ್ ಮ್ಯಾಗ್ನೆಸ್ ಪ್ರಶಸ್ತಿ, ಪದ್ಮಭೂಷಣ, ಪದ್ಮವಿಭೂಷಣ, ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ,ಸಂಗೀತ ಕಲಾ ನಿಧಿ, ಸಂಗೀತ ಕಲಾಷಿಕಾ ಮಣಿ,ಕಾಳಿದಾಸ ಸಮ್ಮಾನ್, ಇಂದಿರಾ ಗಾಂಧಿ ಪ್ರಶಸ್ತಿ ಹೀಗೆ ಹಲವಾರು ಪ್ರಶಸ್ತಿಗಳನ್ನು ತಮ್ಮ ಜೀವನದುದ್ದಕ್ಕೂ ಪಡೆದಿದ್ದರು.

ಇಂತಹ ಮಹಾನ್ ಸಂಗೀತಗಾರ್ತಿಯ ಜೀವನ ಚರಿತ್ರೆಯನ್ನು ಇಂದಿನ ಯುವ ಪೀಳಿಗೆ ಅರಿಯಬೇಕು ಎಂದು ಪ್ರಕಾಶ್ ಪ್ರಿಯದರ್ಶನ್ ಸಲಹೆ ನೀಡಿದರು.

ಈ ರೀತಿ ಸಾಧನೆ ಮಾಡಿದ ಹಲವಾರು ಮಹನೀಯರಿದ್ದು ವಿದ್ಯಾಭ್ಯಾಸದ ಜೊತೆಗೆ ಈ ರೀತಿಯ ಸಾಧನೆ ಮಾಡಿದವರ ಜೀವನ ಚರಿತ್ರೆಯನ್ನು ತಿಳಿದು ಅವರಲ್ಲಿ ನೀವು ಒಬ್ಬರು ಆಗಬೇಕೆಂದು ತಿಳಿ ಹೇಳಿದರು.

ಈ ವೇಳೆ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಹೋಮದೇವ್, ನಿಲಯ ಪಾಲಕರುಗಳಾದ ಮಹೇಶ್, ಮೋಹನ್, ಮುದ್ದಪ್ಪ, ಬಿ.ಜೆ.ಪಿ. ಮುಖಂಡ ಪುರುಷೋತ್ತಮ್,ಗಾಯಕ ಯಶವಂತ್ ಕುಮಾರ್, ಛಾಯಾ, ಸುಬ್ರಮಣಿ,ಮಹೇಶ್, ರಾಜೇಶ್ ಕುಮಾರ್, ಎಸ್ ಪಿ ಅಕ್ಷಯ್ ಪ್ರಿಯಾದರ್ಶನ್ ಮತ್ತಿತರರು ಹಾಜರಿದ್ದರು.

ಭಾರತ ರತ್ನ ಎಂ.ಎಸ್. ಸುಬ್ಬಲಕ್ಷ್ಮಿ ಅವರ‌ ಸ್ಮರಣೆ Read More

ಮೇ18 ರಂದು ಎಚ್ ಡಿ ದೇವೇಗೌಡರ ಹುಟ್ಟುಹಬ್ಬ ಅಂಗವಾಗಿ ಸೇವಾ ಕಾರ್ಯ

ಮೈಸೂರು: ಎಚ್ ಡಿ ದೇವೇಗೌಡ ಅಭಿಮಾನಿ ಬಳಗ ಹಾಗೂ ಎಸ್ ಪ್ರಕಾಶ್ ಪ್ರಿಯಾದರ್ಶನ್ ಸ್ನೇಹ ಬಳಗದ ವತಿಯಿಂದ ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡರ ಹುಟ್ಟುಹಬ್ಬದ ಅಂಗವಾಗಿ ಮೇ.18ರಂದು ಸೇವಾಕಾರ್ಯ ಹಮ್ಮಿಕೊಳ್ಳಲಾಗಿದೆ.

