ದೀಪ ಹಂಚಿ ಸಂತಸದ ಬೆಳಕು ಹರಿಸಿದ ಶ್ರೀ ದುರ್ಗಾ ಫೌಂಡೇಶನ್

ಮೈಸೂರು: ಶ್ರೀ ದುರ್ಗಾ ಫೌಂಡೇಶನ್ ವತಿಯಿಂದ ದೀಪಾವಳಿ ಹಬ್ಬದ ಅಂಗವಾಗಿ
ವಿಶೇಷ ಕಾರ್ಯಕ್ರಮ ಹಮ್ಮಿಕೊಮನಡು ಅಂಧಕಾರದ ಮೇಲೆ ಬೆಳಕಿನ ಜಯದ ಸಂದೇಶವನ್ನು ಹಂಚಿಕೊಂಡರು.

ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಅರ್ಚಕ ಸಿಬ್ಬಂದಿಗಳು, ಪೌರಕಾರ್ಮಿಕರು ಹಾಗೂ ಮಹಿಳೆಯರಿಗೆ ಕುಂಕುಮ, ಅರಿಶಿಣ, ಹೂ, ಬ್ಲೌಸ್ ಪೀಸ್,ಹಣತೆ ವಿತರಿಸುವ ಮೂಲಕ ಸಂತಸದ ಬೆಳಕು ಹಂಚುವ ಮನಮುಟ್ಟುವ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ಸಮಾಜ ಸೇವಕ ಕೆ ರಘುರಾಮ್ ವಾಜಪಾಯಿ ಅವರು,ದೀಪಾವಳಿಯ ನಿಜವಾದ ಅರ್ಥ ಎಂದರೆ ಸಂತೋಷ ಹಂಚುವುದು ಮತ್ತು ಬೆಳಕನ್ನು ಹರಡುವುದು ಎಂದು ಹೇಳಿದರು.

ಒಂದು ದೀಪದಿಂದ ಸಾವಿರ ದೀಪಗಳು ಬೆಳಗುವಂತೆ, ಒಬ್ಬನಿಂದ ಹಲವರ ಮನದ ಬೆಳಕು ಹಂಚಿಕೊಳ್ಳುವ ಹಬ್ಬವೇ ದೀಪಾವಳಿ ಎಂದು ಈ ಕಾರ್ಯಕ್ರಮ ಸಾರುತ್ತದೆ
ಎಂದು ತಿಳಿಸಿದರು.

ಶ್ರೀ ದುರ್ಗಾಪಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್ ಮಾತನಾಡಿ,
ಪ್ರತಿ ಮನೆಯಲ್ಲೂ ಆಶೆಯ ಬೆಳಕು ಹೊಳೆಯಲಿ ಈ ದೀಪಾವಳಿ ಸಂತಸ ತರಲಿ ಎಂದು ಶುಭ ಕೋರಿದರು.

ಅರಮನೆ ಸಮೂಹ ದೇವಾಲಯಗಳ ವ್ಯವಸ್ಥಾಪಕರಾದ ಕಾವ್ಯ ವಿನಯ್, ರಮ್ಯ ರಾಘವೇಂದ್ರ, ರಶ್ಮೀ, ಗೌರಮ್ಮ, ಸುವರ್ಣಮ್ಮ, ಮಂಜುಳಾ ಸೋಮಣ್ಣ, ಕೋಮಲಾಮಣಿ, ಕಾವ್ಯ, ಶ್ರುತಿ, ದರ್ಶನ, ಮತ್ತಿತರರು ಪಾಲ್ಗೊಂಡಿದ್ದರು.

ದೀಪ ಹಂಚಿ ಸಂತಸದ ಬೆಳಕು ಹರಿಸಿದ ಶ್ರೀ ದುರ್ಗಾ ಫೌಂಡೇಶನ್ Read More

ದಸರಾ ಮನೆಮನೆ ಗೊಂಬೆ ಸ್ಪರ್ಧಿಗಳಿಗೆ ಬಹುಮಾನ ವಿತರಣೆ

ಮೈಸೂರು: ಚಾಮುಂಡಿಪುರಂನಲ್ಲಿರುವ ಅಪೂರ್ವ ಹೋಟೆಲ್ ಸಭಾಂಗಣದಲ್ಲಿ ಶ್ರೀ ದುರ್ಗಾ ಫೌಂಡೇಶನ್ ವತಿಯಿಂದ ಆಯೋಜಿಸಿದ್ದ ಮನೆಮನೆ ಗೊಂಬೆ ಕೂರಿಸುವ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ವಿಜೇತರಾದ ಜೆಪಿ ನಗರದ ನಿವಾಸಿ ರಶ್ಮಿ, ಲಕ್ಷ್ಮಿಪುರಂ ನಿವಾಸಿ ಉಷಾ, ಬೆಂಗಳೂರು ನಿವಾಸಿ ಮಂಜುಳಾ,ಹಾಸನ ನಿವಾಸಿ ಗುರು, ಬೆಂಗಳೂರು ನಿವಾಸಿ ರಮ್ಯ, ಶ್ರೀರಾಂಪುರ ನಿವಾಸಿ ಪೂಜಾ ಪುನೀತ್, ಚಾಮುಂಡಿಪುರಂ ನಿವಾಸಿ ಶಾರದಾ, ರಾಮಕೃಷ್ಣ ನಗರ ನಿವಾಸಿ ಜಗಲಕ್ಷ್ಮಿ, ಅಗ್ರಹಾರ ನಿವಾಸಿ ಕಾರ್ತಿಕ್, ರಾಮಕೃಷ್ಣ ನಗರ ನಿವಾಸಿ ಸ್ವರೂಪಿಣಿ ಅವರುಗಳಿಗೆ ಬಹುಮಾನ ವಿತರಿಸಲಾಯಿತು

ಇದೇ ವೇಳೆ ನೂರಕ್ಕೂ ಹೆಚ್ಚು ಭಾಗವಹಿಸಿದ ಸ್ಪರ್ಧಿಗಳಿಗೆ ಪ್ರಮಾಣ ಪತ್ರ ನೀಡಲಾಯಿತು.

