ಹೋಂಸ್ಟೇ, ರೆಸಾರ್ಟ್, ಲಾಡ್ಜ್‌ ಗಳಿಗೆ ಭೇಟಿ ನೀಡುವವರ ರಕ್ಷಣೆಗೆ ಕ್ರಮ ವಹಿಸಿ:ಎಸ್ಪಿ

ಮೈಸೂರು: ಸ್ಥಳೀಯ ಪ್ರವಾಸಿಗರು ಹಾಗೂ ವಿದೇಶಿ ಪ್ರವಾಸಿಗರು ಹೋಂಸ್ಟೇ,ರೆಸಾರ್ಟ್ ಹಾಗೂ ಲಾಡ್ಜ್‌ ಗಳಿಗೆ ಭೇಟಿ ನೀಡಿದಾಗ ಅವರ ರಕ್ಷಣೆಗೆ ಎಲ್ಲಾ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೆಂದು ಮೈಸೂರು ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ ಸೂಚಿಸಿದರು.

ಮೈಸೂರು ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿಂದು ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿರುವ ಹೋಂಸ್ಟೇ, ರೆಸಾರ್ಟ್ ಹಾಗೂ ಲಾಡ್ಜ್‌ ಗಳ ಮಾಲೀಕರ ಸಭೆ ನಡೆಸಿದ ಅಧೀಕ್ಷಕರು, ಪ್ರವಾಸಿಗರು ಹಾಗೂ ವಿದೇಶಿ ಪ್ರವಾಸಿಗರು ಹೋಂಸ್ಟೇ. ರೆಸಾರ್ಟ್ ಹಾಗೂ ಲಾಡ್ಜ್‌ ಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ರಕ್ಷಣೆಯ ಕುರಿತು ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮ ಮತ್ತು ಪಾಲಿಸಬೇಕಾದ ನಿಯಮಗಳ ಬಗ್ಗೆ ತಿಳುವಳಿಕೆ ನೀಡಿದರು.

ಸಭೆಯಲ್ಲಿ ಅಪರ ಪೊಲೀಸ್ ಅಧೀಕ್ಷಕರಾದ ಮಲ್ಲಿಕ್.ಸಿ., ಎಲ್.ನಾಗೇಶ್‌ ಹಾಗೂ ಮೈಸೂರು ಜಿಲ್ಲಾ ಪೊಲೀಸ್ ಅಧಿಕಾರಿಗಳು ಪಾಲ್ಗೊಂಡಿದ್ದರು.

ಹೋಂಸ್ಟೇ, ರೆಸಾರ್ಟ್, ಲಾಡ್ಜ್‌ ಗಳಿಗೆ ಭೇಟಿ ನೀಡುವವರ ರಕ್ಷಣೆಗೆ ಕ್ರಮ ವಹಿಸಿ:ಎಸ್ಪಿ Read More

ಜನ ಸಂಪರ್ಕ ಸಭೆ: ಎಸ್ಪಿ ವಿಷ್ಣುವರ್ಧನ್ ಅಹವಾಲು ಸ್ವೀಕಾರ

ಮೈಸೂರು: ಮೈಸೂರು ಜಿಲ್ಲೆ ವರುಣಾ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀ ಯತಿನ್ ಹೋಟೆಲ್ ಬಳಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ಅವರ ಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆ ಹಮ್ಮಿಕೊಂಡು ಅಹವಾಲು ಸ್ವೀಕರಿಸಲಾಯಿತು.

ಜನ ಸಂಪರ್ಕ ಸಭೆಗೆ ವರುಣ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮಗಳಿಂದ 250 ರಿಂದ 300 ಜನ ಜನಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಪಾಲ್ಗೊಂಡು ತಮ್ಮ ಕುಂದು ಕೊರತೆಗಳ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಎಲ್ಲರ ಅಹವಾಲು ಹಾಗೂ ಸಮಸ್ಯೆಗಳನ್ನ ಆಲಿಸಿದ ಪೊಲೀಸ್ ವರಿಷ್ಠಾಧಿಕಾರಿಗಳು
ಮುಂದಿನ ಸಭೆಯೊಳಗಾಗಿ ಸಾಧ್ಯವಾದಷ್ಟು ಸಮಸ್ಯೆಗಳ ಬಗ್ಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಮಲ್ಲಿಕ್ ಸಿ. ಮತ್ತು ನಾಗೇಶ್ ಎಲ್ ಹಾಗೂ ಮೈಸೂರು ಗ್ರಾಮಾಂತರ ಉಪ ವಿಭಾಗದ ಪೊಲೀಸ್ ಉಪ ಅಧೀಕ್ಷಕರು ಮತ್ತು ಸಿಪಿಐ ಹಾಜರಿದ್ದರು.