ಅಂದು ಅರವಿಂದ್ ನಗರದಲ್ಲಿರುವ ಜೆ ಎಸ್ ಎಸ್ ವೃದ್ಧಾಶ್ರಮದಲ್ಲಿ ಮೇ 18ರಂದು ಸಂಜೆ 6ಗಂಟೆಗೆ ಹಿರಿಯ ನಾಗರಿಕರಿಗೆ ಹಣ್ಣು ಹಂಪಲು ಹಾಗೂ ಸೀರೆ, ಪಂಚೆ ವಿತರಿಸುವ ಮೂಲಕ ಸೇವಾ ಕಾರ್ಯವನ್ನು ಆಯೋಜಿಸಲಾಗಿದೆ ಎಂದು ಮೈಸೂರು ನಗರ ಜೆಡಿಎಸ್ ಕಾರ್ಯಾಧ್ಯಕ್ಷ ಎಸ್ ಪ್ರಕಾಶ್ ಪ್ರಿಯದರ್ಶನ್ ತಿಳಿಸಿದ್ದಾರೆ.

ಈ ಕಾರ್ಯಕ್ರಮಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ, ಜೆಡಿಎಸ್ ನಗರ ಅಧ್ಯಕ್ಷ ಕೆ ಟಿ ಚೆಲುವೆಗೌಡ, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ,ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್, ವೈ ಡಿ ರಾಜಣ್ಣ, ಹಿರಿಯ ಸಮಾಜ ಸೇವಕ ಕೆ ರಘುರಾಮ್ ವಾಜಪೇಯಿ, ಜೆಡಿಎಸ್ ನಗರ ಹಿರಿಯ ಉಪಾಧ್ಯಕ್ಷ ಪಾಲ್ಕನ್ ಬೋರೇಗೌಡ
ತರರು ಭಾಗವಹಿಸಲಿದ್ದಾರೆ.

ಮೇ18 ರಂದು ಎಚ್ ಡಿ ದೇವೇಗೌಡರ ಹುಟ್ಟುಹಬ್ಬ ಅಂಗವಾಗಿ ಸೇವಾ ಕಾರ್ಯ Read More

ಸಂದೇಶಗಳ ಮೂಲಕ ಹಿಂದುಗಳ ಜಾಗೃತಿ ಗೊಳಿಸಿದ ಶಂಕರ,ರಾಮಾನುಜರು:ವಿಕ್ರಮ್ ಅಯ್ಯಂಗಾರ್

ಮೈಸೂರು: ಹಿಂದುತ್ವ ಅವನತಿ ಕಡೆ ಸಾಗುತ್ತಿದ್ದಾಗಗ ತತ್ವ, ಸಂದೇಶಗಳ ಮೂಲಕ ಹಿಂದುಗಳನ್ನು ಜಾಗೃತಿ ಗೊಳಿಸಿದ ದಾರ್ಶನಿಕರು ಶ್ರೀ ಶಂಕರ, ರಾಮಾನುಜಾ ಚಾರ್ಯರು ಎಂದು ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್ ಬಣ್ಣಿಸಿದರು.

ತಮ್ಮದೇ ಆದ ದಾರ್ಶನಿಕತೆ
ಕಟ್ಟಿಕೊಟ್ಟ ದೈವ ಸಂಭೂತರು ಎಂದು ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್ ಹೇಳಿದರು.

ನಗರದ ಸರಸ್ವತಿಪುರಂ ಪಂಪಾಪತಿ ರಸ್ತೆಯಲ್ಲಿರುವ ಸಾನಿಧ್ಯ ವೃದ್ಧಾಶ್ರಮದಲ್ಲಿ ಎಸ್ ಪ್ರಕಾಶ್ ಪ್ರಿಯದರ್ಶನ್ ಸ್ನೇಹ ಬಳಗದ ವತಿಯಿಂದ ಆದಿ ಜಗದ್ಗುರು ಶ್ರೀ ಶಂಕರಾಚಾರ್ಯರು ಹಾಗೂ
ಶ್ರೀ ರಾಮಾನುಜಾಚಾರ್ಯರ
ಜಯಂತಿ ಅಂಗವಾಗಿ ಹಿರಿಯ ನಾಗರಿಕರಿಗೆ ದಿನಸಿ ಸಾಮಗ್ರಿ, ಹಣ್ಣು ಹಂಪಲು ವಿತರಿಸಿ ಅವರು ಮಾತನಾಡಿದರು.

