ಕನ್ನಡ ನಾಮಫಲಕ:ಕನ್ನಡ ಹೋರಾಟಗಾರರ ತುರ್ತು ಸಭೆ ಕರೆಯಲು ತೇಜಸ್ವಿ ಆಗ್ರಹ

ಮೈಸೂರು: ಕನ್ನಡ ನಾಮಫಲಕ ವಿಷಯವಾಗಿ ಮೈಸೂರು ನಗರ ಪೋಲಿಸ್ ಆಯುಕ್ತರು ಮತ್ತು ಮೈಸೂರು ಮಹಾನಗರ ಪಾಲಿಕೆ ಆಯುಕ್ತರ ಅಧ್ಯಕ್ಷತೆಯಲ್ಲಿ ಕನ್ನಡ ಹೋರಾಟಗಾರರ ತುರ್ತು ಸಭೆ ನಡೆಸುವಂತೆ ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗಸ್ವಾಮಿ ಆಗ್ರಹಿಸಿದ್ದಾರೆ.

ಮೈಸೂರು ನಗರ ವ್ಯಾಪ್ತಿಯಲ್ಲಿ ಕನ್ನಡ ನಾಮಫಲಕ ಕಡ್ಡಾಯಗೊಳಿಸಲು ಈಗಾಗಲೇ ಸರ್ಕಾರ ಆದೇಶ ನೀಡಿದ್ದರೂ ಸಹ ಕೆಲವರು ಮೈಸೂರು ನಗರದ ನಾನಾ ಭಾಗಗಳಲ್ಲಿ ಆಂಗ್ಲ ಭಾಷೆಯಲ್ಲಿ ಮತ್ತು ಬೇರೆ ಬೇರೆ ಭಾಷೆಗಳಲ್ಲಿ ನಾಮಫಲಕ ಹಾಕಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನು ಖಂಡಿಸಿ ಕನ್ನಡ ಹೋರಾಟಗಾರರು ಮೈಸೂರಿನ ಕೆಲವು ಭಾಗಗಳಲ್ಲಿ ನಾಮಫಲಕಗಳನ್ನು ತೆರವು ಗೊಳಿಸುವ ಮತ್ತು ಮಸಿ ಬಳಿಯುವ ಅಭಿಯಾನ ಕಾರ್ಯಗಳನ್ನು ಆರಂಭಿಸಿದ್ದಾರೆ,
ಈ ಸಂದರ್ಭದಲ್ಲಿ ಅಂಗಡಿಗಳ ಮಾಲಿಕರಿಗು ಮತ್ತು ಹೋರಾಟಗಾರರ ನಡುವೆ ವಾಗ್ವಾದ ಉಂಟಗುತ್ತಿರುವುದು ಕಂಡುಬರುತ್ತಿದೆ.
ಆದ್ದರಿಂದ ಪೋಲಿಸ್ ಆಯುಕ್ತರು ಮತ್ತು ಮೈಸೂರು ಮಹಾನಗರ ಪಾಲಿಕೆ ಆಯುಕ್ತರ ಅಧ್ಯಕ್ಷತೆಯಲ್ಲಿ ತುರ್ತಾಗಿ ಕನ್ನಡ ಹೋರಾಟಗಾರರ ಸಭೆ ನಡೆಸಬೇಕು.

ಈಗಾಗಲೇ ಕನ್ನಡ ನಾಮಫಲಕ ವಿಷಯವಾಗಿ ಕಾವೇರಿರುವ ಮೈಸೂರು ನಗರವನ್ನು ಶಾಂತಿ ಗೊಳಿಸುವ ನಿಟ್ಟಿನಲ್ಲಿ ಕನ್ನಡ ಹೋರಾಟಗಾರರ ಸಭೆ ನಡೆಸಿ ಅಹವಾಲು ಸ್ವೀಕಾರ ಮಾಡಬೇಕು ಎಂದು ಕನ್ನಡ ಚಳುವಳಿಗಾರ ತೇಜಸ್ವಿ ನಾಗಲಿಂಗಸ್ವಾಮಿ ಮೈಸೂರು ನಗರ ಪೋಲಿಸ್ ಆಯುಕ್ತರಿಗೆ ಮತ್ತು ಮೈಸೂರು ಮಹಾನಗರ ಪಾಲಿಕೆ ಆಯುಕ್ತರನ್ನು ಒತ್ತಾಯಿಸಿದ್ದಾರೆ.

ಕನ್ನಡ ನಾಮಫಲಕ:ಕನ್ನಡ ಹೋರಾಟಗಾರರ ತುರ್ತು ಸಭೆ ಕರೆಯಲು ತೇಜಸ್ವಿ ಆಗ್ರಹ Read More

ಚಾಮುಂಡಿ ಬೆಟ್ಟ ಗಾಮ ಪಂಚಾಯಿತಿ ನಗರಪಾಲಿಕೆಗೆ ಸೇರಿಸಿ:ತೇಜಸ್ವಿ ಆಗ್ರಹ

ಮೈಸೂರು: ಚಾಮುಂಡಿ ಬೆಟ್ಟ ಅಭಿವೃದ್ಧಿ ಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಾಸಕ ಜಿ.ಟಿ ದೇವೇಗೌಡರು ಅಲ್ಲಿನ ಗ್ರಾಮ ಪಂಚಾಯಿತಿಯನ್ನು ನಗರ ಪಾಲಿಕೆಗೆ ಸೇರಿಸಲು ಶ್ರಮ ವಹಿಸುತ್ತಿದ್ದರೆ ಅಲ್ಲಿನ ಕಾಂಗ್ರೆಸ್ ಕಾರ್ಯಕರ್ತರು ವಿರೋಧಿಸುತ್ತಿರುವುದು ಎಷ್ಟು ಸರಿ ಎಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗಸ್ವಾಮಿ ಪ್ರಶ್ನಿಸಿದ್ದಾರೆ.

