ವಿಜಯ್ ಪ್ರಕಾಶ್ ಹಾಡಿಗೆ ಮನಸೋತ ಮೈಸೂರು ಜನತೆ

ಮೈಸೂರು: ಮೈಸೂರಿನ ವರ ಪುತ್ರ ಕನ್ನಡ ಚಿತ್ರರಂಗದ ಹೆಸರಾಂತ ಗಾಯಕ ವಿಜಯ್ ಪ್ರಕಾಶ್ ಹಾಡುಗಳಿಗೆ ಮೈಸೂರಿಗರು ಮನಸೋತರು.

ನಗರದ ಅರಮನೆ ಆವರಣದ ಅರಮನೆ ವೇದಿಕೆಯಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2025ರ ಅಂಗವಾಗಿ ಭಾನುವಾರ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಜಯ್ ಪ್ರಕಾಶ್ ಗೀತೆಗಳಿಗೆ ಜನ ತಲೆದೂಗಿದರು.

ವಿಜಯ್ ಪ್ರಕಾಶ್ ಅವರು ಚಾಮುಂಡೇಶ್ವರಿ ಶಂಕರಿ ಕೀರ್ತನೆಯೊಂದಗೆ ಹಾಡು ಪ್ರಾರಂಭಿಸಿ ಹಂಸಲೇಖ ರಚನೆಯ ಹಬ್ಬ ಹಬ್ಬ ಇದು ಕರಡುನಾಡ ಮನೆ ಮನೆ ಹಬ್ಬ.. ಇದು ಚಾಮುಂಡಿ ತಾಯಿ ತವರ ಹಬ್ಬ ಹಾಡು ಹಾಡಿ ರಂಜಿಸಿದರು.

ಬೊಂಬೆ ಹೇಳುತೈತೆ ಮತ್ತೆ ಹೇಳುತೈತೆ ನೀನೆ ರಾಜ ಕುಮಾರ…ಹಾಡಿಗೆ ಪ್ರೇಕ್ಷಕರೆಲ್ಲ ತಮ್ಮ ಮೊಬೈಲ್ ಕ್ಯಾಮರಾ ಟಾರ್ಚ್ ಆನ್ ಮಾಡಿ, ಮೈ ಓಲಾಡಿಸಿ ಧ್ವನಿಗೂಡಿಸಿ ಹಾಡಿ ಪುನೀತ್ ರಾಜ್ ಕುಮಾರ್ ಅವರನ್ನು ಸ್ಮರಿಸಿದರು.

ಹಲೋ ಹಲೋ ನನ್ನ ಮನಸ್ಸು ಇಲ್ಲೆ ಎಲ್ಲೋ… ಓಪನ್ ಹೇರ್ ಬಿಟ್ಕೊಂಡು ಕೂದಲು ಹಾರಾಡ್ಸ್ಕೊಂಡು, ಸಿಂಗಾರ ಸಿರಿಯೇ.. ಬೆಳಗೆದ್ದು ಯಾರ ಮುಖವಾ ನಾನು ನೋಡಿದೆ. …ಹಾಡುಗಳು ಪ್ರೇಕ್ಷಕರು ಹಾಗೂ ಪ್ರವಾಸಿಗರನ್ನು ಕುಣಿದು ಕುಪ್ಪಳಿಸುವಂತೆ ಮಾಡಿದರು.

ಪೃಥ್ವಿ ಭಟ್, ಶಾಶ್ವತಿ ಕಷ್ಯಪ್ ಮತ್ತು ಅಖಿಲ ಅವರು ಸೂಜುಗಾದ ಸೂಜು ಮಲ್ಲಿಗೆ ಮಾದೇವ ನಿಮ್ಮ ಮಂಡೆ ಮ್ಯಾಲೆ ದುಂಡು ಮಲ್ಲಿಗೆ ಹಾಡನ್ನು ಹಾಡಿ ಪ್ರೇಕ್ಷಕರ ಮನಗೆದ್ದರು.

ವಿಜಯ್ ಪ್ರಕಾಶ್ ಅವರು ಓಂ ಶಿವೋಂ ಹಂ.. ಓಂ ನಮಃ ಶಿವಾಯ ಎಂದು ಶಿವನ ಸ್ತುತಿಯನ್ನು ಹಾಡಿದಾಗ ನೆರೆದಿದ್ದವರು ಶಿವ ಜಪದಲ್ಲಿ ಮುಳುಗುವಂತೆ ಮಾಡಿತು.