ಶಂಕರಾಚಾರ್ಯರು ಆದಿಶಂಕರ ಎಂದೆ ಗುರುತಿಸಲ್ಪಟ್ಟವರು. ಏಳನೇ ವಯಸ್ಸಿನಲ್ಲೇ ವೇದಗಳ ಅಧ್ಯಯನಕ್ಕಾಗಿ ಮನೆ ಬಿಟ್ಟು ಹೊರಟ ಶ್ರೀ ಶಂಕರರು ಅದ್ವೈತ ಸಿದ್ದಾಂತ ಪ್ರತಿಪಾದಿಸಿದರು ಎಂದು ತಿಳಿಸಿದರು.

ಶ್ರೀ ಪೆರಂದೂರಿ ನಲ್ಲಿ ಜನಿಸಿದ ಶ್ರೀ ರಾಮಾನುಜಾಚಾರ್ಯರು ವಿಶಿಷ್ಟಾದ್ವೈತ ಸಿದ್ದಾಂತ ಸಾರಿದರು ಈ ಇಬ್ಬರು ಮಹನೀಯರು ತಮ್ಮ ಕಾಲಾವಧಿಯಲ್ಲಿ ಹಿಂದೂ ಧರ್ಮಕ್ಕಾಗಿ ಲೋಕ ಸಂಚಾರ ಮಾಡಿದರು.ನಾವೆಲ್ಲಾ ಇದನ್ನು ಅನುಸರಿಸಬೇಕು ಎಂದು ವಿಕ್ರಮ್ ಅಯ್ಯಂಗಾರ್ ಕರೆ ನೀಯ.

ಈ ಸಂದರ್ಭದಲ್ಲಿ ಮೈಸೂರು ನಗರ ಜೆ.ಡಿ.ಎಸ್. ಕಾರ್ಯಾಧ್ಯಕ್ಷ ಎಸ್ ಪ್ರಕಾಶ್ ಪ್ರಿಯಾದರ್ಶನ್ ,ಅರಿವು ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ್ ಕಶ್ಯಪ್, ಸಾನಿಧ್ಯ ವೃದ್ಧಾಶ್ರಮದ ಚಂದ್ರಶೇಖರ್, ಭುವನೇಶ್ವರಿ,ಗಾಯಕ ಯಶ್ವಂತ್ ಕುಮಾರ್,ಛಾಯಾ, ಹಿರಿಯ ಕ್ರೀಡಾಪಟು ಮಹಾದೇವ್, ಕ್ರೀಡಾ ತರಬೇತಿದಾರ ಜಗದೀಶ್, ಮಹೇಶ್, ಎಸ್.ಪಿ.ಅಕ್ಷಯ್ ಪ್ರಿಯಾದರ್ಶನ್, ಹರ್ಷಿತ್ ಎಸ್ ನಾಗೇಶ್, ದತ್ತ ಮತ್ತಿತರರು ಹಾಜರಿದ್ದರು.

ಸಂದೇಶಗಳ ಮೂಲಕ ಹಿಂದುಗಳ ಜಾಗೃತಿ ಗೊಳಿಸಿದ ಶಂಕರ,ರಾಮಾನುಜರು:ವಿಕ್ರಮ್ ಅಯ್ಯಂಗಾರ್ Read More

ವಿದ್ಯಾರ್ಥಿಗಳಿಗೆ ಹೋಳಿಗೆ, ಹಣ್ಣು, ಹಂಪಲು, ವಿತರಿಸಿ ಯುಗಾದಿ ಆಚರಣೆ

ಮೈಸೂರು: ಎಸ್ ಪ್ರಕಾಶ್ ಪ್ರಿಯಾದರ್ಶನ್ ಸ್ನೇಹ ಬಳಗದದವರು ಮೈಸೂರಿನ ಜೆ.ಪಿ. ನಗರದಲ್ಲಿರುವ ಶ್ರೀ ಪೇಜಾವರ ಸಾರ್ವಜನಿಕ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳೊಂದಿಗೆ ಕಾಯಿ ಹೋಳಿಗೆ, ಹಣ್ಣು, ಹಂಪಲು ವಿತರಿಸಿ ಯುಗಾದಿ ಹಬ್ಬವನ್ನು ವಿಶೇಷವಾಗಿ ಆಚರಿಸಿದರು.