ಚಾಮುಂಡಿ ಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ಈಗಾಗಲೇ ಸಾಕಷ್ಟು ಬ್ರಷ್ಟಾಚಾರಗಳು ನಡೆದಿದ್ದು ಅದನ್ನು ಮುಚ್ಚಿ ಹಾಕಲು ನಗರ ಪಾಲಿಕೆಗೆ ಸೇರಿಸಬಾರದು ಎಂದು ಕಾಂಗ್ರೆಸ್ ಕಾರ್ಯಕರ್ತರೇ ವಿರೋಧಿಸುತ್ತಿದ್ದಾರೆ ಆದ್ದರಿಂದ ಮುಖ್ಯಮಂತ್ರಿಗಳು ಅಭಿವೃದ್ಧಿ ಕಡೆ ಗಮನಹರಿಸಿ ಪಂಚಾಯಿತಿಯನ್ನು ನಗರ ಪಾಲಿಕೆಗೆ ಸೇರಿಸಿದರೆ ಚಾಮುಂಡಿ ಬೆಟ್ಟ ಸಾಕಷ್ಟು ಅಭಿವೃದ್ಧಿ ಕಾಣುತ್ತದೆ ಇಲ್ಲದಿದ್ದರೆ ಕೆಲವು ಭ್ರಷ್ಟ ಅಧಿಕಾರಿಗಳು ಹಾಗೂ ಪಂಚಾಯಿತಿ ಸದಸ್ಯರುಗಳ ಅಧಿಕಾರಕ್ಕೆ ಸಿಕ್ಕಿ ಅಭಿವೃದ್ಧಿ ಕಾಣದೆ ಹಾಗೆ ಉಳಿಯುತ್ತದೆ ಎಂದು ತೇಜಸ್ವಿ ನಾಗಲಿಂಗಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ.

ಚಾಮುಂಡಿ ಬೆಟ್ಟ ಪ್ರವಾಸಿ ತಾಣವಾಗಿದ್ದು ಪ್ರತಿದಿನ ಲಕ್ಷಾಂತರ ಜನ ಬಂದು ಹೋಗುತ್ತಾರೆ. ಇದು ನಗರ ಪಾಲಿಕೆಗೆ ಸೇರಿದರೆ ಬರುವ ಭಕ್ತರಿಗೆ ಸಾಕಷ್ಟು ಮೂಲಭೂತ ಸೌಕರ್ಯ ಸಿಗುತ್ತದೆ. ಗ್ರಾಮ ಪಂಚಾಯಿತಿಯಲ್ಲೇ ಮುಂದುವರೆದರೆ ಈಗಾಗಲೇ ಒಂದು ಕಡೆ ಬೆಟ್ಟ ಕುಸಿದಿದೆ ಸುತ್ತಮುತ್ತಲು ಬೆಟ್ಟ ಕುಸಿಯುವ ಹಾಗೆ ಮಾಡುತ್ತಾರೆ ಎಂಬ ಆತಂಕವಿದೆ ಎಂದು ತೇಜಸ್ವಿ ಹೇಳಿದ್ದಾರೆ.

ಅನುಮತಿ ಇಲ್ಲದೆ ಮನೆ ಕಟ್ಟುವುದು ಒಸಿ ಇಲ್ಲದೆ ಕರೆಂಟ್ ಕೊಡಿಸುವುದು ಹೀಗೆ ಸಾಕಷ್ಟು ಭ್ರಷ್ಟಾಚಾರ ಗಳು ತುಂಬಿ ತುಳುಕಾಡುತ್ತಿವೆ.ಆದ್ದರಿಂದ ಇದಕ್ಕೆ ಅವಕಾಶ ನೀಡದೆ ಅಲ್ಲಿನ ಗ್ರಾಮ ಪಂಚಾಯಿತಿಯನ್ನು ನಗರ ಪಾಲಿಕೆಗೆ ಸೇರಿಸಬೇಕೆಂದು ಕನ್ನಡ ಕ್ರಾಂತಿದಳ ಸಂಘಟನೆಯ ಪರವಾಗಿ ತೇಜಸ್ವಿ ಒತ್ತಾಯಿಸಿದ್ದಾರೆ.

ಇಲ್ಲದಿದ್ದರೆ ಮುಂದಿನ ದಿನದಲ್ಲಿ ಚಾಮುಂಡಿ ಬೆಟ್ಟದಲ್ಲಿ ಪ್ರಾಧಿಕಾರದ ವಿರುದ್ಧ ಉಗ್ರ ಪ್ರತಿಭಟನೆಯನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗಸ್ವಾಮಿ ಎಚ್ಚರಿಸಿದ್ದಾರೆ.

ಚಾಮುಂಡಿ ಬೆಟ್ಟ ಗಾಮ ಪಂಚಾಯಿತಿ ನಗರಪಾಲಿಕೆಗೆ ಸೇರಿಸಿ:ತೇಜಸ್ವಿ ಆಗ್ರಹ Read More

ಸರ್ಕಾರಿ ಅಧಿಕಾರಿಗಳು ಆಪ್ತ ಸಹಾಯಕರಿಗೆ ತಿಳುವಳಿಕೆ ನೀಡಲಿ-ತೇಜಸ್ವಿ

ಮೈಸೂರು: ಮೈಸೂರಿನ ಕೆಲವು ಸರ್ಕಾರಿ ಅಧಿಕಾರಿಗಳ ಆಪ್ತ ಸಹಾಯಕರು ಜನರ ಸಂಪರ್ಕಕ್ಕೆ ಸಿಗುತ್ತಿಲ್ಲ ಮತ್ತು ಸಾರ್ವಜನಿಕರ ದೂರವಾಣಿ ಕರೆಗಳಿಗೆ ಉತ್ತರಿಸದೇ ಬೇಜವಾಬ್ದಾರಿ ತೋರುತ್ತಾರೆ ಎಂದು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗಸ್ವಾಮಿ ದೂರಿದ್ದಾರೆ.

ಇಂತಹ ಆಪ್ತ ಸಹಾಯಕರು ಗಳಿಗೆ ಅಧಿಕಾರಿಗಳು ಸೂಕ್ತ ತಿಳುವಳಿಕೆ ನೀಡುವಂತೆ ತೇಜಸ್ವಿ ಮನವಿ ಮಾಡಿದ್ದಾರೆ

ಸಾರ್ವಜನಿಕರು ಕೆಲವು ಮಾಹಿತಿಗಳನ್ನು ತಿಳಿಯುವ ಸಲುವಾಗಿ ಅಥವಾ ಪ್ರಮುಖ ಅಧಿಕಾರಿಗಳು ಕಚೇರಿಯಲ್ಲಿ ಇರುವ ಸಮಯ ತಿಳಿಯಲು ಅಧಿಕಾರಿಗಳ ಆಪ್ತ ಸಹಾಯಕರು ಗಳಿಗೆ ದೂರವಾಣಿ ಕರೆ ಮಾಡುತ್ತಾರೆ ಆದರೆ ಆಪ್ತ ಸಹಾಯಕರು ಗಳಿಗೆ ಎಷ್ಟು ಬಾರಿ ಕರೆ ಮಾಡಿದರೂ ಉತ್ತರಿಸುವುದೆ ಇಲ್ಲ ಎಂದು ತೇಜಸ್ವಿ ನಾಗಲಿಂಗಸ್ವಾಮಿ ಆರೋಪ ಮಾಡಿದ್ದಾರೆ

