ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ಇಡಿ ಶಾಕ್

ಕಾರವಾರ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆ‌ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಮಾಡಿ ನಗದು ಮತ್ತು ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದೆ.

ಕಾರವಾರದ ಶಾಸಕ ಸತೀಶ್ ಸೈಲ್ ಅವರ ನಿವಾಸದಲ್ಲಿ ಜಾರಿ ನಿರ್ದೇಶನಾಲಯ ದಾಳಿ ನಡೆಸಿ ಕೋಟ್ಯಾಂತರ ರೂಪಾಯಿ ಹಣ ಮತ್ತು ಚಿನ್ನವನ್ನು ವಶಪಡಿಸಿಕೊಂಡು‌ ಶಾಕ್ ನೀಡಿದೆ

ಕಳೆದ ಎರಡು ದಿನಗಳಿಂದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶಾಸಕ ಸತೀಶ್ ಸೈಲ್ ನಿವಾಸದ ಮೇಲೆ ದಾಳಿ ಶೋಧ ನಡೆಸಿದ್ದರು. ಕಾರವಾರ, ಗೋವಾ, ಮುಂಬೈ ಮತ್ತು ದೆಹಲಿಯಲ್ಲಿ ಸೈಲ್ ಗೆ ಸಂಬಂಧಿಸಿದ ಪ್ರದೇಶಗಳಲ್ಲಿ ಶೋಧ ನಡೆದಿತ್ತು.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ನಿಬಂಧನೆಗಳ ಅಡಿಯಲ್ಲಿ ಶೋಧಿಸಲಾದ ಇತರ ಸಂಸ್ಥೆಗಳಲ್ಲಿ ಆಶಾಪುರ ಮಿನೆಕೆಮ್, ಶ್ರೀ ಲಾಲ್ ಮಹಲ್, ಸ್ವಸ್ತಿಕ್ ಸ್ಟೀಲ್ಸ್, ಐಎಲ್‌ಸಿ ಇಂಡಸ್ಟ್ರೀಸ್, ಶ್ರೀ ಲಕ್ಷ್ಮಿ ವೆಂಕಟೇಶ್ವರ ಮಿನರಲ್ಸ್‌ ಕಂಪನಿಗಳು ಸೇರಿವೆ ಎಂದು ಇಡಿ ತಿಳಿಸಿದೆ.

ದಾಳಿ‌ವೇಳೆ ಇಡಿ ಅಧಿಕಾರಿಗಳು ಕೋಟ್ಯಾಂತರ ರೂಪಾಯಿ ಹಣ, ಕೆಜಿಗಟ್ಟಲೆ ಚಿನ್ನ ಪತ್ತೆಹಚ್ಚಿದ್ದಾರೆ. ಶಾಸಕ ಸತೀಶ್ ಸೈಲ್ ಮನೆ ಮತ್ತು ಬ್ಯಾಂಕ್ ಖಾತೆಯಲ್ಲಿದ್ದ 1.68 ಕೋಟಿ ನಗದು, ಮತ್ತು ಅಂದಾಜು 6.20 ಕೋಟಿಗೂ ಅಧಿಕ ಮೌಲ್ಯದ 6.75 ಕೆ‌ಜಿ ಚಿನ್ನವನ್ನು ಜಪ್ತಿ ಮಾಡಲಾಗಿದೆ

ಇಡಿ ಅಧಿಕಾರಿಗಳು ಚರಾಸ್ತಿ, ಸ್ಥಿರಾಸ್ತಿ ಸೇರಿ ಒಟ್ಟು 14.13 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ್ದಾರೆ. 2 ಟ್ರಂಕ್​ನಲ್ಲಿ ಚಿನ್ನ, ಹಣ, ದಾಖಲೆ ಕೊಂಡೊಯ್ದಿದ್ದಾರೆ.

ಅಕ್ರಮ ಅದಿರು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ. ಈಗಾಗಲೇ ಜನಪ್ರತಿನಿಧಿಗಳ ನ್ಯಾಯಾಲಯವು ಸೈಲ್ ಅವರಿಗೆ ಶಿಕ್ಷೆ ವಿಧಿಸಿತ್ತು. ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿ ಮೂಲಕ ಅಕ್ರಮ ಅದಿರು ಸಾಗಾಟ ಮಾಡಿದ್ದ ಪ್ರಕರಣದಲ್ಲಿ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ದೆ ಅವರ ತಂಡ ಸೈಲ್ ವಿರುದ್ಧ ದೂರು ದಾಖಲಿಸಿತ್ತು. ಸತೀಶ್ ಸೈಲ್​ಗೆ ಜನಪ್ರತಿನಿಧಿಗಳ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿತ್ತು. ನಂತರ ಅವರು ಹೈಕೋರ್ಟ್​​ನಲ್ಲಿ ಜಾಮೀನು ಪಡೆದುಕೊಂಡಿದ್ದರು.

ನಂತರ ಜನಪ್ರತಿನಿಧಿಗಳ ನ್ಯಾಯಾಲಯದ ತೀರ್ಪಿನ ವಿರುದ್ಧ ಸೈಲ್ ಹೈಕೋರ್ಟ್​​ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ನವೆಂಬರ್​​​ನಲ್ಲಿ ವಿಚಾರಣೆ ನಡೆಸಿದ್​ದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ, ಸೈಲ್​​​ಗೆ ವಿಧಿಸಿರುವ ಶಿಕ್ಷೆಯ ಆದೇಶವನ್ನು ಅಮಾನತಿನಲ್ಲಿಡಲು ಸೂಚಿಸಿ,ದಂಡ ಮೊತ್ತದ ಶೇ 25 ರಷ್ಟನ್ನು ಠೇವಣಿ ಇಡುವಂತೆ ಆದೇಶಿಸಿದ ಹೈಕೋರ್ಟ್ ಸೈಲ್​ಗೆ ಜಾಮೀನು ನೀಡಿತ್ತು.

ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ಇಡಿ ಶಾಕ್ Read More

ಸತೀಶ್ ಸೈಲ್ ಹಾದಿಯಲ್ಲಿ ಸಾಗಲಿದ್ದಾರೆ ಭ್ರಷ್ಟರು:ವಿಜಯೇಂದ್ರ ಟೀಕೆ

ಬೆಂಗಳೂರು: ಸತೀಶ್ ಸೈಲ್ ವಿರುದ್ಧದ ತೀರ್ಪು ಕಾಂಗ್ರೆಸ್ ಸರ್ಕಾರದ ಭ್ರಷ್ಟರೆಲ್ಲರೂ ಅವರ ಹಾದಿಯನ್ನು ಹಿಂಬಾಲಿಸುವ ಸ್ಥಿತಿ ಎದುರಾಗಲಿದೆ ಎಂಬುದರ ಸ್ಪಷ್ಟ ಸೂಚನೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್​​ ನಲ್ಲಿ ಪೋಸ್ಟ್ ಮಾಡಿರುವ ಅವರು ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ತಪ್ಪಿತಸ್ಥರೆಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪು ಈ ನೆಲದ ಕಾನೂನು ಅದೆಷ್ಟು ಗಟ್ಟಿಯಾಗಿದೆ ಎನ್ನುವುದನ್ನು ನಿರೂಪಿಸಿದೆ ಎಂದು ತಿಳಿಸಿದ್ದಾರೆ.

ಈ ತೀರ್ಪು ಮುಡಾ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಗಳಂತಹ ಲೂಟಿಕೋರತನ ಹಾಗೂ ಭ್ರಷ್ಟತೆಯ ಆರೋಪ ಎದುರಿಸುತ್ತಿರುವವರ ಮುಖಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಟೀಕಿಸಿದ್ದಾರೆ.

ಅಕ್ರಮ ಅದಿರು ಸಾಗಣೆ ಮಾಡಿ ರಾಜ್ಯದ ಬೊಕ್ಕಸಕ್ಕೆ 200 ಕೋಟಿಗೂ ಹೆಚ್ಚಿನ ನಷ್ಟ ಉಂಟು ಮಾಡಿದ ಆರು ಕ್ರಿಮಿನಲ್ ಆರೋಪಗಳಲ್ಲಿ ದೋಷಿಯಾಗಿ ಜೈಲು ಸೇರಿರುವ ಸತೀಶ್ ಸೈಲ್ ವಿರುದ್ಧ ಬಂದಿರುವ ತೀರ್ಪು ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಆರೋಪಿತರಾಗಿರುವ ಕಾಂಗ್ರೆಸ್ ಸರ್ಕಾರದ ಭ್ರಷ್ಟರೆಲ್ಲರೂ ಸತೀಶ್ ಸೈಲ್ ರವರ ಹಾದಿಯನ್ನೇ ಹಿಂಬಾಲಿಸಬೇಕಾದ ಸ್ಥಿತಿ ಎದುರಾಗಲಿದೆ ಎಂಬುದರ ಸ್ಪಷ್ಟ ಸೂಚನೆಯಾಗಿದೆ ಎಂದಿದ್ದಾರೆ.

ಮುಡಾ ಹಗರಣದ ಕುರಿತು ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನುಮತಿಯನ್ನು ಎತ್ತಿ ಹಿಡಿದಿರುವ ಉಚ್ಛ ನ್ಯಾಯಾಲಯದ ಸುದೀರ್ಘ ತೀರ್ಪಿನಲ್ಲಿ ಹಗರಣದ ಕುರಿತಾದ ಉಲ್ಲೇಖಗಳು ಸ್ಪಷ್ಟವಾಗಿ ನಮೂದಾಗಿವೆ. ಈ ನಿಟ್ಟಿನಲ್ಲಿ ಇಡಿ ಹಾಗೂ ಲೋಕಾಯುಕ್ತದಲ್ಲಿ ತನಿಖೆಯೂ ಸಾಗಿದೆ, ಆದರೂ ಭಂಡತನ ಮೆರೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕ ಸತೀಶ್ ಸೈಲ್ ವಿರುದ್ಧದ ತೀರ್ಪಿನಿಂದಾದರೂ ಎಚ್ಚೆತ್ತುಕೊಂಡು ನೈತಿಕತೆ ಮೆರೆದರೆ ಭವಿಷ್ಯತ್ತಿನಲ್ಲಿ ಅವರು ಕಿಂಚಿತ್ತಾದರೂ ಗೌರವ ಉಳಿಸಿಕೊಳ್ಳಬಹುದು, ಇಲ್ಲದಿದ್ದರೆ ನ್ಯಾಯಾಲಯವೇ ಅವರಿಗೆ ಹಾದಿ ತೋರುವ ಪರಿಸ್ಥಿತಿ ಉದ್ಭವಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ‌ಭವಿಷ್ಯ ನುಡಿದಿದ್ದಾರೆ.

ಸತೀಶ್ ಸೈಲ್ ಹಾದಿಯಲ್ಲಿ ಸಾಗಲಿದ್ದಾರೆ ಭ್ರಷ್ಟರು:ವಿಜಯೇಂದ್ರ ಟೀಕೆ Read More