ಈ ಸಂದರ್ಭದಲ್ಲಿ ಮೈಸೂರು ನಗರ ಜೆ.ಡಿ.ಎಸ್. ಕಾರ್ಯಾಧ್ಯಕ್ಷ ಎಸ್ ಪ್ರಕಾಶ್ ಪ್ರಿಯಾದರ್ಶನ್, ವಿದ್ಯಾರ್ಥಿ ನಿಲಯದ ನಿಲಯ ಪಾಲಕರಾದ ಪುಟ್ಟಣ್ಣ, ಸತೀಶ್ , ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಹೋಮದೇವ್,ಛಾಯಾ,ಗಾಯಕ ಯಶ್ವಂತ್ ಕುಮಾರ್, ಹಿರಿಯ ಕ್ರೀಡಾಪಟು ಮಹದೇವ್, ಸುಬ್ರಮಣಿ ,ರಾಜೇಶ್ ಕುಮಾರ್, ಮಹೇಶ್,ಕ್ರೀಡಾ ತರಬೇತಿದಾರ ಜಗದೀಶ್ , ಕಾಶಿನಾಥ್,ದತ್ತ, ಎಸ್.ಪಿ.ಅಕ್ಷಯ್ ಪ್ರಿಯಾದರ್ಶನ್, ಹರ್ಷಿತ್ ಎಸ್ ನಾಗೇಶ್ ಮತ್ತಿತರರು ಹಾಜರಿದ್ದರು.

ವಿದ್ಯಾರ್ಥಿಗಳಿಗೆ ಹೋಳಿಗೆ, ಹಣ್ಣು, ಹಂಪಲು, ವಿತರಿಸಿ ಯುಗಾದಿ ಆಚರಣೆ Read More

ಮಹನೀಯರ ಆದರ್ಶ ಪಾಲಿಸಲು ಎಸ್ ಪ್ರಕಾಶ್ ಪ್ರಿಯದರ್ಶನ್ ಕರೆ

ಮೈಸೂರು: ಸ್ವಾಮಿ ವಿವೇಕಾನಂದರು ಸೇರಿದಂತೆ ಮಹನೀ ಯರ ಆದರ್ಶವನ್ನು ಇಂದಿನ‌ ಪೀಳಿಗೆ ಪಾಲಿಸಬೇಕು ಎಂದು ಮೈಸೂರು ನಗರ ಜೆಡಿಎಸ್ ಕಾರ್ಯದಕ್ಷ ಎಸ್ ಪ್ರಕಾಶ್ ಪ್ರಿಯದರ್ಶನ್ ಕರೆ ನೀಡಿದರು.

ಜೆಪಿ ನಗರದಲ್ಲಿರುವ ಶ್ರೀ ಪೇಜಾವರ ಸಾರ್ವಜನಿಕ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳಿಗೆ ಎಸ್ ಪ್ರಕಾಶ್ ಪ್ರಿಯದರ್ಶನ್ ಸ್ನೇಹ ಬಳಗದ ವತಿಯಿಂದ ಹಣ್ಣು, ಹಂಪಲು ಹಾಗೂ ದಿನಸಿ ಸಾಮಗ್ರಿಗಳನ್ನು ವಿತರಿಸುವ ಮೂಲಕ ಮಕ್ಕಳ ದಿನಾಚರಣೆಯನ್ನು ಹಮ್ಮಿಕೊಂಡು
ಅವರು ಮಾತನಾಡಿದರು.

ಮಕ್ಕಳ ಮನಸ್ಸು ವಿಶಾಲವಾದದ್ದು, ನಾವು ಮಕ್ಕಳಲ್ಲಿ ಏನನ್ನು ಬಿತ್ತುತ್ತೆವೆಯೋ ಅದನ್ನೆ ಬೆಳೆಯುತ್ತೇವೆ. ವಿದ್ಯಾರ್ಥಿ ಜೀವನದಲ್ಲಿ ದುಶ್ಚಟಗಳಿಗೆ ದಾಸರಾಗದೇ, ವಿದ್ಯಾಭ್ಯಾಸದ ಕಡೆ ಗಮನಹರಿಸಬೇಕು’ ಎಂದು ಸಲಹೆ ನೀಡಿದರು.

ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಹೊರತರುವ ಕೆಲಸ ಶಿಕ್ಷಕರಿಂದ ಆಗಬೇಕು ಎಂದು ಎಸ್ ಪ್ರಕಾಶ್ ಪ್ರಿಯದರ್ಶನ್ ಹೇಳಿದರು.

ಈ ಸಂದರ್ಭದಲ್ಲಿ ಶ್ರೀ ಪೇಜಾವರ ವಿದ್ಯಾರ್ಥಿ ನಿಲಯ ಪಾಲಕ ಪುಟ್ಟಣ್ಣ, ಜಾನ್ ಜೋಸೆಫ್,ವೀರಭದ್ರ ಸ್ವಾಮಿ,ರಾಜೇಶ್ ಕುಮಾರ್, ಮಹೇಶ್, ಎಸ್ ಪಿ ಅಕ್ಷಯ್ ಪ್ರಿಯಾದರ್ಶನ್, ಹರ್ಷಿತ್ ಎಸ್ ನಾಗೇಶ್ ಮತ್ತಿತರರು ಹಾಜರಿದ್ದರು.

ಮಹನೀಯರ ಆದರ್ಶ ಪಾಲಿಸಲು ಎಸ್ ಪ್ರಕಾಶ್ ಪ್ರಿಯದರ್ಶನ್ ಕರೆ Read More

ಆಧ್ಯಾತ್ಮಿಕ ಚಿಂತನೆಗಳಿಂದ ಮಾನಸಿಕ ನೆಮ್ಮದಿ-ಕೆ ರಘುರಾಮ್ ವಾಜಪೇಯಿ

ಮೈಸೂರು: ಆಧ್ಯಾತ್ಮಿಕ ಚಿಂತನೆಗಳಿಂದ ಮಾನಸಿಕ ನೆಮ್ಮದಿ ಸಿಗಲಿದೆ ಎಂದು ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪೇಯಿ ತಿಳಿಸಿದರು.

ಸಂಸಾರಿಕ ಜಂಜಾಟದಲ್ಲಿ ಮುಳುಗಿರುವ ಮನುಷ್ಯ ಒಂದಿಷ್ಟು ಸಮಯವನ್ನು ಧಾರ್ಮಿಕ ಕಾರ್ಯಕ್ರಮಗಳಿಗೆ ಮೀಸಲಿಡಬೇಕು ಆಧ್ಯಾತ್ಮಿಕ ಚಿಂತನೆಗಳಿಂದ ಮಾನಸಿಕ ನೆಮ್ಮದಿ ಸಿಗಲಿದೆ ಎಂದು ಹೇಳಿದರು

ನಗರದ ಸಂಸ್ಕೃತ ಪಾಠಶಾಲೆಯ ವಿದ್ಯಾರ್ಥಿಗಳಿಗೆ ಎಸ್ ಪ್ರಕಾಶ್ ಪ್ರಿಯದರ್ಶನ್ ಸ್ನೇಹ ಬಳಗದ ವತಿಯಿಂದ ಕಾರ್ತಿಕ ಮಾಸದ ಅಂಗವಾಗಿ ಹಣ್ಣುಗಳು ಹಾಗೂ ಲೇಖನಿ ಸಾಮಗ್ರಿಗಳನ್ನು ವಿತರಿಸಿ ಅವರು ಮಾತನಾಡಿದರು‌.

ವಿಜ್ಞಾನ ತಂತ್ರಜ್ಞಾನಗಳ ಬೆಳವಣಿಗೆಯಿಂದ ಟಿವಿ, ಮೊಬೈಲ್ ಗಳಿಗೆ ಮಾರು ಹೋಗಿರುವ ಜನ ಸಾಂಪ್ರದಾಯಿಕ ಆಚಾರ ವಿಚಾರಗಳನ್ನು ಮರೆತಿದ್ದಾರೆ ಎಂದು ವಿಷಾದಿಸಿದರು.