ಐಎಎಸ್ ಅಥವಾ ಐಪಿಎಸ್ ಅಧಿಕಾರಿಗಳಿಗೆ ಯಾವುದೇ ವಿಷಯಗಳಿಗೂ ಪದೇ ಪದೇ ಕರೆ ಮಾಡುಲು ಆಗುವುದಿಲ್ಲ ಅದಕ್ಕಾಗಿಯೇ ಆಪ್ತ ಸಹಾಯಕರುಗಳ ದೂರವಾಣಿ ಸಂಖ್ಯೆಗಳಿಗೆ ಸಾರ್ವಜನಿಕರು ಕರೆ ಮಾಡುವುದು ಸಹಜ ಪ್ರಕ್ರಿಯೆ ಆದರೆ ಕರೆಗಳನ್ನು ಉತ್ತರಿಸದೇ ನೇರವಾಗಿ ಕಚೇರಿಯಲ್ಲಿ ಸಿಕ್ಕಾಗ ಬೇಜವಾಬ್ದಾರಿ ಹೇಳಿಕೆ ನೀಡುತ್ತಾರೆ.

ನಾನು ಒಬ್ಬ ಕನ್ನಡ ಹೋರಾಟಗಾರ ನಾಗಿದ್ದರೂ ಸಹ ನನ್ನ ಕರೆಗಳನ್ನು ಕೂಡ ಕೆಲ ಅಧಿಕಾರಿಗಳ ಆಪ್ತ ಸಹಾಯಕರುಗಳು ಸ್ವೀಕರಿಸುತ್ತಿಲ್ಲ ಎಂದು ಅವರು ದೂರಿದ್ದಾರೆ.

ಅವಶ್ಯಕತೆ ಉಂಟಾದಲ್ಲಿ ಆಪ್ತ ಸಹಾಯಕರು ಗಳಿಗೆ ದೂರವಾಣಿ ಮಾಡಿರುವ ಕಾಲ್ ಡೀಟೈಲ್ಸ್ ಗಳನ್ನು ಅವರ ಮೇಲಾಧಿಕಾರಿಗಳಿಗೆ ನೀಡಿ ದೂರು ನೀಡುವುದಾಗಿ ಕನ್ನಡ ಚಳುವಳಿಗಾರ ತೇಜಸ್ವಿ ನಾಗಲಿಂಗಸ್ವಾಮಿ ತಿಳಿಸಿದ್ದಾರೆ

ಕೂಡಲೇ ಅಧಿಕಾರಿಗಳು ತಮ್ಮ ತಮ್ಮ ಆಪ್ತ ಸಹಾಯಕರು ಗಳಿಗೆ ತಿಳುವಳಿಕೆ ನೀಡಿ ಸಾರ್ವಜನಿಕರ ದೂರವಾಣಿ ಕರೆ ಮಾಡಿದಾಗ ಉತ್ತರಿಸಬೇಕು ಮೀಟಿಂಗ್ ಗಳು ಅಥವಾ ಕಾರ್ಯಕ್ರಮ ಗಳು ಇದ್ದಲ್ಲಿ ನಂತರದ ಸಮಯದಲ್ಲಿ ಕರೆ ಮಾಡಿ ಉತ್ತರಿಸುವಂತೆ ತೀಕ್ಷ್ಣವಾಗಿ ಆದೇಶ ನೀಡಬೇಕೆಂದು ತೇಜಸ್ವಿ ನಾಗಲಿಂಗಸ್ವಾಮಿ ಸ್ವಾಮಿ ಆಗ್ರಹಿಸಿದ್ದಾರೆ.

ಸರ್ಕಾರಿ ಅಧಿಕಾರಿಗಳು ಆಪ್ತ ಸಹಾಯಕರಿಗೆ ತಿಳುವಳಿಕೆ ನೀಡಲಿ-ತೇಜಸ್ವಿ Read More

ಹುಲಿ ದಾಳಿಗೆ ಮೈಸೂರಿನಲ್ಲಿ ಮೂರನೇ ಬಲಿ: ಅಧಿಕಾರಿಗಳ ವಿರುದ್ಧ ತೇಜಸ್ವಿ ಆಕ್ರೋಶ

ಮೈಸೂರು, ನವೆಂಬರ್. ೧: ಮೈಸೂರು ಜಿಲ್ಲೆಯಲ್ಲಿ ಮಾನವ ಪ್ರಾಣಿ ಸಂಘರ್ಷ ಮುಂದುವರೆದಿದ್ದುಒಂದೇ ತಿಂಗಳಲ್ಲಿ ಹುಲಿ ದಾಳಿಗೆ ಮೂರನೆ ಬಲಿಯಾಗಿರುವುದು ಅತ್ಯಂತ ದುರದೃಷ್ಟಕರ ಎಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಕೂಡಲೇ ರಾಜ್ಯ ಸರ್ಕಾರ ಮೃತ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಸರಗೂರು ತಾಲೂಕಿನ ಕೂಡಗಿ ಗ್ರಾಮದ
ಹೆಡಿಯಾಲ ಅರಣ್ಯ ಇಲಾಖೆಯ ಮೊಳೆಯೂರು ವಿಭಾಗದಲ್ಲಿ ದೊಡ್ಡನಿಂಗಯ್ಯ(53) ಎಂಬವರು ಹುಲಿ ದಾಳಿಗೆ ಬಲಿಯಾಗಿದ್ದಾರೆ.

ದೊಡ್ಡನಿಂಗಯ್ಯ ಪ್ರತಿದಿನದಂತೆ ಜಮೀನಿನ ಬಳಿ ಆಡು-ಕುರಿ ಮೇಯಿಸುತ್ತಿದ್ದ ವೇಳೆ
ಏಕಾಏಕಿ ದಾಳಿ ಮಾಡಿದ ಹುಲಿ ಕಾಡಿನೊಳಗೆ ಎಳೆದೊಯ್ದಿದೆ.