ಬಹುಮಾನ ವಿತರಿಸಿ ಮಾತನಾಡಿದ ಹಿರಿಯ ಸಮಾಜ ಸೇವಕ ಕೆ ರಘುರಾಮ ವಾಜಪಾಯಿ ಅವರು,ಸಂಸ್ಕೃತಿ ಮತ್ತು ನಮ್ಮ ಪರಂಪರೆಯ ಉಳಿವಿಗಾಗಿ ಹೋರಾಡುವ ಸಂದರ್ಭ ಎದುರಾಗಿದೆ, ಪ್ರತಿಯೊಬ್ಬರು ಅದಕ್ಕಾಗಿ ಶ್ರಮಿಸಬೇಕು ಎಂದು ಕರೆ ನೀಡಿದರು.

ನಮ್ಮ ಸಂಪ್ರದಾಯ ಮತ್ತು ಧಾರ್ಮಿಕತೆಯ ರಕ್ಷಣೆಗಾಗಿ ಪ್ರತಿಯೊಬ್ಬ ಹಿಂದುಗಳು ಒಗ್ಗಟ್ಟಾಗಿ ಕಲೆತು ಮುಂದಿನ ಪೀಳಿಗೆಗೆ ಸಂರಕ್ಷಿಸಬೇಕು ಎಂದು ಹೇಳಿದರು .

ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ ಟಿ ಪ್ರಕಾಶ್ ಅವರು ಮಾತನಾಡಿ,ನವರಾತ್ರಿಯು ಮೈಸೂರು ಪರಂಪರೆಯಲ್ಲಿ ಅತ್ಯಂತ ಪವಿತ್ರವಾದದ್ದು. ದಸರಾ ಗೊಂಬೆ ಪ್ರದರ್ಶನಕ್ಕೆ ಅತ್ಯಂತ ಮಹತ್ವವಿದೆ,ಪಟ್ಟದ ಗೊಂಬೆಗಳನ್ನು ಲಕ್ಷ್ಮಿನಾರಾಯಣ ಸ್ವರೂಪದಲ್ಲಿ ಪೂಜಿಸಿ ಪುರಾಣ ಪುಣ್ಯಕಥೆಗಳನ್ನು ಗೊಂಬೆಗಳ ಮೂಲಕ ರೂಪಕವಾಗಿ ಪ್ರಚುರಪಡಿಸಿ ಅದನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದೇ ಇದರ ಮೂಲ ಉದ್ದೇಶ, ಮೈಸೂರಿನ ಮನೆಮನೆಗಳಲ್ಲಿ ಕೂರಿಸುವುದರಿಂದ ಗೃಹಿಣಿಯರು ನಮ್ಮ ಪರಂಪರೆಯನ್ನು ಉಳಿಸಿ ಬೆಳೆಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಉದ್ಯಮಿಗಳಾದ ಜಯರಾಮ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ಅಯ್ಯಂಗಾರ್, ಸಮಾಜ ಸೇವಕರಾದ ಮಂಜುಳಾ ಸೋಮಣ್ಣ,ಕೋಮಲ ಮಣಿ, ಶ್ರುತಿ, ಸಹನಾ, ತಾರಾ ಮತ್ತಿತರರು ಹಾಜರಿದ್ದರು.

ದಸರಾ ಮನೆಮನೆ ಗೊಂಬೆ ಸ್ಪರ್ಧಿಗಳಿಗೆ ಬಹುಮಾನ ವಿತರಣೆ Read More

ಶ್ರೀ ದುರ್ಗಾ ಫೌಂಡೇಶನ್ 6ನೇ ವಾರ್ಷಿಕೋತ್ಸವ: ಮೈಸೂರು ಸೇವಾ ರತ್ನ ಪ್ರಶಸ್ತಿ

ಮೈಸೂರು: ಶ್ರೀ ದುರ್ಗಾಪೌಂಡೇಶನ್ 6ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ
ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಮೈಸೂರು ಸೇವಾ ರತ್ನ ಪ್ರಶಸ್ತಿ 2025 ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಾಧಕರಾದ ರಮೇಶ್ ರಾಮಪ್ಪ, ಕಾವ್ಯ, ಉಮೇಶ್ ವನಸಿರಿ, ಲಕ್ಷ್ಮಿ ನಾರಾಯಣ ಯಾದವ್, ಬೀರೇಶ್ ಅನಗೂಡು, ನಟರಾಜ್, ಬಸವರಾಜ್ ಕೆ, ಮಾಲಿನಿ ಮಲ್ಲೇಶ್, ಕೆ ಸುಶೀಲ ರಾವ್, ಶರದ, ಸಂಧ್ಯಾ ರಾಣಿ, ಸೌಮ್ಯ, ನಾಗೇಂದ್ರ ಕುಮಾರ್ ಅವರಿಗೆ ಮೈಸೂರು ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ‌ ವೇಳೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್ ಅವರು ಮಾತನಾಡಿ,
ಪ್ರತಿಯೊಬ್ಬರು ಸಮಾಜ ಸೇವೆಯಲ್ಲಿ ತೊಡಗಿಕೊಸಿಕೊಂಡು ಜೀವನದ ಸಾರ್ಥಕತೆ ಕಂಡುಕೊಳ್ಳಬೇಕು, ಸಮಾಜ ಸೇವೆಗಳಲ್ಲಿ ತನು, ಮನ ಸೇವೆಗಳು ಶ್ರೇಷ್ಠತೆ ಪಡೆದುಕೊಂಡಿವೆ ಎಂದು ಹೇಳಿದರು.