ಜನ ಸಂಪರ್ಕ ಸಭೆ: ಎಸ್ಪಿ ವಿಷ್ಣುವರ್ಧನ್ ಅಹವಾಲು ಸ್ವೀಕಾರ Read More

ಸಾಧನೆಗೆ ಗುರಿ ಮುಖ್ಯ:ಎಸ್ ಪಿ ವಿಷ್ಣುವರ್ಧನ್ ಸಲಹೆ

ಮೈಸೂರು: ಸಾಧನೆಗೆ ಗುರಿ ಮುಖ್ಯ,ಈಗಿ ನಿಂದಲೇ ಗುರಿ ಇಟ್ಟುಕೊಂಡು ನಿಮ್ಮ ದಾರಿ ಸ್ಪಷ್ಟಪಡಿಸಿಕೊಳ್ಳಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ ಅವರು ಶಿಬಿರಾರ್ಥಿಗಳಿಗೆ ಸಲಹೆ ನೀಡಿದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಏರ್ಪಡಿಸಲಾಗಿದ್ದ ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಪರೀಕ್ಷಾ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹುದ್ದೆಗಿಂತಲೂ ಮಾನವೀಯ ಮೌಲ್ಯ ಮುಖ್ಯ. ಹೀಗಾಗಿ ಜೀವನದಲ್ಲಿ ಮಾನವೀಯ ಮೌಲ್ಯ ಅಳವಡಿಸಿಕೊಳ್ಳಿ ಜೊತೆಗೆ ಶಿಸ್ತು, ಹಿರಿಯರ ಮೇಲೆ ಗೌರವ, ಪ್ರೀತಿ ಇಟ್ಟುಕೊಳ್ಳಬೇಕು ಆವಾಗಲೇ ಜೀವನದಲ್ಲಿ ಏನಾದರೂ ಸಾಧಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ನಿಮ್ಮ ಬೌದ್ಧಿಕ ಬುದ್ಧಿ ಶಕ್ತಿ ಬಲವಾಗಿರುವುದರಿಂದ ಈ ನಿಟ್ಟಿನಲ್ಲಿ ನೀವು ಯಾವುದೇ ಹಾದಿಯನ್ನು ಸುಗಮವಾಗಿ ಸಾಧಿಸಬಹುದು. ಬ್ಯಾಂಕಿಂಗ್, ಯುಪಿಎಸ್ಸಿ, ಐಎಎಸ್ ಐಎಫ್ಎಸ್, ಕೆಎಎಸ್ ಸೇರಿದಂತೆ ಎಲ್ಲಾ ಪರೀಕ್ಷೆ ತೆಗೆದುಕೊಳ್ಳಿ ಪ್ರಯತ್ನಂ ಸರ್ವ ಸಾಧನಂ ಎನ್ನುವಂತೆ ಎಂದಾದರೂ ಪ್ರಯತ್ನಕ್ಕೆ ಫಲ ಸಿಕ್ಕೆ ಸಿಗುತ್ತದೆ ಎಂದು ಎಸ್ ಪಿ ಕಿವಿಮಾತು ಹೇಳಿದರು.

ಶಾಲೆಯಿಂದಲೇ ನಾನು ಗುರಿ ನಿಗದಿಪಡಿಸಿಕೊಂಡಿದ್ದೆ. ಅಂದಿನಿಂದಲೇ ಸತತ ಪ್ರಯತ್ನಿಸಿದೆ. ನಮ್ಮ ತಂದೆ ಕೂಡ ಪೊಲೀಸ್ ಇಲಾಖೆಯ ಅಧಿಕಾರಿಗಳಾಗಿದ್ದರು ಅವರೇ ನನಗೆ ಮಾದರಿ ಎಂದು ಹೇಳಿದರು.

ಹುದ್ದೆಗೆ ಸೇರಿದ ಮೇಲೆ ಪೋಷಕರನ್ನು ಮರೆಯಬಾರದು. ಸಾರ್ವಜನಿಕ ಸೇವೆಯೆ ನಮ್ಮ ಗುರಿ ಎನ್ನುವ ಅಂಶವನ್ನು ಮರೆಯಬಾರದು ಎಂದು ವಿಷ್ಣುವರ್ದನ್ ಹೇಳಿದರು.

ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಅವರು ಮಾತನಾಡಿ ವಿದ್ಯಾರ್ಥಿಗಳು ತಮ್ಮ ಬೌದ್ಧಿಕ ಸಾಮರ್ಥ್ಯವನ್ನು ಗಟ್ಟಿಕೊಳಿಸಿ ಕೆಲಸಗಳನ್ನು ಚುರುಕುಗೊಳಿಸಬೇಕು ಎಂದು ಹೇಳಿದರು.

ಕುಲಸಚಿವ ಪ್ರೊ.ಕೆ. ಬಿ.ಪ್ರವೀಣ ಅವರು ಬ್ಯಾಂಕಿಂಗ್ ಹುದ್ದೆಗಳ ತರಬೇತಿಗೆ ಬಂದಿರುವ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಅಧ್ಯಯನ ಕೇಂದ್ರದ ಡೀನ್ ಪ್ರೊ. ರಾಮನಾಥಂ ನಾಯ್ಡು, ಹಣಕಾಸು ಅಧಿಕಾರಿಗಳಾದ ಪ್ರೊ. ನಿರಂಜನ್ ರಾಜ್, ಸಂಯೋಜನಾಧಿಕಾರಿಗಳಾದ, ಜೈನಹಳ್ಳಿ ಸತ್ಯನಾರಾಯಣಗೌಡ, ಸಿದ್ದೇಶ್ ಹೊನ್ನೂರ್, ಗಣೇಶ್ ಕೆ. ಜಿ ಕೊಪ್ಪಲ್ ಉಪಸ್ಥಿತರಿದ್ದರು.

ಸಾಧನೆಗೆ ಗುರಿ ಮುಖ್ಯ:ಎಸ್ ಪಿ ವಿಷ್ಣುವರ್ಧನ್ ಸಲಹೆ Read More