ಅರಣ್ಯ ಇಲಾಖೆ ಅಧಿಕಾರಿಗಳ ಸಂಪೂರ್ಣ ನಿರ್ಲಕ್ಷ್ಯದಿಂದಾಗಿಯೇ ಒಂದೇ ತಿಂಗಳಲ್ಲಿ ಈ ರೀತಿಯ ಘಟನೆ ಮರುಕಳಿಸಲು ಕಾರಣ ವಾಗಿದೆ ಎಂದು ತೇಜಸ್ವಿ ನಾಗಲಿಂಗ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿರ್ಲಕ್ಷ್ಯ ವಯಿಸಿದ ಎಲ್ಲಾ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಸೇವೆ ಇಂದ ವಜಾ ಮಾಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ

ಕೂಡಲೇ ರಾಜ್ಯ ಸರ್ಕಾರ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಮೃತ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ಪರಿಹಾರ ಘೋಷಣೆ ಮಾಡುವಂತೆ. ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ಒತ್ತಾಯಿಸಿ

ಹುಲಿ ದಾಳಿಗೆ ಮೈಸೂರಿನಲ್ಲಿ ಮೂರನೇ ಬಲಿ: ಅಧಿಕಾರಿಗಳ ವಿರುದ್ಧ ತೇಜಸ್ವಿ ಆಕ್ರೋಶ Read More

ಹುಲಿ ದಾಳಿಗೆ ಬಲಿಯಾದ ರೈತ ಕುಟುಂಬಕ್ಕೆ 50 ಲಕ್ಷ ಪರಿಹಾರಕ್ಕೆ ತೇಜಸ್ವಿ ಒತ್ತಾಯ

ಮೈಸೂರು: ಮೈಸೂರು ಜಿಲ್ಲೆ, ಸರಗೂರು ತಾಲೂಕು ಮುಳ್ಳೂರು ಗ್ರಾಮದ ರೈತ ಹುಲಿ ದಾಳಿಗೆ ಬಲಿಯಾಗಿದ್ದು,ರೈತನ ಕುಟುಂಬಕ್ಕೆ 50 ಲಕ್ಷ ರೂ ಪರಿಹಾರ ನೀಡಬೇಕೆಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ಮನವಿ ಮಾಡಿದ್ದಾರೆ.

ಗದ್ದೆಯಲ್ಲಿ ಜಾನುವಾರು ಮೇಯಿಸುತ್ತಿದ್ದ ವೇಳೆ ಹುಲಿ ದಾಳಿ ನಡೆಸಿದೆ.

ಇತ್ತೀಚೆಗಷ್ಟೆ ಬಡಗಲಪುರದಲ್ಲಿ ನಡೆದ ಘಟನೆ ಮಾಸುವ ಮುನ್ನವೇ ಹುಲಿ ದಾಳಿಗೆ ಮುಳ್ಳೂರಿನ ರೈತ ಬಲಿಯಾಗಿರುವ ಸುದ್ದಿ ತಿಳಿದು ತೀವ್ರ ಆತಂಕ ಉಂಟುಮಾಡಿದೆ ಎಂದು ತೇಜಸ್ವಿ ಹೇಳಿದ್ದಾರೆ.

ಮೃತ ರೈತನ ಕುಟುಂಬಕ್ಕೆ ರಾಜ್ಯ ಸರ್ಕಾರ ಕೂಡಲೇ 50 ಲಕ್ಷ ಪರಿಹಾರ ಘೋಷಣೆ ಮಾಡುವಂತೆ ತೇಜಸ್ವಿ ಆಗ್ರಹಿಸಿದ್ದಾರೆ.

ಮುಳ್ಳೂರು ಗ್ರಾಮದ ರಾಜಶೇಖರ ಮೂರ್ತಿ (55) ವ್ಯಾಘ್ರನ ವಕ್ರದೃಷ್ಟಿಗೆ ಬಲಿಯಾದ ರೈತ.

ಇಂದು ಮಧ್ಯಾಹ್ನ ಒಂದು ಗಂಟೆಯಲ್ಲಿ ಘಟನೆ ನಡೆದಿದ್ದು, ಸ್ಥಳದಲ್ಲಿ ಹೆಡಿಯಾಲ ಅರಣ್ಯ ಇಲಾಖೆ ಅಧಿಕಾರಿಗಳು ಸಿಬ್ಬಂದಿ ಮತ್ತು ಸರಗೂರು ಪೊಲೀಸರು ಬೀಡುಬಿಟ್ಟಿದ್ದು ಕೂಡಲೇ ಹುಲಿ ಸೆರೆ ಹಿಡಿಯುವಂತಾಗಲಿ ಎಂದು ಹೇಳಿದ್ದಾರೆ.

ಬಡಗಲಪುರ ಗ್ರಾಮದಲ್ಲಿ ಓರ್ವ ರೈತನನ್ನ ಬಲಿ ಪಡೆದ ಬೆನ್ನ ಹಿಂದೆಯೇ ದಸರಾ ಆನೆಗಳ ನೆರವಿನಿಂದ ಕೂಂಬಿಗ್ ಕಾರ್ಯಾಚರಣೆ ನಡೆಸಿ ಹುಲಿಯನ್ನ ಸೆರೆ ಹಿಡಿಯಲಾಗಿತ್ತು.

ಹುಲಿ ಸೆರೆಯಾದ ಹಿನ್ನಲೆ ಸುತ್ತಮುತ್ತಲಿನ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದರು,ಇದೀಗ ಮತ್ತೊಂದು ಬಲಿ ಪಡೆದಿರುವುದು ಸ್ಥಳೀಯರ ನಿದ್ದೆ ಕೆಡಿಸಿದೆ,ಜನರಲ್ಲಿ ಆತಂಕ ಮೂಡಿಸಿದೆ.

ನರಹಂತಕ ವ್ಯಾಘ್ರನನ್ನ ಗುರುತಿಸಿ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ ಎಂದು ತೇಜಸ್ವಿ ನಾಗಲಿಂಗ ಸ್ವಾಮಿ ಆರೋಪಿಸಿದ್ದಾರೆ.

ಕೇವಲ ಒಂದೇ ತಿಂಗಳಲ್ಲಿ ಹುಲಿ ದಾಳಿಗೆ ಇಬ್ಬರು ರೈತರು ಬಲಿಯಾಗಿರುವ ಘಟನೆಯನ್ನ ಹಗುರವಾಗಿ ಪರಿಗಣಿಸದಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತೇಜಸ್ವಿ ಸಲಹೆ ನೀಡಿದ್ದಾರೆ.