ಇತ್ತೀಚಿನ ದಿನಗಳಲ್ಲಿ ಗುರು ಹಿರಿಯರ ಬಗೆಗಿನ ಗೌರವ ಕಡಿಮೆಯಾಗಿ ಪರಸ್ಪರ ಸಂಬಂಧಗಳು ಹಳಸಿ ಹೋಗುತ್ತಿದ್ದು ಜನರಲ್ಲಿ ಸ್ವಾರ್ಥ ಭಾವನೆ ಬೆಳೆಯುತ್ತಿದೆ. ದುಡ್ಡಿನ ಬೆನ್ನಟ್ಟಿದ ಮನುಷ್ಯ ಕೋಟಿಗಟ್ಟಲೆ ಹಣವಿದ್ದರೂ ನೆಮ್ಮದಿಯಿಲ್ಲದೆ ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾನೆ. ಇದರಿಂದ ಹೊರಬರಲು ಪ್ರತಿನಿತ್ಯ ದೇವರ ಆರಾಧನೆ, ಪೂಜಾ ಕೈಂಕರ್ಯದ ಜತೆಗೆ ದೇವರ ನಾಮ ಸ್ಮರಣೆ ಮಾಡುವ ಅತ್ಯಗತ್ಯವಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಸ್ಕೃತ ಪಾಠ ಶಾಲೆಯ ಪ್ರಶಂಪಲರಾದ ಅಜಿತ್,
ಮೈಸೂರು ನಗರ ಜೆ.ಡಿ.ಎಸ್. ಕಾರ್ಯಾಧ್ಯಕ್ಷ ಎಸ್ ಪ್ರಕಾಶ್ ಪ್ರಿಯಾದರ್ಶನ್, ಅರಿವು ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ್ ಕಶ್ಯಪ್, ಹೊಯ್ಸಳ ಕರ್ನಾಟಕ ಸಂಘದ ನಿರ್ದೇಶಕ ರಂಗನಾಥ್, ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಹೋಮದೇವ, ಪ್ರಶಾಂತ್, ಭವ್ಯ, ಸುಬ್ರಮಣಿ,ಎಂ ಮಾಧವಿ, ಚಂದನ, ಹರ್ಷಿತ, ಛಾಯಾ, ಯಶವಂತ್ ಕುಮಾರ್, ವೀರಭದ್ರ ಸ್ವಾಮಿ, ರಾಜೇಶ್ ಕುಮಾರ್,ಮಹೇಶ್,ಎಸ್‌.ಪಿ. ಅಕ್ಷಯ್ ಪ್ರಿಯಾದರ್ಶನ್, ಹರ್ಷಿತ್ ಎಸ್ ನಾಗೇಶ್ ಮತ್ತಿತರರು ಉಪಸ್ಥಿತರಿದ್ದರು.

ಆಧ್ಯಾತ್ಮಿಕ ಚಿಂತನೆಗಳಿಂದ ಮಾನಸಿಕ ನೆಮ್ಮದಿ-ಕೆ ರಘುರಾಮ್ ವಾಜಪೇಯಿ Read More

ಹಣ್ಣು ವಿತರಣಾ ಕಾರ್ಯ: ದ್ವಿಶತಕ ಬಾರಿಸಿದ ಎಸ್ ಪ್ರಕಾಶ್ ಪ್ರಿಯಾದರ್ಶನ್ ಸ್ನೇಹ ಬಳಗ

ಮೈಸೂರು: ಎಸ್ ಪ್ರಕಾಶ್ ಪ್ರಿಯಾದರ್ಶನ್ ಸ್ನೇಹ ಬಳಗ ಹಣ್ಣುಗಳ ವಿತರಣಾ ಕಾರ್ಯಕ್ರಮದಲ್ಲಿ ದ್ವಿಶತಕ ಬಾರಿಸಿದೆ.

ಮೈಸೂರಿನ ಎಂ ಜಿ ರಸ್ತೆ ಸಿದ್ದಪ್ಪ ವೃತ್ತದ ಬಳಿ ಇರುವ ಜೆಎಸ್ಎಸ್ ಸಂಸ್ಥೆಯ ಕ್ಯಾತನಹಳ್ಳಿ ಸಾಹುಕಾರ್ ಸಿದ್ದಲಿಂಗಯ್ಯನವರ ವಿದ್ಯಾರ್ಥಿ ನಿಲಯದಲ್ಲಿ 200 ನೆ ಹಣ್ಣುಗಳ ವಿತರಣಾ ಕಾರ್ಯಕ್ರಮ ವನ್ನು ವಿಶೇಷವಾಗಿ
ಆಚರಿಸಲಾಯಿತು.