ಪ್ರತಿಯೊಬ್ಬರು ಧನವಿದ್ದರೇ ಮಾತ್ರ ಸೇವೆ ಮಾಡಬಹುದು ಎಂಬ ಮನೋಭಾವದಿಂದ ಹೊರಬಂದು, ತನು, ಮನ ಸೇವೆ ಸಲ್ಲಿಸುವ ಮೂಲಕ ಜೀವನದಲ್ಲಿ ಸಾರ್ಥಕತೆ ಕಂಡುಕೊಳ್ಳಬಹುದು. ಸಮಾಜದಲ್ಲಿ ಒಳ್ಳೆಯ ಕಾರ್ಯ ಮಾಡುವ ಸಂದರ್ಭದಲ್ಲಿ ವ್ಯಕ್ತಿಯೇ ಇರಬೇಕು ಅಂತಿಲ್ಲ. ಅವರ ವ್ಯಕ್ತಿತ್ವ ಇದ್ದರೆ ಸಾಕು. ಇದಕ್ಕೆ ಶ್ರೀ ದುರ್ಗಾ ಪೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್ ಅವರೇ ಸಾಕ್ಷಿಯಾಗಿದ್ದಾರೆ ಎಂದು ತಿಳಿಸಿದರು

ಈ ಕಾರ್ಯಕ್ರಮ ದಲ್ಲಿ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ,ನಗರ ಪಾಲಿಕೆ ಮಾಜಿ ಸದಸ್ಯರಾದ ಪ್ರಮೀಳಾ ಭರತ್, ಕೆಪಿಸಿಸಿ ಸದಸ್ಯ ನಜರಬಾದ್ ನಟರಾಜ್, ಜಿ ರಾಘವೇಂದ್ರ, ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್, ಜೀವಧಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಮುತ್ತಣ್ಣ, ಪತ್ರಕರ್ತರಾದ ರಾಘವೇಂದ್ರ, ಪವನ್ ಸಿದ್ದರಾಮು, ಅಜಯ್ ಶಾಸ್ತ್ರಿ, ಮಹಾನ್ ಶ್ರೇಯಸ್,
ರೂಪ ಗೌಡ, ದೀಪ ಮತ್ತಿತರರು ಪಾಲ್ಗೊಂಡಿದ್ದರು.

ಶ್ರೀ ದುರ್ಗಾ ಫೌಂಡೇಶನ್ 6ನೇ ವಾರ್ಷಿಕೋತ್ಸವ: ಮೈಸೂರು ಸೇವಾ ರತ್ನ ಪ್ರಶಸ್ತಿ Read More

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಸಾಮೂಹಿಕ ಸೀಮಂತ!

ಮೈಸೂರು: ವಿಜಯನಗರದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶ್ರೀ ದುರ್ಗಾ ಫೌಂಡೇಶನ್ ಮತ್ತು ಕೆ ವಿ ಕೆ ಫೌಂಡೇಶನ್ ವತಿಯಿಂದ 50ಕ್ಕೂ ಹೆಚ್ಚು ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ ನೆರವೇರಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿದ
ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಯ ಉಪಾಧ್ಯಕ್ಷರಾದ ಡಾ. ಪುಷ್ಪ ಅಮರನಾಥ್ ಅವರು ಮಾತನಾಡಿ,ನಿಜಕ್ಕೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ನನ್ನ ಸೌಭಾಗ್ಯ ಎಂದು ನುಡಿದರು.

ಅರಿಶಿನ,ಕುಂಕುಮ, ಬಳೆ ಇಟ್ಟು ಬಾಗಿನ ಕೊಡುವ ನಮ್ಮ ಸಂಪ್ರದಾಯ ತುಂಬಾ ಒಳ್ಳೆಯದು ಎಂದು ಹೇಳಿದರು.

ಭಾಗಿನ ಕೊಡುವವರದು ಹಾಗೂ ತೆಗೆದು ಕೊಳ್ಳುವವರದು ಇಬ್ಬರದೂ ಸೌಭಾಗ್ಯ, ನಿಮಗೆ ಜನಿಸುವ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸಿ ಉತ್ತಮ ಪ್ರಜೆಗಳನ್ನಾಗಿ ರೂಪಿಸಿ ಎಂದು ಕಿವಿ ಮಾತು ಹೇಳಿದರು.

ಖುಷಿ ವಿನು ಮತ್ತು ಶ್ರೀ ದುರ್ಗಾ ಫೌಂಡೇಶನ್ ನ ರೇಖಾ ಅವರು ಮಹಿಳೆಯರಿಗಾಗಿ ಇಂತಹ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾರೆ ಎಂದು ಪುಷ್ಪಾ ಅಮರ ನಾಥ್ ಮೆಚ್ಚುಗೆ‌ ವ್ಯಕ್ತಪಡಿಸಿದರು.