ಹುಲಿ ದಾಳಿಗೆ ಬಲಿಯಾದ ರೈತ ಕುಟುಂಬಕ್ಕೆ 50 ಲಕ್ಷ ಪರಿಹಾರಕ್ಕೆ ತೇಜಸ್ವಿ ಒತ್ತಾಯ Read More

ದಸರಾ ಆನೆ ಬಾಲಣ್ಣನ ಕಿವಿ ಕೊಳೆತ:ತಪ್ಪಿತಸ್ಥರ ವಜಾ ಮಾಡಲು ತೇಜಸ್ವಿ ಆಗ್ರಹ

ಮೈಸೂರು: ಶಿವಮೊಗ್ಗ ಜಿಲ್ಲೆಯ ಸಕ್ಕರೆ ಬಯಲು ಆನೆ ಶಿಬಿರದಲ್ಲಿನ ವೈದ್ಯರ ಎಡವಟ್ಟಿನಿಂದ ಸಾಕಾನೆ ಬಾಲಣ್ಣನ ಆರೋಗ್ಯ ಗಂಭೀರವಾಗಿವಾದೆ ಎಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

ಕೂಡಲೇ ನಿರ್ಲಕ್ಷ್ಯ‌ ವಹಿಸಿದ ಅರಣ್ಯ ಇಲಾಖೆಯ‌‌ ಅಧಿಕಾರಿಗಳು ಮತ್ತು ವೈದ್ಯಾಧಿಕಾರಿಯನ್ನು ಸೇವೆಯಿಂದ ವಜಾಮಾಡಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಬಾಲಣ್ಣ ಆನೆಗೆ ಈಗಾಗಲೇ ಕಾಲಿನ ಸಮಸ್ಯೆ ಇದೆ ಎಂದು ತಿಳಿದಿದ್ದರೂ ಸಹ ಅರಣ್ಯ ಅಧಿಕಾರಿಗಳು ಈ ಬಾರಿಯ ಶಿವಮೊಗ್ಗ ದಸರಾ ಉತ್ಸವದಲ್ಲಿ ಅಂಬಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಕರೆತಂದು ದಿವ್ಯ ನಿರ್ಲಕ್ಷ್ಯ ತೋರಿದ್ದಾರೆ ಎಂದು ತೇಜಸ್ವಿ ಬೇಸರ‌ ವ್ಯಕ್ತಪಡಿಸಿದ್ದಾರೆ.

ದಸರಾ ಸಮಯದಲ್ಲಿ ಬಾಲಣ್ಣ ನಿಗೆ ಕಾಲುನೋವು ಇದ್ದರು ಸಹ ಯಶಸ್ವಿ ಯಾಗಿ ಕಾರ್ಯ ನಿರ್ವಹಿಸಿತ್ತು, ಸಕ್ಕರೆ ಬಯಲಿಗೆ ಮರಳಿದ ನಂತರ ವಿಪರಿತವಾಗಿ ಕಾಲು ನೋವು ಕಾಡ ತೊಡಗಿತ್ತು ಅದಕ್ಕಾಗಿ ವೈದ್ಯರು ನೋವು ನಿವಾರಕ ಇಂಜೆಕ್ಷನ್ ಕಿವಿಗೆ ನೀಡಿದ್ದರು ಎಂದು ತಿಳಿದು ಬಂದಿದೆ
ಇದು ಆನೆಯ ಮೇಲೆ ಗಂಭೀರ ಪರಿಣಾಮ ಬೀರಿದ್ದು ಆನೆಯ ಕಿವಿ ಕೊಳೆಯುತ್ತಿದೆ, ಬಾಲಣ್ಣ ಸ್ಥಿತಿ ಚಿಂತಾಜನಕ ವಾಗಿದೆ ಎಂದು ಗೊತ್ತಾಗಿದೆ.

ಈಗಾಗಲೇ ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ಸಮಗ್ರ ತನಿಖೆ ನಡೆಸಲು ಆದೇಶ ನೀಡಿದ್ದಾರೆ.

ಆನೆ ಬಾಲಣ್ಣ ಆರೋಗ್ಯ ಸರಿ ಇಲ್ಲದಿರುವುದು ತಿಳಿದಿದ್ದರೂ ಕೂಡ ದಸರಾ ಉತ್ಸವಕ್ಕೆ ಕರೆತಂದ ಅಧಿಕಾರಿಗಳ ಮೇಲೆ ಮತ್ತು ಅವೈಜ್ಞಾನಿಕವಾಗಿ ಚುಚ್ಚುಮದ್ದು ನೀಡಿದ ವೈದ್ಯಾಧಿಕಾರಿಗಳನ್ನು ವಜಾಮಾಡಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ಆಗ್ರಹಿಸಿದ್ದಾರೆ.

ದಸರಾ ಆನೆ ಬಾಲಣ್ಣನ ಕಿವಿ ಕೊಳೆತ:ತಪ್ಪಿತಸ್ಥರ ವಜಾ ಮಾಡಲು ತೇಜಸ್ವಿ ಆಗ್ರಹ Read More

ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣದಆರೋಪಿಗೆ ಕಠಿಣ‌ ಶಿಕ್ಷೆ ನೀಡಿ-ತೇಜಸ್ವಿ

ಮೈಸೂರು: ಮೈಸೂರಿನ ವಸ್ತು ಪ್ರದರ್ಶನ ಮೈದಾನ ಬಳಿ ನಡೆದ ಬಾಲಕಿ ಮೇಲಿನ ಅತ್ಯಾಚಾರ, ಕೊಲೆ‌ ಪ್ರಕರಣ ತೀವ್ರ ಖಂಡನಿಯ ಎಂದು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗಸ್ವಾಮಿ ತಿಳಿಸಿದ್ದಾರೆ.

ಪೋಲಿಸ್ ಇಲಾಖೆ ನೈಟ್ ಬಿಟ್ ನಲ್ಲಿ ಕೆಲವು ಬದಲಾವಣೆ ತಂದರೆ ಇಂತಹ ಅಪರಾಧ ಕೃತ್ಯಗಳನ್ನು ನಿಯಂತ್ರಿಸ ಬಹುದು ಎಂದು ತೇಜಸ್ವಿ ನಾಗಲಿಂಗಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ.