ವಿದ್ಯಾರ್ಥಿ ನಿಲಯದಲ್ಲಿನ ವಿದ್ಯಾರ್ಥಿಗಳಿಗೆ ಹಣ್ಣುಗಳು ಹಾಗೂ ದಿನಸಿ ಸಾಮಾಗ್ರಿಗಳನ್ನು ವಿತರಿಸುವ ಮೂಲಕ ದ್ವಿಶ್ರತಕ ಸೇವಾ ಸಂಭ್ರಮಾಚರಣೆ ಮಾಡಲಾಯಿತು.

ಈ ವೇಳೆ ಮಾತನಾಡಿದ ಮೈಸೂರು ನಗರ ಜೆಡಿಎಸ್ ಕಾರ್ಯಾಧ್ಯಕ್ಷ ಎಸ್ ಪ್ರಕಾಶ್ ಪ್ರಿಯಾದರ್ಶನ್ ಅವರು ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವೃದ್ಧಾಶ್ರಮ, ವಿದ್ಯಾರ್ಥಿ ನಿಲಯ, ವಿಶೇಷ ಚೇತನ ಮಕ್ಕಳ ಆಶ್ರಮಗಳಿಗೆ ಎಸ್ ಪ್ರಕಾಶ್ ಪ್ರಿಯದರ್ಶನ ಸ್ನೇಹ ಬಳಗವು ನಿರಂತರವಾಗಿ ಪ್ರತಿ ಭಾನುವಾರ ಒಂದಲ್ಲ ಒಂದು ಕಡೆ ಹಣ್ಣುಗಳು ದಿನಸಿ ಸಾಮಗ್ರಿಗಳು, ಪುಸ್ತಕಗಳನ್ನು ವಿತರಿಸುವ ಜೊತೆಗೆ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿದೆ ಎಂದು ತಿಳಿಸಿದರು.

ಹಣ್ಣುಗಳು ಹಾಗೂ ದಿನಸಿ ಸಾಮಗ್ರಿ ವಿತರಿಸುವ ಮೂಲಕ ದ್ವಿಶತಕ ಸೇವಾ ಸಂಭ್ರಮಾಚರಣೆ ಮಾಡಿದ್ದೇವೆ ಎಂದು ಹೇಳಿದರು

ಕಾರ್ಯಕ್ರಮದಲ್ಲಿ ರಾಷ್ಟ್ರ ಪ್ರಶಸ್ತಿ ರಾಜ್ಯ ಪ್ರಶಸ್ತಿ ಇನ್ನು ಅನೇಕ ಪ್ರಶಸ್ತಿ ಪುರಸ್ಕೃತರಾದ ಶಿಕ್ಷಕಿ ಪದ್ಮಾವತಿ, ಖ್ಯಾತ ಆಯುರ್ವೇದಿಕ್ ವೈದ್ಯರಾದ ರಾಜೇಂದ್ರ, ಹಿರಿಯ ಶಿಕ್ಷಕಿ ಸುಜಿಯರಾಣಿ, ನಿಲಯ ಪಾಲಕರಾದ ಮೋಹನ್ ಕುಮಾರ್, ಕೆ.ಎಲ್. ಮುದ್ದಪ್ಪ,ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಹೋಮದೇವ್, ಜೆಡಿಎಸ್ ಮುಖಂಡರಾದ ಪಿ.ಎಸ್. ರಾಜಶೇಖರ ಮೂರ್ತಿ, ಹೊಯ್ಸಳ ಕರ್ನಾಟಕ ಸಂಘದ ನಿರ್ದೇಶಕ ರಂಗನಾಥ್, ಕೆ ಆರ್ ನಗರದ ಎಲ್. ಆರ್. ಪ್ರಮೋದ್,ವೀರಭದ್ರ ಸ್ವಾಮಿ, ಮಹೇಶ್, ಶ್ರೀಧರ್, ಮಹಾದೇವ್,ಯಶ್ವಂತ್ ಕುಮಾರ್, ಛಾಯಾ, ಎಂ.ಮಾಧವಿ, ಪುರುಷೋತ್ತಮ್ ಸಂತೋಷ್ ವೇಣು,ಗಾಯತ್ರಿ, ಶೃಂಗಾರ, ಪುನೀತ್,ಎಸ್‌.ಪಿ. ಅಕ್ಷಯ್ ಪ್ರಿಯಾದರ್ಶನ್, ಹರ್ಷಿತ್ ಎಸ್ ನಾಗೇಶ್ ಮತ್ತಿತರರು ಹಾಜರಿದ್ದರು.

