ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: 18 ಮಂದಿ ದುರ್ಮರಣ

ನವದೆಹಲಿ: ಮಹಾಕುಂಭ ಮೇಳಕ್ಕೆ ಹೋಗಲು ದೆಹಲಿ ರೈಲು ನಿಲ್ದಾಣದಲ್ಲಿ ಅತಿಯಾಗಿ ಜನ ಸೇರಿದ್ದರಿಂದ ಕಾಲ್ತುಳಿತ ಉಂಟಾಗಿ‌ 18 ಕ್ಕೂ ಹೆಚ್ಚು ಮಂದಿ ಮೃತಪಟ್ಟ ದಾರುಣ ಘಟನೆ ಶನಿ ರಾತ್ರಿ ಸಂಭವಿಸಿದೆ.

ದೆಹಲಿ ರೈಲು ನಿಲ್ದಾಣದಲ್ಲಿ ಮಹಾ ಕುಂಭಮೇಳಕ್ಕೆ ಎರಡು ರೈಲುಗಳು ಹೋಗಬೇಕಾಗಿತ್ತು,ಆದರೆ ರೈಲುಗಳು ಬರುವುದು ವಿಳಂಬವಾಗಿದ್ದರಿಂದ ಜನದಟ್ಟಣೆ ಉಂಟಾಗಿ 11 ಮಹಿಳೆಯರು ಮತ್ತು ನಾಲ್ವರು ಮಕ್ಕಳು ಸೇರಿದಂತೆ 18 ಜನರು ಸಾವನ್ನಪ್ಪಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ,ರಾಷ್ಟ್ರಪತಿ ದ್ರೌಪದಿ ಮುರ್ಮು,ಸಚಿವರಾದ ವಿ.ಸೋಮಣ್ಣ,ಅಶ್ವಿನಿ ವೈಷ್ಣವ್,ರಾಜನಥ್ ಸಿಂಗ್ ಮತ್ತಿತರರು ಸಂತಾಪ ಸೂಚಿಸಿದ್ದಾರೆ.

ವಾರಾಂತ್ಯವಾಗಿದ್ದರಿಂದ ರೈಲು ನಿಲ್ದಾಣದಲ್ಲಿ ಕುಂಭ ಮೇಳಕ್ಕೆ ಹೋಗುವ ಭಕ್ತರ ಸಂಖ್ಯೆ ಹೆಚ್ಚಾಗಿದೆ,ಪ್ರಯಾಗ್‌ರಾಜ್ ಮೂಲಕ ಹಾದುಹೋಗುವ ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್ ಮತ್ತು ಭುವನೇಶ್ವರ ರಾಜಧಾನಿ ರೈಲುಗಳು ನಿಲ್ದಾಣಕ್ಕೆ ಬರುವುದು ವಿಳಂಬವಾದೆ. ಈ ರೈಲುಗಳ ಪ್ರಯಾಣಿಕರು 12, 13 ಮತ್ತು 14, 15ನೇ ಪ್ಲಾಟ್‌ಫಾರ್ಮ್‌ಗಳಲ್ಲಿ ನಿಂತಿದ್ದರು.

ಆಗ ತಡವಾಗಿ ಪ್ರಯಾಗ್‌ರಾಜ್ ಎಕ್ಸ್‌ಪ್ರೆಸ್ ಪ್ಲಾಟ್‌ಫಾರ್ಮ್ ಸಂಖ್ಯೆ 14ಕ್ಕೆ ಬಂದಾಗ ಜನರು ಅದರಲ್ಲಿ ಹತ್ತಲು ಒಮ್ಮೆಗೆ ನುಗ್ಗಿದ್ದಾರೆ,ಈ‌ ವೇಳೆ ನೂಕುನುಗ್ಗಲಾಗಿ ಈ ಘೋರ ದುರ್ಘಟನೆ ನಡೆದು ಹೋಗಿದೆ.

ಕೇಂದ್ರ ಸರ್ಕಾರ ಈ ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ
10 ಲಕ್ಷ,ಗಂಭೀರವಾಗಿ ಗಾಯಗೊಂಡವರಿಗೆ 2.5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ‌.

ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: 18 ಮಂದಿ ದುರ್ಮರಣ Read More

ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ:8 ಮಂದಿ ಅರೆಸ್ಟ್

ಮೈಸೂರು: ಅವಹೇಳನಕಾರಿ ಪೋಸ್ಟರ್ ವೈರಲ್ ಹಿನ್ನೆಲೆಯಲ್ಲಿ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲುತೂರಾಟ ಮಾಡಿದ ಪ್ರಕರಣ ಸಂಬಂಧ ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದಾರೆ.

ಮೈಸೂರಿನ ಶಾಂತಿನಗರದ ಸುಹೇಲ್, ರೆಹಲ್ ಪಾಷ, ಅಯಾನ್, ಗೌಸಿಯಾ ನಗರದ ಸೈಯದ್ ಸಾಧಿಕ್, ಸತ್ಯಾನಗರದ ಏಜಾಜ್, ರಾಜೀವ್ ನಗರದ ಸಾಧಿಕ್ ಪಾಷ, ಅರ್ಬಾನ್ ಷರೀಫ್ ಹಾಗೂ ಸೋಹೆಬ್ ಪಾಷ ಬಂಧಿತ ಆರೋಪಿಗಳು.

ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣದಲ್ಲಿ ಪೊಲೀಸರು 50ಕ್ಕೂ ಹೆಚ್ಚು ಮಂದಿ ಆರೋಪಿಗಳನ್ನು ಗುರುತಿಸಿದ್ದು,
8 ಮಂದಿಯನ್ನು ಬಂಧಿಸಿದ್ದಾರೆ, ತಲೆಮರೆಸಿಕೊಂಡಿರುವ ಇತರೆ ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಸೋಮವಾರ ರಾತ್ರಿ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಕಾರಣ ಎಂದು ಹೇಳಲಾಗುತ್ತಿರುವ ಮೌಲ್ವಿ ತಲೆಮರಿಸಿಕೊಂಡಿದ್ದು ಆತನ ಪತ್ತೆಗೆ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

ಪ್ರಚೋದನಕಾರಿ ಭಾಷಣ ಮಾಡಿರುವ ಮೌಲ್ವಿ ಕೇರಳ, ರಾಮನಗರ ಕಡೆ ಪರಾರಿಯಾಗಿರಬಹುದು ಎಂದು ಶಂಕಿಸಲಾಗಿದೆ.

ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ:8 ಮಂದಿ ಅರೆಸ್ಟ್ Read More

ನಟಿ ಹೇಮಾಮಾಲಿನಿ ಹೇಳಿಕೆಗೆ ವಿರೋಧ

ನವದೆಹಲಿ: ಮಹಾ ಕುಂಭ ಮೇಳದಲ್ಲಿ ನಡೆದ ಕಾಲ್ತುಳಿತ ದೊಡ್ಡ ಘಟನೆ ಏನಲ್ಲ ಎಂದು ಹೇಳಿರುವ ಸಂಸದೆ ಹಾಗೂ ಬಾಲಿವುಡ್ ಹಿರಿಯ ನಟಿ ಹೇಮಾಮಾಲಿನಿ ನೀಡಿರುವ ಹೇಳಿಕೆ ಚರ್ಚೆಗೆ ಗ್ರಾಸ ಒದಗಿಸಿದೆ.

ಕುಂಭ ಮೇಳ ಕಾಲ್ತುಳಿತ ದೊಡ್ಡದೇನಲ್ಲಾ,ಆದರೆ ಅದನ್ನು ದೊಡ್ಡದಾಗಿ ಬಿಂಬಿಸಲಾಗುತ್ತಿದೆ ಎಂದು ಮಂಗಳವಾರ ಮಾಧ್ಯಮಗಳಿಗೆ ಅವರು ಹೇಳಿದ್ದರು.

ಜನವರಿ 29 ರ ಮೌನಿ ಅಮವಾಸ್ಯೆಯಂದು ಸಂಭವಿಸಿದ ಕಾಲ್ತುಳಿತದಲ್ಲಿ ನೂರಾರು ಮಂದಿ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಆದರೆ ಉತ್ತರ ಪ್ರದೇಶ ಸರ್ಕಾರ ಬಿಡುಗಡೆ ಮಾಡಿದ ಅಧಿಕೃತ ಅಂಕಿ ಅಂಶಗಳ ಪ್ರಕಾರ, ಪ್ರಯಾಗ್‌ರಾಜ್‌ನ ಸಂಗಮ್ ಪ್ರದೇಶದಲ್ಲಿ ಬೆಳಗಿನ ಜಾವ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 30 ಜನ ಪ್ರಾಣ ಕಳೆದುಕೊಂಡಿದ್ದು, 60 ಮಂದಿ ಗಾಯಗೊಂಡಿದ್ದಾರೆ.

ನಾವು ಕುಂಭ ಮೇಳಕ್ಕೆ ಹೋಗಿದ್ದೆವು, ಚೆನ್ನಾಗಿಯೇ ಸ್ನಾನ ಮಾಡಿದೆವು, ಎಲ್ಲವನ್ನೂ ಚೆನ್ನಾಗಿ ನಿರ್ವಹಿಸಲಾಗಿತ್ತು,ಆದರೂ ಕಾಲ್ತುಳಿತದ ಘಟನೆ ನಡೆದಿದೆ. ಅದು ದೊಡ್ಡ ಘಟನೆಯೇನಲ್ಲ, ಆದರೆ ಅದನ್ನು ದೊಡ್ಡದಾಗಿ ಬಿಂಬಿಸಲಾಗುತ್ತಿದೆ, ಕುಂಭ ಮೇಳವನ್ನು ತುಂಬಾ ಚೆನ್ನಾಗಿ ನಿರ್ವಹಿಸಲಾಗಿದೆ ಎಂದು ಸಂಸದೆ ಹೇಳಿದ್ದರು.

ಇದಕ್ಕೆ ಬಹಳಷ್ಟು ಮಂದಿ ಟೀಕಿಸಿದ್ದಾರೆ. ನಿಮ್ಮ ಕುಟುಂಬದವರು ಏನಾದರೂ ಅಂತಹ ಸಂಕಷ್ಟದಲ್ಲಿ ಸಿಲುಕಿದ್ದರೆ ನಿಮಗೆ ದೊಡ್ಡ ಘಟನೆಯೊ,ಸಣ್ಣ ಘಟನೆಯೊ ತಿಳಿಯುತಿತ್ತು.ನಿಮ್ಮಂತವರಿಗೆ ಎಲ್ಲಾ ಸಣ್ಣ ಘಟನೆಯೇ ಎಂದು ಕಿಡಿಕಾರಿದ್ದಾರೆ.

ನಟಿ ಹೇಮಾಮಾಲಿನಿ ಹೇಳಿಕೆಗೆ ವಿರೋಧ Read More