ಆರೋಪಿಗೆ ಕೂಡಲೇ ಕಠಿಣ ಶಿಕ್ಷೆ ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ.

ಇಂತಹ ಅತ್ಯಾಚಾರ ಕೊಲೆ ಪ್ರಕರಣಗಳು ನಡೆಯುತ್ತಲೇ ಇವೆ. ಕೆಲವು ತಿಂಗಳ ಹಿಂದೆ ಮೈಸೂರಿನಲ್ಲಿ ಬಿಕ್ಷಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದರು. ಆ ಪ್ರಕರಣ ಮಾಸುವ ಮುನ್ನವೇ ಮೈಸೂರಿನ ಹೃದಯ ಭಾಗದಲ್ಲಿ ಇಂತಹ ಹೇಯಕೃತ್ಯ ನಡೆದಿದ್ದು ಅತ್ಯಂತ ಆತಂಕ ಉಂಟು ಮಾಡಿದೆ ಎಂದು ತೇಜಸ್ವಿ ನಾಗಲಿಂಗಸ್ವಾಮಿ ತಿಳಿಸಿದ್ದಾರೆ‌.

ಎರಡು ದಿನಗಳ ಹಿಂದೆ ಇದೇ ಸ್ಥಳದಲ್ಲಿ ವ್ಯಕ್ತಿ ಯೊಬ್ಬನನ್ನು ಮಾರಕಾಸ್ತ್ರ ಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿತ್ತು,ಅದಾದ ಎರಡೇ ದಿನದಲ್ಲಿ ಆದೆ ಸ್ಥಳದ ಆಸುಪಾಸಿನಲ್ಲಿ ಬಾಲಕಿ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಿರುವುದು ಪೋಲಿಸ್ ಇಲಾಖೆಯ ವೈಫಲ್ಯ ಎದ್ದು ಕಾಣುತ್ತದೆ ಎಂದು ತೇಜಸ್ವಿ ನಾಗಲಿಂಗಸ್ವಾಮಿ ಆರೋಪಿಸಿದ್ದಾರೆ.

ಬಾಲಕಿಯ ಕುಟುಂಬಕ್ಕೆ ಪರಿಹಾರವನ್ನು ಘೋಷಿಸುವಂತೆ ಸರ್ಕಾರಕ್ಕೆ ತೇಜಸ್ವಿ ಮನವಿ ಮಾಡಿದ್ದಾರೆ.

ಈ ಪ್ರಕರಣವನ್ನು ಪೋಲಿಸ್ ಇಲಾಖೆ ಅತ್ಯಂತ ಸೂಕ್ಷ್ಮವಾಗಿ ಮತ್ತು ಗಂಭೀರವಾಗಿ ಪರಿಗಣಿಸಬೇಕು, ಇನ್ನು ಮುಂದೆ ರಾತ್ರಿ ಗಸ್ತು ತಿರುಗುವ ಪಾಳಯದಲ್ಲಿ ಬದಲಾವಣೆ ತರಬೇಕು ಬದಲಾವಣೆ ಆದಲ್ಲಿ ಮಾತ್ರ ( ಹೊಸತನ ) ಇಂತಹಾ ಅಪರಾಧ ಕೃತ್ಯಗಳನ್ನು ತಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

ಅತ್ಯಾಚಾರ ಪ್ರಕರಣಗಳಲ್ಲಿ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸುವ ಕಾನೂನನ್ನು ಜಾರಿಗೆ ತರುವ ಮೂಲಕ ರಾಜ್ಯದಲ್ಲಿ ಇಂತಹ ಅತ್ಯಾಚಾರ ಪ್ರಕರಣಗಳು ತಡೆಗಟ್ಟಬೇಕೆಂದು ತೇಜಸ್ವಿ ನಾಗಲಿಂಗಸ್ವಾಮಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣದಆರೋಪಿಗೆ ಕಠಿಣ‌ ಶಿಕ್ಷೆ ನೀಡಿ-ತೇಜಸ್ವಿ Read More

ಚಾಮುಂಡಿ ಬೆಟ್ಟದಲ್ಲಿ ಅನಧಿಕೃತ ಮನೆಗಳ ತೆರವಿಗೆ ತೇಜಸ್ವಿ ಆಗ್ರಹ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಅನಧಿಕೃತ ಮನೆಗಳನ್ನು ತೆರವು ಮಾಡಬೇಕೆಂದು‌
ಕನ್ನಡ ಚಳುವಳಿಗಾರ ತೇಜಸ್ವಿ ನಾಗಲಿಂಗಸ್ವಾಮಿ ಆಗ್ರಹಿಸಿದ್ದಾರೆ.

ಪವಿತ್ರ ಧಾರ್ಮಿಕ ಕ್ಷೇತ್ರವಾದ ಚಾಮುಂಡಿ ಬೆಟ್ಟದ ಅಂದವನ್ನು‌ ಹಾಳು ಮಾಡಬೇಡಿ ಎಂದು ಒತ್ತಾಯಿಸಿದ್ದಾರೆ.

ಬೆಟ್ಟದಲ್ಲಿ ಯಾವುದೇ ಹೊಸ ಮನೆಗಳ ನಿರ್ಮಾಣ ಮಾಡಬಾರದು ಮತ್ತು ಮೊದಲ ಮಹಡಿ ಗಳನ್ನು ಕಟ್ಟಬಾರದು ಈಗಾಗಲೇ ಇರುವ ಮನೆಗಳ ಯಾತಸ್ಥಿತಿ ಕಾಪಾಡುವಂತೆ ಸರ್ಕಾರ ಆದೇಶ ನೀಡಿದ್ದರು ಕೆಲವರು ಸರ್ಕಾರದ ಆದೇಶವನ್ನು ಗಾಳಿಗೆ ತೂರಿ ಮನೆಗಳ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದಾರೆ ಎಂದು ಕನ್ನಡ ತೇಜಸ್ವಿ ನಾಗಲಿಂಗಸ್ವಾಮಿ ಸ್ವಾಮಿ ಆರೋಪ ಮಾಡಿದ್ದಾರೆ.