ಕಾಪಿ ರಾಗದಲ್ಲಿ ರೋಜಾ ರೋಜಾ ಹೂವೇ ಎಲ್ಲೆ ನೀ ಎಲ್ಲೆ… ನಗುವ ನಯನ ಮಧುರ ಮೌನ, ಕಲ್ಯಾಣಿ ರಾಗದಲ್ಲಿ ಡಾ.ರಾಜ್ ಕುಮಾರ್ ಅವರ ಕೋಗಿಲೆ ಹಾಡಿದೆ ಕೇಳಿದೆಯ…ಹೊಸ ರಾಗವ ಹಾಡಿದೆ ಆಲಿಸೆಯ, ನಿನ್ನಿಂದಲೇ ನಿನ್ನಿಂದಲೆ ಕನಸೊಂದು ಶುರುವಾಗಿದೆ ಹಾಗೂ ದಾನಿ ರಾಗದಲ್ಲಿ ಯಾವ ಕವಿಯ ಬರೆಯಲಾರ ಒಲವಿನಿಂದ ಹಾಡುಗಳನ್ನು ಹಾಡಿದರು.

ವಿಷ್ಣುವರ್ಧನ್ ಮತ್ತು ದ್ವಾರಕೀಶ್ ಜೋಡಿಯ ಆಪ್ತಮಿತ್ರ ಸಿನಿಮಾದ ಕಾಲವನ್ನು ತಡೆಯೊರು ಯಾರು ಇಲ್ಲ… ಗಾಳಿಯನ್ನು ಹಿಡಿಯೊರು ಎಲ್ಲೂ ಇಲ್ಲ, ನೀನಾಸಂ ಸತೀಶ್ ಅಭಿನಯದ ಅಯೋಗ್ಯ ಚಿತ್ರದ ಏನಮ್ಮಿ ಏನಮ್ಮಿ ಯಾರಮ್ಮಿ ನೀನಮ್ಮಿ, ಸುದೀಪ್ ನಟನೆಯ ಕೋಟಿಗೊಬ್ಬ-2 ಚಿತ್ರದ ಸಾಲುತ್ತಿಲ್ಲವೆ ಸಾಲುತ್ತಿಲ್ಲವೆ….ನಿನ್ನ ಹಾಗೆ ಮತ್ತು ಬೇರೆ ಏನಿದೆ ಹಾಡುಗಳನ್ನು ಪ್ರೇಕ್ಷಕರು ಬಾಯಲ್ಲಿ ಗುನುಗುಂವೆ ಮಾಡಿದವು.

ವಿಜಯ್ ಪ್ರಕಾಶ್ ಅವರು ಕಾಣದಂತೆ ಮಾಯವಾದನು ನಮ್ಮ ಶಿವ ಕೈಲಾಸ ಸೇರಿಕೊಂಡನು, ಪ್ರಥ್ವಿ ಭಟ್ ಜಟಕಾ ಕುದುರೆ ಹತ್ತಿ ಪ್ಯಾಟೆಗೋಗುಮಾ, ಗಣೇಶ್ ಅವರು ಕೂರಕ್ ಕುಕ್ಕರಹಳ್ಳಿ ಕೆರೆ, ಶಾಶ್ವತಿ ಶೇಕ್ ಹಿಟ್ ಪುಷ್ಪವತಿ, ಭಾರ್ಗವ್ ಸಿಕ್ಕ ಪಟ್ಟೆ ಇಷ್ಟ ಪಟ್ಟೆ ಹೈ ಲೈಕ್ ಹಿಟ್, ಅಖಿಲ ಕೈನಾಗೆ ಮೈಕ್ ಹಿಟ್ರೆ ನಾನ್ ಸ್ಟಾಂಪ್ ಭಾಷಣ ಅಧ್ಯಕ್ಷ ಅಧ್ಯಕ್ಷ ಅಧ್ಯಕ್ಷ, ಕುಲದಲ್ಲಿ ಕೀಳ್ಯಾವುದೊ ಹುಚ್ಚಪ್ಪ… ಮತದಲ್ಲಿ ಮೇಲ್ಯಾವುದೊ ಎಂದು ಹಾಡಿ ಜೈಹೊ..ಜೈಹೊ…ಹಾಡನ್ನು ಪೊಲೀಸರಿಗೆ ಸಮರ್ಪಿಸಿದರು.

ಇದಕ್ಕೂ ಮೊದಲು ಬೆಂಗಳೂರಿನ ಭೂತಾಯಿ ಬಳಗದಿಂದ ಪರಿವರ್ತನಾ ತತ್ವ ಪದಗಳು ಪ್ರೇಕ್ಷಕರ ಮನ ಮುಟ್ಟಿದರೆ, ತದನಂತರ ಅಂತರರಾಷ್ಟ್ರೀಯ ಖ್ಯಾತ ಕಲಾವಿದರಿಂದ
ಕುಚ್ಚುಪುಡಿ ನೃತ್ಯ ನೋಡಗರ ಮನ ಸೂರೆಗೊಂಡಿತು.