ಸೀಮಂತ ಮಾಡಿಕೊಂಡ ಎಲ್ಲಾ ಮಹಿಳೆಯರಿಗೂ ತಾಯಿ ಚಾಮುಂಡೇಶ್ವರಿ ಒಳಿತು ಮಾಡಲಿ ಎಂದು ಅವರು ಶುಭ ಹಾರೈಸಿದರು.

ಸೌಮ್ಯ ಅನಿಲ್ ಚಿಕ್ಕಮಾದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಬಸವರಾಜ್,ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್, ಇಂದಿರಾ ಗಾಂಧಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಾದ ರವಿ ಮಂಚೇಗೌಡನ ಕೊಪ್ಪಲು, ಮುಖಂಡರಾದ ಜಿ ರಾಘವೇಂದ್ರ, ಕೆವಿಕೆ ಫೌಂಡೇಶನ್ ಅಧ್ಯಕ್ಷರಾದ ಖುಷಿ ವಿನು,ಕಾವ್ಯ,ಮಂಜುಳಾ
ಮತ್ತಿತರರು ‌ಹಾಜರಿದ್ದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಸಾಮೂಹಿಕ ಸೀಮಂತ! Read More

ವೈದ್ಯರ ದಿನಾಚರಣೆ ವೈದ್ಯರಿಗೆ ಸನ್ಮಾನ

ಮೈಸೂರು, ಜು.1: ವೈದ್ಯರ ದಿನಾಚರಣೆ ಪ್ರಯುಕ್ತ ಶ್ರೀ ದುರ್ಗಾ ಫೌಂಡೇಶನ್ ನವರು ವೈದ್ಯರನ್ನು ಸನ್ಮಾನಿಸಿ ಗೌರವಿಸಿದರು.

ಕಾಳಿದಾಸ ರಸ್ತೆಯಲ್ಲಿರುವ ಕಾಂಗೂರ್ ಕೇರ್ ಫರ್ಟಿಲಿಟಿ ಆಸ್ಪತ್ರೆ ಯಲ್ಲಿ ಖ್ಯಾತ ವೈದ್ಯರಾದ ಡಾ. ದಿಲೀಪ್ ಹಾಗೂ ಡಾ. ಸ್ವಾತಿ ಅವರನ್ನು ಶ್ರೀ ದುರ್ಗಾ ಫೌಂಡೇಶನ್ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್, ಸಮಾಜ ಸೇವಕಿ ಖುಷಿ ವಿನು, ಸತ್ಯಸಾಯಿ ಸುರಕ್ಷಾ ಕೇಂದ್ರ ಅಧ್ಯಕ್ಷರಾದ ಸರಸ್ವತಿ ಹಲಸಗಿ, ವಕೀಲರಾದ ಜಯಶ್ರೀ ಶಿವರಾಮ್, ಸುಶೀಲ, ಮರಿಯಾ ಆಲ್ಫೋನ್ಸ್
ಜಯಲಕ್ಷ್ಮಿ ,ಕುಮಾರಿ,ಪೂಜಾ
ವಿಕಾಸ್ ,ಗೋಕುಲ್ ಮತ್ತಿತರರು ಹಾಜರಿದ್ದರು.

ವೈದ್ಯರ ದಿನಾಚರಣೆ ವೈದ್ಯರಿಗೆ ಸನ್ಮಾನ Read More

ಮೊದಲ ಆಶಾಡ ಶುಕ್ರವಾರ:‌ಮಹಿಳಾ ಭಕ್ತರಿಗೆ ಉಡಿ ತುಂಬಿದ ಮಹಿಳೆಯರು

ಮೈಸೂರು: ಶ್ರೀ ದುರ್ಗಾ ಫೌಂಡೇಶನ್ ವತಿಯಿಂದ ಮೊದಲ ಆಷಾಢ ಶುಕ್ರವಾರ ಅಂಗವಾಗಿ ಚಾಮುಂಡಿ ಬೆಟ್ಟದ ಪಾದದಲ್ಲಿ ಚಾಮುಂಡೇಶ್ವರಿ ದರ್ಶನಕ್ಕೆ ಆಗಮಿಸಿದ ಮಹಿಳೆಯರಿಗೆ ಅರಿಶಿಣ ,ಕುಂಕುಮ ಬಳೆಗಳೊಂದಿಗೆ ಬಾಗಿನ ನೀಡಿ ಉಡಿ ತುಂಬಲಾಯಿತು.

ಈ ವೇಳೆ ಮಾತನಾಡಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷೆ ರೇಖಾ ಶ್ರೀನಿವಾಸ್
ಆಷಾಢ ಮಾಸದಲ್ಲಿ ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ನಡೆಸಲಾಗುತ್ತದೆ. ಈ ಹಿನ್ನಲೆಯಲ್ಲಿ ಸಾವಿರಾರು ಭಕ್ತರು ತಾಯಿಗೆ ಹರಕೆ ತಿರಿಸಲು ಬೆಟ್ಟದ ಪಾದದಿಂದ ಬೆಟ್ಟದ ಮೇಲಿನ ವರೆಗೂ ಅರಿಶಿನ ಕುಂಕುಮ ಹಚ್ಚುತ್ತಾರೆ. ಅಂತಹ ಮಹಿಳಾ ಭಕ್ತಾಧಿಗಳಿಗೆ ಅರಿಶಿನ ಕುಂಕುಮ ಹಾಗೂ ಬಳೆಗಳನ್ನು ನೀಡಿ ಅವರಿಗೆ ತಾಯಿ ಚಾಮುಂಡೇಶ್ವರಿ ಒಳಿತು ಮಾಡಲಿ ಎಂದು ಆರೈಸುತ್ತಿದ್ದೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಮಾಜ ಸೇವಕಿ ಖುಷಿವಿನು, ಸರಸ್ವತಿ ಹಲಸಗಿ,
ಸವಿತಾ ಘಾಟ್ಕೆ, ಜಯಶ್ರೀ ಶಿವರಾಮ್, ಸುಶೀಲ,ಮತ್ತಿತರರು ಹಾಜರಿದ್ದರು.