ಕೆಲವರು ಅರಣ್ಯ ಇಲಾಖೆಯ‌ ಗಡಿಯನ್ನು ದಾಟಿ ಮನೆಗಳ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದಾರೆ ಅಂತವರ ಮೇಲೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಮತ್ತು ಮನೆಗಳ ನಿರ್ಮಾಣ ಕಾರ್ಯ ಸ್ಥಗಿತ ಗೋಳಿಸ ಬೇಕು ಎಂದು ತೇಜಸ್ವಿ ಜಿಲ್ಲಾಧಿಕಾರಿಗಳನ್ನು ಆಗ್ರಹಿಸಿದ್ದಾರೆ.

ಈಗಾಗಲೇ ಅನೇಕ ಬಾರಿ ಚಾಮುಂಡಿ ಬೆಟ್ಟದಲ್ಲಿ ಕುಸಿತ ಉಂಟಾಗಿದ್ದು ಕಳೆದ ನಾಲ್ಕು ಐದು ವರ್ಷಗಳ ಹಿಂದೆಯೇ ನಂದಿ ರಸ್ತೆ‌ ಕುಸಿತ ವಾಗಿದ್ದರೂ ಈವರೆಗೂ ಕೂಡ ಸರಿಪಡಿಸಿಲ್ಲ.

ಚಾಮುಂಡಿ ಬೆಟ್ಟದಲ್ಲಿ ಕೆಲವರು ಬೆಟ್ಟದ ತುದಿಯಲ್ಲಿಯೂ ಕೂಡ ಮನೆ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದಾರೆ ಮುಂದಿನ ದಿನಗಳಲ್ಲಿ ಇಂತಹಾ ಮನೆಗಳು ಕುಸಿತ ಊಂಟಾಗಿ ಸಾವು ನೋವುಗಳು ಊಂಟಗುವುದರಲ್ಲಿ ಸಂಶಯವೇ ಇಲ್ಲ ಎಂದು ತೇಜಸ್ವಿ ನಾಗಲಿಂಗಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಚಾಮುಂಡಿ ಬೆಟ್ಟದಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಇಲಾಖೆಯ‌ ಗಡಿಯನ್ನು ದಾಟಿ ಸರ್ಕಾರದ ಆದೇಶವನ್ನು ಗಾಳಿಗೆ ತೂರಿ ಮನೆಗಳ ನಿರ್ಮಾಣ ಮಾಡುತ್ತಿರುವವರ ಮೇಲೆ ಕ್ರಮ ಕೈಗೊಳ್ಳಬೇಕು ಮತ್ತು ಮನೆಗಳ ನಿರ್ಮಾಣ ಕಾರ್ಯ ಕೂಡಲೇ ಸ್ಥಗಿತ ಗೋಳಿಸಿ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ತೇಜಸ್ವಿ ನಾಗಲಿಂಗಸ್ವಾಮಿ ಆಗ್ರಹಿಸಿದ್ದಾರೆ.

ಚಾಮುಂಡಿ ಬೆಟ್ಟದಲ್ಲಿ ಅನಧಿಕೃತ ಮನೆಗಳ ತೆರವಿಗೆ ತೇಜಸ್ವಿ ಆಗ್ರಹ Read More

ಬಸವ ಮೆಟ್ರೋ: ಸಿಎಂ ಹೇಳಿಕೆ ತೇಜಸ್ವಿ ನಾಗಲಿಂಗಸ್ವಾಮಿ ಸ್ವಾಗತ

ಮೈಸೂರು: ನಮ್ಮ ಮೆಟ್ರೋಗೆ ಬಸವ ಮೆಟ್ರೋ ಎಂದು ನಾಮಕರಣ ಮಾಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸು ಮಾಡುತ್ತೇನೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಸಂತಸ ತಂದಿದೆ ಎಂದು ಕನ್ನಡ‌ ಚಳವಳಿಗಾರ ತೇಜಸ್ವಿ ನಾಗಲಿಂಗಸ್ವಾಮಿ
ತಿಳಿಸಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ
ಬೆಂಗಳೂರಿನ ನಮ್ಮ ಮೇಟ್ರೋ ಗೆ ಬಸವ ಮೇಟ್ರೋ ಎಂದು ನಾಮಕರಣ ಮಾಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ,ಇದು ಸ್ವಾಗತಾರ್ಹ ಬಸವಣ್ಣನವರ ಅಭಿಮಾನಿಗಳಲ್ಲಿ ಅತ್ಯಂತ ಸಂತಸ ತಂದಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಸಮ ಸಮಾಜದ ನಿರ್ಮಾಣಕ್ಕೆ ಮತ್ತು ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ತತ್ವವನ್ನು ಸಾರುತ್ತ ಜಾತಿ ಪದ್ಧತಿ ನಿರ್ಮೂಲನೆಗೆ ಪಣ ತೊಟ್ಟು ೧೨ ನೇ ಶತಮಾನದಲ್ಲಿ ವಿಶ್ವಕ್ಕೆ ಸಂದೇಶ ಸಾರಿದ ಜಗಜ್ಯೋತಿ ವಿಶ್ವಗುರು ಬಸವಣ್ಣನವರ ಹೆಸರನ್ನು ಕರ್ನಾಟಕದ ರಾಜಧಾನಿಯ ಲಕ್ಷಾಂತರ ಜನ ಪ್ರಯಾಣಿಸುವ ನಮ್ಮ ಮೆಟ್ರೋ ಸ್ಟೇಷನ್ ಗೆ ಇಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೃದಯ ಪೂರ್ವಕವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ತೇಜಸ್ವಿ ಹೇಳಿದ್ದಾರೆ.

ಬಸವ ಮೆಟ್ರೋ: ಸಿಎಂ ಹೇಳಿಕೆ ತೇಜಸ್ವಿ ನಾಗಲಿಂಗಸ್ವಾಮಿ ಸ್ವಾಗತ Read More

ನಾಲ್ವಡಿ ಪ್ರಶಸ್ತಿ: ಕನ್ನಡ ಹೋರಾಟಗಾರರ ಕಡೆಗಣನೆ; ಸಹಾಯ ನಿರ್ದೇಶಕರ ಅಮಾನತಿಗೆ ತೇಜಸ್ವಿ ಆಗ್ರಹ

ಮೈಸೂರು: ನಾಲ್ವಡಿ ಪ್ರಶಸ್ತಿ ವಿಚಾರವಾಗಿ ಮೈಸೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಮತ್ತು ಕಮಿಟಿ ಸದಸ್ಯರು ಕನ್ನಡ ಹೋರಾಟಗಾರರ ನ್ನು ಕಡೆಗಣಿಸಿದ್ದಾರೆಂದು ಕನ್ನಡ ಚಳುವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಆರೋಪಿಸಿದ್ದಾರೆ.