ವಿಜಯ್ ಪ್ರಕಾಶ್ ಹಾಡಿಗೆ ಮನಸೋತ ಮೈಸೂರು ಜನತೆ Read More

ಯುವ ದಸರಾದಲ್ಲಿ ಬಾಲಿವುಡ್ ಗಾಯಕನ ಮೋಡಿಗೆ‌ ಮನಸೋತ ಯುವಜನ

ಮೈಸೂರು: ಖ್ಯಾತ ಬಾಲಿವುಡ್ ಸಂಗೀತ ನಿರ್ದೇಶಕ ಹಾಗೂ ಗಾಯಕ ಪ್ರೀತಮ್ ಚಕ್ರವರ್ತಿ ಗಾನಸುಧೆಗೆ ಮೈಸೂರು ಜನತೆ ಮನಸೋತು ಕುಣಿದು ಕುಪ್ಪಳಿಸಿದರು.

ನಗರದ ಹೊರವಲಯದ ಉತ್ತನಹಳ್ಳಿ ಬಳಿ ಆಯೋಜಿಸಿರುವ ಯುವ ದಸರಾ ವೇದಿಕೆಯಲ್ಲಿ ಗಾಯಕ ಪ್ರೀತಮ್ ಬರುತ್ತಿದ್ದಂತೆ ಯುವ ಸಮೂಹ ಶಿಳ್ಳೆ ಮೂಲಕ ಸ್ವಾಗತಿಸಿದರು.

ಯುವ ಸಮೂಹದ ಹರ್ಷ ನೋಡಿದ ಗಾಯಕ ಪ್ರೀತಮ್ ಹೇ ದಿಲ್ ಹೇ ಮುಸ್ಕಿಲ, ಥೂ ಮೇರಿ ಸನಮ್, ಥುಮ್ ಜೋ ಆಯೆ, ಅಭಿ ಕುಚ್ ದೇನೆ, ಹಲ್ಕಾ ಹಲ್ಕಾ ಹೇ ಸಮಾ, ಬಿನ್ ತೇರಿ ಸೇರಿದಂತೆ ತಮ್ಮ ಹಲವು ಹಿಂದಿ ಗೀತೆಗಳನ್ನು ಹಾಡಿ ಪ್ರೇಕ್ಷಕರನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿದರು.

ಇದಲ್ಲದೆ ಕನ್ನಡದ ಸುದೀಪ್ ನಟನೆಯ ಎಕ್ಕ ಸಕ್ಕ ಎಕ್ಕ ಸಕ್ಕ ಹಾಡು ಹಾಡುತ್ತಿದ್ದಂತೆ ನೆರೆದಿದ್ದವರೆಲ್ಲ ಎದ್ದು ನಿಂತಲ್ಲೇ ಕುಣಿದರು. ಇದಕ್ಕೂ ಮುನ್ನ ಬಾಲಿವುಡ್ ಶೋರ್ ಪೊಲೀಸ್ ಗಾಯಕರ ತಂಡ ತಮ್ಮದೇ ಆದ ವಿಶಿಷ್ಟ ಶೈಲಿಯಲ್ಲಿ ತೊಬ್ ತೋಬ, ಊರ್ವಶಿ ಊರ್ವಶಿ ಹಾಗೂ ಇನ್ನಿತರ ಹಿಂದಿ ಗೀತೆಗಳನ್ನು ಹಾಡಿ ಮೋಡಿ ಮಾಡಿದರು.

ಇದೇ‌ ವೇಳೆ ಯುವ ದಸರಾ ವೇದಿಕೆಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸಚಿವರಾದ ಡಾ. ಹೆಚ್ ಸಿ ಮಹದೇವಪ್ಪ, ಕೆ. ಜೆ ಜಾರ್ಜ್ ಅವರಿಗೆ ಯುವ ದಸರಾ ಉಪ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.

ಸಚಿವರಾದ ಭೈರತಿ ಸುರೇಶ್, ಸಂಸದರಾದ ಸುನೀಲ್ ಬೋಸ್, ಪರಿಷತ್ ಸದಸ್ಯರಾದ ಶಿವಕುಮಾರ್, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಹಾಗೂ ಉಪಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮತ್ತಿತರ ಗಣ್ಯರು ಹಾಜರಿದ್ದರು.

ಯುವ ದಸರಾದಲ್ಲಿ ಬಾಲಿವುಡ್ ಗಾಯಕನ ಮೋಡಿಗೆ‌ ಮನಸೋತ ಯುವಜನ Read More