ಮೊದಲ ಆಶಾಡ ಶುಕ್ರವಾರ:‌ಮಹಿಳಾ ಭಕ್ತರಿಗೆ ಉಡಿ ತುಂಬಿದ ಮಹಿಳೆಯರು Read More

ತಾಯಿಗೆ ಸಮನಾದ ವ್ಯಕ್ತಿ ಯಾರೂ ಇಲ್ಲ:ಸಾ ರಾ ಮಹೇಶ್

ಮೈಸೂರು: ಒಂಬತ್ತು ತಿಂಗಳು ಹೊತ್ತು ಹೆತ್ತು ತನ್ನ ಜೀವಕ್ಕಿಂತ ಹೆಚ್ಚಾಗಿ ಪ್ರೀತಿಸುವ ಹಾಗೂ ಪೋಷಿಸುವ ತಾಯಿಗೆ ಸಮಾನವಾದ ಮತ್ತೊಬ್ಬ ವ್ಯಕ್ತಿ ಜಗತ್ತಿನಲ್ಲಿ ಯಾರು ಇಲ್ಲ ಎಂದು ಮಾಜಿ ಶಾಸಕ ಸಾರಾ ಮಹೇಶ್ ಹೇಳಿದರು.

ನಗರದ ಕುಕ್ಕರಹಳ್ಳಿ ಬಳಿ
ಶ್ರೀ ದುರ್ಗಾ ಫೌಂಡೇಶನ್ ಹಾಗೂ ಸೂಯೋಗ ಆಸ್ಪತ್ರೆ
ಸಂಯುಕ್ತ ಆಶ್ರಯದಲ್ಲಿ ವಿಶ್ವ ತಾಯಂದಿರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ತಾಯಂದಿರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವರ್ಣಿಸಲು ಅಸಾಧ್ಯವಾದ ವ್ಯಕ್ತಿ ತಾಯಿ, ಅವಳನ್ನು ಇಳಿ ವಯಸ್ಸಲ್ಲಿ ಸರಿಯಾಗಿ ನೋಡಿಕೊಳ್ಳದೆ ವೃದ್ಧಾಶ್ರಮಕ್ಕೆ ನೂಕುವ ಕೆಲಸ ಮಾಡಬಾರದು ಎಂದು ತಿಳಿಹೇಳಿದರು.

ಹಿರಿಯ ಜೀವಿಗಳ ಮನಸ್ಸನ್ನು ನೋಯಿಸದೆ ಅವರನ್ನು ಆರೋಗ್ಯವಂತರನ್ನಾಗಿ ಕಾಪಾಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಬೇಕು
ಎಂದು ಹೇಳಿದರು.

ವೈದ್ಯರಾದ ಡಾಕ್ಟರ್ ಎಸ್ ಪಿ ಯೋಗಣ್ಣ ಮಾತನಾಡಿ, ಎಲ್ಲರಿಗೂ ಆರೋಗ್ಯವೇ ಮಹಾ ಭಾಗ್ಯವಾಗಿದೆ,ತಾಯಂದಿರು ಆರೋಗ್ಯವಂತರಾಗಿದ್ದರೆ ಇಡೀ ಕುಟುಂಬ ಆರೋಗ್ಯ ಕಾಪಾಡಿಕೊಂಡಂತೆ ಎಂದು ತಿಳಿಸಿದರು.

ಮೂಢನಂಬಿಕೆಗೆ ಒಳಗಾಗಿ ಆಸ್ಪತ್ರೆಗೆ ತೋರಿಸದೆ ಅನಾರೋಗ್ಯದಿಂದ ಬಳಲುವುದು ಸರಿಯಲ್ಲ, ವೈದ್ಯರನ್ನು ಸಂಪರ್ಕಿಸಿ ಎಂದು ಕಿವಿಮಾತು ಹೇಳಿದರು.

ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ 200ಕ್ಕೂ ಹೆಚ್ಚು ಮಂದಿ ಉಚಿತ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.

ಖ್ಯಾತ ವೈದ್ಯರಾದ ಸ್ತ್ರೀ ರೋಗ ತಜ್ಞರಾದ ಡಾ. ಗೀತಾ,ಡಾ ಅನುಷ್ಯ ಪ್ರಿಯ, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ದುರ್ಗಾ ಪೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್, ಸುಜಾತ, ಕೋಮಲ, ವನಮಾಲ, ನೀಲಾ, ಕಾಮಾಕ್ಷಿ ಮತ್ತಿತರರು ಪಾಲ್ಗೊಂಡಿದ್ದರು.