ಮೈಸೂರು ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ದಿನದಂದು ವಿವಿಧ ಕ್ಷೇತ್ರಗಳಲ್ಲಿ ಹಾಗೂ ಕನ್ನಡ ನಾಡು, ನುಡಿ, ನೆಲ, ಜಲ, ಭಾಷೆ, ವಿಷಯದಲ್ಲಿ ಸಾಧನೆ ಮಾಡಿ ಕೊಡುಗೆ ನೀಡಿ ಹೋರಾಟ ಮಾಡಿರುವ ವರಿಗೆ ಶ್ರೀ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಯನ್ನು ನೀಡುತ್ತಾ ಬರಲಾಗಿದೆ.

ಆದರೆ ನಿನ್ನೆ ನಡೆದ ೨೦೨೫ನೇ ಸಾಲಿನ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ವಿವಿಧ ಜಿಲ್ಲೆಗಳ ಇಪ್ಪತ್ತು ಜನರಿಗೆ ರಾಜ್ಯ ಮಟ್ಟದ ಶ್ರೀ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಆದರೆ ಯಾವೊಬ್ಬ ಕನ್ನಡ ಹೋರಾಟಗಾರರಿಗೆ ಈಬಾರಿ ಪ್ರಶಸ್ತಿ ನೀಡದೆ ಕನ್ನಡ ಹೋರಾಟಗಾರರನ್ನು ಕಡೆಗಣಿಸಿರುವುದು ಅಕ್ಷಮ್ಯ ಅಪರಾಧ ಕನ್ನಡ ಹೋರಾಟಗಾರರಿಗೆ ಮಾಡಿದ ಅಪಮಾನ ಎಂದು ತೇಜಸ್ವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿವಿಧ ಜಿಲ್ಲೆಯ ಸಾಧಕರಿಗೆ ಈ ಬಾರಿ ಪ್ರಶಸ್ತಿ ನೀಡಿದ್ದಾರೆ ಈ ಜಿಲ್ಲೆಗಳಲ್ಲಿ ಒಬ್ಬರು ಕೂಡ ಹೋರಾಟಗಾರರು ನಿಮ್ಮ ಕಣ್ಣಿಗೆ ಕಾಣಲಿಲ್ಲ ವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ತೇಜಸ್ವಿ ಪ್ರಶ್ನೆ ಮಾಡಿದ್ದಾರೆ.

ಇದು ಕನ್ನಡಪರ ಹೋರಾಟಗಾರರಿಗೆ ಮಾಡಿದ ಅಪಮಾನ. ಕೂಡಲೇ ಮೈಸೂರು ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರನ್ನು ಅಮಾನತು ಮಾಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ಎಸ್ ತಂಗಡಗಿ ಅವರಿಗೆ ತೇಜಸ್ವಿ ಮನವಿ ಮಾಡಿದ್ದಾರೆ.

ಈ ಕುರಿತು ತಂಗಡಗಿ ಅವರಿಗೆ ಪತ್ರ ಬರೆಯುವುದಾಗಿ ತೇಜಸ್ವಿ ನಾಗಲಿಂಗ ಸ್ವಾಮಿ ತಿಳಿಸಿದ್ದಾರೆ.

ಏಳು ಜನರಿಗೆ ಸಮಾಜ ಸೇವೆ ಎಂದು ಪ್ರಶಸ್ತಿ ನೀಡಿದ್ದೀರಿ ಇದರಲ್ಲಿ ಒಬ್ಬರಿಗಾದರು ಕನ್ನಡ ಹೋರಾಟಗಾರರಿಗೆ ನೀಡ ಬಹುದಾಗಿತ್ತು. ಕನ್ನಡ ಹೋರಾಟಗಾರರನ್ನು ಕಡೆಗಣಿಸಿರುವುದು ಏಕೆ ಎಂಬುದನ್ನು ಬಹಿರಂಗವಾಗಿ ಹೇಳಿಕೆ ನೀಡಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ತೇಜಸ್ವಿ ಆಗ್ರಹಿಸಿದ್ದಾರೆ.

ಕಮಿಟಿಯ ಸದಸ್ಯರುಗಳಾದರು ಸಹಾಯಕ ನಿರ್ದೇಶಕರಿಗೆ ಒಬ್ಬ ಕನ್ನಡ ಹೋರಾಟಗಾರರಿಗಾದರೂ ನಾಲ್ವಡಿ ಪ್ರಶಸ್ತಿಯನ್ನು ನೀಡಬೇಕೆಂದು ತಿಳಿಸಬೇಕಿತ್ತು ಯಾತಕ್ಕಾಗಿ ತಿಳಿಸಲಿಲ್ಲ ಎಂದು ಪ್ರಶ್ನಿಸಿ ಕೂಡಲೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ್ ತಂಗಡಗಿ ಅವರಿಗೆ ಈ ಕಮಿಟಿಯನ್ನು ವಜಾಗೊಳಿಸಿ ಹೊಸ ಕಮಿಟಿ ರಚಿಸುವಂತೆ ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಮನವಿ ಮಾಡಿದ್ದಾರೆ.

ಒಟ್ಟಿನಲ್ಲಿ ಕನ್ನಡ ಹೋರಾಟಗಾರರ ಕಡೆಗಣನೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರೇ ನೇರ ಹೊಣೆ,ಕೂಡಲೇ ಅವರನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಈಬಾರಿಯ ನಾಲ್ವಡಿ ಪ್ರಶಸ್ತಿ ಯಲ್ಲಿ ಕನ್ನಡ ಹೋರಾಟಗಾರರನ್ನು ಕಡೆಗಣಿಸಿರುವುದಕ್ಕೆ ದಿಕ್ಕಾರವಿದೆ ಎಂದು ತೇಜಸ್ವಿ ನಾಗಲಿಂಗ ಸ್ವಾಮಿ ಖಂಡಿಸಿದ್ದಾರೆ.

ನಾಲ್ವಡಿ ಪ್ರಶಸ್ತಿ: ಕನ್ನಡ ಹೋರಾಟಗಾರರ ಕಡೆಗಣನೆ; ಸಹಾಯ ನಿರ್ದೇಶಕರ ಅಮಾನತಿಗೆ ತೇಜಸ್ವಿ ಆಗ್ರಹ Read More