ಹಣ್ಣು ವಿತರಣಾ ಕಾರ್ಯ: ದ್ವಿಶತಕ ಬಾರಿಸಿದ ಎಸ್ ಪ್ರಕಾಶ್ ಪ್ರಿಯಾದರ್ಶನ್ ಸ್ನೇಹ ಬಳಗ Read More

ವಿದ್ಯಾರ್ಥಿಗಳಿಗೆ ಎಸ್ ಪ್ರಕಾಶ್ ಪ್ರಿಯಾದರ್ಶನ್ ಸ್ನೇಹ ಬಳಗದಿಂದಲೇಖನಿ ಸಾಮಗ್ರಿ ವಿತರಣೆ

ಮೈಸೂರು: ಮೈಸೂರಿನ ನಿರಂತರವಾಗಿ ಮಕ್ಕಳು,ವಿದ್ಯಾರ್ಥಿಗಳಿಗೆ ಹಿರಿಯ ನಾಗರೀಕರಿಗೆ ಸಹಾಯ ಹಸ್ತ ನೀಡುತ್ತಾ ಬರಲಾಗುತ್ತಿದೆ.

ಜತೆಗೆ‌ ಅನಾಥಾಲಯಗಳು,ವೃದ್ದಾಶ್ರಮದ ವಾಸಿಗಳಿಗೆ ಹಣ್ಣು ಮತ್ತಿತರ ತಿನಿಸುಗಳನ್ನು ವಿತರಿಸಲಾಗುತ್ತಿದೆ.

ಈ ಬಾರಿ ಎಸ್ ಪ್ರಕಾಶ್ ಪ್ರಿಯಾದರ್ಶನ್ ಸ್ನೇಹ ಬಳಗದ ವತಿಯಿಂದ ಸರಸ್ವತಿಪುರಂ ನಲ್ಲಿರುವ ಮಹಾಬೋಧಿ ಕರ್ಲ
ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳಿಗೆ ಹಣ್ಣುಗಳು,ಲೇಖನಿ ಸಾಮಗ್ರಿಗಳನ್ನು ವಿತರಿಸಲಾಯಿತು.ಇದು 194 ನೆ ಹಣ್ಣು ವಿತರಣಾ ಕಾರ್ಯವಾಗಿದೆ.

ಈ ವೇಳೆ ಮಹಾಬೋಧಿ ಕರ್ಲ ವಿದ್ಯಾರ್ಥಿ ನಿಲಯದ ವಿವೇಕ್, ಮೈಸೂರು ನಗರ ಜೆ.ಡಿ.ಎಸ್ ಕಾರ್ಯಾಧ್ಯಕ್ಷ ಎಸ್ ಪ್ರಕಾಶ್ ಪ್ರಿಯಾದರ್ಶನ್, ,ಸುಬ್ರಮಣ್ಯ, ಛಾಯಾ, ಯಶವಂತ್ ಕುಮಾರ್, ವೀರಭದ್ರ ಸ್ವಾಮಿ, ಚಂದ್ರಶೇಖರ್, ಶ್ರೀಧರ್, ಮಹೇಶ್, ಮಹದೇವ್,ಎಸ್‌.ಪಿ. ಅಕ್ಷಯ್ ಪ್ರಿಯಾದರ್ಶನ್, ಹರ್ಷಿತ್ ಎಸ್ ನಾಗೇಶ್ ಮತ್ತಿತರರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಗೆ ಎಸ್ ಪ್ರಕಾಶ್ ಪ್ರಿಯಾದರ್ಶನ್ ಸ್ನೇಹ ಬಳಗದಿಂದಲೇಖನಿ ಸಾಮಗ್ರಿ ವಿತರಣೆ Read More