ತಾಯಿಗೆ ಸಮನಾದ ವ್ಯಕ್ತಿ ಯಾರೂ ಇಲ್ಲ:ಸಾ ರಾ ಮಹೇಶ್ Read More

ಸುರಕ್ಷಿತವಾಗಿ ಭೂಮಿಗೆ ಬಂದ ಸುನೀತಾ,ಬುಚ್:ಮೈಸೂರಿನಲ್ಲಿ ಸಂಭ್ರಮಾಚರಣೆ

ಮೈಸೂರು: ಭಾರತೀಯ ಮೂಲದ ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಅವರು ಸುರಕ್ಷಿತವಾಗಿ ಭೂಮಿಗೆ ಬಂದುದಕ್ಕೆ ಶ್ರೀ ದುರ್ಗಾ ಫೌಂಡೇಶನ್ ವತಿಯಿಂದ ಸಂಭ್ರಮಾಚರಣೆ ಮಾಡಲಾಯಿತು.

ಮೈಸೂರಿನ ಅಗ್ರಹಾರದಲ್ಲಿ ಶ್ರೀ ದುರ್ಗಾ ಫೌಂಡೇಶನ್ ನವರು‌ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಅವರ
ಭಾವಚಿತ್ರ ಹಿಡಿದು ಭಾರತ್ ಮಾತಾ ಕಿ ಜೈ ಹಾಗೂ ಸುನಿತಾ ವಿಲಿಯಮ್ಸ್ ಹಾಗೂ ತಂಡಕ್ಕೆ ಜೈಕಾರ ಕೂಗಿ ಸಂಭ್ರಮಿಸಿದರು.

ಈ ವೇಳೆ ಮಾತನಾಡಿದ
ವೈದ್ಯರಾದ ಡಾ.ಶ್ರೀ ನಿವಾಸ್ ಆಚಾರ್ಯ ಅವರು,ಸಂಶೋಧನೆಯ ನಿಮಿತ್ತ ಒಂದು ವಾರದ ಮಟ್ಟಿಗೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಪಯಣ ಬೆಳೆಸಿದ್ದ ಸುನಿತಾ ವಿಲಿಯಮ್ಸ್ ಅವರು ತಾಂತ್ರಿಕ ವೈಫಲ್ಯದಿಂದ ಭೂಮಿಗೆ ಮರಳಲಾಗದೆ 9 ತಿಂಗಳಿಂದ ಬಾಹ್ಯಾಕಾಶದಲ್ಲೆ ಉಳಿಯುವಂತಾಗಿತ್ತು ಎಂದು ಸ್ಮರಿಸಿದರು.

ಇಂತಹ ಸಂದಿಗ್ಧ ಪರಿಸ್ಥಿತಿಯನ್ನು ದಿಟ್ಟತನದಿಂದ‌‌ ಎದುರಿಸಿ ಭೂಮಿಗೆ ವಾಪಸ್ ಆಗಿರುವ ಸುನೀತಾ ಅವರ ಸಾಹಸ ಮತ್ತು ಸಾಧನೆ ಅಸಂಖ್ಯಾತ ಯುವ ವಿಜ್ಞಾನಿಗಳಿಗೆ, ಸಂಶೋಧಕರಿಗೆ ಹಾಗೂ ಮಹಿಳೆಯರಿಗೆ ಸ್ಪೂರ್ತಿಯಾಗಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಮಾಜಿ ಉಪಕುಲ ಸಚಿವರಾದ ಬಾಬುರಾವ್, ಸಾಯಿಬಾಬಾ ದೇವಸ್ಥಾನದ ಅರ್ಚಕರಾದ ಮಹೇಶ್ ಕುಮಾರ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್,ಕಾಂಗ್ರೆಸ್ ಯುವ ಮುಖಂಡ ಸಂತೋಷ್ ಕಿರಾಲು, ಹೇಮಾ ಮತ್ತಿತರರು ಹಾಜರಿದ್ದರು.

ಸುರಕ್ಷಿತವಾಗಿ ಭೂಮಿಗೆ ಬಂದ ಸುನೀತಾ,ಬುಚ್:ಮೈಸೂರಿನಲ್ಲಿ ಸಂಭ್ರಮಾಚರಣೆ Read More

ನಿಸ್ವಾರ್ಥ ಸೇವೆಯೇ ನಿಜವಾದ ಸಮಾಜ ಸೇವೆ: ನಾರಾಯಣಗೌಡ

ಮೈಸೂರು: ನಿಸ್ವಾರ್ಥ ಸೇವೆಯೇ ನಿಜವಾದ ಸಮಾಜ ಸೇವೆ ಎಂದು ‌ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ ಹೇಳಿದರು.

ನಗರದ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಜೀವಧಾರ ರಕ್ತನಿಧಿ ಕೇಂದ್ರ ಆವರಣದಲ್ಲಿ ಶ್ರೀ ದುರ್ಗಾ ಫೌಂಡೇಶನ್ ಹಾಗೂ ಅರಿವು ಸಂಸ್ಥೆ ಹಮ್ಮಿಕೊಂಡಿದ್ದ
ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ 20 ವರ್ಷ ನಿರಂತರ ಸಾಮಾಜಿಕ ಸೇವೆ ಹಾಗೂ ಸಂಘಟನೆಯಿಂದ ಸೇವೆ ಸಲ್ಲಿಸುತ್ತಿರುವ ಎಸ್ ಇ ಗಿರೀಶ್ ರವರಿಗೆ
ಜೀವರಕ್ಷಕ ಸೇವಾ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.

ಸೇವೆಯನ್ನು ಆತ್ಮ ತೃಪ್ತಿ ಮತ್ತು ಮನಃಸಂತೋಷಕ್ಕಾಗಿ ಮಾಡುತ್ತೇವೆ ಜೀವಧಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಅವರು ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದವರ ಸೇವೆಯ ಜೊತೆಗೆ ಬಡ ವಿದ್ಯಾರ್ಥಿ ಹಾಗೂ ರೋಗಿಗಳಿಗೆ ಸಹಾಯ ಮಾಡುವ ಮೂಲಕ ನಿಸ್ವಾರ್ಥ ಸೇವೆ ಮಾಡುತ್ತಾ ನಿಜವಾದ ಸಮಾಜ ಸೇವೆ ಅವರದು ಎಂದು ಮೆಚ್ಚುಗೆ ‌ವ್ಯಕ್ತಪಡಿಸಿದರು.

ನಿಸ್ವಾರ್ಥ ಸೇವಾಕಾರ್ಯಗಳು ಸಮಾಜದ ಸ್ವಾಸ್ಥ್ಯ ಕಾಪಾಡಲು ಸಹಕಾರಿ ಗಿರೀಶ್ ಅವರ ಸದೀರ್ಘಕಾಲದ ಸೇವೆ ಹೀಗೆಯೇ ಮುಂದುವರಿಯಲಿ ಎಂದು ಹಾರೈಸಿದರು.

ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರಾದ ಲಿಂಗರಾಜು ಅವರು ಮಾತನಾಡಿ,
ರಕ್ತದಾನಕ್ಕಿಂತ ಶ್ರೇಷ್ಠವಾದ ದಾನ ಮತ್ತೊಂದಿಲ್ಲ. ಅಪಘಾತ ಮತ್ತಿತರ ಘಟನೆ ಸಂದರ್ಭದಲ್ಲಿ ರಕ್ತದ ಕೊರತೆಯಿಂದ ಪ್ರಾಣ ಕಳೆದುಕೊಳ್ಳುವ ಸ್ಥಿತಿಯಲ್ಲಿರುವ ರೋಗಿಗಳಿಗೆ ರಕ್ತದಾನ ಮಾಡುವವರೇ ಎರಡನೇ ದೇವರಾಗುತ್ತಾರೆ ಅಂತಹ ಕೆಲಸದಲ್ಲಿ ಜೀವದಾರ ರಕ್ತ ನಿಧಿ ಕೇಂದ್ರ 20 ವರ್ಷದಿಂದ ನಿರಂತರವಾಗಿ‌ ಸೇವೆ ಮಾಡುತಗತಾ ಬಂದಿದೆ,
ಜೀವದಾರ ರಕ್ತ ನಿಧಿ ಕೇಂದ್ರವು ಮೈಸೂರು ನಗರದ ಅತ್ಯುತ್ತಮ ರಕ್ತ ನಿಧಿ ಕೇಂದ್ರ ಎಂಬ ಸರ್ಕಾರದ ಪ್ರಶಂಸೆಗೆ ಪಾತ್ರವಾಗಿದೆ
ಎಂಬುವುದು ಹೆಮ್ಮೆಯ ವಿಚಾರ ಎಂದು ಹೇಳಿದರು.

ಈ ಸಂದರ್ಭದಲ್ಲಿ 30 ಯೂನಿಟ್ ಸ್ವಯಂ ಪ್ರೇರಿತ ರಕ್ತದಾನ ಮಾಡಿದ ಶ್ರೀ ದುರ್ಗಾ ಫೌಂಡೇಶನ್ ಹಾಗೂ ಅರಿವು ಸಂಸ್ಥೆಯ ಪದಾಧಿಕಾರಿಗಳು, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ರೇಣುಕಾ ರಾಜ್, ಜೆಡಿಎಸ್ ಕಾರ್ಯದಕ್ಷ ಎಸ್ ಪ್ರಕಾಶ್ ಪ್ರಿಯದರ್ಶನ್, ಜಿ ರಾಘವೇಂದ್ರ, ಆನಂದ್, ಮುತ್ತಣ್ಣ,ಎಂ.ಗಂಟಯ್ಯ (ಕೃಷ್ಣಪ್ಪ), ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್, ಅರಿವು ಸಂಸ್ಥೆಯ ಅಧ್ಯಕ್ಷರಾದ ಶ್ರೀಕಾಂತ್ ಕಶ್ಯಪ್, ಕೇಬಲ್ ವಿಜಿ, ಸೂರಜ್, ಸದಾಶಿವ್, ವಿನಯ್ ಕಣಗಾಲ್, ರಾಕೇಶ್, ಕೆಂಪಣ್ಣ ,ನಂದೀಶ್, ರಾಘವೇಂದ್ರ ಮತ್ತಿತರರು ಹಾಜರಿದ್ದರು.

ನಿಸ್ವಾರ್ಥ ಸೇವೆಯೇ ನಿಜವಾದ ಸಮಾಜ ಸೇವೆ: ನಾರಾಯಣಗೌಡ Read More

ಪೌರಕಾರ್ಮಿಕರಿಗೆ ಬಾಗಿನ ವಿತರಿಸಿ ಸಂಕ್ರಾಂತಿ ಹಬ್ಬ ಆಚರಣೆ

ಮೈಸೂರು: ಮೈಸೂರಿನ ಕಾಂಗರೂ ಕೇರ್ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ- ಫರ್ಟಿಲಿಟಿ ಸೆಂಟ‌ರ್ ಹಾಗೂ ಶ್ರೀ ದುರ್ಗಾ ಫೌಂಡೇಶನ್ ನವರು ಪೌರಕಾರ್ಮಿಕರಿಗೆ ಸೀರೆ, ಬಳೆ, ಎಳ್ಳು, ಬೆಲ್ಲ, ಬಾಗಿನ ವಿತರಿಸಿ ವಿಶೇಷವಾಗಿ ಸಂಕ್ರಾಂತಿ ಹಬ್ಬ ಆಚರಿಸಲಾಯಿತು.

ಈ ವೇಳೆ ಆಸ್ಪತ್ರೆಯ ವೈದ್ಯರಾದ ಡಾ ಮಂಜುನಾಥ್ ಮಾತನಾಡಿ ಹಬ್ಬಗಳು ಸಂಸ್ಕಾರ ಬಿಂಬಿಸುವ ಪ್ರತೀಕವಾಗಿವೆ ಎಂದು ಹೇಳಿದರು.

ನಮ್ಮ ರಾಜ್ಯ ಸೇರಿದಂತೆ ಇಡೀ ದೇಶದಲ್ಲಿ ಸಂಕ್ರಾಂತಿ ಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ ರೈತರು ಹೊಸವರ್ಷದಂತೆ ಆಚರಿಸುತ್ತಾರೆ. ಗ್ರಾಮೀಣ ಭಾಗಗಳಲ್ಲಿ ಕೃಷಿ ಸಲಕರಣೆಗಳಿಗೆ ಪೂಜೆ ಸಲ್ಲಿಸುವ ಮೂಲಕ ಗೌರವಿಸಲಾಗುತ್ತಿದೆ, ಜಾನುವಾರುಗಳನ್ನು ಸಿಂಗಾರಗೊಳಿಸಿ, ಗ್ರಾಮಗಳಲ್ಲಿ ಮೆರವಣಿಗೆ ಮಾಡಲಾಗುತ್ತಿದೆ,ಕೆಲವೆಡೆ ಕಿಚ್ಚು ಹಾಯಿಸಲಾಗುತ್ತದೆ ಎಂದು ತಿಳಿಸಿದರು.

ಮೈಸೂರು ನಗರ ಬಿಜೆಪಿ ಉಪಾಧ್ಯಕ್ಷರಾದ ಹೇಮಾನಂದೀಶ್ ಮಾತನಾಡಿ ಪೌರ ಕಾರ್ಮಿಕ ಮಹಿಳೆಯರು ತಮ್ಮ ಕುಟುಂಬ ನಿರ್ವಹಣೆ ಜತೆಗೆ ಜನರ ಆರೋಗ್ಯ ಸುರಕ್ಷತೆಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಇಂತಹ ಸಹೋದರಿಯರಿಗೆ ಬಾಗಿನ ನೀಡಿದ್ದು ಒಳ್ಳೆಯ ಬೆಳವಣಿಗೆ ಇದನ್ನು ಪ್ರತಿವರ್ಷ ಮುಂದುವರಿಸಲಿ ಎಂದು ಹಾರೈಸಿದರು.

ಇಂತಹ ಮೌಲ್ಯಯುತ ಸೇವೆ ಖುಷಿ ನೀಡಿದ್ದು, ನಮಗಾಗಿ ದುಡಿಯುವ ಪೌರಕಾರ್ಮಿಕ ಮಹಿಳೆಯರ ಮನ-ಮೊಗದಲ್ಲಿ ಸಂತಸ ಮೂಡಿರುವುದು ಸಾರ್ಥಕ್ಯ ತರಿಸಿದೆ ಎಂದು ಹೇಳಿದರು.

ಕಾಂಗರೂ ಕೇರ್ ಸಿ.ಇ.ಒ ಹಾಗೂ ಸಂಸ್ಥಾಪಕ
ಡಾ.ಶೇಖರ್ ಸುಬ್ಬಯ್ಯ,ವೈದ್ಯರಾದ ಡಾ. ವೀಣಾ, ಡಾ. ಶೃತಿ, ಡಾ. ಶುಭ, ಡಾ. ಸ್ವಾತಿ, ಡಾ. ರಶ್ಮಿ ಕಿಶೋರ್, ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷೆ ರೇಖಾ ಶ್ರೀನಿವಾಸ್, ಅಕ್ಷತಾ, ನಿವೇದಿತ, ಗಣೇಶ್,ಅಂಬಾಭವಾನಿ ಮಹಿಳಾ ಸಂಘದ ಅಧ್ಯಕ್ಷೆ ಸವಿತಾ ಘಾಟ್ಕೆ, ಮಾಲಿನಿ ಪಾಲಾಕ್ಷ, ಕೆ ಆರ್ ಬ್ಯಾಂಕ್ ಅಧ್ಯಕ್ಷ ಬಸವರಾಜ್ ಬಸಪ್ಪ,
ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್, ಮೈಸೂರು ಜಿಲ್ಲಾ ಒಕ್ಕಲಿಗರ ಸಂಘದ ನಿರ್ದೇಶಕ ಎ ರವಿ,
ಸಂಧ್ಯಾ ರಾಣಿ, ಐಶ್ವರ್ಯ, ಮಹಾನ್ ಶ್ರೇಯಸ್, ರಾಮಪ್ಪ ಮತ್ತಿತರರು ಹಾಜರಿದ್ದರು.

ಪೌರಕಾರ್ಮಿಕರಿಗೆ ಬಾಗಿನ ವಿತರಿಸಿ ಸಂಕ್ರಾಂತಿ ಹಬ್ಬ ಆಚರಣೆ Read More